Tag: ಮೂಡಬಿದಿರೆ

  • ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌

    ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌

    – ಬೆಂಗಳೂರಿಗೆ ಕರೆತಂದು ಸ್ನೇಹಿತನ ಮನೆಯಲ್ಲಿ ಕೃತ್ಯ
    – ವಿಡಿಯೋ ಇದೆ ಎಂದು ಬೆದರಿಕೆ ಹಾಕಿದ್ದ ದುರುಳರು

    ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ (Rape) ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆಯ (Moodabidri) ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನನ್ನು ಮಾರತಹಳ್ಳಿ ಪೊಲೀಸರು (Marathahalli Police) ಬಂಧಿಸಿದ್ದಾರೆ.

    ಕಾಲೇಜಿನ ಹಳೆ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಿದ ಪೊಲೀಸರು ಉಪನ್ಯಾಸಕರಾದ ನರೇಂದ್ರ, ಸಂದೀಪ್ ಮತ್ತು ಸ್ನೇಹಿತ ಅನೂಪ್‌ನನ್ನು ಬಂಧಿಸಿದ್ದಾರೆ.

    ಏನಿದು ಕೇಸ್‌?
    ಮೊದಲು ವಿದ್ಯಾರ್ಥಿನಿಗೆ ನೋಟ್ಸ್ ನೀಡುವ ವಿಚಾರದಲ್ಲಿ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ಪರಿಚಯವಾಗಿದ್ದ. ಹಂತ ಹಂತವಾಗಿ ಚಾಟ್ ಮಾಡಿ ನೋಟ್ಸ್ ನೀಡುವುದಾಗಿ ಮತ್ತು ಸಹಾಯ ಮಾಡುವುದಾಗಿ ಹೇಳಿದ್ದ. ವಿದ್ಯಾರ್ಥಿನಿ ಬೆಂಗಳೂರಿಗೆ ಬಂದ ನಂತರವೂ ಸಲುಗೆ ಬೆಳೆಸಿದ್ದ. ಇದೆ ನೆಪದಲ್ಲಿ ವಿದ್ಯಾರ್ಥಿನಿಯನ್ನು ಬೆಂಗಳೂರಿನ ಮಾರತ್‌ಹಳ್ಳಿಯಲ್ಲಿರುವ ಗೆಳೆಯನ ರೂಮ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ರೇಪ್‌ ಮಾಡಿದ ಬಳಿಕ ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಟೆಕ್ಕಿ ಗಿರೀಶ್‌ ಹತ್ಯೆ ಕೇಸ್‌ ಶುಭಾಗೆ ಕ್ಷಮಾದಾನ ಅವಕಾಶ ನೀಡಿದ ಸುಪ್ರೀಂ

     

    ಸ್ನೇಹಿತ ನರೇಂದ್ರ ಈ ಕೃತ್ಯ ಎಸಗಿದ್ದ ವಿಚಾರ ತಿಳಿದು ಜೀವಶಾಸ್ತ್ರ ಉಪನ್ಯಾಸಕ ಸಂದೀಪ್‌ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ಸಂದರ್ಭದಲ್ಲಿ ಸಂದೀಪ್‌, ನರೇಂದ್ರ ಜೊತೆಗೆ ಇರುವ ಫೋಟೋ, ವಿಡಿಯೋ ತನ್ನ ಬಳಿ ಇದೆ ಎಂದು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ.

    ಸಂದೀಪ್‌ ಕರೆದುಕೊಂಡು ಹೋಗಿ ಅನೂಪ್‌ ರೂಮಿನಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಅನೂಪ್‌ ಆಕೆಯನ್ನು ಸಂರ್ಪಕಿಸಿ ನೀನು ನನ್ನ ರೂಮಿಗೆ ಬಂದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲದೇ ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ ಎಂದು ಬೆದರಿಕೆ ಹಾಕಿದ್ದ. ನಂತರ ಅನೂಪ್‌ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

    ಉಪನ್ಯಾಸಕ ಸ್ನೇಹಿತರ ಕಿರುಕುಳ ತಾಳಲಾರದೇ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ ಸಮಸ್ಯೆ ಹೆಚ್ಚಾದ ಬಳಿಕ ನಡೆದ ನಡೆದ ಘಟನೆಗಳನ್ನು ಬೆಂಗಳೂರಿಗೆ ಬಂದಿದ್ದ ಪೋಷಕರ ಬಳಿ ತಿಳಿಸಿದ್ದಾಳೆ. ಪೋಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಮಹಿಳಾ ಆಯೋಗದಲ್ಲಿ ಕೌನ್ಸಿಲಿಂಗ್‌ ಮಾಡಿದ ಬಳಿಕ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

    ಮೂಡಬಿದಿರೆಯಲ್ಲಿ ಓದು ಮುಗಿಸಿದ್ದ ವಿದ್ಯಾರ್ಥಿನಿ ಈಗ ರಾಮನಗರದಲ್ಲಿ ಎಂಜಿನಿಯರಿಂಗ್‌ ಓದುತ್ತಿದ್ದಾಳೆ. ಉಪನ್ಯಾಸಕರು ಇನ್‌ಸ್ಟಾ ಮೂಲಕ ಆಕೆಯನ್ನು ಸಂಪರ್ಕಿಸಿ ಚಾಟ್‌ ಮಾಡುತ್ತಿದ್ದರು.

  • ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ- ಸಮಯಪ್ರಜ್ಞೆ ಮೆರೆದ ಇನ್ಸ್‌ಪೆಕ್ಟರ್

    ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ- ಸಮಯಪ್ರಜ್ಞೆ ಮೆರೆದ ಇನ್ಸ್‌ಪೆಕ್ಟರ್

    ಮಂಗಳೂರು: ಕಿಡಿಗೇಡಿಗಳು ಗಣಪತಿ ಕಟ್ಟೆಯಲ್ಲಿ ಮುಸ್ಲಿಮರ ಹಸಿರು ಬಾವುಟವಿಟ್ಟು (Green Colour Flag) ಗಲಭೆಗೆ ಯತ್ನಿಸಿದ್ದ ಘಟನೆ ಮೂಡಬಿದ್ರೆಯ ಪುಚ್ಚೆಮೊಗೇರು ಎಂಬಲ್ಲಿ ನಡೆದಿದೆ.

    ಮೂಡಬಿದಿರೆಯ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿಯವರ ಸಮಯ ಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದೆ. ಕಳೆದ ಸೆ.28 ರ ಈದ್ ಮಿಲಾದ್ ದಿನ ಕಿಡಿಗೇಡಿಗಳು ಮೂಡಬಿದಿರೆಯ ಪುಚ್ಚೆಮೊಗರು ಗಣಪತಿ ಕಟ್ಟೆಯಲ್ಲಿ ಹಸಿರು ಬಣ್ಣದ ಮುಸ್ಲಿಮರ ಬಾವುಟ ಹಾಕಿದ್ದರು. ತಕ್ಷಣ ಗಮನಿಸಿದ ಸ್ಥಳೀಯರು ಅಲ್ಲಿನ ಹೊಸಬೆಟ್ಟು ಗ್ರಾಮ ಪಂಚಾಯತ್‍ನ ಪಿಡಿಓ ಶೇಖರ್ ಅವರ ಗಮನಕ್ಕೆ ತಂದಿದ್ದರು. ಆದರೂ ಪಿಡಿಓ ಕ್ರಮಕೈಗೊಳ್ಳದೆ ಎರಡು ದಿನಗಳ ಕಾಲ ಬಾವುಟ ಅದೇ ಜಾಗದಲ್ಲಿತ್ತು. ಇದನ್ನೂ ಓದಿ: ಬಂಗಾರಪೇಟೆ ಮಸೀದಿ ಬಳಿ ರಾತ್ರೋ ರಾತ್ರಿ ಕ್ಲಾಕ್‌ ಟವರ್ ನಿರ್ಮಾಣ

    ಸೆ.30 ರಂದು ವಿಚಾರ ತಿಳಿದ ಮೂಡಬಿದ್ರೆ ಠಾಣಾ ಇನ್ಸ್‍ಪೆಕ್ಟರ್ ಸಂದೇಶ್ ಪಿ.ಜಿ ಸಿಬ್ಬಂದಿ ಜೊತೆ ಸ್ಥಳಕ್ಕೆ ಬಂದಿದ್ದು, ಪಿಡಿಓ ಶೇಖರ್ ಅವರನ್ನೂ ಕರೆಸಿದ್ದರು. ಪಿಡಿಓ ವರ್ತನೆಗೆ ಕೆಂಡಾಂಮಡಲವಾದ ಇನ್ಸ್‍ಪೆಕ್ಟರ್, ಇದರ ಮೇಲೆ ಬಾವುಟ ಹಾಕಲು ಅನುಮತಿ ಇದ್ಯಾ?, ಅನುಮತಿ ಇಲ್ಲದೆ ಹಾಕಿದ್ದರೆ ಪೆÇಲೀಸ್ ದೂರು ನೀಡಬೇಕಿತ್ತು. ನಿನ್ನ ಅಧಿಕಾರ ಏನು ಅನ್ನೋದು ನಿನಗೆ ಗೊತ್ತಿಲ್ಲ, ನನಗೇನು ಸಂಬಂಧ ಇಲ್ಲ ಅನ್ನೋ ನೀನು ಪಿಡಿಓ ಆಗಿದ್ಯಾಕೆ?, ಇವನನ್ನೇ ಆರೋಪಿ ಮಾಡಬೇಕೆಂದು ಕೆಂಡಾಮಂಡಲವಾಗಿ ಇನ್ಸ್‍ಪೆಕ್ಟರ್ ಬೈದಿದ್ದಾರೆ. ಬಳಿಕ ಸಿಬ್ಬಂದಿ ಮೂಲಕ ಬಾವುಟವನ್ನು ಇನ್ಸ್‍ಪೆಕ್ಟರ್ ತೆರವುಗೊಳಿಸಿದ್ದಾರೆ.

    ಇದೀಗ ಇನ್ಸ್ ಪೆಕ್ಟರ್ ಅವರ ಸಮಯ ಪ್ರಜ್ಞೆಯ ವೀಡಿಯೋ ವೈರಲ್ ಆಗಿದ್ದು ಅನಾಹುತ ತಪ್ಪಿಸಿದ ಇನ್ಸ್‍ಪೆಕ್ಟರ್ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊರೊನಾ ಸೋಂಕಿಗೆ ತುತ್ತಾಗಿದ್ದ ಮೂಡಬಿದಿರೆ ಶಿಕ್ಷಕಿ ನಿಧನ

    ಕೊರೊನಾ ಸೋಂಕಿಗೆ ತುತ್ತಾಗಿದ್ದ ಮೂಡಬಿದಿರೆ ಶಿಕ್ಷಕಿ ನಿಧನ

    – ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದ ವಿದ್ಯಾರ್ಥಿನಿ

    ಬೆಂಗಳೂರು/ಮಂಗಳೂರು: ಕೊರೊನಾ ಸೋಂಕಿಗೆ ತುತ್ತಾಗಿದ್ದ ಮೂಡಬಿದರೆಯ ಶಿಕ್ಷಕಿ ಪದ್ಮಾಕ್ಷಿ ಮೃತಪಟ್ಟಿದ್ದಾರೆ.

    ಈ ಸಂಬಂಧ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮೂಡಬಿದರೆಯ ಶಿಕ್ಷಕಿ ಪದ್ಮಾಕ್ಷಿ ಅವರು ಮೃತಪಟ್ಟರೆಂದು ತಿಳಿದು ತುಂಬಾ ವೇದನೆಯೆನಿಸಿದೆ. ಅವರ ಕುಟುಂಬಕ್ಕೆ ಈ ದುಃಖ ಭರಿಸಲು ಶಕ್ತಿ ಸಿಗಲಿ. ಐಶ್ವರ್ಯ ಜೈನ್ ತನ್ನ ತಾಯಿ ಮನೆಗೆ ಹಿಂದಿರುಗಿ ಎಲ್ಲರಂತಾಗುತ್ತಾರೆಂಬ ಕನಸನ್ನು ಹೊತ್ತಿದ್ದಳು. ಈ ಆಘಾತದಿಂದ ಆಕೆ ಚೇತರಿಸಿಕೊಳ್ಳುವಂತಾಗಲಿ ಎಂದು ಬರೆದುಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.

    ಸಚಿವರಿಗೆ ಪತ್ರ ಬರೆದಿದ್ದ ಐಶ್ವರ್ಯ:
    ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಶಿರ್ತಾಡಿಯ ಮಕ್ಕಿಯ ಡಿಜೆ ಹೈಯರ್ ಪ್ರೈಮರಿ ಏಡೆಡ್ ಸ್ಕೂಲ್ ಮತ್ತು ಮೂಡಬಿದ್ರೆಯ ಜವಹರಲಾಲ್ ನೆಹರೂ ಅನುದಾನಿತ ಹೈಸ್ಕೂಲ್‍ನಲ್ಲಿ ಶಿಕ್ಷಕರಾಗಿ ಶಶಿಕಾಂತ್ ವೈ ಮತ್ತು ಪದ್ಮಾಕ್ಷಿ ಎನ್ ಕೆಲಸ ಮಾಡುತ್ತಿದ್ದಾರೆ. ಈ ದಂಪತಿಯ ಪುತ್ರಿ ಐಶ್ವರ್ಯಾ ಜೈನ್ ಸಚಿವರಿಗೆ ಪತ್ರವನ್ನು ಬರೆದಿದ್ದಳು.

    ನನ್ನ ಹೆತ್ತವರಿಬ್ಬರೂ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇದೀಗ ತಂದೆ ಮತ್ತು ತಾಯಿ ಇಬ್ಬರೂ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಈ ನಡುವೆ ತಾಯಿಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 29ರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಂದೆಯೂ ಸೋಂಕಿನಿಂದ ಬಳಲುತ್ತಿದ್ದು ಇದೀಗ ಆಸ್ಪತ್ರೆಯ ಬಿಲ್ ಕಟ್ಟಲು ಸಾಧ್ಯವಾಗದೆ ಒದ್ದಾಡುತ್ತಿದ್ದೇವೆ.

    ನಮಗೊಂದು ಸಹಾಯದ ಹಸ್ತ ಬೇಕಿದೆ. ನನ್ನ ತಾಯಿಯು ಈ ವಿದ್ಯಾಗಮ ಯೋಜನೆಯ ಮುಂಚೆ ಸಂಪೂರ್ಣವಾಗಿ ಆರೋಗ್ಯವಾಗಿದ್ದರು. ತಮ್ಮ ಯೋಜನೆಯೇ ಇದಕ್ಕೆ ಕಾರಣ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಸಾಧ್ಯವಾದಷ್ಟು ಬೇಗ ತಮ್ಮಿಂದ ಆರ್ಥಿಕ ಸಹಾಯವನ್ನು ನಿರೀಕ್ಷೆ ಮಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಸರ್ಕಾರವು ಶಿಕ್ಷಕರನ್ನು ಕೈಬಿಡುವುದಿಲ್ಲ ಎಂದು ನಂಬಿದ್ದೇವೆ ಎಂದು ವಿದ್ಯಾರ್ಥಿನಿ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಳು.

    ಕಣ್ಣೀರಿಗೆ ಮಿಡಿದಿದ್ದ ಸಚಿವರ ಮನ:
    ಶಿಕ್ಷಕ ದಂಪತಿಗೆ ಕೊರೊನಾ ಸೋಂಕು ತಗುಲಿದೆ ಎಂಬ ವರದಿಗಳನ್ನು ಗಮನಿಸಿದ ತಕ್ಷಣವೇ ಸಚಿವರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದ್ದಾರೆ. ಅಲ್ಲದೆ ಶಿಕ್ಷಕಿಗೆ ಉತ್ತಮ ಚಿಕಿತ್ಸೆ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದ್ದೇನೆ. ಸರ್ಕಾರದ ಸೂಚನೆಯಂತೆ ಶಿಕ್ಷಕಿ ಪದ್ಮಾಕ್ಷಿಯವರ ಪುತ್ರಿ ಐಶ್ವರ್ಯಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಂಪರ್ಕಿಸಿದ್ದಾರೆ. ತಮ್ಮ ತಾಯಿಯ ಚಿಕಿತ್ಸೆ ಕುರಿತು ಸರ್ಕಾರ ಪೂರ್ಣ ಕಾಳಜಿ ವಹಿಸಲಿದ್ದು, ಯಾವುದೇ ಆತಂಕ ಬೇಡ ಎಂದು ಸಾಂತ್ವನ ಹೇಳಿದ್ದಾರೆ ಎಂದು ಅವರು ತಿಳಿಸಿದ್ದರು.

    ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೂ ಸಹ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ, ಶಿಕ್ಷಕಿಯ ಚಿಕಿತ್ಸೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಆಸ್ಪತ್ರೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿರುವ ದ.ಕ. ಜಿಲ್ಲಾಧಿಕಾರಿಯವರು ರೋಗಿಯ ಕಡೆಯಿಂದ ಯಾವುದೇ ರೀತಿಯ ಹಣ ಪಡೆಯದೇ ಚಿಕಿತ್ಸೆ ನೀಡಲು ಸೂಚಿಸಿದ್ದು, ಚಿಕಿತ್ಸಾ ಬಿಲ್ ಅನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆಂದು ಸಚಿವರು ಹೇಳಿದ್ದರು. ಆದರೆ ಇದೀಗ ಶಿಕ್ಷಕಿ ಮೃತಪಟಿರುವ ಸುದ್ದಿ ಕೇಳಿ ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

     

  • ಪತಿ ಕೊರೊನಾಗೆ ಬಲಿಯಾದಂದೇ ಮಗು ಜನನ!

    ಪತಿ ಕೊರೊನಾಗೆ ಬಲಿಯಾದಂದೇ ಮಗು ಜನನ!

    ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಜನರನ್ನು ಯಾವ ರೀತಿಯಲ್ಲೆಲ್ಲ ಆಟ ಆಡಿಸುತ್ತಿದೆ ಎಂಬುದು ದಿನ ನಿತ್ಯ ನೋಡುತ್ತಾ ಇರುತ್ತೀವಿ. ವಿಧಿಯಾಟದ ಮುಂದೆ ಯಾವ ಆಟ ನಡೆಯಲ್ಲಿ ಎಂಬುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ.

    ಹೌದು. ಅತ್ತ ಪತಿ ಕೊರೊನಾಗೆ ಬಲಿಯಾದರೆ ಇತ್ತ ಪತ್ನಿ ಮಗುವಿಗೆ ಜನ್ಮವಿತ್ತಿದ್ದಾರೆ. ಹೀಗಾಗಿ ಒಂದು ಕಡೆ ಖುಷಿ ವಿಚಾರವಿದ್ದರೆ, ಇನ್ನೊಂದೆಡೆ ಕೊನೆಯ ಬಾರಿ ಪತಿ ಮುಖವನ್ನೂ ನೋಡಲಾಗದೆ ಪತ್ನಿ ಕಂಗಾಲಾಗಿದ್ದಾರೆ.

    ಮೂಡಬಿದಿರೆಯ ಜೈನ್ ಪೇಟೆ ನಿವಾಸಿ ಮುಂಬೈನಲ್ಲಿ ಉದ್ಯೋಗದಲ್ಲಿದ್ದು ಕೊರೊನಾದಿಂದ ಬಳಲುತ್ತಿದ್ದರು. ಆದರೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು. ಇತ್ತ ಅದೇ ದಿನ ಪತ್ನಿ ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮಗು ಹುಟ್ಟುವ ದಿನವೇ ಪತಿ ಕೊರೊನಾಗೆ ಬಲಿಯಾಗಿರುವುದು ದುರ್ದೈವದ ಸಂಗತಿಯಾಗಿದೆ.

    ಒಟ್ಟಿನಲ್ಲಿ ಪತ್ನಿ ಹಾಗೂ ಮೃತರ ಕುಟುಂಬಕ್ಕೆ ಒಂದು ಕಡೆ ಮಗು ಹುಟ್ಟಿದ ಖುಷಿಯಾದರೆ ಇನ್ನೊಂದೆಡೆ ಕುಟುಂಬದ ಸದಸ್ಯ ಇನ್ನಿಲ್ಲ ಅನ್ನೋ ದುಃಖ ಕಾಡುತ್ತಿದೆ. ಇಂತಹ ಹಲವು ಘಟನೆಗಳ ಮೂಲಕ ಕೊರೊನಾ ಹೆಮ್ಮಾರಿ ಜನರನ್ನು ಸಂದಿಗ್ಧ ಪರಿಸ್ಥಿಯಲ್ಲಿ ತಂದಿಟ್ಟಿದೆ.

  • ಕ್ವಾರಂಟೈನ್ ಆಗಿದ್ದ ಶಾಲೆಯಲ್ಲೇ ಯುವಕ ಆತ್ಮಹತ್ಯೆ

    ಕ್ವಾರಂಟೈನ್ ಆಗಿದ್ದ ಶಾಲೆಯಲ್ಲೇ ಯುವಕ ಆತ್ಮಹತ್ಯೆ

    ಮಂಗಳೂರು: ಕೊರೊನಾ ವೈರಸ್ ಭೀತಿಯಿಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ.

    ಮುಂಬೈನಿಂದ ಬುಧವಾರ ಬಂದಿದ್ದ ಯುವಕನನ್ನು ಕ್ವಾರೆಂಟೈನ್ ಮಾಡಲಾಗಿತ್ತು. ಆದರೆ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಕ್ವಾರಂಟೈನ್ ಮಾಡಲಾಗಿದ್ದ ಕಡಂದಲೆ ಶಾಲೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

    ಕೊರೊನಾದಿಂದ ಮುಂದಿನ ಜೀವನೋಪಾಯದ ಬಗ್ಗೆ ಹೆದರಿ ಆತ್ಯಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸ್ಪ್ರಿಂಗ್‍ನಂತೆ ಕುಪ್ಪಳಿಸುತ್ತೆ, ನೀರಿನ ಮೇಲೆ ತೇಲ್ತಿರುವಂತಿದೆ ಮೇಲ್ಪದರ- ಮೂಡಬಿದಿರೆಯಲ್ಲಿ ಸ್ಪ್ರಿಂಗ್ ಭೂಮಿ ವಿಸ್ಮಯ- ವಿಡಿಯೋ

    ಸ್ಪ್ರಿಂಗ್‍ನಂತೆ ಕುಪ್ಪಳಿಸುತ್ತೆ, ನೀರಿನ ಮೇಲೆ ತೇಲ್ತಿರುವಂತಿದೆ ಮೇಲ್ಪದರ- ಮೂಡಬಿದಿರೆಯಲ್ಲಿ ಸ್ಪ್ರಿಂಗ್ ಭೂಮಿ ವಿಸ್ಮಯ- ವಿಡಿಯೋ

    ಮಂಗಳೂರು: ಭೂಮಿ ಯಾವತ್ತಾದ್ರೂ ಕುಣಿದಿದ್ದನ್ನಾ ನೋಡಿದ್ದೀರಾ? ಅರೇ ಭೂಮಿ ಕುಣಿದ್ರೆ ನಾವೀರುತ್ತೀವಾ? ನಮ್ಮನ್ನೇ ಕುಣಿಸಿ ಬಿಡುತ್ತಪ್ಪಾ ಅಂತಾ ಹೇಳುತ್ತೀರಿ. ಹೌದು ಭೂಮಿ ಒಂದು ಕಡೆ ಗಟ್ಟಿಯಾಗಿ ನಿಲ್ಲುತ್ತೆ ಹೊರತು ಕುಣಿಯುತ್ತೆ ಅಂತ ಹೇಳಿದ್ರೆ ಅದು ನಿಜಕ್ಕೂ ಅಚ್ಚರಿಯೆನಿಸಿ ಬಿಡುತ್ತದೆ. ಆದ್ರೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಭೂಮಿ ಮೇಲೆ ನಾವು ಕುಣಿದ್ರೆ ಭೂಮಿ ಸ್ಪ್ರಿಂಗ್‍ನಂತೆ ಜಿಗಿಯುತ್ತೆ.


    ಹೌದು. ಜಿಲ್ಲೆಯ ಮೂಡಬಿದಿರೆಯ ಕಡಂದಲೆಯಲ್ಲಿ ಭೂಮಿಯ ಮೇಲ್ಪದರದ ಅಡಿಯಲ್ಲಿ ಏನೋ ದ್ರವಾಂಶ ಇರುವಂತೆ ಭಾಸವಾಗುತ್ತದೆ. ಕೆಲ ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಈ ಕುತೂಹಲದ ಬೆನ್ನತ್ತಿ ಹೋದಾಗ ಬೆಳಕಿಗೆ ಬಂದಿದ್ದು ಬೇರೆಯದ್ದೇ ಕಥೆ.

    ಸುಮಾರು 10 ವರ್ಷದ ಹಿಂದೆ ಈ 5 ಎಕರೆ ವ್ಯಾಪ್ತಿಯಲ್ಲಿ ಕಪ್ಪು ಕಲ್ಲಿನ ಕೋರೆ ನಡೀತಿತ್ತು. ಆದ್ರೆ ಕಲ್ಲು ಖಾಲಿಯಾದಾಗ ಹೊಂಡ ಬಿದ್ದ ಜಾಗವನ್ನು ಕಾನೂನಿನ ಪ್ರಕಾರ, ಕಲ್ಲಿನ ಪುಡಿಯನ್ನು ತುಂಬಿಸಿ ಕೋರೆ ನಡೆಸುತ್ತಿದ್ದ ಕೇರಳ ಮೂಲದ ಪೋಬ್ಸ್ ರಾಕ್ಸ್ ಮೈನ್ಸ್ ಕಂಪನಿ ಜಾಗ ಖಾಲಿ ಮಾಡಿತ್ತು. ಇದೇ ಜಾಗದಲ್ಲಿ ಈಗ ಸ್ಪ್ರಿಂಗ್ ಆ್ಯಕ್ಷನ್ ಶುರುವಾಗಿದೆ.

    ಸ್ಥಳೀಯರ ಪ್ರಕಾರ, ಪ್ರತಿ ವರ್ಷವೂ ಮಳೆಗಾಲದಲ್ಲಿ ಈ ಕೋರೆಯಲ್ಲಿ ನೀರು ತುಂಬಿ, ಅಲ್ಲಿನ ಮೇಲ್ಪದರ ಸ್ಪಾಂಜ್ ಥರ ಆಗುತ್ತೆ. ಅಡಿ ಭಾಗದಲ್ಲಿ ನೀರಿನ ಒರತೆ ಇರೋದ್ರಿಂದ ಮಳೆಗಾಲ ಆದ್ಮೇಲೆ ಸ್ವಲ್ಪ ಸಮಯ ಮೇಲ್ಪದರ ಹೀಗೆ ಆಗುತ್ತೆ. ಬೇಸಿಗೆಯಲ್ಲಿ ಯಥಾಪ್ರಕಾರ ಭೂಮಿ ಗಟ್ಟಿಯಾಗಿ ಈ ಸ್ಪಂಜ್ ಮಾಯವಾಗುತ್ತೆ ಅಂತಾ ಸ್ಥಳೀಯ ಸಂತೋಷ್ ಶೆಟ್ಟಿ ತಿಳಿಸಿದ್ದಾರೆ.

    ಆದ್ರೆ ಸ್ಪ್ರಿಂಗ್ ಥರಾ ಜಂಪ್ ಆಗುತ್ತೆ ಅಂತಾ ಕುಣಿಯಲು ಹೋದ್ರೆ 30 ಅಡಿ ಆಳದ ಹೊಂಡಕ್ಕೆ ಬೀಳೋ ಸಾಧ್ಯತೆ ಇದೆ ಅಂತಾ ಸ್ಥಳೀಯರೇ ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪರೀಕ್ಷೆ ಬಳಿಕ ಹಾಸ್ಟೆಲ್‍ನಲ್ಲಿ ಪಾರ್ಟಿ-ಆಳ್ವಾಸ್ ಕಾಲೇಜು ಸಿಬ್ಬಂದಿಯಿಂದ ವಿದ್ಯಾರ್ಥಿಗಳಿಗೆ ಥಳಿತ

    ಪರೀಕ್ಷೆ ಬಳಿಕ ಹಾಸ್ಟೆಲ್‍ನಲ್ಲಿ ಪಾರ್ಟಿ-ಆಳ್ವಾಸ್ ಕಾಲೇಜು ಸಿಬ್ಬಂದಿಯಿಂದ ವಿದ್ಯಾರ್ಥಿಗಳಿಗೆ ಥಳಿತ

    ಮಂಗಳೂರು: ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಮತ್ತೊಂದು ಎಡವಟ್ಟು ಮರುಕಳಿಸಿದೆ. ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಸಿಬ್ಬಂದಿ ಸೇರಿ ಯದ್ವಾತದ್ವಾ ಹೊಡೆದಿದ್ದಾರೆ.

    ಶನಿವಾರ ರಾತ್ರಿ ಕಾಲೇಜಿನ ಪುಷ್ಪಗಿರಿ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು, ಸಿಬ್ಬಂದಿ ಕೃತ್ಯ ವಿರೋಧಿಸಿ ವಿದ್ಯಾರ್ಥಿಗಳು ಇಂದು ಬೆಳಗ್ಗಿನಿಂದಲೇ ಪ್ರತಿಭಟನೆ ಆರಂಭಿಸಿದ್ದಾರೆ.

    ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಸೇರಿ ಹಾಸ್ಟೆಲ್ ನಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದರು. ಆದರೆ ಇದಕ್ಕೆ ವಾರ್ಡನ್ ಮತ್ತು ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಮತ್ತೊಬ್ಬ ವಿದ್ಯಾರ್ಥಿಯ ಮಾಹಿತಿ ಪ್ರಕಾರ, ಊಟದ ವಿಚಾರದಲ್ಲಿ ವಿದ್ಯಾರ್ಥಿಗಳು ಸಿಬ್ಬಂದಿಯನ್ನು ಪ್ರಶ್ನೆ ಮಾಡಿದ್ದರಂತೆ. ಇದೇ ನೆಪ ಇಟ್ಟುಕೊಂಡು ವಾರ್ಡನ್ ಮತ್ತು ಇತರೇ ಕಾಲೇಜು ಸಿಬ್ಬಂದಿ ಸೇರಿ ರಾತ್ರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

    20ಕ್ಕಿಂತಲೂ ಹೆಚ್ವು ವಿದ್ಯಾರ್ಥಿಗಳ ಮೇಲೆ ತೀವ್ರವಾಗಿ ಥಳಿಸಿದ್ದಾರೆ. ಥಳಿಸುವ ವಿಡಿಯೋವನ್ನು ಸ್ವತಃ ವಿದ್ಯಾರ್ಥಿಗಳೇ ತಮ್ಮ ಮೊಬೈಲಿನಲ್ಲಿ ಚಿತ್ರೀಕರಿಸಿ, ಮಾಧ್ಯಮಕ್ಕೆ ನೀಡಿದ್ದಾರೆ. ಘಟನೆ ಬಗ್ಗೆ ವಿದ್ಯಾರ್ಥಿಗಳ ಹೆತ್ತವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಥಳಿಸಿದ ವಿಚಾರದಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಕಾಲೇಜು ಕ್ಯಾಂಪಸ್ ನಲ್ಲಿ ಜಟಾಪಟಿ ನಡೀತಿದೆ.

  • ಕರಾವಳಿಯಲ್ಲಿ ಕಂಬಳ ಶುರು ಮಾಡಲು ಸಜ್ಜಾಗ್ತಿದೆ ವೇದಿಕೆ

    ಕರಾವಳಿಯಲ್ಲಿ ಕಂಬಳ ಶುರು ಮಾಡಲು ಸಜ್ಜಾಗ್ತಿದೆ ವೇದಿಕೆ

    ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಅತ್ತ ರಾಷ್ಟ್ರಪತಿ ಅಂಕಿತ ಸಿಗುತ್ತಿದ್ದಂತೆಯೇ ಈ ಋತುವಿನ ಮೊದಲ ಕಂಬಳಕ್ಕೆ ಸಿದ್ಧತೆ ನಡೆದಿದೆ.

    ನವೆಂಬರ್ 11 ಮತ್ತು 12 ರಂದು ಮೂಡುಬಿದಿರೆಯ ಕಡಲಕೆರೆ ನಿಸರ್ಗಧಾಮದಲ್ಲಿ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ ನಡೆಯಲಿದ್ದು ಕರೆ ನಿರ್ಮಾಣದ ಕೆಲಸ ಪ್ರಗತಿಯಲ್ಲಿದೆ.

    ಶಾಸಕ ಅಭಯಚಂದ್ರ ಜೈನ್ ನೇತೃತ್ವದಲ್ಲಿ ಈ ಕಂಬಳ ನಡೆಯಲಿದ್ದು ಕಂಬಳದ ವಿಚಾರ ಕೋರ್ಟ್ ಮೆಟ್ಟಿಲೇರಿದ ಎರಡು ವರ್ಷದ ಬಳಿಕ ಅಧಿಕೃತವಾಗಿ ನಡೆಯುತ್ತಿದೆ. ಇದೇ ವೇಳೆ, ರಾಜ್ಯ ಸರಕಾರ ಕಂಬಳದ ಕುರಿತು ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತವೂ ಲಭಿಸಿದ್ದು ಕಂಬಳ ಪ್ರಿಯರಿಗೆ ವರದಾನವಾಗಿ ಪರಿಣಮಿಸಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯಿಂದ ಕಂಬಳದ ವೇಳಾಪಟ್ಟಿ ನಿಗದಿಯಾಗಿದ್ದು ಪ್ರತಿ ಶನಿವಾರ ಕಂಬಳ ನಡೆಯುತ್ತೆ ಎಂಬುದಾಗಿ ತಿಳಿದುಬಂದಿದೆ.

     

  • ಕಾವ್ಯ ಸಾವಿನ ನ್ಯಾಯಕ್ಕಾಗಿ ಮಂಗಳೂರಲ್ಲಿ ಭಾರೀ ಪ್ರತಿಭಟನೆ- ಮೇಯರ್ ಸೇರಿದಂತೆ ಸಾವಿರಾರು ಜನ ಭಾಗಿ

    ಕಾವ್ಯ ಸಾವಿನ ನ್ಯಾಯಕ್ಕಾಗಿ ಮಂಗಳೂರಲ್ಲಿ ಭಾರೀ ಪ್ರತಿಭಟನೆ- ಮೇಯರ್ ಸೇರಿದಂತೆ ಸಾವಿರಾರು ಜನ ಭಾಗಿ

    ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣದಲ್ಲಿ ಪೊಲೀಸರ ವಿಳಂಬ ತನಿಖೆ ವಿರೋಧಿಸಿ `ಜಸ್ಟಿಸ್ ಫಾರ್ ಕಾವ್ಯ’ ಹೋರಾಟ ಸಮಿತಿ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

    ಕಾವ್ಯ ಸಾವು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಹಾಗೂ ಆಕೆಯ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

    ಮಂಗಳೂರಿನ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಗೆ ಭಾಗವಹಿಸಿಲು ಸಾವಿರಾರು ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಕಾವ್ಯ ಹೆತ್ತವರು, ಸೌಜನ್ಯ ಪೋಷಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದಾರೆ. ಡಿಸಿ ಕಚೇರಿ ಮುಂಭಾಗ ರಸ್ತೆ ಬಂದ್ ಮಾಡಿರುವುದರಿಂದ ಬಸ್ಸುಗಳ ಓಡಾಟಕ್ಕೆ ಪೊಲೀಸರು ಬದಲಿ ವ್ಯವಸ್ಥೆ ಕಲ್ಪಿಸಿದ್ದಾರೆ.

    ಪ್ರತಿಭಟನೆಗೆ ಮಂಗಳೂರು ಮೇಯರ್ ಕವಿತಾ ಸನಿಲ್ ಸಹ ಬೆಂಬಲ ಸೂಚಿಸಿದ್ದಾರೆ. ಈ ವೇಳೆ ಮಾತನಾಡಿದ ಮೇಯರ್ ಕಾವ್ಯ ಆತ್ಮಹತ್ಯೆಯೋ, ಕೊಲೆಯೋ ಅನ್ನೋದು ತನಿಖೆಯಾಗಬೇಕು. ಒಟ್ಟಿನಲ್ಲಿ ಸತ್ಯ ಹೊರಬರಲಿ, ಕಾವ್ಯಾ ಹೆತ್ತವರ ಪ್ರಶ್ನೆಗಳಿಗೆ ಉತ್ತರ ಸಿಗಲಿ. ಕಾವ್ಯ ಸಾವಿಗೆ ನ್ಯಾಯಕ್ಕಾಗಿ ನಮ್ಮ ಪೂರ್ಣ ಬೆಂಬಲ ಇದೆ ಎಂದ್ರು.

    ಕಾವ್ಯ ಕ್ರೀಡಾ ವಿದ್ಯಾರ್ಥಿನಿಯಾಗಿದ್ದು ಎಂದಿಗೂ ಆತ್ನಹತ್ಯೆ ಮಾಡಿಕೊಳ್ಳಲಾರಳು. ಸತ್ಯ ಹೊರ ಬರುವವರೆಗೂ ನಮ್ಮ ಹೋರಾಟ ನಿರಂತರವಾಗಲಿದ್ದು, ಪರಿಹಾರ ಮೊತ್ತ ಕೊಡಿಸಲು ಮೇಯರ್ ಆಗಿ ನನ್ನ ಪ್ರಯತ್ನ ಮಾಡುವೆ. ಆದ್ರೆ ತನಿಖೆ ವಿಚಾರದಲ್ಲಿ ಯಾವುದೇ ಪಕ್ಷ ಮೂಗು ತೂರಿಸಬಾರದು ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

    ನ್ಯಾಶನೆಲ್ ಲೆವಲ್ ಬ್ಯಾಡ್ಮಂಟನ್ ಆಟಗಾರ್ತಿಯಾಗಿರೋ 15 ವರ್ಷದ ಕಾವ್ಯ ಜುಲೈ 20 ರಂದು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಶಾಲೆಯಿಂದ ತಿಳಿಸಲಾಗಿತ್ತು. ಆದ್ರೆ ಹೆತ್ತವರು ಅಲ್ಲಿಗೆ ತೆರಳುವಷ್ಟರಲ್ಲಿ ವಿದ್ಯಾರ್ಥಿನಿಯ ಶವವನ್ನು ಆಳ್ವಾಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಇದರಿಂದ ಪೋಷಕರು ಇದೊಂದು ಕೊಲೆ ಎಮದು ಆರೋಪಿಸಿದ್ದರು. ಘಟನೆಯ ಬಳಿಕ ಅನೇಕ ಪ್ರತಿಭಟನೆಗಳು ನಡೆದಿದ್ದು, ಹಾಸ್ಟೆಲ್ ನ ಸಿಸಿಟಿವಿ ಕೂಡ ಬಿಡುಗಡೆ ಮಾಡಲಾಗಿತ್ತು.

    ಕಟೀಲು ಬಳಿಯ ದೇವರಗುಡ್ಡ ಎಂಬಲ್ಲಿನ ನಿವಾಸಿಗಳಾದ ಲೋಕೇಶ್ ಮತ್ತು ಬೇಬಿ ದಂಪತಿಯ ಏಕೈಕ ಪುತ್ರಿಯಾಗಿರುವ ಕಾವ್ಯ ಚಿಕ್ಕಂದಿನಿಂದಲೇ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದಳು. ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿಯೂ ಪಾಲ್ಗೊಂಡಿದ್ದು ಕಟೀಲು ಶಾಲೆಗೆ ಕೀರ್ತಿ ತಂದಿದ್ದಳು. ಅದರಂತೆ ಆಳ್ವಾಸ್ ಹೈಸ್ಕೂಲಿನ ದೈಹಿಕ ಶಿಕ್ಷಕರೇ ಕಾವ್ಯಾ ಹೆತ್ತವರನ್ನು ಸಂಪರ್ಕಿಸಿ, ತಮ್ಮ ಶಾಲೆಗೆ ಕಳಿಸಿಕೊಡಿ ಕ್ರೀಡಾ ಕೋಟಾದಲ್ಲಿ ಉಚಿತವಾಗಿ ಶಿಕ್ಷಣ ಕೊಡಿಸುತ್ತೇವೆಂದು ಹೇಳಿ ಕರೆಸಿಕೊಂಡಿದ್ದರು.

    ಇದನ್ನೂ ಓದಿ: ಕಾವ್ಯ ಅಸಹಜವಾಗಿ ಸಾವನ್ನಪ್ಪಿದ್ದಾಳೆ: ಉಗ್ರಪ್ಪ ಕಾಲೇಜಿಗೆ ಭೇಟಿ ನೀಡಿದಾಗ ಸಿಕ್ಕಿರೋ ಸ್ಫೋಟಕ ಮಾಹಿತಿ ಇಲ್ಲಿದೆ

  • ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ: ಆಳ್ವಾಸ್ ಬೆನ್ನಿಗೆ ನಿಂತ ಎಚ್‍ಡಿಕೆ

    ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ: ಆಳ್ವಾಸ್ ಬೆನ್ನಿಗೆ ನಿಂತ ಎಚ್‍ಡಿಕೆ

    ಉಡುಪಿ: ಬ್ಯಾಡ್ಮಿಂಟನ್ ಆಟಗಾರ್ತಿ ಕಾವ್ಯ ಶ್ರೀ ನಿಗೂಢ ಸಾವಿನ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹೆಸರಿಗೆ ಮಸಿ ಬಳಿಯಬೇಡಿ ಅಂತ ಹೇಳುವ ಮೂಲಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂಸ್ಥೆಯ ಬೆನ್ನಿಗೆ ನಿಂತಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಳ್ವಾಸ್ ಕಾಲೇಜು ಮೂರು ಲಕ್ಷ ಕುಟುಂಬಕ್ಕೆ ನೆರವಾಗಿದೆ. ಇಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗುತ್ತಿದೆ. ಸಾವಿನ ಪ್ರಕರಣದ ಬಗ್ಗೆ ಚರ್ಚೆ ಆರಂಭವಾಗಿದೆ. ಸರ್ಕಾರ ಪ್ರಕರಣ ಸತ್ಯಾಸತ್ಯತೆ ಅರಿಯಬೇಕು ಅಂತ ಹೇಳಿದ್ದಾರೆ.

    ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ ಆಳ್ವ ಈ ವಿಚಾರವಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿದ್ದಾರೆ. 26 ಸಾವಿರ ಮಕ್ಕಳು ಹಾಸ್ಟೆಲ್ ನಲ್ಲಿದ್ದಾರೆ. 4 ಸಾವಿರ ಬಡಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದಾರೆ. ಕಾವ್ಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಕ್ಕೆ ಪುಕ್ಕ ಕಟ್ಟಲಾಗುತ್ತಿದೆ. ಈ ಮೂಲಕ ಸಂಸ್ಥೆಯ ಹೆಸರಿಗೆ ಮಸಿ ಬಳಿಯಬೇಡಿ. ಎಲ್ಲಾ ಸಂಘಟನೆಗಳು ರಾಜಕೀಯ ನಿಲ್ಲಿಸಬೇಕು ಅಂತಾ ಕುಮಾರಸ್ವಾಮಿ ಸಿಡಿಮಿಡಿಗೊಂಡಿದ್ದಾರೆ.

    ಇದನ್ನೂ ಓದಿ: ಬಿಗ್ ಬುಲೆಟಿನ್ ನಲ್ಲಿ ಕಾವ್ಯ ಶ್ರೀ ಪ್ರಕರಣದ ಬಿಗ್ ಚರ್ಚೆ – ತನಿಖೆಗೆ ಸಹಕರಿಸುವೆ ಎಂದ ಮೋಹನ್ ಆಳ್ವ

    ಸಿಬ್ಬಂದಿ, ವಿದ್ಯಾರ್ಥಿಗಳ ವಿಚಾರಣೆ: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಸಹಿತ 6 ವಿದ್ಯಾರ್ಥಿಗಳ ವಿಚಾರಣೆ ನಡೆಸಲಾಗುತ್ತಿದೆ.

    ಎಸಿಪಿ ರಾಜೇಂದ್ರ ನೇತೃತ್ವದ ತಂಡದಿಂದ ಹಾಸ್ಟೆಲ್ ವಾರ್ಡನ್, ಶಿಕ್ಷಕರು, ಸಹಪಾಠಿಗಳು, ಸಿಬ್ಬಂದಿ ವಿಚಾರಣೆ ನಡೆಯುತ್ತಿದೆ. ಅಲ್ಲದೇ ಸಿಸಿಟಿವಿ ಫೂಟೇಜ್, ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಪರಿಶೀಲನೆ ಹಾಗೂ ಫೋನ್ ಸಂಭಾಷಣೆ, ಹೆತ್ತವರು ಹೇಳಿಕೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಅಂತೆಯೇ ಕಾವ್ಯಾಳ ಮರಣೋತ್ತರ ವರದಿ ಕೂಡ ಇಂದು ಸಲ್ಲಿಕೆಯಾಗುವ ಸಾಧ್ಯತೆಗಳಿವೆ.

    https://www.youtube.com/watch?v=75vzrVm8Z6w

    https://www.youtube.com/watch?v=BgvrrloxXoQ

    https://www.youtube.com/watch?v=9upWi0NOWqw