Tag: ಮೂಲಸೌಕರ್ಯ ಕೊರತೆ

  • ದ್ವೀಪ ಗ್ರಾಮಕ್ಕೆ ಸೇತುವೆ ಕಟ್ಟಿ ಸುಮ್ಮನಾದ ಸರ್ಕಾರ

    ದ್ವೀಪ ಗ್ರಾಮಕ್ಕೆ ಸೇತುವೆ ಕಟ್ಟಿ ಸುಮ್ಮನಾದ ಸರ್ಕಾರ

    – ಮೂಲಸೌಕರ್ಯವಿಲ್ಲದೆ ಬೇಸತ್ತ ಜನ

    ಚಾಮರಾಜನಗರ: ಕಳೆದ ವರ್ಷದ ತನಕವೂ ದ್ವೀಪಗ್ರಾಮವೇ ಆಗಿದ್ದ ಹನೂರು ಕ್ಷೇತ್ರದ ಎಡಕುರಿಯ ಗ್ರಾಮಕ್ಕೆ ಸೇತುವೆ ನಿರ್ಮಾಣಗೊಂಡಿದ್ದೇ ಭಾಗ್ಯವಾಗಿದ್ದು, ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ.

    ದ್ವೀಪ ಗ್ರಾಮವಾಗಿದ್ದ ಎಡಕುರಿಗೆ ಸರ್ಕಾರ ಸೇತುವೆ ನಿರ್ಮಾಣ ಮಾಡಿಕೊಟ್ಟಿದೆ. ಆದರೆ ಈ ಗ್ರಾಮದಲ್ಲಿ ಮೂಲಸೌಕರ್ಯದ ಕೊರೆತೆಯಿದ್ದರೂ ಯಾವೋಬ್ಬ ಅಧಿಕಾರಿ ಕೂಡ ಇತ್ತ ಗಮನಹರಿಸಿಲ್ಲ. ಅಂದಾಜು 450 ಕುಟುಂಬಗಳು ವಾಸಿಸುತ್ತಿರುವ ಈ ಗ್ರಾಮವನ್ನು ಕಾವೇರಿ ನದಿ ಸುತ್ತುವರಿದಿದ್ದು ಮೊದಲೆಲ್ಲಾ ದೋಣಿಯಲ್ಲೇ ಇಲ್ಲಿನ ಜನರ ಸಂಚಾರ-ಬದುಕು ಸಾಗುತ್ತಿತ್ತು. ಈಗ ಸೇತುವೆ ನಿರ್ಮಾಣಗೊಂಡಿರುವುದರಿಂದ ಸಂಚಾರ ದುಸ್ತರವಾಗದಿದ್ದರೂ ಗ್ರಾಮದೊಳಕ್ಕೆ ವಾಹನ ಬರಬೇಕೆಂದರೆ ರಸ್ತೆ ಇಲ್ಲದೇ ಹರಸಾಹಸ ಪಡಬೇಕಿದೆ. ಗ್ರಾಮದಲ್ಲಿರುವ ಎಲ್ಲಾ ರಸ್ತೆಗಳು ಕಚ್ಛಾರಸ್ತೆಯಾಗಿದ್ದು, ಚರಂಡಿಗಳ ವ್ಯವಸ್ಥೆಯಿಲ್ಲದೆ ಮನೆಮುಂದೆ ನೀರು ನಿಲ್ಲುವ ಪರಿಸ್ಥಿತಿ ಗ್ರಾಮದಲ್ಲಿದೆ.

    ಅಷ್ಟೇ ಅಲ್ಲದೆ ವಿದ್ಯುತ್ ವ್ಯವಸ್ಥೆ ಕೂಡ ಇಲ್ಲಿ ಸರಿಯಾಗಿಲ್ಲ. ಕೈಕೊಡುವ ವಿದ್ಯುತ್ ನಿಂದ ರೋಸಿ ಹೋಗಿರುವ ಗ್ರಾಮಸ್ಥರು, ಬುಡ್ಡಿ ದೀಪಗಳನ್ನೇ ಆಧಾರವಾಗಿಸಿಕೊಂಡಿದ್ದಾರೆ. ಕುಡಿಯುವ ನೀರಿಗೆ ಕೆಲಮೊಮ್ಮೆ ಕಾವೇರಿ ಹೊಳೆಯನ್ನೇ ಆಶ್ರಯಿಸುವ ಗ್ರಾಮಸ್ಥರು, ನದಿ ನೀರನ್ನೆ ಕುದಿಸಿ ಬಳಸುತ್ತಾರೆ. ಸಮರ್ಪಕ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಇಲ್ಲದೇ ದಿನವೂ ಇಲ್ಲಿನ ಜನರ ಬದುಕು ಪಡಿಪಾಟಲಾಗಿದೆ.

    ದಶಕಗಳ ಹೋರಾಟದ ಫಲವಾಗಿ ಸೇತುವೆ ಭಾಗ್ಯ ಕಂಡ ದ್ವೀಪ ಗ್ರಾಮಸ್ಥರು ಮೂಲಸೌಕರ್ಯಕ್ಕಾಗಿ ಮತ್ತಷ್ಟೂ ದಶಕಗಳ ಹೋರಾಟಕ್ಕೆ ಸಜ್ಜಾಗುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಜನರ ಅಳಲು ಪ್ರತಿ ಮಾತಿನಲ್ಲೂ ನುಸುಳುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

  • ಹನೂರು ಶಾಸಕರೇ ಇತ್ತ ನೋಡಿ, ಡೋಲಿಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಸಾಗಿಸಲು ಬೆಟ್ಟಗುಡ್ಡ ಹತ್ತಿ ಇಳಿಯುತ್ತಿದ್ದಾರೆ ಜನ!

    ಹನೂರು ಶಾಸಕರೇ ಇತ್ತ ನೋಡಿ, ಡೋಲಿಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಸಾಗಿಸಲು ಬೆಟ್ಟಗುಡ್ಡ ಹತ್ತಿ ಇಳಿಯುತ್ತಿದ್ದಾರೆ ಜನ!

    ಚಾಮರಾಜನಗರ: ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ರಸ್ತೆ ಸಂಪರ್ಕವಿಲ್ಲದೆ ಜನರು ರೋಗಿಗಳನ್ನು ಡೋಲಿ ಮೂಲಕ 15 ಕಿ.ಮೀ ಹೊತ್ತುಕೊಂಡು ಆಸ್ಪತ್ರೆಗೆ ಸಾಗಿಸಿದ್ದಾರೆ.

    ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಜನರಿಗೆ ಸರಿಯಾದ ಮೂಲಸೌಕರ್ಯವಿಲ್ಲ. ಇಲ್ಲಿನ ಗ್ರಾಮಸ್ಥರು ಆಸ್ಪತ್ರೆಗೆ ಬರಬೇಕಾದರೆ ಕಾಡು ಪ್ರಾಣಿಗಳ ಹಾವಳಿಯ ಮಧ್ಯ ಡೋಲಿ ಮೂಲಕ ರೋಗಿಯನ್ನು ಹತ್ತಾರು ಕಿ.ಮೀ ಹೊತ್ತು ತರಬೇಕು. ಅದರಲ್ಲೂ ಈ ಗ್ರಾಮದ ಗರ್ಭಿಣಿಯರ ಪಾಡು ಹೇಳತೀರದು.

    ಹನೂರು ವಿಧಾನಸಭಾ ಕ್ಷೇತ್ರಕ್ಕೆ ಇಂಡಿಗನತ್ತ ಗ್ರಾಮ ಸೇರುತ್ತದೆ. ಇಲ್ಲಿನ ಶಾಸಕರು ಗ್ರಾಮಕ್ಕೆ ಮೂಲಸೌಕರ್ಯವನ್ನು ಒದಗಿಸಿಕೊಟ್ಟಿಲ್ಲ. ಈ ಕುರಿತು ಶಾಸಕರು ಗಮನಹರಿಸಬೇಕು ಎಂದು ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಕಾವೇರಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಇಂಡಿಗನತ್ತ ಗ್ರಾಮವು ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುತ್ತದೆ. ಇದರಿಂದ ನಮಗೆ ಆ ಪ್ರದೇಶದಲ್ಲಿ ಅಭಿವೃದ್ಧಿ ಮಾಡಲು ಸ್ವಲ್ಪ ಕಷ್ಟವಾಗುತ್ತದೆ. ಆದ್ರು ಅರಣ್ಯಾಧಿಕಾರಗಳ ಜೊತೆ ಮಾತನಾಡಿ ಇಂಡಿಗನತ್ತ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಸಿಕೊಡಲು ಅನುಮತಿ ಪಡೆದು ಗ್ರಾಮವನ್ನು ಅಭಿವೃದ್ಧಿ ಮಾಡ್ತೇವೆ. ಚಾಮರಾಜನಗರದಲ್ಲಿ ಬಹುತೇಕ ಗ್ರಾಮಗಳು ಕಾಡಂಚಿನಲ್ಲಿದೆ. ಇಂತಹ ಪ್ರದೇಶಗಳಲ್ಲಿ ಅಭಿವೃದ್ಧಿ ಮಾಡಲು ಸಾದ್ಯವಾಗದಿದ್ದರೆ ಈ ಭಾಗದ ಜನರಿಗೆ ಬೇರೆ ಕಡೆಯಲ್ಲಿ ವಸತಿ ಕಲ್ಪಸಿಕೊಡುತ್ತೇವೆ. ಹಾಗೇ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯವನ್ನು ಮಾಡಲು ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಜೊತೆಗೂಡಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv