Tag: ಮುಕುಲ್ ರಾಯ್

  • ಮರಳಿ ಟಿಎಂಸಿ ಗೂಡು ಸೇರಿದ ಮುಕುಲ್ ರಾಯ್

    ಮರಳಿ ಟಿಎಂಸಿ ಗೂಡು ಸೇರಿದ ಮುಕುಲ್ ರಾಯ್

    ಕೋಲ್ಕತ್ತಾ: ಮುಕುಲ್ ರಾಯ್ ಮತ್ತು ಪುತ್ರ ಸುಭ್ರಾಂಶು ರಾಯ್ ಮತ್ತೆ ಟಿಎಂಸಿಗೆ ಮರಳಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮೊದಲು ಬಿಜೆಪಿ ಸೇರಿದ್ದ ಮುಕುಲ್ ರಾಯ್ ಈಗ ಮಮತಾ ಬಣವನ್ನು ಸೇರಿದ್ದಾರೆ.

    ಸಿಎಂ ಮಮತಾ ಸಮ್ಮುಖದಲ್ಲಿ ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗಿ ಮಾತನಾಡಿದ ಮುಕುಲ್ ರಾಯ್, ಮತ್ತೆ ನನ್ನ ಹಳೆಯ ಸಹೋದ್ಯೋಗಿಗಳನ್ನು ನೋಡಲು ಸಂತಸವಾಗುತ್ತದೆ. ಬಿಜೆಪಿಯಲ್ಲಿರಲು ನನಗೆ ಸಾಧ್ಯವಿಲ್ಲ ಎಂದು ಹೇಳಿದರು.

    ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ, ಮುಕುಲ್ ರಾಯ್ ಮತ್ತೆ ಮರಳಿ ಮನೆಗೆ ಬಂದಿದ್ದಾರೆ. ಮತ್ತಷ್ಟು ಜನರ ಪಕ್ಷಕ್ಕೆ ಬರಲಿದ್ದಾರೆ. ಒಲ್ಡ್ ಇಸ್ ಆಲ್ವೇಸ್ ಗೋಲ್ಡ್ ಎಂದು ತಿಳಿಸಿದರು. ಇದನ್ನೂ ಓದಿ: ವ್ಯಾಕ್ಸಿನ್ ಸರ್ಟಿಫಿಕೇಟ್ ಮೇಲೆ ಮಮತಾ ಬ್ಯಾನರ್ಜಿ ಫೋಟೋ – ಕೆಂಡಾಮಂಡಲವಾದ ಬಿಜೆಪಿ

    ಮಮತಾ ಬ್ಯಾನರ್ಜಿ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮುಕುಲ್ ರಾಯ್ 2017ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

    ಬಿಜೆಪಿಯ ಪ್ರಮುಖ ಸಭೆಗೆ ಮುಕುಲ್ ರಾಯ್ ಗೈರಾದ ಬೆನ್ನಲ್ಲೇ ಅವರು ಮತ್ತೆ ಟಿಎಂಸಿ ಸೇರಲಿದ್ದಾರೆ ಎನ್ನುವುದು ಖಚಿತವಾಗಿತ್ತು. ಕೋವಿಡ್ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಕುಲ್ ರಾಯ್ ಅವರ ಪತ್ನಿಯನ್ನು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

    2017ರಲ್ಲಿ ಟಿಎಂಸಿ ತೊರೆದಿದ್ದ ಮುಕುಲ್ ರಾಯ್ ಅವರನ್ನು 2020ರ ಸೆಪ್ಟೆಂಬರ್ 26 ರಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಿತ್ತು. ಸದ್ಯ ಇವರು ಪಶ್ಚಿಮ ಬಂಗಾಳದ ಕೃಷ್ಣ ನಗರದ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದಾರೆ.

    ಪಶ್ಚಿಮ ಬಂಗಾಲ ಬಿಜೆಪಿಯಲ್ಲಿ ಸುವೇಂದು ಅಧಿಕಾರಿ, ಮಕುಲ್ ರಾಯ್ ಬಣ ಇತ್ತು. ಬಿಜೆಪಿ ಹೈಕಮಾಂಡ್ ನಾಯಕರು ಸುವೇಂದು ಅಧಿಕಾರಿಗೆ ಹೆಚ್ಚಿನ ಪ್ರಶಾಸ್ತ್ಯ ನೀಡಿದ್ದು ಮುಕುಲ್ ರಾಯ್ ಅಸಮಾಧಾನಕ್ಕೆ ಕಾರಣವಾಗಿತ್ತು. ಎರಡನೇ ಅತಿ ಹೆಚ್ಚು ಸ್ಥಾನ ಸಿಕ್ಕಿದ ಹಿನ್ನೆಲೆಯಲ್ಲಿ ಸುವೇಂದು ಅಧಿಕಾರಿಯನ್ನು ಪಕ್ಷದ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿ ವಿರೋಧ ಪಕ್ಷದ ಸ್ಥಾನವನ್ನು ಬಿಜೆಪಿ ನೀಡಿತ್ತು.

  • ದೀದಿಗೆ ಮತ್ತೆ ಶಾಕ್! ಟಿಎಂಸಿ, ಕಾಂಗ್ರೆಸ್, ಸಿಪಿಎಂನಿಂದ 107 ಶಾಸಕರು ಬಿಜೆಪಿಗೆ ಸೇರಲು ಸಿದ್ಧ

    ದೀದಿಗೆ ಮತ್ತೆ ಶಾಕ್! ಟಿಎಂಸಿ, ಕಾಂಗ್ರೆಸ್, ಸಿಪಿಎಂನಿಂದ 107 ಶಾಸಕರು ಬಿಜೆಪಿಗೆ ಸೇರಲು ಸಿದ್ಧ

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಕಾಂಗ್ರೆಸ್ ಹಾಗೂ ಸಿಪಿಎಂ ಪಕ್ಷಗಳಿಂದ 107 ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎಂಬ ಹೇಳಿಕೆಯನ್ನು ಬಿಜೆಪಿ ನಾಯಕ ಮುಕುಲ್ ರಾಯ್ ನೀಡಿದ್ದಾರೆ.

    ಕೋಲ್ಕತ್ತಾದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸಿಕ್ಕ ಭಾರೀ ಬಹುಮತದ ಪರಿಣಾಮ ಪಶ್ಚಿಮ ಬಂಗಾಳದ ಅನೇಕ ಮುಖಂಡರು ಬಿಜೆಪಿ ಸೇರಲು ಬಯಸುತ್ತಿದ್ದಾರೆ. ಅಂತಹ ಶಾಸಕರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

    ಕಳೆದ ತಿಂಗಳು ಹಿಂದಷ್ಟೇ ಟಿಎಂಸಿಯ ಇಬ್ಬರು ಶಾಸಕರಾದ ಸುನಿಲ್ ಸಿಂಗ್ ಮತ್ತು ಬಿಸ್ವಾಜಿತ್ ದಾಸ್ ಬಿಜೆಪಿ ಸೇರಿದ್ದರು. ಮೇ 28ರಂದು ಟಿಎಂಸಿಯ 50ರಿಂದ 60 ಕೌನ್ಸಿಲರ್ ಗಳು, ಇಬ್ಬರು ಹಾಗೂ ಸಿಪಿಎಂನ ಓರ್ವ ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದರು.

    ನವದೆಹಲಿಯಲ್ಲಿ ಜೂನ್ 18ರಂದು ತೃಣಮೂಲ ಕಾಂಗ್ರೆಸ್‍ನ ಶಾಸಕ ಸುನೀಲ್ ಸಿಂಗ್ ಹಾಗೂ 15 ಕೌನ್ಸಿಲರ್ ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯ ಪಶ್ಚಿಮ ಬಂಗಾಳ ಉಸ್ತುವಾರಿ ಕೈಲಾಶ್ ವಿಜಯವರ್ಗೀ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ್ದ ಕೈಲಾಶ್ ವಿಜಯವರ್ಗೀ ಅವರು, ನಮ್ಮ ಸಂಪರ್ಕದಲ್ಲಿ ಇನ್ನೂ ಕೆಲವು ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿದ್ದರು.

    ಈ ಬೆಳವಣಿಗೆ ಬೆನ್ನಲ್ಲೇ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ಕೌನ್ಸಿಲರ್ ಗಳ ಸಭೆಯಲ್ಲಿ ಮಾತನಾಡಿದ್ದ ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ದುರ್ಬಲ ಪಕ್ಷವಲ್ಲ. ಒಬ್ಬರು ಪಕ್ಷ ಬಿಟ್ಟು ಹೋದರೆ 500 ಜನ ಸೇರ್ಪಡೆಯಾಗುತ್ತಾರೆ. ಹಣದ ಆಸೆಗಾಗಿ 15ರಿಂದ 20 ಕೌನ್ಸಿಲರ್ ಗಳು ಪಕ್ಷ ತೊರೆದರೆ ನಾನು ಹೆದರುವುದಿಲ್ಲ. ಶಾಸಕರು ಪಕ್ಷವನ್ನು ಬಿಟ್ಟು ಹೋಗಲು ಇಚ್ಛಿಸಿದರೆ ಬಿಟ್ಟು ಹೋಗಲಿ. ಪಕ್ಷದಲ್ಲಿ ಕಳ್ಳರನ್ನು ಇಟ್ಟುಕೊಳ್ಳಲು ನಾವು ಬಯಸುವುದಿಲ್ಲ ಎಂದು ಗುಡುಗಿದ್ದರು.

  • ಟಿಎಂಸಿ ಮಾಜಿ ನಾಯಕ ಮುಕುಲ್ ರಾಯ್ ಬಿಜೆಪಿಗೆ ಸೇರ್ಪಡೆ

    ಟಿಎಂಸಿ ಮಾಜಿ ನಾಯಕ ಮುಕುಲ್ ರಾಯ್ ಬಿಜೆಪಿಗೆ ಸೇರ್ಪಡೆ

    ನವದೆಹಲಿ: ಕಾರ್ಯಕಾರಿ ಸಮಿತಿಗೆ ರಾಜೀನಾಮೆ ನೀಡಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಿರಿಯ ನಾಯಕ ಮುಕುಲ್ ರಾಯ್ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

    ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸಮ್ಮುಖದಲ್ಲಿ ಸೇರ್ಪಡೆಯಾಗಿ ಮಾತನಾಡಿದ ಅವರು, ಇಂದು ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ನನಗೆ ತಿಳಿದ ಮಟ್ಟಿಗೆ ಬಿಜೆಪಿ ಕೋಮುವಾದಿ ಪಕ್ಷವಲ್ಲ. ಇದೊಂದು ಜಾತ್ಯತೀತ ಪಕ್ಷವಾಗಿದ್ದು, ಮುಂದೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

    ಈ ವೇಳೆ ರವಿಶಂಕರ್ ಪ್ರಸಾದ್ ಮಾತನಾಡಿ ಮುಕುಲ್ ರಾಯ್ ಯಾವುದೇ ಷರತ್ತು ವಿಧಿಸದೇ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.

    ಮುಕುಲ್ ರಾಯ್ ಸೆಪ್ಟೆಂಬರ್ 25 ರಂದು ರಾಜೀನಾಮೆ ನೀಡಿದ್ದರು. ಪಕ್ಷಕ್ಕೆ ರಾಜೀನಾಮೆಯನ್ನು ನೀಡಿದ ಕೆಲವೇ ಘಂಟೆಗಳಲ್ಲಿ ಟಿಎಂಸಿ ನಾಯಕ ಪಾರ್ಥ ಚಟರ್ಜಿ, ರಾಯ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿರುವುದಾಗಿ ಆದೇಶ ಹೊರಡಿಸಿದ್ದರು.

    ರಾಯ್ ಅವರ ರಾಜೀನಾಮೆಗೆ ಟಿಎಂಸಿ ಪಕ್ಷ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಭಿನ್ನಾಭಿಪ್ರಾಯಗಳೇ ಕಾರಣ ಎಂದು ತಿಳಿದು ಬಂದಿದೆ. ರಾಯ್ ಅವರು ಹಲವು ದಿನಗಳ ಮುಂಚೆಯೇ ಪಕ್ಷ ತೊರೆಯುವ ಕುರಿತು ಸೂಚನೆಯನ್ನು ನೀಡಿದ್ದರು. ಟಿಎಂಸಿ ರಾಜ್ಯಸಭಾ ನಾಯಕ ಸ್ಥಾನದಿಂದ ಇವರನ್ನು ಕೆಳಗಿಳಿಸಿತ್ತು. ಅಲ್ಲದೆ ಸಾರಿಗೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಂಸತ್ತಿನ ಸ್ಥಾಯಿ ಸಮಿತಿಯ ಮುಖ್ಯಸ್ಥ ಸ್ಥಾನದಿಂದಲೂ ತೆಗೆದು ಹಾಕಲಾಗಿತ್ತು.

    ಕಳೆದ ಕೆಲವು ದಿನಗಳ ಹಿಂದೆ ಟಿಎಂಸಿಯ ಹಿರಿಯ ನಾಯಕರೊಬ್ಬರು ಮಮತಾ ಅವರು ಪಕ್ಷದ ಹೃದಯವಾದರೆ, ರಾಯ್ ಪಕ್ಷದ ತಲೆ ಇದ್ದ ಹಾಗೆ ಎಂದು ಹೇಳಿಕೆ ನೀಡಿದ್ದರು. ಮಮತಾ ಅವರ ಆಪ್ತ ವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ರಾಯ್ ಪಕ್ಷದ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ರಾಷ್ಟ್ರಪತಿ ಚುನಾವಣೆ ವೇಳೆ ಟಿಎಂಸಿ ಅಡ್ಡಮತದಾನ ಮಾಡಿ ರಾಮನಾಥ್ ಕೋವಿಂದ್ ಬೆಂಬಲ ನೀಡಿದ್ದಕ್ಕೆ ಮಮತಾ ಬ್ಯಾನರ್ಜಿ ಅಸಮಾಧಾನಗೊಂಡಿದ್ದರು. ಈ ಚುನಾವಣೆಯ ನಂತರ ಪಕ್ಷದಲ್ಲಿ ಅಂತರಿಕ ಒಡಕು ಉಂಟಾಗಿತ್ತು.

    ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಸ್ಥಾಪನೆಯಿಂದ ಅಧಿಕಾರವನ್ನು ಪಡೆಯುವ ತನಕ ಮುಕುಂದ್ ಅವರ ಕಾರ್ಯ ಮಹತ್ವ ಪೂರ್ಣವಾದ್ದು. ಮುಕುಂದ್ ಅವರ ರಾಜೀನಾಮೆಯು ಟಿಎಂಸಿಯಲ್ಲಿ ಭಾರೀ ಬದಲವಾಣೆಗೆ ಕಾರಣವಾಗಲಿದೆ ಎನ್ನುವ ವಿಶ್ಲೇಷಣೆ ಆರಂಭವಾಗಿದೆ.