Tag: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

  • ಕೊರೊನಾ ಲಸಿಕೆ ಪಡೆದ ಸಿಎಂ ಯೋಗಿ ಆದಿತ್ಯನಾಥ್

    ಕೊರೊನಾ ಲಸಿಕೆ ಪಡೆದ ಸಿಎಂ ಯೋಗಿ ಆದಿತ್ಯನಾಥ್

    ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.

    ಈ ಕುರಿತಂತೆ ಸಿಎಂ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ಇಂದು ನಾನು ಲಕ್ನೋನ ಶ್ಯಾಮ್ ಪ್ರಸಾದ್ ಮುಖರ್ಜಿ ಸಿವಿಲ್ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದೇನೆ. ಕೊರೊನಾ ಲಸಿಕೆ ಪಡೆಯಬೇಕಾದವರೆಲ್ಲರೂ ಲಸಿಕೆ ಸ್ವೀಕರಿಸಿ, ಉತ್ತರ ಪ್ರದೇಶವನ್ನು ಕೊರೊನಾ ಮುಕ್ತವನ್ನಾಗಿಸಿ. ಬನ್ನಿ ಎಲ್ಲರೂ ಕೊರೊನಾ ವಿರುದ್ಧ ಹೋರಾಟ ನಡೆಸೋಣ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

    ಯೋಗಿ ಆದಿತ್ಯನಾಥ್‍ರವರು ಕೊರೊನಾ ಲಸಿಕೆ ಸ್ವೀಕರಿಸುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದು, ಆರೋಗ್ಯ ಸಿಬ್ಬಂದಿ ರಶ್ಮಿ ಜೀತ್ ಸಿಂಗ್ ಎಂಬವರು ಮುಖ್ಯಮಂತ್ರಿಗೆ ಭಾರತ್ ಬಯೋಟಿಕ್‍ನ ಕೋವ್ಯಾಕ್ಸಿನ್ ನೀಡುತ್ತಿರುವುದನ್ನು ಕಾಣಬಹುದಾಗಿದೆ.

  • 27 ವಿದ್ಯುತ್ ಸಬ್‍ಸ್ಟೇಷನ್ ಉದ್ಘಾಟಿಸಿದ ಸಿಎಂ ಯೋಗಿ ಆದಿತ್ಯನಾಥ್

    27 ವಿದ್ಯುತ್ ಸಬ್‍ಸ್ಟೇಷನ್ ಉದ್ಘಾಟಿಸಿದ ಸಿಎಂ ಯೋಗಿ ಆದಿತ್ಯನಾಥ್

    ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೀಡಿಯೋ ಕಾನ್ಫರೆನ್ಸ್ ಮೂಲಕ ಉತ್ತರ ಪ್ರದೇಶದ ವಿದ್ಯುತ್ ಪ್ರಸರಣ ನಿಗಮ ಅಭಿವೃದ್ದಿ ಪಡಿಸಿದ 1,920 ಕೋಟಿ ರೂ. ವೆಚ್ಚದ 27 ವಿದ್ಯುತ್ ಸಬ್‍ಸ್ಟೇಷನ್‍ನನ್ನು ಶನಿವಾರ ಉದ್ಘಾಟಿಸಿದರು.

    ಸಮಾರಂಭದ ವೇಳೆ ಮಾತನಾಡಿದ ಅವರು, ಉತ್ತಮ ಸಾಂಸ್ಕೃತಿಕ ಕಾರ್ಯವನ್ನು ಉತ್ತೇಜಿಸುವ ಮೂಲಕ ಸಾಮಾನ್ಯ ಜನರ ನಂಬಿಕೆಯನ್ನು ಬಲಪಡಿಸಿದ ಯುಪಿ ವಿದ್ಯುತ್ ಇಲಾಖೆಗೆ ಧನ್ಯವಾದ ತಿಳಿಸಿದರು.

    ಲಾಕ್‍ಡೌನ್ ಸಮಯದಲ್ಲಿಯೂ ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಮಾಡುವ ಮೂಲಕ ವಿದ್ಯುತ್ ನಿಗಮ ಉತ್ತಮವಾಗಿ ಕೆಲಸ ಮಾಡಿದೆ. ವಿದ್ಯುತ್ ನಿಗಮವು ರಾಜ್ಯದೊಳಗಿರುವ ಜಿಲ್ಲಾ ಕೇಂದ್ರಗಳಿಗೆ 23ರಿಂದ 24 ಗಂಟೆಗಳ ಕಾಲ, ತಹಶೀಲ್ದಾರ್ ಕೇಂದ್ರ ಕಚೇರಿಗಳಿಗೆ 20ರಿಂದ21 ಗಂಟೆ, ಗ್ರಾಮೀಣ ಪ್ರದೇಶಗಳಿಗೆ 17ರಿಂ 18 ಗಂಟೆ ಮತ್ತು ಬುಂದೇಲ್‍ಖಂಡ್ ಪ್ರದೇಶಕ್ಕೆ 20 ರಿಂದ 21 ಗಂಟೆಗಳವರೆ ವಿದ್ಯುತ್ ಸರಬರಾಜು ಮಾಡಿದೆ ಎಂದು ಹೇಳಿದರು.

    ರಾಜ್ಯದ ರೈತರು ಕೂಡ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯವಾಗಲೆಂದು ವಿದ್ಯುತ್ ವ್ಯವಸ್ಥೆಯನ್ನು ಒದಗಿಸಲಾಗುತ್ತಿದೆ ಎಂದರು. ಈ ವೇಳೆ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಯುಪಿ ವಿದ್ಯುತ್ ಸಚಿವ ಶ್ರೀಕಾಂತ್ ಶರ್ಮಾ ಉಪಸ್ಥಿತರಿದ್ದರು.

  • ರಾಜಕೀಯದಲ್ಲಿ ಪ್ರಖ್ಯಾತಿ ಪಡೆಯೋಕೆ ಕೆಲವರು ಗೋತ್ರ, ಜನಿವಾರ ತೋರಿಸ್ತಿದ್ದಾರೆ: ಯೋಗಿ ಆದಿತ್ಯನಾಥ್

    ರಾಜಕೀಯದಲ್ಲಿ ಪ್ರಖ್ಯಾತಿ ಪಡೆಯೋಕೆ ಕೆಲವರು ಗೋತ್ರ, ಜನಿವಾರ ತೋರಿಸ್ತಿದ್ದಾರೆ: ಯೋಗಿ ಆದಿತ್ಯನಾಥ್

    -ಪರೋಕ್ಷವಾಗಿ ರಾಹುಲ್ ಗಾಂಧಿಗೆ ಕುಟುಕಿದ ಯೋಗಿ

    ಲಕ್ನೋ: ರಾಜಕೀಯದಲ್ಲಿ ಪ್ರಖ್ಯಾತಿ ಹೊಂದಲು ಕೆಲವರು ತಮ್ಮ ಗೋತ್ರ ಹಾಗೂ ಜನಿವಾರವನ್ನು ತೋರಿಸುತ್ತಿದ್ದಾರೆಂದು ಹೇಳುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರೋಕ್ಷವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕುಟುಕಿದ್ದಾರೆ.

    ಉತ್ತರಪ್ರದೇಶದ ಫೈಜಾಬಾದ್ ನಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಯಾರು ತಮ್ಮನ್ನು ತಾವು ಆಕಸ್ಮಿಕ ಹಿಂದೂಗಳೆಂದು ಹೇಳಿಕೊಂಡಿದ್ದಾರೋ, ಅವರೇ ಈಗ ನಿಜವಾದ ಹಿಂದೂಗಳಾಗುತ್ತಿದ್ದಾರೆ. ಈಗಲಾದರೂ ಹಿಂದುತ್ವ ಏನು ಎಂಬುದು ಕೆಲವರಿಗೆ ಅರ್ಥವಾಗಿದೆ. ಇದು ಸನಾತನ ನಂಬಿಕೆಯ ಗೆಲುವು ಎಂದು ಹೇಳಿದ್ದಾರೆ.

    ಹಿಂದೂ ಧರ್ಮದ ಪವಿತ್ರ ಗ್ರಂಥವಾಗಿರುವ ರಾಮಾಯಣದ ಎದುರು ಖ್ಯಾತ ಸರ್ಚ್ ಎಂಜಿನ್ ಗೂಗಲ್ ಕೂಡ ವಿಫಲ. ಗೂಗಲ್ ನಲ್ಲಿ ಹೇಳುವುದಕ್ಕಿಂತ ಧಾರ್ಮಿಕ ಗ್ರಂಥಗಳಲ್ಲಿ ಜ್ಞಾನ ದೊಡ್ಡದಾಗಿದೆ. ಯಾವೊಬ್ಬ ಆಕಸ್ಮಿಕ ಹಿಂದೂಗಳೆಂದು ಹೇಳಿಕೊಂಡಿದ್ದರೋ, ಅವರೇ ಈಗ ರಾಜಕೀಯದಲ್ಲಿ ಪ್ರಾಮುಖ್ಯತೆಯನ್ನು ಪಡೆಯಲು ಗೋತ್ರ, ಜನಿವಾರ ತೋರಿಸಲು ಪ್ರಾರಂಭಿಸಿದ್ದಾರೆಂದು ಪರೋಕ್ಷವಾಗಿ ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ಉತ್ತರ ಪ್ರದೇಶದಲ್ಲಿ ನಡೆಯುವ ಕುಂಭ ಮೇಳದಲ್ಲಿ ಎಲ್ಲಾ ಜಾತಿಯವರೂ ಪಾಲ್ಗೊಳ್ಳುತ್ತಾರೆ. ಇದು ಧಾರ್ಮಿಕ ಭಾವೈಕ್ಯತೆಯ ಸಂಕೇತವಾಗಿದೆ. ವೇದಗಳಲ್ಲಿ ಹಲವು ಭಾಗಗಳನ್ನು ದಲಿತ ಋಷಿಗಳೇ ರಚಿಸಿದ್ದಾರೆ. ವಾಲ್ಮೀಕಿ ಮಹರ್ಷಿಗಳು ರಾಮನನ್ನು ಸಂದರ್ಶಿಸಿದ ಸಂತರಾಗಿದ್ದಾರೆ. ಆದರೆ ಈ ಸಮುದಾಯದವರು ತಾರತಮ್ಯವನ್ನು ಎದುರಿಸುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv