Tag: ಮುಸ್ಲಿಂ ಸಂಘಟನೆ

  • ಐವರು ಐಸಿಸ್ ಉಗ್ರರು ಅರೆಸ್ಟ್‌ – ಭಾರೀ ಪ್ರಮಾಣದ ಕೆಮಿಕಲ್‌ ವೆಪೆನ್‌ ಪತ್ತೆ

    ಐವರು ಐಸಿಸ್ ಉಗ್ರರು ಅರೆಸ್ಟ್‌ – ಭಾರೀ ಪ್ರಮಾಣದ ಕೆಮಿಕಲ್‌ ವೆಪೆನ್‌ ಪತ್ತೆ

    – ಮುಸ್ಲಿಂ ಸಾಮ್ರಾಜ್ಯ ಸ್ಥಾಪನೆಗಾಗಿ ʻಖಿಲಾಫತ್‌ʼ ಮಾದರಿ ಅನುಸರಿಸುತ್ತಿದ್ದ ಗ್ಯಾಂಗ್‌
    – ಪಾಕಿಸ್ತಾನದಿಂದ ನಿರ್ವಹಿಸುತ್ತಿದ್ದ ಗ್ಯಾಂಗ್‌

    ನವದೆಹಲಿ: ಕೆಮಿಕಲ್‌ ವೆಪೆನ್‌ (ರಾಸಾಯನಿಕ ಶಸ್ತ್ರಾಸ್ತ್ರ – Chemical Weapons) ತಯಾರಿಸುತ್ತಿದ್ದ ಹಾಗೂ ಮುಸ್ಲಿಂ ಸಂಘಟನೆಗೆ ಯುವಕರನ್ನು ನೇಮಿಸಿಕೊಳ್ಳಲು ʻಖಿಲಾಫತ್‌ʼ(Khilafat Model) ಮಾದರಿ ಅನುಸರಿಸುತ್ತಿದ್ದ ಐವರು ಶಂಕಿತ ಐಸಿಸ್‌ ಉಗ್ರರನ್ನು ವಿವಿಧ ರಾಜ್ಯಗಳಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

    ದೆಹಲಿ (Delhi), ಮಧ್ಯಪ್ರದೇಶ, ಜಾರ್ಖಂಡ್ ಮತ್ತು ತೆಲಂಗಾಣದಲ್ಲಿ ಶಂಕಿತ ಉಗ್ರರನ್ನ ಬಂಧಿಸಲಾಗಿದೆ. ಮುಂಬೈ ನಿವಾಸಿ ಅಫ್ತಾಬ್, ಅಬು ಸುಫಿಯಾನ್‌ ಇಬ್ಬರನ್ನ ದೆಹಲಿಯ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಲ್ಲಿ, ಆಶರ್ ದಾನಿಶ್‌ ರಾಂಚಿಯಲ್ಲಿ, ಕಮ್ರಾನ್ ಖುರೇಷಿಯನ್ನ ಮಧ್ಯಪ್ರದೇಶದ ರಾಜ್‌ಗಢದಲ್ಲಿ ಮತ್ತು ಹುಜೈಫ್ ಯೆಮೆನ್‌ನ ತೆಲಂಗಾಣದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: Hyderabad | ಕಟ್ಟಿಹಾಕಿ, ಪ್ರೆಷರ್ ಕುಕ್ಕರ್‌ನಿಂದ ಹೊಡೆದು ಮಹಿಳೆಯ ಭೀಕರ ಕೊಲೆ

    ಬಂಧಿತ ಐವರು ಉಗ್ರ ಸಂಘಟನೆಯ ಸ್ಲೀಪರ್‌ ಮಾಡ್ಯೂಲ್‌ನ ಭಾಗವಾಗಿದ್ದರು. ಬಾಂಬ್‌ಗಳನ್ನ ತಯಾರಿಸುವುದು, ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವುದು ಹಾಗೂ ಮುಸ್ಲಿಂ ಸಂಘಟನೆಯ (Muslims Union) ಬಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಇದು ಮ್ಯಾಚ್‌ ಅಷ್ಟೇ; ಭಾರತ-ಪಾಕ್‌ ಪಂದ್ಯ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

    ಖಿಲಾಫತ್‌ ರಾಜ್ಯ ಸ್ಥಾಪನೆ ಎಂದರೆ ಇಸ್ಲಾಮಿಕ್‌ ರಾಜ್ಯ ಸ್ಥಾಪನೆ ಎಂದರ್ಥ.‌ ಅದರಂತೆ ಒಂದು ಸ್ಥಳವನ್ನು ಆಕ್ರಮಣ ಮಾಡಿಕೊಂಡು ನಂತರ ಅಲ್ಲಿ ಜಿಹಾದ್‌ ಚಟುವಟಿಕೆ ನಡೆಸುವುದನ್ನು ಇದು ಸೂಚಿಸುತ್ತದೆ. ಪಾಕಿಸ್ತಾನದಿಂದ ಈ ಮಾದರಿಯನ್ನ ನಿರ್ವಹಿಸಲಾಗಿದೆ. ಉಗ್ರರು ತಮ್ಮ ಸೋಷಿಯಲ್‌ ಮೀಡಿಯಾಗಳ ಮೂಲಕ ಪಾಕಿಸ್ತಾನದಲ್ಲಿರುವ ತಮ್ಮ ನಿರ್ವಾಹಕರೊಂದಿಗೆ ನಿರಂತರ ಸಂವಹನ ನಡೆಸುತ್ತಿದ್ದರು ಅನ್ನೋ ರಹಸ್ಯವೂ ಬಯಲಾಗಿದೆ. ಇದನ್ನೂ ಓದಿ: ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ MEA ವಾರ್ನಿಂಗ್‌

    ಬಾಂಬ್‌ ಎಕ್ಸ್‌ಪರ್ಸ್‌ ಪದವೀಧರ ಆಶರ್ ದಾನಿಶ್‌
    ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವೀಧರನಾಗಿರುವ ಡ್ಯಾನಿಶ್‌ ಈ ಐವರ ಗುಂಪಿನ ನಾಯಕನಾಗಿದ್ದ. ʻಗಜ್ವಾʼ ಎಂಬ ಕೋಡ್‌ ನೊಂದಿಗೆ ಭಾರತದಲ್ಲಿ ಕೆಲಸ ಮಾಡುತ್ತಿದ್ದ. ಈ ವರ್ಷ ಜನವರಿಯಲ್ಲಿ ಭಾರತಕ್ಕೆ ಬಂದಿದ್ದ. ಬಾಂಬ್‌ ತಯಾರಿಸುವುದರಲ್ಲಿ ಎಕ್ಸ್‌ಪರ್ಟ್‌ ಆಗಿದ್ದ ಎಂದು ವರದಿಗಳು ತಿಳಿಸಿವೆ. ತನ್ನ ಅಸಲಿ ವೇಷ ಬದಲಿಸಿ ವಿದ್ಯಾರ್ಥಿಯಂತೆ ಗುರುತಿಸಿಕೊಂಡಿದ್ದ. ಈತ ರಾಂಚಿಯ ತಬಾರಕ್‌ ಲಾಡ್ಜ್‌ನಲ್ಲಿದ್ದಾಗ ಸಿಕ್ಕಿಬಿದ್ದಿದ್ದಾನೆ.

    ಭಾರೀ ಪ್ರಮಾಣದ ಕೆಮಿಕಲ್‌ ಪತ್ತೆ
    ಬಂಧಿತ ಆರೋಪಿಗಳಿಂದ ಒಂದು ಪಿಸ್ತೂಲ್‌, ಡಿಜಿಟಲ್‌ ಸಾಧನಗಳು, ಭಾರೀ ಪ್ರಮಾಣದ ಕೆಮಿಕಲ್‌ ವೆಪೆನ್‌, ವೆಪೆನ್‌ ಕಾರ್ಟ್ರಿಡ್ಜ್‌ ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಿದ ಕೆಮಿಕಲ್‌ಗಳ ಪೈಕಿ ಹೈಡ್ರೋಕ್ಲೋರಿಕ್ ಆಮ್ಲ, ನೈಟ್ರಿಕ್ ಆಮ್ಲ, ಸೋಡಿಯಂ ಬೈಕಾರ್ಬನೇಟ್, ಸಲ್ಫರ್ ಪೌಡರ್, pH ಮೌಲ್ಯ ಪರೀಕ್ಷಕ ಮತ್ತು ಬಾಲ್ ಬೇರಿಂಗ್‌ಗಳು ಸೇರಿವೆ. ಅಲ್ಲದೇ ಲ್ಯಾಪ್ ಟಾಪ್, ಮೊಬೈಲ್ ಫೋನ್, ಡಿಜಿಟಲ್‌ ತಕ್ಕಡಿ, ಬೀಕರ್ ಸೆಟ್, ಗ್ಲೌಸ್‌, ಆಕ್ಸಿಜನ್‌ ಮಾಸ್ಕ್‌, ಮದರ್‌ಬೋರ್ಡ್ ಹೊಂದಿರುವ ಪ್ಲಾಸ್ಟಿಕ್ ಕಂಟೇನರ್ ವಶಪಡಿಸಿಕೊಳ್ಳಲಾಗಿದೆ. ಡ್ಯಾನಿಶ್‌ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ತಯಾರಿಸುವಲ್ಲಿ ಪರಿಣಿತನಾಗಿದ್ದ ಎಂದು ತಿಳಿದುಬಂದಿದೆ.

  • ಕರ್ನಾಟಕದಲ್ಲಿ ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ನಿಷೇಧ

    ಕರ್ನಾಟಕದಲ್ಲಿ ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ನಿಷೇಧ

    – ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ರಾಜ್ಯ ಸರ್ಕಾರ ಆದೇಶ

    ಬೆಂಗಳೂರು: ವಿವಿಧ ಮುಸ್ಲಿಂ ಸಂಘಟನೆಗಳ (Muslim Organization) ಮನವಿ ಮೇರೆಗೆ ಸರ್ಕಾರವು ರಾಜ್ಯದಲ್ಲಿ ʻಹಮಾರೆ ಬಾರಾಹ್ʼ ಚಲನಚಿತ್ರ ಬಿಡುಗಡೆ ಮತ್ತು ಪ್ರಸಾರವನ್ನು ನಿಷೇಧಿಸಿ ಆದೇಶಿಸಿದೆ. ಶುಕ್ರವಾರ (ಇಂದು) ಬಿಡುಗಡೆಯಾಗಬೇಕಿದ್ದ  ʻಹಮಾರೆ ಬಾರಹ್‌ʼ (Hamare Baarah) ಚಿತ್ರವನ್ನು ಈಗಾಗಲೇ ದೇಶಾದ್ಯಂತ ವಿವಿಧೆಡೆ ನಿಷೇಧಿಸಲಾಗಿದೆ.

    ಸಿನಿಮಾ ಟ್ರೈಲರ್‌ನಲ್ಲಿಯೇ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವಂತಹ ಅಂಶಗಳಿವೆ. ಆದ್ದರಿಂದ ಚಿತ್ರ ಬಿಡುಗಡೆ ಮಾಡದಂತೆ ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ (Govt of Karnataka) ಮನವಿ ಮಾಡಿದ್ದವು. ವಿವಿಧ ಸಂಘಟನೆಗಳ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಚಲನಚಿತ್ರ ಬಿಡುಗಡೆಗೆ ನಿಷೇಧ ಹೇರಿದೆ. ಇದನ್ನೂ ಓದಿ: ನಟಿ, ನೂತನ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ

    ಸರ್ಕಾರದ ಆದೇಶ ಪ್ರತಿಯಲ್ಲಿ ಏನಿದೆ?
    ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಇತ್ತೀಚೆಗೆ ಖಾಸಗಿ ವಾಹಿನಿಯೊಂದು ʻಹಮಾರೆ ಬಾರಾಹ್ʼ ಎಂಬ ಚಲನಚಿತ್ರದ ಟ್ರೈಲರ್ (Cinema Trailer) ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಆದ್ದರಿಂದ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಷಡ್ಯಂತ್ರವಾಗಿದೆ.

    ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಜೂನ್‌ 7 ರಂದು ಬಿಡುಗಡೆಯಾಗಲಿರುವ ʻಹಮಾರೆ ಬಾರಾಹ್ʼ ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಘಟನೆಗಳು ಮನವಿ ಮಾಡಿದ್ದವು. ಇದನ್ನೂ ಓದಿ: ನನ್ನ ತಾಯಿ ಕೂಡ ಪ್ರತಿಭಟನೆಯಲ್ಲಿದ್ರು- ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಬ್ಬಂದಿ ಸಮರ್ಥನೆ

    ಈ ಚಲನಚಿತ್ರದ ಟ್ರೈಲರ್ ಅನ್ನು ಪರಿಶೀಲಿಸಲಾಗಿ ʻಹಮಾರೆ ಬಾರಾಹ್ʼ ಚಲನಚಿತ್ರದಲ್ಲಿ ಪವಿತ್ರ ಗ್ರಂಥ ಕುರಾನ್ ಶರೀಫರಲ್ಲಿ ಇರುವ ಸೂರೆ ಎ ಬಕರ ದ ಸಾಲಿನಲ್ಲಿನ ಉಪದೇಶಗಳು ಹಾಗೂ ಸಂದೇಶಗಳ ಕುರಿತಂತೆ ನಿರ್ಮಾಪಕ ಹಾಗೂ ನಿರ್ದೇಶಕರು ತಪ್ಪು ಅಪಾರ್ಥ ಸೃಷ್ಟಿಸಿ, ಪ್ರಚೋದನಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ, ಕೆಲವು ಧರ್ಮದ ಜನರುಗಳನ್ನು ಕೆರಳಿಸುವ, ದ್ವೇಷ ಭಾವನೆ ಪ್ರಚೋದಿಸುವ ಮತ್ತು ಒಂದು ಸಮಾಜವನ್ನು ಅವಹೇಳನಕಾರಿಯಾಗಿ ಬಿಂಬಿಸುವ ಪ್ರಯತ್ನದಂತೆ ಕಾಣುತ್ತದೆ. ಒಂದು ಸಮಾಜವನ್ನು ಧರ್ಮದ ಆಧಾರದಲ್ಲಿ ವಿಶ್ಲೇಷಣೆ ಮಾಡುವುದು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಂಭವವಿದೆ.

    ʻಹಮಾರೆ ಬಾರಾಹ್ʼ ಚಲನಚಿತ್ರ ಬಿಡುಗಡೆಗೆ ಅನುಮತಿ ಕೊಟ್ಟಲ್ಲಿ ರಾಜ್ಯದ ಶಾಂತಿಗೆ ಭಂಗವುಂಟಾಗುತ್ತದೆ. ಜೊತೆಗೆ ಸೌಹಾರ್ದತೆ ಹದಗೆಡುವ ಸಾಧ್ಯತೆಯಿದ್ದು, ಮಹಿಳೆಯರ ಭಾವನೆಗಳಿಗೂ ಧಕ್ಕೆಯುಂಟಾಗುತ್ತದೆ ಎಂಬ ಸನ್ನಿವೇಶಗಳು ಕಂಡುಬಂದಿವೆ. ಚಲನಚಿತ್ರ ಬಿಡುಗಡೆಗೂ ಮುನ್ನ ಸಿನಿಮಾ (ರೆಗ್ಯೂಲೇಶನ್) ಆಕ್ಟ್ -1964ರ ಸೆಕ್ಷನ್ -15(2)ರಡಿ ಸಂಬಂಧಪಟ್ಟವರಿಗೆ ನೋಟೀಸನ್ನು ಜಾರಿ ಮಾಡಿ ವಿವರಣೆ ಪಡೆಯಬೇಕಾಗಿತ್ತು. ಆದರೆ ಸದರಿ ಚಲನಚಿತ್ರದ ನಿರ್ದೇಶಕ ಕಮಲ್ ಚಂದ್ರ ಮತ್ತು ನಿರ್ಮಾಪಕರಾದ ಬೀರೇಂದ್ರ ಭಗತ್, ರವಿ ಎಸ್.ಗುಪ್ತ, ಶಿಯೋ ಬಲಕ್ ಸಿಂಗ್, ಸಂಜಯ್ ನಾಗಪಾಲ್ ಹಾಗೂ ಮತ್ತಿತರರು ನೆರೆ ರಾಜ್ಯದಲ್ಲಿದ್ದು, ಸದರಿಯವರಿಗೆ ಕರ್ನಾಟಕ ಸಿನಿಮಾ (ರೆಗ್ಯೂಲೇಶನ್) ಆಕ್ಟ್ -1964ರ ಸೆಕ್ಷನ್ -15(2) ಅಡಿ ನೋಟೀಸು ಜಾರಿ ಮಾಡಿ, ಅವರುಗಳಿಂದ ವಿವರಣೆ ಪಡೆದು ಪರಿಶೀಲಿಸಲು ಸಾಕಷ್ಟು ಕಾಲಾವಕಾಶ ಇಲ್ಲದಿರುವುದರಿಂದ ಸಿನಿಮಾ ನಿಷೇಧಕ್ಕೆ ಆದೇಶಿಸಿದೆ. ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನಿಮಾ ಮಂದಿರಗಳು, ಖಾಸಗಿ ಟಿವಿ ಚಾಲನ್‌ಗಳು, ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

  • ಉಡುಪಿಯಿಂದ ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದ್ಯೋ ಗೊತ್ತಿಲ್ಲ – ಮುತಾಲಿಕ್ ಆತಂಕ

    ಉಡುಪಿಯಿಂದ ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದ್ಯೋ ಗೊತ್ತಿಲ್ಲ – ಮುತಾಲಿಕ್ ಆತಂಕ

    ಮೈಸೂರು: ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ (Udupi College Video Case) ಸಂಬಂಧಿಸಿದಂತೆ ಮಾತನಾಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ (Pakistan) ಹೋಗಿದೆಯೋ ಗೊತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್, ಪ್ರಕರಣದ ಹಿಂದೆ ಇಸ್ಲಾಮಿಕ್ ಸಂಘಟನೆಗಳ ಕೈವಾಡವಿದೆ. ಆದ್ರೆ ಈ ಬಗ್ಗೆ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಆರಂಭದಲ್ಲೇ ಪ್ರಕರಣ ದಾರಿ ತಪ್ಪಿಸುವ ಕೆಲಸ ಆಗಿತ್ತು ಎಂದು ದೂರಿದ್ದಾರೆ. ಇದನ್ನೂ ಓದಿ: ಕೇಳಿದಷ್ಟು ಹಣಕ್ಕೆ ಪ್ಲಾಸ್ಟಿಕ್ ಟೇಬಲ್ ಕೊಟ್ಟಿಲ್ಲವೆಂದು ವ್ಯಾಪಾರಿ ಮೇಲೆ ಹಲ್ಲೆ- ಮುಖ್ಯಪೇದೆ ಅಮಾನತು

    ಘಟನೆ ನಡೆಯದೇ ಇದ್ದಿದ್ದರೆ ಮಕ್ಕಳಿಂದ ಏಕೆ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡಿದ್ದಾರೆ? ಪತ್ರ ಬರೆದುಕೊಟ್ಟಿದ್ದಾರೆ ಅಂದ ಮೇಲೆ ತಪ್ಪು ಮಾಡಿದ್ದಾರೆ ಅಂತಾ ಅಲ್ವಾ? ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಸಹ ಆ ರೀತಿ ಹೇಳಬಾರದಿತ್ತು. ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದೆಯೋ ಗೊತ್ತಿಲ್ಲ. ಎಲ್ಲವೂ ಸಮಗ್ರವಾಗಿ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಡ್ಡಿಗೆ ಸಾಲ ಪಡೆದು ಜರ್ಮನಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬೆಳಗಾವಿ ಯುವತಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ

    Gyanvapi mosque, 

    ಇದೇ ವೇಳೆ ಜ್ಞಾನವಾಪಿ ಮಸೀದಿ ವಿಚಾರವಾಗಿ ಮಾತನಾಡಿ, ದೇಶದ ಮುಸ್ಲಿಮರು (Muslims) ಸೌಜನ್ಯದಿಂದ ನಡೆದುಕೊಳ್ಳಬೇಕು. ಉದ್ಧಟತನದ ವರ್ತನೆ ತೋರಬಾರದು. ಕಾಶಿ ವಿಶ್ವನಾಥ ದೇಗುಲವನ್ನ ಹಿಂದೂಗಳಿಗೆ ಬಿಟ್ಟುಕೊಡಬೇಕು. 1992ರ ಡಿಸೆಂಬರ್ 6ರಲ್ಲಿ ನಡೆದ ಘಟನೆ ಮರುಕಳಿಸುವಂತೆ ಮಾಡಬೇಡಿ. ಹಿಂದೂಗಳನ್ನ ಕೆರಳಿಸುವ ಕೆಲಸ ಮಾಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಟೈಟ್‌ ಸೆಕ್ಯುರಿಟಿಯೊಂದಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ಆರಂಭ

    ಮುಸ್ಲಿಂ ಸಂಘಟನೆಗಳು ಹದ್ದುಮೀರಿ ವರ್ತಿಸುತ್ತಿವೆ. ದೇಶದ ಮುಸ್ಲಿಮರು ಬಾಬರ್‌ನನ್ನ ಅನುಸರಿಸುತ್ತಿದ್ದಾರೆ. ಪ್ರಪಂಚದಲ್ಲಿ ಎಲ್ಲಾದರೂ ಜ್ಞಾನವಾಪಿ ಹೆಸರಿನ ಮಸೀದಿ ಇದೆಯಾ? ಅದು ದೇವಸ್ಥಾನ ಎನ್ನಲು ಸಾಕಷ್ಟು ದಾಖಲೆಗಳಿವೆ. ಹೀಗಾಗಿ ಮುಸ್ಲಿಮರು ಸೌಜನ್ಯದಿಂದ ಬಿಟ್ಟು ಕೊಡಬೇಕು ಎಂದು ಸಲಹೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಲ್ಲಾಗಳಿಗೆ ಬಿಜೆಪಿಯಿಂದ ಅವಮಾನ- ಸಿದ್ದರಾಮಯ್ಯ ಬೆಂಬಲಿಸಿದ ಮುಸ್ಲಿಂ ಸಂಘಟನೆ

    ಮುಲ್ಲಾಗಳಿಗೆ ಬಿಜೆಪಿಯಿಂದ ಅವಮಾನ- ಸಿದ್ದರಾಮಯ್ಯ ಬೆಂಬಲಿಸಿದ ಮುಸ್ಲಿಂ ಸಂಘಟನೆ

    ಬೆಂಗಳೂರು: ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಹಾಗೂ ಅಶ್ವಥ್ ನಾರಾಯಣ್ (Ashwath Narayan) ಅವರು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನ ಸಿದ್ರಾಮುಲ್ಲಾ ಖಾನ್ ಎಂದು ವ್ಯಂಗ್ಯವಾಡಿರುವುದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.

    ಸಿದ್ರಾಮುಲ್ಲಾ ಖಾನ್ (Siddramulla Khan) ಹೇಳಿಕೆಯಿಂದ ಕುರುಬ ಸಮುದಾಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಆದರೆ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿರುವ ಸಿ.ಟಿ ರವಿ ಅವರು, ಸಿದ್ರಾಮುಲ್ಲಾ ಖಾನ್ ಜನರೇ ನೀಡಿರುವ ಬಿರುದು, ಈ ಹೇಳಿಕೆ ಕಾಂಗ್ರೆಸ್ಸಿಗರಿಗೆ ಇಷ್ಟು ಉರಿಯುತ್ತೆ ಅಂದಿದ್ರೆ 10 ವರ್ಷದ ಮೊದಲೇ ಹೇಳ್ತಿದ್ದೆ ಎಂದು ಲೇವಡಿ ಮಾಡಿದ್ದಾರೆ.

    ಈ ಬೆನ್ನಲ್ಲೇ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿರುವ ಮುಸ್ಲಿಂ ಸಂಘಟನೆ ಸಿ.ಟಿ ರವಿ ಹಾಗೂ ಅಶ್ವಥ್ ನಾರಾಯಣ್ ಅವರನ್ನ ಕ್ಷಮೆ ಕೋರುವಂತೆ ಒತ್ತಾಯಿಸಿದೆ. ಇದನ್ನೂ ಓದಿ: ಸಿದ್ರಾಮುಲ್ಲಾ ಖಾನ್‌ ಬಿರುದು ನಾವಲ್ಲ, ಜನರೇ ನೀಡಿದ್ದಾರೆ – ಸಿದ್ದುಗೆ ಬಿಜೆಪಿ ಟಾಂಗ್‌

    ಮುಸ್ಲಿಂ ಸಂಘಟನೆಯ ಪ್ರಮುಖ ಸಾಧಿಕ್ ಪಾಷಾ ಮಾತನಾಡಿದ್ದು, ಬಿಜೆಪಿ ನಾಯಕರ ಮಾತುಗಳು ಮುಸ್ಲಿಂ ಮುಖಂಡರನ್ನು (Muslim Leaders) ಕೆರಳಿಸಿದೆ. ಈ ಹೇಳಿಕೆಗಳು ನಮಾಜ್ ಓದಿಸುವ ಮುಲ್ಲಾಗಳಿಗೆ ಮಾಡಿರುವ ಅವಮಾನ ಎಂದು ಕಿಡಿಕಾರಿದ್ದಾರೆ. ದನ್ನೂ ಓದಿ: ಸಿದ್ರಾಮುಲ್ಲಾ ಖಾನ್ ಹೇಳಿಕೆಯಿಂದ ಇಷ್ಟು ಉರಿಯುತ್ತೆ ಅಂದಿದ್ರೆ 10 ವರ್ಷದ ಮೊದಲೇ ಹೇಳ್ತಿದ್ದೆ – CT ರವಿ

    ಸಿ.ಟಿ ರವಿ ಅಶ್ವಥ್ ನಾರಾಯಣ್ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ರೆ ಕೋರ್ಟ್ (Court) ಮೆಟ್ಟಿಲೇರೋದಾಗಿ ಮುಸ್ಲಿಂ ಸಂಘಟನೆ ಎಚ್ಚರಿಕೆ ನೀಡಿದೆ. ಮುಸ್ಲಿಂ ಧರ್ಮದ ಹೆಸರನ್ನು ಇವರ ರಾಜಕೀಯಕ್ಕೆ ಎಳೆದು ತರೋದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಮರಿಗೂ ಮೀಸಲಾತಿ ಹೆಚ್ಚಿಸಿ – ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ

    ಮುಸ್ಲಿಮರಿಗೂ ಮೀಸಲಾತಿ ಹೆಚ್ಚಿಸಿ – ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ

    ಬೆಳಗಾವಿ: ರಾಜ್ಯದಲ್ಲಿನ ಮುಸ್ಲಿಂ (Muslims) ಅಲ್ಪಸಂಖ್ಯಾತರಿಗೂ ಮೀಸಲಾತಿ (Reservation) ಪ್ರಮಾಣ ಹೆಚ್ಚಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್-ಎ-ಇಸ್ಲಾಂ ಸಂಘಟನೆ (Muslim Organization) ಜಿಲ್ಲಾಡಳಿತದ ಮೂಲಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ.

    ಇಲ್ಲಿನ ಜಿಲ್ಲಾಡಳಿತದ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಪ್ರಮುಖರು, ರಾಜ್ಯದಲ್ಲಿ ಮುಸ್ಲಿಂ (Muslims) ಅಲ್ಪಸಂಖ್ಯಾತರು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಜನಸಂಖ್ಯೆಗೆ (Population) ಅನುಗುಣವಾಗಿ ನೋಡಿದರೂ ಶೈಕ್ಷಣಿಕ ಸಂಸ್ಥೆಗಳಲ್ಲಾಗಲಿ, ಸರ್ಕಾರಿ ಉದ್ಯೋಗ ಕ್ಷೇತ್ರಗಳಲ್ಲಾಗಲಿ ಸಮರ್ಥವಾದ ಪ್ರಾತಿನಿಧ್ಯ ಹೊಂದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಲಂಚ ಆರೋಪ – ಬೊಮ್ಮಾಯಿ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ

    2006ರಲ್ಲಿ ಸಾಚಾರ ಸಮಿತಿಯು ಭಾರತೀಯ ಮುಸ್ಲಿಮರು (Indian Muslims) ಎದುರಿಸುತ್ತಿರುವ ಪರಿಸ್ಥಿತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗಿಂತಲೂ ಹೆಚ್ಚಿನದ್ದಾಗಿದೆ. ಇಂದಿಗೂ ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ ಯಾವುದೇ ನಾಗರಿಕರ ವರ್ಗಗಳ ಏಳಿಗೆಗಾಗಿ, ರಾಜ್ಯಾಧೀನ ಸೇವೆಗಳಲ್ಲಿ ಸಾಕಷ್ಟು ಪ್ರಾತಿನಿಧ್ಯ ಹೊಂದಿಲ್ಲದೇ ಇರುವುದರಿಂದ ಹಾಗೂ ಸಂವಿಧಾನದ (Constitution Of India) 15 (4) ನೇ ಮತ್ತು 16 (4)ನೇ ವಿಧಿಯು ಹಿಂದುಳಿದ ಯಾವುದೇ ನಾಗರಿಕರ ವರ್ಗಗಳ ಪರವಾಗಿ ನೇಮಕಾತಿ ಹುದ್ದೆಗಳಲ್ಲಿ ಮೀಸಲಾತಿಗಾಗಿ ಉಪಬಂಧ ಕಲ್ಪಿಸಲು ರಾಜ್ಯಕ್ಕೆ ಅಧಿಕಾರ ನೀಡಿರುವುದರಿಂದ ಶೀಘ್ರವೇ ಒಂದು ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಸಮಿತಿಯ ಮೂಲಕ ಶೈಕ್ಷಣಿಕ ಸ್ಥಿತಿಗತಿ ಕುರಿತು ವರದಿ ಪಡೆದು ರಾಜ್ಯದ ಮುಸ್ಲಿಂ ಅಲ್ಪಸಂಖ್ಯಾತರ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ ಶೇ.8ಕ್ಕೆ ಹೆಚ್ಚಿಸಿ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಕನ್ನಡದಲ್ಲಿಯೇ ಕೇಜ್ರಿವಾಲ್ ಟ್ವೀಟ್

    ಪ್ರತಿಭಟನೆ ವೇಳೆ ಜೆ.ಎಸ್.ಹಡಗಲಿ, ಎ.ಬಿ.ಅತ್ತಾರ, ಹೆಚ್.ಎಂ.ಕೊಪ್ಪದ, ಜೆ.ಎನ್.ಗಲಗಲಿ, ವಾಹಿದ ಅತ್ತಾರ ಮೊದಲಾದವರು ಇದ್ದರು.

    Live Tv
    [brid partner=56869869 player=32851 video=960834 autoplay=true]

  • ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರಲು ಮುಸ್ಲಿಂ ಯುವಕರಿಗೆ ಉತ್ತೇಜನ – ವಿಶೇಷ ಅಭಿಯಾನ

    ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರಲು ಮುಸ್ಲಿಂ ಯುವಕರಿಗೆ ಉತ್ತೇಜನ – ವಿಶೇಷ ಅಭಿಯಾನ

    ಪಾಟ್ನಾ: ಭಾರತೀಯ ಸಶಸ್ತ್ರ ಪಡೆಗಳಿಗೆ ಮುಸ್ಲಿಂ ಯುವಕರು ಸೇರುವಂತೆ ಉತ್ತೇಜಿಸಲು ಮುಸ್ಲಿಂ ಸಂಘಟನೆಗಳಿಂದ ಶುಕ್ರವಾರದಿಂದ ವಿಶೇಷ ಅಭಿಯಾನ ಆರಂಭಿಸಲಾಗುತ್ತಿದೆ.

    ಪ್ರಮುಖ ಮುಸ್ಲಿಂ ಸಂಘಟನೆಗಳು, ವೃತ್ತಿಪರರು ಹಾಗೂ ಇಮಾಮ್‌ಗಳ ಸಂಘಗಳು ಅಗ್ನಿಪಥ್ ಯೋಜನೆ ಮೂಲಕ ಮುಸ್ಲಿಂ ಯುವಕರೂ ಭಾರತೀಯ ಸೇನೆ ಸೇರುವಂತೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಮೊದಲ ದಲಿತ, ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ- ಟ್ವೀಟ್ ಮಾಡಿ ಮುಜುಗರಕ್ಕೀಡಾದ ಕೋಟಾ

    ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ವ್ಯಾಪಕ ಪ್ರತಿಭಟನೆಗಳ ನಡುವೆ ಕಾನ್ಪುರದಲ್ಲಿ ಬದಲಾವಣೆ ತರಲಾಗುತ್ತಿದ್ದು, ಶುಕ್ರವಾರ ಜೂನ್ (24) ಕಾನ್ಪುರದ ಧರ್ಮಗುರುಗಳು ಅಗ್ನಿಪಥ್ ಯೋಜನೆಯ ನೇಮಕಾತಿಗೆ ಅರ್ಜಿ ಸಲ್ಲಿಸಲು ಯುವಕರನ್ನು ಒತ್ತಾಯಿಸಲಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ

    ಶುಕ್ರವಾರ ಕಾನ್ಪುರದಲ್ಲಿ ಮುಸ್ಲಿಮರು ಪ್ರಾರ್ಥಗೂ ಮುನ್ನ ಎಲ್ಲ ಮಸೀದಿಗಳಲ್ಲಿ ಮನವಿ ಮಾಡಲಿದ್ದಾರೆ. ಮುಸ್ಲಿಮರಲ್ಲಿ ಶಿಕ್ಷಣವನ್ನು ಉತ್ತೇಜಿಸುವಲ್ಲಿ ಸಕ್ರಿಯವಾಗಿರುವ ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಷನಲ್ಸ್ (AMP) ಸಂಸ್ಥೆಯು ಈ ಅಭಿಯಾನವನ್ನು ಮುನ್ನಡೆಸಲಿದೆ. ಜೊತೆಗೆ ಉಪಕ್ರಮಕ್ಕಾಗಿ ಮುಸ್ಲಿಂ ಧರ್ಮಗುರುಗಳನ್ನೂ ತೊಡಗಿಸಿಕೊಳ್ಳಲಿದೆ. ಇದರೊಂದಿಗೆ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಮುಸ್ಲಿಂ ಮುಖಂಡ ಶಾಹಿದ್ ಕಮ್ರಾನ್ ಖಾನ್ ಹೇಳಿದ್ದಾರೆ.

    10 ಮತ್ತು 12 ನೇ ತರಗತಿಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು ಎಂದು ಧರ್ಮಗುರುಗಳು ವಿವರಗಳನ್ನು ಹಂಚಿಕೊಳ್ಳುತ್ತಿದ್ದಾರೆ.

    Live Tv

  • ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿದೆ ದೇಶ ವಿರೋಧಿ ಚಿಂತನೆ – ಬಿಜೆಪಿ ಸಂಸದ ಅಲ್ಫೋನ್ಸ್ ಹೇಳಿಕೆ

    ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿದೆ ದೇಶ ವಿರೋಧಿ ಚಿಂತನೆ – ಬಿಜೆಪಿ ಸಂಸದ ಅಲ್ಫೋನ್ಸ್ ಹೇಳಿಕೆ

    ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಇಸ್ಲಾಂ ಧರ್ಮದ ಕಡೆಗೆ ಜನರ ಒಲವು ಹೆಚ್ಚಾಗುತ್ತಿದೆ. ಇಲ್ಲಿನ ಕೆಲ ಜಿಲ್ಲೆಗಳು ಸೌದಿ ಅರೇಬಿಯಾದಂತೆ ಭಾಸವಾಗುತ್ತಿದ್ದು, ದೇಶ ವಿರೋಧಿ ಚಿಂತನೆಗಳು ವ್ಯಾಪಕವಾಗಿ ಹರಡುತ್ತಿವೆ ಎಂದು ಬಿಜೆಪಿ ರಾಜ್ಯ ಸಭಾ ಸಂಸದ ಬಿಜೆಪಿ ರಾಜ್ಯಸಭಾ ಸಂಸದ ಕೆ.ಜೆ. ಅಲ್ಫೋನ್ಸ್ ಕಣ್ಣಂತಾನಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕೇರಳದಲ್ಲಿ ಇಸ್ಲಾಂ ಧರ್ಮದ ಕಡೆಗೆ ಜನರ ಒಲವು ಹೆಚ್ಚುತ್ತಿದೆ. ಇದು ಅತ್ಯಂತ ದುಃಖಕರ ಸಂಗತಿ. ನೀವು ಕೇರಳದ ಕೆಲವು ಜಿಲ್ಲೆಗಳಿಗೆ ಹೋಗಿ ನೋಡಿದರೆ, ಸೌದಿ ಅರೇಬಿಯಾದಲ್ಲಿದ್ದಂತೆ ಭಾಸವಾಗುತ್ತದೆ. ಜನರ ವರ್ತನೆಗಳಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ. ವಿಶೇಷವಾಗಿ ಅವರು ಧರಿಸುವ ಉಡುಪು ದೇಶ ವಿರೋಧಿ ಚಿಂತನೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಸಾರಥಿ ಭಾ.ಮಾ. ಹರೀಶ್

    ಇದೇ ವೇಳೆ ಪ್ರಚೋದನಕಾರಿ ಘೋಷಣೆಗಳಿಗೆ ಸಂಬಂಧಿಸಿದಂತೆ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಪೊಲೀಸರಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿರುವುದು ಉತ್ತಮ ಬೆಳವಣಿಗೆ ಎಂದು ಅಲ್ಫೋನ್ಸ್ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಎರಡು ವರ್ಷಗಳ ನಂತರ ಭಾರತ- ಬಾಂಗ್ಲಾ ರೈಲು ಸಂಚಾರ ಪುನಾರಂಭ

    ಕಮ್ಯುನಿಸ್ಟ್ ಮತ್ತು ಕಾಂಗ್ರೆಸ್ ಸರ್ಕಾರಗಳು ಮುಸ್ಲಿಮರ ಮತಗಳ ಮೇಲೆ ಅವಲಂಬಿತವಾಗಿವೆ. ಈ ನಡುವೆ ಕೇರಳದಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳು ಅಲ್ಪಸಂಖ್ಯಾತರನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದಾರೆ.

  • ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ಸರ್ಕಾರದಿಂದ ಅನುಮತಿ ಪಡೆಯಿರಿ: ಮುಸ್ಲಿಂ ಸಂಘಸಂಸ್ಥೆ ಸಲಹೆ

    ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ಸರ್ಕಾರದಿಂದ ಅನುಮತಿ ಪಡೆಯಿರಿ: ಮುಸ್ಲಿಂ ಸಂಘಸಂಸ್ಥೆ ಸಲಹೆ

    ಮುಂಬೈ: ರಾಜ್ಯದಲ್ಲಿರುವ ಎಲ್ಲಾ ಮಸೀದಿಗಳು ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವಂತೆ ಜಮಿಯತ್‌-ಉಲಮಾ-ಇ-ಹಿಂದ್‌ ಘಟಕ ಸಲಹೆ ನೀಡಿದೆ.

    ರಾಜ್ಯದ ಮಸೀದಿಗಳಲ್ಲಿ ಆಜಾನ್‌ ಬಳಕೆ ವಿಚಾರವಾಗಿ ಹಿಂದೂಪರ ಸಂಘಟನೆಗಳ ತೀವ್ರ ವಿರೋಧದ ನಡುವೆ ಈ ಸೂಚನೆ ನೀಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಕೋರ್ಟ್‌ ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಲು ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವಾಲಯ ನಿರ್ಧರಿಸಿದೆ. ಇದನ್ನೂ ಓದಿ: 12 ರಾಜ್ಯಗಳಲ್ಲಿ ವಿದ್ಯುತ್ ಸಮಸ್ಯೆ: ಮಹಾರಾಷ್ಟ್ರ ಸಚಿವ

    mosque-loudspeakers

    ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸಲು ಅನುಮತಿ ಪಡೆದಿರಬೇಕು ಎಂಬ ಮಾರ್ಗಸೂಚಿಯನ್ನು ಹೊರಡಿಸಲು ಸರ್ಕಾರ ಮುಂದಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಜಮಿಯತ್‌-ಉಲಮಾ-ಇ-ಹಿಂದ್‌ ಘಟಕದ ಕಾರ್ಯದರ್ಶಿ ಗುಲ್ಜರ್‌ ಅಜ್ಮಿ, ರಾಜ್ಯದಲ್ಲಿರುವ ಬಹುಪಾಲು ಮಸೀದಿಗಳು ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದಿವೆ. ಅನುಮತಿ ಪಡೆಯದೇ ಇದ್ದರೆ ಮಸೀದಿಗಳು ಕೂಡಲೇ ಅನುಮತಿ ಪಡೆಯುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ

    ರಾಜ್ಯದ ಪೊಲೀಸ್‌ ಇಲಾಖೆ ತುಂಬಾ ಸಹಕಾರ ನೀಡಿದ್ದಾರೆ. ಅನುಮತಿ ನೀಡುವಲ್ಲಿಯೂ ಪೊಲೀಸರ ಸಹಕಾರ ಅಗತ್ಯವಿದೆ ಎಂದು ಅಜ್ಮಿ ಅಭಿಪ್ರಾಯಪಟ್ಟಿದ್ದಾರೆ.

    Raj Thackeray

    ಧ್ವನಿವರ್ಧಕಗಳ ಸಮಸ್ಯೆಯನ್ನು ನಿಭಾಯಿಸಲು ಮಹಾರಾಷ್ಟ್ರ ಸರ್ಕಾರವನ್ನು ಶ್ಲಾಘಿಸಿದ ಅಜ್ಮಿ ಅವರು, ರಾಜ್ಯ ಸರ್ಕಾರವು ಎಲ್ಲರಿಗೂ ನ್ಯಾಯ ಒದಗಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್ ಉಲ್ಬಣದಿಂದ ದೆಹಲಿಯಲ್ಲಿ ಶಾಲೆಗಳು ಬಂದ್? – ತಜ್ಞರ ಸಮಿತಿಯ ಸಲಹೆಗಳೇನು?

    ಮೇ 3ರೊಳಗೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ತೆರವಿಗೆ ರಾಜ್ಯ ಸರ್ಕಾರ ಕ್ರಮವಹಿಸಬೇಕು. ಇಲ್ಲವಾದಲ್ಲಿ ಮಸೀದಿ ಹೊರಗಡೆ ಧ್ವನಿವರ್ಧಕಗಳನ್ನು ಹಾಕಿ ಹನುಮಾನ್‌ ಚಾಲೀಸಾ ಪಠಿಸಲಾಗುವುದು ಎಂದು ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

  • ಹಿಜಬ್ ತೀರ್ಪಿಗೆ ವಿರೋಧ – ಭಟ್ಕಳದಲ್ಲಿ ಬುಧವಾರ ಬಂದ್‌ಗೆ ಕರೆ

    ಹಿಜಬ್ ತೀರ್ಪಿಗೆ ವಿರೋಧ – ಭಟ್ಕಳದಲ್ಲಿ ಬುಧವಾರ ಬಂದ್‌ಗೆ ಕರೆ

    ಕಾರವಾರ: ಹಿಜಬ್ ವಿರುದ್ಧ ತೀರ್ಪು ಬಂದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಾಳೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ತಂಜಿಮ್ ಸಂಘಟನೆ ಮನವಿ ಮಾಡಿದೆ.

    ಹೈಕೋರ್ಟ್ನಲ್ಲಿ ಹಿಜಬ್ ವಿರುದ್ಧ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ತಂಜಿಮ್ ಸಂಘಟನೆ ಸ್ವಯಂ ಪ್ರೇರಿತ ಬಂದ್‌ಗೆ ಮುಸ್ಲಿಂ ವರ್ತಕರಲ್ಲಿ ಮನವಿ ಮಾಡಿದೆ. ಹೀಗಾಗಿ ಭಟ್ಕಳದಲ್ಲಿ ನಾಳೆ ಬಹುತೇಕ ಬಂದ್ ಇರಲಿದೆ. ಇದನ್ನೂ ಓದಿ: ಹಿಜಬ್‌ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯ: ಹಿರಿಯ ವಕೀಲ ಎ.ಎಂ.ಧಾರ್‌

    ಇಂದು ಸ್ವಯಂ ಪ್ರೇರಿತ ಬಂದ್:
    ಹಿಜಬ್ ವಿರುದ್ಧ ಹೈಕೋರ್ಟ್ನಲ್ಲಿ ತೀರ್ಪು ಬರುತ್ತಿದ್ದಂತೆ ಭಟ್ಕಳ ನಗರದಲ್ಲಿ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತ ಅಂಗಡಿ ಮುಂಗಟ್ಟು ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

    ಬೆಳಗ್ಗೆಯಿಂದ ಗಿಜುಗುಡುತಿದ್ದ ಭಟ್ಕಳ ನಗರದ ಮಾರುಕಟ್ಟೆ ಮಾಧ್ಯಾಹ್ನದ ಬಳಿಕ ಖಾಲಿ ಖಾಲಿ ಎನಿಸುತ್ತಿತ್ತು. ಬಹುತೇಕ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದು, ಭಟ್ಕಳ ನಗರದ ಹಳೆ ಬಸ್ ನಿಲ್ದಾಣದಿಂದ ಚೌಕ್ ಬಜಾರ್‌ವರೆಗಿನ ಬಹುತೇಕ ಮುಸ್ಲಿಂ ವರ್ತಕರಿರುವ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇದನ್ನೂ ಓದಿ: ಹಿಜಬ್‌- ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

    ಪೊಲೀಸರ ಎಚ್ಚರಿಕೆ:
    ಕೆಲವೆಡೆ ತೀರ್ಪು ವಿರೋಧಿಸಿ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತ ಬಂದ್ ಮಾಡಿರೆ, ಕೆಲವರು ಅಂಗಡಿ ಮುಂಗಟ್ಟನ್ನು ಬಂದ್ ಮಾಡದೇ ತೆರದಿದ್ದರಿಂದ ಕೆಲವು ಮುಖಂಡರು ಬಲವಂತವಾಗಿ ಬಂದ್ ಮಾಡಿಸಿದರು. ಈ ಹಿನ್ನೆಲೆಯಲ್ಲಿ ಭಟ್ಕಳ ನಗರದ ಡಿವೈಎಸ್‌ಪಿ ಬೆಳ್ಳಿಯಪ್ಪ ಸ್ಥಳಕ್ಕೆ ಆಗಮಿಸಿ ಬಲವಂತವಾಗಿ ಬಂದ್ ಮಾಡಿಸದಂತೆ ಎಚ್ಚರಿಕೆ ನೀಡಿದರು. ಈ ವೇಳೆ ಮುಸ್ಲಿಂ ಮುಖಂಡರು ಹಾಗೂ ಪೊಲೀಸರ ನಡುವೆ ಕೆಲವು ಸಮಯ ಮಾತಿನ ಚಕಮಕಿ ನಡೆಯಿತು.

  • ಹಿಜಬ್ ಗಲಾಟೆಗೆ ದಾರುಲ್ ಉಲೂಮ್ ದಿಯೋಬಂದ್ ಕಾರಣ: ಎನ್‌ಸಿಪಿಸಿಆರ್

    ಹಿಜಬ್ ಗಲಾಟೆಗೆ ದಾರುಲ್ ಉಲೂಮ್ ದಿಯೋಬಂದ್ ಕಾರಣ: ಎನ್‌ಸಿಪಿಸಿಆರ್

    ನವದೆಹಲಿ: ಮುಸ್ಲಿಂ ಯುವತಿಯರಿಗೆ ಹಿಜಬ್ ಧರಿಸಲು ಮುಸ್ಲಿಂ ಸಂಘಟನೆ ದಾರುಲ್ ಉಲೂಮ್ ದಿಯೋಬಂದ್ ಪ್ರೇರಣೆ ನೀಡುತ್ತಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ(ಎನ್‌ಸಿಪಿಸಿಆರ್)ದ ಅಧ್ಯಕ್ಷ ಪ್ರಿಯಾಂಕ್ ಕನುಂಗೋ ಹೇಳಿದ್ದಾರೆ. ಈ ಮೂಲಕ ಹಿಜಬ್ ಗಲಬೆ ಹೊಸ ತಿರುವು ಪಡೆದುಕೊಂಡಿದೆ.

    ಎನ್‌ಸಿಪಿಸಿಆರ್ ತಮ್ಮ ವೆಬ್‌ಸೈಟ್‌ನಲ್ಲಿ ಮಕ್ಕಳ ಹಕ್ಕನ್ನು ಉಲ್ಲಂಘಿಸುವ ಫತ್ವಾ ವಿಷಯನ್ನು ಉಲ್ಲೇಖಿಸಿದ್ದಕ್ಕೆ ನೋಟಿಸ್ ಕಳುಹಿಸಲಾಗಿದೆ ಎಂದು ಕನುಂಗೋ ತಿಳಿಸಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ನಲ್ಲಿ ಹನುಮಾನ್ ಚಾಲೀಸಾ – ಪ್ರತಿಭಟನಕಾರರನ್ನು ತಡೆದ ಪೊಲೀಸರು

    ಹಿಜಬ್ ಅನುಮತಿಸದ ಶಾಲೆಗಳಿಂದ ಮುಸ್ಲಿಂ ಹುಡುಗಿಯರನ್ನು ಹೊರ ಹಾಕಬೇಕು ಹಾಗೂ ಪುರುಷ ಶಿಕ್ಷಕನಿದ್ದಲ್ಲಿ ನಿರ್ದಿಷ್ಟ ವಯಸ್ಸಿನ ಬಳಿಕ ಹುಡುಗಿಯರನ್ನು ತರಗತಿಯಲ್ಲಿ ಕುಳಿತುಕೊಳ್ಳಲು ಬಿಡಬಾರದು ಎಂದು ಫತ್ವಾದಲ್ಲಿ ತಿಳಿಸಲಾಗಿದೆ. ಹೀಗಾಗಿ ಹಿಜಬ್ ಪ್ರತಿಭಟನೆಯನ್ನು ದಾರುಲ್ ಉಲೂಮ್ ದಿಯೋಬಂದ್ ಆಯೋಜಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಭಾರತದ ಎಂಜಿನಿಯರ್ ಕ್ಷೇತ್ರದ ವೈಶಿಷ್ಟ್ಯ – ಸಿದ್ಧವಾಗುತ್ತಿದೆ ಕೇಬಲ್ ರೈಲ್ವೇ ಸೇತುವೆ

    ಎನ್‌ಸಿಪಿಸಿಆರ್ ಈ ಕುರಿತು ಜನವರಿ 15ರಂದು ನೋಟಿಸ್ ಕಳುಹಿಸಿದೆ ಹಾಗೂ ಅದರ ಉತ್ತರ ಈ ವಾರ ಬರಲಿದೆ ಎಂದು ತಿಳಿಸಿದ್ದಾರೆ.