Tag: ಮುಡಾ ಅಕ್ರಮ ಕೇಸ್‌

  • MUDA Case | ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ – ಹೆಚ್‌ಡಿಕೆ

    MUDA Case | ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ – ಹೆಚ್‌ಡಿಕೆ

    – ಇಡಿ ಸೀಳುನಾಯಿ ಆದ್ರೆ ನಿಮ್ಮ ಎಸ್‌ಐಟಿ ಏನು? ಅಂತ ಪ್ರಶ್ನೆ

    ಬೆಂಗಳೂರು: ಮುಡಾ ಕೇಸ್‌ನಲ್ಲಿ (MUDA Case) ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

    ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಡಾ ಅಕ್ರಮದ ಬಗ್ಗೆ ಇಡಿ ಲೋಕಾಯುಕ್ತಗೆ ಪತ್ರ ಬರೆದಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಈ ಸರ್ಕಾರ ಮತ್ತು ಸಚಿವರು ಆಲಿಬಾಬಾ 40 ಕಳ್ಳರಿ ರೀತಿ. ಇಡಿ ಪತ್ರಕ್ಕೂ ಕೇಂದ್ರ ಸರ್ಕಾರಕ್ಕೂ ಏನ್ ಸಂಬಂಧ? ಮುಡಾ ಹಗರಣದ ಬಗ್ಗೆ ಹೈಕೋರ್ಟ್‌ನಲ್ಲಿ ತನಿಖೆಗೆ ಆದೇಶ ಆಗಿದೆ. ಅದರ ಮೇಲೆ ತನಿಖೆ ನಡೆಯಿತ್ತಿದೆ. ಇಡಿಯವರಿಗೆ ಕೇಂದ್ರ ಸರ್ಕಾರ (Central Government) ಸೂಚನೆ ಕೊಟ್ಟಿಲ್ಲ. ಮುಡಾ ಕೇಸ್‌ನಲ್ಲಿ ರಾಜ್ಯಪಾಲರಿಗೆ ದೂರು ನೀಡಿರೋರೆ ಇಡಿಗೂ (ED) ದೂರು ಕೊಟ್ಟಿದ್ದಾರೆ. ಮುಡಾದಲ್ಲಿ ಹಣಕಾಸು ವ್ಯವಹಾರ ನಡೆದಿರೋ ಹಿನ್ನೆಲೆಯಲ್ಲಿ ದೂರು ನೀಡಿದ್ದಾರೆ. ಅದರ ಮೇಲೆ ಇಡಿ ತನಿಖೆ ನಡೆಸಿದೆ, ಮಾಹಿತಿ ಕೊಟ್ಟಿದೆ ಎಂದು ಹೇಳಿದ್ದಾರೆ.

    ಲೋಕಾಯುಕ್ತ ಅಧಿಕಾರಿಗಳು (Lokayukta Officers) ಸರ್ಕಾರದ ಅಧೀನದಲ್ಲಿ ಬರೋರು. ಇವತ್ತು ಎಷ್ಟು ಜನ ಮಂತ್ರಿಗಳು ಸಮಜಾಯಿಷಿ ಕೊಡ್ತಿದ್ದಾರೆ. ಇಡಿಯನ್ನ ಕೃಷ್ಣಭೈರೇಗೌಡರು ಸೀಳು ನಾಯಿ ಅಂದಿದ್ದಾರೆ. ಅವರಿಗೆ ಹ್ಯಾಟ್ಸ್ ಆಫ್ ಮಾಡೋಣ. ಇಡಿ ಸೀಳು ನಾಯಿ ಆದರೆ ನಿಮ್ಮ ಎಸ್‌ಐಟಿ ಏನು? ಎಸ್‌ಐಟಿ ಅವರು ಏನು ಮಾಡಿದ್ರು. ನಿಮ್ಮ ಸರ್ಕಾರದಲ್ಲಿ ಎಷ್ಟು ಎಸ್‌ಐಟಿ (SIT) ಮಾಡಿದ್ದೀರಾ? 17-18 ಎಸ್‌ಐಟಿ ಮಾಡಿದ್ದೀರಾ. ಸಹೋದರ ರೇವಣ್ಣನ ಕೇಸ್ ನಲ್ಲಿ ಯಾವ ರೀತಿ ನಡೆದುಕೊಂಡ್ರಿ. ಮಾಜಿ ಪ್ರಧಾನಿಗಳ ಮನೆಗೆ ಪೊಲೀಸರನ್ನ ನುಗ್ಗಿಸಿ ರೇವಣ್ಣನನ್ನ ಅರೆಸ್ಟ್ ಮಾಡಿಸಿದ್ರಿ. ನಿಮಗೆ ಯಾವ ನೈತಿಕತೆ ಇದೆ? ರೇವಣ್ಣ ನಿಮಗೆ ಏನ್ ಮಾಡಿದ್ದ? 5 ವರ್ಷ ಕೇಸನ್ನ ಯಾರಿಂದಲೋ ದೂರು ಪಡೆದು ಏನೇನು ನಡೆಸಿದ್ದೀರಾ ನೀವು, ಎಲ್ಲವೂ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಇನ್ನೂ ಹಾಸನ ಜನಕಲ್ಯಾಣ ಸಮಾವೇಶ ಕುರಿತು ಮಾತನಾಡಿ, ಹಾಸನದಲ್ಲಿ ಅದೇನೋ ಸಮಾವೇಶ ಮಾಡ್ತಿದ್ದಾರಂತೆ, ಸಾಂತ್ವನ ಹೇಳೋಕೆ ಹೋಗ್ತಾರಂತೆ. ಯಾರಿಗೆ ಸಾಂತ್ವನ ಹೇಳ್ತೀಯಪ್ಪ? ಅ ಹೆಣ್ಣು ಮಕ್ಕಳ ಫೋಟೋ ಹಾಕಿ ಬೀದಿ ಬೀದಿಗಳಲ್ಲಿ ಪ್ರಚಾರ ಮಾಡಿದ್ರಿ. ಯಾರನ್ನಾದ್ರು ಒಬ್ಬರನ್ನ ಅರೆಸ್ಟ್ ಮಾಡಿದ್ರಾ? ಆ ವಿಡಿಯೋ ಬಿಟ್ಟೋರನ್ನ ಅರೆಸ್ಟ್ ಮಾಡಿದ್ರಾ? ಇದು ನಿಮ್ಮ ಎಸ್‌ಐಟಿ ತನಿಖೆನಾ? ಇದೆಲ್ಲದ್ದಕ್ಕೂ ಕಾಲ ಒಂದು ದಿನ ಉತ್ತರ ಕೊಡುತ್ತೆ. ಸತ್ಯಗಳು ಹೊರಗೆ ಬರುತ್ತೆ. ಕೃಷ್ಣಭೈರೇಗೌಡರೇ ನೀವು ಹೇಗೆ ನಡೆದುಕೊಳ್ತೀರಾ, ನಿಮ್ ಸರ್ಕಾರ ಹೇಗೆ ನಡೆದುಕೊಳ್ತಿದೆ, ಪರಮೇಶ್ವರ್ ಹೇಳಿಕೆ ನೋಡಿದೆ. ಇವರನ್ನು ದೇವರೇ ಕಾಪಾಡಬೇಕು. ಆಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತಾಗಿದೆ ಇವರದ್ದು. ಹೇಳಿಕೆ ಕೊಡೋಕೆ ಸಚಿವರು ಕ್ಯೂ ನಿಂತಿದ್ದಾರೆ. ಈ ರಾಜ್ಯ ಸರ್ಕಾರ ಆಲಿಬಾಬಾ ಮತ್ತು 40 ಮಂದಿ ಕಳ್ಳರ ಸಂತೆ ಎಂದು ಲೇವಡಿ ಮಾಡಿದ್ದಾರೆ.

  • ಸಿಎಂ ಪತ್ನಿಗೆ ಮತ್ತೊಂದು ಕಾನೂನು ಸಂಕಷ್ಟ – ತವರಿನಿಂದ ಉಡುಗೊರೆಯಾಗಿ ಪಡೆದಿದ್ದ ಭೂಮಿ ಮೇಲೆ ಕೇಸ್‌

    ಸಿಎಂ ಪತ್ನಿಗೆ ಮತ್ತೊಂದು ಕಾನೂನು ಸಂಕಷ್ಟ – ತವರಿನಿಂದ ಉಡುಗೊರೆಯಾಗಿ ಪಡೆದಿದ್ದ ಭೂಮಿ ಮೇಲೆ ಕೇಸ್‌

    ಮೈಸೂರು: ಸಿಎಂ ಪತ್ನಿ ಪಾರ್ವತಮ್ಮ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಸಿಎಂ ಪತ್ನಿ ಹಾಗೂ ಸಿಎಂ ಭಾಮೈದ ಸೇರಿ ಒಟ್ಟು 10 ಜನರ ಮೇಲೆ ಈಗ ಮೈಸೂರಿನ ಸಿವಿಲ್ ನ್ಯಾಯಾಲಯದಲ್ಲಿ (Mysuru Civil Court) ಭೂ ವ್ಯಾಜ್ಯ ಸಂಬಂಧ ಕೇಸ್ ದಾಖಲಾಗಿದೆ.

    ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಪಾರ್ವತಮ್ಮಗೆ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ತವರಿನ ಉಡುಗೊರೆ ರೀತಿ ಕೊಟ್ಟ ಕೆಸರೆ ಭಾಗದ ಮೂರುವರೆ ಎಕರೆ ಜಮೀನಿಂದ ಈಗ ಕಾನೂನಿನ ದೊಡ್ಡ ಸಂಕಷ್ಟ ಸೃಷ್ಟಿಯಾಗಿದೆ. ಕಳೆದ 4 ತಿಂಗಳಿಂದ ರಾಜ್ಯ ರಾಜಕೀಯದಲ್ಲಿ ಇದೇ ಜಮೀನು ಹಾಗೂ ಜಮೀನಿನಿಂದ ಸಿಕ್ಕ ಪರಿಹಾರ ರೂಪದ 14 ಸೈಟ್‌ಗಳು ಬಿರುಗಾಳಿ ಎಬ್ಬಿಸಿವೆ. ಹಲವು ತನಿಖೆಗಳು ಇದರಿಂದ ನಡೆಯುತ್ತಿವೆ. ಈಗ ಈ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು ಪ್ರಕರಣದ ಮೂಲ ಭೂಮಿಯ ಬಗ್ಗೆಯೆ ಈಗ ವಿವಾದ ಹುಟ್ಟಿಕೊಂಡಿದೆ.

    ಸಿಎಂ ಭಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ದೇವರಾಜ್ ಕೆಸರೆ ಭಾಗದಲ್ಲಿ ಮೂರುವರೆ ಎಕರೆ ಜಮೀನು ಮಾರಿದ್ದರು. ಈಗ ಆ ಜಮೀನು ದೇವರಾಜ್‌ ಅವರದ್ದಲ್ಲ. ಆ ಜಮೀನು ತಮ್ಮದ್ದು ಎಂದು ದೇವರಾಜ್ ಸಹೋದರ ಮೈಲಾರಯ್ಯನ ಮಗಳು ಜಮುನಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಇದನ್ನೂ ಓದಿ: ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್‌-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

    ನನ್ನ ಚಿಕ್ಕಪ್ಪ ದೇವರಾಜ್ ನಮಗೆ ಮೋಸ ಮಾಡಿದ್ದಾರೆ. ನನ್ನ ತಂದೆಯ ಪಾಲಿನ ಜಾಗವನ್ನು ಮೋಸದಿಂದ ಬರೆಸಿಕೊಂಡು ಈಗ ಬೇರೆಯವರಿಗೆ ಮಾರಿದ್ದಾರೆ. ನಮಗೆ ನ್ಯಾಯ ಬೇಕು ಹೀಗಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇನೆ. ಖಾತೆ ಮಾಡಿಸಿಕೊಡುವ ಹೆಸರಿನಲ್ಲಿ ಸಹಿ ಪಡೆದು ಮೋಸ ಮಾಡಿದ್ದಾರೆ. ನಮಗೆ ಈ ಜಮೀನು ವಿಚಾರ ಮಾಧ್ಯಮದ ಮೂಲಕ ಗೊತ್ತಾಗಿದೆ. ಹೀಗಾಗಿ ಈಗ ಕೇಸ್ ಹಾಕಿದ್ದೇವೆ ಎಂದು ಮೈಲಾರಯ್ಯನ ಮಗಳು ಜಮುನಾ ಹೇಳಿದ್ದಾರೆ. ಇದನ್ನೂ ಓದಿ: ಟ್ರಕ್‌ಗೆ ಸ್ಕಾರ್‌ಪಿಯೊ ಡಿಕ್ಕಿ – ಭೀಕರ ಅಪಘಾತಕ್ಕೆ ಐವರು ವೈದ್ಯರ ದುರ್ಮರಣ

    ಈ ಬಗ್ಗೆ ಜಮುನಾ ಸಹೋದರ ಮಂಜುನಾಥ್ ಸ್ವಾಮಿ ಕೂಡ ಪ್ರತಿಕ್ರಿಯಿಸಿದ್ದು, ಚಿಕ್ಕಪ್ಪ ದೇವರಾಜ್ ನಮಗೆ ಮೋಸ ಮಾಡಿ ನಮ್ಮ ಜಮೀನನ್ನು ತಮ್ಮದ್ದು ಎಂದು ಮಾರಾಟ ಮಾಡಿದ್ದಾರೆ. ಹೀಗಾಗಿ ನಾವು ತಮ್ಮ ಚಿಕ್ಕಪ್ಪ ದೇವರಾಜ್ ಸೇರಿದಂತೆ ಅವರು ಜಮೀನು ಮಾರಾಟ ಮಾಡಿರುವ ಸಿಎಂ ಭಾಮೈದ ಮಲ್ಲಿಕಾರ್ಜುನ ಸ್ವಾಮಿ, ಸಿಎಂ ಪತ್ನಿ ಪಾರ್ವತಮ್ಮ ಸಿದ್ದರಾಮಯ್ಯ ಸೇರಿದಂತೆ ಎಲ್ಲರ ಮೇಲೂ ಕೇಸ್ ಹಾಕಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನವಜಾತ ಶಿಶು ಕದ್ದು 50,000 ರೂ.ಗೆ ಮಾರಾಟ – ಮೂವರು ಖತರ್ನಾಕ್‌ ಕಳ್ಳಿಯರು ಅರೆಸ್ಟ್‌

    ಖಾತೆ ಮಾಡಿಸಿ ಕೊಡುತ್ತೇನೆ ಎಂದು ಹೇಳಿ ನನ್ನ ಚಿಕ್ಕಪ್ಪ ಮೂವತ್ತು ವರ್ಷಗಳ ಹಿಂದೆ ನನ್ನ ಹಾಗೂ ನನ್ನ ತಾಯಿ ಬಳಿ ಸಹಿ ಮಾಡಿಸಿಕೊಂಡಿದ್ದರು. ಆ ಜಮೀನು ನನ್ನ ತಂದೆಗೆ ಭಾಗವಾಗಿ ಬಂದ ಪಿತ್ರಾರ್ಜಿತ ಆಸ್ತಿ. ಆ ಆಸ್ತಿಯನ್ನೆ ಮೋಸದಿಂದ ನನ್ನ ಚಿಕ್ಕಪ್ಪ ಪಡೆದು ಅದನ್ನು ಸಿಎಂ ಕುಟುಂಬಕ್ಕೆ ಮಾರಾಟ ಮಾಡಿದ್ದಾರೆ ಎಂದು ಹೇಳಿದ್ದಾರೆ.

  • ಸಿಎಂಗೆ ಮುಡಾ ಸಂಕಷ್ಟ – ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ

    ಸಿಎಂಗೆ ಮುಡಾ ಸಂಕಷ್ಟ – ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ

    ಬೆಂಗಳೂರು: ಮುಡಾ ಅಕ್ರಮ (MUDA Scam) ಕೇಸ್‌ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ದೊರೆತಿದೆ. ಅಬ್ರಹಾಂ ಎಂಬವರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

    ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ರಾಜ್ಯಪಾಲರು ರವಾನಿಸಿದ್ದಾರೆ. ಇದನ್ನೂ ಓದಿ: ಬಡವರಿಗಾಗಿ 5 ರೂ.ಗೆ ಊಟ; ಆಂಧ್ರದಲ್ಲಿ ‘ಅನ್ನ ಕ್ಯಾಂಟೀನ್’‌ ಮತ್ತೆ ಆರಂಭ

    ಸಿಎಂ ಕುಟುಂಬದ ಪ್ರಭಾವದ ಎರಡು ಅಂಶಗಳನ್ನು ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ, ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರಭಾವದ ಬಗ್ಗೆ ಉಲ್ಲೇಖವಾಗಿದೆ. ಸಿದ್ದರಾಮಯ್ಯ ಸಿಎಂ ಆಗುವ ತನಕ ಪಾರ್ವತಿ ಕಾದು, ಆ ಬಳಿಕ ಅರ್ಜಿ ಹಾಕಿದ್ದಾರೆ. 2010 ರಲ್ಲಿ ಪಾರ್ವತಿ ಜಮೀನು ಮಾಲೀಕರಾದರೂ ಪರಿಹಾರಕ್ಕೆ ಅರ್ಜಿ ಹಾಕಲು 4 ವರ್ಷ ಕಾಯುತ್ತಾರೆ. ಸಿದ್ದರಾಮಯ್ಯ ಸಿಎಂ ಆದ್ಮೇಲೆ 40:60 ಸೈಟ್ ಪರಿಹಾರ ಅನುಪಾತ, 50:50 ಆಯ್ತು. ಪಾಲಿಸಿ ಬದಲಾವಣೆಗೆ ಆಗಿನ ಸಿದ್ದರಾಮಯ್ಯ ಕ್ಯಾಬಿನೆಟ್ ಅನುಮತಿ ನೀಡಿತ್ತು. ಸಿದ್ದರಾಮಯ್ಯ ಪತ್ನಿ ಕೊಟ್ಟ ಅರ್ಜಿಯ ಆಧಾರದ ಮೇಲೆ ಪಾಲಿಸಿ ಬದಲಾವಣೆ ಮಾಡಿದ್ರು. ಆ ನಂತರ ಪರಿಹಾರ ನೀಡುವ ಸಂಬಂಧ ನಡೆದ ಮುಡಾ ಸಭೆಯಲ್ಲಿ ಶಾಸಕರಾಗಿದ್ದ ಯತೀಂದ್ರ ಇದ್ದರು ಎಂದು ಪ್ರಭಾವದ ಬಗ್ಗೆ ಉಲ್ಲೇಖಿಸಲಾಗಿದೆ.

    ದೂರುದಾರ ಟಿ.ಜೆ.ಅಬ್ರಹಾಂ ಮತ್ತು ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ, ಪ್ರದೀಪ್‌ ಅವರನ್ನು ರಾಜಭವನಕ್ಕೆ ಬರುವಂತೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: ರಾಜ್ಯಕ್ಕೂ ತಟ್ಟಿದ ಬಾಂಗ್ಲಾ ಆರ್ಥಿಕ ಬಿಕ್ಕಟ್ಟಿನ ಎಫೆಕ್ಟ್ – ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ದಿಢೀರ್ ಕುಸಿತ

    ಸಿಎಂ ವಿರುದ್ಧ ಪ್ಯಾಸಿಕ್ಯೂಷನ್‌ಗೆ ಅನುಮತಿ ಕೋರಿ ಜು.26 ರಂದು ಟಿ.ಜೆ.ಅಬ್ರಹಾಂ ಅವರು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಸಿಎಂಗೆ ರಾಜ್ಯಪಾಲರು ನೋಟಿಸ್‌ ನೀಡಿದ್ದರು.