Tag: ಮುರಗೇಶ್ ನಿರಾಣಿ

  • ಬೀಳಗಿಯಲ್ಲಿ ನಿರಾಣಿಗೆ ಹೀನಾಯ ಸೋಲು

    ಬೀಳಗಿಯಲ್ಲಿ ನಿರಾಣಿಗೆ ಹೀನಾಯ ಸೋಲು

    ಬಾಗಲಕೋಟೆ: ಬೀಳಗಿ (Bilgi) ಕ್ಷೇತ್ರದಲ್ಲಿ ಬಿಜೆಪಿ (BJP) ಅಭ್ಯರ್ಥಿ ಮುರಗೇಶ್ ನಿರಾಣಿ (Murugesh Nirani) ಸೋಲು ಕಂಡಿದ್ದಾರೆ. ಕೈಗಾರಿಕಾ ಸಚಿವರಾಗಿರುವ ನಿರಾಣಿಯವರು ಸೋಲು ಕಂಡಿದ್ದು ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.

    ಕಾಂಗ್ರೆಸ್ (Congress) ಅಭ್ಯರ್ಥಿ ಜೆ.ಟಿ. ಪಾಟೀಲ್ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಮೂರು ಬಾರಿ ಕಾಂಗ್ರೆಸ್‍ನಿಂದ ಬಿಳಗಿಯ ಶಾಸಕರಾಗಿದ್ದರು. ಅವರು ಪ್ರಸ್ತುತ ಯಾವುದೇ ಕ್ರಿಮಿನಲ್ ಕೇಸ್ ಹೊಂದಿರಲಿಲ್ಲ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 135, ಬಿಜೆಪಿ 65, ಜೆಡಿಎಸ್‌ 20 ಮುನ್ನಡೆ LIVE Updates

    ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಬಿಜೆಪಿ 62, ಕಾಂಗ್ರೆಸ್ 137, ಜೆಡಿಎಸ್ 21, ಇತರರು 4 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಇದನ್ನೂ ಓದಿ: ರಾಜ್ಯದ ಚುನಾವಣಾ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ: ಬಿಎಸ್‍ವೈ

  • ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸಿದ್ರೆ ರಾಜೀನಾಮೆ ಕೊಟ್ತೇನೆ: ನಿರಾಣಿ

    ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸಿದ್ರೆ ರಾಜೀನಾಮೆ ಕೊಟ್ತೇನೆ: ನಿರಾಣಿ

    ಬೆಳಗಾವಿ: ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧೆ ಮಾಡಿದರೆ ಅವತ್ತೆ ನಾನು ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

    ನಗರದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ಮೋದಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಸ್ಪರ್ಧಿಸಿದರೆ ಅವತ್ತೆ ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ. ಮೊದಲಿಂದಲೂ ನಾವು ಇಬ್ಬರು ರಾಜಕಾರಣದಲ್ಲಿ ಇದ್ದೇವೆ. ನಿರಾಣಿ ಕುಟುಂಬದ ಮೂರನೇಯರು ರಾಜಕೀಯಕ್ಕೆ ಬರ್ತಿಲ್ಲ. ಇದು ನೂರಕ್ಕೆ ನೂರರಷ್ಟು ಸತ್ಯವಾಗಿದ್ದು, ನಿರಾಣಿ ಕುಟುಂಬದ ಮೂರನೇ ವ್ಯಕ್ತಿಯ ಸ್ಪರ್ಧೆ ಮಾಧ್ಯಮಗಳ ಸೃಷ್ಟಿಯಾಗಿದೆ ಎಂದರು. ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಮುಕ್ತಾಯ

    ಸಹೋದರ ಸಂಗಮೇಶ ನಿರಾಣಿ ಕಳೆದ 4 ವರ್ಷದಿಂದ ಜಮಖಂಡಿಯಲ್ಲಿ ಸಭೆ ಸಮಾರಂಭ ಮಾಡಿಲ್ಲ. ನನಗೆ ಈ ರೀತಿಯ ಬ್ಲೆಮ್ ಬರಬಾರದು ಎಂದು ಜಮಖಂಡಿ ಮಾಜಿ ಶಾಸಕರ ಅನುಮತಿ ಪಡೆದು ಹೋಗುತ್ತಿರುವೆ. ನಾನು ನನ್ನ ಸಹೋದರ ಹನುಮಂತ ನಿರಾಣಿ ಹೊರತುಪಡಿಸಿ ನಮ್ಮ ಮನೆಯಲ್ಲಿ ಯಾರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಒಂದು ವೇಳೆ ಯಾರಾದರೂ ನನ್ನ ಮಾತು ಕೇಳದೇ ನಮ್ಮ ಕುಟುಂಬದವರು ರಾಜಕೀಯಕ್ಕೆ ಎಂಟ್ರಿಯಾದರೆ ಅವತ್ತೇ ನಾನು ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಬ್ರಿಜೇಶ್‌ ಕಾಳಪ್ಪ ರಾಜೀನಾಮೆ

    ಪ್ರಧಾನಮಂತ್ರಿ ಹೇಳಿದ್ದನ್ನ ನಾನು ಪಾಲಿಸುತ್ತೇನೆ. ಮೊದಲಿನಿಂದಲೂ ಇಬ್ಬರಿಗೆ ಟಿಕೆಟ್ ಕೊಟ್ಟಿದ್ದಾರೆ ನಾವು ಮುಂದುವರಿಯುತ್ತೇವೆ. ನೂರಕ್ಕೆ ನೂರರಷ್ಟು ಮೂರನೆಯವರು ರಾಜಕೀಯಕ್ಕೆ ಬರುವುದಿಲ್ಲ. ಇದರಲ್ಲಿ ಯಾವುದೇ ಸಂಶಯವೇ ಬೇಡಾ. ನಾವು ಸ್ಪರ್ಧೆ ಮಾಡುವುದಿಲ್ಲ ಅಂದ್ಮೇಲೆ ಮತ್ತೊಬ್ಬರ ಬಗ್ಗೆ ನಾನು ಮಾತನಾಡುವುದಿಲ್ಲ. ಮನಾವು ಜಮಖಂಡಿ ಆಗಲಿ, ರಾಮದುರ್ಗ ಆಗಲಿ ಅಲ್ಲಿ ಕಾಲಿಟ್ಟಿಲ್ಲ ಎಂದು ಹೇಳಿದರು.

  • ಕೆ.ಆರ್.ಎಸ್ ಡ್ಯಾಮ್‍ನಲ್ಲಿ ಲೀಕೇಜ್ ಇಲ್ಲ:  ಮುರುಗೇಶ್ ನಿರಾಣಿ

    ಕೆ.ಆರ್.ಎಸ್ ಡ್ಯಾಮ್‍ನಲ್ಲಿ ಲೀಕೇಜ್ ಇಲ್ಲ: ಮುರುಗೇಶ್ ನಿರಾಣಿ

    ತುಮಕೂರು: ಕೆ.ಆರ್.ಎಸ್ ಡ್ಯಾಮ್‍ನಲ್ಲಿ ಯಾವುದೇ ಲೀಕೇಜ್ ಇಲ್ಲ, ಈ ಬಗ್ಗೆ ಆತಂಕ ಪಡುವಂತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.

    ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಂಡವಪುರ ಪಕ್ಕದಲ್ಲಿ ಬೇಬಿ ಬೆಟ್ಟ ಇದೆ, ಅಲ್ಲಿ 10 ಕಿಮೀ ವ್ಯಾಪ್ತಿಯಲ್ಲಿ ಎಲ್ಲಾ ಗಣಿಗಾರಿಕೆಗಳನ್ನು ಮುಚ್ಚಿಸಲಾಗಿದೆ. ಕೆ.ಆರ್.ಎಸ್. ಸುತ್ತಮುತ್ತಲಿನ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ಮೈನಿಂಗ್ ಅನ್ನು ಬಂದ್ ಮಾಡಿದ್ದೀವಿ. ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಮೈನಿಂಗ್ ನಡೆದಿಲ್ಲ. ಆದರೂ ಈ ಸಂಬಂಧ ತನಿಖೆ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ:  ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

    ಡ್ಯಾಮ್ ನಲ್ಲಿ ಯಾವುದೇ ಲೀಕೇಜ್ ಇಲ್ಲ, ಕೆ.ಆರ್.ಎಸ್ ಬಗ್ಗೆ ಆತಂಕ ಪಡುವಂತಿಲ್ಲ. ಆದರೂ ದೂರದೃಷ್ಟಿಯಿಂದ ಮುಂಜಾಗ್ರತವಾಗಿ ನೋಟಿಸ್ ಕೊಟ್ಟು ಮುಚ್ಚಿಸಲಾಗಿದೆ ಎಂದರು.