Tag: ಮುಜರಾಯಿ ದೇವಸ್ಥಾನ

  • ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣ: ರಾಮಲಿಂಗಾರೆಡ್ಡಿ

    ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣ: ರಾಮಲಿಂಗಾರೆಡ್ಡಿ

    ಬೆಂಗಳೂರು : ಮುಜರಾಯಿ ದೇವಾಲಯಗಳಲ್ಲಿ (Muzrai Temple) ಬಾಕಿ ಇರುವ ಆಸ್ತಿ ಇಂಡೀಕರಣವನ್ನು ಇನ್ನೊಂದು ವರ್ಷದಲ್ಲಿ ಪೂರ್ಣ ಮಾಡುವುದಾಗಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಭರವಸೆ ನೀಡಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬರ್ ಈ ಬಗ್ಗೆ ಪ್ರಶ್ನೆ ಕೇಳಿದರು. ಇದನ್ನೂ ಓದಿ: ಚಲನಚಿತ್ರೋತ್ಸವಕ್ಕೆ ಎಲ್ಲರಿಗೂ ಆಹ್ವಾನ ಹೋಗಿದೆ: ಸಾಧು ಕೋಕಿಲ

     

    ಇದಕ್ಕೆ ಉತ್ತರ ನೀಡಿದ ಸಚಿವ ರಾಮಲಿಂಗಾರೆಡ್ಡಿ,ಮುಜರಾಯಿ ದೇವಾಲಯಗಳ ಆಸ್ತಿ ರಕ್ಷಣೆ ಮತ್ತು ಇಂಡೀಕರಣ ಮಾಡುವ ಪ್ರಕ್ರಿಯೆ ಶುರುವಾಗಿದೆ. 2023 ಮತ್ತು 2024 ರಲ್ಲಿ 11,498 ಎಕರೆ ಆಸ್ತಿಯನ್ನ ದೇವಾಲಯಗಳ (Temple) ಹೆಸರಿಗೆ ಪಹಣಿ ಇಂಡೀಕರಿಸಲಾಗಿದೆ. ಸುಮಾರು 15,413 ಎಕರೆ ಆಸ್ತಿಯನ್ನು ದೇವಾಲಯಗಳನ್ನು ದೇವಾಲಯಗಳ ಹೆಸರಿಗೆ ಇಂಡೀಕರಣ ಮಾಡಲಾಗಿದೆ ಎಂದು ತಿಳಿಸಿದರು.

    ಇನ್ನೂ 20 ಸಾವಿರ ಎಕರೆ ದೇವಾಲಯಗಳ ಜಾಗ ಇಂಡೀಕರಣ ಮಾಡಬೇಕು.ಈಗಾಗಲೇ ಪ್ರಕ್ರಿಯೆ ಶುರುವಾಗಿದೆ‌. ಇನ್ನೊಂದು ವರ್ಷದಲ್ಲಿ ಬಾಕಿ ಇರೋ ಎಲ್ಲಾ ದೇವಾಲಯಗಳ ಆಸ್ತಿ ಇಂಡೀಕರಣ ಮಾಡುತ್ತೇವೆ ಅಂತ ಭರವಸೆ ನೀಡಿದರು.

     

  • ಮತ್ತೆ ಮುಖ್ಯಮಂತ್ರಿಯಾಗಿ – ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ 70ಕ್ಕೂ ಹೆಚ್ಚು ಅರ್ಚಕರು

    ಮತ್ತೆ ಮುಖ್ಯಮಂತ್ರಿಯಾಗಿ – ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ 70ಕ್ಕೂ ಹೆಚ್ಚು ಅರ್ಚಕರು

    ಬೆಂಗಳೂರು: 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರನ್ನ (Siddaramaiah) ಆಶೀರ್ವದಿಸಲು ಆಗಮಿಸಿದ್ದ ಅರ್ಚಕರು ಮತ್ತೆ ಮುಖ್ಯಂತ್ರಿಯಾಗುವಂತೆ (Chief Minister) ಆಶೀರ್ವಾದಿಸಿದ್ದಾರೆ.

    ಅಖಿಲ ಕರ್ನಾಟಕ ಮುಜರಾಯಿ ದೇವಾಲಯಗಳ (Muzarai Temple) ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಮುಜರಾಯಿ ದೇವಾಲಯಗಳಿಂದ 70ಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. ಇದನ್ನೂ ಓದಿ: ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್‌ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ

    ಇಲ್ಲಿನ ಶಿವಾನಂದ ವೃತ್ತದ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದ 70ಕ್ಕೂ ಹೆಚ್ಚು ಅರ್ಚಕರು (Priests), ಎಲ್ಲಾ ದೇವಸ್ಥಾನಗಳ (Temple) ಆಶೀರ್ವಾದ ನಿಮಗಿದೆ. ನೀವು ಮತ್ತೆ ಮುಖ್ಯಮಂತ್ರಿಯಾಗಿ ಎಂದು ಆಶಿಸಿದ್ದಾರೆ. ಇದನ್ನೂ ಓದಿ: ಲವರ್ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ

    ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ (Congress), ಬಿಜೆಪಿ (BJP), ಜೆಡಿಎಸ್‌ (JDS)ನಿಂದ ಭರ್ಜರಿ ತಯಾರಿ ನಡೆಯುತ್ತಿವೆ. ಬರುವ ದಿನಗಳಲ್ಲಿ ರಾಜ್ಯದಲ್ಲಿ ಸಮಾವೇಶಗಳ ಪರ್ವ ಆರಂಭವಾಗಿದೆ. ಎಲ್ಲ ಪಕ್ಷಗಳು ರಾಜಕೀಯ ಘಟಾನುಘಟಿಗಳಿಗೆ ಸಂಘಟನೆಯ ಉಸ್ತುವಾರಿ ನೀಡಿದ್ದು ಪಕ್ಷ ಸಂಘಟನೆಯ ತಯಾರಿ ನಡೆಸಿವೆ. ಇದೇ ಸಂದರ್ಭದಲ್ಲಿ ಅರ್ಚಕರು ಸಿದ್ದರಾಮಯ್ಯರನ್ನ ಬೆಂಬಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಜರಾಯಿ ದೇಗುಲಗಳಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ಗಿಫ್ಟ್ – ಮಹಿಳೆಯರಿಗೆ ಬಳೆ, ಅರಿಶಿನ-ಕುಂಕುಮ

    ಮುಜರಾಯಿ ದೇಗುಲಗಳಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ಗಿಫ್ಟ್ – ಮಹಿಳೆಯರಿಗೆ ಬಳೆ, ಅರಿಶಿನ-ಕುಂಕುಮ

    ಬೆಂಗಳೂರು: ಈ ಬಾರಿಯ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಕಸ್ತೂರಿ ಅರಿಶಿನ-ಕುಂಕುಮ, 6 ಹಸಿರು ಬಳೆಗಳ ವಿತರಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ಹೊರಡಿಸಿದ್ದಾರೆ.

    ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಬರುವ ಮಹಿಳೆಯರಿಗೆ ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಸುತ್ತೋಲೆಯನ್ನು ಹೊರಡಿಸಿದ್ದಾರೆ.  ಇದನ್ನೂ ಓದಿ: ಸಿದ್ದರಾಮಯ್ಯ ಅಭಿಮಾನಿಯಿಂದ ಒಂದೂವರೆ ಕೆ.ಜಿ ತೂಕದ ಬೆಳ್ಳಿ ಮೂರ್ತಿ ಗಿಫ್ಟ್!

    ಮುಜರಾಯಿ ವ್ಯಾಪ್ತಿಯ ದೇಗುಲಗಳು: ಬಸವನಗುಡಿಯ ದೊಡ್ಡಗಣಪತಿ ದೇವಾಲಯ, ಮಹಾಲಕ್ಷ್ಮೀಪುರ ಬಡಾವಣೆಯ ಶ್ರೀ ಪ್ರಸನ್ನ ವೀರಾಂಜನೇಯಸ್ವಾಮಿ ದೇವಾಲಯ, ಜಯನಗರ 4ನೇ ಬಡಾವಣೆಯ ಶ್ರೀ ವಿನಾಯಕ ಸ್ವಾಮಿ ದೇವಾಲಯ, ಗವೀಪುರಂ ರಸ್ತೆಯ ಗವಿಗಂಗಾಧರೇಶ್ವರಸ್ವಾಮಿ ದೇವಾಲಯ, ವಸಂತಪುರದ ಶ್ರೀ ವಸಂತವಲ್ಲಭರಾಯಸ್ವಾಮಿ ದೇವಾಲಯ, ಯಲಹಂಕದ ಗುಂಡಾಂಜನೇಯ ಸ್ವಾಮಿ ದೇವಾಲಯ, ಕೊಡಿಗೇಹಳ್ಳಿ ಗೇಟ್.

    ಕೆ.ಆರ್ ರಸ್ತೆಯ ಕೋಟೆ ಶ್ರೀ ವೆಂಕಟರಮಣಸ್ವಾಮಿ ದೇವಾಲಯ, ಬೆಂಗಳೂರು ದಕ್ಷಿಣದಲ್ಲಿರುವ ಕುಮಾರಸ್ವಾಮಿ ದೇವಾಲಯ, ಹಲಸೂರಿನ ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನ, ಸ್ವಾಮಿ ವಿವೇಕಾನಂದ ರಸ್ತೆಯಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ಮಲ್ಲೇಶ್ವರಂನಲ್ಲಿರುವ ಶ್ರೀ ವೇಣುಗೋಪಾಲ ಕೃಷ್ಣಸ್ವಾಮಿ ದೇವಾಲಯ, ಮಲ್ಲೇಶ್ವರಂನಲ್ಲಿರುವ ಶ್ರೀ ಲಕ್ಮೀನರಸಿಂಹಸ್ವಾಮಿ ದೇವಾಲಯ, ಬಳೆಪೇಟೆ ಮುಖ್ಯ ರಸ್ತೆಯಲ್ಲಿರುವ ಶ್ರೀ ಲಕ್ಮೀನರಸಿಂಹಸ್ವಾಮಿ ದೇವಾಲಯ, ಮಲ್ಲೇಶ್ವರಂ ಸಂಪಿಗೆ ರಸ್ತೆಯಲ್ಲಿರುವ ಶ್ರೀ ಕಾಡುಮಲ್ಲೇಶ್ವರಸ್ವಾಮಿ ದೇವಾಲಯ.

    Live Tv
    [brid partner=56869869 player=32851 video=960834 autoplay=true]