Tag: ಮುಂಗಾರು ಮಳೆ

  • ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ – ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

    ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ – ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

    ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ (Rain) ಸಾಧ್ಯತೆಯಿದ್ದು, ಇಂದು ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಜೂ.11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಉಳಿದೆಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂ.12ರಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಟ್ರಕ್ಕಿಂಗ್ ವೇಳೆ ಕಾಡಿನಲ್ಲಿ ನಾಪತ್ತೆಯಾದ ಚಿತ್ರದುರ್ಗದ 10 ಮೆಡಿಕಲ್ ವಿದ್ಯಾರ್ಥಿಗಳು – 6 ಗಂಟೆ ಬಳಿಕ ಪತ್ತೆ

    ಜೂ. 13ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಸೇರಿ ಇತರೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ: ನಿಖಿಲ್ ಕಿಡಿ

  • ದೇಶದಲ್ಲಿ ಮಾನ್ಸೂನ್ ಅಬ್ಬರ – ಕೇರಳದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

    ದೇಶದಲ್ಲಿ ಮಾನ್ಸೂನ್ ಅಬ್ಬರ – ಕೇರಳದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

    – ಮುಂಬೈನಲ್ಲಿ 24 ಗಂಟೆಗಳಲ್ಲಿ 135.4 ಮಿ.ಮೀ ಮಳೆ
    – ಹಿಮಾಚಲ ಪ್ರದೇಶದಲ್ಲಿ ಆಲಿಕಲ್ಲು ಮಳೆ

    ನವದೆಹಲಿ: ದೇಶದಲ್ಲಿ ಮಾನ್ಸೂನ್ ಅಬ್ಬರ ಜೋರಾಗಿದ್ದು, ಕೇರಳದಲ್ಲೂ ಭಾರೀ ಮಳೆಯಾಗಿದೆ. ಕಣ್ಣೂರು, ವಯನಾಡ್, ಕೋಝಿಕ್ಕೋಡ್‌ನಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.

    ಕೊಚ್ಚಿಯ ಕಡಲತೀರದಲ್ಲಿ ಭಾರೀ ಗಾಳಿ ಬೀಸುತ್ತಿರುವುದರಿಂದ ತಿರುವನಂತಪುರಂ, ಕೊಲ್ಲಂ ಮತ್ತು ಆಲಪ್ಪುಳ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ವರುಣನ ಆರ್ಭಟಕ್ಕೆ ಸಮುದ್ರಗಳು ಪ್ರಕ್ಷುಬ್ದಗೊಂಡಿದೆ. ಭಾರೀ ಮಳೆಯಿಂದಾಗಿ ಜನ ತತ್ತರಿಸಿದ್ದಾರೆ. ಇದನ್ನೂ ಓದಿ: ಜೂನ್ ತಿಂಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆ – ರಾಜ್ಯದಲ್ಲಿ ಎಲ್ಲೆಲ್ಲಿ ಏನಾಗಿದೆ?

    ಮಹಾರಾಷ್ಟ್ರದ ಪುಣೆ, ಸತಾರಾ, ಸೋಲಾಪುರ, ರಾಯಗಢ ಮತ್ತು ಮುಂಬೈನಂತಹ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ರಾಯಗಢದಲ್ಲಿ ಸಿಡಿಲು ಬಡಿದು ಒಬ್ಬರು ಸಾವನ್ನಪ್ಪಿದರೇ, ಮುಂಬೈನಲ್ಲಿ ಮರ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಮುಂಬೈ 24 ಗಂಟೆಗಳಲ್ಲಿ 135.4 ಮಿಮೀ ಮಳೆಯಾಗಿದೆ. ಹಿಮಾಚಲ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು, ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: 1200 ರೂ. ಬೆಲೆಯ ಟಿಕೆಟ್‌ 6000ಕ್ಕೆ ಸೇಲ್‌ – ಐಪಿಎಲ್‌ ಟಿಕೆಟ್‌ ಮಾರುತ್ತಿದ್ದ ಟೆಕ್ಕಿ ಬಂಧನ

  • ಜೂನ್ ತಿಂಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆ – ರಾಜ್ಯದಲ್ಲಿ ಎಲ್ಲೆಲ್ಲಿ ಏನಾಗಿದೆ?

    ಜೂನ್ ತಿಂಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆ – ರಾಜ್ಯದಲ್ಲಿ ಎಲ್ಲೆಲ್ಲಿ ಏನಾಗಿದೆ?

    ಬೆಂಗಳೂರು: ದೇಶದಲ್ಲಿ ಮುಂಗಾರು ಅಬ್ಬರ ಶುರುವಾಗಿರೋ ಹೊತ್ತಲ್ಲೇ ಹವಾಮಾನ ಇಲಾಖೆ ಮತ್ತೊಂದು ಶುಭಸುದ್ದಿ ನೀಡಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆ ಆಗಲಿದ್ದು, ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಮಳೆಯ ಪ್ರಮಾಣ ಸಾಮಾನ್ಯವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಇನ್ನು, ರಾಜ್ಯದಲ್ಲಿ ಮುಂಗಾರು ಆರ್ಭಟಕ್ಕೆ ಜನ ತತ್ತರಿಸಿದ್ದು, ಕೊಡಗು ಹಾಗೂ ಹಾವೇರಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅಥಣಿಯ ನಾಗನೂರು ಗ್ರಾಮದಲ್ಲಿ ಎತ್ತಿನಗಾಡಿ ಹಳ್ಳಕ್ಕೆ ಬಿದ್ದು ಇಬ್ಬರು ಮಕ್ಕಳಾದ ಗಣೇಶ ಸಂಜು ಕಾಂಬಳೆ (9), ದೀಪಕ್ ಸಂಜು ಕಾಂಬಳೆ (11)ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಉರ್ದುಗೆ 100 ಕೋಟಿ – ಕನ್ನಡಕ್ಕೆ ಬರೀ 32 ಕೋಟಿನಾ..? – ಬಿಜೆಪಿ ಪೋಸ್ಟರ್ ತಂತ್ರಕ್ಕೆ ಸಿಎಂ ಕೆಂಡ

    ದಕ್ಷಿಣಕನ್ನಡದಲ್ಲಿ ಮಳೆ ಆರ್ಭಟ ಜೋರಾಗಿತ್ತು. ಮಂಗಳೂರಿನ ಬಜಾಲ್ ಜಲ್ಲಿಗುಡ್ಡೆಯ ಒಂದು ಭಾಗದ ಮಣ್ಣು ಕುಸಿದು 150 ಕ್ಕೂ ಹೆಚ್ಚು ಮನೆಗಳಿಗೆ ತೊಂದರೆ ಉಂಟಾಗಿದೆ. ರಾಮಕುಂಜ ಎಂಬಲ್ಲಿ ಬೃಹತ್ ಮರವೊಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪಾರಾಗಿದ್ದಾರೆ. ನೇತ್ರಾವತಿಯಲ್ಲಿ ನೀರು ಹೆಚ್ಚಾಗಿದೆ. ಇದನ್ನೂ ಓದಿ: ಮಂಗಳೂರು| ತಲ್ವಾರ್‌ನಿಂದ ದಾಳಿ ನಡೆಸಿ ಯುವಕನ ಬರ್ಬರ ಹತ್ಯೆ

    ಮಳೆ ಆರ್ಭಟದಿಂದ ಉಡುಪಿಯಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಚಿಕ್ಕಮಗಳೂರಿನ ಕೊಪ್ಪದ ಬಿಂತ್ರವಳ್ಳಿ ಗ್ರಾಮದಲ್ಲಿ ಧರೆ ಕುಸಿದು ಮನೆ ಮುಂದೆ ಕಲ್ಲು-ಮಣ್ಣು ಬಂದು ನಿಂತಿದ್ದು, ಕೂದಲೆಳೆ ಅಂತರದಲ್ಲಿ ಮನೆಯಲಿದ್ದವರು ಪಾರಾಗಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಕೃತಕ ಜಲಪಾತಗಳು ಸೃಷ್ಟಿಯಾಗಿದ್ದು. ಪ್ರವಾಸಿಗರು ಹುಚ್ಚಾಟದಲ್ಲಿ ತೊಡಗಿದ್ದಾರೆ. ಹಾಸನ ಜಿಲ್ಲೆಯಲ್ಲೂ ಅಲ್ಲಲ್ಲಿ ಮನೆಗಳು ಕುಸಿತವಾಗಿದೆ. ಹೇಮಾವತಿ ಡ್ಯಾಮ್‌ನ ಒಳಹರಿವು ಹೆಚ್ಚಿದೆ. ಒಂದೇ ದಿನಕ್ಕೆ 8,004 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಇದನ್ನೂ ಓದಿ: IPL 2025 ಸಮಾರೋಪ ಸಮಾರಂಭದಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ – ಏನೆಲ್ಲಾ ವಿಶೇಷತೆ ಇರಲಿದೆ?

    ಸಕಲೇಶಪುರದ ಗುಡ್ಡಕುಸಿತ ಸ್ಥಳಕ್ಕೆ ವಿಪಕ್ಷ ನಾಯಕ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಡಗಿನಲ್ಲೂ ಮಳೆ ನಾನಾ ಅವಾಂತರ ಸೃಷ್ಟಿಸಿದೆ. ಎನ್‌ಡಿಆರ್‌ಎಫ್ ತಂಡ ಮಡಿಕೇರಿ ನಗರಕ್ಕೆ ಆಗಮಿಸಿದೆ. ಕೆಆರ್‌ಎಸ್‌ಗೆ ಒಂದೇ ದಿನ 3 ಅಡಿ ನೀರು ಬಂದಿದ್ದು, 93 ಅಡಿ ಆಗಿದೆ. ಕೊಪ್ಪಳದ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದಲ್ಲಿ 12 ಟಿಎಂಸಿ ನೀರು ಸಂಗ್ರಹವಾಗಿದೆ. ಬೆಳಗಾವಿಯಲ್ಲಿ ಕೃಷ್ಣಾ, ದೂದಗಂಗಾ, ವೇದಗಂಗಾ ಹಿರಣ್ಯಕೇಶಿ ನದಿಗಳ ನೀರಿನ ಮಟ್ಟ ಏರಿಕೆ ಆಗಿದೆ. ಇದನ್ನೂ ಓದಿ: ಗ್ರಾಮೀಣ ಯುವಸಮೂಹವನ್ನು ಸಬಲರನ್ನಾಗಿಸುವುದೇ ನಮ್ಮ ಗುರಿ: ಶರಣಪ್ರಕಾಶ್‌ ಪಾಟೀಲ್‌

  • ಮಂಡ್ಯದಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ

    ಮಂಡ್ಯದಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ

    ಮಂಡ್ಯ: ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಭಾನುವಾರದಿಂದ ಮುಂಗಾರು ಮಳೆ (Mansoon Rain) ಅಬ್ಬರಿಸುತ್ತಿರುವ ಹಿನ್ನೆಲೆ ಹಳೆ ಮೈಸೂರು (Mysuru) ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬೀಳದ ಪರಿಣಾಮ ಕೆಆರ್‌ಎಸ್ ಡ್ಯಾಂನಲ್ಲಿ ಕೇವಲ 15 ಟಿಎಂಸಿ ನೀರು ಇತ್ತು. ಇದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಭಾನುವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದ ಡ್ಯಾಂ ಭರ್ತಿಯಾಗುತ್ತದೆ ಎಂಬ ಆಶಾ ಭಾವನೆ ಜನರಲ್ಲಿ ಮೂಡಿದೆ. ಇದನ್ನೂ ಓದಿ: ಮೆಟ್ರೋ ಕಾಮಗಾರಿ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಮುಖ್ಯರಸ್ತೆ, ಸರ್ವಿಸ್ ರಸ್ತೆ ವಿಲೀನ – ಡಿಕೆಶಿ ಸ್ಥಳ ಪರಿಶೀಲನೆ

    ಇದೀಗ ಕೆಆರ್‌ಎಸ್ ಡ್ಯಾಂಗೆ 2,053 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಂಗಳವಾರಕ್ಕೆ ನೀರಿನ ಪ್ರಮಾಣವು 5,000 ಕ್ಯೂಸೆಕ್‌ಗೆ ಹೆಚ್ಚುವ ಸಾಧ್ಯತೆ ಇದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ 89.35 ಅಡಿ ನೀರು ಇದೆ. ಇನ್ನೂ 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಈಗ 15.555 ಟಿಎಂಸಿ ನೀರಿದೆ. ಹೊರ ಹರಿವಿನ ಪ್ರಮಾಣ 347 ಕ್ಯೂಸೆಕ್ ಇದೆ.

  • ರೈತರಿಗೆ ಸಿಹಿ ಸುದ್ದಿ – ವಾಡಿಕೆಗೂ ಮೊದಲೇ ಕೇರಳಕ್ಕೆ ಮುಂಗಾರು ಪ್ರವೇಶ

    ರೈತರಿಗೆ ಸಿಹಿ ಸುದ್ದಿ – ವಾಡಿಕೆಗೂ ಮೊದಲೇ ಕೇರಳಕ್ಕೆ ಮುಂಗಾರು ಪ್ರವೇಶ

    ನವದೆಹಲಿ: ವಾಡಿಕೆಗೂ ಮೊದಲೇ ಕೇರಳ ಕರಾವಳಿಗೆ ಮುಂಗಾರು ಪ್ರವೇಶವಾಗಿದೆ.

    ಭಾರತೀಯ ಹವಾಮಾನ ಇಲಾಖೆ ಮೇ 27ಕ್ಕೆ ಮುಂಗಾರು ಮಾರುತಗಳು ಕೇರಳ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು. ಆದರೆ 3 ದಿನದ ಮೊದಲೇ ಮುಂಗಾರು ಪ್ರವೇಶವಾಗಿದ್ದು ರೈತರು ಸಂತಸಗೊಂಡಿದ್ದಾರೆ.

    ಸಾಮಾನ್ಯವಾಗಿ ಭಾರತದಲ್ಲಿ ಜೂನ್ 1 ರಂದು ಮುಂಗಾರು ಮಳೆ ಭಾರತವನ್ನು ಪ್ರವೇಶಿಸುತ್ತದೆ. ಆದರೆ ಈ ಬಾರಿ ನೈಋತ್ಯ ಮಾನ್ಸೂನ್ ಕೇರಳದಲ್ಲಿ ಸಾಮಾನ್ಯ ದಿನಾಂಕಕ್ಕಿಂತ 8 ದಿನಗಳು ಮುಂಚಿತವಾಗಿ ಪ್ರಾರಂಭವಾಗಿರುವುದು ವಿಶೇಷ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಗೆ ಭಾರೀ ಮಳೆ ಎಚ್ಚರಿಕೆ – 3 ದಿನ ರೆಡ್‌ ಅಲರ್ಟ್‌

    ಈ ಹಿಂದೆ 2009 ರಲ್ಲಿ ಮೇ 23ಕ್ಕೆ ಮುಂಗಾರು ಮಳೆ ಪ್ರವೇಶವಾಗಿತ್ತು. 2023 ರಲ್ಲಿ ಜೂನ್‌ 9, 2024ರಲ್ಲಿ ಮೇ 30 ರಂದು ಮುಂಗಾರು ಪ್ರವೇಶವಾಗಿತ್ತು.

  • ಈ ಬಾರಿ 1 ವಾರ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ?

    ಈ ಬಾರಿ 1 ವಾರ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ?

    ಬೆಂಗಳೂರು: 16 ವರ್ಷದಲ್ಲೇ ಮೊದಲ ಬಾರಿಗೆ ಅವಧಿಗೂ ಮುನ್ನ ಮುಂಗಾರು ಮಳೆ (Mansoon Rain) ರಾಜ್ಯವನ್ನು ಪ್ರವೇಶಿಸಲಿದೆ. ಈ ಬಾರಿ ಐದಾರು ದಿನ ಮುಂಚೆಯೇ ಅಂದರೆ ಮೇ 27ಕ್ಕೆ ಕೇರಳಕ್ಕೆ (Kerala) ಮುಂಗಾರು ಪ್ರವೇಶಿಸಲಿದ್ದು, ಕರ್ನಾಟಕಕ್ಕೆ (Karnataka) ಮೇ 30 ಅಥವಾ 31ಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಈ ಮೊದಲು 2009ರಲ್ಲಿ ಮೇ 23 ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸಿತ್ತು. ಅದಾಗಿ 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಈ ಬಾರಿ ಮೇ 27ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ಮುಂಗಾರು ಸಾಮಾನ್ಯವಾಗಿ ಜೂನ್ 1ರ ಬಳಿಕ ಕೇರಳಕ್ಕೆ ಆಗಮಿಸುತ್ತಿತ್ತು. ಈ ಬಾರಿ ಅದಕ್ಕಿಂತಲೂ ನಾಲ್ಕು ದಿನ ಮುಂಚಿತವಾಗಿ ಎಂಟ್ರಿ ಕೊಡಲಿದೆ. ಹೀಗಾಗಿ ಈ ಸಲದ ಖಾರಿಫ್ ಬಿತ್ತನೆಯ ಋತುವಿನ ಮೇಲೆ ಒಳ್ಳೆಯ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. 2024ರಲ್ಲಿ ಕರ್ನಾಟಕಕ್ಕೆ ಜೂನ್ 4ರಂದು ಮುಂಗಾರು ಪ್ರವೇಶ ಆಗಿತ್ತು. ಈ ಬಾರಿ ಕೇರಳಕ್ಕೆ ಮೇ 27ಕ್ಕೆ ಆಗಮಿಸುತ್ತಿದ್ದು, ಕರ್ನಾಟಕಕ್ಕೆ ಮೇ 30 ಅಥವಾ 31ಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

    2009ರಲ್ಲಿ ಮುಂಗಾರು ಪ್ರವೇಶ ಅತ್ಯಂತ ವೇಗವಾಗಿ ಬಂದ ಮಾನ್ಸೂನ್ ಆಗಿತ್ತು. ಅಲ್ಲದೇ ಆ ವರ್ಷ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿತ್ತು. ಈ ಬಾರಿಯೂ ಶೀಘ್ರ ಮುಂಗಾರು ಪ್ರವೇಶಿಸಲಿದ್ದು, ಈ ಸಲವೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ವಾಡಿಕೆ ಅವಧಿಗಿಂತ ಮೊದಲೇ ಬೇಗ ಮುಂಗಾರು ಆಗಮನವಾದರೆ ಅತ್ಯಧಿಕ ಮಳೆ ದಾಖಲಾಗುವ ಸಂಭವವಿದೆ. ಈ ಬಾರಿಯೂ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: BBMP ವ್ಯಾಪ್ತಿಯಲ್ಲಿನ ಕಾಮಗಾರಿಗಳ ಹಣ ಬಿಡುಗಡೆಗೆ ಆದೇಶ

    ಈ ಬಾರಿ ಹಿಂದಿನ ವರ್ಷಗಳಿಗಿಂತ ಮಳೆಯ ಅಬ್ಬರ ಹೆಚ್ಚಿರಲಿದೆ. ಜೂನ್-ಸೆಪ್ಟೆಂಬರ್‌ವರೆಗೆ ನಾಲ್ಕು ತಿಂಗಳು ಮುಂಗಾರು ಋತುವಿನಲ್ಲಿ ಹೆಚ್ಚಿನ ಮಳೆಯಾಗಲಿದೆ. ಈ ಬಾರಿ ಸರಾಸರಿ 87 ಸೆಂ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ. ಇದನ್ನೂ ಓದಿ: IPL 2025 | ಮೋದಿ ಸ್ಟೇಡಿಯಂನಲ್ಲೇ ಫೈನಲ್‌ ಮ್ಯಾಚ್‌

  • ಮುಂಗಾರು ವಿಳಂಬವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು: ಸಿಎಂ

    ಮುಂಗಾರು ವಿಳಂಬವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು: ಸಿಎಂ

    – ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ
    – 123 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ; ಸಿಎಂ ಮಾಹಿತಿ

    ಬೆಂಗಳೂರು: ಈ ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು (Monsoon) ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ರೆ ಮಾನ್ಸೂನ್ ವಿಳಂಬವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಿರುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ವಿಧಾನಸೌಧದಲ್ಲಿಂದು ನಗರ ಮತ್ತು ಗ್ರಾಮೀಣ ಭಾಗದ ಕುಡಿಯುವ ನೀರಿನ (Drinking Water) ಸಮಸ್ಯೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಗ್ಗೆ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ ಹಾಗೂ ಸಿಇಓಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ಅಯ್ಯೋ ನನಗೆ ಹೊಟ್ಟೆ ಬಂದಿದೆ ಎಂದಿದ್ದ ನಟಿ ರಿತಿಕಾ ಸಿಂಗ್ ಸೊಂಟ ಬಳ್ಳಿಯಂತಾಗಿದ್ದು ಹೇಗೆ ಗೊತ್ತಾ?

    ಸಭೆಯಲ್ಲಿ ಮಾತನಾಡಿದ ಸಿಎಂ, ಶುದ್ಧ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸ್ಪಷ್ಟ ಸೂಚನೆ ನೀಡಿದರು. ಇದನ್ನೂ ಓದಿ: Sonu Nigam | ಕನ್ನಡಿಗರ ಆಕ್ರೋಶಕ್ಕೆ ಮಣಿದ ಗಾಯಕ – ಕ್ಷಮೆಯಾಚಿಸಿದ ಸೋನು ನಿಗಮ್

    ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದ್ರೆ ವಾಡಿಕೆಗಿಂತ ಶೇ.55ರಷ್ಟು ಮಾನ್ಸೂನ್ ಪೂರ್ವ ಹೆಚ್ಚು ಮಳೆಯಾಗಿದೆ. 27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ, ಎಲ್ಲಾ ಜಲಾಶಯಗಳಲ್ಲಿ ಶೇ.50ರಿಂದ ಶೇ.60 ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ. ಈ ವರ್ಷವೂ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವೇಳೆ ಮಾನ್ಸೂನ್ ವಿಳಂಬವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ. ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 123 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ನೀರು ಪಡೆಯಲು ಈಗಾಗಲೇ 3 ಸಾವಿರ ಖಾಸಗಿ ಬೋರ್‌ವೆಲ್‌ ಗುರುತಿಸಲಾಗಿದ್ದು, 480 ಬೋರ್‌ವೆಲ್‌ಗಳನ್ನ ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

    ಹಣ ಕಾಸಿನ ಕೊರತೆ ಇಲ್ಲ. ಎಷ್ಟು ಬೇಕಾದರೂ ಹಣ ಕೊಡುತ್ತೇವೆ. ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್‌ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು ಎಂದು ತಾಕೀತು ಮಾಡಿದರು.

    ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು. ಅಗತ್ಯಬಿದ್ದರೆ ಮಾತ್ರ ಬೋರ್‌ವೆಲ್‌ಗಳನ್ನ ಕೊರೆಯಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬೋರ್‌ವೆಲ್‌ ಕೊರೆದು ವೆಚ್ಚ ದುರುಪಯೋಗ ಮಾಡಬಾರದು ಅಂತ ಡಿಸಿಗಳಿಗೆ ನಿರ್ದೇಶನ ನೀಡಿದರು. ಇದನ್ನೂ ಓದಿ: ಮಹದೇವಪ್ಪ ರಾಂಪುರೆ ಮೆಡಿಕಲ್ ಕಾಲೇಜ್​ ಸ್ಟೈಫಂಡ್ ಹಗರಣ – 81.21 ಕೋಟಿ ದುರುಪಯೋಗ ಸಾಬೀತು

  • ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ಸಾಧ್ಯತೆ – ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ

    ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ಸಾಧ್ಯತೆ – ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ

    ನವದೆಹಲಿ: ಈ ಬಾರಿಯ ಮುಂಗಾರು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು (Mansoon Rain) ತರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳ ಕಾಲ ಸರಾಸರಿ 87 ಸೆಂ.ಮೀ. ಮಳೆಯ ದೀರ್ಘಕಾಲೀನ ಸರಾಸರಿಗಿಂತ 105% ಮಳೆಯಾಗುವ ಸಾಧ್ಯತೆಯಿದೆ, ಇದರಲ್ಲಿ ±5% ದೋಷಾಂಶವಿರಲಿದೆ ಎಂದು ಅಂದಾಜಿಸಿದೆ.

    ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳದ ಮೂಲಕ ತನ್ನ ಮುನ್ನಡೆಯನ್ನು ಪ್ರಾರಂಭಿಸಿ ಸೆಪ್ಟೆಂಬರ್ ಮಧ್ಯಭಾಗದಲ್ಲಿ ಹಿಂದೆ ಸರಿಯುತ್ತದೆ. ಸರಾಸರಿಗಿಂತ ಹೆಚ್ಚಿನ ಮಳೆಯು ಕೃಷಿ ವಲಯಕ್ಕೆ ಅಗತ್ಯವಾದ ಉತ್ತೇಜನವನ್ನು ನೀಡಬಹುದು ಎಂದು ಭೂ ವಿಜ್ಞಾನ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಿಗೆ ಕೂಡಲೇ ಅಮಾನತುಗೊಳಿಸಿ: ಸುಪ್ರೀಂ

    ಈ ವರ್ಷದ ಮುನ್ಸೂಚನೆಯ ಪ್ರಕಾರ, ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳು ಅನುಕೂಲಕರ ಮಳೆಯಿಂದ ಪ್ರಯೋಜನ ಪಡೆಯುವ ಸಾಧ್ಯತೆಯಿದೆ. ನಾಲ್ಕು ತಿಂಗಳ ಮಾನ್ಸೂನ್ ಋತುವಿನಲ್ಲಿ ಲಡಾಖ್, ಈಶಾನ್ಯ ಮತ್ತು ತಮಿಳುನಾಡಿನಲ್ಲಿ ಮಳೆ ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: Gadag | ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ

    ಐಎಂಡಿ ಸಾಮಾನ್ಯ ಮಳೆಯನ್ನು 50 ವರ್ಷಗಳ ಸರಾಸರಿ 87 ಸೆಂ.ಮೀ (ಸುಮಾರು 35 ಇಂಚುಗಳು) 96% ರಿಂದ 104% ರವರೆಗೆ ವ್ಯಾಖ್ಯಾನಿಸುತ್ತದೆ. ಈ ವ್ಯಾಪ್ತಿಗಿಂತ ಹೆಚ್ಚಿನ ಪ್ರಮಾಣವನ್ನು ‘ಸಾಮಾನ್ಯಕ್ಕಿಂತ ಹೆಚ್ಚು’ ಎಂದು ಪರಿಗಣಿಸಲಾಗುತ್ತದೆ. ಇದನ್ನೂ ಓದಿ: ವರದಿಯೇ ಹೊರಗೆ ಬಾರದೇ ಜಾತಿಗಣತಿ ವಿರೋಧ ಮಾಡೋದು ಸರಿಯಲ್ಲ: ಸಂತೋಷ್ ಲಾಡ್

    ಭಾರತೀಯ ಸಾಗರದ ಡೈಪೋಲ್ ಸಕಾರಾತ್ಮಕವಾಗಿರುವುದು ದಕ್ಷಿಣ ಭಾರತದ ರಾಜ್ಯಗಳಿಗೆ ಹೆಚ್ಚಿನ ಮಳೆಯನ್ನು ತರಲಿದೆ. ಈ ವರ್ಷದ ಉತ್ತರ ಗೋಳಾರ್ಧದಲ್ಲಿ ಕಡಿಮೆ ಹಿಮಪಾತವೂ ಮುಂಗಾರಿಗೆ ಪೂರಕವಾಗಿದೆ ಎಂದು ಹವಮಾನ ಇಲಾಖೆ ಮುಖ್ಯಸ್ಥ ಡಾ. ಮೃತ್ಯುಂಜಯ್ ಮೊಹಪಾತ್ರಾ ತಿಳಿಸಿದ್ದಾರೆ. ಕಳೆದ ವರ್ಷ ಮುಂಗಾರು 108% LPA ಮಳೆಯನ್ನು ಒದಗಿಸಿತ್ತು. ಆದರೆ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಕಡಿಮೆ ಮಳೆಯಾಗಿತ್ತು. ಐಎಂಡಿ ತನ್ನ ಮುನ್ಸೂಚನೆಯನ್ನು ಮೇ ತಿಂಗಳಲ್ಲಿ ನವೀಕರಿಸಲಿದೆ. ಇದನ್ನೂ ಓದಿ: Chitradurga | ಗಂಜಲಗುಂಟೆ ಗ್ರಾಮದಲ್ಲಿ 3 ತಿಂಗಳಿಂದ ನೀಗದ ನೀರಿನ ಬವಣೆ – ಗ್ರಾಮಸ್ಥರು ಕಂಗಾಲು

  • Karnataka Rain| ಜುಲೈನಲ್ಲಿ ವಾಡಿಕೆಗಿಂತಲೂ 48% ಜಾಸ್ತಿ ಮಳೆ

    Karnataka Rain| ಜುಲೈನಲ್ಲಿ ವಾಡಿಕೆಗಿಂತಲೂ 48% ಜಾಸ್ತಿ ಮಳೆ

    ಬೆಂಗಳೂರು: ಜುಲೈನಲ್ಲಿ ವಾಡಿಕೆಗಿಂತ ಹೆಚ್ಚಾಗಿ ಕರ್ನಾಟಕದಲ್ಲಿ (Karnataka Rain) ಮುಂಗಾರು ಮಳೆ (Monsoon Rain) ಸುರಿದಿದೆ.

    ಜುಲೈನಲ್ಲಿ 263 ಮಿ.ಮೀ ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಜುಲೈ 1 ರಿಂದ 30ರ ವರೆಗೆ ರಾಜ್ಯದಲ್ಲಿ 390 ಮಿ.ಮೀ ನಷ್ಟು ಮಳೆ ಸುರಿದಿದೆ. ವಾಡಿಕೆಗಿಂತ 48% ಹೆಚ್ಚಾಗಿ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತಿಳಿಸಿದೆ. ಇದನ್ನೂ ಓದಿ: Wayanad Landslide : ರಕ್ಷಣಾ ಕಾರ್ಯಾಚರಣೆ ಯಾಕೆ ಕಷ್ಟವಾಗುತ್ತಿದೆ?

    ಜೂನ್‌ನಲ್ಲಿ 199 ಮಿ.ಮೀ ಮಳೆಯಾಗಬೇಕಿತ್ತು. ಆದರೆ 194 ಮಿ.ಮೀ. ಮಳೆಯಾಗುವ ಮೂಲಕ 3% ಕಡಿಮೆ ಮಳೆ ಸುರಿದಿತ್ತು. ಇದನ್ನೂ ಓದಿ: Wayanad Landslides: ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

     

  • ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶ

    ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶ

    ಬೆಂಗಳೂರು: ಕೇರಳದಲ್ಲಿ (Kerala) ಈಗಾಗಲೇ ಮುಂಗಾರು ಮಳೆ (Mansoon Rain) ಪ್ರಾರಂಭಗೊಂಡ ಹಿನ್ನೆಲೆ ನಾಳೆಯಿಂದ (ಭಾನುವಾರ) ಕರ್ನಾಟಕದಲ್ಲೂ (Karnataka) ಮಳೆಯ ಅಲರ್ಟ್ ನೀಡಲಾಗಿದೆ.

    ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಹಿನ್ನೆಲೆ ನಾಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ – ಸಿಎಂ, ಡಿಸಿಎಂಗೆ ಜಾಮೀನು

    ನಾಳೆಯಿಂದ ಐದು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ ನೀಡಿದ್ದು, ಮುಂಗಾರು ಪ್ರವೇಶದಿಂದ ಕ್ರಮೇಣ ಧಗೆಯ ತಾಪಮಾನ ಇಳಿಕೆಯಾಗುವ ಸಂಭವವಿದೆ. ಇದನ್ನೂ ಓದಿ: ಎಸ್‌ಟಿ ನಿಗಮ ಹಗರಣ – ವಾಲ್ಮೀಕಿ ನಿಗಮ ಎಂಡಿ, ಲೆಕ್ಕಾಧಿಕಾರಿ ಬಂಧನ