Tag: ಮುನ್ಸೂಚನೆ

  • ಮೂರು ದಿನ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ

    ಮೂರು ದಿನ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಮುಂದಿನ ಮೂರು ದಿನಗಳ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

    ಸೋಮವಾರ, ಮಂಗಳವಾರ ಮತ್ತು ಬುಧವಾರ ಮೂರು ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮೂರು ದಿನವೂ ಮಳೆಯಾಗಲಿದೆ ಎಂದು ಹೇಳಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮಳೆಯಾಗಲಿದೆ.

    ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ರಾಯಚೂರು ದಾವಣಗೆರೆ ಕಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಅಧಿಕಾರಿಗಳು ನೀಡಿದ್ದಾರೆ.

  • ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

    ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

    ಬೆಂಗಳೂರು: ಮಹಾ ಮಳೆಗೆ ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ನೆರೆ ಸಂಭವಿಸಿದ್ದು, ಇದೀಗ ಹವಾಮಾನ ಇಲಾಖೆ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಎಂಬ ಆಘಾತಕಾರಿ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 13 ರವರೆಗೆ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಅಲ್ಲದೆ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಆಗಸ್ಟ್ 9 ರಿಂದ 13ರವರೆಗೆ ವರುಣ ಅಬ್ಬರಿಸಲಿದ್ದಾನೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

    ಇಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಆಗಸ್ಟ್ 10 ರಂದು ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಹ ಆಗಸ್ಟ್ 9 ಹಾಗೂ 10 ರಂದು 2 ದಿನ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

  • ಸಂಜೆಯಾಗುತ್ತಿದಂತೆ ವರುಣನ ಆರ್ಭಟ – 3 ದಿನ ಬೆಂಗ್ಳೂರಲ್ಲಿ ಭಾರೀ ಮಳೆ ಸಾಧ್ಯತೆ

    ಸಂಜೆಯಾಗುತ್ತಿದಂತೆ ವರುಣನ ಆರ್ಭಟ – 3 ದಿನ ಬೆಂಗ್ಳೂರಲ್ಲಿ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಸತತ ನಾಲ್ಕು ದಿನಗಳಿಂದ ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇಂದು ಸಂಜೆಯೂ ಮಳೆರಾಯನ ಆರ್ಭಟ ಮುಂದುವರಿದಿದೆ. ನಿನ್ನೆಯೇ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಿದ್ದು, 7 ಸೆ.ಮೀ. ನಿಂದ 11 ಸೆ.ಮೀ.ವರೆಗೂ ಮಳೆಯಾಗುವ ಮುನ್ಸೂಚನೆಯನ್ನು ನೀಡಿತ್ತು.

    ನಗರದ ಮಲ್ಲೇಶ್ವರಂ, ಯಶವಂತಪುರ, ಗೊರಗುಂಟೆ ಪಾಳ್ಯ, ರಾಜಕುಮಾರ್ ಸಮಾಧಿ, ಸುಂಕದಕಟ್ಟೆ, ಬಿಇಎಲ್ ಸರ್ಕಲ್, ಕೆ.ಆರ್ ಸರ್ಕಲ್, ಕಾರ್ಪೋರೇಷನ್, ಶಿವಾನಂದ ಸರ್ಕಲ್, ರಾಜಭವನ ಸೇರಿದಂತೆ ನಗರದ ನಾಲ್ಕು ದಿಕ್ಕುಗಳಲ್ಲೂ ಉತ್ತಮ ಮಳೆಯಾಗಿದೆ.

    ಸಂಜೆ ವೇಳೆಗೆ ಮಳೆ ಆರಂಭವಾದ ಕಾರಣ ವಾಹನ ಸವಾರರು ಪರದಾಟ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿತ್ತು. ತಗ್ಗು ಪ್ರದೇಶದ ರಸ್ತೆಗಳೆಲ್ಲ ಕೆರೆಗಳಂತೆ ಕಂಡು ಬಂತು. ಮಳೆಯಿಂದ ರಕ್ಷಣೆ ಪಡೆಯಲು ಬೈಕ್ ಸವಾರರು ಸೇತುವೆಗಳ ಕೆಳ ಭಾಗದಲ್ಲಿ ನಿಂತು ಆಶ್ರಯ ಪಡೆದಿದ್ದ ದೃಶ್ಯ ಸಾಮಾನ್ಯವಾಗಿತ್ತು.

    3 ದಿನ ಮಳೆ: ತೆಲಂಗಾಣ, ಆಂಧ್ರ ಪ್ರದೇಶ ಮತ್ತು ರಾಜ್ಯದಲ್ಲಿ ಕಾಣಿಸಿಕೊಂಡಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಮುಂದಿನ ಮೂರು ದಿನಗಳ ಮಳೆಯ ಅರ್ಭಟ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ದಿನಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗುವ ಸೂಚನೆಯನ್ನು ಸದ್ಯ ಇಲಾಖೆ ನೀಡಿದೆ. ಕಳೆದ ನಾಲ್ಕು ದಿನದಿಂದ ಸಂಜೆಯಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಈ ಹಿನ್ನೆಲೆ ಹವಾಮಾನ ಇಲಾಖೆ ಈಗಾಗಲೇ ಹಳದಿ ಅಲರ್ಟ್ ಘೋಷಣೆ ಮಾಡಿದೆ.

  • ಬೆಂಗ್ಳೂರಲ್ಲಿ ಮುಂದಿನ ತಿಂಗ್ಳು ವರುಣನ ರೌದ್ರ ದರ್ಶನ- 60 ಪ್ರದೇಶ ಡೇಂಜರಸ್ ಅಂತ ಘೋಷಣೆ!

    ಬೆಂಗ್ಳೂರಲ್ಲಿ ಮುಂದಿನ ತಿಂಗ್ಳು ವರುಣನ ರೌದ್ರ ದರ್ಶನ- 60 ಪ್ರದೇಶ ಡೇಂಜರಸ್ ಅಂತ ಘೋಷಣೆ!

    ಬೆಂಗಳೂರು: ಕೇರಳ ಹಾಗೂ ಕೊಡಗಿನಲ್ಲಿ ವರುಣನ ರೌದ್ರ ಅವತಾರದ ದರ್ಶನವಾಗಿದೆ. ಮಳೆ ಹೊಡೆತಕ್ಕೆ ಇಡೀ ಕೇರಳ ತತ್ತರಿಸಿ ಹೋಗಿದೆ. ಕೊಡಗಿನ ಚಿತ್ರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಕೊಡಗು ಕೇರಳದ ನಂತರ ವರುಣ ಇದೇ ಅಬ್ಬರದಲ್ಲಿ ಬೆಂಗಳೂರನ್ನು ತೋಯಲಿದ್ದಾನೆ. ಈ ಆತಂಕಕ್ಕೆ ಕಾರಣ ರಾಜ್ಯ ವಿಪತ್ತು ನಿರ್ವಹಣಾ ಘಟಕ ಮುನ್ನೆಚ್ಚರಿಕೆ ನೀಡಿದೆ.

    ಬೆಂಗಳೂರಿನ ಭಾಗದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚು ಮಳೆಯಾಗಲಿದೆ ಅನ್ನೋದಾಗಿ ಹವಾಮಾನ ಇಲಾಖೆ ವರದಿ ನೀಡಿದೆ. ಜೊತೆ ಪ್ರತಿ ವರ್ಷಕ್ಕಿಂತ ಅಧಿಕ ಪ್ರಮಾಣದಲ್ಲಿ ಮಳೆ ಆಗಲಿದ್ದು ಅನಾಹುತಗಳಾಗೋ ಅವಕಾಶಗಳು ಹೆಚ್ಚಿವೆ ಹಾಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಾಹಣ ಘಟಕ ಎಚ್ಚರಿಕೆ ನೀಡಿದ್ದು ಇದು ತೀವ್ರ ಆತಂಕಕ್ಕೆ ತಂದೊಡ್ಡಿದೆ.

    ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಸಿಲಿಕಾನ್ ಸಿಟಿ ಮುಳುಗಿ ಹೋಗಿತ್ತು. ಕೆಲ ಪ್ರದೇಶಗಳು ದ್ವೀಪದಂತೆ ಆಗಿದ್ದವು. ಅದೆಷ್ಟೊ ಮನೆಗಳು ಮುಳುಗಿ ಹೋಗಿದ್ರೆ, ಬಿಲ್ಡಿಂಗ್ ಗಳು ಕುಸಿದಿದ್ದವು. ಪ್ರಾಣ ಹಾನಿ ಸಂಭವಿಸಿ ಕಷ್ಟ ನಷ್ಟಗಳಿಂದ ಬೆಂಗಳೂರು ಬೆಚ್ಚಿಬಿದಿತ್ತು. ರಾಜ್ಯದೆಲ್ಲೆಡೆ ಸರಾಸರಿಗಿಂತ ಅತ್ಯಧಿಕ ಮಳೆಯಾಗಿದೆ. ಎಲ್ಲ ನದಿಗಳು ತುಂಬಿ ತುಳುಕಿ ಪ್ರವಾಹ ಸೃಷ್ಟಿಯಾಗಿದ್ದು ಈ ಬಾರಿ ಬೆಂಗಳೂರಿನಲ್ಲಿ ಕಳೆದ ವರ್ಷದ ಚಿತ್ರಣ ಈ ವರ್ಷವೂ ಮರುಕಳಿಸಲಿದೆ ಎಂಬ ಭಯಂಕರ ಸುದ್ದಿ ಸ್ಫೋಟಗೊಂಡಿದೆ. ಈ ಮುನ್ಸೂಚನೆಯನ್ನು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿಗಳು ನೀಡಿದ್ದಾರೆ.

    ಕಳೆದ ವರ್ಷ ಸಾಮಾನ್ಯ ಮಳೆಗೆ ಕೋರಮಂಗಲದ ಎಸ್‍ಡಿ ಬೆಡ್ ನಲ್ಲಿ ಮನೆಗಳು ಮುಳುಗಿ ಹೋಗಿದ್ದವು. ಕುರುಬರ ಹಳ್ಳಿಯಲ್ಲಿ ದೇವಸ್ಥಾನದ ಅರ್ಚಕರು ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ರು. ಅಲ್ಲದೇ ತಾಯಿ ಮಗಳನ್ನು ರಾಜಕಾಲುವೆ ಬಲಿ ಪಡೆದಿತ್ತು. ಅಂದು ಆಡಳಿತ ಪಕ್ಷವಾಗಿದ್ದ ಕಾಂಗ್ರೆಸ್ ಹಾಗೂ ವಿರೋಧ ಪಕ್ಷವಾಗಿ ಬಿಜೆಪಿಯ ಎಲ್ಲ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಘೋಷಿಸಿದ್ದು ಬಿಟ್ರೆ ದುರಸ್ತಿ ಕಾರ್ಯ ಯಾರೂ ಮಾಡಲಿಲ್ಲ.

    ಇಷ್ಟೆಲ್ಲ ಆದರೂ ಬುದ್ಧಿ ಕಲಿಯದ ಬಿಬಿಎಂಪಿ ಈ ಬಾರಿಯೂ ರಾಜಕಾಲುವೆಗಳ ಹೂಳೆತ್ತಿಲ್ಲ. ಇನ್ನು ಎರಡು ವರ್ಷಗಳ ಹಿಂದೆ ಶುರುವಾದ ರಾಜಕಾಲೂವೆ ಒತ್ತುವರಿ ತೆರವು ಸದ್ಯ ದೊಡ್ಡವರ ಮನೆ ಬಾಗಿಲಿಗೆ ಬಂದು ಸದ್ದು ಮಾಡದೆ ನಿಂತಿದೆ. ಇದೆಲ್ಲದರ ಮಧ್ಯೆ ಇದೀಗ ಐಟಿ-ಬಿಟಿ ಸಿಟಿಯಲ್ಲಿ ವರುಣನ ಆರ್ಭಟದ ಮುನ್ಸೂಚನೆ ಸಿಕ್ಕಿದ್ದು, ಬಿಬಿಎಂಪಿ ತಯಾರಿ ಶುರು ಮಾಡಿದೆ ಹಾಗೂ ಬೆಂಗಳೂರಿನ 60 ಪ್ರದೇಶಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಗುರುತಿಸಲಾಗಿದೆ.

    ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಿಂದ ಹಾನಿಯಾಗುವ ಪ್ರದೇಶ:

    ಕಿನೋ ಥೇಟರ್ ಅಂಡರ್ ಪಾಸ್, ಶಿವಾನಂದ ಸರ್ಕಲ್, ಓಕಳಿಪುರಂ ಅಂಡರ್ ಪಾಸ್, ಕೋರಮಂಗಲ, ಈಜಿಪುರ, ಶಾಂತಿನಗರ, ಕೆಎಸ್.ಆರ್.ಟಿ.ಸಿ ಡಿಪೋ, ಮಾಗಡಿ ರಸ್ತೆ, ವಿಜಯನಗರ, ಬಾಪೂಜಿನಗರ, ಗಾಳಿ ಆಂಜನೇಯಸ್ವಾಮಿ ದೇವಸ್ಥಾನ, ನಾಯಂಡಹಳ್ಳಿ, ಗಂಗೊಂಡನಹಳ್ಳಿ, ಹೆಚ್.ಎಸ್.ಆರ್ ಲೇಔಟ್,  ಥಣಿಸಂದ್ರ, ಎಲಿಮೆಂಟ್ಸ್ ಮಾಲ್, ಕೋಡಿಚಿಕ್ಕನಹಳ್ಳಿ, ಆನಂದ್ ರಾವ್ ಸರ್ಕಲ್, ಹಲಸೂರು ಡಬ್ಬಲ್ ರೋಡ್, ಶಂಕರಮಠ, ಕೆಂಪೇಗೌಡ ಲೇಔಟ್, ವಿಲ್ಸನ್ ಗಾರ್ಡನ್, ಅರಕೆರೆ, ಕುರಬರಹಳ್ಳಿ, ಹೆಚ್.ಆರ್.ಬಿ.ಆರ್.ಲೇಔಟ್, ನಂದಿನಿ ಲೇಔಟ್, ಲಗ್ಗೆರೆ.

    ಈ ಪ್ರದೇಶಗಳಲ್ಲಿ ಬಿಬಿಎಂಪಿ ಆಯುಕ್ತರು ಹೈ ಅರ್ಲಟ್ ಘೋಷಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ವಾಡಿಕೆ ಮಳೆ 460 ಮಿ.ಮೀ ಆಗಬೇಕು. ಆದರೆ ಕಳೆದ ವರ್ಷ 667 ಮಿ.ಮೀ ಮಳೆ ಸಂಭವಿಸಿತ್ತು. ಅಂದರೆ ಶೇಕಡ 45 ರಷ್ಟು ಹೆಚ್ಚು ಸುರಿದ ಮಳೆಯಿಂದ ಬೆಂಗಳೂರು ಮುಳುಗಡೆಯಾಗಿತ್ತು. ಇದು ಕಳೆದ 17 ವರ್ಷಗಳ ದಾಖಲೆಯ ಮಳೆಯಾಗಿತ್ತು. ಈ ವರ್ಷ ದಾಖಲೆಯನ್ನು ಮುರಿಯುವ ಲಕ್ಷಣಗಳು ಗೋಚರಿಸಿವೆ. ಯಾಕಂದರೆ ಈಗಾಗಲೇ ಮಳೆಗಾಲದ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ.

    ಜೂನ್ ತಿಂಗಳಿನಿಂದ ಸಪ್ಟೆಂಬರ್ ವೇಳೆಗೆ ರಾಜಧಾನಿ ಬೆಂಗಳೂರಿಗೆ 90 ಸೆ.ಮೀ ಮಳೆಯಾಗುವುದು ವಾಡಿಕೆ. ಆದರೆ ನಗರದಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಸೇರಿ ಆಗಾಗ್ಗೆ ಸುರಿಯುತ್ತಿದ್ದ ಮಳೆಯಿಂದ ವಾಡಿಕೆ ಮಳೆಯ ಕಾಲು ಭಾಗ ಮಳೆ ಈಗಾಗಲೇ ಬಿದ್ದಿದೆ. ಮಳೆ ಹೀಗೆ ಮುಂದುವರಿದರೆ ಕಂಟಕ ಕಟ್ಟಿಟ್ಟ ಬುತ್ತಿ ಎಂಬ ಎಚ್ಚರಿಕೆ ನೀಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಂಗ್ಳೂರಲ್ಲಿ ಮುಂದಿನ ತಿಂಗಳು ಭಾರೀ ಮಳೆಯ ಮುನ್ಸೂಚನೆ

    ಬೆಂಗ್ಳೂರಲ್ಲಿ ಮುಂದಿನ ತಿಂಗಳು ಭಾರೀ ಮಳೆಯ ಮುನ್ಸೂಚನೆ

    ಬೆಂಗಳೂರು: ಮುಂದಿನ ತಿಂಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಕುರಿತು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

    ಈ ಕುರಿತು ಮಾಹಿತಿ ನೀಡಿರುವ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಮುಂದಿನ ತಿಂಗಳಿನಲ್ಲಿ ಹೆಚ್ಚಿನ ಮಳೆ ಸುರಿಯಬಹುದು ಎಂಬ ನಿರೀಕ್ಷೆ ಇದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಗರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

    ಮಹಾಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬಿಬಿಎಂಪಿ ಸಿದ್ಧತೆ ಆರಂಭಿಸಿದ್ದು, ಇಂದಿನಿಂದಲೇ ನಗರದ ಪ್ರಮುಖ ಸ್ಥಳ ಪರಿಶೀಲನೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳಿಗೆ ಚಾಲನೆ ಕೊಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀರ್ಮಾನ ಮಾಡಿದೆ. ಕಳೆದ ವರ್ಷಗಳಲ್ಲಿ ಮಳೆಗೆ ಹಾನಿಗೀಡಾಗಿದ್ದ 356 ಪ್ರದೇಶಗಳಲ್ಲಿ ಸದ್ಯ ಬಿಬಿಎಂಪಿ ಮುಂಜಾಗ್ರತೆ ವಹಿಸಲು ಸಿದ್ಧತೆ ನಡೆಸಿದೆ. ಕಳೆದ ಬಾರಿ ಹೆಚ್ಚಿನ ಮಳೆಯಿಂದ ಸಮಸ್ಯೆ ಎದುರಿಸಿದ್ದ ನಗರದಲ್ಲಿ ಪ್ರಮುಖ ಪ್ರದೇಶಗಳಲ್ಲಿ ಬಿಬಿಎಂಪಿ ಒತ್ತುವರಿ ತೆರವು ಕಾರ್ಯ ನಡೆಸಿದೆ. ಆದರೆ ಸದ್ಯ ಬಿಬಿಎಂಪಿ ಸಂಪೂರ್ಣ ಪ್ರಮಾಣದಲ್ಲಿ ಹೆಚ್ಚಿನ ಮಳೆಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿಲ್ಲ.

    ಭಾರೀ ಮಳೆ ನಿರೀಕ್ಷೆ ಇರುವುದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕಳೆದ ವರ್ಷದಂತೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬರುವ ಸಾಧ್ಯತೆಯಿದೆ. ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿ ಅಪಾರ ಪ್ರಮಾಣದ ಉಂಟಾಗಿದ್ದ ಬೆನ್ನಲ್ಲೇ, ಸದ್ಯ ಮಾಹನಗರ ಭಾರೀ ಮಳೆ ನಿರೀಕ್ಷೆಯಲ್ಲಿದೆ. ಕೊಡಗು ಭಾಗದಲ್ಲಿ ಸತತವಾಗಿ ಸುರಿಯುತ್ತಿದ್ದ ಮಹಾಮಳೆ ಸದ್ಯ ಬಿಡುವು ನೀಡಿದ್ದು, ರಸ್ತೆ ಮೇಲೆ ಕುಸಿದ ಗುಡ್ಡ ತೆರವು ಕಾರ್ಯ ನಡೆಸಲಾಗುತ್ತಿದೆ. ಅಲ್ಲದೇ ಮಹಾಮಳೆಯಿಂದ ನಾಪತ್ತೆಯಾಗಿರುವ ಜನರ ಪತ್ತೆಕಾರ್ಯವನ್ನು ಡ್ರೋನ್ ಕ್ಯಾಮೆರಾ ಬಳಸಿ ಮಾಡಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv