Tag: ಮುರುಗೇಶ್ ಆರ್ ನಿರಾಣಿ

  • 3,455 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ – 18,567 ಜನರಿಗೆ ಉದ್ಯೋಗ ಸೃಷ್ಟಿ

    3,455 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ – 18,567 ಜನರಿಗೆ ಉದ್ಯೋಗ ಸೃಷ್ಟಿ

    ಬೆಂಗಳೂರು: ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ರಾಜ್ಯದಲ್ಲಿ 59 ಯೋಜನೆಗಳ 3,455.39 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ.

    ಮಂಗಳವಾರ ಬೆಂಗಳೂರಿನ (Bengaluru) ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ಆರ್. ನಿರಾಣಿ (Murugesh Nirani) ಅವರ ಅಧ್ಯಕ್ಷತೆಯಲ್ಲಿ ನಡೆದ 137ನೇ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

    ಒಟ್ಟು 59 ಯೋಜನೆಗಳಿಂದ 3,455.39 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 18,567 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್‌ ಆರ್. ನಿರಾಣಿ ತಿಳಿಸಿದ್ದಾರೆ. ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂ. ಅಧಿಕ ಹೆಚ್ಚು ಬಂಡವಾಳ ಹೂಡಿಕೆಯ 11 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದ 2186.70 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 10,559 ಜನರಿಗೆ ಉದ್ಯೋಗ ಲಭಿಸಲಿದೆ ಎಂದು ಹೇಳಿದ್ದಾರೆ.

    15 ಕೋಟಿ ರೂ.ನಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 46 ಹೊಸ ಯೋಜನೆಗಳಿಗೆ ಸಮಿತಿ ಹಸಿರು ನಿಶಾನೆ ನೀಡಿದೆ. ಒಟ್ಟು 1049.19 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 8,008 ಜನರಿಗೆ ಉದ್ಯೋಗ ಸೃಜನೆಯಾಗಲಿದೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ಎರಡು ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ಅನುಮೋದಿಸಿದ್ದು, 219.50 ಕೋಟಿ ರೂ. ಹೂಡಿಕೆಯಾಗಲಿದೆ.

    ಅನುಮೋದನೆ ನೀಡಿರುವ ಪ್ರಸ್ತಾವನೆಗಳು:
    * ಮೈಸೂರ್ ಸ್ಟೀಲ್ಸ್ ಲಿಮಿಟೆಡ್- ಮೇಟಗಾನಹಳ್ಳಿ. ಮೈಸೂರು -ಹೂಡಿಕೆ 405.43 ಕೋಟಿ ರೂ., ಉದ್ಯೋಗ 200

    * ಎನ್.ಐ.ಡಿ.ಸಿ ಇಂಡಸ್ಟ್ರೀಯಲ್ ಆಟೋಮೋಷನ್ ಇಂಡಿಯಾ ಲಿಮಿಟೆಡ್- ಕೋಟುರು ಬೇಲೂರು, ಇಎಂಸಿ ಕೈಗಾರಿಕಾ ಪ್ರದೇಶ- ಹೂಡಿಕೆ 350 ಕೋಟಿ ರೂ., ಉದ್ಯೋಗ 730

    * ಸಿಲಾನ್ ಬಿವೆರೇಜ್ ಲಿಮಿಟೆಡ್- ಎಫ್‌ಎಮ್‌ಸಿಜಿ, ಕ್ಲಸ್ಟರ್ ಧಾರವಾಡ- ಹೂಡಿಕೆ 256.3 ಕೋಟಿ ರೂ., ಉದ್ಯೋಗ 200

    * ಬಾಲಾಜಿ ವೇರರ್ಸ್ ಪ್ರೈ ಲಿಮಿಟೆಡ್ -ಕಣಗಲ್, ಕೈಗಾರಿಕಾ ಪ್ರದೇಶ ಬೆಳಗಾವಿ ಜಿಲ್ಲೆ – ಹೂಡಿಕೆ 251.25 ಕೋಟಿ ರೂ., ಉದ್ಯೋಗ 500

    * ಮಂಜುಶ್ರೀ ಟೆಕ್ನೋಪಾರ್ಕ್ ಲಿಮಿಟೆಡ್ – ಬಡಗುಪ್ಪೆ, ಕೆಲ್ಲಂಬಳ್ಳಿ, ಕೈಗಾರಿಕಾ ಪ್ರದೇಶ ಚಾಮರಾಜನಗರ – ಹೂಡಿಕೆ 253 ಕೋಟಿ ರೂ., ಉದ್ಯೋಗ 500

    * ಕ್ಸಿಸೋಡ ಇಂಡಿಯಾ ಪ್ರೈ ಲಿಮಿಟೆಡ್ – ಶಿರಾ ಕೈಗಾರಿಕಾ ಪ್ರದೇಶ ತುಮಕೂರು – ಹೂಡಿಕೆ 138 ಕೋಟಿ ರೂ., ಉದ್ಯೋಗ 160

    * ಮಹಾಮಾನವ್ ಇನ್‍ಸ್ಪಾಟ್ ಪ್ರೈ ಲಿಮಿಟೆಡ್ – ಬೆಳಗಲ್ ಗ್ರಾಮ, ಬಳ್ಳಾರಿ – ಹೂಡಿಕೆ 90 ಕೋಟಿ ರೂ., ಉದ್ಯೋಗ 90

    * ಎ.ಸಿ.ಆರ್ ಪ್ರಾಜೆಕ್ಟ್ – ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ, – ಹೂಡಿಕೆ 85 ಕೋಟಿ ರೂ., ಉದ್ಯೋಗ 350

    * ನಿಯೋಬಿ ಸಲ್ಯೂಷನ್ ಪ್ರೈ ಲಿಮಿಟೆಡ್- ಎಎಲ್‍ಜಿಸಿ ಕ್ಲಸ್ಟರ್, ಮಮ್ಮಿಗಟ್ಟಿ ಕೈಗಾರಿಕಾ ಪ್ರದೇಶ, ಧಾರವಾಡ, ಹೂಡಿಕೆ -50 ಕೋಟಿ ರೂ., ಉದ್ಯೋಗ 563

    * ಅಭಯ್ ಆಗ್ರೋ ಫುಡ್ ಪ್ರೈಲಿಮಿಟೆಡ್- ಗಬಾರ ಗ್ರಾಮ, ಕೊಪ್ಪಳ ಜಿಲ್ಲೆ- ಹೂಡಿಕೆ 32.65 ಕೋಟಿ ರೂ., ಉದ್ಯೋಗ -35

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬನ್ನಿ, ಕರ್ನಾಟಕದಲ್ಲಿ ಬಂಡವಾಳ ಹೂಡಿ: ಆಂಧ್ರ, ತೆಲಂಗಾಣ ಉದ್ಯಮಿಗಳಿಗೆ ಸಚಿವ ನಿರಾಣಿ ಕರೆ

    ಬನ್ನಿ, ಕರ್ನಾಟಕದಲ್ಲಿ ಬಂಡವಾಳ ಹೂಡಿ: ಆಂಧ್ರ, ತೆಲಂಗಾಣ ಉದ್ಯಮಿಗಳಿಗೆ ಸಚಿವ ನಿರಾಣಿ ಕರೆ

    – ಹೈದರಾಬಾದ್ ರೋಡ್ ಶೋ ಯಶಸ್ವಿ
    – 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ನಿರೀಕ್ಷೆ

    ಹೈದರಾಬಾದ್: ನವೆಂಬರ್ 2ರಿಂದ 4ರ ವರೆಗೆ ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಭಾಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್. ನಿರಾಣಿ (Murugesh Nirani) ಅವರು ಹೈದರಾಬಾದ್‌ನಲ್ಲಿ ಶುಕ್ರವಾರ ನಡೆಸಿದ ರೋಡ್‌ಶೋ (Roadshow) ಯಶಸ್ವಿಯಾಗಿದೆ.

    ಹೈದರಾಬಾದ್‌ನ (Hyderabad) ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಚಿವ ನಿರಾಣಿ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾಗವಾಗಿ ದೆಹಲಿಯಲ್ಲಿ ಚಾಲನೆ ನೀಡಿದ ದೇಶೀಯ ರೋಡ್ ಶೋ ಯಶಸ್ವಿಯಾಗಿದೆ. ಅದೇ ರೀತಿ, ಹೈದರಾಬಾದ್ ರೋಡ್ ಶೋ ವೇಳೆ ಉದ್ಯಮಿಗಳ ಜತೆ ಇಂದು ನಡೆಸಿದ ಮಾತುಕತೆ ಫಲಪ್ರದವಾಗಿದೆ ಎಂದಿದ್ದಾರೆ.

    ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳು ನಮ್ಮ ಕೈಗಾರಿಕಾ ನೀತಿ ಕುರಿತು ಆಂಧ್ರ (Andhra Pradesh) ಹಾಗೂ ತೆಲಂಗಾಣದ (Telangana) ಉದ್ಯಮಿಗಳಿಗೆ ಮಾಹಿತಿ ನೀಡಲಾಗಿದೆ. ರಾಜ್ಯದಲ್ಲಿ ಬಂಡವಾಳ ಹೂಡಲು ಹಾಗೂ ಉದ್ಯಮ ವಿಸ್ತರಣೆಗೆ ಹಲವು ಕಂಪನಿಗಳ ಮುಖ್ಯಸ್ಥರು ಒಲವು ತೋರಿದ್ದಾರೆ ಎಂದು ಸಚಿವ ನಿರಾಣಿ ಹೇಳಿದರು.

    ಜಾಗತಿ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್‌ಶೋನ ಭಾಗವಾಗಿ ಜಪಾನ್, ದಕ್ಷಿಣ ಕೊರಿಯಾ, ಅಮೆರಿಕ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿದೆ. ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ. ದೇಶೀಯ ರೋಡ್ ಶೋ ಮುಂಬೈಯಲ್ಲಿ ಮುಕ್ತವಾಗಲಿದೆ ಎಂದು ಅವರು ತಿಳಿಸಿದರು.

    ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ ‘ಬಿಲ್ಡ್ ಫಾರ್ ದಿ ವರ್ಲ್ಡ್’ ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳುತ್ತಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ ಎಂದರು.

    ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. 2021ರ ಜುಲೈನಿಂದೀಚೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ರಾಜ್ಯಕ್ಕೆ ಬಂದಿವೆ. ದೇಶದ ಒಟ್ಟಾರೆ ವಿದೇಶಿ ಹೂಡಿಕೆಯಲ್ಲಿ ರಾಜ್ಯದ ಪಾಲು ಶೇ.38 ರಷ್ಟು ಇದೆ. ಬರೋಬ್ಬರಿ 22 ಶತಕೋಟಿ ಡಾಲರ್ ವಿದೇಶಿ ನೇರ ಹೂಡಿಕೆ ರಾಜ್ಯಕ್ಕೆ ಹರಿದು ಬಂದಿದೆ ಎಂದು ಅವರು ವಿವರಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆಗೆ ಕೋವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್ ಒಲವು

    ಸುಲಲಿತ ವ್ಯವಹಾರಕ್ಕೆ ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ ಯೋಜನೆಯ ಜಾರಿಗೊಳಿಸಿರುವ ಕರ್ನಾಟಕ, ಈಸ್ ಆಫ್ ಡೂಯಿಂಗ್ ಬಿಸಿನೆಸ್‌ಗೆ ಶ್ರೇಯಾಂಕ ಪಟ್ಟಿಯಲ್ಲಿ ‘ಟಾಪ್ ಅಚೀವರ್’ ಆಗಿ ಹೊರಹೊಮ್ಮಿದೆ. ಜೊತೆಗೆ, ಹೂಡಿಕೆದಾರರಿಗೆ ಭೂ ಹಂಚಿಕೆಗೆ ಅನುಕೂಲವಾಗುವಂತೆ ‘ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್’ ಕ್ರಮ ಜಾರಿಗೊಳಿಸಲಾಗಿದೆ ಎಂದರು.

    ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

    ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ:
    ಹೈದರಾಬಾದ್ ರೋಡ್‌ಶೋನಲ್ಲಿ ಭಾರತ್ ಬಯೋಟೆಕ್, ವಿಮತ ಲ್ಯಾಬ್ಸ್, ಲೌರಸ್ ಲ್ಯಾಬ್ಸ್, ಪೆಂಟಗನ್ ರಗ್ಗಡ್ ಸಿಸ್ಟಮ್, ವೈಬ್ರೆಂಟ್ ಎನರ್ಜಿ ಸೇರಿದಂತೆ ಹಲವು ಕಂಪನಿಗಳ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದು ನಿರಾಣಿ ತಿಳಿಸಿದರು. ಇದನ್ನೂ ಓದಿ: ಭೂತಾನ್‍ನಿಂದ 17 ಸಾವಿರ ಟನ್ ಅಡಿಕೆ ಆಮದಿಗೆ ಮುಂದಾದ ಕೇಂದ್ರ – ರೈತರಿಂದ ವಿರೋಧ

    ವೈನ್ ಮತ್ತು ಆಹಾರ ಮೇಳ:
    ಈ ಸಮಾವೇಶ ಬಂಡವಾಳ ಹೂಡಿಕೆಗಷ್ಟೇ ಸೀಮಿತವಾಗಿಲ್ಲ. ಕರ್ನಾಟಕದ ಸಾಂಸ್ಕೃತಿಕ ಲೋಕ ಅಲ್ಲಿ ಅನಾವರಣಗೊಳ್ಳಲ್ಲಿದೆ. ವೈನ್ ಮತ್ತು ಆಹಾರ ಮೇಳದಲ್ಲಿ ಕರ್ನಾಟಕದ ವಿಶೇಷ ಖಾದ್ಯಗಳನ್ನು ಸವಿಯಬಹುದು ಎಂದು ಸಚಿವರು ಹೇಳಿದರು.

    ಅಸೋಚಾಮ್ ತೆಲಂಗಾಣ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರವಿ ಕುಮಾರ್ ರೆಡ್ಡಿ, ಅಸೋಚಾಮ್ ಪ್ರಧಾನ ಕಾರ್ಯದರ್ಶಿ ಪೂಜಾ ಅಹ್ಲುವಾಲಿಯಾ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ.ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ನಾಲ್ಕು ಕಡೆ ಮಹಿಳೆಯರಿಗಾಗಿ ಪ್ರತ್ಯೇಕ ಉದ್ಯಮ ಪಾರ್ಕ್ ಪ್ರಾರಂಭ

    ರಾಜ್ಯದ ನಾಲ್ಕು ಕಡೆ ಮಹಿಳೆಯರಿಗಾಗಿ ಪ್ರತ್ಯೇಕ ಉದ್ಯಮ ಪಾರ್ಕ್ ಪ್ರಾರಂಭ

    -ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ಪ್ರೋತ್ಸಾಹ

    ಬೆಂಗಳೂರು: ಮಹಿಳೆಯರನ್ನು ಉದ್ಯಮದತ್ತ ಇನ್ನಷ್ಟು ಆಕರ್ಷಿಸಲು ಮೈಸೂರು, ಧಾರವಾಡ, ಹಾರೋಹಳ್ಳಿ ಮತ್ತು ಕಲಬುರಗಿಯಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಮಹಿಳಾ ಉದ್ಯಮ ಪಾರ್ಕ್‍ಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದ್ದಾರೆ.

    ಗುರುವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ಉದ್ಯಮ ಶೀಲತಾ ಪ್ರಯುಕ್ತ ಉಬುಂಟು ಸಂಸ್ಥೆ ಹಮ್ಮಿಕೊಂಡಿದ್ದ ‘ಟುಗೆದರ್ ವಿ ಗ್ರೋ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉಬಂಟು, (UNUNTU-consortium of women entrepreneur’s associations) ಇದೊಂದು ಮಹಿಳಾ ವಾಣಿಜ್ಯೋದಮ ಒಕ್ಕೂಟಗಳ ಸಂಘಟನೆಯಾಗಿದೆ. ಇದರಡಿ ಸುಮಾರು 30 ಮಹಿಳಾ ಉದ್ಯಮಿಗಳ ಸಂಘಟನೆಗಳು ಹಾಗೂ 1500 ಸದಸ್ಯರ ಒಂದೇ ವೇದಿಕೆಯಡಿ ಕೆಲಸ ಮಾಡುತ್ತಾರೆ. ದೇಶದಲ್ಲೇ ಮೊದಲ ಬಾರಿಗೆ ಮಹಿಳಾ ಉದ್ಯಮಿಗಳಿಗಾಗಿಯೇ ನಿರ್ದಿಷ್ಟ ಕೈಗಾರಿಕಾ ಪಾರ್ಕ್ ಸ್ಥಾಪಿಸುತ್ತಿರುವ ಮೊದಲ ರಾಜ್ಯ ನಮ್ಮ ಕರ್ನಾಟಕ. ಇದರ ಸದುಪಯೋಗವನ್ನು ಪಡೆದುಕೊಂಡರೆ ಇದರ ಉದ್ದೇಶ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

    ಮಹಿಳೆಯರು ಸ್ವಯಂ ಉದ್ಯಮಿಗಳಾಗಿ ಇನ್ನೊಬ್ಬರಿಗೆ, ಉದ್ಯೋಗ ನೀಡುವ ಹಂತಕ್ಕೆ ಬೆಳೆಯುವ ಮೂಲಕ ರಾಜ್ಯದ ಕೈಗಾರಿಕಾ ಪ್ರಗತಿಯಲ್ಲಿ ಕೈ ಜೋಡಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ. ನೀವು ಉದ್ಯೋಗ ಪಡೆದರಷ್ಟೇ ಸಾಲದು. ಉದ್ಯಮಿಯಾಗುವುದರ ಜೊತೆಗೆ ನೂರಾರು ಜನರಿಗೆ ಕೆಲಸ ಕೊಡುವ ಮಟ್ಟಕ್ಕೆ ಬೆಳೆದಾಗ ಮಹಿಳಾ ಸಬಲೀಕರಣಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬಿಟ್‍ಕಾಯಿನ್ ಹಗರಣ – ರಾಕೇಶ್ ಸಿದ್ದರಾಮಯ್ಯ ಹೆಸರು ಎಳೆದು ತಂದ ಬಿಜೆಪಿ

    ಇನ್ಫೋಸಿಸ್‍ನ ಸುಧಾ ನಾರಾಯಣ ಮೂರ್ತಿ, ಕಿರಣ್ ಮಜುಂದಾರ್ ಷಾ, ಸೇರಿದಂತೆ ಅನೇಕ ಯಶಸ್ವಿ ಮಹಿಳಾ ಉದ್ಯಮಿಗಳು ನಮಗೆಲ್ಲರಿಗೂ ಆದರ್ಶಪ್ರಾಯವಾಗಿದ್ದಾರೆ. ಅವರ ಜೀವನದ ಯಶೋಗಾಧೆ ಇಂದಿನ ಯುವ ಮಹಿಳಾ ಉದ್ಯಮಿಗಳಿಗೆ ಪ್ರೇರಣೆಯಾಗಬೇಕು. ಮಹಿಳೆಯರನ್ನು ಉದ್ಯಮದತ್ತ ಆಕರ್ಷಿಸಲು ನಮ್ಮ ಸರ್ಕಾರ ರಾಜ್ಯದಲ್ಲಿ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಉದ್ಯಮ ಶೀಲತೆಯ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ಉದ್ಯೋಗದಾತರಾಗಿ ಎಂದು ಸಲಹೆ ನೀಡಿದರು.

    ಸ್ವಂತ ಉದ್ಯಮ ಸ್ಥಾಪಿಸಿ, ಉದ್ಯೋಗದಾತರಾಗುವುದರ ಜೊತಗೆ ಇತರರೂ ನಿಮ್ಮಂತೆ ಉದ್ಯಮಿಗಳಾಗಬೇಕು ಎಂಬುದು ನನ್ನ ಅಭಿಲಾಷೆಯಾಗಿದೆ. ಈ ನಿಟ್ಟಿನಲ್ಲಿ ನಮ್ಮಇಲಾಖೆ ‘ ಉದ್ಯಮಿಯಾಗು, ಉದ್ಯೋಗ ನೀಡು’ ಕಾರ್ಯಕ್ರಮ ಹಮ್ಮಿಕೊಂಡಿದ್ದೇವು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ಮುಂಬರುವ ದಿನಗಳಲ್ಲಿ ಬೇರೆಬೇರೆ ಜಿಲ್ಲೆಗಳಲ್ಲೂ ಈ ಕಾರ್ಯಕ್ರಮನಡೆಯಲಿದೆ. ಮಹಿಳಾ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವಿರುವ “ಉಬುಂಟು” ದಂತಹ ಸಂಸ್ಥೆಗಳು ಈಗ ಬೆಂಬಲ ನೀಡುವ ವ್ಯವಸ್ಥೆಯಾಗಿ ಮಾರ್ಪಟ್ಟಿವೆ. ನಿಮ್ಮ ಇಂಥ ಪ್ರಯತ್ನಗಳಲ್ಲಿ ಸರ್ಕಾರ ನಿಮ್ಮ ಜೊತೆ ಇರುತ್ತದೆ. ದೇಶದಲ್ಲಿಂದು ಮಹಿಳೆಯರೇ ನಡೆಸುವಂಥಹ ಉದ್ಯಮಗಳ ಸಂಖ್ಯೆ 13.5 ರಿಂದ 15.7 ದಶಲಕ್ಷವಿದ್ದು, ಒಟ್ಟು ಉದ್ಯಮಗಳಲ್ಲಿ ಇದರ ಪಾಲು ಶೇ.20ರಷ್ಟಿದೆ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಉದ್ಯಮಶೀಲತೆಯ ಗುಣಮಟ್ಟ ಮತ್ತು ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಹಿಳಾ ಸ್ವಾಮ್ಯದ ಉದ್ಯಮಗಳನ್ನು 30 ದಶಲಕ್ಷಕ್ಕೆ ಹೆಚ್ಚಿಸಬಹುದು. ಮಹಿಳೆಯರು ಮನಸ್ಸು ಮಾಡಿದರೆ ಈ ಗುರಿ ತಲುಪುವುದು ಕಷ್ಟವೇನಲ್ಲ ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಬಿಟ್‌ಕಾಯಿನ್‌ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ

    1948ರ ಫ್ಯಾಕ್ಟರಿ ತಿದ್ದುಪಡಿ ಕಾಯಿದೆಯಡಿ ಕಾರ್ಖಾನೆಗಳಲ್ಲಿ ರಾತ್ರಿ 7 ರಿಂದ ಬೆಳಿಗ್ಗೆ 6 ರವರೆಗೆ ಕೆಲಸ ಮಾಡಲು ಸರ್ಕಾರ ಮಹಿಳೆಯರಿಗೆ ಅನುಮತಿ ನೀಡಿದೆ. ನೂತನ ಕೈಗಾರಿಕಾ ನೀತಿಯಡಿ SC/ST, ಮಹಿಳೆಯರು ಸೇರಿದಂತೆ ವಿಶೇಷ ವರ್ಗದ ಉದ್ಯಮಿಗಳಿಗೆ ಹೆಚ್ಚುವರಿ ಪ್ರೋತ್ಸಾಹವನ್ನು ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ನೇತೃತ್ವದ ಉಬುಂಟು ಮಹಿಳೆಯರಲ್ಲಿ ಉದ್ಯಮ ಶೀಲತೆಯ ಮನೋಭಾವವನ್ನು ಪ್ರೋತ್ಸಾಹಿಸಿ ಅವರು ಯಶಸ್ಸನ್ನು ಸಾಧಿಸಲು ನೆರವಾಗಿದೆ. ಇಂಥ ಸಂಘಟನೆಯ ಸಾರಥ್ಯ ವಹಿಸಿರುವ ಅವರ ಪರಿಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: ಬಿಜೆಪಿಯವ್ರಿಗೆ ಮಾನ-ಮರ್ಯಾದೆ ಇಲ್ಲ, ರಾಕೇಶ್ ಈಗ ಬದುಕಿದ್ದಾರಾ?- ಸಿದ್ದು ಗರಂ