Tag: ಮುಖ್ಯಮಂತ್ರಿ ಹುದ್ದೆ

  • ಖರ್ಗೆ ಅವ್ರ ಮಾತಿಗೆ ನಾನು ಬದ್ಧನಾಗಿದ್ದೇನೆ – ಡಿಕೆಶಿ

    ಖರ್ಗೆ ಅವ್ರ ಮಾತಿಗೆ ನಾನು ಬದ್ಧನಾಗಿದ್ದೇನೆ – ಡಿಕೆಶಿ

    ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Sivakumar) ತಿಳಿಸಿದರು.

    ಡಿಕೆ ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ ಯಾರಿಂದಕೂ ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ವಿಧಾನಸೌಧದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಕರ್ನಾಟಕ ಎಲ್ಲಿದೆ ಗೊತ್ತಿಲ್ಲ ಅಂದಿದ್ರು – ಶಾಸಕ‌ ರವಿ ಗಣಿಗ ನಿಗಿನಿಗಿ ಕೆಂಡ

    ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ನಾನು ಕಾರ್ಯಕರ್ತರ ಸಭೆ ಮಾಡಲು ಹೋಗಿದ್ದೆ. ಮೊಯ್ಲಿ ಅವರ ಹೇಳಿಕೆಗೆ ನಾನು ‌ಪ್ರತಿಕ್ರಿಯೆ ಕೊಡಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಮಾತಾಡಬಾರದು ಅಂತ ಹೇಳಿದ್ದಾರೆ. ನಾನು ಅದಕ್ಕೆ ಬದ್ದವಾಗಿದ್ದೇನೆ ಅಂತ ತಿಳಿಸಿದರು. ಇದನ್ನೂ ಓದಿ: ನನ್ನ ಮಾತು ಕೇಳ್ದಿದ್ರೆ ಕಂಪ್ಲೇಂಟ್ ಕೊಡ್ತೀನಿ – ಕಲಬುರಗಿಯಲ್ಲಿ ಪತ್ನಿ ಕಿರುಕುಳಕ್ಕೆ ನವವಿವಾಹಿತ ಬಲಿ

  • ಯಾವ ಸ್ವಾಮೀಜಿ, ಗುರೂಜಿಗಳು ಭವಿಷ್ಯ ನುಡಿಯೋದು ಬೇಕಿಲ್ಲ: ಡಿಕೆಶಿ

    ಯಾವ ಸ್ವಾಮೀಜಿ, ಗುರೂಜಿಗಳು ಭವಿಷ್ಯ ನುಡಿಯೋದು ಬೇಕಿಲ್ಲ: ಡಿಕೆಶಿ

    – ಪವರ್‌ ಶೇರಿಂಗ್‌ ವಿಚಾರಕ್ಕೆ ಡಿಸಿಎಂ ಹೇಳಿದ್ದೇನು?

    ಬೆಂಗಳೂರು: ನಮ್ಮ ಸರ್ಕಾರ ಸುಭದ್ರವಾಗಿದೆ, ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಆಗಿ ಕೆಲಸ ಮಾಡ್ತಿದ್ದಾರೆ. ಯಾವ ಸ್ವಾಮೀಜಿ, ಗುರೂಜಿಗಳು ಭವಿಷ್ಯ ನುಡಿಯೋದು ಬೇಕಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ತಿಳಿಸಿದರು.

    ಬೆಂಗಳೂರಿನಲ್ಲಿಂದು (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಇದೇ ಅವಧಿಯಲ್ಲಿ ಡಿಕೆಶಿ ಸಿಎಂ ಆಗ್ತಾರೆʼ ಎಂಬ ನಯ್ ಗುರೂಜಿ ಭವಿಷ್ಯ ವಿಚಾರಕ್ಕೆ ಪ್ರತಿಕ್ರಿಯಿಸಿದರು. ನಾನು ಎಲ್ಲಾ ಸ್ವಾಮೀಜಿ, ಗುರೂಜಿಗಳಿಗೆ ವಿನಂತಿ ಮಾಡ್ತೀನಿ. ನಮ್ಮ ಸರ್ಕಾರದ ವಿಚಾರದಲ್ಲಿ ತಮ್ಮ ಯಾವ ಹೇಳಿಕೆ ಬೇಡ. ನಮ್ಮ ಸರ್ಕಾರ (Congress Government) ಸುಭದ್ರವಾಗಿ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಕೆಲಸ ಮಾಡ್ತಿದ್ದಾರೆ. ಅವರ ನೇತೃತ್ವದಲ್ಲಿ ನಾವೆಲ್ಲ ಒಟ್ಟಿಗೆ ಕೆಲಸ ಮಾಡ್ತಿದ್ದೇವೆ. ಯಾರೂ ಭವಿಷ್ಯ ನುಡಿಯೋದು ಬೇಕಿಲ್ಲ ಎಂದು ಎಂದು ಕುಟುಕಿದರು. ಇದನ್ನೂ ಓದಿ: ಡಿಕೆಶಿ ಸಿಎಂ ಆಗುವುದು ನಿಶ್ಚಿತ: ವಿನಯ್ ಗುರೂಜಿ ಭವಿಷ್ಯ

    ಪವರ್‌ ಶೇರಿಂಗ್‌ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾವ ಪವರ್ ಇಲ್ಲ, ಯಾವ ಶೇರಿಂಗೂ ಇಲ್ಲ. 5 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ ಎಂದರು. ಇದನ್ನೂ ಓದಿ: ಹೋಟೆಲ್‌ಗಳ ಮೇಲೆ ಲಾರಿ ಪಲ್ಟಿ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿ

    ಜಾತಿ ಜನಗಣತಿಗೆ ಪ್ರಬಲ ಸಮುದಾಯಗಳ ವಿರೋಧ ವಿಚಾರ ಕುರಿತು ಮಾತನಾಡಿ, ಜಾತಿ ಜನಗಣತಿಗೆ ಸಂಬಂಧಿಸಿದಂತೆ ಯಾವ ಸಭೆಯೂ ಇಲ್ಲ. ಸಿಎಂ ಕ್ಯಾಬಿನೆಟ್ ಸಭೆಗೆ ತರ್ತೀನಿ ಅಂತ ಹೇಳಿದ್ದಾರೆ. ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿದೆ ಎಂದು ಹೇಳಿದರು.

    ಅಲ್ಲದೇ, ನಾನು, ಸಿಎಂ ಸಭೆ ಕರೆದಿದ್ದೇವೆ. ಎಲ್ಲಾ ಸಭೆ ರದ್ದು ಮಾಡಿ ಸಂಜೆ ಪದಾಧಿಕಾರಿಗಳ ಇತರೆ ಸಭೆ ಇದೆ. ಸುರ್ಜೇವಾಲ ಬರ್ತಾರೆ, ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ. ಎಂಎಲ್‌ಎ, ಮಂತ್ರಿಗಳಿಗೆ ಜವಾಬ್ದಾರಿ ಕೊಡಬೇಕಿದೆ. ನಾಳೆ ಸಿಎಂ, ನಾನು ದೆಹಲಿಗೆ ಹೋಗ್ತಿದ್ದೇವೆ. ದೆಹಲಿಯಲ್ಲಿ ಹೊಸ ಕಟ್ಟಡ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದೇವೆ ಅಷ್ಟೇ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಯೋಧ್ಯೆಯ ಶ್ರೀರಾಮನ ಮೂರ್ತಿಗೆ `ರಾಮಲಲ್ಲಾʼ ಅಂತ ಕರೆಯುವುದೇಕೆ?

    ಎಲ್ಲಾ ಇಲಾಖೆಯಲ್ಲಿ ರೇಟ್ ಕಾರ್ಡ್ ಫಿಕ್ಸ್ ಮಾಡಿದ್ದಾರೆ ಅಂತ ಕುಮಾರಸ್ವಾಮಿ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಹೌದಾ.? ಅವರ ರೇಟ್ ಕಾರ್ಡಾ? ಅವರ ಕಾರ್ಡ್ ಫಿಕ್ಸ್ ಇರಬೇಕು. ಅವರ ಅನುಭವ ಮಾತಾಡ್ತಿದ್ದಾರೆ, ನನಗೆ ಗೊತ್ತಿಲ್ಲ. ಅದ್ಯಾವ್ದೋ ಪೂಜೆದೆಲ್ಲಾ ಹೇಳಿದ್ದಾರೆ ಅಲ್ವಾ.? ಅದು ಅವರ ಅನುಭವ. ಅವರು ಕದ್ದು ಮಾಡ್ತಾರೆ, ನಾನು ಓಪನ್ ಆಗಿ ಮಾಡ್ತೀನಿ, ದಿನಾ ಬೆಳಗ್ಗೆ ಪೂಜೆ ಮಾಡ್ತೀನಿ. ನಿಮ್ಮಂತವರು ತೊಂದರೆ ಕೊಡ್ತಾರೆ, ರಕ್ಷಣೆ ಕೊಡಪ್ಪಾ ಅಂತ ಮನವಿ ಮಾಡ್ತೀನಿ ಎಂದು ಹೆಚ್‌ಡಿಕೆಗೆ ಕುಟುಕಿದರು.

  • ಪ್ರಾಮಾಣಿಕರನ್ನ ಸಿಎಂ ಮಾಡ್ಬೇಕು ಅಂದ್ರೆ ನನ್ನ ಹೆಸರೇ ಮೊದಲು ಬರುತ್ತೆ: ಯತ್ನಾಳ್‌

    ಪ್ರಾಮಾಣಿಕರನ್ನ ಸಿಎಂ ಮಾಡ್ಬೇಕು ಅಂದ್ರೆ ನನ್ನ ಹೆಸರೇ ಮೊದಲು ಬರುತ್ತೆ: ಯತ್ನಾಳ್‌

    – ಬಣ ಬಡಿದಾಟದ ನಡುವೆ ಯತ್ನಾಳ್‌ಗೆ ಸಿಎಂ ಕನಸು
    – ನಾನೇಕೆ ಸಿಎಂ ಆಗಬಾರದು? ನನ್ನಲೇನು ಕೊರತೆಯಿದೆ? ಎಂದ ಶಾಸಕರು

    ಬಾಗಲಕೋಟೆ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟದ ನಡುವೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

    ಬಾಗಲಕೋಟೆಯಲ್ಲಿ (Bagalkote) ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ನಾನು ಮುಖ್ಯಮಂತ್ರಿ (Chief Minister) ಯಾಕೆ ಆಗಬಾರದು? ನನ್ನಲ್ಲಿ ಏನು ಕೊರತೆ ಇದೆ? ಪ್ರಾಮಾಣಿಕರನ್ನ ಸಿಎಂ ಮಾಡಬೇಕು ಅಂದ್ರೆ ಮೊದಲು ನನ್ನ ಹೆಸರೇ ಬರುತ್ತೆ. ಒಳ್ಳೆಯ ಮನುಷ್ಯ ಸಿಎಂ ಆಗಬೇಕು ಅಂತ ದೇವರು ಆದೇಶ ಕೊಟ್ಟರೆ ನಾನೇ ಸಿಎಂ ಆಗ್ತೀನಿ. ಇಲ್ಲದಿದ್ದರೆ ನನ್ನ ಪಾಡಿಗೆ ಇರ್ತೀನಿ ಅಂತ ಯತ್ನಾಳ್‌ ಹೇಳಿದ್ದಾರೆ. ಇದನ್ನೂ ಓದಿ: ಮಣಿಪಾಲ ಬಾಣಸಿಗನ ಸಾವಿಗೆ ಬಿಗ್ ಟ್ವಿಸ್ಟ್ – ಬಾಟಲಿಯಿಂದ ಕತ್ತು ಇರಿದುಕೊಂಡು ಆತ್ಮಹತ್ಯೆ?

    ಭ್ರಷ್ಟಾಚಾರ ಅಥವಾ ಏನಾದರೂ ಹಗರಣ ಇದ್ದಿದ್ದರೆ ನನ್ನನ್ನ ಬಿಡ್ತಿದ್ರಾ? ಈ ಹಿಂದೆ ನನ್ನ ಮೇಲೂ ದಾಳಿ ಮಾಡಿಸಿದ್ದಾರೆ, ಗುಪ್ತಚರ ಇಲಾಖೆಯನ್ನೂ ಬಿಟ್ಟಿದ್ದರು. ಎಲ್ಲವನ್ನೂ ನೋಡಿದ್ರೂ ಏನೂ ಆಗಲಿಲ್ಲ. ಅದಕ್ಕೆ ಸುಮ್ಮನೆ ಕೂತಿದ್ದಾರೆ ಅಷ್ಟೇ. ನನ್ನ ಮೇಲೆ ಆ ಭಗವಂತನ ಕೃಪೆ ಇದೆ, ಜನರ ಶಕ್ತಿ ಇದೆ ಎಂದರು.

    ಬೆಂಗಳೂರಲ್ಲಿಂದು (Bengaluru) ಕೋರ್ ಕಮೀಟಿ ಸಭೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೋರ್ ಕಮೀಟಿ ಮಾಡಲಿ, ನನ್ನ ಯಾಕೆ ಕೋರ್ ಕಮೀಟಿ ಸಭೆಗೆ ಕರೆಯಬೇಕು ನಾನು ಕೋರ್ ಕಮೀಟಿ ಮೆಂಬರ್ ಅಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಸಾಮಾನ್ಯ ಎಂಎಲ್‌ಎ ಅಷ್ಟೇ ಎಂದರು. ಇದನ್ನೂ ಓದಿ: ನಾನು ರಾಜಕೀಯ ಕೊನೆಗಾಲದಲ್ಲಿದ್ದೇನೆ: ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

    ಇನ್ನೂ ಜಲಸಂಪನ್ಮೂಲ ಅಬೀವೃದ್ಧಿ ವಿಚಾರ ಕುರಿತು ಮಾತನಾಡಿ, ನೀರಾವರಿ ಇಲಾಖೆ, ಜಲ ಸಂಪನ್ಮೂಲ ಸಚಿವರು ಉತ್ತರ ಕರ್ನಾಟಕ ಭಾಗದವರಾಗಬೇಕು. ಉತ್ತರ ಕರ್ನಾಟಕದವರು ಯಾವಾಗ್ಯಾವಾಗ ಜಲ ಸಂಪನ್ಮೂಲ ಸಚಿವರಾಗಿದ್ದಾರೆ ಒಳ್ಳೆಯ ಕೆಲಸಗಳಾಗಿವೆ. ಬಸರಾಜ ಬೊಮ್ಮಾಯಿ ಆದಾಗ ನ್ಯಾಯ ಸಿಕ್ಕಿದೆ, ಗೋವಿಂದ ಕಾರಜೋಳ ಆದಾಗ ನ್ಯಾಯ ಸಿಕ್ಕಿದೆ. ಎಂ.ಬಿ ಪಾಟೀಲ್, ಹೆಚ್.ಕೆ ಪಾಟೀಲ್‌ ಆದಾಗಲೂ ನ್ಯಾಯ ಸಿಕ್ಕಿದೆ. ಅದನ್ನು ಬಿಟ್ಟು ಆ ಕಡೆಯವರಿಗೆ ಇದರ ಬಗ್ಗೆ ಕಳಕಳಿ ಇಲ್ಲ. ಅವರು ಲೂಟಿ ಮಾಡೋದಕ್ಕೆ ಮಾತ್ರ ಸಚಿವರಾಗುತ್ತಾರೆ. ಈ ಹಿಂದಿನ ಅವಧಿಯಲ್ಲಿ ನಮ್ಮ ಸರ್ಕಾರ ಮಾಡಿದ್ದ ಬಿಲ್‌ಗಳಿಗೆ 10% ತೆಗೆದುಕೊಳ್ಳುತ್ತಿದ್ದಾರೆ. ಆವಾಗಿನ ಕಾರ್ಯಕ್ಕೂ ರೊಕ್ಕ ತೆಗೆದುಕೊಳ್ಳುತ್ತಿದ್ದಾನೆ ಪುಣ್ಯಾತ್ಮ. ಇಂತಹವರಿಂದ ಅಭಿವೃದ್ದಿಯಾಗುತ್ತಾ? ಎಂದು ಡಿಕೆಶಿ ಹೆಸರು ಹೇಳದೆಯೇ ಟಾಂಗ್‌ ಕೊಟ್ಟರು.

    ನಾನು ಯಾರ ಏಜೆಂಟ್ ಅಲ್ಲ, ಕಾಂಗ್ರೆಸ್ ಏಜೆಂಟ್ ಕೂಡ ಅಲ್ಲ. ಯಾವ ರಾಜಕಾರಣಿ ಮನೆಗೆ ಹೋಗಿ ಭಿಕ್ಷೆ ಬೇಡಿಲ್ಲ. ಯಾರ‍್ಯಾರು ನಮ್ಮ ಉತ್ತರ ಕರ್ನಾಟಕದವರಾಗಿದ್ದಾರೆ ಒಳ್ಳೆಯ ಕೆಲಸ ಮಾಡಿದ್ದಾರೆ. ಈಗ ಏನು ಸಚಿವ ಸಂಪುಟ ಪುನಾರಚನೆ ಅಂತಾರೆ, ಆವಾಗ ಉತ್ತರ ಕರ್ನಾಟಕದವರಿಗೆ ಜಲಸಂಪನ್ಮೂಲ ಮಂತ್ರಿ ಮಾಡಿ ಅಂತಾ ನಾನು ನೇರವಾಗಿ ಸಿದ್ದರಾಮಯ್ಯನವರಿಗೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ನುಡಿದರು. ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ ಕೇಸ್ ರೀ ಓಪನ್‌ಗೆ ಉಪಸಮಿತಿ ನಿರ್ಧಾರ

    ಇದೇ ವೇಳೆ ದೆಹಲಿಯಲ್ಲಿ ಹೈಕಮಾಂಡ್‌ ಭೇಟಿ ಬಳಿಕ ಯತ್ನಾಳ್‌ ಸಪ್ಪೆಯಾಗಿದ್ದಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನನ್ನ ಮುಖ ಸಪ್ಪೆ ಅಂತ ಅನಿಸಿದೆಯಾ ನಿಮಗೆ? ನೋಡ್ರಿ ನಾ ಯಾವುದಕ್ಕೂ ಆಸೆನೆ ಮಾಡೋದಿಲ್ಲ. ಅಂದಮೇಲೆ ಯಾವುದಕ್ಕೆ ಅಂಜಬೇಕು ಯಾಕೆ? ಮನುಷ್ಯನಿಗೆ ಏನೋ ಮುಖ್ಯಮಂತ್ರಿ ಆಗಬೇಕು, ಅಧ್ಯಕ್ಷರಾಗಬೇಕು ಸಿಕ್ಕ ಸಿಕ್ಕ ಹಾಗೆ ರೊಕ್ಕ ಮಾಡಿಕೊಳ್ಳಬೇಕೆಂಬ ಆಸೆ ಇದ್ರೆ ಸಪ್ಪೆ ಮುಖ ಮಾಡಿಕೊಳ್ಳಬೇಕು. ನಮ್ದು ಏನಿಲ್ಲ ಸ್ಥಿತಪ್ರಜ್ಞೆ ಇದ್ದೀವಿ ನಾವು ಎಂದು ಹೇಳಿದರು.

  • ಜನ ವಿರೋಧ ಪಕ್ಷದಲ್ಲಿರಲು ಆದೇಶಿಸಿದ್ದು, ನಾವು ಪಾಲಿಸುತ್ತೇವೆ – ಶರದ್ ಪವಾರ್

    ಜನ ವಿರೋಧ ಪಕ್ಷದಲ್ಲಿರಲು ಆದೇಶಿಸಿದ್ದು, ನಾವು ಪಾಲಿಸುತ್ತೇವೆ – ಶರದ್ ಪವಾರ್

    ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹಾಗೂ ಮುಖ್ಯಮಂತ್ರಿ ಖುರ್ಚಿಗಾಗಿ ಪೈಪೋಟಿ ನಡೆಯುತ್ತಿದ್ದು, ರಾಜಕೀಯ ಹೈ ಡ್ರಾಮಾ ಮುಂದುವರಿದಿದೆ.

    ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಮುಖ್ಯಮಂತ್ರಿ ಹುದ್ದೆ ಬೇಡಿಕೆ ಇಟ್ಟಿರುವ ಶಿವಸೇನೆ ಶರದ್ ಪವಾರ್ ನೇತೃತ್ವದ ಎನ್‍ಸಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಇದಕ್ಕೆ ನ್ಯಾಷನಲ್ ಕಾಂಗ್ರೆಸ್ ಪಕ್ಷ(ಎನ್‍ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ತಕ್ಕ ಉತ್ತರ ನೀಡಿದ್ದು, ಜನ ನಮ್ಮನ್ನು ವಿರೋಧ ಪಕ್ಷದಲ್ಲಿ ಕೂರುವಂತೆ ತಿಳಿಸಿದ್ದಾರೆ. ಹೀಗಾಗಿ ನಾವು ಯಾರೊಂದಿಗೂ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಜನತೆ ನಮಗೆ ಪ್ರತಿಪಕ್ಷ ಸ್ಥಾನದಲ್ಲಿ ಕೆಲಸ ಮಾಡುವಂತೆ ಆದೇಶಿಸಿದ್ದಾರೆ. ಅದರಂತೆ ನಾವು ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಎನ್‍ಸಿಪಿ ಜೊತೆ ಕೈ ಜೋಡಿಸುತ್ತದೆ ಎಂಬ ಮಾತುಗಳು ಕೇಳಿಬರುತ್ತಿರುವಾಗಲೇ ಪವಾರ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

    ಬಿಜೆಪಿ ಮತ್ತು ಶಿವಸೇನೆ ನಡುವಿನ ಮುಖ್ಯಮಂತ್ರಿ ಹುದ್ದೆಯ ಕುರಿತ ಜಗಳ ಬಾಲಿಶವಾದದ್ದು ಎಂದು ಪವಾರ್ ಇದೇ ವೇಳೆ ಹರಿಹಾಯ್ದಿದ್ದಾರೆ.

    ಎನ್‍ಡಿಎ ಸಮ್ಮಿಶ್ರ ಘಟಕಗಳಾದ ಬಿಜೆಪಿ ಹಾಗೂ ಶಿವಸೇನೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 288 ಕ್ಷೇತ್ರಗಳ ಪೈಕಿ ಕ್ರಮವಾಗಿ 105 ಹಾಗೂ 56 ಸ್ಥಾನಗಳಲ್ಲಿ ಜಯಗಳಿಸಿವೆ. ಎನ್‍ಸಿಪಿ ಹಾಗೂ ಕಾಂಗ್ರೆಸ್ ಎರಡೂ ಕ್ರಮವಾಗಿ 54 ಹಾಗೂ 44 ಸ್ಥಾನಗಳಲ್ಲಿ ಗಳಿಸಿವೆ.

    ರಾಜ್ಯದಲ್ಲಿ ಸರ್ಕಾರ ರಚಿಸಲು ಶಿವಸೇನೆ ಜೊತೆ ಯಾವುದೇ ಮಾತುಕತೆ ನಡೆಸಿಲ್ಲ, ನಾವು ವಿರೋಧ ಪಕ್ಷದ ಸ್ಥಾನದಲ್ಲೇ ಇರುತ್ತೇವೆ ಎಂದು ಪವಾರ್ ಸ್ಪಷ್ಟಪಡಿಸಿದರು. ನಮಗೆ ಸ್ಪಷ್ಟ ಬಹುಮತವಿಲ್ಲ. ಜನರು ನಮ್ಮನ್ನು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವಂತೆ ಆದೇಶಿಸಿದ್ದಾರೆ. ನಾವು ಆ ಆದೇಶವನ್ನು ಪಾಲಿಸುತ್ತೇವೆ. ಆ ಪಾತ್ರವನ್ನು ಪರಿಣಾಮಕಾರಿಯಾಗಿ ನಾವು ನಿರ್ವಹಿಸುತ್ತೇವೆ ಎಂದರು.

    ಮುಖ್ಯಮಂತ್ರಿ ಹುದ್ದೆಯ ಕುರಿತು ಬಿಜೆಪಿಯೊಂದಿಗೆ ಶಿವಸೇನೆ ಜಗಳವಾಡುತ್ತಿರುವ ಸಂದರ್ಭಲ್ಲಿ, ನಾವು ಬಯಸಿದಂತೆ ಸ್ಥಿರ ಸರ್ಕಾರವನ್ನು ರಚಿಸಬಹುದು ಎಂದು ಶಿವಸೇನೆ ಹಿರಿಯ ನಾಯಕ ಸಂಜಯ್ ರಾವತ್ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪವಾರ್ ಈ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಶಿವಸೇನೆ ನಿರ್ಧರಿಸಿದರೆ ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಅಗತ್ಯ ಸಂಖ್ಯೆಯನ್ನು ಪಡೆಯುತ್ತದೆ. ಮಹಾರಾಷ್ಟ್ರದ ಜನತೆ 50:50 ಸೂತ್ರದ ಆಧಾರದ ಮೇಲೆ ಸರ್ಕಾರ ರಚಿಸಲು ಆದೇಶ ನೀಡಿದ್ದಾರೆ ಎಂದು ರಾವತ್ ಶುಕ್ರವಾರ ಮುಂಬೈನಲ್ಲಿ ತಿಳಿಸಿದ್ದಾರೆ.