Tag: ಮುಖ್ಯಸ್ಥ

  • ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಎನ್‌ಕೌಂಟರ್‌ಗೆ ಬಲಿ

    ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಎನ್‌ಕೌಂಟರ್‌ಗೆ ಬಲಿ

    – ಭಾರತೀಯ ಸೇನೆಗೆ ಬಹುದೊಡ್ಡ ಗೆಲುವು

    ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥನನ್ನು ಶ್ರೀನಗರದಲ್ಲಿ ಎನ್‍ಕೌಂಟರ್ ಮಾಡಲಾಗಿದೆ.

    ಈ ವಿಚಾರದ ಬಗ್ಗೆ ಇಂದು ಮಾಹಿತಿ ನೀಡಿರುವ ಜಮ್ಮು ಕಾಶ್ಮೀರದ ಪೊಲೀಸರು, ಈ ಎನ್‍ಕೌಂಟರ್ ನಿಂದ ಉಗ್ರರ ವಿರುದ್ಧ ಬಹುದೊಡ್ಡ ಗೆಲುವು ಸಾಧಿಸಿದಂತೆ ಆಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥನಾಗಿದ್ದ ಉಗ್ರ ರಯಾಜ್ ನಾಯ್ಕುನನ್ನು ಮೇ ತಿಂಗಳಲ್ಲಿ ಭಾರತೀಯ ಸೇನೆ ಹೊಡೆದು ಹಾಕಿತ್ತು. ಇದಾದ ನಂತರ ಸೈಫುಲ್ಲಾ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥನಾಗಿ ಅಧಿಕಾರ ವಹಿಸಿಕೊಂಡಿದ್ದ.

    ಇಂದು ಶ್ರೀನಗರದ ರಂಗ್ರೆತ್‍ನಲ್ಲಿ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಭಾರತೀಯ ಸೇನೆ ಆ ಪ್ರದೇಶವನ್ನು ಸುತ್ತುವರೆದಿತ್ತು. ಈ ವೇಳೆ ಉಗ್ರರು ಸೇನೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದಕ್ಕೆ ಪ್ರತಿಯಗಿ ಸೇನೆ ಕೂಡ ಗುಂಡಿನ ದಾಳಿ ಮಾಡಿದ್ದು, ಉಗ್ರ ಸೈಫುಲ್ಲಾನನ್ನು ಹೊಡೆದು ಹಾಕಿದ್ದಾರೆ. ಈ ಕಾರ್ಯಚರಣೆ ಸಂದರ್ಭದಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ಇಂದು ಕೊಲ್ಲಲ್ಪಟ್ಟ ಸೈಫುಲ್ಲಾ ಜಮ್ಮು ಕಾಶ್ಮೀರದಲ್ಲಿ ನಡೆದ ಹಲವಾರು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ. ಜೊತೆಗೆ ಇಂದಿನ ಕಾರ್ಯಚರಣೆ ವೇಳೆಯೂ ಮೊದಲು ಆತನೇ ಸೇನೆಯ ಮೇಲೆ ಗುಂಡಿನ ದಾಳಿ ಮಾಡಿದ್ದ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಿಂದ ಒಂದು ಎಕೆ-47 ಮತ್ತು ಪಿಸ್ತೂಲ್ ಅನ್ನು ಭಾರತೀಯ ಸೇನೆ ವಶಕ್ಕೆ ಪಡೆದುಕೊಂಡಿದೆ.

  • ಧೋನಿ ಭವಿಷ್ಯದ ಬಗ್ಗೆ ನಿಮ್ಮ ನಿಲುವೇನು?- ಸಂದರ್ಶನದಲ್ಲಿ ಸಿಎಸಿ ಟ್ರಿಕ್ಕಿ ಪ್ರಶ್ನೆ

    ಧೋನಿ ಭವಿಷ್ಯದ ಬಗ್ಗೆ ನಿಮ್ಮ ನಿಲುವೇನು?- ಸಂದರ್ಶನದಲ್ಲಿ ಸಿಎಸಿ ಟ್ರಿಕ್ಕಿ ಪ್ರಶ್ನೆ

    ಮುಂಬೈ: ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಕನ್ನಡಿಗ ಸುನಿಲ್ ಜೋಶಿ ಆಯ್ಕೆಯಾಗಿರುವ ಸಂಗತಿ ಈಗಾಗಲೇ ತಿಳಿದಿದೆ. ಆದರೆ ಸಮಿತಿಯ ಸದಸ್ಯರ ಆಯ್ಕೆ ವೇಳೆ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಕೇಳಿರುವ ಕೆಲ ಪ್ರಶ್ನೆಗಳು ಬಹಿರಂಗವಾಗಿದ್ದು, ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ಬಗ್ಗೆ ಸಂದರ್ಶನದಲ್ಲಿ ಪ್ರಶ್ನಿಸಲಾಗಿದೆ.

    ಆಯ್ಕೆ ಸಮಿತಿಗೆ ಆಯ್ಕೆಯ ಅಭ್ಯರ್ಥಿಗಳಾಗಿದ್ದ ಕರ್ನಾಟಕದ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ, ವೆಂಕಟೇಶ್ ಪ್ರಸಾದ್, ರಾಜೇಶ್ ಚೌವ್ಹಾಣ್, ಸುನಿಲ್ ಜೋಶಿ, ಹರ್ವಿಂದರ್ ಸಿಂಗ್ ಸಂದರ್ಶನದಲ್ಲಿ ಭಾಗಿಯಾಗಿದ್ದರು.

    ಆಯ್ಕೆ ಸಮಿತಿಯ ಸದಸ್ಯರು ಧೋನಿ ಅವರು ಟೀಂ ಇಂಡಿಯಾ ತಂಡಕ್ಕೆ ಕಮ್‍ಬ್ಯಾಕ್ ಮಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಆದ್ದರಿಂದ ಸಂದರ್ಶನದ ಸಂದರ್ಭದಲ್ಲಿ ಧೋನಿ 2020ರ ಐಸಿಸಿ ಟಿ20 ಟೂರ್ನಿಗೆ ಆಯ್ಕೆ ಮಾಡುವ ಕುರಿತು ಪ್ರಶ್ನೆ ಮಾಡಲಾಗಿದೆ. ಇದೇ ವೇಳೆ ಅವರಿಗೆ ಬಿಸಿಸಿಐ ಆಯ್ಕೆ ಸಮಿತಿ ಸದಸ್ಯ ಅಥವಾ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥರಾಗ ಬೇಕೇ ಎಂಬ ಪ್ರಶ್ನೆಯನ್ನು ಕೇಳಲಾಗಿದೆ. ಅಂತಿಮವಾಗಿ ಕನ್ನಡಿಗ ಸುನಿಲ್ ಜೋಶಿ ಜೊತೆಗೆ ಹರ್ವಿಂದರ್ ಸಿಂಗ್ ಅವರಿಗೆ ಆಯ್ಕೆ ಸಮಿತಿಯಲ್ಲಿ ಅವಕಾಶ ನೀಡಲಾಗಿದೆ. ಅಂದಹಾಗೇ ದೇವಾಂಗ್ ಗಾಂಧಿ, ಶರಣ್‍ದೀಪ್ ಸಿಂಗ್, ಜತಿನ್ ಪರಾಂಜಪೆ ಆಯ್ಕೆ ಸಮಿತಿಯಲ್ಲಿದ್ದಾರೆ.

    ಕಳೆದ ವರ್ಷ ನಡೆದಿದ್ದ ಐಸಿಸಿ ವಿಶ್ವಕಪ್ ಸೆಮಿ ಫೈನಲ್ ಪಂದ್ಯದ ಬಳಿಕ ಧೋನಿ ಟೀಂ ಇಂಡಿಯಾ ಪರ ಆಡಿಲ್ಲ. ತಿಂಗಳುಗಳು ಕಳೆದರು ಧೋನಿ ಅವರ ನಿವೃತ್ತಿ ಅಥವಾ ಕಮ್‍ಬ್ಯಾಕ್ ಬಗ್ಗೆ ಯಾವುದೇ ಸ್ಪಷ್ಟನೆ ಲಭಿಸಿಲ್ಲ. ಇಂತಹ ಸಮಯದಲ್ಲಿ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರ ನೇಮಕ ನಡೆದಿದೆ. ಸದಸ್ಯರ ಸಾಮರ್ಥ್ಯ, ನೇರ ನಡೆ ತಿಳಿಯುವ ಸಲುವಾಗಿ ಸಿಎಸಿ ಕೆಲ ಸಾಮಾನ್ಯ ಪ್ರಶ್ನೆಗಳೊಂದಿಗೆ ಧೋನಿ ನಿವೃತ್ತಿಯ ಕುರಿತು ಪ್ರಶ್ನೆ ಮಾಡಿತ್ತು. ಸದಸ್ಯರು ಕೂಡ ಈ ಕುರಿತು ನೇರ ಉತ್ತರಗಳನ್ನು ನೀಡಿದ್ದಾರೆ.

    38 ವರ್ಷದ ರಾಂಚಿ ಕ್ರಿಕೆಟಿಗ ಧೋನಿ ಅವರನ್ನು ಬಿಸಿಸಿಐ 2019-20ರ ಒಪ್ಪಂದದಿಂದಲೂ ಕೈಬಿಟ್ಟಿತ್ತು. ಇದರ ಬೆನ್ನಲ್ಲೇ ಧೋನಿ ನಿವೃತ್ತಿಯ ಕುರಿತು ಪ್ರತಿಕ್ರಿಯೆ ನೀಡಿದ್ದ ಟೀಂ ಇಂಡಿಯಾ ಹೆಡ್‍ಕೋಚ್ ರವಿಶಾಸ್ತ್ರಿ, 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ತೋರುವ ಪ್ರದರ್ಶನ ಮತ್ತೆ ಟೀಂ ಇಂಡಿಯಾಗೆ ಧೋನಿ ಕಮ್‍ಬ್ಯಾಕ್ ಮಾಡುವ ಬಗ್ಗೆ ಸ್ಪಷ್ಟಪಡಿಸುತ್ತದೆ ಎಂದು ಹೇಳಿದ್ದರು.

    ಇತ್ತ ಸುನಿಲ್ ಜೋಶಿ ಅವರ ಆಯ್ಕೆ ಕುರಿತು ಪ್ರತಿಕ್ರಿಯೆ ನೀಡಿರುವ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಸದಸ್ಯ ಮದನ್ ಲಾಲ್, ಮುಂದಿನ 1 ವರ್ಷದವರೆಗೆ ಪ್ರಸ್ತುತ ಆಯ್ಕೆ ಸಮಿತಿಯ ಕಾರ್ಯವೈಖರಿಯನ್ನು ಸಿಎಸಿ ನಿರ್ಣಯಿಸುತ್ತದೆ. ನಂತರ ಒಪ್ಪಂದವನ್ನು ವಿಸ್ತರಿಸಲು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಕೆಲಸಕ್ಕಾಗಿ ನಾವು ಇಬ್ಬರು ಅತ್ಯುತ್ತಮ ವ್ಯಕ್ತಿಗಳಾದ ಸುನಿಲ್ ಜೋಶಿ ಹಾಗೂ ಹರ್ವಿಂದರ್ ಸಿಂಗ್ ಆಯ್ಕೆ ಮಾಡಿದ್ದೇವೆ. ಸುನಿಲ್ ಜೋಶಿ ಅವರ ಆಲೋಚನೆ ಬಹಳ ಸ್ಪಷ್ಟವಾಗಿದೆ. ವಿಶೇಷವಾಗಿ ಅವರು ಬಹಳ ಅನುಭವಿ ಆಟಗಾರ. ಬಾಂಗ್ಲಾದೇಶದ ಕ್ರಿಕೆಟ್ ತಂಡದೊಂದಿಗೆ ಅವರು ಕೆಲಸ ಮಾಡಿದ್ದಾರೆ ಎಂದು ಮದನ್ ಲಾಲ್ ತಿಳಿಸಿದ್ದರು.

    ಮಾಜಿ ಎಡಗೈ ಸ್ಪಿನ್ನರ್ ಸುನಿಲ್ ಜೋಶಿ ಭಾರತ ಪರ 15 ಟೆಸ್ಟ್ ಹಾಗೂ 69 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ನಲ್ಲಿ 41 ವಿಕೆಟ್ ಮತ್ತು ಏಕದಿನ ಪಂದ್ಯಗಳಲ್ಲಿ 69 ವಿಕೆಟ್‍ಗಳನ್ನು ಪಡೆದಿದ್ದಾರೆ. ಜೋಶಿ ಹೈದರಾಬಾದ್ ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ತಂಡದ ಕೋಚ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಬಾಂಗ್ಲಾದೇಶ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಉಳಿದಂತೆ ಹರ್ವಿಂದರ್ ಸಿಂಗ್ ಭಾರತದ ಪರ 3 ಟೆಸ್ಟ್ ಮತ್ತು 16 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು ಪಂಜಾಬ್ ಮತ್ತು ರೈಲ್ವೆ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ.

  • ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಕನ್ನಡಿಗ ಸುನಿಲ್ ಜೋಶಿ ಆಯ್ಕೆ

    ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಕನ್ನಡಿಗ ಸುನಿಲ್ ಜೋಶಿ ಆಯ್ಕೆ

    ಮುಂಬೈ: ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಕರ್ನಾಟಕದ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಆಯ್ಕೆ ಆಗಿದ್ದಾರೆ.

    ಸುನಿಲ್ ಜೋಶಿ ಜೊತೆಗೆ ಹರ್ವಿಂದರ್ ಸಿಂಗ್ ಅವರಿಗೂ ಆಯ್ಕೆ ಸಮಿತಿಯಲ್ಲಿ ಅವಕಾಶ ಸಿಕ್ಕಿದೆ. ಈಗಾಗಲೇ ದೇವಾಂಗ್ ಗಾಂಧಿ, ಶರಣ್‍ದೀಪ್ ಸಿಂಗ್, ಜತಿನ್ ಪರಾಂಜಪೆ ಆಯ್ಕೆ ಸಮಿತಿಯಲ್ಲಿದ್ದಾರೆ. ಕರ್ನಾಟಕದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್, ಕೇರಳದ ಮಾಜಿ ಸ್ಪಿನ್ನರ್ ಎಲ್ ಶಿವರಾಮಕೃಷ್ಣನ್ ಅವರನ್ನು ಹಿಂದಿಕ್ಕಿ ಜೋಷಿ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

    ಆಯ್ಕೆ ಸಮಿತಿಯ ಪ್ರಸ್ತುತ ಮೂವರು ಸದಸ್ಯರಾದ ಜತಿನ್ ಪರಂಜಪೆ (ಪಶ್ಚಿಮ ವಲಯ), ದೇವಾಂಗ್ ಗಾಂಧಿ (ಪೂರ್ವ ವಲಯ) ಮತ್ತು ಸರಂದೀಪ್ ಸಿಂಗ್ (ಉತ್ತರ ವಲಯ) ಮುಂದಿನ 1 ವರ್ಷದವರೆಗೆ ಈ ಹುದ್ದೆಯಲ್ಲಿ ಮುಂದುವರಿಸಲಿದ್ದಾರೆ.

    ಸುನಿಲ್ ಜೋಶಿ ಅವರ ಆಯ್ಕೆ ಕುರಿತು ಪ್ರತಿಕ್ರಿಯೆ ನೀಡಿರುವ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಸದಸ್ಯ ಮದನ್ ಲಾಲ್, ಮುಂದಿನ 1 ವರ್ಷದವರೆಗೆ ಪ್ರಸ್ತುತ ಆಯ್ಕೆ ಸಮಿತಿಯ ಕಾರ್ಯವೈಖರಿಯನ್ನು ಸಿಎಸಿ ನಿರ್ಣಯಿಸುತ್ತದೆ. ನಂತರ ಒಪ್ಪಂದವನ್ನು ವಿಸ್ತರಿಸಲು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಕೆಲಸಕ್ಕಾಗಿ ನಾವು ಇಬ್ಬರು ಅತ್ಯುತ್ತಮ ವ್ಯಕ್ತಿಗಳಾದ ಸುನಿಲ್ ಜೋಶಿ ಹಾಗೂ ಹರ್ವಿಂದರ್ ಸಿಂಗ್ ಆಯ್ಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ಸುನಿಲ್ ಜೋಶಿ ಅವರ ಆಲೋಚನೆ ಬಹಳ ಸ್ಪಷ್ಟವಾಗಿದೆ. ವಿಶೇಷವಾಗಿ ಅವರು ಬಹಳ ಅನುಭವಿ ಆಟಗಾರ. ಬಾಂಗ್ಲಾದೇಶದ ಕ್ರಿಕೆಟ್ ತಂಡದೊಂದಿಗೆ ಅವರು ಕೆಲಸ ಮಾಡಿದ್ದಾರೆ ಎಂದು ಮದನ್ ಲಾಲ್ ತಿಳಿಸಿದ್ದಾರೆ.

    ಎಡಗೈ ಸ್ಪಿನ್ನರ್ ಸುನಿಲ್ ಜೋಶಿ ಭಾರತಕ್ಕಾಗಿ 15 ಟೆಸ್ಟ್ ಹಾಗೂ 69 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‍ನಲ್ಲಿ 41 ವಿಕೆಟ್ ಮತ್ತು ಏಕದಿನ ಪಂದ್ಯಗಳಲ್ಲಿ 69 ವಿಕೆಟ್‍ಗಳನ್ನು ಪಡೆದಿದ್ದಾರೆ. ಜೋಶಿ ಹೈದರಾಬಾದ್ ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ತಂಡದ ಕೋಚ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಬಾಂಗ್ಲಾದೇಶ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿದ್ದರು. ಹರ್ವಿಂದರ್ ಸಿಂಗ್ ಭಾರತದ ಪರ 3 ಟೆಸ್ಟ್ ಮತ್ತು 16 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು ಪಂಜಾಬ್ ಮತ್ತು ರೈಲ್ವೆ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ.

    ಮದನ್ ಲಾಲ್, ಆರ್.ಪಿ.ಸಿಂಗ್ ಮತ್ತು ಸುಲಕ್ಷನ ನಾಯಕ್ ಅವರನ್ನೊಳಗೊಂಡ ಮೂವರು ಸದಸ್ಯರ ಸಮಿತಿಯು ಸಂದರ್ಶನಕ್ಕೆ ಐದು ಅಭ್ಯರ್ಥಿಗಳನ್ನು ಕಿರು-ಪಟ್ಟಿ ಮಾಡಿತ್ತು. ಇದರಲ್ಲಿ ಭಾರತದ ಮಾಜಿ ಬೌಲಿಂಗ್ ಕೋಚ್ ವೆಂಕಟೇಶ್ ಪ್ರಸಾದ್, ಮಾಜಿ ಸ್ಪಿನ್ನರ್ ರಾಜೇಶ್ ಚೌಹಾನ್ ಮತ್ತು ಕ್ರಿಕೆಟಿಗ, ನಿರೂಪಕ ಲಕ್ಷ್ಮಣ ಶಿವರಾಮಕೃಷ್ಣನ್ ಸೇರಿದ್ದರು. ಈ ಸಮಿತಿಯು ಅನುಭವಿ ಆಟಗಾರರಾದ ಅಜಿತ್ ಅಗರ್ಕರ್ ಮತ್ತು ನಯಾನ್ ಮೊಂಗಿಯಾ ಅವರನ್ನು ಸಂದರ್ಶನಕ್ಕೆ ಆಹ್ವಾನಿಸಲಿಲ್ಲ. ಆದರೆ ಅಗರ್ಕರ್ ಸಂಪೂರ್ಣವಾಗಿ ಆಯ್ಕೆ ಪ್ರಕ್ರಿಯೆಯಿಂದ ಹೊರಗುಳಿದಿಲ್ಲ ಎಂದು ಮಂಡಳಿಯ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

  • ದಾಳಿ ಮಾಡಿದ್ದು ನಿಜ, ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲ್ಸವಲ್ಲ: ಏರ್ ಚೀಫ್ ಮಾರ್ಷಲ್

    ದಾಳಿ ಮಾಡಿದ್ದು ನಿಜ, ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲ್ಸವಲ್ಲ: ಏರ್ ಚೀಫ್ ಮಾರ್ಷಲ್

    ಕೊಯಮತ್ತೂರು: ಬಾಲಕೋಟ್ ಮೇಲಿನ ಏರ್ ಸ್ಟ್ರೈಕ್ ನಡೆಸಿದ ಬಗ್ಗೆ ಎದ್ದ ಪ್ರಶ್ನೆಗಳಿಗೆ ವಾಯುಸೇವೆ ಮುಖ್ಯಸ್ಥ ಬಿ.ಎಸ್ ಧನೋವಾ ಕೊಯಮತ್ತೂರಲ್ಲಿ ಸುದ್ದಿಗೋಷ್ಠಿ ನಡೆಸಿ ಉತ್ತರ ನೀಡಿದ್ದಾರೆ.

    ಏರ್ ಸ್ಟ್ರೈಕ್ ನಡೆದ ಬಳಿಕ ಎಷ್ಟು ಉಗ್ರರು ಹತ್ಯೆಯಾಗಿದ್ದಾರೆ ಸಾಕ್ಷ್ಯ ನೀಡಿ ಎಂದಿದ್ದ ಪ್ರತಿಪಕ್ಷಗಳಿಗೆ ಉತ್ತರ ಎನ್ನುವಂತೆ ಬಿ. ಎಸ್ ಧನೋವಾ ಅವರು, ನೀಡಿದ್ದ ಗುರಿಗಳನ್ನು ವಾಯುಸೇನೆ ಹೊಡೆದು ಹಾಕಿದ್ದು ನಿಜ. ಆದರೆ ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲಸವಲ್ಲ. ಕಾಡಿನಲ್ಲಿ ಬಾಂಬ್ ಹಾಕುವ ಅಗತ್ಯ ನಮಗೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

    ನಮಗೆ ಏನು ಗುರಿ ನೀಡಲಾಗಿತ್ತೋ ಆ ಗುರಿಯನ್ನು ಹೊಡೆದಿದ್ದೇವೆ. ಅರಣ್ಯದಲ್ಲಿ ಬಾಂಬ್ ಹಾಕಿದ್ದರೆ ಪಾಕಿಸ್ತಾನ ಯಾಕೆ ನಮ್ಮ ಮೇಲೆ ದಾಳಿ ನಡೆಸಬೇಕಿತ್ತು. ಅವರ ಪ್ರಧಾನಿ ಏಕೆ ಪ್ರತಿಕ್ರಿಯೆ ನೀಡುತ್ತಿದ್ದರು ಎಂದು ಪ್ರಶ್ನಿಸಿದರು.

    ನೀಡಿದ್ದ ಗುರಿ ಸರಿಯಾಗಿ ದಾಳಿ ಮಾಡಿದ್ದೇವಾ ಇಲ್ಲವೋ ಎನ್ನುವುದು ಮಾತ್ರ ನಮ್ಮ ಕೆಲಸ. ಅದನ್ನು ಹೊರತು ಪಡಿಸಿ ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲಸವಲ್ಲ. ಆ ಕೆಲಸ ಏನಿದ್ದರೂ ಸರ್ಕಾರ ಮಾಡುತ್ತದೆ ಎಂದರು.

    ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಬಗ್ಗೆ ಮಾತನಾಡಿ, ಅಭಿನಂದನ್ ಅವರ ಆರೋಗ್ಯ ಸ್ಥಿತಿ ನೋಡಿ ಅವರು ಮತ್ತೆ ಕೆಲಸಕ್ಕೆ ಹಾಜರಾಗಬಹುದಾ ಇಲ್ಲವಾ ಎಂಬುದು ತಿಳಿಯಲಿದೆ. ಅವರು ಸಂಪೂರ್ಣವಾಗಿ ಫಿಟ್ ಆಗಿದ್ದರೆ ಅವರು ಪೈಲಟ್ ಆಗಿ ಮುಂದುವರಿಯಬಹುದು ಎಂದು ಹೇಳಿದರು.

    ನಾವು ದಾಳಿಗೆ ಸಿದ್ಧರಾದಾಗ ಯಾವ ವಿಮಾನ ಬೇಕು ಯಾವುದು ಬೇಡ ಎನ್ನುವುದನ್ನು ಪ್ಲಾನ್ ಮಾಡುತ್ತೇವೆ. ಶತ್ರುಗಳು ನಮ್ಮ ಮೇಲೆ ಬಂದಾಗ ಯಾವ ವಿಮಾನವನ್ನು ಕಳುಹಿಸಬೇಕು ಎನ್ನುವುದನ್ನು ನಾವು ಪ್ಲಾನ್ ಮಾಡಲು ಸಾಧ್ಯವಿಲ್ಲ. ನಮ್ಮ ಬಳಿ ಇರುವ ಎಲ್ಲ ವಿಮಾನಗಳು ಶತ್ರುಗಳನ್ನು ನಾಶ ಮಾಡುವ ಸಾಮಥ್ರ್ಯವನ್ನು ಹೊಂದಿದೆ ಎಂದರು.

    ನಮ್ಮ ಮಿಗ್-21 ಜೆಟ್ ಯುದ್ಧ ವಿಮಾನ ಸಮರ್ಥವಾಗಿದೆ. ಮಿಗ್-21 ಅದ್ಭುತವಾದ ಏರ್‍ಕ್ರಾಫ್ಟ್. ಈ ಯುದ್ಧ ವಿಮಾನವನ್ನು ಅಪ್‍ಗ್ರೇಡ್ ಮಾಡಲಾಗಿದೆ. ಈ ವಿಮಾನದಲ್ಲಿ ಅದ್ಭುತವಾದ ರಡಾರ್ ಇದೆ ಹಾಗೂ ಏರ್ ಟು ಏರ್ ಮಿಸೈಲ್ ವೆಪನ್ ಸಿಸ್ಟಮ್ ಇದೆ ಎಂದು ತಿಳಿಸಿದ್ದಾರೆ.

    ಪ್ರಸ್ತುತ ಗಡಿಯಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಉತ್ತರಿಸಿದರು.

    ನಮ್ಮ ವಿರುದ್ಧ ಮಾಡಿದ ದಾಳಿ ವೇಳೆ ಅವರು ಎಫ್ 16 ವಿಮಾನವನ್ನು ಬಳಸಿದ್ದಾರೆ. ಯಾಕೆಂದರೆ ಎಫ್ 16 ನಲ್ಲಿ ಬಳಸುವ ಎಎಂಆರ್‍ಎಎಎಂ ಕ್ಷಿಪಣಿ ನಮ್ಮ ಭೂ ಪ್ರದೇಶದಲ್ಲಿ ಬಿದ್ದಿದೆ. ಅವರ ಎಫ್ 16 ವಿಮಾನವನ್ನು ನಾವು ಹೊಡೆದು ಹಾಕಿದ್ದೇವೆ ಎಂದು ತಿಳಿಸಿದರು.

    ಅಮೆರಿಕ ಮತ್ತು ಪಾಕಿಸ್ತಾನ ಮಧ್ಯೆ ಯಾವ ರೀತಿಯ ಒಪ್ಪಂದ ನಡೆದಿದೆ ಎನ್ನುವುದು ಗೊತ್ತಿಲ್ಲ. ಬೇರೆ ದೇಶದ ವಿರುದ್ಧದ ಎಫ್ 16 ಬಳಕೆ ಮಾಡಬಾರದು ಎನ್ನುವ ಒಪ್ಪಂದ ಇದ್ದರೆ ಪಾಕಿಸ್ತಾನ ಉಲ್ಲಂಘನೆ ಮಾಡಿದೆ ಎಂದು ಹೇಳಬಹುದು ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರತ ಸರ್ಕಾರದ ಪ್ರಮುಖ ಬೇಡಿಕೆ ಈಡೇರಿಸಿದ ವಾಟ್ಸಪ್

    ಭಾರತ ಸರ್ಕಾರದ ಪ್ರಮುಖ ಬೇಡಿಕೆ ಈಡೇರಿಸಿದ ವಾಟ್ಸಪ್

    ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ ಆದ ವಾಟ್ಸಪ್ ಭಾರತದ ಮುಖ್ಯಸ್ಥರನ್ನಾಗಿ ಅಭಿಜಿತ್ ಬೋಸ್ ರವರನ್ನು ಆಯ್ಕೆ ಮಾಡಿದೆ.

    ಅಭಿಜಿತ್ ಬೋಸ್ ಮುಂದಿನ ವರ್ಷದಲ್ಲಿ ಅಧಿಕಾರವನ್ನು ಸ್ವೀಕರಿಸಲಿದ್ದು, ಕ್ಯಾಲಿಫೋರ್ನಿಯಾದ ಹೊರಗಿನ ವಾಟ್ಸಪ್ ತಂಡವನ್ನು ಪೂರ್ಣ ಪ್ರಮಾಣದಲ್ಲಿ ನಿರ್ವಹಿಸುವ ಭಾರತದ ಪ್ರಥಮ ವ್ಯಕ್ತಿಯಾಗಿದ್ದಾರೆ. ಈ ಮೂಲಕ ಭಾರತ ಸರ್ಕಾರ ವಾಟ್ಸಪ್ ಸಂಸ್ಥೆಯ ಮುಂದಿಟ್ಟ ಬೇಡಿಕೆಗಳಲ್ಲಿ ಮಹತ್ವಪೂರ್ಣವಾದ ಬೇಡಿಕೆಯೊಂದು ಈಡೇರಿದಂತಾಗಿದೆ.

    ಬೋಸ್ ಹಾಗೂ ಅವರ ತಂಡ ಭಾರತದ ದೊಡ್ಡ ಹಾಗೂ ಸಣ್ಣ ಮಾದರಿಯ ವ್ಯವಹಾರಗಳೆರಡರ ಕುರಿತು ಗ್ರಾಹಕರೊಂದಿಗೆ ಮಾತುಕತೆಯನ್ನು ನಡೆಸುತ್ತದೆಂದು ಕಂಪನಿ ತಿಳಿಸಿದೆ.

    ವಾಟ್ಸಪ್ ಭಾರತದ ಆಡಳಿತ ನೀತಿಗೆ ಬದ್ಧವಾಗಿದೆ. ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಡಿಜಿಟಲ್ ಆರ್ಥಿಕತೆಯಲ್ಲಿ ಜನರನ್ನು ಸಂಪರ್ಕಿಸಲು ಮತ್ತು ಬೆಂಬಲಿಸಲು ಸಹಾಯ ಮಾಡುವ ಮೂಲಕ ನಮ್ಮ ಬದ್ಧತೆಯನ್ನು ಉಳಿಸಿಕೊಳ್ಳುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಯಶಸ್ವಿ ವಾಣಿಜ್ಯೋದ್ಯಮಿಯಾಗಿ, ಭಾರತದಾದ್ಯಂತ ಉದ್ಯಮಗಳಿಗೆ ಸೇವೆ ಸಲ್ಲಿಸಲು ಬೋಸ್ ಅರ್ಥಪೂರ್ಣವಾದ ಪಾಲುದಾರಿಕೆಗಳನ್ನು ನಿರ್ಮಿಸುತ್ತಾರೆಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕರಿ ಮ್ಯಾಟ್ ಐಡಿಮಾ ಹೇಳಿದ್ದಾರೆ.

    2011ರಲ್ಲಿ ಸ್ಥಾಪನೆಯಾದ ಎಲೆಕ್ಟ್ರಾನಿಕ್ ಪಾವತಿ ಎಜಿಟ್ಯಾಬ್ ಸಂಸ್ಥೆಯಲ್ಲಿ ಸಹ ಸಂಸ್ಥಾಪಕ ಹಾಗೂ ಸಿಇಓ ಆಗಿ ಅಭಿಜಿತ್ ಬೋಸ್ ಅವರನ್ನು ನೇಮಕ ಮಾಡಿದೆ.

    ಸುಳ್ಳು ಸುದ್ದಿ ಮತ್ತು ಗುಂಪು ಹತ್ಯೆ ವಿಚಾರಗಳು ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಫೇಸ್ ಬುಕ್ ಮಾಲೀಕತ್ವದ ವಾಟ್ಸಪ್ ಗೆ ಎರಡು ಲೀಗಲ್ ನೋಟಿಸ್ ಕಳುಹಿಸಿತ್ತು. ಸುಳ್ಳು ಸುದ್ದಿಗಳನ್ನು ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಸುದ್ದಿ, ವಿಡಿಯೋಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿತ್ತು. ಅಷ್ಟೇ ಅಲ್ಲದೇ ಸಮಸ್ಯೆಗಳನ್ನು ಬಗೆ ಹರಿಸಲು ಸ್ಥಳೀಯ ವ್ಯಕ್ತಿಗಳನ್ನು ನೇಮಿಸಬೇಕು. ಈ ಸೂಚನೆಯನ್ನು ನಿರ್ಲಕ್ಷಿಸಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಭಾರತ ಸರ್ಕಾರ ವಾಟ್ಸಪ್ ಎಚ್ಚರಿಕೆ ನೀಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರಾಯಚೂರಿಗೆ ಆಗಮಿಸಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

    ರಾಯಚೂರಿಗೆ ಆಗಮಿಸಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

    ರಾಯಚೂರು: ನಗರದಲ್ಲಿ ಹಮ್ಮಿಕೊಂಡಿದ್ದ ಆರ್‌ಎಸ್‌ಎಸ್‌ ಬೈಠಕ್ ಹಾಗೂ ಕಾರ್ಯಕಾರಣಿ ಸಭೆಗೆ ಮುಖ್ಯಸ್ಥ ಮೋಹನ್ ಭಾಗವತ್‍ರವರು ದೆಹಲಿಯಿಂದ ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ನಗರಕ್ಕೆ ಆಗಮಿಸಿದ್ದಾರೆ.

    ಮೋಹನ್ ಭಾಗವತ್‍ರವರಿಗೆ ಝಡ್ ಫ್ಲಸ್ ಹಾಗೂ ಸಿಐಎಸ್‍ಎಫ್ ನಿಂದ ವಿಶೇಷ ಭದ್ರತೆ ನೀಡಲಾಗಿದ್ದು, ಮೂರು ದಿನಗಳ ರಾಯಚೂರು ಹಾಗೂ ಎರಡು ದಿನಗಳ ಮಂತ್ರಾಲಯದಲ್ಲಿ ನಡೆಯುವ ಆರ್‌ಎಸ್‌ಎಸ್‌ ಬೈಠಕ್ ಹಾಗೂ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೋಹನ್ ಭಾಗವತ್‍ರವರು ನಗರದ ಹಿಂದೂ ವರ್ಧಮಾನ ಶಾಲೆ ಪಕ್ಕದ ಲಾಲ್ ಜೀ ಪಟೇಲ್ ಎಂಬವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದನ್ನೂ ಓದಿ: ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿಗೆ ಆಹ್ವಾನ?

    ಇಂದಿನಿಂದ ನಡೆಯಲಿರುವ ಮೂರು ದಿನಗಳ ಕಾರ್ಯಕಾರಣಿ ಸಭೆಯನ್ನು ಲಾಲ್ ಜೀಯವರ ಮನೆಯಲ್ಲೇ ನಡೆಸಲು ಸಂಘ ತೀರ್ಮಾನಿದೆ. ಅಲ್ಲದೇ ಸೆಪ್ಟೆಂಬರ್ 1 ರಿಂದ ಮಂತ್ರಾಲಯದಲ್ಲಿ ನಡೆಯುವ ಎರಡು ದಿನಗಳ ಸಭೆಯನ್ನು ತಿರುಮಲ ವಸತಿ ಗೃಹದಲ್ಲಿ ನಡೆಸಲು ತೀರ್ಮಾನಿಸಿದ್ದಾರೆ. ಮಂತ್ರಾಲಯದಲ್ಲಿ ನಡೆಯುವ ಬೈಠಕ್‍ಗೆ ಬಿಜೆಪಿ ರಾಷ್ಯಾಧ್ಯಕ್ಷ ಅಮಿತ್ ಶಾ ಕೂಡ ಆಗಮಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶ್ರೀರಾಮನ ಬಗ್ಗೆ ಕೆ.ಎಸ್ ಭಗವಾನ್ ಹೇಳಿಕೆಗೆ ಮುತಾಲಿಕ್ ಹೀಗಂದ್ರು

    ಶ್ರೀರಾಮನ ಬಗ್ಗೆ ಕೆ.ಎಸ್ ಭಗವಾನ್ ಹೇಳಿಕೆಗೆ ಮುತಾಲಿಕ್ ಹೀಗಂದ್ರು

    ಬೆಳಗಾವಿ: ಮೈಸೂರಿನಲ್ಲಿ ಸಾಹಿತಿ ಭಗವಾನ್ ರಾಮನ ಕುರಿತು ನೀಡಿರುವ ಹೇಳಿಕೆ ರಾಮಾಯಣವನ್ನು ಬರೆದಿರುವ ವಾಲ್ಮೀಕಿ ಅವರಿಗೆ ಮಾಡಿರುವ ಅಪಮಾನ. ಭಗವಾನ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಗ್ರಹಿಸಿದ್ದಾರೆ.

    ಭಗವಾನ್ ಹೇಳಿಕೆ ಕುರಿತು ಇಂದು ಪ್ರತಿಕ್ರಿಯಿಸಿದ ಮುತಾಲಿಕ್, ರಾಮನ ಬಗ್ಗೆ ಕೀಳಾಗಿ ಮಾತನಾಡಿರುವ ಭಗವಾನ್ ರಾಮಾಯಣವನ್ನು ಬರೆದಿರುವ ವಾಲ್ಮೀಕಿಗೆ ಅಪಮಾನವನ್ನು ಮಾಡಿದ್ದಾರೆ. ವಾಲ್ಮೀಕಿ ಜನಾಂಗದವರು ಅವರ ವಿರುದ್ಧ ಪ್ರಕರಣವನ್ನು ದಾಖಲಿಸಬೇಕು. ದಲಿತ ಜನಾಂಗಕ್ಕೆ ಅಪಮಾನ ಮಾಡಿದ್ದು ಸರಿಯಲ್ಲ. ಭಗವಾನ್ ಭಗವಾನ ಅಲ್ಲ ಅವನೊಬ್ಬ ಸೈತಾನ್ ಎಂದು ವಾಗ್ದಾಳಿ ನಡೆಸಿದರು.

    ಇದೇ ಸಂದರ್ಭದಲ್ಲಿ ಮಹಿಷ ದಸರಾ ಆಚರಣೆ ಮಾಡುವವರು ರಕ್ಷಸ ಕುಲದವರು, ರಾವಣನ ವಂಶಸ್ಥರು. ಮಹಿಷ ದಸರಾವನ್ನು ಆಚರಣೆ ಮಾಡುವುದಕ್ಕೆ ಶ್ರೀರಾಮಸೇನೆಯ ವಿರೋಧವಿದೆ ಎಂದು ಹೇಳಿದರು. ರೋಹಿಂಗ್ಯಾ ಮುಸ್ಮಿಮರಿಗೆ ಭಾರತದಲ್ಲಿ ಆಶ್ರಯವನ್ನು ನೀಡುವುದಕ್ಕೆ ಭಾರತದ ಮುಸ್ಮಿಮರು ಒತ್ತಾಯ ಮಾಡುವುದು ಮೂರ್ಖತನ ಅಂದ್ರು.

    ಎರಡು ದಿನಗಳ ಹಿಂದೆ ಮೈಸೂರಿನ ದಸರಾ ಪ್ರಯುಕ್ತ ನಡೆದ ವಿಶಿಷ್ಟ ಕವಿ ಗೋಷ್ಠಿಯಲ್ಲಿ ಪ್ರೋ. ಕೆಎಸ್ ಭಗವಾನ್ ಮಾತನಾಡಿ, ರಾಮನ ನಿಜ ಬಣ್ಣ ವಾಲ್ಮೀಕಿ ಬರೆದಿರುವ ರಾಮಾಯಾಣದಲ್ಲಿ ತಿಳಿದು ಬಂದಿದೆ. ವಾಲ್ಮೀಕಿ ಎಲ್ಲಿಯೂ ರಾಮನನ್ನು ದೇವರು ಎಂದು ಕರೆದಿಲ್ಲ. ಬ್ರಾಹ್ಮಣರ ಮಾತು ಕೇಳಿ ರಾಮ ಶಂಭೂಕನ ತಲೆಯನ್ನು ಕತ್ತರಿಸಿದ. ತುಂಬು ಗರ್ಭಿಣಿಯನ್ನು ಕಾಡಿಗೆ ಕಳುಹಿಸಿದ. ಇಂತಹ ವ್ಯಕ್ತಿಗೆ ರಾಮಮಂದಿರ ನಿರ್ಮಿಸುವ ಮೊದಲು ಯೋಚಿಸಿ ಎಂದು ಹೇಳಿ ವಿವಾದದ ಕಿಡಿ ಹಬ್ಬಿಸಿದ್ದರು.