Tag: ಮೂಲಭೂತ ಸೌಕರ್ಯ

  • ಚಾಮರಾಜನಗರದಲ್ಲಿ ಗ್ರಾಮಸ್ಥರಿಂದ ದಾಂಧಲೆ, ಇವಿಎಂ ಧ್ವಂಸ

    ಚಾಮರಾಜನಗರದಲ್ಲಿ ಗ್ರಾಮಸ್ಥರಿಂದ ದಾಂಧಲೆ, ಇವಿಎಂ ಧ್ವಂಸ

    ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರನ್ನು ಮನವೊಲಿಸಲು ತೆರಳಿದ್ದ ಅಧಿಕಾರಿಗಳ ವಿರುದ್ಧ ಜನ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿದ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.

    ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಈ ವೇಳೆ ಅಧಿಕಾರಿಗಳು ಕೆಲವರ ಮನವೊಲಿಸಿ ಮತದಾನಕ್ಕೆ ಕರೆತಂದಿದ್ದಾರೆ. ಈ ವೇಳೆ ಇಡೀ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದೇವೆ ಎಂದು ಗ್ರಾಮದ ಒಂದು ಗುಂಪು ಗಲಾಟೆ ಆರಂಭಿಸಿದೆ. ಎರಡು ಗುಂಪುಗಳ ಮಧ್ಯೆ ನಡೆದ ಜಗಳ ಕೊನೆಗೆ ವಿಕೋಪಕ್ಕೆ ತಿರುಗಿ ಇವಿಎಂ (EVM) ಹಾಗೂ ಮತಗಟ್ಟೆಯ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಗಲಾಟೆಯಲ್ಲಿ ಕೆಲವು ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ:ಮೂಲಭೂತ ಸೌಕರ್ಯ ಕೊರತೆ ಆರೋಪ – ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

    ಮೂಲಭೂತ ಸೌಕರ್ಯ ಕೊರತೆಯಿಂದ ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದರು. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಕೆಲ ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದರು. ಅಧಿಕಾರಿಗಳು ಮನವೊಲಿಸುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿ ಮತದಾನ ಮಾಡಲೇಬಾರದು ಎಂದು ಗ್ರಾಮಸ್ಥರು ದೃಢ ಸಂಕಲ್ಪ ಮಾಡಿದ್ದರು. ಇದನ್ನೂ ಓದಿ: ತಾಳಿ ಕಟ್ಟುವ ಮುನ್ನ ಓಡೋಡಿ ಬಂದು ಮತದಾನ ಮಾಡಿದ ವರ

  • ಮೂಲಭೂತ ಸೌಕರ್ಯ ಕೊರತೆ ಆರೋಪ – ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

    ಮೂಲಭೂತ ಸೌಕರ್ಯ ಕೊರತೆ ಆರೋಪ – ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

    ಚಾಮರಾಜನಗರ: ಮೂಲಭೂತ ಸೌಕರ್ಯ ಕೊರತೆ ಆರೋಪಿಸಿ ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ (Voting) ದೂರ ಉಳಿದಿದ್ದಾರೆ.

    ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದು (Election Boycott), ಪಡಸಲನತ್ತ ಗ್ರಾಮದಲ್ಲಿ 85 ಮತದಾರರ ಪೈಕಿ ಇಬ್ಬರು ಮಾತ್ರ ಮತದಾನ ಮಾಡಿದ್ದಾರೆ. ಉಳಿದಂತೆ ಯಾವುದೇ ಮತದಾರರು ಇದುವರೆಗೂ ಮತಗಟ್ಟೆಯತ್ತ ಸುಳಿದಿಲ್ಲ. ಕನಿಷ್ಠ ಮೂಲಭೂತ ಸೌಕರ್ಯದಿಂದ ಗ್ರಾಮಸ್ಥರು ವಂಚಿತರಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ

    ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣ ಮರಿಚೀಕೆಯಾಗಿದೆ ಎಂದು ಆರೋಪ ಹೊರಿಸಲಾಗಿದೆ. ಕೆಲ ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದರು. ಅಧಿಕಾರಿಗಳು ಮನವೊಲಿಸುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿ ಮತದಾನ ಮಾಡಲೇಬಾರದು ಎಂದು ಗ್ರಾಮಸ್ಥರು ದೃಢ ಸಂಕಲ್ಪ ಮಾಡಿದ್ದಾರೆ. ಇದನ್ನೂ ಓದಿ: Lok Sabha Elections 2024: ಒಂದೇ ಕುಟುಂಬದ 85 ಮಂದಿಯಿಂದ ಏಕಕಾಲದಲ್ಲಿ ಮತದಾನ!

  • ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಸರಿಯಾದ ಸೌಕರ್ಯವಿಲ್ಲ- ಸೋಂಕಿತರ ಅಳಲು

    ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಸರಿಯಾದ ಸೌಕರ್ಯವಿಲ್ಲ- ಸೋಂಕಿತರ ಅಳಲು

    ಮಡಿಕೇರಿ: ಕೊರೊನಾ ರೋಗದಿಂದ ಬಳಲುತ್ತಿರುವ ರೋಗಿಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಸರಿಯಾದ ಸೌಲಭ್ಯಗಳಿಲ್ಲದೆ ಪರದಾಡುವಂತಾಗಿದೆ ಎಂದು ಕೊರೊನಾ ರೋಗಿಗಳು ಅಳಲು ತೋಡಿಕೊಂಡು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

    ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಯಾವುದೇ ಸರಿಯಾದ ಸೌಲಭ್ಯವಿಲ್ಲ. ನಾಲ್ಕು ವಾರ್ಡ್‍ಗಳಲ್ಲಿರುವ 20 ರೋಗಿಗಳಿಗೆ ಎರಡೇ ಟಾಯ್ಲೆಟ್‍ಗಳಿವೆ. ಅವುಗಳನ್ನೇ 20 ರೋಗಿಗಳು ಬಳಸುತ್ತಿದ್ದೇವೆ. ರೋಗದಿಂದ ಗುಣಮುಖರಾಗುತ್ತಿರುವವರು ಇವುಗಳನ್ನೇ ಬಳಸಿ ಮತ್ತೆ ರೋಗ ತಂದುಕೊಳ್ಳಬೇಕಾದ ಸ್ಥಿತಿ ಇದೆ. ಎರಡು ಮೂರು ದಿನಗಳಾದರೂ ಸ್ಯಾನಿಟೈಸರ್ ಕೊಡುವುದಿಲ್ಲ ಎಂದು ಆರೋಪ ಮಾಡಿದ್ದಾರೆ.

    ಸ್ನೇಹಿತರಿಗೆ ಮನೆಯವರಿಗೆ ಹೇಳಿ ಹೊರಗಿನಿಂದ ನಾವು ಸ್ಯಾನಿಟೈಸರ್ ತರಿಸಿಕೊಳ್ಳುತ್ತಿದ್ದೇವೆ. ಬಿಸಿನೀರು ಕುಡಿಯಲು ಹೇಳುತ್ತಾರೆ. ಆದರೆ ದಿನಕ್ಕೆ ಎರಡು ಬಾರಿ ಮಾತ್ರವೇ ಕುಡಿಯುವುದಕ್ಕೆ ನೀರು ಕೊಡುತ್ತಿದ್ದಾರೆ. ಬೇಕಾದಾಗ ನೀರು ಸಿಗೋದಿಲ್ಲ. ಇಲ್ಲಿರುವುದಕ್ಕಿಂತ ಮನೆಯಲ್ಲಿದ್ದರೆ ಎಷ್ಟೋ ಚೆನ್ನಾಗಿರುತಿತ್ತು, ಆರೋಗ್ಯವಾಗಿರುತ್ತಿದ್ದೆವು ಎಂದು ಕೊರೊನಾ ರೋಗಿಗಳು ವಿಡಿಯೋದಲ್ಲಿ ನೋವನ್ನು ಹೇಳಿಕೊಂಡಿದ್ದಾರೆ.

  • ರಾತ್ರಿಯಾದ್ರೆ ಸಾಕು ರಾಯಚೂರು ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದಿಗೆ ನರಕಯಾತನೆ

    ರಾತ್ರಿಯಾದ್ರೆ ಸಾಕು ರಾಯಚೂರು ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದಿಗೆ ನರಕಯಾತನೆ

    ರಾಯಚೂರು: ಹಗಲು ರಾತ್ರಿಯನ್ನದೇ ಪ್ರಯಾಣಿಕರನ್ನ ಒಂದೆಡೆಯಿಂದ ಇನ್ನೊಂದೆಡೆ ಸುರಕ್ಷಿತವಾಗಿ ಕರೆದೊಯ್ಯುವ ಸಾರಿಗೆ ಇಲಾಖೆ ಚಾಲಕ, ನಿರ್ವಾಹಕರ ಪರಸ್ಥಿತಿ ಯಾರಿಗೂ ಬೇಡ. ರಾಯಚೂರಿನಲ್ಲಂತೂ ರಾತ್ರಿಪಾಳೆಯ ಸಿಬ್ಬಂದಿ ನಿಜವಾಗಲೂ ನರಕಯಾತನೆ ಅನುಭವಿಸಿ ತಮ್ಮ ಕುಟುಂಬಗಳನ್ನ ಸಾಕುತ್ತಿದ್ದಾರೆ. ಪ್ರಯಾಣಿಕರಿಗೆ ಸಾರಿಗೆ ಸೇವೆ ನೀಡುವ ಸಿಬ್ಬಂದಿಗಳಿಗೆ ಬಸ್ ನಿಲ್ದಾಣದಲ್ಲಿ ಕನಿಷ್ಠ ಸೌಲಭ್ಯಗಳು ಇಲ್ಲದೆ ನಿತ್ಯ ಕಷ್ಟ ಅನುಭವಿಸುತ್ತಿದ್ದಾರೆ.

    ಎಡೆಬಿಡದೆ ಕಚ್ಚುವ ಸೊಳ್ಳೆಗಳು, ಮಲಗಲು ಸುರಕ್ಷಿತ ಸ್ಥಳವಿಲ್ಲದೆ ಬಸ್ಸೇ ಸೂರು, ಪ್ರಯಾಣಿಕರ ಟಿಕೆಟ್ ದುಡ್ಡಿಗೆ ಸುರಕ್ಷತೆಯಿಲ್ಲ. ಕುಡಿಯಲು ನೀರಿಲ್ಲ, ಸ್ನಾನಕ್ಕೆ ಕೋಣೆಯಿಲ್ಲ, ಸಾರ್ವಜನಿಕ ಶೌಚಾಲಯವೇ ಗತಿ. ಇದು ರಾಯಚೂರು ಕೇಂದ್ರ ಬಸ್ ನಿಲ್ದಾಣದಲ್ಲಿ ರಾತ್ರಿ ವಸತಿ ಮಾಡುವ ಸಾರಿಗೆ ಸಿಬ್ಬಂದಿ ದುಸ್ಥಿತಿ. ಹೇಳಿಕೊಳ್ಳಲು ಬಸ್ ನಿಲ್ದಾಣವೇನೋ ದೊಡ್ಡದಿದೆ. ಆದ್ರೆ ರಿಯಾಲಿಟಿಯಲ್ಲಿ ಕನಿಷ್ಠ ಕುಡಿಯಲು ಶುದ್ಧ ನೀರಿಲ್ಲ. ನಿರ್ವಾಹಕ, ಚಾಲಕರಿಗೆ ವಿಶ್ರಾಂತಿ ಕೋಣೆಯ ವ್ಯವಸ್ಥೆಯಿಲ್ಲ. ಹೀಗಾಗಿ ಬಸ್ ನಲ್ಲೆ ಸೊಳ್ಳೆಪರದೆ ಕಟ್ಟಿಕೊಂಡು ಮಲಗುತ್ತಿದ್ದಾರೆ. ತಲೆಯ ಕೆಳಗೆ ಸಾವಿರಾರು ರೂಪಾಯಿ ಇಟ್ಟುಕೊಂಡು ನಿದ್ರೆಗೆ ಜಾರುತ್ತಿದ್ದಾರೆ. ಇಂತಹ ಪರಸ್ಥಿತಿಯಲ್ಲಿ ನಿದ್ದೆ ಹತ್ತಿದರೂ ಕಷ್ಟ ಹತ್ತದಿದ್ದರೂ ಕಷ್ಟ. ರಾಜ್ಯದ ಬಹಳಷ್ಟು ಕಡೆಗಳಲ್ಲಿ ಬಸ್ ನಿಲ್ದಾಣದಲ್ಲಿ ರೆಸ್ಟ್ ರೂಂಗಳು ಇವೆ. ಆದರೆ ರಾಯಚೂರು ಬಸ್ ನಿಲ್ದಾಣ ಮಾತ್ರ ಸಿಬ್ಬಂದಿಗೆ ನರಕಯಾತನೆ ಅನುಭವಿಸುವಂತೆ ಮಾಡುತ್ತಿದೆ. ಅಂತ ಸಾರಿಗೆ ಇಲಾಖೆ ಸಿಬ್ಬಂದಿ ಕಾಶಪ್ಪ ಬಡಿಗೇರ್ ಬೇಸರ ವ್ಯಕ್ತಪಡಿಸಿದ್ದಾರೆ.

    ಸಿಬ್ಬಂದಿಗಳ ಕಷ್ಟ ಎಂತವರಿಗೂ ಅಯ್ಯೋ ಪಾಪ ಎನಿಸುವಂತಿದೆ. ಹೀಗಾಗೇ ಸಾರ್ವಜನಿಕರು ಸಹ ಸಿಬ್ಬಂದಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಅಂತ ಆಗ್ರಹಿಸಿದ್ದಾರೆ. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಈ ಕುರಿತು ಸ್ಪಂದಿಸಿದ್ದು ಕೂಡಲೇ ಸಾರಿಗೆ ಸಚಿವರಿಗೆ ಪತ್ರ ಬರೆದು ಗಮನ ಸೆಳೆಯುವುದಾಗಿ ಹೇಳಿದ್ದಾರೆ. ಸಿಬ್ಬಂದಿ ಚಳಿ, ಮಳೆಯನ್ನದೇ ಬಸ್ ನಲ್ಲೆ ರಾತ್ರಿಯಿಡೀ ಕಾಲಕಳೆಯಬೇಕಾದ ಕೆಟ್ಟ ಪರಸ್ಥಿತಿಯಿದೆ ಇದು ಬದಲಾಗಬೇಕಿದೆ ಅಂತ ಹೇಳಿದ್ದಾರೆ.

    ಒಟ್ಟಿನಲ್ಲಿ, ಸಾರಿಗೆ ಇಲಾಖೆ ಸಿಬ್ಬಂದಿಗೆ ರಾಯಚೂರು ಬಲ್ದಾಣ ಸೇಫ್ ಅಲ್ಲಾ, ರಾತ್ರಿ ವಸತಿ ಮಾಡುವ ಸಿಬ್ಬಂದಿ ಪ್ರತಿಯೊಂದಕ್ಕೂ ತಾವೇ ವ್ಯವಸ್ಥೆ ಮಾಡಿಕೊಳ್ಳಬೇಕಾದ ಕೆಟ್ಟ ಪರಿಸ್ಥಿತಿ ಇದೆ.

  • ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದ ಜಿಲ್ಲೆಯಲ್ಲೇ ನೌಕರರ ಗೋಳಾಟ!

    ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದ ಜಿಲ್ಲೆಯಲ್ಲೇ ನೌಕರರ ಗೋಳಾಟ!

    ಗದಗ: ಇಡೀ ಏಷ್ಯಾದಲ್ಲಿಯೇ ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದ ಜಿಲ್ಲೆ ಗದಗ್ ಆಗಿದ್ದು, ಆದ್ರೆ ಇದೇ ಜಿಲ್ಲೆಯಲ್ಲಿ ಸಹಕಾರಿ ನೌಕರರ ಗೋಳು ಕೇಳೋರು ಯಾರು ಇಲ್ಲದಂತಾಗಿದೆ. ಕನಿಷ್ಠ ವೇತನವೂ ಸಿಗ್ತಿಲ್ಲ, ಮೂಲಭೂತ ಸೌಲಭ್ಯಗಳೂ ಸಿಗ್ತಿಲ್ಲ, ಹೀಗಾಗಿ ಅವರೆಲ್ಲ ಸೇರಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

    ಹೌದು. ಗದಗ ಜಿಲ್ಲೆಯ ಗ್ರಾಮೀಣ ಹಾಗೂ ಪಟ್ಟಣದ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡೋ ಸಿಬ್ಬಂದಿಗೆ ಹಲವು ವರ್ಷಗಳಿಂದ ಕನಿಷ್ಠ ವೇತನವೂ ಸಿಗ್ತಿಲ್ಲ. 30 ವರ್ಷಗಳ ಹಿಂದೆ ಕೇವಲ 50 ರೂಪಾಯಿಯಿಂದ ಆರಂಭವಾದ ವೇತನ ಇದೀಗ ಕನಿಷ್ಟ 3 ಸಾವಿರದಿಂದ ಗರಿಷ್ಟ 6 ಸಾವಿರಕ್ಕೆ ತಲುಪಿದೆ. ಇದ್ರಿಂದ ಒಂದು ಕುಟುಂಬ ನಿರ್ವಹಣೆಯೂ ಅಸಾಧ್ಯ. ಹೀಗಾಗಿ ಸಿಬ್ಬಂದಿ ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ.

    ಏಷ್ಯಾ ಖಂಡದಲ್ಲೇ ಮೊಟ್ಟ ಮೊದಲ ಬಾರಿಗೆ 1905ರಲ್ಲಿ ಗದಗ ಜಿಲ್ಲೆಯ ಕಣಗಿನಹಾಳ ಗ್ರಾಮದಲ್ಲಿ ಸಹಕಾರಿ ಬ್ಯಾಂಕ್ ಸ್ಥಾಪನೆಯಾಯಿತು. ಕಣಗಿನಹಾಳ ಸಿದ್ದನಗೌಡ ಪಾಟೀಲ್ ಇದರ ಸಂಸ್ಥಾಪಕರಾಗಿದ್ದರು. ಇದೀಗ ಈ ಸಹಕಾರಿ ಸಂಸ್ಥೆಯಲ್ಲಿ ಸುಮಾರು 800 ಸಿಬ್ಬಂದಿ ಕಾರ್ಯ ನಿರ್ವಹಿಸ್ತಿದ್ದಾರೆ. ಇದು ಕೇವಲ ಗದಗ ಜಿಲ್ಲೆಯ ಸಮಸ್ಯೆ ಮಾತ್ರವಲ್ಲ. ಇಡೀ ರಾಜ್ಯದ ಸಹಕಾರಿ ನೌಕರರ ಸಮಸ್ಯೆಯಾಗಿದೆ. ಇನ್ನು 30 ವರ್ಷ ಸೇವೆ ಸಲ್ಲಿಸಿದ್ರು ಸರ್ಕಾರ ಪರಿಗಣಿಸಿಲ್ಲ. ಹೀಗಾಗಿ ತಮ್ಮ ಹಕ್ಕು ಹಾಗೂ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ವಿರುದ್ಧ ಸಹಕಾರಿ ಸಂಘದ ನೌಕರ ಭೀಮಪ್ಪ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

    ಸಿ.ಎಂ ಕುಮಾರಸ್ವಾಮಿ ತಮ್ಮ ಖುರ್ಚಿ ಉಳಿಸಿಕೊಳ್ಳಲು, ಸಹಕಾರಿ ನೌಕರರನ್ನ ಸಾಯುವಂತೆ ಮಾಡ್ತಿದ್ದಾರೆ. ಸರ್ಕಾರ ಬಹುತೇಕ ಇಲಾಖೆ ಸಿಬ್ಬಂದಿಗೆ ವೇತನ ಹಾಗೂ ಹಲವಾರು ಸೌಲಭ್ಯಗಳನ್ನು ನೀಡಿದೆ. ಆದ್ರೆ ನಮಗೇಕೆ ಮಲತಾಯಿ ಧೋರಣೆ ಮಾಡ್ತಿದ್ದಾರೆ ಅನ್ನೋದು ಸಹಕಾರಿ ಇಲಾಖೆ ನೌಕರರ ಪ್ರಶ್ನೆ.

    ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ರು, ಸರ್ಕಾರ ಸಹಕಾರಿ ಸಿಬ್ಬಂದಿಗೆ ಸೌಲಭ್ಯ ನೀಡದಿರುವುದು ದುರಂತವೇ ಸರಿ, ಇನ್ನಾದ್ರೂ ಸರ್ಕಾರ ಸಹಕಾರಿ ಸಂಸ್ಥೆಯಲ್ಲಿ ಕೆಲಸ ಮಾಡ್ತಿರೋ ನೌಕರರ ಬವಣೆಗೆ ಸ್ಪಂದಿಸಲಿ ಅನ್ನೋದೇ ನಮ್ಮ ಆಶಯ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv