Tag: ಮುಖೇಶ್

  • ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿದ ಪಾದಚಾರಿಗಳು – ಓರ್ವ ಸಾವು, ನಿರ್ದೇಶಕ ಅರೆಸ್ಟ್

    ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿದ ಪಾದಚಾರಿಗಳು – ಓರ್ವ ಸಾವು, ನಿರ್ದೇಶಕ ಅರೆಸ್ಟ್

    ಬೆಂಗಳೂರು: ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಒಬ್ಬ ಕಾರಿನಲ್ಲಿ ವೇಗವಾಗಿ ಬಂದು ನಾಲ್ವರು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಕತ್ರಿಗುಪ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಒಬ್ಬ ಪಾದಾಚಾರಿ ನಾವನ್ನಪ್ಪಿದ್ದಾನೆ.

    ಶುಕ್ರವಾರ ಶೂಟಿಂಗ್ ಮುಗಿಸಿಕೊಂಡು ಬನಶಂಕರಿ ಕಡೆಯಿಂದ ಕಾರಿನಲ್ಲಿ ವೇಗವಾಗಿ ಬಂದ ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಮುಖೇಶ್, ನಾಲ್ವರು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಪಾದಾಚಾರಿಗಳು ಮೇಲಕ್ಕೆ ಚಿಮ್ಮಿದ್ದಾರೆ. ಮಾತ್ರವಲ್ಲದೇ ಸ್ಥಳದಲ್ಲೇ ಇದ್ದ ಇನ್ನೊಂದು ಕಾರು ಹಾಗೂ ಬೈಕಿಗೂ ಡಿಕ್ಕಿಯಾಗಿದೆ. ಇದನ್ನೂ ಓದಿ: ಬಸ್‍ನಲ್ಲಿ ಕೊಡೆ ಹಿಡಿದು ಕುಳಿತ ಪ್ರಯಾಣಿಕರು

    ಇಟ್ಟಮಡು ಬಳಿ ಇಳಿಜಾರು ಇದ್ದ ಕಾರಣ ಕಾರು ವೇಗವಾಗಿ ಬಂದು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸುರೇಶ್ ಮೃತಪಟ್ಟಿದ್ದು, ಕಾರು ಚಾಲಕ ಮುಖೇಶ್ ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಯೇ ಕಾರಣ ಎಂದು ಪಶ್ಚಿಮ ವಿಭಾಗ ಸಂಚಾರಿ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ. ಇದನ್ನೂ ಓದಿ: ಶಾಸಕರೇ ಉದ್ಘಾಟಿಸಬೇಕೆಂದು ರಸ್ತೆಗೆ ಬೇಲಿ- ಸ್ಥಳೀಯರಿಂದ ತೆರವು

    ಗಾಯಾಳುಗಳಲ್ಲಿ ಮೂವರು ಕ್ಯಾಟರಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದು, ಒಬ್ಬ ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಚಾಲಕ ಮುಖೇಶ್‌ನನ್ನು ಪೊಲೀಸರು ಬಂಧಿಸಿದ್ದು, ಆತನ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  • ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್ ಅರ್ಜಿ ವಜಾ

    ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್ ಅರ್ಜಿ ವಜಾ

    ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್ ಅರ್ಜಿಯನ್ನು ಸುಪ್ರೀಂಕೋರ್ಟಿನ ತ್ರಿ ಸದಸ್ಯ ಪೀಠ ವಜಾಗೊಳಿಸಿದೆ. ಫೆಬ್ರವರಿ 1ರಂದು ಪ್ರಕರಣ ನಾಲ್ವರು ಕಾಮುಕರಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ.

    ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪಿನ ವಿರುದ್ಧ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಇಂದು ಸುಪ್ರೀಂಕೋರ್ಟ್ ಮುಖೇಶ್ ಅರ್ಜಿಯನ್ನು ವಜಾಗೊಳಿಸಿದೆ. ಎಲ್ಲ ಕಾನೂನು ಹೋರಾಟದ ಅವಕಾಶಗಳು ಅಂತ್ಯಗೊಂಡಿದ್ದು, ಫೆಬ್ರವರಿ 1ರಂದು ಗಲ್ಲು ಶಿಕ್ಷೆಗೆ ಒಳಗಾಗೋದು ಖಚಿತವಾಗಿದೆ.

    ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪನ್ನು ನ್ಯಾಯಾಂಗ ಸಮೀಕ್ಷೆಗೆ ಒಳಪಡಿಸಬೇಕೆಂದು ಮುಖೇಶ್ ಪರ ವಕೀಲರಾದ ಅಂಜನಾ ಪ್ರಕಾಶ್ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ರಾಷ್ಟ್ರಪತಿಗಳ ಮುಂದೆ ಎಲ್ಲ ದಾಖಲಾತಿಗಳನ್ನು ಇರಿಸಿಲ್ಲ. ಕ್ಷಮಾದಾನದ ಅರ್ಜಿಯನ್ನು ಅವಸರದಲ್ಲಿ ವಜಾಗೊಳಿಸಲಾಗಿದೆ. ಈ ಮೂಲಕ ನ್ಯಾಯವನ್ನೇ ಕೊನೆಗೊಳಿಸಲಾಗುತ್ತಿದೆ ಎಂದು ಅಂಜನಾ ಪ್ರಕಾಶ್ ತಮ್ಮ ವಾದದಲ್ಲಿ ಹೇಳಿದ್ದರು.

    ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ, ರಾಷ್ಟ್ರಪತಿಗಳ ಮುಂದೆ ಎಲ್ಲ ದಾಖಲೆಗಳನ್ನು ಇರಿಸಿಲ್ಲ ಎಂದು ನೀವು ಹೇಗೆ ಹೇಳುತ್ತೀರಿ? ರಾಷ್ಟ್ರಪತಿಗಳು ಸೂಕ್ತವಾದ ತೀರ್ಮಾನ ತೆಗೆದುಕೊಂಡಿಲ್ಲ ಹೇಗೆ ಹೇಳುತ್ತೀರಿ ಎಂದು ಪ್ರಶ್ನೆ ಮಾಡಿತ್ತು.

    ಸಾಲಿಸಿಟರ್ ಜನರ್ ತುಷಾರ್ ಮೆಹ್ತಾ, ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯ ಜೊತೆಗೆ ಎಲ್ಲ ದಾಖಲೆಗಳನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿತ್ತು. ಯಾವ ದಾಖಲೆಗಳನ್ನು ನೋಡಬೇಕು ಎಂಬುವುದು ರಾಷ್ಟ್ರಪತಿಗಳ ವಿಶೇಷಾಧಿಕಾರ. ತಮ್ಮ ವಿಶೇಷಾಧಿಕಾರವನ್ನು ಬಳಸಿ ಕ್ಷಮಾದಾನದ ಅರ್ಜಿಯನ್ನು ವಜಾಗೊಳಿಸಿದ್ದಾರೆ ಎಂದು ವಾದ ಮಂಡಿಸಿದ್ದರು.