Tag: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

  • ಉಡುಪಿ, ಕಾಪು, ಕಾರ್ಕಳ ಜನಕ್ಕೆ ತಿಳುವಳಿಕೆ ಇಲ್ಲ- ಸಿಎಂ ಹೇಳಿಕೆ ವಿರುದ್ಧ ಕರಾವಳಿ ಗರಂ

    ಉಡುಪಿ, ಕಾಪು, ಕಾರ್ಕಳ ಜನಕ್ಕೆ ತಿಳುವಳಿಕೆ ಇಲ್ಲ- ಸಿಎಂ ಹೇಳಿಕೆ ವಿರುದ್ಧ ಕರಾವಳಿ ಗರಂ

    ಉಡುಪಿ: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನ ಗರಂ ಆಗಿದ್ದಾರೆ. ತಿಳುವಳಿಕೆ ಇರೋದಕ್ಕೆ ನಾವು ಕುಟುಂಬ ರಾಜಕಾರದ ಹಿಂದೆ ಬಿದ್ದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

    ಹಿಂದೆ ಸಿಎಂ ಆಗಿದ್ದಾಗ ಎಷ್ಟು ಕೊಟ್ಟಿದ್ದೀರಿ, ಈ ಬಜೆಟ್ ಮಂಡನೆ ಸಂದರ್ಭ ಕೊಟ್ಟದ್ದೆಷ್ಟು ಗೊತ್ತಿದೆ. ತಿಳುವಳಿಕೆ ಇದ್ದದ್ದಕ್ಕೆ ಬಿಜೆಪಿಗೆ ವೋಟ್ ಹಾಕ್ತೇವೆ. ನಮಗೆ ತಿಳುವಳಿಕೆ ಇದೆ. ಕುಟುಂಬ ರಾಜಕಾರಣಕ್ಕೆ ನಾವು ವೋಟ್ ಹಾಕಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಾಗುತ್ತಿದೆ. ಜೆಡಿಎಸ್ ಗೆ ಅಸ್ತಿತ್ವವೇ ಇಲ್ಲದ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಮೋದ್ ಮಧ್ವರಾಜ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಮಧ್ವರಾಜ್ ಜೆಡಿಎಸ್ ಸೇರಿ ಬುದ್ದಿಯಿಲ್ಲ ಎನ್ನುವುದನ್ನು ಪ್ರೂವ್ ಮಾಡುತ್ತಿದ್ದಾರೆ ಎಂದು ಇದೇ ವೇಳೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಿಎಂ ನೀಡಿರುವ ಹೇಳಿಕೆ ಕರಾವಳಿ ಮತದಾರರ ಕೋಪಕ್ಕೆ ಕಾರಣವಾಗಿದೆ.

    ಸಿಎಂ ಹೇಳಿದ್ದೇನು..?
    ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ್ದ ಸಿಎಂ, ಉಡುಪಿ, ಕಾರ್ಕಳ ಕಾಪು ಸೇರಿದಂತೆ ಕರಾವಳಿ ಭಾಗದ ಜನರಿಗೆ ತಿಳುವಳಿಕೆ ಇಲ್ಲ. ಅಲ್ಲಿಯ ಜನ ಬಿಜೆಪಿಗೆ ಮಾತ್ರ ವೋಟ್ ಹಾಕ್ತಾರೆ. ಬಿಜೆಪಿಯನ್ನು ಗೆಲ್ಲಿಸುವ ಉಡುಪಿ, ಬ್ರಹ್ಮಾವರ, ಕಾಪು, ಕಾರ್ಕಳದ ಜನರಿಗೆ ಶಾಲೆ ಕಾಲೇಜು ಕಟ್ಟಿಸಿಕೊಡಲು ಕುಮಾರಸ್ವಾಮಿ, ರೇವಣ್ಣನೇ ಬೇಕು ಎಂದು ಕಿಚಾಯಿಸಿದ್ದರು.

    ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗ್ತಿದೆ. ಅಲ್ಲದೆ ದೇಶ-ವಿದೇಶಗಳಿಂದ ಈ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಸಿಎಂ ಕುರಿತಾದ ವೈಯಕ್ತಿಕ ನಿಂದನೆಗಳಿಗೂ ಈ ಹೇಳಿಕೆ ಕಾರಣವಾಗಿದೆ.

  • ಬಿಜೆಪಿಯೇ ಬೆಸ್ಟ್, ಮನೆ ಬಾಗಿಲಿಗೆ ಬಂದಿದ್ದ ಕಾಂಗ್ರೆಸ್‍ನಿಂದ ಉಲ್ಟಾ – ಸಚಿವ ಪುಟ್ಟರಾಜು ಗರಂ

    ಬಿಜೆಪಿಯೇ ಬೆಸ್ಟ್, ಮನೆ ಬಾಗಿಲಿಗೆ ಬಂದಿದ್ದ ಕಾಂಗ್ರೆಸ್‍ನಿಂದ ಉಲ್ಟಾ – ಸಚಿವ ಪುಟ್ಟರಾಜು ಗರಂ

    ಬೆಂಗಳೂರು: ನಾವೇನು ಅಧಿಕಾರ ಬೇಕೆಂದು ಯಾರ ಮನೆ ಬಳಿಯೂ ಹೋಗಿಲ್ಲ. ನೀವು ಸಿಎಂ ಆಗಿ ಎಂದು ಕಾಂಗ್ರೆಸ್ಸಿಗರು ದೇವೇಗೌಡರ ಮನೆ ಬಳಿ ಬಂದಿದ್ದರು. ಬೇಷರತ್ ಬೆಂಬಲ ಎಂದು ಓಡಿ ಬಂದಿದ್ದ ಕಾಂಗ್ರೆಸ್ ನವರು ಈಗ ಉಲ್ಟಾ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ಮುಖಂಡರ ಹೇಳಿಕೆಗೆ ಸಚಿವ ಸಿ.ಎಸ್.ಪುಟ್ಟರಾಜು ಕೈ ನಾಯಕರಿಗೆ ತಿರುಗೇಟು ನೀಡಿದ್ದಾರೆ.

    ವಿಧಾನಸೌಧದಲ್ಲಿ ಸಿಎಂ ರಾಜೀನಾಮೆ ಹೇಳಿಕೆ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು. ರಾಜೀನಾಮೆ ಕೊಡಲು ಸಿದ್ಧ ಎಂದು ಸಿಎಂ ಹೇಳಬೇಕಾದರೆ ಎಷ್ಟು ನೋವಿದೆ ಅವರಿಗೆ ಎಂದು ಜನರೇ ಗಮನಿಸಲಿ. ಬಿಜೆಪಿ ಜೊತೆ ನಡೆಸಿದ ಆ 20 ತಿಂಗಳ ಅಧಿಕಾರ ಇಡೀ ರಾಜ್ಯದ ಜನತೆಯೇ ಮೆಚ್ಚುವಂತಿತ್ತು. ಈಗ ಹೆಜ್ಜೆಹೆಜ್ಜೆಗೂ ತಕರಾರು. ನಮ್ಮ ಪ್ರತಿ ರಕ್ತದ ಕಣದಲ್ಲೂ ಎಚ್ ಡಿಕೆ ಸಿಎಂ, ದೇವೇಗೌಡರು ನಮ್ಮ ಮೇರು ನಾಯಕರಾಗಿರುತ್ತಾರೆ. ಕಾಂಗ್ರೆಸ್ ನವರು ಇದೇ ರೀತಿ ಮಾತು ಮುಂದುವರಿಸಿದರೆ ಮುಂದಿನ ಪರಿಣಾಮ ಬೇರೆಯೇ ಆಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ರು.

    2006-07 ರಲ್ಲಿ ಬಿಜೆಪಿಯ ಜೊತೆ ಸೇರಿ ಸರ್ಕಾರ ನಡೆಸಿದ್ದೇ ಚೆನ್ನಾಗಿತ್ತು. ಅಂದು ಎಚ್ ಡಿ ಕುಮಾರಸ್ವಾಮಿಯವರು ಒಳ್ಳೆಯ ಆಡಳಿತ ನಡೆಸಿ ಮೆಚ್ಚುಗೆ ಪಡೆದಿದ್ದರು. ಯಾರಿಂದ ಬೆರಳು ತೋರಿಸಿಕೊಳ್ಳದೇ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದ್ದರು. ಈಗ ಕಾಂಗ್ರೆಸ್ ನವರಿಂದ ಬರೀ ತಕರಾರು ಎಂದು ಸಚಿವರು ತಮ್ಮ ಆಕ್ರೋಶ ಹೊರಹಾಕಿದ್ರು.

    ರಾಜೀನಾಮೆ ನೀಡುವ ಕುರಿತು ಸಿಎಂ ಎಚ್ಡಿಕೆ ಹೇಳಿಕೆ ಹಿನ್ನೆಲೆಯಲ್ಲಿ ಇನ್ಮುಂದೆಯಾದರೂ ಕಾಂಗ್ರೆಸ್ಸಿನವರು ಸರಿ ಹೋಗಲಿಲ್ಲ ಅಂದರೆ ಸಿಎಂ ಏನ್ ಹೇಳಿದ್ದಾರೋ ಅದರ ಬಗ್ಗೆ ತೀರ್ಮಾನ ಆಗುತ್ತೆ ಎಂದು ತಿಳಿಸಿದರು.

    https://www.youtube.com/watch?v=8ldpuc1F85w

    https://www.youtube.com/watch?v=OflAzK4wALY

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದರಾಮಯ್ಯನವ್ರ ಬಗ್ಗೆ 4 ಒಳ್ಳೆ ಮಾತಾಡಿದ್ದೆ ಅಷ್ಟೇ, ಜೆಡಿಎಸ್‍ನವ್ರು ಏನ್ ಬೇಕಿದ್ರೂ ಕಾಮೆಂಟ್ಸ್ ಮಾಡ್ಕೊಳ್ಳಲಿ-ಸೋಮಶೇಖರ್

    ಸಿದ್ದರಾಮಯ್ಯನವ್ರ ಬಗ್ಗೆ 4 ಒಳ್ಳೆ ಮಾತಾಡಿದ್ದೆ ಅಷ್ಟೇ, ಜೆಡಿಎಸ್‍ನವ್ರು ಏನ್ ಬೇಕಿದ್ರೂ ಕಾಮೆಂಟ್ಸ್ ಮಾಡ್ಕೊಳ್ಳಲಿ-ಸೋಮಶೇಖರ್

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿರುವ ಕೆಲಸದ ಬಗ್ಗೆ 4 ಒಳ್ಳೆಯ ಮಾತುಗಳನ್ನು ಆಡಿದ್ದೇನೆ ವಿನಾಃ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅಥವಾ ಎಚ್ ಡಿ ಕುಮಾರಸ್ವಾಮಿ ಅಥವಾ ಜೆಡಿಎಸ್ ಬಗ್ಗೆ ಒಂದೇ ಒಂದು ಪದ ಮಾತಾಡಿಲ್ಲ ಎಂದು ಶಾಸಕ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜಕೀಯ ಶಕ್ತಿ ಇಲ್ಲದವರಿಗೆ ಸಿದ್ದರಾಮಯ್ಯನವರು ಶಕ್ತಿ ಕೊಟ್ಟಿದ್ದಾರೆ. 4 ಒಳ್ಳೆ ಮಾತನಾಡಲು ಆಗೋದಿಲ್ಲ ಎಂದರೆ ಏನ್ರೀ ನಾವೇನೂ ಮಾತಾನಾಡುವುದೇ ಬೇಡವಾ ಎಂದು ಪ್ರಶ್ನಿಸಿದ ಅವರು, ಅವರ ಪಾರ್ಟಿಯವರು ಏನ್ ಬೇಕಾದ್ರೂ ಮಾಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ರು.

    ಜೆಡಿಎಸ್ ಬಗ್ಗೆ ಅಥವಾ ಎಚ್‍ಡಿ ದೇವೇಗೌಡ, ಕುಮಾರಸ್ವಾಮಿ ಬಗ್ಗೆ ಅಪ್ಪಿತಪ್ಪಿನೂ ಮಾತಾನಾಡಿಲ್ಲ. ಅವರ ಹೆಸರನ್ನು ಹೇಳಲಿಲ್ಲ. ಸಮ್ಮಿಶ್ರ ಸರ್ಕಾರ ಗೆದ್ದಿದೆ ಅಂತಾನೂ ಮಾತಾಡಿಲ್ಲ. 4-5 ವರ್ಷ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ರು. ಅವರ ಬಗ್ಗೆ 4 ಒಳ್ಳೆಯ ಮಾತನಾಡಿದೆ ಅಷ್ಟೇ. ಅದು ಬಿಟ್ಟು ಸಮ್ಮಿಶ್ರ ಸರ್ಕಾರ ಕೆಲಸ ಮಾಡುತ್ತಿಲ್ಲ ಎಂದು ಜಡ್ಜ್ ಮಾಡಿಲ್ಲ ಅಂದ್ರು. ಇದನ್ನೂ ಓದಿ: ಕೆಲವರು ಮಗ, ಸೊಸೆಗೆ ಮಾತ್ರ ರಾಜಕೀಯ ಅವಕಾಶ ನೀಡ್ತಾರೆ : ಎಚ್‍ಡಿಡಿಗೆ ಸೋಮಶೇಖರ್ ಟಾಂಗ್

    ಯಾವ ಕಿರುಕುಳನೂ ಇಲ್ಲ. ಅವರ ಪಕ್ಷದ ವಿಚಾರವನ್ನು ನಾನು ಅಪ್ಪಿತಪ್ಪಿನೂ ಮಾತಾಡಿಲ್ಲ. ನಮ್ಮ ಪಕ್ಷದ ಮುಖಂಡರ ಬಗ್ಗೆ ನಾನು ಮಾತಾನಾಡಿರ್ತಿನಿ. ನಾವು ಯಾವತ್ತೂ ಕುಮಾರಸ್ವಾಮಿ ಹಾಗೂ ದೇವೇಗೌಡರ ಬಗ್ಗೆ ಮಾತನಾಡುವಷ್ಟು ದೊಡ್ಡವನಾಗಿ ಬೆಳೆದಿಲ್ಲ. ಬೇಕಿದ್ರೆ ಅವರ ಪಕ್ಷದವರು ನಾನು ಮಾತಾಡಿರುವ ಭಾಷಣದ ಕ್ಲಿಪ್ ತರಿಸಿಕೊಂಡು ನೋಡಲಿ ಎಂದು ಸಿಡಿಮಿಡಿಗೊಂಡರು.

    ಬಸವರಾಜ ಹೊರಟ್ಟಿಯವರು 7 ಬಾರಿ ಎಂಎಲ್‍ಸಿ ಆಗಿದ್ದಾರೆ. ಅವರು ಪದೇ ಪದೇ ನನ್ನ ಭಾಷಣದ ಕ್ಲಿಪ್ ಹಾಕಿಕೊಂಡು ನೋಡಲಿ. ಕುಂಬಳಕಾಯಿ ಕಳ್ಳ ಅಂದ್ರೆ ಹೊರಟ್ಟಿಯವರು ಯಾಕೆ ಹೆಗಲು ಮುಟ್ಟಿಕೊಂಡು ನೋಡುತ್ತಾರೆ. ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ಮುಖಂಡರ ಬಗ್ಗೆ ಹಾಗೂ ಕುಮಾರಸ್ವಾಮಿ ಬಗ್ಗೆ ಎಲ್ಲೂ ಕೂಡ ಒಂದೇ ಒಂದು ಪದ ಮಾತಾಡಿಲ್ಲ. ಬೇರೆ ಪಕ್ಷದ ಬಗ್ಗೆ ಟೀಕೆ ಮಾಡಲು ನಾನು ಇದೂವರೆಗೂ ಹೋಗಿಲ್ಲ. ಹೋಗೋದು ಇಲ್ಲ ಎಂದು ಸ್ಪಷ್ಟಪಡಿಸಿದ್ರು.

    ಯಾವುದಾದ್ರೂ ಮಂತ್ರಿ ಕೇಳಿದ್ರೆ, ಆಯ್ತು ನಮ್ಮಲ್ಲೇ ಮುಖಂಡರುಗಳು ಮಕ್ಕಳು ಕೇಳುತ್ತಾರೆ ಅನ್ನೋ ಭಾವನೆಯಲ್ಲಿ ನಾನು ಹೇಳಿದ್ದೆ ವಿನಹ ದೇವೇಗೌಡ ಫ್ಯಾಮಿಲಿ ಬಗ್ಗೆ ನಾನು ಇದೂವರೆಗೂ ಮಾತಾಡಿಲ್ಲ. ಕಾಂಗ್ರೆಸ್ ನವರೂ ಏನ್ ಬೇಕಿದ್ರೂ ಕಾಮೆಂಟ್ಸ್ ಮಾಡಿಕೊಳ್ಳಲಿ. ನನಗೆ ಒಂದು ಲಿಮಿಟ್ ಇರುತ್ತದೆ. ಆ ಗೆರೆ ದಾಟಿ ನಾನು ಹೋಗುವುದಿಲ್ಲ ಎಂದರು.

    https://www.youtube.com/watch?v=i9skRR-k5h8

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿ ಔತಣಕೂಟದಲ್ಲಿ ರಮೇಶ್ ಜಾರಕಿಹೊಳಿ ಭಾಗವಹಿಸಿದ್ದು ಯಾಕೆ: ಉತ್ತರ ಕೊಟ್ಟ ಅಶೋಕ್

    ಬಿಜೆಪಿ ಔತಣಕೂಟದಲ್ಲಿ ರಮೇಶ್ ಜಾರಕಿಹೊಳಿ ಭಾಗವಹಿಸಿದ್ದು ಯಾಕೆ: ಉತ್ತರ ಕೊಟ್ಟ ಅಶೋಕ್

    ಬೆಳಗಾವಿ: ಬೆಳಗಾವಿಯನ್ನು ಎರಡು ಭಾಗ ಮಾಡಿದ ಡಿ.ಕೆ.ಶಿವಕುಮಾರ್ ಔತಣಕೂಟಕ್ಕೆ ಹೋಗಲು ರಮೇಶ್ ಜಾರಕಿಹೊಳಿ ಇಷ್ಟವಿರಲಿಲ್ಲ. ಹೀಗಾಗಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರ ಮೇಲಿನ ಪ್ರೀತಿ, ವಿಶ್ವಾಸದಿಂದ ಬಂದಿರಬಹುದು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರ ಮಧ್ಯೆ ಇರುವುದು ಎಣ್ಣೆ ಸೀಗೇಕಾಯಿ ಸಂಬಂಧ ಅಂತ ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಮಹಾಂತೇಶ ಕವಟಗಿಮಠ ಅವರು ನಗರದಲ್ಲಿ ಬುಧವಾರ ಆಯೋಜಿಸಿದ್ದ ಔತಣಕೂಟಕ್ಕೆ ರಮೇಶ್ ಜಾರಕಿಹೊಳಿ ಬಂದಿರಬಹುದು. ಆದರೆ ನಿರ್ದಿಷ್ಟವಾಗಿ ಯಾವ ಕಾರಣಕ್ಕೆ ಬಂದಿದ್ದರು ಎನ್ನುವ ಮಾಹಿತಿ ನನಗಿಲ್ಲ ಎಂದರು.

    ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಅಧಿಕಾರಲ್ಲಿ ಇರುವಾಗಲೇ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಸಿಎಂ ಕುಮಾರಸ್ವಾಮಿಗೆ ಶೀಘ್ರವೇ ಕಾಂಗ್ರೆಸ್ ತಲಾಖ್ ತಲಾಖ್ ತಲಾಖ್ ಅಂತ ಹೇಳಲಿದೆ. ಸೋಡಾ ಚೀಟಿ ಪಡೆಯಲು ಕುಮಾರಸ್ವಾಮಿ ಸಿದ್ಧರಾಗಿರಲಿ ಎಂದು ಲೇವಡಿ ಮಾಡಿದ್ದಾರೆ.

    ನಿನ್ನೆ ಆಗಿದ್ದೇನು?:
    ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಗೂ ಬಾರದೇ ಚಕ್ಕರ್ ಹೊಡೆದಿದ್ದ ಜಾರಕಿಹೊಳಿ, ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪಕ್ಕದಲ್ಲೇ ಕುಳಿತು ರಾತ್ರಿಯ ಭೋಜನ ಸವಿದರು. ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಆಯೋಜಿಸಿದ್ದ ಭೋಜನ ಕೂಟದಲ್ಲಿ ಪಾಲ್ಗೊಳ್ಳದ ರಮೇಶ್ ಜಾರಕಿಹೊಳಿ ಬಿಜೆಪಿ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಆಯೋಜಿಸಿದ್ದ ಡಿನ್ನರ್ ನಲ್ಲಿ ಯಡಿಯೂರಪ್ಪ, ಕತ್ತಿ ಜೊತೆ ಒಂದೇ ಟೇಬಲ್‍ನಲ್ಲಿ ಕುಳಿತು ಚರ್ಚೆ ನಡೆಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಎಂ ಪರ ರೈತರಲ್ಲಿ ಕ್ಷಮೆ ಕೇಳಿದ ಸಚಿವ ಬಂಡೆಪ್ಪ ಕಾಶೆಂಪುರ್

    ಸಿಎಂ ಪರ ರೈತರಲ್ಲಿ ಕ್ಷಮೆ ಕೇಳಿದ ಸಚಿವ ಬಂಡೆಪ್ಪ ಕಾಶೆಂಪುರ್

    ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ನಿರತ ರೈತರಲ್ಲಿ ಕ್ಷಮೆ ಕೇಳಿದ್ದಾರೆ.

    ಕ್ಷಮೆ ಕೇಳಿ ಮಾತನಾಡಿದ ಅವರು, ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಶೀಘ್ರದಲ್ಲೇ ಸಭೆ ಕರೆಯಲಾಗುತ್ತದೆ. ಕೊಡಗು ಸಂತ್ರಸ್ತ ರೈತರು, ಬರಗಾಲ ಪೀಡಿದ ಪ್ರದೇಶದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ಈ ಸಂಬಂಧ ರೈತ ಮುಖಂಡರ ಜೊತೆಗೆ ಪ್ರತ್ಯೇಕ ಸಭೆ ನಡೆಸುವಂತೆ ಕುಮಾರಸ್ವಾಮಿ ಅವರಿಗೆ ಕೇಳಿಕೊಂಡಿದ್ದೇನೆ ಎಂದು ಹೇಳಿದರು.

    ನಮ್ಮ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಬದ್ಧವಾಗಿದೆ. ರಾಷ್ಟ್ರೀಯ ಬ್ಯಾಂಕ್‍ಗಳ ಸಾಲ ಮನ್ನಾ ಮಾಡುತ್ತೇವೆ ಅಂತ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇವತ್ತು ಸರ್ಕಾರ ಒಳ್ಳೆಯ ರೀತಿ ನಡೆಯುತ್ತಿದೆ. ಹಂತ ಹಂತವಾಗಿ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಸಚಿವರು ತಿಳಿಸಿದರು.

    ಬೆಳಗಾವಿಯಲ್ಲಿ ಪ್ರತಿಭಟನಾ ನಿರತ ಮಹಿಳೆಗೆ ತಾಯಿ ಅಂತಾ ಕರೆದಿದ್ದಾರೆ. ಯಾವುದೇ ರೀತಿಯ ನಿಂದನೆ ಮಾಡಿಲ್ಲ. ಉದ್ದೇಶ ಪೂರ್ವಕವಾಗಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ ಸಚಿವರು, ರೈತರ 36 ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಪಡೆದರು. ಇತ್ತ ರೈತರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಬಂದು ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಮಗೆ ನಷ್ಟವಾದರೂ, ಲಾಭವಾದರೂ ತಮಿಳುನಾಡಿಗೆ ನೀರು ಬೇಕು – ಇದು ಯಾವ ನ್ಯಾಯ: ಸಿಎಂಗೆ ಭೈರಪ್ಪ ಪತ್ರ

    ನಮಗೆ ನಷ್ಟವಾದರೂ, ಲಾಭವಾದರೂ ತಮಿಳುನಾಡಿಗೆ ನೀರು ಬೇಕು – ಇದು ಯಾವ ನ್ಯಾಯ: ಸಿಎಂಗೆ ಭೈರಪ್ಪ ಪತ್ರ

    ಮೈಸೂರು: ಕೊಡಗು ಜಲಪ್ರಳಯದ ಕುರಿತು ತಮಿಳುನಾಡು ಸರ್ಕಾರ ಮೌನ ಧೋರಣೆ ತೋರಿಸಿದ್ದಕ್ಕೆ ಕಾದಂಬರಿಕಾರ ಹಾಗೂ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಕಿಡಿಕಾರಿದ್ದಾರೆ.

    ಈ ವಿಚಾರವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಅವರು ಕಾವೇರಿ ನೀರಿಗಾಗಿ ಪ್ರತಿ ವರ್ಷವೂ ಒಂದಿಲ್ಲೊಂದು ರೀತಿಯಲ್ಲಿ ತಮಿಳುನಾಡು ತಗಾದೆ ತೆಗೆಯುತ್ತಲೇ ಇರುತ್ತದೆ. ಆದರೆ ಈಗ ಕೊಡಗಿನಲ್ಲಿ ಆಗಿರುವ ನಷ್ಟಕ್ಕೆ ಮಾತ್ರ ಪ್ರತಿಕ್ರಿಯೇ ನೀಡದೇ ಮೌನವಾಗಿ ಕುಳಿತಿದೆ. ನಮಗೆ ನಷ್ಟವಾದರೂ, ಲಾಭವಾದರೂ ಅವರಿಗೆ ನೀರು ಬೇಕು. ಇದು ಎಂತಹ ನ್ಯಾಯ ಎನ್ನುವ ಎಂದು ಪ್ರಶ್ನಿಸಿ ಚಾಟಿ ಬೀಸಿದ್ದಾರೆ.

    ಮಳೆಗಾಗಿ ಕೊಡಗಿನಲ್ಲಿ ಕಾಡು ಬೆಳೆಸುವ ಕರ್ತವ್ಯ ಕರ್ನಾಟಕದ್ದು. ಅದರ ಫಲ ಉಣ್ಣುವ ಹಕ್ಕು ಮಾತ್ರ ತಮಿಳುನಾಡಿನದ್ದು. ಇದೊಂದು ವಿಷಯ ನನ್ನ ಮನಸ್ಸಿನಲ್ಲಿ ಕೊರೆಯುತ್ತಿದೆ ಎಂದು ತಮ್ಮ ಸಲಹೆ ಮತ್ತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಮೂಲಕ ಹೊಸ ತಂತ್ರ ಬಳಸಿ ಕಾವೇರಿ ನೀರಿಗಾಗಿ ತಮಿಳುನಾಡಿನ ತಗಾದೆಗೆ ಹೇಗೆ ಪ್ರತಿತಂತ್ರ ರೂಪಿಸಬಹುದು ಎಂದು ಎಸ್.ಎಲ್.ಭೈರಪ್ಪ ಅವರು, ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿಳಿಸಿ ಹೇಳಿದ್ದಾರೆ.

    ಪತ್ರದಲ್ಲಿ ಏನಿದೆ?:
    ಒಂದು ವಿಷಯ ನನ್ನ ಮನಸ್ಸಿನಲ್ಲಿ ಕೊರೆಯುತ್ತಿದೆ. ಹೆಚ್ಚು ಮಳೆ ಮತ್ತು ಬಿರುಗಾಳಿಯಿಂದಾಗಿ ಕೊಡಗಿನಲ್ಲಿ ಭಾರೀ ಹಾನಿಯಾಗಿದೆ. ಇದಕ್ಕೆ ಕರ್ನಾಟಕ ಸರ್ಕಾರ ಮಾಡಬೇಕಾಗಿರುವ ಸಾವಿರಾರು ಕೋಟಿ ರೂ. ಖರ್ಚು ಹಾಗೂ ಸಾರ್ವಜನಿಕರು ಕೊಡುತ್ತಿರುವ ದೇಣಿಗೆಗಳು ಸರ್ವವಿಧಿತ. ಹೆಚ್ಚು ಮಳೆಯಾಗಲಿ, ಸಾಧಾರಣ ಮಳೆಯಾದರೂ ತಮಿನಾಡು ಸರ್ಕಾರ ಕಾದು ಕುಳಿತು, ತಗಾದೆ ತೆಗೆಯುವ ಮೂಲಕ ನೀರನ್ನು ಕಬಳಿಸುತ್ತದೆ. ಆಗದೇ ಇದ್ದಾಗ ಕೇಂದ್ರ ಸರ್ಕಾರ ಮತ್ತು ನ್ಯಾಯಾಲಯವನ್ನು ಒತ್ತಾಯಿಸುತ್ತದೆ.

    ಕೊಡಗಿನ ನೀರು ಬೇಕು, ಆದರೆ ಅದರ ಹಾನಿಯನ್ನು ತುಂಬಲು ತನ್ನ ಯಾವ ಕರ್ತವ್ಯವೂ ಇಲ್ಲವೆಂಬಂತೆ ತೆಪ್ಪಗಿದೆ. ಮಳೆಗಾಗಿ ಕೊಡಗಿನಲ್ಲಿ ಕಾಡು ಬೆಳೆಸುವ ಕರ್ತವ್ಯ ಕರ್ನಾಟಕದ್ದು. ಅದರ ಫಲ ಉಣ್ಣುವ ಹಕ್ಕು ಮಾತ್ರ ತಮಿಳುನಾಡಿನದ್ದು. ಈ ಅಂಶಗಳನ್ನು ಒಳಗೊಂಡು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕಾಗಲಿ, ಸಂಬಂಧಿಸಿದ ಟ್ರಿಬ್ಯೂನಲ್ ಅಥವಾ ನ್ಯಾಯಾಲಯಕ್ಕಾಗಲಿ ಹಕ್ಕೊತ್ತಾಯ ಮಾಡುವುದು ಅತ್ಯಗತ್ಯವೆಂದು ನನ್ನ ಭಾವನೆ.

    ಮೇಲಿನವರು ನಮ್ಮ ಹಕ್ಕೊತ್ತಾಯವನ್ನು ಈಗ ಮನ್ನಿಸದೇ ಇದ್ದರೂ ನಮ್ಮ ಪಾಲಿನ ನೀರಿನ ಹಕ್ಕೊತ್ತಾಯ ಮಾಡುವಾಗ ಈ ಅಂಶವನ್ನು ಸೇರಿಸಲು ಇದು ಆಧಾರವಾಗುತ್ತದೆ. ಈ ಬಗೆಗೆ ತಾವು ತಕ್ಷಣ ಕಾರ್ಯೋನ್ಮುಖರಾಗುವಿರೆಂಬ ಭರವಸೆಯಿಂದ ಈ ಪತ್ರ ಬರೆದಿದ್ದೇನೆ ಎಂದು ಎಸ್.ಎಲ್.ಭೈರಪ್ಪ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಗೈರು ಯಾಕೆ: ನಿಜವಾದ ಕಾರಣ ತಿಳಿಸಿದ ದಿನೇಶ್ ಗುಂಡೂರಾವ್

    ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಗೈರು ಯಾಕೆ: ನಿಜವಾದ ಕಾರಣ ತಿಳಿಸಿದ ದಿನೇಶ್ ಗುಂಡೂರಾವ್

    ಬೆಂಗಳೂರು: ಬೇರೆ ಕಾರಣಗಳಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟನೆ ಕೊಟ್ಟಿದ್ದಾರೆ.

    ಸರ್ಕಾರದ ಆಹ್ವಾನ ಪತ್ರಿಕೆಯಲ್ಲಿ ಕುಮಾರಸ್ವಾಮಿ ಹೆಸರು ಇಲ್ಲ ಯಾಕೆ ಎಂದು ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ, ಬೇರೆ ಕಾರಣಗಳಿಂದಾಗಿ ಅವರು ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಅವರ ಆದೇಶದ ಹಿನ್ನೆಲೆಯಲ್ಲಿ ಹೆಸರನ್ನು ಮುದ್ರಿಸಿಲ್ಲ. ಒಂದು ವೇಳೆ ಹೆಸರನ್ನು ಮುದ್ರಿಸಿ ಕಾರ್ಯಕ್ರಮಕ್ಕೆ ಬಾರದೇ ಇದ್ದರೆ ಅದ್ದಕ್ಕೆ ಕಥೆ ಕಟ್ಟಿ ನೀವು ದೊಡ್ಡ ಸುದ್ದಿ ಮಾಡುತ್ತೀರಿ. ಹೀಗಾಗಿ ಅವರೇ ಹೇಳಿದ್ದಕ್ಕೆ ಹೆಸರು ಮುದ್ರಿಸಿಲ್ಲ ಎಂದು ಉತ್ತರಿಸಿದರು.

    ಅಧಿಕಾರ ಹೋಗುತ್ತೆ ಎನ್ನುವ ಭಯಕ್ಕೆ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಭಾಗವಹಿಸಲು ಹಿಂದೇಟು ಹಾಕಿದ್ದಾರೆ ಎನ್ನುವ ಪ್ರಶ್ನೆಗೆ, ಅಧಿಕಾರ ಹೇಗೆ ಹೋಗುತ್ತದೆ? ಈ ಬಾರಿಯ ಉಪಚುನಾವಣೆಯಲ್ಲಿ ನಾವು ಗೆದ್ದಿಲ್ಲವೇ. ಹೀಗಾಗಿ ನಮಗೆ ಭಯ ಯಾಕೆ ಎಂದು ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಪ್ರಶ್ನೆ ಕೇಳಿದರು.

    ಭಾರೀ ವಿವಾದಕ್ಕೀಡಾಗಿರುವ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಸರ್ಕಾರ ಮಾಡಿಯೇ ತೀರುತ್ತೇವೆ ಅಂತ ಹೇಳಿದ್ದು, ಇದೀಗ ಆಚರಣೆಗೂ ಸರ್ಕಾರ ರೆಡಿಯಾಗಿದೆ. ಆದರೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರ ಹೆಸರು ಇಲ್ಲದಿರುವುದು ಇದೀಗ ಅನುಮಾನ ಎದ್ದಿದೆ.

    ಕೇವಲ ಕಾಂಗ್ರೆಸ್ ನಾಯಕರ ಉಪಸ್ಥಿತಿಯಲ್ಲಿ ಟಿಪ್ಪು ಜಯಂತಿ ಸೀಮಿತವೇ ಎಂಬ ಪ್ರಶ್ನೆಯೊಂದು ಎದ್ದಿದ್ದು, ಮುಖ್ಯಮಂತ್ರಿಯವರು ಟಿಪ್ಪು ಜಯಂತಿ ಆಚರಣೆಯಿಂದ ದೂರ ಉಳಿದುಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಯಾಕಂದ್ರೆ ಟಿಪ್ಪು ಜಯಂತಿ ಆಚರಣೆ ಆಹ್ವಾನ ಪತ್ರಿಕೆಯಲ್ಲಿ ಸಿಎಂ ಕುಮಾರಸ್ವಾಮಿ ಹೆಸರು ಇಲ್ಲ. ಈ ಮೂಲಕ ಕಾಂಗ್ರೆಸ್ ಸರ್ಕಾರ ಘೋಷಿಸಿದ ವಿವಾದಾತ್ಮಕ ಜಯಂತಿಯಿಂದ ಸಿಎಂ ದೂರ ಉಳಿದ್ರಾ ಎಂಬಂತಾಗಿದೆ.

    ಆಹ್ವಾನ ಪತ್ರಿಕೆಯಲ್ಲಿ ಕಾಂಗ್ರೆಸ್ ಸಚಿವರು, ಶಾಸಕರದ್ದೇ ದರ್ಬಾರ್ ಆಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಹೆಸರು ಬಿಟ್ಟರೆ ಜೆಡಿಎಸ್ ನವರು ಹೆಸರಿಲ್ಲ. ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಟಿಪ್ಪು ಜಯಂತಿ ಆಚರಣೆ ಬಗ್ಗೆ ಟೀಕಿಸಿದ್ದ ಕುಮಾರಸ್ವಾಮಿ, ಈಗಲೂ ಅದೇ ನಿಲುವುವನ್ನ ಕಾಯ್ದುಕೊಂಡಿದ್ದಾರಾ. ಗೆಳೆಯ ಜಮೀರ್ ಅಹಮದ್ ಮನವೊಲಿಕೆಗೂ ಸಿಎಂ ಅವರು ಕ್ಯಾರೇ ಅಂತಿಲ್ಲವಾ. ಹಾಗಾದ್ರೆ ಸಮ್ಮಿಶ್ರ ಸರ್ಕಾರ ವಿವಾದಾತ್ಮಕ ನಿರ್ಧಾರಕ್ಕೆ ಹೆಚ್ ಡಿಕೆ ಸೈಲೆಂಟ್ ಆಗಿಬಿಟ್ಟರಾ ಅನ್ನೋ ಪ್ರಶ್ನೆ ಮೇಲೆ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬಳ್ಳಾರಿ, ಜಮಖಂಡಿ ಪ್ರಚಾರಕ್ಕೆ ಸಿಎಂ ಗೈರು- ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ ಜಿ.ಪರಮೇಶ್ವರ್

    ಬಳ್ಳಾರಿ, ಜಮಖಂಡಿ ಪ್ರಚಾರಕ್ಕೆ ಸಿಎಂ ಗೈರು- ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ ಜಿ.ಪರಮೇಶ್ವರ್

    ಹುಬ್ಬಳ್ಳಿ: ಚುನಾವಣೆ ಪ್ರಚಾರದ ವಿಚಾರವಾಗಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಸಿಎಂ ಎಚ್.ಡಿ.ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ್ದಾರೆ. ಆರೋಗ್ಯದ ದೃಷ್ಠಿಯಿಂದ ಸಿಎಂ ಬೆಂಗಳೂರು ಸಮೀಪದ ಮಂಡ್ಯ ಹಾಗೂ ರಾಮನಗರದಲ್ಲಿ ಮಾತ್ರ ಪ್ರಚಾರ ಮಾಡಬಹುದು ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.

    ಹುಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಜಮಖಂಡಿ ಹಾಗೂ ಬಳ್ಳಾರಿ ಕ್ಷೇತ್ರಗಳ ಚುನಾವಣೆ ಪ್ರಚಾರಕ್ಕೆ ಬಂದರೂ ಬರಬಹುದು. ಮೈತ್ರಿ ಸರ್ಕಾರದಲ್ಲಿ ಯಾವುದೇ ಅಸಮಾಧಾನವಿಲ್ಲ. ಐದು ಕ್ಷೇತ್ರಗಳಲ್ಲಿ ಜೆಡಿಎಸ್ ನಾಯಕರು ನಮ್ಮ ಜೊತೆ ಪ್ರಚಾರಕ್ಕೆ ಬರುತ್ತಿದ್ದಾರೆ ಎಂದು ತಿಳಿಸಿದರು.

    ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಗುಡುಗಿದ ಡಿಸಿಎಂ ಪರಮೇಶ್ವರ್, ಬಿಜೆಪಿಯವರು ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ ಪ್ರಚಾರ ಬಿಟ್ಟು ಮನೆಯಲ್ಲಿ ಕುಳಿತುಕೊಳ್ಳಲಿ. ಈಗಾಗಲೇ ಗೆದ್ದಿದ್ದರೆ ಪ್ರಚಾರ ಯಾಕೆ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟ ಅವರು, ಐದು ಕ್ಷೇತ್ರಗಳ ಉಪಚುನಾವಣೆ ಪ್ರಚಾರ ಬಿರುಸಾಗಿದೆ. ನಾನು ಮೊದಲೇ ಹೇಳಿದಂತೆ ಐದು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಿದರು.

    ಜಮಖಂಡಿ ಕ್ಷೇತ್ರದಲ್ಲಿ ಮೊದಲ ಹಂತದ ಪ್ರಚಾರ ಪೂರ್ಣಗೊಳಿಸಿರುವೆ. ಭಾನುವಾರದಿಂದ ಎರಡನೇ ಹಂತದ ಪ್ರಚಾರ ಮಾಡುತ್ತೆನೆ. ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಮೈತ್ರಿಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಬಳ್ಳಾರಿಯಲ್ಲಿ ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ನಾವೇ ಗೆಲ್ಲುತ್ತೆವೆ ಎಂದ ಅವರು, 371-(ಜೆ)ಗೆ ಸಂಬಂಧಿಸಿದ ಯಾವುದೇ ಅನುದಾನ ನಮ್ಮ ಸರ್ಕಾರ ಕಡಿತ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಜೆಟ್‍ನಲ್ಲಿ ಮೀಸಲಿಟ್ಟಿದ್ದ ಹಣವನ್ನು ಮುಂದುವರಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾಲ ಮರುಪಾವತಿ ಮಾಡದ್ದಕ್ಕೆ ದಂಧೆಕೋರನಿಂದ ಮಗು ಕಿಡ್ನಾಪ್!

    ಸಾಲ ಮರುಪಾವತಿ ಮಾಡದ್ದಕ್ಕೆ ದಂಧೆಕೋರನಿಂದ ಮಗು ಕಿಡ್ನಾಪ್!

    ಬೆಂಗಳೂರು: ಒಂದು ಕಡೆ ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಸ್ ನಡೆಸುತ್ತಿದ್ದರೆ ಬಡ್ಡಿ ದಂಧೆಕೋರರ ದರ್ಬಾರ್ ಮುಂದುವರಿದಿದೆ. ಸಾಲದ ಹಣಕ್ಕಾಗಿ ಕಂದಮ್ಮನನ್ನೇ ಅಪಹರಣ ಮಾಡಿದ ಅಮಾನವೀಯ ಕೃತ್ಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

    ಕಂದಮ್ಮನ ಚಿಕಿತ್ಸೆಗೆಂದು ಪಡೆದ 30 ಸಾವಿರ ರೂ. ಸಾಲವನ್ನು ಹಿಂತಿರುಗಿಸಲಿ ಅಂತಾ ಲೇವಾದೇವಿಯೊಬ್ಬ ಮಗುವನ್ನೇ ಅಪಹರಣ ಮಾಡಿದ್ದಾನೆ. ಅಷ್ಟೇ ಅಲ್ಲದೇ ಆನೇಕಲ್ ತಾಲೂಕಿನ ಕಿತ್ತಾಗನಹಳ್ಳಿಯಲ್ಲಿ ವಾಸವಾಗಿದ್ದ ಬಾಡಿಗೆ ಮನೆಗೂ ಬೀಗ ಜಡಿದು ದಂಪತಿಯನ್ನು ಬೀದಿ ಪಾಲು ಮಾಡಿದ್ದಾನೆ.

    ಭದ್ರಾವತಿಯ ಚಂದ್ರ ಮೂರ್ತಿ ಮಗುವನ್ನು ಕಿತ್ತುಕೊಂಡು ಹೋದ ಲೇವಾದೇವಿ. ವಿನಾಯಕ್ ದಂಪತಿ ಮಗು ಈಗ ಭದ್ರಾವತಿಯಲ್ಲಿದ್ದು, ಸಾಲ ಮರುಪಾವತಿ ಮಾಡಿ ಮಗುವನ್ನು ತಗೆದುಕೊಂಡು ಹೋಗಿ ಅಂತಾ ಚಂದ್ರ ಮೂರ್ತಿ ಪಟ್ಟು ಹಿಡಿದಿದ್ದಾನೆ ಎಂದು ದಂಪತಿ ಆರೋಪಿಸಿದ್ದಾರೆ.

    ಏನಿದು ಪ್ರಕರಣ?:
    ಹಾಸನ ಮೂಲದ ವಿನಾಯಕ್ ದಂಪತಿ ಐದು ವರ್ಷಗಳ ಹಿಂದೆ ಕೆಲಸ ಹುಡುಕಿಕೊಂಡು ಆನೇಕಲ್ ಸಮೀಪದ ಕಿತ್ತಾಗನಹಳ್ಳಿಗೆ ಬಂದಿದ್ದರು. ಅಲ್ಲಿಯೇ ಒಂದು ಬಾಡಿಗೆ ಮನೆ ಮಾಡಿಕೊಂಡು ಗಾರೆ ಕೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು. ಒಂದು ವರ್ಷದ ಹಿಂದೆ ಮಗುವಿನ ಜನನವಾಗಿದ್ದು, ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಮಗುವಿಗೆ ಚಿಕಿತ್ಸೆ ಕೊಡಿಸಲು ಭದ್ರಾವತಿಯ ಚಂದ್ರ ಮೂರ್ತಿ ಬಳಿ ವಿನಾಯಕ್ ದಂಪತಿ 30 ಸಾವಿರ ರೂ. ಸಾಲ ಪಡೆದಿದ್ದರು.

    ಆರ್ಥಿಕವಾಗಿ ಕುಗ್ಗಿದ್ದ ವಿನಾಯಕ್ ಸಾಲ ಮರುಪಾವತಿ ಮಾಡಲು ಆಗಿರಲಿಲ್ಲ. ಇದಿಂದಾಗಿ ಚಂದ್ರ ಮೂರ್ತಿ ವಿನಾಯಕ್ ದಂಪತಿಯನ್ನು ಭದ್ರಾವತಿಗೆ ಕರೆಸಿಕೊಂಡಿದ್ದರು. ಮಗುವನ್ನು ಅಪಹರಣ ಮಾಡಿ, ಮಗು ಬೇಕಾದರೆ ಸಾಲ ಮರು ಪಾವತಿ ಮಾಡಿ ಅಂತಾ ಬೆದರಿಕೆ ಹಾಕಿದ್ದಾರಂತೆ. ಒಂಬತ್ತು ತಿಂಗಳ ಹೆತ್ತು ಹೊತ್ತು ಸಾಕಿದ ಮಗುವನ್ನು ಕಳೆದುಕೊಂಡ ತಂದೆ-ತಾಯಿ ದಿಕ್ಕು ತೋಚದೆ ಪಬ್ಲಿಕ್ ಟಿವಿ ಬಳಿ ಬಂದು ಮಗುವನ್ನು ಕೊಡಿಸುವಂತೆ ಬೇಡಿಕೊಳ್ಳುತ್ತಿದ್ದಾರೆ.

    ಕಿತ್ತಾಗನ ಹಳ್ಳಿಯಲ್ಲಿ ಬಾಡಿಗೆಗೆ ಇದ್ದ ಮನೆಗೂ ಸಹ ಚಂದ್ರ ಮೂರ್ತಿ ಬೀಗ ಜಡಿದಿದ್ದು, ಇರುವುದಕ್ಕೂ ಮನೆಯಿಲ್ಲದಾಗಿದೆ. ಕೈಯಲ್ಲಿ ಬಿಡಿಗಾಸು ಇಲ್ಲದೇ ಐದು ದಿನಗಳಿಂದ ದೇವಸ್ಥಾನ, ಬಸ್‍ಸ್ಟ್ಯಾಂಡ್, ಆಸ್ಪತ್ರೆಗಳ ಬಳಿ ಮಲಗಿಯೇ ಕಾಲ ಕಳೆಯುತ್ತಿದ್ದಾರೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/eOPS66BnUYM

  • 2009ರ ನಂತರದ ಬೆಳೆ ಸಾಲ ಮಾತ್ರ ಮನ್ನಾ- ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

    2009ರ ನಂತರದ ಬೆಳೆ ಸಾಲ ಮಾತ್ರ ಮನ್ನಾ- ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

    ಬೆಂಗಳೂರು: 2009ಕ್ಕಿಂತ ಹಿಂದಿನ ವರ್ಷಗಳಲ್ಲಿ ರೈತರು ಬ್ಯಾಂಕಿನಲ್ಲಿ ಪಡೆದ ಬೆಳೆ ಸಾಲಮನ್ನಾ ಮಾಡುವುದು ಕಷ್ಟ. ಹೀಗಾಗಿ ಅಂತಹ ಸಾಲಕ್ಕೆ ಸರ್ಕಾರ ಯಾವುದೇ ಜವಾಬ್ದಾರಿಯಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸಿಎಂ, ಮಂಡ್ಯ ಜಿಲ್ಲೆಯ ರೈತ ಜವರೇಗೌಡ ಅವರು 2007ರಲ್ಲಿಯೇ ಬೆಳೆ ಸಾಲ ಪಡೆದಿದ್ದಾರೆ. ಇದರಿಂದಾಗಿ ಬ್ಯಾಂಕ್ ನ್ಯಾಯಾಲಯದ ಮೆಟ್ಟಿಲೇರಿದ್ದು, ಮ್ಯಾಜಿಸ್ಟ್ರೇಟ್ ಕೋರ್ಟ್ ಅವರಿಗೆ ನೋಟಿಸ್ ನೀಡಿದೆ. ಈ ಹಿಂದೆಯೂ ಅವರಿಗೆ ಕೋರ್ಟ್ ನಿಂದ ನೋಟಿಸ್ ಬಂದಿದ್ದರೂ ನ್ಯಾಯಾಲಯಕ್ಕೆ ಹಾಜರಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಯಾವ ಸಾಲಮನ್ನಾ?
    2009ರಿಂದ ಇಚೇಗಿನ ಬೆಳೆಸಾಲ ಮಾತ್ರ ಮನ್ನಾ ಆಗುತ್ತದೆ. ಹೊರತಾಗಿ ಟ್ರ್ಯಾಕ್ಟರ್, ದನದ ಕೊಟ್ಟಿಗೆ ನಿರ್ಮಾಣ ಸೇರಿದಂತೆ ಕೃಷಿ ಸಂಬಂಧಿ ಸಾಲಗಳು ಮನ್ನಾ ಆಗುವುದಿಲ್ಲ. ಇದರ ಅನ್ವಯ ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ 2 ಲಕ್ಷ ಸುಸ್ತಿ ಬೆಳೆ ಸಾಲಮನ್ನಾ ಹಾಗೂ ಚಾಲ್ತಿ ಸಾಲವಿರುವ ರೈತರ ಖಾತೆಗೆ 25 ಸಾವಿರ ರೂ. ಜಮೆ ಮಾಡಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.

    ರೈತರ ಜಾಗೃತಿಗೆ ಕ್ರಮ:
    ಸಾಲಮನ್ನಾ ಕುರಿತು ರೈತರಲ್ಲಿ ಅನೇಕ ಗೊಂದಲಗಳಿವೆ. ಈ ಕುರಿತು ನಾನೊಬ್ಬನೇ ಮಾತನಾಡುತ್ತೇನೆ. ಏಕೆಂದರೆ ನಾನಷ್ಟೇ ಜವಾಬ್ದಾರಿ ಹೊತ್ತಿರುವೆ. ಎಲ್ಲ ಸರ್ಕಾರದ ಹಣೆ ಬರವೇ ಇಷ್ಟು ಅಂತಾ ಬೇಸರದಿಂದ ಮಾತು ಆರಂಭಿಸಿದ ಸಿಎಂ, ರೈತರಲ್ಲಿ ಜಾಗೃತಿ ಮೂಡಿಸಲು ಎರಡು ತಂಡಗಳನ್ನು ರಚಿಸಲಾಗಿದೆ. ಜೊತೆಗೆ ನಾಡ ಕಚೇರಿಯಲ್ಲಿ ಅರ್ಜಿಗಳನ್ನು ಪ್ರಾರಂಭಿಸಲಾಗುತ್ತದೆ. ಈ ಮೂಲಕ ರೈತರು ಯಾವ ರೀತಿಯ ಸಾಲ? ಯಾವ ವರ್ಷ? ಎಷ್ಟು ಹಣ ಪಡೆದಿದ್ದಾರೆ? ಎಂದು ಮಾಹಿತಿ ಪಡೆಯಲಾಗುತ್ತದೆ. ಬಳಿಕ ಅವರು ನೀಡಿದ ವಿವರಣೆ ನಮ್ಮ ಸರ್ಕಾರದ ಸಾಲಮನ್ನಾಕ್ಕೆ ಅನ್ವಯವಾಗುತ್ತದೆ ಇಲ್ಲವೋ ಅಂತಾ ನೋಡಿ, ಜಾಗೃತಿ ಮೂಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಸಾಲಮನ್ನಾ ನಿರ್ಧಾರದಿಂದ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸಾಲಪಡೆದ ಒಟ್ಟು 22 ಲಕ್ಷ ರೈತರಿಗೆ ಅನುಕೂಲವಾಗುತ್ತದೆ. ಸಾಲಮನ್ನಾ ಫಲಾನುಭವಿ ರೈತರಿಗೆ ನಾನು ಪತ್ರ ಬರೆಯುವ ನಿರ್ಧಾರಕ್ಕೆ ಮುಂದಾಗಿದ್ದೇನೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv