Tag: ಮೀನುಗಳು

  • ಮಳೆಯ ಅಬ್ಬರ- ಕಾರವಾರದಲ್ಲಿ ರಾಶಿ ರಾಶಿ ಮೀನುಗಳು ಬಲೆಗೆ

    ಮಳೆಯ ಅಬ್ಬರ- ಕಾರವಾರದಲ್ಲಿ ರಾಶಿ ರಾಶಿ ಮೀನುಗಳು ಬಲೆಗೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಪ್ರಾರಂಭವಾಗಿ ಮೂರು ದಿನಗಳು ಕಳೆದಿವೆ. ಕೊರೊನಾ ಕಾರಣಕ್ಕೆ ಎರಡು ದಿನಗಳ ಕಾಲ ಮೀನುಗಾರರು ಮತ್ಸ್ಯ ಬೇಟೆಗೆ ತೆರಳಿರಲಿಲ್ಲ. ಇಂದು ಮೀನುಗಾರಿಕೆಗೆ ತೆರಳಿದ್ದು, ತಾವು ಬೀಸಿದ ಬಲೆಗೆ ರಾಶಿ ರಾಶಿ ಮೀನುಗಳು ಅನಾಯಾಸವಾಗಿ ದೊರೆಯುತ್ತಿವೆ.

    ಕಳೆದ ನಾಲ್ಕು ತಿಂಗಳಲ್ಲಿ ಸಮುದ್ರದಲ್ಲಿ ಆದ ಹವಾಮಾನ ಬದಲಾವಣೆ ಮೀನುಗಳ ಸಂತಾನೋತ್ಪತ್ತಿಗೆ ಹೆಚ್ಚು ಪೂರಕವಾಗಿತ್ತು. ಇದೀಗ ಮೀನುಗಳು ಎತೇಚ್ಚವಾಗಿ ದರೆಯುತ್ತಿವೆ. ಲೋಡ್ ಗಟ್ಟಲೆ ಮೀನುಗಳು ಸಿಕ್ಕರೂ ಕೇರಳ, ಆಂಧ್ರ ಭಾಗದಲ್ಲಿ ಲಾಕ್‍ಡೌನ್ ಇರುವುದರಿಂದ ಉತ್ತಮ ಬೆಲೆ ಸಿಗದಂತಾಗಿದೆ.

    ಮಳೆಯ ಅಬ್ಬರ ಜೋರು
    ಬೆಳಗಿನಿಂದ ಬಿಡುವುಕೊಟ್ಟಿದ್ದ ಮಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಪ್ರಾರಂಭವಾಗಿದ್ದು, ಜಿಲ್ಲೆಯಾದ್ಯಂತ ಅಬ್ಬರದ ಮಳೆ ಸುರಿಯುತ್ತಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆ ಮಾಹಿತಿ ನೀಡಿ, ಇನ್ನೂ ಮೂರು ದಿನ ಹೆಚ್ಚಿನ ಮಳೆಯಾಗುತ್ತದೆ ಎಂದು ಸೂಚಿಸಿದೆ. ಹೆಚ್ಚಿನ ಮಳೆಯಾದರೆ ಸಂಪ್ರದಾಯಿಕ ಮೀನುಗಾರರಿಗೆ ಈ ಬಾರಿ ಹೆಚ್ಚಿನ ಲಾಭ ತರುವ ನಿರೀಕ್ಷೆ ಮಾಡಲಾಗಿದೆ.

  • ಸಕ್ಕರೆ ಕಾರ್ಖಾನೆಯ ವಿಷಪೂರಿತ ನೀರು ಕೃಷ್ಣಾ ನದಿ ಹೀನ್ನಿರಿಗೆ- ಲಕ್ಷಾಂತರ ಮೀನುಗಳು ಸಾವು

    ಸಕ್ಕರೆ ಕಾರ್ಖಾನೆಯ ವಿಷಪೂರಿತ ನೀರು ಕೃಷ್ಣಾ ನದಿ ಹೀನ್ನಿರಿಗೆ- ಲಕ್ಷಾಂತರ ಮೀನುಗಳು ಸಾವು

    ಯಾದಗಿರಿ: ಜಿಲ್ಲೆಯ ವಡಗೇರ ತಾಲೂಕಿನ ತುಮಕೂರು ಗ್ರಾಮದ ಸಮೀಪದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯಿಂದ ವಿಷಪೂರಿತ ನೀರನ್ನು ಕೃಷ್ಣಾ ನದಿ ಹೀನ್ನಿರಿಗೆ ಹರಿಬಿಟ್ಟ ಹಿನ್ನಲೆ ನದಿ ದಡದಲ್ಲಿ ಲಕ್ಷಾಂತರ ಮೀನುಗಳು ಸತ್ತುಬಿದ್ದಿವೆ.

    ಸದ್ಯ ಫ್ಯಾಕ್ಟರಿ ಸ್ವಚ್ಛಗೊಳಿಸುತ್ತಿದ್ದು, ಸಕ್ಕರೆ ತಯಾರಿಸಲು ಬಳಸುವ ವಿವಿಧ ರಾಸಾಯನಿಕ ವಸ್ತುಗಳನ್ನು ನದಿಯ ನೀರಿಗೆ ಹರಿಬಿಡಲಾಗುತ್ತಿದೆ. ಇದರಿಂದಾಗಿ ನದಿಯ ನೀರು ಕಲುಷಿತಗೊಂಡು ಈ ಮೀನುಗಳು ಸತ್ತಿರಬಹುದೆಂದು ಊಹಿಸಲಾಗಿದೆ.

    ಯಾದಗಿರಿ ಜಿಲ್ಲೆಯಲ್ಲಿರುವ ಏಕೈಕ ಶುಗರ್ ಫ್ಯಾಕ್ಟರಿ ಇದಾಗಿದ್ದು, ಕಾರ್ಖಾನೆಯ ಆಡಳಿತ ಮಂಡಳಿಯಿ ನಿರ್ಲಕ್ಷ್ಯದಿಂದ ಪಕ್ಕದ ಗ್ರಾಮಗಳ ಪರಿಸರ ಹದಗೆಟ್ಟು, ಸುತ್ತಲಿನ ಗ್ರಾಮಸ್ಥರು ನಾನಾ ಸಂಕಷ್ಟ ಎದುರಿಸುವಂತಾಗಿದೆ. ಫ್ಯಾಕ್ಟರಿಯವರು ಪದೇ ಪದೇ ಈ ರೀತಿಯ ನಿರ್ಲಕ್ಷ್ಯ ವಹಿಸುತ್ತಿದ್ದರೂ ಅಧಿಕಾರಿಗಳು ಮಾತ್ರ ಕಣ್ಣುಮಚ್ಚಿ ಕುಳಿತ್ತಿದ್ದಾರೆ.

  • 500 ಕೆಜಿಯ ಬೃಹತ್ ಮೀನು ಬಲೆಗೆ- ಒಂದು ಲಕ್ಷಕ್ಕೂ ಅಧಿಕ ಬೆಲೆ

    500 ಕೆಜಿಯ ಬೃಹತ್ ಮೀನು ಬಲೆಗೆ- ಒಂದು ಲಕ್ಷಕ್ಕೂ ಅಧಿಕ ಬೆಲೆ

    ಕಾರವಾರ: ಸುಮಾರು 500 ಕೆ.ಜಿ.ಗೂ ಹೆಚ್ಚು ತೂಕವಿರುವ ಬೃಹತ್ ಗಾತ್ರದ ಮೂರು ತೊರ್ಕೆ ಮೀನುಗಳು ಭಟ್ಕಳ ಮೀನುಗಾರರ ಬಲೆಗೆ ಬಿದ್ದಿದ್ದು, ಮೀನುಗಾರರು ಫುಲ್ ಖುಷ್ ಆಗಿದ್ದಾರೆ.

    ಇಂದು ಬೆಳಗ್ಗೆ ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ರಾಧಾಕೃಷ್ಣ, ರಾಜಶ್ರೀ ಬೋಟ್ ಗಳಿಗೆ ಬ್ರಹತ್ ಗಾತ್ರದ ಮೂರು ತೊರ್ಕೆ ಮೀನು ಸಿಕ್ಕಿದ್ದು, ಪ್ರತಿ ಮೀನಿನ ತೂಕ 500 ಕೆ.ಜಿ. ಮೀರಿಲಿದೆ ಎಂದು ಅಂದಾಜಿಸಲಾಗಿದೆ. ಸುಮಾರು 2 ಮೀಟರ್ ಗೂ ಅಧಿಕ ಉದ್ದದ ಈ ಮೀನುಗಳನ್ನು ಹರಸಾಹಸಪಟ್ಟು ಮೀನುಗಾರರು ದಡಕ್ಕೆ ತಂದಿದ್ದು ಕ್ರೇನ್ ಮೂಲಕ ಬೋಟ್ ನಿಂದ ಮೇಲೆತ್ತಲಾಗಿದೆ.

    ಸಾಮಾನ್ಯವಾಗಿ ಮೀನುಗಾರರ ಬಲೆಗೆ ಬೀಳುವ ಮೀನುಗಳು 50 ರಿಂದ 100 ಕೆಜಿ ತೂಕ ಹೊಂದಿರುತ್ತವೆ. ಅಪರೂಪ ಎಂಬಂತೆ ಇಂತಹ ಬೃಹತ್ ಮೀನುಗಳು ಮೀನುಗಾರರ ಬಲೆಗೆ ಬೀಳುತ್ತವೆ ಎಂದು ಮೀನುಗಾರರು ತಿಳಿಸಿದ್ದಾರೆ.

    ವೈಜ್ಞಾನಿಕವಾಗಿ ರೇ ಫೀಶ್, ಮೆಂಟ್ ರೇ ಎಂದು ಕರೆಯಲ್ಪಡುವ ಈ ಮೀನು ಸಂಪೂರ್ಣ ಬೆಳವಣಿಗೆಯ ನಂತರ ಸುಮಾರು ನಾಲ್ಕು ಸಾವಿರ ಪೌಂಡ್ ತೂಕ ಹೊಂದಿರುತ್ತವೆ. ಈ ಬೃಹತ್ ಗಾತ್ರದ ಮೀನನ್ನು ನೋಡಲು ಇಂದು ಮುಂಜಾನೆ ಭಟ್ಕಳ ಬಂದರಿನಲ್ಲಿ ನೂರಾರು ಜನ ಸೇರಿದ್ದು, ಕಳದೆರಡು ದಿನಗಳಿಂದ ಬೃಹತ್ ಮೀನುಗಳು ಮೀನುಗಾರರ ಬಲೆಗೆ ಬೀಳುತ್ತಿವೆ.

  • ಕೆರೆಗೆ ವಿಷ ಹಾಕಿದ ಕಿಡಿಗೇಡಿಗಳು – ಸಾವಿರಾರು ಮೀನುಗಳ ಮಾರಣಹೋಮ

    ಕೆರೆಗೆ ವಿಷ ಹಾಕಿದ ಕಿಡಿಗೇಡಿಗಳು – ಸಾವಿರಾರು ಮೀನುಗಳ ಮಾರಣಹೋಮ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದಾಡೇಲು ಎಂಬಲ್ಲಿ ಕಿಡಿಗೇಡಿಗಳು ಫಲ್ಗುಣಿ ನದಿಗೆ ವಿಷ ಹಾಕಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದೆ.

    ಬೆಳ್ತಂಗಡಿಯ ವೇಣೂರು ಸಮೀಪದ ಮೂಡುಕೋಡಿ ಗ್ರಾಮದ ನಡ್ತಿಕಲ್ಲಿನ ದಾಡೇಲು ನದಿಯ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿದೆ. ದುರ್ನಾತದಿಂದ ಆ ಪರಿಸರಕ್ಕೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿದ್ದು, ರೋಗ ಹರಡುವ ಭೀತಿ ಎದುರಾಗಿದೆ.

    ಪ್ರಾಣಿ ಪಕ್ಷಿಗಳು ಈ ವಿಷ ನೀರನ್ನೇ ಕುಡಿಯುತ್ತಿದ್ದು, ಅವುಗಳು ಕೂಡ ಸಾಯುವ ಸ್ಥಿತಿ ನಿರ್ಮಾಣವಾಗಿದೆ. ಅದೇ ರೀತಿ ಕೆಲವು ಹಕ್ಕಿಗಳು ಸತ್ತು ಬಿದ್ದಿರುವ ವಿಷಯುಕ್ತ ಮೀನುಗಳನ್ನು ತಿನ್ನುತ್ತಿದೆ. ಈ ಕೆಲಸ ಯಾರೇ ಮಾಡಿರಲಿ ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಒಂದು ವೇಳೆ ಸರಿಯಾದ ಶಿಕ್ಷೆ ಆಗದೇ ಇದ್ದಲ್ಲಿ ಹೋರಾಟದ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ.

    ಸ್ಥಳೀಯ ಒಂದು ತಂಡದ ಮೇಲೆ ಸಂಶಯ ವ್ಯಕ್ತಪಡಿಸಿದ ಸ್ಥಳೀಯರು, ಆ ತಂಡವನ್ನು ಸರಿಯಾಗಿ ವಿಚಾರಿಸಿದರೆ ಸತ್ಯ ಹೊರಬರಬಹುದು ಎನ್ನುತ್ತಿದ್ದಾರೆ. ಅದೇ ರೀತಿ ಈ ಘಟನೆ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರೂ ಆಸಡ್ಡೆ ತೋರಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

  • ಕರಾವಳಿಯ ಕಡಲಿನಲ್ಲಿ ಕಡಿಮೆಯಾದ ಮೀನುಗಳು

    ಕರಾವಳಿಯ ಕಡಲಿನಲ್ಲಿ ಕಡಿಮೆಯಾದ ಮೀನುಗಳು

    ಮಂಗಳೂರು: ಕರಾವಳಿಯ ಆರ್ಥಿಕತೆಯ ಜೀವನಾಡಿ ಮೀನುಗಾರಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಇತಿಹಾಸದಲ್ಲೇ ಕಂಡು ಕೇಳರಿಯದಂತಹ ಮತ್ಸ್ಯಕ್ಷಾಮ ಪಶ್ಚಿಮ ಕರಾವಳಿಯಲ್ಲಿ ಕಂಡು ಬಂದಿದ್ದು, ಮೀನಿನ ಬೇಟೆ ಸಿಗದೆ ಕಡಲ ಮಕ್ಕಳು ಕಂಗಾಲಾಗಿದ್ದಾರೆ.

    ಜಾಗತಿಕ ತಾಪಮಾನ ಏರಿಕೆಯ ಜೊತೆ ಅವೈಜ್ಞಾನಿಕ ಮೀನುಗಾರಿಕಾ ಪದ್ಧತಿಯಿಂದ ಕಡಲಿನಲ್ಲಿ ಮೀನಿನ ಸಂತತಿ ಭಾರೀ ಪ್ರಮಾಣದಲ್ಲಿ ಕೆಳಮುಖವಾಗಿದ್ದು, ಶೇ. 80ರಷ್ಟು ಬೋಟ್ ಗಳು ಮೀನುಗಾರಿಕೆ ನಡೆಸದೆ ದಡದಲ್ಲೇ ಲಂಗರು ಹಾಕಿದೆ.

    ಸಾಮಾನ್ಯವಾಗಿ ಜನವರಿ ಮೊದಲ ತಿಂಗಳಿನಿಂದ ಸಮುದ್ರದಲ್ಲಿ ಮೀನಿನ ಲಭ್ಯತೆ ಹೆಚ್ಚಿದ್ದು, ಈ ಬಾರಿ ನಿರೀಕ್ಷೆಯಂತೆ ಮೀನುಗಾರರಿಗೆ ಮೀನುಗಳು ಸಿಗುತ್ತಿಲ್ಲ. ಮಂಗಳೂರು ಬಂದರಿನಲ್ಲಿ ಟ್ರಾಲ್ ಬೋಟ್‍ಗಳಲ್ಲಿ ಹೆಚ್ಚಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶದ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಸದ್ಯ ಕೆಲಸವಿಲ್ಲದೆ ನಿರ್ಗತಿಕರಾಗಿದ್ದಾರೆ.

    ಬಂದರಿನಲ್ಲಿ ಸುಮಾರು 30,000 ಮಂದಿ ಕೆಲಸ ಮಾಡುತ್ತಿದ್ದು, ಬೋಟ್‍ಗಳು ಸಮುದ್ರಕ್ಕಿಳಿಯದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸಾಮಾನ್ಯವಾಗಿ ಒಂದು ಬೋಟು ಮೀನು ಹಿಡಿದು ತಂದರೆ ಅದರಿಂದ ಐಸ್ ಪ್ಲಾಂಟ್‍ಗಳು, ಬೋಟುಗಳಿಂದ ಮೀನು ತೆಗೆಯುವ ಕಾರ್ಮಿಕರು, ಮೀನು ವ್ಯಾಪಾರಿಗಳು ಕೆಲಸ ಮಾಡಬಹುದು. ಆದರೆ ಈಗ ಯಾರಿಗೂ ಕೆಲಸ ಇಲ್ಲದೆ ಸಂತ್ರಸ್ತರಾಗಿದ್ದಾರೆ.

    ಅವೈಜ್ಞಾನಿಕ ಮೀನುಗಾರಿಕಾ ವಿಧಾನದಿಂದಲೂ ಮೀನಿನ ಸಂತತಿ ನಶಿಸುತ್ತಿದೆ. ಕೇಂದ್ರ ಸರ್ಕಾರದ ನಿಷೇಧಿತ ಲೈಟ್ ಫಿಶಿಂಗ್ ವಿಧಾನದಲ್ಲೂ ಮೀನುಗಾರಿಕೆ ನಡೆಸಲಾಗುತ್ತಿದ್ದು, ಮೀನುಗಳು ನಾಶವಾಗುತ್ತಿದೆ. ಪ್ರಖರವಾದ ಲೈಟ್‍ನಿಂದ ಮೀನುಗಳಿಗೆ ಸಿಗುವ ಆಹಾರದವೂ ಕರಟಿ ಹೋಗುತ್ತಿದ್ದು, ಆಹಾರವಿಲ್ಲದೆಯೂ ಮೀನುಗಳು ಸಾವನ್ನಪ್ಪುತ್ತಿದೆ.

    ಕಳೆದ ವರ್ಷದ ಲೆಕ್ಕಾಚಾರವನ್ನು ಗಮನಿಸಿದಾಗ ಈ ವರ್ಷದಲ್ಲಿ 756 ಕೋಟಿ ನಷ್ಟವಾಗಿದ್ದು, ಮೀನುಗಾರರೂ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕಡಲಿನಲ್ಲಿ ಜೀವ ಪಣಕ್ಕಿಟ್ಟು ಮತ್ಸ್ಯ ಬೇಟೆಯಾಡುವ ಕಡಲ ಮಕ್ಕಳನ್ನು ಸರ್ಕಾರವೂ ಕೈ ಬಿಟ್ಟಿದ್ದು, ಅತಂತ್ರರಾಗಿದ್ದಾರೆ.

  • ಕಲುಷಿತಗೊಂಡ ಕುರ್ಕಿ ಕೆರೆ- 3 ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ

    ಕಲುಷಿತಗೊಂಡ ಕುರ್ಕಿ ಕೆರೆ- 3 ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ

    ಕೋಲಾರ: ತಾಲೂಕಿನ ನರಸಾಪುರ ಬಳಿ ಇರುವ ಕುರ್ಕಿ ಕೆರೆ ಕಲುಷಿತಗೊಂಡಿದ್ದು, ಸುಮಾರು 3 ಲಕ್ಷಕ್ಕೂ ಅಧಿಕ ಮೀನುಗಳ ಮಾರಣ ಹೋಮ ನಡೆದಿದೆ.

    ನೀರು ಕಲುಷಿತಗೊಂಡ ಪರಿಣಾಮ ಲಕ್ಷಾಂತರ ಮೀನುಗಳು ಕರೆಯಲ್ಲಿ ಸಾವನ್ನಪ್ಪಿವೆ. ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಒಳಪಡುವ ಕೆರೆ ಇದಾಗಿದ್ದು, ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಸಮೀರ್ ಖಾನ್ ಎಂಬುವವರು ಸುಮಾರು 3 ಲಕ್ಷ ರೂಪಾಯಿಗೆ ಮೀನುಗಾರಿಕೆ ಇಲಾಖೆ ಮೂಲಕ ಟೆಂಡರ್ ಪಡೆದಿದ್ದಾರೆ. ಅದರಂತೆ ತಮಿಳುನಾಡಿನಿಂದ 3 ಲಕ್ಷದಷ್ಟು ವಿವಿಧ ತಳಿಯ ಮೀನು ಮರಿಗಳನ್ನ ಎರಡು ತಿಂಗಳ ಹಿಂದೆಯೆ ಕರೆಯಲ್ಲಿ ತಂದು ಬಿಟ್ಟಿದ್ದಾರೆ. ಆದರೆ ಕಳೆದ 2 ದಿನಗಳಿಂದ ಕೆರೆಯಲ್ಲಿರುವ ಲಕ್ಷಾಂತರ ಮೀನುಗಳು ಒಂದೊಂದಾಗಿ ಮೃತಪಡುತ್ತಿವೆ.

    ಮೀನುಗಳ ಸಾವಿಗೆ ಕೆರೆ ಪಕ್ಕದಲ್ಲಿರುವ ಪ್ರಕಾಶ್ ಬಸ್ ತಯಾರಿಕ ಘಟಕದಿಂದ ಕಲುಷಿತ ನೀರು ಮಿಶ್ರಣವಾಗಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಖಾನೆ ತ್ಯಾಜ್ಯ ನೀರು ಕೆರೆ ಸೇರಿರುವ ಪರಿಣಾಮ ಲಕ್ಷಾಂತರ ಮೀನುಗಳ ಸಾವನ್ನಪ್ಪಿರಬಹುದು ಎಂಬ ಅನುಮಾನ ಹುಟ್ಟುಕೊಂಡಿದೆ. ಮೀನುಗಳ ಸಾವಿನಿಂದ ಕೆರೆ ದರ್ವಾಸನೆ ಹೊಡೆಯುತ್ತಿದ್ದು, ಮೃತ ಮೀನುಗಳನ್ನ ಪ್ರಾಣಿ ಪಕ್ಷಿಗಳು ಕೂಡ ಸೇವಿಸದೆ ಇರುವುದು ಯಾರಾದರು ದುಷ್ಕರ್ಮಿಗಳು ವಿಷ ಪ್ರಾಶನ ಮಾಡಿದ್ದಾರ ಅನ್ನೋ ಅನುಮಾನ ಕೂಡ ಮೂಡಿದೆ.

    ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿದ್ದ ಸಮೀರ್ ಅವರಿಗೆ ಇಲಾಖೆ ಸೂಕ್ತ ಪರಿಹಾರ ಕೊಡಬೇಕು ಎಂಬುದು ಸ್ಥಳೀಯರ ಮನವಿಯಾಗಿದೆ. ಅಲ್ಲದೆ ಮೀನುಗಳ ಸಾವಿಗೆ ನಿಖರವಾದ ಕಾರಣ ತಿಳಿಯದೆ ಇರುವುದರಿಂದ ಕೆರೆಯಲ್ಲಿರುವ ಹಾವು-ಏಡಿ ಸೇರಿದಂತೆ ಜಲಚರಗಳು ಮೃತಪಡುವ ಆತಂಕ ಸ್ಥಳೀಯರಲ್ಲಿ ಶುರುವಾಗಿದೆ. ಮೀನುಗಳ ಸಾವಿಗೆ ನಿಖರವಾದ ಕಾರಣ ಹುಡುಕಿ ಸಮೀರ್ ಅವರಿಗೆ ಸೂಕ್ತ ಪರಿಹಾರ ನೀಡಬೇಕು. ಇದರ ಜೊತೆಗೆ ಮತ್ತಷ್ಟು ಜಲಚರಗಳು ಮೃತಪಡುವ ಮುನ್ನ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.

  • ವಿಲವಿಲ ಅಂತ ಒದ್ದಾಡಿ ಸಾವನ್ನಪ್ಪಿದವು ಸಾವಿರಾರು ಮೀನುಗಳು..!

    ವಿಲವಿಲ ಅಂತ ಒದ್ದಾಡಿ ಸಾವನ್ನಪ್ಪಿದವು ಸಾವಿರಾರು ಮೀನುಗಳು..!

    ಚಿಕ್ಕಬಳ್ಳಾಪುರ: ಇದ್ದಕ್ಕಿದ್ದಂತೆ ಸಾವಿರಾರು ಮೀನುಗಳು ಒಮ್ಮೇಲೆ ವಿಲವಿಲ ಒದ್ದಾಡಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಅಮಾನಿಗೋಪಾಲಕೃಷ್ಣ ಕೆರೆಯಲ್ಲಿ ನಡೆದಿದೆ.

    ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ಕ್ಕೆ ಹೊಂದಿಕೊಂಡಿರುವ ಅಮಾನಿಗೋಪಾಲಕೃಷ್ಣ ಕೆರೆಯಲ್ಲಿ ಮೀನುಗಳ ಮಾರಣ ಹೋಮವೇ ನಡೆದು ಹೋಗಿದೆ. ರಾಶಿ ರಾಶಿ ಮೀನುಗಳು ಸತ್ತು ದಡ ಸೇರಿದ್ರೇ ಅಳಿದುಳಿದಿರುವ ಮೀನುಗಳು ವಿಲವಿಲ ಅಂತ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿವೆ. ಅಂದಹಾಗೆ ಗಂಗಾಧರ್-ಮಂಜುಳಮ್ಮ ದಂಪತಿ ಈ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪಡೆದಿದ್ದರು. ಬಾಡಿಗೆ ಮನೆಯಲ್ಲಿ ವಾಸವಾಗಿರೋ ದಂಪತಿ 2 ಲಕ್ಷ ಸಾಲ ಸೋಲ ಮಾಡಿ ಕೆರೆಯಲ್ಲಿ ಮೀನು ಮರಿಗಳನ್ನ ಬಿಟ್ಟು ಸಾಕಾಣಿಕೆ ಮಾಡುತ್ತಿದ್ದರು. ಆದ್ರೆ ಕಳೆದ ಎರಡು ಮೂರು ದಿನಗಳಿಂದ ಇದ್ದಕ್ಕಿದ್ದಂತೆ ಮೀನುಗಳು ಸಾವನ್ನಪ್ಪುತ್ತಿರೋದು ಬಡದಂಪತಿಗೆ ನೋವು ತಂದಿದೆ.

    ಸಾಲ ಸೋಲ ಮಾಡಿ ಮೀನು ಸಾಕಾಣಿಕೆ ಮಾಡುತ್ತಿದ್ದ ದಂಪತಿ ಮೀನುಗಳ ಸಾವಿನಿಂದ ಕಂಗಲಾಗಿದ್ದು ಮಾಡಿದ ಸಾಲ ತೀರಿಸೋದಾದ್ರೂ ಹೇಗೆ ಅಂತ ಕಣ್ಣೀರು ಸುರಿಸುತ್ತಿದ್ದಾರೆ. ಇನ್ನೂ ನಗರಸಭೆಯ ಒಳಚರಂಡಿ ಘಟಕದ ನೀರು ಕರೆಗೆ ಸೇರಿರುವುದು ಮೀನುಗಳ ಸಾವಿಗೆ ಕಾರಣ ಅಂತ ಶಂಕಿಸಿಲಾಗಿದೆ. ಮತ್ತೊಂದೆಡೆ ಚಳಿಗಾಲದಲ್ಲಿ ಅಮ್ಲಜನಕದ ಕೊರತೆಯಿಂದ ಮೀನುಗಳು ಸಾವನ್ನಪ್ಪೋದು ಸರ್ವೆ ಸಾಮಾನ್ಯ ಎಂದು ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಡುಪಿಯ ಹೆಜಮಾಡಿ ತೀರದಲ್ಲಿ ಗೋಲಾಯಿ ಮೀನಿನ ಸುಗ್ಗಿ – ಪುಕ್ಕಟೆಯಾಗೆ ಹೊತ್ತೊಯ್ದ ಮೀನುಪ್ರಿಯರು!

    ಉಡುಪಿಯ ಹೆಜಮಾಡಿ ತೀರದಲ್ಲಿ ಗೋಲಾಯಿ ಮೀನಿನ ಸುಗ್ಗಿ – ಪುಕ್ಕಟೆಯಾಗೆ ಹೊತ್ತೊಯ್ದ ಮೀನುಪ್ರಿಯರು!

    ಉಡುಪಿ: ಮೀನುಗಳನ್ನು ಬಲೆ ಎಸೆದು ಇಲ್ಲವೇ ಗಾಳ ಹಾಕಿ ಹಿಡಿಯುವುದನ್ನು ಸಾಮಾನ್ಯವಾಗಿ ಕಾಣುತ್ತೇವೆ. ಆದರೆ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಸಮುದ್ರತೀರಕ್ಕೆ ವರ್ಷಕ್ಕೊಮ್ಮೆ ಸಾಗರೋಪಾದಿಯಲ್ಲಿ ಬಂದು ಬೀಳುವ ಗೋಲಾಯಿ ಮೀನುಗಳನ್ನು ಬಾಜಿಕೊಳ್ಳುವ ಮೂಲಕ ಸ್ಥಳೀಯರು ಸಂಭ್ರಮಾಚರಣೆ ಮಾಡಿದ್ದಾರೆ.

    ಬುಧವಾರ ಹೆಜಮಾಡಿ ತೀರದಲ್ಲಿ ಅಕ್ಷರಶಹ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು. ಸಮುದ್ರದಲೆಗಳೊಂದಿಗೆ ದಡಕ್ಕೆ ಬಂದ ರಾಶಿ ರಾಶಿ ಗೋಲಾಯಿ ಮೀನುಗಳು ಮೀನುಪ್ರಿಯರನ್ನು ಕೈಬೀಸಿ ಕರೆಯುತ್ತಿದ್ದವು.

    ಪ್ರತೀ ವರ್ಷ ಮೀನುಗಳು ದಡಕ್ಕೆ ಅಪ್ಪಳಿಸುವುದು ಸಾಮಾನ್ಯ, ಆದರೆ ಈ ಬಾರಿ ಟನ್ ಗಟ್ಟಲೆ ಗೋಲಾಯಿ ಮೀನಿನ ರಾಶಿ ಬಿದ್ದಿದ್ದು, ಕಿಲೋಮೀಟರ್ ಗಳವರೆಗೆ ಮೀನಿನ ರಾಶಿ ದಡಕ್ಕೆ ಅಪ್ಪಳಿಸಿತ್ತು. ದಡಕ್ಕೆ ಬಂದಿದ್ದ ಮೀನುಗಳನ್ನು ಜನರು ಬುಟ್ಟಿ, ಗೋಣಿ, ರಿಕ್ಷಾ, ಟೆಂಪೋ ಹಾಗೂ ವ್ಯಾನುಗಳಲ್ಲಿ ಬಾಚಿಕೊಂಡು ಕೊಂಡೊಯ್ದಿದ್ದಾರೆ. ಈ ಬಾರಿ ಭಾರೀ ಪ್ರಮಾಣದಲ್ಲಿ ಮೀನು ಸಿಕ್ಕಿರುವುದರಿಂದ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಮೀನುಗಾರ ಸಮುದಾಯದ ಯುವ ಮುಖಂಡ ಸೂರಜ್ ಸಾಲಿಯಾನ್, ಯಾವಾಗಲೂ ಸಮುದ್ರ ತಟದ ಕೈರಂಪಣಿಯಲ್ಲಿ ಬಲೆ ಹಾಕಿ ಮೀನುಗಾರಿಕೆ ಮಾಡುತ್ತಲೇ ಇರುತ್ತೇವೆ. ಅದೃಷ್ಟ ಚೆನ್ನಾಗಿದ್ದರೆ ಬಲೆಗೆ ಟನ್ ಗಟ್ಟಲೇ ಮೀನು ಬೀಳುತ್ತವೆ. ಇಲ್ಲವಾದರೇ ಖರ್ಚಿಗೆ ಬೇಕಾದಷ್ಟೂ ಸಿಗುವುದಿಲ್ಲ. ಈ ಬಾರಿ ಹೆಜಮಾಡಿ ಪ್ರದೇಶದ ಮೀನುಗಾರರ ಅದೃಷ್ಟ ಖುಲಾಯಿಸಿದೆ. ಅಲ್ಲದೇ ಬಲೆ ಹಾಕಿದ ತಂಡದವರು ತಮಗೆ ಬೇಕಾದಷ್ಟು ಮೀನನ್ನು ಸಾಗಾಟ ಮಾಡಿ, ಉಳಿದ ಮೀನುಗಳನ್ನು ತೀರದಲ್ಲೇ ಬಿಡುತ್ತಾರೆ ಎಂದು ಹೇಳಿದ್ದಾರೆ.

     

    ಸ್ಥಳೀಯರಾದ ಸಂದೀಪ್ ಎಂಬವರು ಮಾತನಾಡಿ, ಮೀನುಗಾರರು ತೀರದಲ್ಲಿ ಬಿಟ್ಟು ಹೋಗುವ ಹೆಚ್ಚುವರಿ ಮೀನುಗಳನ್ನು ಸ್ಥಳೀಯರು ಹಾಗೂ ಸಮುದ್ರ ತೀರಕ್ಕೆ ಬರುವ ಪ್ರವಾಸಿಗರು ತಮಗೆ ಬೇಕಾದಷ್ಟನ್ನು ಉಚಿತವಾಗಿ ತೆಗೆದುಕೊಂಡು ಹೋಗುತ್ತಾರೆ. ಈ ವಿಷಯ ತಿಳಿಯುತ್ತಿದ್ದಂತೆ ನಾನೂ ಸಹ ಶಿರ್ವದಿಂದ ಬಂದು, ಒಂದು ಚೀಲ ಗೋಲಾಯಿ ಮೀನನ್ನು ತುಂಬಿಸಿಕೊಂಡಿದ್ದೇನೆ. ಇದೂವರೆಗೂ ಈ ರೀತಿ ಭಾರೀ ಪ್ರಮಾಣದ ಮೀನನ್ನು ಹೆಜಮಾಡಿ ತೀರದಲ್ಲಿ ನಾನು ಕಂಡಿದ್ದೇ ಇಲ್ಲ. ಅಲ್ಲದೇ ಈ ಗೋಲಾಯಿ ಮೀನು ಫಿಶ್‍ಫ್ರೈಗೆ ಹೇಳಿ ಮಾಡಿಸಿದ ಮೀನು. ಇದರ ರುಚಿ ತುಂಬಾ ಚೆನ್ನಾಗಿರುತ್ತದೆ. ಬೇಸಿಗೆಯಾಗಿದ್ದರೆ ಇದನ್ನು ಒಣಗಿಸಿ ಶೇಖರಿಸಿಟ್ಟುಕೊಳ್ಳಬಹುದಾಗಿತ್ತು ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅರಳೂರು ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

    ಅರಳೂರು ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

    ಬೆಂಗಳೂರು: ಬೆಳ್ಳಂದೂರು ಸಮೀಪದ ಅರಳೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಶ್ರೀನಿವಾಸ್ ಎಂಬವರು ಗುತ್ತಿಗೆ ಪಡೆದು ಮೀನುಗಳನ್ನ ಸಾಕಾಣಿಕೆ ಮಾಡುತ್ತಿದ್ದರು. ನಗರದಲ್ಲಿ ಕಳೆದ ಹಲವು ದಿನಗಳಿಂದ ಮಳೆ ನಿರಂತರವಾಗಿ ಸುರಿಯುತ್ತಿರುವ ಪರಿಣಾಮ ಮಳೆ ನೀರಿನ ಜೊತೆ ಕಾರ್ಖಾನೆಗಳ ಹಾಗೂ ಒಳಚರಂಡಿ ನೀರನ್ನು ಕೆರೆಗೆ ಬಿಟ್ಟಿರುವುದರಿಂದ ಮೀನುಗಳು ಸಾವನ್ನಪ್ಪಿವೆ ಎಂದು ಶ್ರೀನಿವಾಸ್ ಹೇಳಿದ್ದಾರೆ.

    ಮೀನುಗಳ ಸಾವಿನಿಂದ ಗುತ್ತಿಗೆದಾರ ಶ್ರೀನಿವಾಸ್ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಆದರೆ ಸಾವಿರಾರು ಮೀನುಗಳು ಸಾವನ್ನಪ್ಪಿದರೂ ಇನ್ನೂ ಕಾರ್ಖಾನೆಗಳ ಕಲುಷಿತ ನೀರು ಕೆರೆಗಳಿಗೆ ಸೇರುವುದು ನಿಂತಿಲ್ಲ ಎಂಬುದು ವಿಪರ್ಯಾಸವಾಗಿದೆ.