Tag: ಮೃತ ವ್ಯಕ್ತಿ

  • ಮೃತ ವ್ಯಕ್ತಿಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಸಾಲ ಪಡೆದು ವಂಚನೆ

    ಮೃತ ವ್ಯಕ್ತಿಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಸಾಲ ಪಡೆದು ವಂಚನೆ

    ಬೆಳಗಾವಿ: ಕುಂದಾನಗರಿಯಲ್ಲಿ ಮತ್ತೊಂದು ಸಹಕಾರಿ ಸಂಘದ ಅಕ್ರಮ ಬೆಳಕಿಗೆ ಬಂದಿದ್ದು, ಮೃತ ವ್ಯಕ್ತಿಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಸಾಲ ಪಡೆದು ವಂಚಿಸಿದ್ದಾರೆ.

    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಷತ್ತಿನ ಸಹಕಾರಿ ಸಂಘದಲ್ಲಿ ಅಕ್ರಮ ನಡೆದಿದೆ. ಆಡಳಿತ ಮಂಡಳಿಯಿಂದಲೇ 3.27 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿರುವುದು ಬಯಲಾಗಿದೆ. ಮೃತ ವ್ಯಕ್ತಿಯ ಹೆಸರಿನಲ್ಲಿ ಒಂದಲ್ಲ, ಎರಡಲ್ಲ 30 ಸಾಲದ ಖಾತೆ ಸೃಷ್ಟಿಸಿ ವಂಚಿಸಿದೆ. ಸಂಘದ ಮಾಜಿ ಅಧ್ಯಕ್ಷ ನಾತಾಜಿ ಪಾಟೀಲ್ ಸೇರಿ 17 ಜನರ ವಿರುದ್ಧ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೋದಿಯವರು ದೇವರ ಸ್ವರೂಪ: ಶಿವರಾಜ್ ಸಿಂಗ್ ಚೌಹಾಣ್

    ವಂಚನೆ ಕುರಿತು ಹಾಲಿ ಸಂಘದ ಕಾರ್ಯದರ್ಶಿ ಸುರೇಶ್ ವಡ್ಡರ್ ಅವರು ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ಎಸಿಬಿ ದಾಳಿ ಬೆನ್ನಲ್ಲೇ ನಾತಾಜೀ ಪಾಟೀಲ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಅವ್ಯವಹಾರವು 2015 ಜೂನ್ 1ರಿಂದ 2020 ಅ.18ರ ನಡುವಿನ ಅವಧಿಯಲ್ಲಿ ನಡೆದಿದೆ.ಇದನ್ನೂ ಓದಿ: ಅಪ್ಪು ಸಮಾಧಿ ಮುಂದೆ ಕಣ್ಣೀರಿಟ್ಟ ಶಕ್ತಿಧಾಮದ ಮಕ್ಕಳು

    ಸಹಕಾರಿ ಇಲಾಖೆಯ ಅಡಿಟ್ ಸಂದರ್ಭದಲ್ಲಿ ಸದಸ್ಯರಿಂದ ಸಂಗ್ರಹಿಸಿದ ಹಣ ಕಾನೂನುಬಾಹಿರವಾಗಿ ಬಳಕೆ ಮಾಡಿದ್ದು ಬೆಳಕಿಗೆ ಬಂದಿದೆ. ಮಾಜಿ ಅಧ್ಯಕ್ಷ ನಾತಾಜಿ ಪಾಟೀಲ್ ಸೇರಿ 17 ಜನರಿಗೆ ಬಂಧನದ ಭೀತಿ ಎದುರಾಗಿದೆ.

    /p>

  • ಮೃತ ವ್ಯಕ್ತಿಯ ಹೆಸರಿನಲ್ಲಿ ಬಂತು ಕೋವಿಡ್‌ ಲಸಿಕೆ ಪಡೆದ ಪ್ರಮಾಣಪತ್ರ!

    ಮೃತ ವ್ಯಕ್ತಿಯ ಹೆಸರಿನಲ್ಲಿ ಬಂತು ಕೋವಿಡ್‌ ಲಸಿಕೆ ಪಡೆದ ಪ್ರಮಾಣಪತ್ರ!

    ಭೋಪಾಲ್: ವ್ಯಕ್ತಿ ಮೃತಪಟ್ಟು ಹಲವು ತಿಂಗಳೇ ಕಳೆದಿದ್ದರೂ, ನೀವು ಲಸಿಕೆ ಪಡೆದಿದ್ದೀರಿ ಎಂಬ ಸಂದೇಶ ಅವರ ಮೊಬೈಲ್‌ಗೆ ಬಂದು ಅಚ್ಚರಿ ಮೂಡಿಸಿರುವ ಘಟನೆ ಮಧ್ಯಪ್ರದೇಶದ ರಾಜ್‌ಘರ್‌ ಜಿಲ್ಲೆಯಲ್ಲಿ ನಡೆದಿದೆ.

    ಪುರುಷೋತ್ತಮ್‌ ಶಕ್ಯಾವರ್‌ (78) ಎಂಬ ವ್ಯಕ್ತಿ ಮೇ ತಿಂಗಳಲ್ಲೇ ನಿಧನರಾದರು. ಆದರೆ ಡಿಸೆಂಬರ್‌ 3ರಂದು ಅವರ ಮೊಬೈಲ್‌ಗೆ ಸಂದೇಶವೊಂದು ಬಂದಿದೆ. ನೀವು ಕೋವಿಡ್‌ ಲಸಿಕೆಯ ಎರಡನೇ ಡೋಸ್‌ ಪಡೆದುಕೊಂಡಿದ್ದೀರಿ ಎಂದು ಮೆಸೇಜ್‌ ಬಂದಿದೆ. ಇದನ್ನೂ ಓದಿ: ಲಸಿಕೆ ನೀಡುವಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು ನಂಬರ್ 1

    ಈ ವಿಚಾರವನ್ನು ಪುರುಷೋತ್ತಮ್‌ ಅವರ ಪುತ್ರ ಪೂಲ್‌ ಸಿಂಗ್‌ ಬಹಿರಂಗಪಡಿಸಿದ್ದಾರೆ. ಅಲ್ಲದೇ ಅವರ ತಂದೆ ಹೆಸರಿನಲ್ಲಿ ಬಂದಿರುವ ಲಸಿಕೆ ಪಡೆದಿರುವುದಕ್ಕೆ ಸಂಬಂಧಿಸಿದ ಪ್ರಮಾಣಪತ್ರವನ್ನು ಡೌನ್‌ಲೋಡ್‌ ಕೂಡ ಮಾಡಿಕೊಂಡಿದ್ದಾರೆ.

    ಪುರುಷೋತ್ತಮ್‌ ಅವರು ಏ.8ರಂದು ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದುಕೊಂಡಿದ್ದರು. ಆದರೆ ಮೇ 24ರಲ್ಲಿ ಮೃತಪಟ್ಟಿದ್ದರು. ಎರಡನೇ ಡೋಸ್‌ ಪಡೆದುಕೊಳ್ಳುವಷ್ಟರಲ್ಲಿ ಅವರು ಸಾವಿಗೀಡಾಗಿದ್ದರು. ಇದನ್ನೂ ಓದಿ: ಓಮಿಕ್ರಾನ್ ಭೀತಿ: ಮುಂಬೈನಲ್ಲಿ 144 ಸೆಕ್ಷನ್ ಜಾರಿ- ರ‍್ಯಾಲಿ, ಮೆರವಣಿಗೆಗೆ ನಿಷೇಧ

    ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಡಾ. ಪಿ.ಎಲ್.ಭಗೊರಾಯ್‌ ತಿಳಿಸಿದ್ದಾರೆ.