Tag: ಮುಖ್ಯಮಂತಿ

  • ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಪೂರ್ಣಗೊಳಿಸಿ – ಗಡ್ಕರಿ ಬಳಿ ಸಿಎಂ ಮನವಿ

    ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಪೂರ್ಣಗೊಳಿಸಿ – ಗಡ್ಕರಿ ಬಳಿ ಸಿಎಂ ಮನವಿ

    ನವದೆಹಲಿ: ಭಾರತಮಾಲಾ ಎರಡನೇ ಯೋಜನೆಯಲಿ ರಾಜ್ಯದ 5 ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಸಿಎಂ ಬೊಮ್ಮಾಯಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್‍ಗಡ್ಕರಿ ಅವರಲ್ಲಿ ಮನವಿ ಮಾಡಿದ್ದಾರೆ

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾಬಸ್ ಪೇಟೆಯಿಂದ ಹೊಸೂರಿನವರೆಗೆ ರಸ್ತೆ ನಿರ್ಮಾಣದ ಯೋಜನೆ ಆರಂಭಿಸಲು ಮನವಿ ಮಾಡಿದ್ದೇನೆ. ಈ ಯೋಜನೆಯಿಂದ ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಯಲಿದೆ ಎಂದರು. ಇದನ್ನೂ ಓದಿ: ಮೇಯರ್ ಸ್ಥಾನ ಕೊಟ್ಟವರ ಜೊತೆ ಮೈತ್ರಿ – ಕಲಬುರಗಿ ಜೆಡಿಎಸ್ ಸದಸ್ಯರು

    ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಸಂಪೂರ್ಣಗೊಳಿಸುವಂತೆ ಮನವಿ ಮಾಡಲಾಗಿದೆ. ಬಿಜಾಪುರದಿಂದ ಸಂಕೇಶ್ವರ ರಸ್ತೆಯನ್ನು 80 ರಿಂದ 130 ಕಿಲೋಮೀಟರ್ ವರೆಗೆ ರಸ್ತೆ ವಿಸ್ತರಿಸುವಂತೆ ಕೇಳಿದ್ದೇವೆ. ಪ್ರವಾಹ ಪರಿಸ್ಥಿತಿ ವೇಳೆಯಲ್ಲಿ ಹಾಳಾದ ರಸ್ತೆ ಪರಿಹಾರವಾಗಿ 184 ಕೋಟಿ ಬಿಡುಗಡೆಗೆ ಕೇಂದ್ರ ಸಚಿವರು ಒಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.

    ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಬಗ್ಗೆ ಅತಂಕವಿದ್ದು, ರಾಜ್ಯದಲ್ಲಿ ನಿಫಾ ವೈರಸ್ ಬಗ್ಗೆ ಗಮನ ಹರಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ: ಹೊರಟ್ಟಿ

    ಬಾಹ್ಯಕಾಶ ಮತ್ತು ಪರಮಾಣು ಶಕ್ತಿ ಇಲಾಖೆಯ ರಾಜ್ಯ ಸಚಿವರನ್ನು ಬೇಟಿ ಮಾಡಿ ಆಡಳಿತ್ಮಾಕ ವಿಚಾರಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

    ಸಚಿವರಾದ ಜಿತೇಂದ್ರ ಸಿಂಗ್ ಭೇಟಿ ಮಾಡಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಕೌಶಲ್ಯಭಿವೃದ್ಧಿ ಸಚಿವರಾದ ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಎಲೆಕ್ಟಾನಿಕ್ ವಸ್ತುಗಳ ಉತ್ಪಾದಕ ಘಟಕ ಸ್ಥಾಪನೆ ಮತ್ತು ರಾಜ್ಯದಲ್ಲಿ ಆಪ್ಟಿಕಲ್ ಫೈಬರ್ ಇಂಟರ್ ನೆಟ್ ಅಳವಡಿಸುವ ಬಗ್ಗೆ ಚರ್ಚೆ ಮಾಡಿ ರಾಜ್ಯ ಮಟ್ಟದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಆರಂಭಿಸುವ ಬಗ್ಗೆ ಮಾತುಕತೆಯಾಗಿದೆ ಎಂದರು.

    ಡ್ರಗ್ಸ್ ಕೇಸ್‍ನಲ್ಲಿ ನಟಿ ಮಣಿಯ ಹೆಸರು ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಸವರಾಜ್ ಬೊಮ್ಮಾಯಿ, ಅದು ಪೊಲೀಸರ ಕೆಲಸ ಅವರು ಮಾಡುತ್ತಾರೆ ಎಂದರು.

  • ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ ಅನ್ನೋ ವಿಚಾರ ಮುಗಿದು ಹೋಗಿರೋ ಅಧ್ಯಾಯ: ಎಚ್‍ಡಿಕೆ

    ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ ಅನ್ನೋ ವಿಚಾರ ಮುಗಿದು ಹೋಗಿರೋ ಅಧ್ಯಾಯ: ಎಚ್‍ಡಿಕೆ

    ತುಮಕೂರು: ನಾನು ಸಾಂದರ್ಭಿಕ ಶಿಶು. ಮುಖ್ಯಮಂತ್ರಿಯಾಗಿ ಮೆರೆಯಬೇಕು ಇಲ್ಲ ಇದೇ ಸ್ಥಾನದಲ್ಲಿ ಮುಂದುವರೆಯಬೇಕು ಅನ್ನೋ ಹುಚ್ಚು ನನಗೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

    ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮಿಗಳ ಆಶೀರ್ವಾದ ಪಡೆದು ಮಾತನಾಡಿದ ಅವರು, ರಾಜಕೀಯ ಸನ್ನಿವೇಶದಲ್ಲಿ ಅನಿವಾರ್ಯವಾಗಿ ಒಪ್ಪಿಗೆ ನೀಡಿದ್ದೇನೆ. ಅವರಪ್ಪನಾಣೆ ಮುಖ್ಯಮಂತ್ರಿ ಆಗುವುದಿಲ್ಲ ಎನ್ನುವ ವಿಚಾರ ಮುಗಿದು ಹೋಗಿರುವ ಅಧ್ಯಾಯ. ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ ಪರ ವಿರೋಧ ಟೀಕೆ ಬರುವುದು ಸಾಮಾನ್ಯ. ನಂತರದ ದಿನದಲ್ಲಿ ನಮ್ಮಗಳ ಭಾವನೆಗಳು ಅಭಿವೃದ್ಧಿ ಕಡೆಗೆ ಇರಬೇಕು ಅನ್ನೋದು ನನ್ನ ಭಾವನೆ ಎಂದು ಅಭಿಪ್ರಾಯಪಟ್ಟರು.

    ನನ್ನ 20 ತಿಂಗಳ ಆಡಳಿತವನ್ನು ಜನತೆ ಇನ್ನೂ ಮರೆತಿಲ್ಲ. ಅದರಿಂದಲೇ ನಾನು ಮತ್ತು ನನ್ನ ಪಕ್ಷ ಉಳಿದಿದೆ. ರಾಜ್ಯದ ಒಳಿತಿಗಾಗಿ ಮಾತ್ರ ಮೈತ್ರಿಗೆ ಒಪ್ಪಿಗೆ ಕೊಟ್ಟಿದ್ದೇನೆ ಹೊರತು ವೈಯಕ್ತಿಕ ಆಸೆ ಅಕಾಂಕ್ಷೆಗಾಗಿ ಅಲ್ಲ. ಹೊಗಳಿಕೆ ತೆಗಳಿಕೆ ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಿದ್ದೇನೆ ಎಂದು ಹೇಳಿದರು.

    ಇದೇ ವೇಳೆ ಸಿಎಂ ಕುಮಾರಸ್ವಾಮಿಯವರು ಜನರತ್ತ ಕೈ ಬೀಸಿ ಹಿಂತಿರುಗುವಾಗ ಭದ್ರತಾ ಲೋಪವಾಗಿತ್ತು. ಪೊಲೀಸರ ಬೆಂಗಾವಲಿನ ನಡುವೆಯೂ ಅಭಿಮಾನಿಯೋರ್ವ ಮುಂದೆ ನುಗ್ಗಿ ಸಿಎಂ ಕಾಲಿಗೆ ಬಿದ್ದಿದ್ದಾನೆ. ಅಭಿಮಾನಿಗೆ ಮತ್ತೆ ಸಿಗುತ್ತೇನೆ ಎಂದು ಎಚ್‍ಡಿಕೆ ಆಶ್ವಾಸನೆ ನೀಡಿದರು. ಅಭಿಮಾನಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

    ಚುನಾವಣಾ ಪ್ರಚಾರ ಭಾಷಣದ ಸಮಯದಲ್ಲಿ ಸಿದ್ದರಾಮಯ್ಯನವರು, ಅವರಪ್ಪನಾಣೆ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳಿದ್ದರು. ಈಗ ಕಾಂಗ್ರೆಸ್ ಬೆಂಬಲ ಪಡೆದು ಕುಮಾರಸ್ವಾಮಿ ಮುಖ್ಯಮಂತ್ರಿ ಪಟ್ಟ ಏರಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಮಾತು ಚರ್ಚೆಯಾಗುತ್ತಿದೆ.