Tag: ಮೂರನೇ ಅಲೆ

  • ಭಾರತದಲ್ಲಿ ಮೂರನೇ ಅಲೆ ಸಾಧ್ಯತೆ ಕಡಿಮೆ: ಗುಲೇರಿಯಾ

    ಭಾರತದಲ್ಲಿ ಮೂರನೇ ಅಲೆ ಸಾಧ್ಯತೆ ಕಡಿಮೆ: ಗುಲೇರಿಯಾ

    ನವದೆಹಲಿ: ಕೋವಿಡ್-19 ರೋಗ ಸದ್ಯ ಸ್ಥಳೀಯವಾಗಿ ಇದ್ದರೂ ಹಿಂದಿನಂತೆ ತೀವ್ರರೂಪದಲ್ಲಿ ಇಲ್ಲ. ಮುಂದೆ ಬರಲಿರುವ ಮೂರನೇ ಅಲೆಯೂ ತೀವ್ರ ಸ್ವರೂಪ ತಾಳುವ ಸಾಧ್ಯತೆ ಕಡಿಮೆ ಇದೆ. ದೇಶಾದ್ಯಂತ ಜನರಿಗೆ ನೀಡುತ್ತಿರುವ ಲಸಿಕೆಗಳು ಉತ್ತಮವಾಗಿದೆ. ಹೀಗಾಗಿ ಬೂಸ್ಟರ್ ಡೋಸ್ ನೀಡುವ ಅಗತ್ಯ ಭಾರತದ ಜನರಿಗೆ ಇಲ್ಲ ಎಂದು ಪ್ರಮುಖ ವೈದ್ಯಕೀಯ ತಜ್ಞ ಹಾಗೂ ಏಮ್ಸ್‍ನ ಮುಖ್ಯಸ್ಥ ರಣದೀಪ್ ಗುಲೇರಿಯಾ ಭವಿಷ್ಯ ನುಡಿದಿದ್ದಾರೆ.

    ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ್ ಬರೆದ ರೂಪಾ ಪ್ರಕಟಣೆಯ ‘ಗೋಯಿಂಗ್ ವೈರಲ್’ ಬಿಡುಗಡೆ ಕಾರ್ಯಕ್ರಮದಲ್ಲಿ ಗುಲೇರಿಯಾ ಹೇಳಿಕೆ ನೀಡಿದರು. ಇದನ್ನೂ ಓದಿ: ಖಾಲಿ ಇರುವ 6 ಸಾವಿರ ಪೊಲೀಸ್ ಹುದ್ದೆಗಳನ್ನು ವಾರದೊಳಗೆ ಭರ್ತಿ ಮಾಡಿ: ಅಸ್ಸಾಂ ಸಿಎಂ

    ರಾಷ್ಟ್ರೀಯ ಕೋವಿಡ್-19 ಲಸಿಕಾ ಕಾರ್ಯಕ್ರಮವು ಈಗಾಗಲೇ ರೋಗ ಮತ್ತು ಸಾವುಗಳನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಬೃಹತ್ ರೂಪದಲ್ಲಿ ಕೋವಿಡ್‍ನ ಮೂರನೇ ಅಲೆ ಮರುಕಳಿಸುವ ಸಾಧ್ಯತೆ ವಿರಳ. ಇದು ಹಂದಿ ಜ್ವರ (ಹೆಚ್1ಎನ್1) ನಂತೆ ಆಗುವ ಸಾಧ್ಯತೆ ಇರುತ್ತದೆ. ಜನರು ರೋಗಕ್ಕೆ ಒಳಗಾದರೂ ತೀವ್ರ ಪ್ರಮಾಣದಲ್ಲಿ ಅದು ಇರುವುದಿಲ್ಲ ಎಂದು ಗುಲೇರಿಯಾ ಹೇಳಿದರು.

    ಕೋವಿಡ್-19 ಲಸಿಕೆಗಳನ್ನು ದೇಶಾದ್ಯಂತ ಜನರಿಗೆ ನೀಡುತ್ತಿರುವುದರಿಂದ ನಾವು ಪ್ರಗತಿಯಲ್ಲಿರುವ ಸೋಂಕುಗಳನ್ನು ಕಡಿಮೆಯಾಗಿ ನೋಡುತ್ತಿದ್ದೇವೆ. ಮೊದಲ ಡೋಸ್ ಅನ್ನು ಹೆಚ್ಚಿನ ಜನರು ತೆಗೆದುಕೊಂಡಿದ್ದಾರೆ. ಈಗ ಎರಡನೇ ಡೋಸ್‍ಅನ್ನು ತೆಗೆದುಕೊಳ್ಳುವಂತೆ ಜನರನ್ನು ಪ್ರೋತ್ಸಾಹಿಸಬೇಕು. ಹೀಗೆ ಮಾಡಿದ್ದಲ್ಲಿ ಬೂಸ್ಟರ್ ಡೋಸ್‍ನ ಅಗತ್ಯವೇ ಬೀಳುವುದಿಲ್ಲ ಎಂದರು. ಇದನ್ನೂ ಓದಿ: ಕಾವೇರಿದ ಮಂಡ್ಯ ಎಂಎಲ್‍ಸಿ ಚುನಾವಣೆ – ಯಾರಿಗೆ ಸಿಗುತ್ತೆ ಸುಮಲತಾ ಬೆಂಬಲ?

    CORONA-VIRUS.

    ನಾವು ನೋಡಿದ ಕೊನೆಯ ಸಾಂಕ್ರಾಮಿಕ ರೋಗ ಅದು 2009ರಲ್ಲಿ ಕಾಡಿದ ಹೆಚ್1ಎನ್1. ಆಗ ನಮ್ಮ ಬಳಿ ಲಸಿಕೆ ಇರಲಿಲ್ಲ. ನಾವು ಲಸಿಕೆಗಳಿಗಾಗಿ ವಿಶ್ವ ಆರೋಗ್ಯ ಸಂಸ್ಥೆಯನ್ನು ಅವಲಂಭಿಸಬೇಕಾಯಿತು. ಆಗಿನಿಂದ ಇಲ್ಲಿಯವರೆಗೆ ದೇಶ ಭಾರೀ ಬದಲಾವಣೆ ಹೊಂದಿದೆ. ಈಗ ದೇಶ ಕೋವಿಡ್-19 ಲಸಿಕೆಯನ್ನು ಇತರ ದೇಶಗಳಿಗೆ ರಫ್ತು ಮಾಡುತ್ತಿದೆ. ಅದು ನಾವು ಸಾಧಿಸಿದ ಪ್ರಯಾಣವಾಗಿದೆ ಎಂದು ಗುಲೇರಿಯಾ ಶ್ಲಾಘಿಸಿದರು.

  • ಸದ್ಯಕ್ಕಿಲ್ಲ ಮೂರನೇ ಅಲೆಯ ಆತಂಕ – ತಜ್ಞರ ಅಭಿಪ್ರಾಯ ಏನು ಗೊತ್ತಾ?

    ಸದ್ಯಕ್ಕಿಲ್ಲ ಮೂರನೇ ಅಲೆಯ ಆತಂಕ – ತಜ್ಞರ ಅಭಿಪ್ರಾಯ ಏನು ಗೊತ್ತಾ?

    ಬೆಂಗಳೂರು: ಕೊರೊನಾ ಎರಡನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದೆ. ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಕೂಡ ಕಡಿಮೆಯಾಗುತ್ತಿದ್ದು, ಡಿಸೆಂಬರ್ ಅಂತ್ಯದ ವೇಳಗೆ ಕೊರೊನಾ ಎರಡನೇ ಅಲೆ ಸಂಪೂರ್ಣವಾಗಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

    ಹೌದು, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಮೂರನೇ ಅಲೆಯ ಅಬ್ಬರ ಭಾರತದಲ್ಲಿ ಶುರುವಾಗಲಿದೆ ಎನ್ನುವ ಅಭಿಪ್ರಾಯ ಬಹುತೇಕ ತಜ್ಞರಲ್ಲಿತ್ತು. ಹಾಗಾಗಿ ಸಾಕಷ್ಟು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನವಹಿಸುವಂತೆ ಸಲಹೆ ಸೂಚನೆಗಳನ್ನು ನೀಡಲಾಗಿತ್ತು. ಆದರೆ ಇದೀಗ ಕೊರೊನಾ ಮೂರನೇ ಅಲೆಯ ಆತಂಕ ಸದ್ಯಕ್ಕೆ ಇಲ್ಲವಾಗಿದೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ನಾಲೆಗೆ ಬಿದ್ದ ಟ್ರ್ಯಾಕ್ಟರ್

    ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಈಗ ತಜ್ಞರು ಮೂರನೇ ಅಲೆಯ ಬಗ್ಗೆ ಕೊಂಚ ನಿರಾಳ ಮತ್ತು ಸಂತಸದ ವಿಚಾರವನ್ನು ತಿಳಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಮೂರನೇ ಅಲೆಯ ಆತಂಕ ದೂರವಾಗಿದೆ ಅಂತ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊರೊನಾ ವಿರುದ್ಧ ಭಾರತದಲ್ಲಿ ಲಸಿಕೆ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ಜನರಲ್ಲಿ ರೋಗ ನಿರೋಧಕ ಶಕ್ತಿ ಬೆಳವಣಿಗೆ ಆಗಿದೆ. ಹಾಗಾಗಿ ಸದ್ಯಕ್ಕೆ ಮೂರನೇ ಅಲೆಯ ಆತಂಕವಿಲ್ಲ ಎನ್ನುವ ಮಾತುಗಳು ಕೇಳಿಬಂದಿದೆ. ಇದನ್ನೂ ಓದಿ: ಆರ್ಥಿಕ ಸಂಕಷ್ಟದಿಂದ ಮನನೊಂದು KSRTC ನೌಕರ ವಿಷ ಸೇವಿಸಿ ಆತ್ಮಹತ್ಯೆ

    ಆದರೂ ಜನವರಿ ಬಳಿಕ ಮೂರನೇ ಅಲೆ ದೇಶಕ್ಕೆ ಬರುವ ಸಾಧ್ಯತೆಗಳು ಹೆಚ್ಚಾಗಿದೆ. ಎರಡನೇ ಅಲೆ ಹೇಗೆ ಧಿಡಿರನೇ ಶುರುವಾಯಿತೋ, ಅದೇ ರೀತಿ ಮೂರನೇ ಅಲೆ ಜನವರಿ ಬಳಿಕ ಶುರುವಾಗುವ ಸಾಧ್ಯತೆ ಇದೆ. ಜೊತೆಗೆ ಮೂರನೇ ಅಲೆ ಮೊದಲ ಎರಡು ಅಲೆಯಂತೆ ಭೀಕತೆ ಇರುವುದಿಲ್ಲ. ಕಾರಣ ಭಾರತದಲ್ಲಿ ಮೂರನೇ ಅಲೆ ಪ್ರಾರಂಭದ ವೇಳೆಗೆ ಬಹುತೇಕ ವ್ಯಾಕ್ಸಿನ್ ಎರಡು ಡೋಸ್ ಆಗಿರುತ್ತದೆ. ಇದರಿಂದಾಗಿ ಹೆಚ್ಚಿನ ಪರಿಣಾಮ ಬೀರುವುದಿಲ್ಲ. ಆದರೂ ಜನ ಮಾತ್ರ ಕೊರೊನಾ ನಿಯಮಗಳನ್ನು ಮೀರಬಾರದು ಎಂಬ ಸಲಹೆಯನ್ನು ತಜ್ಞರು ನೀಡಿದ್ದಾರೆ.

  • ಕೊರೊನಾ 3ನೇ ಅಲೆ ಯಾವ ಸಮಯದಲ್ಲಾದರೂ ಬರಬಹುದು : ಮಂಡ್ಯ ಡಿಎಚ್‍ಓ ಧನಂಜಯ್

    ಕೊರೊನಾ 3ನೇ ಅಲೆ ಯಾವ ಸಮಯದಲ್ಲಾದರೂ ಬರಬಹುದು : ಮಂಡ್ಯ ಡಿಎಚ್‍ಓ ಧನಂಜಯ್

    ಮಂಡ್ಯ: ಕೋವಿಡ್-19 ವ್ಯಾಕ್ಸಿನ್ ಹಾಕಿಸಿಕೊಂಡಿದ್ದೇವೆ ನಮಗೆ ಕೊರೊನಾ ಬರುವುದಿಲ್ಲ ಎಂದು ಕೊರೊನಾ ನಿಯಮಗಳನ್ನು ಗಾಳಿಗೆ ತೂರಬೇಡಿ, ಮೂರನೇ ಅಲೆ ಯಾವ ಸಮಯದಲ್ಲಿ ಆದರು ಬರಬಹುದು ಎಂದು ಮಂಡ್ಯ ಡಿಎಚ್‍ಓ ಧನಂಜಯ್ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಜನರು ಕೊರೊನಾ ಮೊದಲನೇ, ಎರಡನೇ ಅಲೆ ಆಯ್ತು ಮೂರನೇ ಅಲೆ ಬರುವುದಿಲ್ಲ ಬಂದರು ನಾವು ವ್ಯಾಕ್ಸಿನ್ ಹಾಕಿಸಿಕೊಂಡಿದ್ದೇವೆ ನಮಗೆ ಬರುವುದಿಲ್ಲ ಎಂದು ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಬೇಜವಾಬ್ದಾರಿಯಿಂದ ವರ್ತನೆ ಮಾಡುತ್ತಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಂಡರೆ ಕೊರೊನಾ ಬರುವುದಿಲ್ಲ ಎಂದು ತಿಳಿಯುವುದು ತಪ್ಪು ತಿಳುವಳಿಕೆ, ಲಸಿಕೆ ಪಡೆದರು ಸಹ ಕೊರೊನಾ ಬರುತ್ತದೆ. ವ್ಯಾಕ್ಸಿನ್ ನೀಡಿರುವುದು ಕೊರೊನಾದ ತೀವ್ರತೆ ಕಡಿಮೆಯಾಗಲಿ ಎಂದು, ಕೊರೊನಾ ಬರುವುದಿಲ್ಲ ಎಂದಲ್ಲ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬಡ ರೈತನ ಸಂಕಷ್ಟಕ್ಕೆ ಮಿಡಿದ ಜ್ಯೋತಿಷಿ ಹೃದಯ- ಎತ್ತುಗಳ ಕೊಡುಗೆ

    ಈಗಾಗಲೇ ವಿದೇಶಗಳಲ್ಲಿ ಕೊರೊನಾದ ಮೂರನೇ ಅಲೆಯ ತೀವ್ರತೆ ಹೆಚ್ಚಾಗಿದೆ, ನಮ್ಮಲ್ಲೂ ಯಾವಾಗ ಬೇಕಾದರೂ ಮೂರನೇ ಅಲೆ ಕಾಣಿಕೊಳ್ಳಬಹುದು. ಹೀಗಾಗಿ ದೇಶದಲ್ಲಿ ವ್ಯಾಕ್ಸಿನ್ ನೀಡುವುದನ್ನು ಹೆಚ್ಚಿಸಲಾಗಿದೆ. ಜನರು ಸಹ ಲಸಿಕೆ ತೆಗೆದುಕೊಂಡ ನಂತರವೂ ಕೊರೊನಾ ನಿಯಮಗಳನ್ನು ಪಾಲಿಸಬೇಕು. ಅನಗತ್ಯವಾಗಿ ಗುಂಪು ಸೇರಿಸಿಕೊಂಡು ಕಾರ್ಯಕ್ರಮಗಳನ್ನು ಮಾಡುವುದು ಬೇಡಾ, ಒಂದು ವೇಳೆ ಹಾಗೆ ಮಾಡಿದಲ್ಲಿ ಸಾವು-ನೋವುಗಳ ಪ್ರಮಾಣ ಹೆಚ್ಚುತ್ತವೆ. ವಿಶ್ವ ಸಂಸ್ಥೆ ಕೊರೊನಾ ಸಾಂಕ್ರಾಮಿಕ ರೋಗ ಅಲ್ಲ ಎಂದು ಹೇಳುವವರೆಗೂ ಎಚ್ಚರಿಕೆಯಿಂದ ಇರಬೇಕು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಬೆಲೆ ಏರಿಕೆ ಅನಿವಾರ್ಯ, ಖಜಾನೆ ತುಂಬಲು ಬೆಲೆ ಹೆಚ್ಚಳ ಮಾಡಲೇಬೇಕಾಗುತ್ತೆ: ಎಚ್‍ಡಿಕೆ

  • ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಎಫೆಕ್ಟ್ – ಹೊಸ ಸಂಶೋಧನೆ ವರದಿ ಆತಂಕ

    ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಎಫೆಕ್ಟ್ – ಹೊಸ ಸಂಶೋಧನೆ ವರದಿ ಆತಂಕ

    ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆಯ ಆತಂಕದ ನಡುವೆ ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಭಾರತೀಯ ಸಾರ್ವಜನಿಕ ಆರೋಗ್ಯ ತಜ್ಞರ ವರದಿಯಲ್ಲಿ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಕೊರೊನಾ ಪರಿಣಾಮದ ಬಗ್ಗೆ ಸ್ಫೋಟಕ ವಿಚಾರವೊಂದನ್ನು ಬಿಚ್ಚಿಟ್ಟಿದ್ದಾರೆ.

    ಕೊರೊನಾ ಮೂರನೇ ಅಲೆ ಮಕ್ಕಳಿಗೆ ಕಂಟಕವಾಗುವ ಸಾಧ್ಯತೆ ಇದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಸೋಂಕು ಅಟ್ಯಾಕ್ ಆಗುತ್ತದೆ ಎಂದು ವರದಿ ನೀಡಿದೆ. ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕಿತರಾದ, ಮಕ್ಕಳ ಸಂಖ್ಯೆಗಿಂತಲೂ ಈ ಬಾರಿ ಏಳು ಪಟ್ಟು ಹೆಚ್ಚಾಗುವ ಬಗ್ಗೆ ಸಂಶೋಧನೆಯಲ್ಲಿ ತಜ್ಞರು ಸುಳಿವು ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ನಾಳೆಯಿಂದ ಎರಡನೇ ಹಂತದ ಶಾಲೆಗಳು ಆರಂಭ

    ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಸಾಂಕ್ರಾಮಿಕ ಖಾಯಿಲೆಗಳ ತಜ್ಞ ಡಾ. ಗಿರಿಧರ್ ಬಾಬು, ಎರಡನೇ ಅಲೆಗಿಂತ ಮೂರನೇ ಅಲೆಯ ತೀವ್ರತೆ, ಮೂರರಿಂದ ಹತ್ತುಪಟ್ಟು ಹೆಚ್ಚಾಗಬಹುದು. ಮೂರನೇ ಅಲೆಯನ್ನು ತಡೆಯಲು ಲಸಿಕಾ ಅಭಿಯಾನವನ್ನು ತ್ವರಿತಗೊಳಿಸಬೇಕು. ಲಸಿಕೆ ನೀಡುವುದರಿಂದ, ಸಕ್ರಿಯ ಪ್ರಕರಣಗಳು ಕಡಿಮೆಯಾಗಲಿವೆ. ಆಸ್ಪತ್ರೆಗಳಲ್ಲಿ ಐಸಿಯು, ಆಮ್ಲಜನಕ ಅಗತ್ಯವೂ ಕಡಿಮೆಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮಧ್ಯಾಹ್ನ ತಡೆರಹಿತ ವೋಲ್ವೊ ಬಸ್ ವ್ಯವಸ್ಥೆ

  • ಕೊರೊನಾ 3ನೇ ಅಲೆ ಮಕ್ಕಳಿಗೆ ಹೆಚ್ಚು ಪರಿಣಾಮಕಾರಿಯಲ್ಲ-ಅಧ್ಯಯನ ವರದಿ!

    ಕೊರೊನಾ 3ನೇ ಅಲೆ ಮಕ್ಕಳಿಗೆ ಹೆಚ್ಚು ಪರಿಣಾಮಕಾರಿಯಲ್ಲ-ಅಧ್ಯಯನ ವರದಿ!

    ಲಂಡನ್: ಕೊರೊನಾ ಮೂರನೇ ಅಲೆಯಲ್ಲಿ ಹೆಚ್ಚು ಮಕ್ಕಳು ಸೋಂಕಿಗೆ ಒಳಗಾಗುವ ಸಾಧ್ಯತೆ ಇದೆ ಎಂದು ಭಾರತವೂ ಸೇರಿದಂತೆ ಅನೇಕ ರಾಷ್ಟ್ರದ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಪರಿಣಾಕಾರಿಯಲ್ಲ ಎಂದು ಲಂಡನ್ ಕಾಲೇಜಿನ ಅಧ್ಯಯನ ತಂಡವೊಂದು ವರದಿ ಮಾಡಿದೆ.

    ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ಹೇಳಲಾಗುತ್ತಿದೆ. ಅದರೆ ಮಕ್ಕಳ ಮೇಲೆ ಕೊರೊನಾ ಎಫೆಕ್ಟ್ ಕಡಿಮೆ ಎಂದು ಲಂಡನ್‍ನ ತಜ್ಞರು, ಲಂಡನ್ ನ ಸಂಶೋಧಕರು ನಡೆಸಿರುವ ಅಧ್ಯಯನದಿಂದ ಸಿಹಿ ಸುದ್ದಿ ಹೊರಬಿದ್ದಿದೆ. ಲಂಡನ್‍ನ ಕಿಂಗ್ಸ್ ಕಾಲೇಜಿನ ತಜ್ಞರ ತಂಡವೊಂದು ಕೋವಿಡ್-19 ಮಕ್ಕಳ ಮೇಲೆ ಹೇಗೆ ಪರಿಣಾಮವನ್ನು ಬೀರಿದೆ ಎನ್ನುವುದರ ಮೇಲೆ ಅಧ್ಯಯನ ನಡೆಸಿದೆ.

    ಅಧ್ಯಯನದಲ್ಲಿ ಮಕ್ಕಳ ಮೇಲೆ ಕೊರೊನಾ ಎಫೆಕ್ಟ್ ಕಡಿಮೆ ಎಂಬ ವರದಿ ಮಾಡಲಾಗಿದ್ದು, ಸೋಂಕಿಗೆ ಒಳಗಾಗಿದ್ದ 25 ಸಾವಿರ ಮಕ್ಕಳ ಬಗ್ಗೆ ಅಧ್ಯಯನ ಮಾಡಿರುವ ತಂಡವೂ ಸೆಪ್ಟೆಂಬರ್ 2020 ರಿಂದ ಫೆಬ್ರವರಿ 2021 ರ ಅವಧಿಯಲ್ಲಿ ಸೋಂಕಿಗೆ ಒಳಗಾದ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕಿದೆ. ಸೋಂಕಿಗೆ ಒಳಗಾದ ಪೋಷಕರಿಂದ ಮಾಹಿತಿ ಕಲೆ ಹಾಕಿ ಮಕ್ಕಳ ಮೇಲೆ ಕೋವಿಡ್ ಯಾವ ರೀತಿ ಪ್ರಭಾವ ಬೀರಿತ್ತು, ಮತ್ತು ಎಷ್ಟು ದಿನಗಳಲ್ಲಿ ಮಕ್ಕಳು ಗುಣಮುಖರಾಗಿದ್ದರು. ಎನ್ನುವುದನ್ನು ಡೇಟಾ ಸಂಗ್ರಹ ಮಾಡಿ ವರದಿ ಸಿದ್ಧಪಡಿಸಿದೆ. ಇದನ್ನೂ ಓದಿ: ಕೊರೊನಾ 3ನೇ ಅಲೆ ಮಕ್ಕಳನ್ನು ಬಾಧಿಸುವ ಬಗ್ಗೆ ಪುರಾವೆಗಳಿಲ್ಲ: ಡಾ.ವಿ.ಕೆ.ಪೌಲ್

    ಕೋವಿಡ್‍ಗೆ ಒಳಗಾದ ಮಕ್ಕಳು 4 ರಿಂದ 6 ದಿನಗಳಲ್ಲಿ ಗುಣಮುಖರಾಗಿದ್ದಾರೆ. ಜೊತೆಗೆ 4 ವಾರಕ್ಕಿಂತ ಹೆಚ್ಚು ದಿನಗಳಲ್ಲಿ ಕೋವಿಡ್ ನ ಲಕ್ಷಣಗಳಿಂದ ಸಂಪೂರ್ಣವಾಗಿ ಗುಣಮುಖರಾಗುತ್ತಿದ್ದಾರೆ. ಹಿರಿಯರಲ್ಲಿ ದೀರ್ಘಾವಧಿಯರೆಗೆ ರೋಗ ಲಕ್ಷಣಗಳು ಇರುತ್ತದೆ. ಆದರೆ ಮಕ್ಕಳಿಗೆ ಸೋಂಕು ತಗುಲಿದ ಕೆಲವೇ ದಿನಗಳಲ್ಲಿ ಸೋಂಕಿನ ಲಕ್ಷಣಗಳಿಂದ ಮುಕ್ತರಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.