Tag: ಮುಲ್ಕಿ

  • Mangaluru| ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ

    Mangaluru| ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ

    ಮಂಗಳೂರು: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಮೃತ ಕಾರ್ತಿಕ್ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತರು. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್ ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ಡೆತ್ ನೋಟ್‌ನಲ್ಲಿ ಏನಿತ್ತು?
    ನಮ್ಮ ಸಂಸಾರ ಹಾಳು ಮಾಡಿದ್ದೇ ತಂದೆ, ತಾಯಿ, ಸಹೋದರಿ. ಇಂತಹ ತಂದೆ, ತಾಯಿ ಯಾರಿಗೂ ಸಿಗಬಾರದು. ನಮ್ಮ ಅಂತ್ಯಸಂಸ್ಕಾರವನ್ನು ಅತ್ತೆ ಮಾವ ನಡೆಸಿಕೊಡಬೇಕು ಎಂದು ಡೆತ್ ನೋಟ್‌ನಲ್ಲಿ ಮೃತ ಕಾರ್ತಿಕ್ ಬರೆದುಕೊಂಡಿದ್ದ.

    ಪ್ರಿಯಾಂಕ ಪೋಷಕರು ಕಾರ್ತಿಕ್ ತಂದೆ ತಾಯಿ ಹಾಗೂ ಸಹೋದರಿ ವಿರುದ್ಧ ದೂರು ನೀಡಿದ್ದರು. ಕಾರ್ತಿಕ್ ಕೊಲೆ ಮಾಡುದಕ್ಕೆ ಸಾಧ್ಯವೇ ಇಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಅತ್ತೆ ಮಾವ ಕಿರುಕುಳದಿಂದಲೇ ಈ ದುರಂತ ನಡೆದಿದೆ. ಸೂಕ್ತ ತನಿಖೆ ನಡೆಸುವಂತೆ ಮೃತ ಪ್ರಿಯಾಂಕಾ ಪೋಷಕರು ಆಗ್ರಹಿಸಿದ್ದಾರೆ.

    ಪ್ರಕರಣ ಏನು?
    ಸಹಕಾರಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ (32) ತನ್ನ ಪತ್ನಿ ಪ್ರಿಯಾಂಕ (28) ಹಾಗೂ ಮಗು ಹೃದಯ್‌ನನ್ನು (4) ಹತ್ಯೆಗೈದು ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಪತ್ನಿಗೆ ಅತ್ತೆ ಮಾವನೊಂದಿಗೆ ಮನಸ್ತಾಪ ಇದ್ದ ಹಿನ್ನೆಲೆ ಕಾರ್ತಿಕ್ ಕುಟುಂಬ ಮನೆಯ ಕೋಣೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಾರ್ತಿಕ್ ತಂದೆ ಜನಾರ್ದನ ಭಟ್ ಪಕ್ಷಿಕೆರೆ ಜಂಕ್ಷನ್‌ನಲ್ಲಿ ಹೋಟೆಲ್ ನಡೆಸಿಕೊಂಡಿದ್ದು, ಎಂದಿನಂತೆಯೇ ನ.9ರಂದು ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮಗುವನ್ನು ಕಾರ್ತಿಕ್ ಹತ್ಯೆ ಮಾಡಿದ್ದ. ಹತ್ಯೆಯ ಬಳಿಕ ಮಧ್ಯಾಹ್ನದ ವೇಳೆಗೆ ರೈಲಿಗೆ ತಲೆ ಕೊಟ್ಟು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

  • Mangaluru| ಪತ್ನಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

    Mangaluru| ಪತ್ನಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

    – ಸೊಸೆ, ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ಅತ್ತೆ – ಮಾವನಿಗೆ ಗೊತ್ತೇ ಇಲ್ಲ

    ಮಂಗಳೂರು: ಪತ್ನಿ ಹಾಗೂ ಮಗುವನ್ನು ಕೊಂದು ಪತಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು (Mangaluru) ಹೊರವಲಯದ ಪಕ್ಷಿಕೆರೆಯಲ್ಲಿ (Pakshikere) ನಡೆದಿದೆ.

    ಸಹಕಾರಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ (32) ತನ್ನ ಪತ್ನಿ ಪ್ರಿಯಾಂಕ (28) ಹಾಗೂ ಮಗು ಹೃದಯ್‌ನನ್ನು (4) ಹತ್ಯೆಗೈದು ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತ್ನಿಗೆ ಅತ್ತೆ ಮಾವನೊಂದಿಗೆ ಮನಸ್ತಾಪ ಇದ್ದ ಹಿನ್ನೆಲೆ ಕಾರ್ತಿಕ್ ಕುಟುಂಬ ಮನೆಯ ಕೋಣೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಾರ್ತಿಕ್ ತಂದೆ ಜನಾರ್ದನ ಭಟ್ ಪಕ್ಷಿಕೆರೆ ಜಂಕ್ಷನ್‌ನಲ್ಲಿ ಹೋಟೆಲ್ ನಡೆಸಿಕೊಂಡಿದ್ದು, ಎಂದಿನಂತೆಯೇ ಶುಕ್ರವಾರವೂ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮಗುವನ್ನು ಕಾರ್ತಿಕ್ ಹತ್ಯೆ ಮಾಡಿದ್ದ. ಹತ್ಯೆಯ ಬಳಿಕ ಮಧ್ಯಾಹ್ನದ ವೇಳೆಗೆ ರೈಲಿಗೆ ತಲೆ ಕೊಟ್ಟು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ನಾಯಿ ಮರಿಯ ಶಬ್ದ ಕೇಳಲಾಗದೇ ಮೀರತ್‌ನಲ್ಲಿ 5 ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ ಮಹಿಳೆಯರು: ಕೇಸ್ ದಾಖಲು

    ಮನಸ್ತಾಪದ ಹಿನ್ನೆಲೆ ಶುಕ್ರವಾರ ರಾತ್ರಿಯೂ ಮಗ, ಸೊಸೆ ಹಾಗೂ ಮೊಮ್ಮಗ ಕೋಣೆಯಲ್ಲಿಯೇ ಇದ್ದಾರೆಂದು ಮಾವ ಜನಾರ್ದನ ಭಟ್ ಭಾವಿಸಿ ಶನಿವಾರ ಕೂಡ ಎಂದಿನಂತೆಯೇ ಹೋಟೆಲ್‌ಗೆ ತೆರಳಿದ್ದರು. ಇತ್ತ ಕಾರ್ತಿಕ್ ಮೃತದೇಹ ಪತ್ತೆಯಾದ ಕಾರಣ ಆತನ ವಿಳಾಸ ಹುಡುಕಿಕೊಂಡು ಪೊಲೀಸರು ಮನೆಗೆ ಬಂದಿದ್ದಾರೆ. ಕೋಣೆಯ ಬಾಗಿಲು ತೆರೆದು ನೋಡಿದಾಗ ಪತ್ನಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಕಾರ್ತಿಕ್ ಪತ್ನಿ ಪ್ರಿಯಾಂಕ ಶಿವಮೊಗ್ಗ ಮೂಲದವರಾಗಿದ್ದರು. ಮಾತುಕತೆ ಇಲ್ಲದ ಕಾರಣ ಸೊಸೆ ಹಾಗೂ ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ವೃದ್ಧ ಅತ್ತೆ ಮಾವನಿಗೆ ಗೊತ್ತೇ ಆಗಿರಲಿಲ್ಲ. ಇದನ್ನೂ ಓದಿ: ಯೋಗ ಶಿಕ್ಷಕಿ ಜೀವಂತ ಸಮಾಧಿ ಕೇಸ್‌ | ಮರ್ಡರ್‌ ಮಾಡೋಕೆ 4 ಲಕ್ಷ ಸುಪಾರಿ, 1 ಲಕ್ಷ ಅಡ್ವಾನ್ಸ್ – ರಹಸ್ಯ ಸ್ಫೋಟ

    ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ತಿಕ್ ತನ್ನ ಹೆಂಡತಿ ಹಾಗೂ ಮಗುವನ್ನು ಗ್ಲಾಸ್ ಪೀಸ್‌ನಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ. ಶುಕ್ರವಾರ ಮಧ್ಯಾಹ್ನ ಕಾರ್ತಿಕ್ ಮೃತದೇಹ ಪತ್ತೆಯಾಗಿತ್ತು. ಇಂದು ಮಧ್ಯಾಹ್ನದ ವೇಳೆಗೆ ಕಾರ್ತಿಕ್ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕಾರ್ತಿಕ್ ಕುಟುಂಬಕ್ಕೆ ಮೂರು ವರ್ಷದಿಂದ ತಂದೆ-ತಾಯಿ ಜೊತೆ ಮಾತುಕತೆ ಇರಲಿಲ್ಲ. ಶುಕ್ರವಾರ ರಾತ್ರಿ ಕಾರ್ತಿಕ್ ಕುಟುಂಬ ಹೊರಗೆ ಹೋಗಿರಬಹುದು ಎಂದು ಕಾರ್ತಿಕ್ ತಂದೆ ಭಾವಿಸಿದ್ದರು. ಇಂದು ಮಧ್ಯಾಹ್ನವೇ ಅವರಿಗೆ ವಿಷಯ ಗೊತ್ತಾಗಿದೆ ಎಂದರು. ಇದನ್ನೂ ಓದಿ: ಈ ಸರ್ಕಾರ ತೆಗೆಯೋವರೆಗೆ ಮನೆಯಲ್ಲಿ ಮಲಗಲ್ಲ – ಗುಡುಗಿದ ಗೌಡರು

    ಕಾರ್ತಿಕ್ ಇತ್ತೀಚಿಗೆ ಆರ್ಥಿಕ ಸಮಸ್ಯೆಯಿಂದ ಇರೋದು ಕೂಡಾ ಗೊತ್ತಾಗಿದೆ. ವಾಷ್‌ರೂಂನ ಕಿಟಕಿ ಗ್ಲಾಸ್ ಒಡೆದು ಪತ್ನಿ, ಮಗುವಿನ ಹತ್ಯೆ ಮಾಡಿದ್ದಾನೆ. ಇಬ್ಬರ ದೇಹದ ಬೇರೆ ಬೇರೆ ಭಾಗದಲ್ಲಿ ಗಾಯಗಳಾಗಿವೆ. ಕೋಣೆಯಲ್ಲೇ ಫ್ಯಾನ್‌ಗೆ ನೇಣುಹಾಕಲು ಯತ್ನಿಸಿದ್ದಾನೆ. ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ತಿಕ್ ಕೃತ್ಯ ಎಸಗುವ ಮುನ್ನ ಸುಧೀರ್ಘ ಡೆತ್‌ನೋಟ್ ಬರೆದಿದ್ದಾನೆ. ತನ್ನ ಅಂತ್ಯಸಂಸ್ಕಾರ, ಆಸ್ತಿ ಯಾರ ಪಾಲಾಗಬೇಕೆಂದು ಡೆತ್ ನೋಟ್‌ನಲ್ಲಿದೆ. ತನ್ನ ತಂದೆ ತಾಯಿ ಅಂತ್ಯಸಂಸ್ಕಾರ ಮಾಡಬಾರದು ಎಂಬುವುದು ಉಲ್ಲೇಖಿಸಿದ್ದಾನೆ. ತಮ್ಮ ಸಾವಿಗೆ ಯಾರೂ ಕಾರಣ ಅಲ್ಲ ಎಂದು ಡೆತ್‌ನೋಟ್ ನಲ್ಲಿ ಬರೆದಿದ್ದಾನೆ. ಕಾರ್ತಿಕ್ ಪತ್ನಿ ಪ್ರಿಯಾಂಕ ಶಿವಮೊಗ್ಗ ಮೂಲದವರು. ಆಕೆಯ ಹೆತ್ತವರು ಬಂದ ಬಳಿಕ ಶವ ಪೋಸ್ಟ್ಮಾರ್ಟಂಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ | ದೇವರ ಹುಂಡಿ ಹಣಕ್ಕೂ ಖನ್ನಾ ಹಾಕಿದ್ರಾ ಅಧಿಕಾರಿಗಳು?

  • ಯುವತಿಯ ಸ್ನಾನದ ವೀಡಿಯೋ ಮಾಡಲು ಹೋಗಿ ಪೊಲೀಸರ ಅತಿಥಿಯಾದ ಯುವಕ!

    ಯುವತಿಯ ಸ್ನಾನದ ವೀಡಿಯೋ ಮಾಡಲು ಹೋಗಿ ಪೊಲೀಸರ ಅತಿಥಿಯಾದ ಯುವಕ!

    ಮಂಗಳೂರು: ಪಕ್ಕದ ಮನೆ ಯುವತಿಯ ಸ್ನಾನದ ವೀಡಿಯೋ ಚಿತ್ರೀಕರಿಸಲು ಮೊಬೈಲ್ ಇರಿಸಿ ಯುವಕನೊಬ್ಬ ಸಿಕ್ಕಿಬಿದ್ದ ಪ್ರಕರಣ ನಗರದ ಹೊರವಲಯದ ಪಕ್ಷಿಕೆರೆಯಲ್ಲಿ (Pakshikere) ನಡೆದಿದೆ.

    ಸುಮಂತ್ ಪೂಜಾರಿ (22) ಎಂಬಾತ ಪಕ್ಕದ ಮನೆಯ ಯುವತಿ ಸ್ನಾನ ಮಾಡುವ ಸಮಯ ನೋಡಿ ಸ್ನಾನಗೃಹದಲ್ಲಿ ಮೊಬೈಲ್ ಇಟ್ಟಿದ್ದ. ಆದರೆ ಯುವತಿಯ ಬದಲಾಗಿ ಆಕೆಯ ಅಣ್ಣ ಪ್ರಜ್ವಲ್ ಸ್ನಾನಕ್ಕೆ ತೆರಳಿದ್ದಾನೆ. ಈ ವೇಳೆ ಮೊಬೈಲ್ ಅಡಗಿಸಿಟ್ಟುರುವುದು ಪತ್ತೆಯಾಗಿದೆ. ಮೊಬೈಲ್‍ನಲ್ಲಿ ಕ್ಯಾಮೆರಾ ಆನ್ ಆಗಿರುವುದನ್ನು ನೋಡಿದ ಯುವತಿಯ ಅಣ್ಣನಿಗೆ ಸಂಶಯ ಬಂದು ಪರಿಶೀಲಿಸಿದ್ದಾನೆ. ಈ ವೇಳೆ ಮೊಬೈಲ್ ಸುಮಂತ್ ಪೂಜಾರಿಯದ್ದು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕೆಆರ್‌ಎಸ್‌ ಡ್ಯಾಂ ನಿಂದ ತಮಿಳುನಾಡಿಗೆ ನೀರು ಬಿಡುಗಡೆ

    ಕೂಡಲೇ ಪ್ರಜ್ವಲ್ ಸ್ಥಳೀಯರ ಸಹಾಯದಿಂದ ಸುಮಂತ್‍ನನ್ನು ಹಿಡಿದು ವಿಚಾರಿಸಿದ್ದಾನೆ. ಬಳಿಕ ಆತನ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಸುಮಂತ್ ಪೂಜಾರಿಯನ್ನು ಪೊಲೀಸರು‌ (Police) ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರೇಯಸಿ ಮೇಲೆ ಮಾರಣಾಂತಿಕ ಹಲ್ಲೆ – ಟೆಕ್ಕಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಪ್ಪನಾಡು ದುರ್ಗೆಗೆ ಭಕ್ತರಿಂದ 5 ಕೋಟಿ ಮೌಲ್ಯದ ಚಿನ್ನದ ಪಲ್ಲಕ್ಕಿ ಸಮರ್ಪಣೆ

    ಬಪ್ಪನಾಡು ದುರ್ಗೆಗೆ ಭಕ್ತರಿಂದ 5 ಕೋಟಿ ಮೌಲ್ಯದ ಚಿನ್ನದ ಪಲ್ಲಕ್ಕಿ ಸಮರ್ಪಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಪುಣ್ಯಕ್ಷೇತ್ರ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀದೇವಿಯ ಕೋರಿಕೆಯಂತೆ ಭಕ್ತರು ಕೋಟ್ಯಂತರ ರೂ. ಮೌಲ್ಯದ ಚಿನ್ನದ ಪಲ್ಲಕ್ಕಿಯನ್ನ ಸಮರ್ಪಣೆ ಮಾಡಿದ್ದಾರೆ.

    ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಬಪ್ಪನಾಡು ಕ್ಷೇತ್ರದ ಅತ್ಯಂತ ಪವಿತ್ರ ಪುಣ್ಯ ಕ್ಷೇತ್ರವಾಗಿದೆ. ಸುಮಾರು 800 ವರ್ಷಗಳ ಇತಿಹಾಸವಿರುವ ಈ ದೇವಸ್ಥಾನವನ್ನು ಮುಸ್ಲಿಂ ವ್ಯಾಪಾರಿಯಾಗಿದ್ದ ಬಪ್ಪ ಬ್ಯಾರಿ ತನ್ನ ಕನಸಿನಲ್ಲಿ ದೇವಿ ಕಾಣಿಸಿಕೊಂಡ ಕಾರಣ ಗುಡಿ ಕಟ್ಟಿ ನಂಬಿದ್ದರು ಎನ್ನುವ ಪ್ರತೀತಿ ಇದೆ. ದೇವಾಲಯದ ಮುಖ್ಯ ದೇವತೆ ಶ್ರೀ ದುರ್ಗಾಪರಮೇಶ್ವರಿಯಾಗಿದ್ದು, ಲಿಂಗ ರೂಪದಲ್ಲಿ ಆರಾಧಿಸಲ್ಪಡುತ್ತಾಳೆ. ಎಲ್ಲ ಜನಾಂಗ ಮತ್ತು ಜಾತಿಗಳ ಜನರ ಪಾಲಿಗೆ ಆರಾಧ್ಯ ದೇವತೆಯಾಗಿರುವ ದುರ್ಗಾಪರಮೇಶ್ವರಿಗೆ ಚಿನ್ನದ ಪಲ್ಲಕ್ಕಿಯನ್ನ ಸಮರ್ಪಣೆ ಮಾಡಬೇಕು ಎನ್ನುವುದು ಅಷ್ಟಮಂಗಳ ಪ್ರಶ್ನೆಯ ವೇಳೆ ಗೊತ್ತಾಗಿತ್ತು.

    ಚಿನ್ನದ ಪಲ್ಕಕ್ಕಿಗೆ ಕೋಟ್ಯಂತರ ರೂಪಾಯಿ ವ್ಯಯವಾಗುವ ಕಾರಣದಿಂದ ಒಂದಷ್ಟು ಆತಂಕವಾಗಿತ್ತು. ಆದರೆ ಕ್ಷೇತ್ರದ ಆಡಳಿತ ಮಂಡಳಿ ಮತ್ತು ಭಕ್ತರು ಚಿನ್ನದ ಪಲ್ಲಕ್ಕಿ ನಿರ್ಮಾಣಕ್ಕೆ ಮುಂದಾಗಿದ್ದು, 2018ರ ವಿಜಯದಶಮಿ ದಿನ ಭಕ್ತರಿಂದ ದೇಣಿಗೆ ಸಂಗ್ರಹಿಸಲು ಆರಂಭಿಸಿದರು. ಆ ಬಳಿಕ ನಡೆದಿದ್ದು ಅಕ್ಷರಶಃ ಪವಾಡ. ಚಿನ್ನ, ನಗದು ಸೇರಿದಂತೆ ಭಾರೀ ಪ್ರಮಾಣದ ದೇಣಿಗೆ ಕ್ಷೇತ್ರಕ್ಕೆ ಹರಿದು ಬಂತು. ಕೇವಲ 1 ವರ್ಷ 4 ತಿಂಗಳ ಅಂತರದಲ್ಲಿ ಬರೋಬ್ಬರಿ 5 ಕೋಟಿ ಮೌಲ್ಯದ 11 ಕೆ.ಜಿ. ತೂಕದ ಬೃಹತ್ ಸ್ವರ್ಣ ಪಲ್ಕಕ್ಕಿ ಎದ್ದು ನಿಂತಿದೆ. ಅದನ್ನು ಸಾವಿರಾರು ಭಕ್ತರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ದುರ್ಗಾಪರಮೇಶ್ವರಿಗೆ ಅರ್ಪಣೆ ಮಾಡಲಾಗಿದೆ.

    ಈ ಚಿನ್ನದ ಪಲ್ಲಕ್ಕಿ ನಿರ್ಮಾಣದ ಕಾರ್ಯ 1 ವರ್ಷ 4 ತಿಂಗಳ ಹಿಂದೆ ಆರಂಭವಾದರೂ ದೇಣಿಗೆ ಸಂಗ್ರಹಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ಅನೇಕ ಭಕ್ತರು ಚಿನ್ನ, ತಮ್ಮ ಒಡವೆಗಳು ಸೇರಿ ನಗದು ರೂಪದಲ್ಲೂ ದೇಣಿಗೆ ನೀಡಿದ್ದಾರೆ. ಹೀಗೆ ಕೋಟಿ ಕೋಟಿ ರೂಪಾಯಿ ಸಂಗ್ರಹವಾದ ಬೆನ್ನಲ್ಲೇ ದೇವಸ್ಥಾನದ ಆಡಳಿತ ಮಂಡಳಿ ಉಡುಪಿಯ ಗುಜ್ಹಾಡಿಯ ಸ್ವರ್ಣ ಜ್ಯೂವೆಲ್ಲರಿಗೆ ಚಿನ್ನದ ಪಲ್ಲಕ್ಕಿ ನಿರ್ಮಾಣದ ಜವಾಬ್ದಾರಿ ವಹಿಸಿದೆ.

    ದೇವಸ್ಥಾನದ 1.50 ಕೆ.ಜಿ ಹಳೆಯ ಚಿನ್ನ, ಭಕ್ತರಿಂದ ಸಂಗ್ರಹವಾದ 6 ಕೆ.ಜಿ ಚಿನ್ನ ಮತ್ತು ದೇಣಿಗೆ ಬಂದ ನಗದನ್ನು ಸೇರಿಸಿ ಪಲ್ಲಕ್ಕಿ ನಿರ್ಮಾಣದ ಕೆಲಸ ಉಡುಪಿಯಲ್ಲಿ ಶುರುವಾಗಿತ್ತು. ಆಂಧ್ರ ಪ್ರದೇಶ ಮೂಲದ ಶಿಲ್ಪಿ ಅರ್ಜುನ್ ಮತ್ತು ಅವರ ತಂಡ ಸುಮಾರು ಎರಡು ತಿಂಗಳ ಕಾಲ ಶ್ರಮ ವಹಿಸಿ ಭವ್ಯ ಸ್ವರ್ಣ ಪಲ್ಲಕ್ಕಿ ನಿರ್ಮಾಣ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಕ್ಷೇತ್ರಕ್ಕೆ ತರಲಾಗಿದ್ದ ಪಲ್ಲಕ್ಕಿಯನ್ನು ಇಂದು ದೇವರಿಗೆ ಅರ್ಪಣೆ ಮಾಡಲಾಯ್ತು. ಕ್ಷೇತ್ರದಲ್ಲಿ ಶತ ಚಂಡಿಕಾಯಾಗದ ಜೊತೆಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿಯನ್ನ ದೇವಿಗೆ ಅರ್ಪಿಸಲಾಗಿದೆ. ಇಷ್ಟು ದಿನ ಬೆಳ್ಳಿಯ ಪಲ್ಲಕ್ಕಿಯಲ್ಲಿ ವಾರ್ಷಿಕ ಜಾತ್ರೋತ್ಸವದ ವೇಳೆ ವಿರಾಜಮಾನಳಾಗುತ್ತಿದ್ದ ದುರ್ಗೆ ಇನ್ನು ಮುಂದೆ ಸ್ವರ್ಣ ಪಲ್ಲಕ್ಕಿಯಲ್ಲಿ ವಿರಾಜಮಾನಳಾಗಲಿದ್ದಾಳೆ. ಇದು ಭಕ್ತರಿಗೂ ಖುಷಿ ಕೊಟ್ಟಿದೆ.

    ಕಳೆದ ವರ್ಷ ನಡೆದ ಬ್ರಹ್ಮಕಲಶೋತ್ಸವದಲ್ಲಿ ಉಳಿಕೆಯಾಗಿದ್ದ ಒಂದೂವರೆ ಕೋಟಿ ರೂಪಾಯಿಯನ್ನೂ ಈ ಚಿನ್ನದ ಪಲ್ಲಕ್ಕಿಗೆ ದೇಣಿಗೆಯಾಗಿ ಹಾಕಲಾಗಿದೆ. ಒಟ್ಟಿನಲ್ಲಿ ಬಪ್ಪನಾಡಿನ ಭಕ್ತ ಸಾಗರ ಹರಿಸಿದ ದೇಣಿಗೆ ಚಿನ್ನದ ಪಲ್ಲಕ್ಕಿ ಸಮರ್ಪಣೆಗೆ ಸಾಕ್ಷಿಯಾಗಿದೆ. ಈ ಮೂಲಕ ತನ್ನ ಇಷ್ಟಾರ್ಥ ಈಡೇರಿಸಿಕೊಂಡ ದೇವಿ ಭಕ್ತರನ್ನು ಕಾಯುತ್ತಾ, ಬಪ್ಪನಾಡಿನಲ್ಲಿ ಸಾಮರಸ್ಯ ಕಾಯುವ ದೇವತೆಯಾಗಿ ಕಂಗೊಳಿಸುತ್ತಿದ್ದಾಳೆ.

  • ತಾಕತ್ತಿದ್ದರೆ ಚುನಾವಣೆಗೆ ನಿಲ್ಲಲಿ- ಕರಿಂಜೆ ಸ್ವಾಮೀಜಿಗೆ ಏಕವಚನದಲ್ಲೇ ಸವಾಲೆಸೆದ ಶಾಸಕ ಅಭಯಚಂದ್ರ ಜೈನ್

    ತಾಕತ್ತಿದ್ದರೆ ಚುನಾವಣೆಗೆ ನಿಲ್ಲಲಿ- ಕರಿಂಜೆ ಸ್ವಾಮೀಜಿಗೆ ಏಕವಚನದಲ್ಲೇ ಸವಾಲೆಸೆದ ಶಾಸಕ ಅಭಯಚಂದ್ರ ಜೈನ್

    ಮಂಗಳೂರು: ಕಾಂಗ್ರೆಸ್ ಶಾಸಕ ಅಭಯಚಂದ್ರ ಜೈನ್ ಅವರು ಮೂಡಬಿದಿರೆಯ ಕರಿಂಜೆ ಮುಕ್ತಾನಂದ ಸ್ವಾಮೀಜಿ ಕುರಿತು ಪಕ್ಷದ ಕಾರ್ಯಕ್ರಮದಲ್ಲಿ ಏಕವಚನದಲ್ಲಿಯೇ ವಾಗ್ದಾಳಿ ಮಾಡಿದ್ದಾರೆ.

    ತುಳುವಿನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಜೈನ್, ಅವಾ ಯಾರೋ ಒಬ್ಬ ಕರಿಂಜೆ ಸ್ವಾಮೀಜಿ ಭಾಷಣದಲ್ಲಿ ಹೇಳಿದನಂತೆ. ಒಬ್ಬ ರಾಕ್ಷಸ ಮುಖ್ಯಮಂತ್ರಿ ಇದ್ದಾನೆ. ಒಬ್ಬ ರಾಕ್ಷಸ ಎಂಎಲ್‍ಎ ಇದ್ದಾನೆ ಅಂತ. ನನಗೆ ಬೈಯಲಿ, ಅದು ಬಿಟ್ಟು ಮುಖ್ಯಮಂತ್ರಿಗೆ ಇನ್ನೊಮ್ಮೆ ಬೈದರೆ ಅವನು ಎಷ್ಟು ದೊಡ್ಡ ಸ್ವಾಮೀಜಿ ಆದರೂ ಬಿಡುವುದಿಲ್ಲ. ಅವನಿಗೆ ಕಪ್ಪು ಬಾವುಟ ಹಿಡಿಯುವಂತೆ ನಾನು ಮಾಡ್ತೇನೆ ಅಂತ ಹೇಳಿದ್ರು.

    ತಾಕತ್ತಿದ್ದರೆ ಕರಿಂಜೆ ಸ್ವಾಮೀಜಿ ಚುನಾವಣೆಗೆ ನಿಲ್ಲಲಿ. ಅವನು ಸರ್ಕಾರಿ ಜಾಗ ಕಬಳಿಸಿದ್ದಾನೆ. ಅದನ್ನು ತನಿಖೆ ಮಾಡಬೇಕು ಅಂತ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ ಅಂತ ಏಕವಚನದಲ್ಲಿ ನಿಂದಿಸಿ ಸವಾಲೆಸೆದಿದ್ದಾರೆ.

    ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿಗೆ ಬೈದ್ರೆ ನಾವು ಬಿಡಲ್ಲ. ದೊಡ್ಡ ಮಟ್ಟದ ಹೋರಾಟವೇ ಮಾಡುತ್ತೇವೆ. ಕಾಂಗ್ರೆಸ್ ಪಕ್ಷ ಯಾರಿಗೂ ಅನ್ಯಾಯ ಮಾಡಿಲ್ಲ. ಬದಲಾಗಿ ಬಡವರ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಒಗ್ಗಟ್ಟು ಬಹಳ ಮುಖ್ಯವಾಗಿದೆ. ಈಗಾಗಲೇ ಕಾಂಗ್ರೆಸ್ ವಿರುದ್ಧ ಹಲವಾರು ಪಿತೂರಿಗಳು ನಡೆದಿದ್ದು, ಇದ್ಯಾವುದನ್ನೂ ನಾವು ಕೇರ್ ಮಾಡಲ್ಲ. ಅವುಗಳನ್ನೆಲ್ಲಾ ಎದುರಿಸುವ ಕೆಲಸ ಮಾಡುತ್ತೇವೆ ಅಂದ್ರು.

    ಪ್ರತಾಪ್ ಚಂದ್ರ ಶೆಟ್ಟಿ ಅವರು ಹಿರಿಯ ಕಾಂಗ್ರೆಸ್ ಎಂಎಲ್‍ಎ ಹಾಗೂ ಎಂಎಲ್ ಸಿ ಆಗಿದ್ದರು. ಪ್ರಾಮಾಣಿಕ ವ್ಯಕ್ತಿಯಾಗಿರೋ ಅವರು ಇಂದಿಗೂ ಕುಂದಾಪುರದಲ್ಲಿ ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ಅವರೇ ವಿಧಾನಪರಿಷತ್ ಸದಸ್ಯರಾಗಬೇಕು ಅಂತ ಅವರು ಒತ್ತಾಯಿಸಿದರು.

    ಕರಿಂಜೆ ಶ್ರೀ ಇತ್ತೀಚೆಗಷ್ಟೆ ಕಾರ್ಯಕ್ರಮವೊಂದರಲ್ಲಿ ರಾಕ್ಷಸ ಸಿಎಂ ಮತ್ತು ರಾಕ್ಷಸ ಎಂಎಲ್‍ಎ ಎಂಬ ಹೇಳಿಕೆ ನೀಡಿದ್ದರು. ಒಟ್ಟಿನಲ್ಲಿ ಇದೀಗ ಹಿಂದೂ ಸ್ವಾಮೀಜಿ ಬಗ್ಗೆ ಶಾಸಕ ಅಭಯಚಂದ್ರ ಹೇಳಿಕೆ ನೀಡಿರುವುದರ ವಿರುದ್ಧ ಹಿಂದೂಪರ ಸಂಘಟನೆಗಳು ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದು, ಬೃಹತ್ ಪ್ರತಿಭಟನೆಗೆ ನಿರ್ಧಾರ ನಡೆಸಿವೆ.