Tag: ಮೂಲಭೂತ ಸೌಲಭ್ಯ

  • ಜೀವ ಜಲವನ್ನು ನಿಯಮಿತವಾಗಿ ಬಳಸಿ: ಸಿ.ಸಿ.ಪಾಟೀಲ್

    ಜೀವ ಜಲವನ್ನು ನಿಯಮಿತವಾಗಿ ಬಳಸಿ: ಸಿ.ಸಿ.ಪಾಟೀಲ್

    ಗದಗ: ನೀರು ಜೀವ ಜಲವಾಗಿದ್ದು, ಅದನ್ನು ಗ್ರಾಮಸ್ಥರು ನಿಯಮಿತವಾಗಿ ಬಳಕೆ ಮಾಡಬೇಕು ಎಂದು ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ್ ಹೇಳಿದರು.

    ತಾಲೂಕಿನ ನೀರಲಗಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಆಯೋಜಿಸಲಾಗಿದ್ದ, ಜಲಜೀವನ್ ಮಿಷನ್ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೀರು ಒದಗಿಸುವ ಉದ್ದೇಶದಿಂದ ಮನೆ ಮನೆಗೂ ಗಂಗೆ ಯೋಜನೆಯಡಿ ದೇಶದ ಪ್ರತಿ ಮನೆಗೂ ನಲ್ಲಿ ಮೂಲಕ ಶುದ್ಧ ನೀರು ಪೂರೈಸಲಾಗುತ್ತಿದೆ ಎಂದರು.

    ಜಲ ಜೀವನ ಮಿಷನ್ ಯೋಜನೆಯಡಿ ನೀರಲಗಿ ಗ್ರಾಮದ ಪ್ರತಿ ಮನೆಗಳಿಗೂ ನಲ್ಲಿ ಅಳವಡಿಸುವ ಮೂಲಕ ನೀರು ಪೂರೈಕೆಗೆ ಅಂದಾಜು 30 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಗುಣಮಟ್ಟದ ಕಾಮಗಾರಿ ನಡೆಸುವ ಮೂಲಕ ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಸದ್ಭಳಕೆಗೆ ನೀಡಬೇಕು ಎಂದರು. ಇದನ್ನೂ ಓದಿ: ಗಲಾಟೆ ಮಾಡಿ ತಲೆಗೆ ಕಲ್ಲಲ್ಲಿ ಹೊಡೆದು ಹುಡುಗಿಯನ್ನು ದೂರ ಕರೆದೊಯ್ದು ರೇಪ್ ಮಾಡಿದ್ರು: ಯುವಕ

    ಪಂಚಾಯತ್ ರಾಜ್ ಇಂಜನೀಯರಿಂಗ್ ಇಲಾಖೆಯಿಂದ 2019-20ನೇ ಸಾಲಿನ ಸಮಗ್ರ ಶಿಕ್ಷಣ ಯೋಜನೆಯಡಿ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ಅಂದಾಜು 33 ಲಕ್ಷ ರೂ.ಅನುದಾನವನ್ನು ಬಿಡುಗಡೆಗೊಳಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಗ್ರಾಮದಲ್ಲಿ ನಿರ್ಮಾಣಗೊಂಡ ಸರ್ಕಾರಿ ಪ್ರೌಢ ಶಾಲೆಯ ಎರಡು ಕೊಠಡಿಗಳ ಉದ್ಘಾಟನೆ ನೆರವೇರಿಸಿದರು. ಸದೃಢ ಸಮಾಜ ನಿರ್ಮಾಣಕ್ಕೆ ಮತ್ತು ವಿದ್ಯಾರ್ಥಿಯ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಣವು ಅತ್ಯಮೂಲ್ಯ ಪಾತ್ರವಹಿಸುತ್ತದೆ. ಶಿಕ್ಷಣ ಪಡೆಯಲು ಮೂಲಸೌಕರ್ಯಗಳು ಅತ್ಯವಶ್ಯಕವಾಗಿವೆ. ಪಾಲಕರು, ಶಿಕ್ಷಕರು ಮಗುವನ್ನು ಕೇವಲ ಅಂಕಗಳಿಗೆ ಮಾತ್ರ ಸೀಮಿತಗೊಳಿಸದೇ ಸಮಾಜದಲ್ಲಿ ಸಮರ್ಥವಾಗಿ ಜೀವನ ನಡೆಸಲು ಮೌಲ್ಯಧಾರಿತ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳು ಭವಿಷ್ಯತ್ತಿನಲ್ಲಿ ದೇಶದ ಆಸ್ತಿಯನ್ನಾಗಿ ರೂಪಿಸಲು ನೀವೆಲ್ಲರು ಶ್ರಮಿಸಬೇಕು ಎಂದರು. ಇದನ್ನೂ ಓದಿ: ಗುರಿ ಈಡೇರಿಸಿಕೊಳ್ಳುವ ಕಡೆಗೆ ಪ್ರಯತ್ನ ನಿರಂತರವಾಗಿರಲಿ: ಎಸ್.ಟಿ.ಸೋಮಶೇಖರ್

    ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ.ರೆಡ್ಡೆರ ಪ್ರಾಸ್ತಾವಿಕ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಜನ್ಮದಿನಾಚರಣೆಯ ಅಂಗವಾಗಿ ಸದ್ಭಾವನಾ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಅಧಿಕಾರಿಗಳು, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು, ಭೂದಾನಿಗಳು ಸೇರಿದಂತೆ ಗ್ರಾಮಸ್ಥರು ಇದ್ದರು.

  • ಜವಾಹರ್ ನವೋದಯ ವಿದ್ಯಾಲಯಕ್ಕೆ ಬೇಕಿದೆ ಕಾಯಕಲ್ಪ

    ಜವಾಹರ್ ನವೋದಯ ವಿದ್ಯಾಲಯಕ್ಕೆ ಬೇಕಿದೆ ಕಾಯಕಲ್ಪ

    ಮಡಿಕೇರಿ: ನಗರದ ಹೊರ ವಲಯದಲ್ಲಿರುವ ಗಾಳಿಬೀಡು ಗ್ರಾಮದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸರಿಯಾದ ಮೂಲತಃ ಸೌಕರ್ಯಗಳು ಇಲ್ಲದೇ ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಅಳಲನ್ನು ವ್ಯಕ್ತಪಡಿಸಿದ್ದಾರೆ. ಶಾಲೆಯ ಪರಿಸ್ಥಿತಿ ಕಂಡ ಪೋಷಕರು ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿದ್ದಾರೆ.

    ತಮ್ಮ ಮಕ್ಕಳು ಒಳ್ಳೆಯ ವಿದ್ಯಾಲಯದದಲ್ಲಿ ಕಲಿಯುತ್ತಾರೆ. ನಮ್ಮಗೂ ಹೆಮ್ಮೆ ಎಂಬ ಉದ್ದೇಶದಿಂದ ನವೋದಯ ವಿದ್ಯಾ ಸಂಸ್ಥೆಗೆ ಸೇರಿಸಲು ಪೋಷಕರು ಇಚ್ಚಿಸಿದ್ದರು. ಆದರೆ ವಿದ್ಯಾಸಂಸ್ಥೆಯಲ್ಲಿ ಮಕ್ಕಳಿಗೆ ಬೇಕಾದ ಸರಿಯಾದ ನೀರಿನ ವ್ಯವಸ್ಥೆ, ಸರಿಯಾದ ಸ್ವಚ್ಚತೆ, ಉತ್ತಮ ಶೌಚಾಲಯ ಕೂಡ ವ್ಯವಸ್ಥೆಯೂ ಇಲ್ಲದೇ ಸಮಸ್ಯೆ ಎದುರಿಸುತ್ತಿದ್ದಾರೆ.

    ಮಡಿಕೇರಿ ವರ್ಷದ 9 ತಿಂಗಳು ಶೀತದ ವಾತಾವರಣ ಇರುವುದರಿಂದ ಶಾಲೆಯ ಕೊಠಡಿಗಳು ಈಗಾಗಲೇ ಪಾಚಿ ಹಿಡಿದಿದೆ. ಮಕ್ಕಳು ಶೀತದಲ್ಲಿ ಮಲಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಳೆದ ಮೂರು ದಿನಗಳ ಹಿಂದೆ ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ಈ ಶಾಲೆಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮಕ್ಕಳ ಸಮಸ್ಯೆಯನ್ನು ಆಲಿಸಿ ಬಹುಬೇಗ ಅಗತ್ಯ ಮೂಲಭೂತ ಸೌಕರ್ಯಗಳನ್ನು ಮಾಡಿಕೊಡಲಾಗುತ್ತದೆ ಎಂಬ ಭವರಸೆಯನ್ನು ನೀಡಿದ್ದಾರೆ.

  • ಮೂಲಭೂತ ಸೌಲಭ್ಯ ನೀಡುವಲ್ಲಿ ಜಿಲ್ಲಾಡಳಿತ ವಿಫಲ- ಹಾಸನಾಂಬೆಯಲ್ಲಿ ಭಕ್ತರ ಆಕ್ರೋಶ

    ಮೂಲಭೂತ ಸೌಲಭ್ಯ ನೀಡುವಲ್ಲಿ ಜಿಲ್ಲಾಡಳಿತ ವಿಫಲ- ಹಾಸನಾಂಬೆಯಲ್ಲಿ ಭಕ್ತರ ಆಕ್ರೋಶ

    ಹಾಸನ: ಇಂದಿನಿಂದ ಹಾಸನಾಂಬೆಯ ದರ್ಶನ ಸಾರ್ವಜನಿಕರಿಗೆ ಸಿಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೆಚ್ಚಿನ ಭಕ್ತರ ಆಗಮಿಸುವ ನಿರೀಕ್ಷೆ ಮಾಡಲಾಗಿತ್ತು. ಆದರೆ ಜಿಲ್ಲಾಡಳಿತದ ಅತಿಯಾದ ಭದ್ರತೆಯ ಕಿರಿಕಿರಿಗೆ ಬೇಸತ್ತ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಗಮಿಸಿರುವ ಭಕ್ತರಿಗೆ ಮೂಲಭೂತ ಸೌಲಭ್ಯಗಳನ್ನು ನೀಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ.

    ಶೌಚಾಲಯದ ಅವ್ಯವಸ್ಥೆಯಿಂದ ಭಕ್ತರು ಕಂಗೆಟ್ಟಿದ್ದಾರೆ. ಭಕ್ತರ ಸೌಲಭ್ಯಕ್ಕಾಗಿ ನಿರ್ಮಿಸಿರುವ ಶೌಚಾಲಯಗಳಲ್ಲಿ ನೀರಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪುರುಷ ಪೊಲೀಸ್ ಸಿಬ್ಬಂದಿ ಮಹಿಳಾ ಶೌಚಾಲಯವನ್ನು ಬಳಸುತ್ತಿದ್ದು, ಕೆಲ ಪೊಲೀಸರು ಶೌಚಾಲಯದ ಹೊರಗಡೆಯೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಹೆಚ್ಚಿನ ಭಕ್ತರ ಆಗಮನದ ನಿರೀಕ್ಷೆ ಇದ್ದರೂ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ ಜಿಲ್ಲಾಡಳಿತ ಮೂಲಭೂತ ಸೌಲಭ್ಯ ನೀಡುವಲ್ಲಿ ವಿಫಲವಾಗಿರುವ ಕಾರಣ ಭಕ್ತರು ಕಿಡಿಕಾರಿದ್ದಾರೆ.

    ಇಂದಿನಿಂದ ದರ್ಶನ:
    ವರ್ಷಕೊಮ್ಮೆ ಬಾಗಿಲು ತೆಗೆಯುವ ಹಾಸನಾಂಬೆ ದರ್ಶನೋತ್ಸವಕ್ಕೆ ಇಂದು ಎರಡನೇ ದಿನ. ಆಶ್ವೀಜ ಮಾಸದ ಮೊದಲ ಗುರುವಾರ ಬಾಗಿಲು ತೆಗೆಯಲಾಗಿದ್ದು, ಇಂದು ಮೊದಲ ಶುಕ್ರವಾರ. ರಜೆಗಳು ಮುಗಿದ ಹಿನ್ನಲೆ ಅಥವಾ ಮತ್ತೇನು ಕಾರಣವೋ ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಕೊಂಚವಿರಳವಾಗಿದೆ ಎಂಬ ಮಾಹಿತಿ ಲಭಿಸಿದೆ.

    ವರ್ಷಕ್ಕೊಮ್ಮೆ ದೇವಾಲಯದ ಬಾಗಿಲು ತೆರೆಯುವ ಹಾಸನಾಂಬ ದೇವಾಲಯದಲ್ಲಿ ಹಣ ಇದ್ದವರಿಗೆ ಮಾತ್ರ ಹಾಸನಾಂಬೆ ದರ್ಶನವಾಗಿದೆ. ಹಾಸನದ ಹಾಸನಾಂಬೆ ದೇವಾಲಯದಲ್ಲಿ ತಲಾ ಒಂದುಸಾವಿರ ಟಿಕೆಟ್ ಮಾಡಿರುವ ಹಾಸನ ಜಿಲ್ಲಾಡಳಿತದ ಕ್ರಮದಿಂದಾಗಿ ಭಕ್ತರ ಸಂಖ್ಯೆ ಗಣನೀಯವಾಗಿ ಸಂಪೂರ್ಣ ಕಡಿಮೆಯಾಗಿದೆ. ಈ ಹಿಂದಿನ ವರ್ಷಗಳಲ್ಲಿ ಪ್ರತೀ ದಿನ ಲಕ್ಷಾಂತರ ಮಂದಿ ಭಕ್ತರು ಆಗಮಿಸುತ್ತಿದ್ದರು. ಆದರೆ ಈ ಬಾರಿ ಕೇವಲ ಸಾವಿರಾರು ಸಂಖ್ಯೆಗೆ ಭಕ್ತರ ಸಂಖ್ಯೆ ಇಳಿಮುಖವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜಕೀಯ ವೈಷಮ್ಯದಿಂದ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಪುರ್ತಗೇರಿ ಗ್ರಾಮಸ್ಥರು!

    ರಾಜಕೀಯ ವೈಷಮ್ಯದಿಂದ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಪುರ್ತಗೇರಿ ಗ್ರಾಮಸ್ಥರು!

    ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿದೆ. ಇದರಿಂದಾಗಿ ಗ್ರಾಮಸ್ಥರು ಯಾವ ಸರ್ಕಾರ ಬಂದರೂ ನಮಗೆ ಮಾತ್ರ ಯಾವುದೆ ಸೌಲಭ್ಯ ಮಾತ್ರ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕುತ್ತಿದ್ದಾರೆ.

    ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮವು, ಶಾಸಕ ಜಿ.ಎಸ್. ಪಾಟೀಲ್, ಮಾಜಿ ಸಚಿವ ಕಳಕಪ್ಪ ಬಂಡಿ, ಶ್ರೀಶೈಲಪ್ಪ ಬಿದರೂರ್ ಹಾಗೂ ಜ್ಞಾನದೇವ ದೊಡ್ಡಮೇಟಿ ಅಲ್ಲದೇ ಅನೇಕ ಘಟಾನುಘಟಿ ನಾಯಕರುಗಳು ಆಡಳಿತ ಮಾಡಿದ ಕ್ಷೇತ್ರ. ಗ್ರಾಮದಲ್ಲಿನ ದುಸ್ಥಿತಿ ನೋಡಿದರೇ, ಈ ನಾಯಕರುಗಳು ಇಷ್ಟು ವರ್ಷಗಳ ಕಾಲ ಯಾವ ರೀತಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದು ಉದಾಹರಣೆಯಾಗಿದೆ.

    ರಾಂಪೂರ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಈ ಗ್ರಾಮದಲ್ಲಿ 400 ರಿಂದ 450 ಮನೆಗಳಿವೆ. ಸುಮಾರು 1,100 ಮಂದಿ ಕನಿಷ್ಠ ಸೌಲಭ್ಯಗಳಿಂದಲೂ ವಂಚಿತರಾಗಿ ಬದುಕು ಸಾಗಿಸುತ್ತಿದ್ದಾರೆ. ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಲು ಹಾಗೂ ಸಾರ್ವಜನಿಕರು ಓಡಾಡಲು 3 ಕಿಲೋ ಮೀಟರ್ ದೂರವಿರುವ ಗಜೇಂದ್ರಗಡ ಪಟ್ಟಣಕ್ಕೆ ನಡೆದುಕೊಂಡೇ ಹೋಗಬೇಕು. ಇಲ್ಲವೇ ಸೈಕಲ್, ಬೈಕ್ ಅಥವಾ ಟಂ ಟಂ ವಾಹನಗಳಿಗೆ ಅವಲಂಬಿತರಾಗಬೇಕು. ಗಜೇಂದ್ರಗಡದಲ್ಲಿ ಬಸ್ ಡಿಪೋ ಇದ್ರೂ 3 ಕಿ.ಮೀ ದೂರವಿರುವ ಪುರ್ತಗೇರಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿಲ್ಲ.

    ರಾಜಕೀಯ ವೈಷ್ಯಮ್ಯದಿಂದ ಊರು ಅಭಿವೃದ್ಧಿಯಾಗದೇ ಜನ ಪರಿತಪಿಸುತ್ತಿದ್ದಾರೆ. ಬೇರೆ ಅಭಿವೃದ್ಧಿ ಬೇಡ ನಮ್ಮ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಕಲ್ಪಿಸಿ ಕೊಡಿ ಎಂದು ದೂರದ ಗದಗದಿಂದ ನಮ್ಮ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ.

    https://www.youtube.com/watch?v=oU1jbaXy9Ms