Tag: ಮುರುಳೀಧರ್ ರಾವ್

  • ಬಿಜೆಪಿ ಮುಖಂಡರ ಜೊತೆ ಸಾರಾ ಮಹೇಶ್ ಭೇಟಿಗೆ ಟ್ವಿಸ್ಟ್

    ಬಿಜೆಪಿ ಮುಖಂಡರ ಜೊತೆ ಸಾರಾ ಮಹೇಶ್ ಭೇಟಿಗೆ ಟ್ವಿಸ್ಟ್

    ಬೆಂಗಳೂರು: ಸಚಿವ ಸಾರಾ ಮಹೇಶ್ ಅವರು ಗುರುವಾರ ರಾತ್ರಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ್ದರು. ಇದೀಗ ಈ ಭೇಟಿಗೆ ಟ್ವಿಸ್ಟ್ ಸಿಕ್ಕಿದ್ದು, ಸಾರಾ ಮಹೇಶ್ ಭೇಟಿಯಾಗಿದ್ದ ಮುರಳೀಧರ್ ರಾವ್ ವಿರುದ್ಧ ಬಿಜೆಪಿ ಹೈಕಮಾಂಡ್ ಕೆಂಡಾಮಂಡಲವಾಗಿದೆ.

    ನಿನ್ನೆ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್, ಸಚಿವ ಸಾರಾ ಮಹೇಶ್ ಅವರನ್ನು ಭೇಟಿಯಾಗಿದ್ದರು. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಯಡಿಯೂರಪ್ಪ ಸೇರಿ ಎಲ್ಲರೂ ಮುರುಳೀಧರ್ ರಾವ್‍ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಸಮಯದಲ್ಲಿ ಸಚಿವ ಸಾರಾ ಮಹೇಶ್ ಭೇಟಿ ಅಗತ್ಯವಿತ್ತಾ? ರಾಜ್ಯದ ಜನತೆಗೆ ಯಾವ ಸಂದೇಶ ಹೋಗುತ್ತದೆ ಗೋತ್ತೇನ್ರೀ ಎಂದು ಬಿಎಸ್‍ವೈ ಅವರು ಮುರುಳೀಧರ್ ರಾವ್‍ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಬಿಜೆಪಿಗೆ ಬೆಂಬಲ ಕೊಡುತ್ತಾ ಜೆಡಿಎಸ್?: ಸಾರಾ ಮಹೇಶ್, ಕಮಲ ಮುಖಂಡರ ಭೇಟಿ!

    ಡ್ಯಾಮೇಜ್ ಕಂಟ್ರೋಲ್ ಸಲುವಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಅವರಿಗೆ ಕೂಡಲೇ ಬೆಂಗಳೂರು ಬಿಡುವಂತೆ ಹೈಕಮಾಂಡ್ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಮುರುಳೀಧರ್ ರಾವ್ ಹೈದರಾಬಾದ್‍ಗೆ ಜೂಟ್ ಹೇಳಿದ್ದಾರೆ. ಅಷ್ಟೇ ಅಲ್ಲದೆ ಈಶ್ವರಪ್ಪಗೂ ಯಡಿಯೂರಪ್ಪ ಸಿಕ್ಕಾಪಟ್ಟೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪ ಜೊತೆ ಸಾ.ರಾ ಮಹೇಶ್ ಗುರುವಾರ ರಾತ್ರಿ ಸಭೆ ನಡೆಸಿದ್ದರು. ಸಭೆ ಬಳಿಕ ಸಾರಾ ಮಹೇಶ್ ಅವರು ಕೆಕೆ ಗೆಸ್ಟ್ ಹೌಸ್ ಬಳಿ ಬಿಜೆಪಿ ನಾಯಕರ ಜೊತೆ ಮಾಧ್ಯಮಗಳಿಗೆ ಸೆರೆ ಸಿಕ್ಕಿದ್ದರು. ಈ ಮೂಲಕ ಮೂವರು ನಾಯಕರ ರಹಸ್ಯ ಭೇಟಿ ಬಯಲಾಗಿತ್ತು.

  • ಸಿಎಂ, ಹಿಂದಿ ಹಾಗೂ ಕನ್ನಡಿಗರ ನಡುವೆ ಜಗಳ ತಂದಿಡ್ತಿದ್ದಾರೆ: ಮುರುಳೀಧರ್ ರಾವ್

    ಸಿಎಂ, ಹಿಂದಿ ಹಾಗೂ ಕನ್ನಡಿಗರ ನಡುವೆ ಜಗಳ ತಂದಿಡ್ತಿದ್ದಾರೆ: ಮುರುಳೀಧರ್ ರಾವ್

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಿಗರ ಜೊತೆ ತಮಿಳು, ತೆಲುಗು ಭಾಷಿಕರು ಹೆಚ್ಚಿದ್ದಾರೆ. ಅದೇ ರೀತಿ ಹಿಂದಿ ಭಾಷಿಕರು ಮತ್ತು ಪೂರ್ವಾಂಚಲ ರಾಜ್ಯದ ಜನರು ಹಚ್ಚಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಹಿಂದಿ ಭಾಷಿಕರು ಹಾಗೂ ಕನ್ನಡಿಗರ ನಡುವೆ ಜಗಳ ತಂದು ಒಡ್ಡುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಮುರುಳೀಧರ್ ರಾವ್ ಗಂಭೀರ ಆರೋಪ ಮಾಡಿದ್ದಾರೆ.

    ನಗರದ ಮ್ಯನ್ಫೋ ಕನ್ವೇಷನ್ ಸೆಂಟರ್ ನಲ್ಲಿ ಇಂದು ಬಿಜೆಪಿ ಯಿಂದ ಆಯೋಜಿಸಿದ್ದ ಪೂರ್ವಾಂಚಲ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹಿಂದಿ ಭಾಷಿಕರು ಯಾವುದೇ ಗಲಾಟೆ ಮಾಡಿಕೊಂಡಿಲ್ಲ. ಇಲ್ಲಿಯವರೆಗೂ ಯಾವುದೇ ಸಮಸ್ಯೆ ಉಂಟಾಗಿಲ್ಲ. ಆದರೆ ಸಿಎಂ ಅವರಿಗೆ ಜನರಲ್ಲಿ ಜಗಳ ನಿರ್ಮಾಣ ಮಾಡದಿದ್ದಾರೆ ನಿದ್ದೆ ಬರುವುದಿಲ್ಲ. ಈಗಾಗಲೇ ಅವರು ಹಿಂದೂ, ಮುಸ್ಲಿಮರ ಜೊತೆ ಜಗಳ ತಂದಿಟ್ಟಿದ್ದಾರೆ. ಟಿಪ್ಪು ಸುಲ್ತಾನ್ ಜಪ ಮಾಡಿ ರಾಜ್ಯದ ಶಾಂತಿ ಕದಡಿದ್ದಾರೆ. ಹಿಂದೂ ಧರ್ಮದಲ್ಲಿ ಒಡಕು ಮೂಡಿಸುವ ಉದ್ದೇಶದಿಂದ ಲಿಂಗಾಯತ ಧರ್ಮವನ್ನು ಎರಡು ಭಾಗ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಈ ಹಿಂದೆ ನಾನು ಒಮ್ಮೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದೆ. ಸಿದ್ದರಾಮಯ್ಯ ಅಂದು ನನಗೆ ಹಿಂದಿ ಬರುವುದಿಲ್ಲ ಎಂದು ಹೇಳಿದ್ದರು. ರಾಷ್ಟ್ರೀಯ ಪಕ್ಷದ ನಾಯಕರಾಗಿ ಹೇಗೆ ಈ ರೀತಿ ಹೇಳಿದ್ದಾರೆ? ಕರ್ನಾಟಕದ ಮುಖ್ಯಮಂತ್ರಿಗೆ ಹಿಂದಿಯಲ್ಲಿ ಮಾತನಾಡಲು, ಬರೆಯಲು ಕಷ್ಟವಾಗುತ್ತೆ. ಆದರೆ ಇಂಗ್ಲೀಷ್ ನಲ್ಲಿ ಮಾತನಾಡಲು ಬರೆಯಲು ಬರುತ್ತೆ ಎಂದರು.

    ಭಾಷಣದ ಮಧ್ಯೆ, ರಾಜಧಾನಿಯಲ್ಲಿ ಹಿಂದಿ ಭಾಷಿಕರಿಂದ ಯಾವುದಾದರೂ ಸಮಸ್ಯೆ ಆಗಿದೆಯಾ ಎಂದು ಪ್ರಶ್ನಿಸಿದರು. ಇದಕ್ಕೆ ಕಾರ್ಯಕ್ರಮದಲ್ಲಿದ್ದ ಎಲ್ಲರು ಇಲ್ಲ ಎಂದರು ಉತ್ತರಿಸಿದರು.

    ಈ ವೇಳೆ ಮಾತನಾಡಿದ ಸಂಸದ ಪಿಸಿ ಮೋಹನ್, ಬೆಂಗಳೂರು ದೇಶದಲ್ಲೇ ದೊಡ್ಡ ಹೆಸರು ಮಾಡಿದೆ. ವಿವಿಧ ರಾಜ್ಯದಿಂದ ಬಂದಿರುವವರು ಬಹಳಷ್ಟು ಜನ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಪೂರ್ವಾಂಚಲ ಭಾಗದವರು ಕೂಡ ಹೆಚ್ಚಾಗಿದ್ದಾರೆ. ಮೇ 12 ರಂದು ಮತದಾನ ನಡೆಯುತ್ತದೆ. ಈ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

    ಕೇವಲ ಶ್ರೀಮಂತರ ಬಳಿ ಮಾತ್ರ ಡೆಬಿಟ್ ಕ್ರೆಡಿಟ್ ಕಾರ್ಡ್ ಇರಬೇಕು ಎನ್ನದೆ ಪ್ರಧಾನಿ ಮೋದಿ ಅವರ ಆಶಯದಂತೆ ಬಡವರ ಬಳಿಯೂ ಡೆಬಿಟ್ ಕಾರ್ಡ್ ಇರುವ ಹಾಗೇ ಮಾಡಲು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಕರ್ನಾಟಕವನ್ನು ದೇಶದಲ್ಲಿ ಭ್ರಷ್ಟ ರಾಜ್ಯವಾಗಿ ಮಾಡಿದ್ದಾರೆ. ಯಾವುದೇ ರಾಜ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳು ಆತ್ಮಹತ್ಯೆ ಮಾಡುಕೊಂಡಿಲ್ಲ, ಇದು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿರುವ ರಾಜ್ಯದಲ್ಲಿ ಮಾತ್ರ ನಡೆದಿದೆ ಎಂದು ಮೋಹನ್ ಆರೋಪಿಸಿದರು.

     

  • ಮತ್ತೆ ಕಮಲ ಪಾಳಯದಲ್ಲಿ ಮುನಿಸಿನ ಸದ್ದು-ಬಿಜೆಪಿ ಕಾರ್ಯಕಾರಿಣಿಗೆ ಈಶ್ವರಪ್ಪ ಗೈರು!

    ಮತ್ತೆ ಕಮಲ ಪಾಳಯದಲ್ಲಿ ಮುನಿಸಿನ ಸದ್ದು-ಬಿಜೆಪಿ ಕಾರ್ಯಕಾರಿಣಿಗೆ ಈಶ್ವರಪ್ಪ ಗೈರು!

    ಬೆಂಗಳೂರು: ನಗರದಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತದ ಸದ್ದು ಕೇಳಿಬರುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಕಾರ್ಯಕಾರಿಣಿ ಸಭೆಗೆ ಗೈರಾಗುವ ಮೂಲಕ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ.

    ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್, ಸಹ ಉಸ್ತುವಾರಿ ಪುರಂದರೇಶ್ವರಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ರಾಜ್ಯ ಬಿಜೆಪಿ ನಾಯಕರುಗಳಾದ ರಮೇಶ್ ಜಿಗಜಿಣಗಿ, ಜಗದೀಶ್ ಶೆಟ್ಟರ್, ಆರ್.ಅಶೋಕ್, ಸಿ.ಎಂ.ಉದಾಸಿ, ಸಿ.ಟಿ.ರವಿ, ಶೋಭಾ ಕರಂದ್ಲಾಜೆ, ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

    ಕಾರ್ಯಕ್ರಮ ಉದ್ಘಾಟನೆಯಾದ್ರೂ ಈಶ್ವರಪ್ಪನವರು ಮಾತ್ರ ಆಗಮಿಸಿಲ್ಲ. ನಿನ್ನೆ ನಡೆದ ಕಾಯಕಾರಿಣಿ ಸಭೆಗೂ ಈಶ್ವರಪ್ಪ ಗೈರಾಗಿದ್ದರು. ಬಿಜೆಪಿಯ ಮಹತ್ವದ ಸಭೆಗಳಿಗೆ ಪದೇ ಪದೇ ಗೈರಾಗುತ್ತಿರುವ ಈಶ್ವರಪ್ಪರ ರಾಜಕೀಯ ಮರ್ಮ ಮಾತ್ರ ಇದೂವರೆಗೂ ತಿಳಿದಿಲ್ಲ.

    ಬಿಎಸ್ ವೈ ಕ್ಯಾಪ್ಟನ್: ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ರಾಷ್ಟ್ರದ ಎಲ್ಲ ಮನೆ ಮನೆಗಳನ್ನು ಮುಟ್ಟಿದ್ದಾರೆ. ಅವರೊಬ್ಬರು ಮುಟ್ಟಿದರೆ ಸಾಲದು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ರಾಜ್ಯದ ಮನೆ ಮನೆ ಮುಟ್ಟಬೇಕು. ನರೇಂದ್ರ ಮೋದಿ ನುಡಿದಂತೆ ನಡೆಯುತ್ತಿದ್ದಾರೆ. ಬಿಹಾರ ಆಯ್ತು ಇನ್ನು ಕೆಲವೇ ದಿನಗಳಲ್ಲಿ ತಮಿಳುನಾಡು ಕೂಡ ಎನ್‍ಡಿಎ ತೆಕ್ಕೆಗೆ ಬರುವ ಸಾಧ್ಯತೆಯಿದೆ. ಕೇವಲ ಎನ್‍ಡಿಎ ತೆಕ್ಕೆಗೆ ಬಂದ್ರೆ ಸಾಲದು ಬಿಜೆಪಿ ತೆಕ್ಕೆಗೆ ಬರಬೇಕು ಎಂಬುದು ನಮ್ಮ ಹಿರಿಯ ನಾಯಕರ ಅಪೇಕ್ಷೆಯಾಗಿದೆ. ಹಾಗೆ ಆಗಬೇಕಾದರೆ ಯಡಿಯೂರಪ್ಪನವರೇ ಕ್ಯಾಪ್ಟನ್ ಆಗಬೇಕು. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಕೇಂದ್ರ ಸಚಿವ ಸದಾನಂದಗೌಡ ಆಶಯ ವ್ಯಕ್ತಪಡಿಸಿದರು.

    ಕಾಂಗ್ರೆಸ್ ಮುಕ್ತ ಕರ್ನಾಟಕ: ಕರ್ನಾಟಕದಲ್ಲಿ ಕಾಂಗ್ರೆಸ್ ಇಲ್ಲ, ರಾಜ್ಯದಲ್ಲಿ ಬಿಜೆಪಿಗೆ ಯಾವ ಕಷ್ಟದ ಪರಿಸ್ಥಿತಿಯೂ ಇಲ್ಲ. ಮುಂದಿನ ಚುನಾವಣೆಯಲ್ಲಿ ಮಿಷನ್ 150 ಗುರಿ ತಲುಪುತ್ತೇವೆ. ಚುನಾವಣೆಯಲ್ಲಿ ಬರೀ ಗೆಲುವಲ್ಲ, ಅದ್ಧೂರಿ ಗೆಲುವು ಸಾಧಿಸುತ್ತೇವೆ. ಕಾಂಗ್ರೆಸ್ ಮುಕ್ತ ಭಾರತ ಆಗಲ್ಲ ಅಂತಿದ್ರು. ಈಗ ಎಲ್ಲರಿಗೂ ವಾಸ್ತವ ತಿಳಿದಿದೆ. ಕಾಂಗ್ರೆಸ್ ಮುಕ್ತ ಭಾರತಕ್ಕೆ ಕಾಲ ಸನ್ನಿಹಿತವಾಗುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಥಾನ ಕಳೆದುಕೊಂಡ್ರೆ ಅವರ ಕತೆ ಮುಗಿದಂತೆ. ಕರ್ನಾಟಕದ ಗೆಲುವು ದಕ್ಷಿಣ ಭಾರತದ ಗೆಲುವಿಗೆ ಬುನಾದಿ ಆಗಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ನಾಯಕ ಮುರಳೀಧರ್ ರಾವ್ ಹೇಳಿದರು.

    1951 ರಿಂದ ಜನ ಮಾತಾಡ್ತಾ ಇದ್ರು, ದೇಶದಲ್ಲಿ ಜನಸಂಘಕ್ಕೆ ಜಾಗ ಇಲ್ಲ. ಎಲ್ಲಾ ರೀತಿಯ ನೆಗೆಟಿವ್ ಟಾಕ್, ಕಮ್ಯುನಲ್ ಎಂದೆಲ್ಲ ತೆಗಳ್ತಾ ಇದ್ರು. ಆದರೆ ಇಂದು ರಾಷ್ಟ್ರಪತಿ, ಉಪರಾಷ್ಟ್ರಪತಿ, ಸ್ಪೀಕರ್, ಪ್ರಧಾನಿ ಎಲ್ಲರೂ ನಮ್ಮವರೇ ಆಗಿದ್ದಾರೆ ಎಂದು ಮುರುಳೀಧರ್‍ರಾವ್ ಅಂದ್ರು.