Tag: ಮೆಗಸ್ಟಾರ್ ಚಿರಂಜೀವಿ

  • ಅರಿಶಿನ ಶಾಸ್ತ್ರದಲ್ಲಿ ಮಿಂದೆದ್ದ ವರುಣ್ ತೇಜ್-ಲಾವಣ್ಯ ಜೋಡಿ

    ಅರಿಶಿನ ಶಾಸ್ತ್ರದಲ್ಲಿ ಮಿಂದೆದ್ದ ವರುಣ್ ತೇಜ್-ಲಾವಣ್ಯ ಜೋಡಿ

    ಟಾಲಿವುಡ್‌ನ ಲವ್ ಬರ್ಡ್ಸ್ ವರುಣ್ ತೇಜ್- ಲಾವಣ್ಯ (Lavanya Tripathi) ಜೋಡಿ ಇಂದು (ನವೆಂಬರ್.1) ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸದ್ಯ ಇಟಲಿಯಲ್ಲಿ ಬೀಡು ಬಿಟ್ಟಿರುವ ಮೆಗಾಸ್ಟಾರ್ ಕುಟುಂಬದಲ್ಲಿ ಮನೆ ಸಂಭ್ರಮ ಮನೆ ಮಾಡಿದೆ. ನವಜೋಡಿ ವರುಣ್-ಲಾವಣ್ಯ ಅರಿಶಿನ ಶಾಸ್ತ್ರದಲ್ಲಿ ಮಿಂದೆದ್ದಿದ್ದಾರೆ.

    ವರುಣ್-ಲಾವಣ್ಯರ ಮೆಹೆಂದಿ ಮತ್ತು ಅರಿಶಿನ ಶಾಸ್ತ್ರವು ನಿನ್ನೆ (ಅ.31) ಅದ್ದೂರಿಯಾಗಿ ನಡೆದಿದೆ. ಹಳದಿ ಬಣ್ಣದ ಉಡುಗೆಯಲ್ಲಿ ಹೊಸ ಜೋಡಿ ಮಿಂಚಿದ್ದಾರೆ. ಮೆಗಾಸ್ಟಾರ್ ಕುಟುಂಬದ ಮದುವೆ ಸಂಭ್ರಮದಲ್ಲಿ ನಟ ನಿತಿನ್ (Actor Nithin) ದಂಪತಿ ಕೂಡ ಭಾಗಿಯಾಗಿದ್ದಾರೆ. ಇಂದು‌ (ನ.1) ಮಧ್ಯಾಹ್ನ 2:48ರ ಶುಭಮುಹೂರ್ತದಲ್ಲಿ ವರುಣ್ ಮದುವೆ ನೆರವೇರಲಿದೆ.

    ‘ಮಿಸ್ಟರ್’ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ವರುಣ್-ಲಾವಣ್ಯ ಮೊದಲು ಭೇಟಿಯಾಗಿದ್ದು, ಹಲವು ವರ್ಷಗಳ ಡೇಟಿಂಗ್ ನಂತರ ಈ ವರ್ಷ ಜೂನ್ 9ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನಾಗಬಾಬು ಪುತ್ರ ವರುಣ್-ಲಾವಣ್ಯ ಎಂಗೇಜ್‌ಮೆಂಟ್ ಗ್ರ‍್ಯಾಂಡ್ ಆಗಿ ನೆರವೇರಿತ್ತು. ಇದನ್ನೂ ಓದಿ:ನಟ ದರ್ಶನ್ ವಿರುದ್ಧ ಎಫ್‌ಐಆರ್ ದಾಖಲು

    ಮೊದಲ ಪ್ರೇಮ ನಿವೇದನೆ ಮಾಡಿದ ಸ್ಥಳದಲ್ಲಿಯೇ ಮದುವೆಯಾಗಬೇಕು ಎಂಬ ಮನದಾಸೆಯಂತೆಯೇ ಈಗ ಇಟಲಿಯಲ್ಲಿ ಅದ್ದೂರಿಯಾಗಿ ವರುಣ್(Varun Tej)- ಲಾವಣ್ಯ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • My dear hero ಅಂದ್ರು ಮಿಸಸ್ ಪ್ರಿಯಾ

    My dear hero ಅಂದ್ರು ಮಿಸಸ್ ಪ್ರಿಯಾ

    ಬೆಂಗಳೂರು: ಇಂದು ರಾಜ್ಯಾದ್ಯಂತ ಬಹುನಿರೀಕ್ಷಿತ ಸಿನಿಮಾ ‘ದಿ ವಿಲನ್’ ಚಿತ್ರ ಬಿಡುಗಡೆಯಾಗಿದೆ. ಆದರೆ ಸಿನಿಮಾ ಬಿಡುಗಡೆಯ ಮೊದಲೇ ಈ ಬಗ್ಗೆ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.

    ಪ್ರಿಯಾ ಸುದೀಪ್ ಅವರು, ”ನಾನು ಇದುವೆರೆಗೂ ಈ ರೀತಿಯ ಕ್ರೇಜ್ ಅನ್ನು ಈ ಹಿಂದೆ ನೋಡಿಯೇ ಇರಲಿಲ್ಲ. ರಾಜ್ಯಾದ್ಯಂತ ಇದು ಹಬ್ಬದ ರೀತಿ ಆಗಿದೆ. ಎನರ್ಜಿಟಿಕ್ ಶಿವಣ್ಣ, ನಿರ್ದೇಶಕ ಪ್ರೇಮ್ ಹಾಗೂ ನನ್ನ ಪ್ರೀತಿಯ ಹೀರೋ ಸುದೀಪ್ ಸೇರಿದಂತೆ ಇಡೀ ‘ದಿ ವಿಲನ್’ ಚಿತ್ರತಂಡಕ್ಕೆ ನನ್ನ ಶುಭಾಶಯಗಳು”  ಎಂದು ಬರೆದು  ಟ್ವೀಟ್ ಮಾಡಿದ್ದಾರೆ.

    ಇಂದು ಹಲವು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಿ ಭರ್ಜರಿ ಯಶಸ್ವಿ ಪ್ರದರ್ಶನವನ್ನು ಕಾಣುತ್ತಿದೆ. ಇತ್ತೀಚೆಗೆ ಸುದೀಪ್ ಕುಟುಂಬ ಮೆಗಾಸ್ಟಾರ್ ಚಿರಂಜೀವಿ ಅವರನ್ನು ಭೇಟಿಯಾಗಿದ್ದರು. ಭೇಟಿಯಾಗಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

    ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ನಟ ಸುದೀಪ್ ‘ಅವುಕು ರಾಜಾ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಮುಖ್ಯ ಪಾತ್ರ ಪೋಷಿಸುತ್ತಿರುವ ಸುದೀಪ್ ಅವರ ಲುಕ್ ಈಗಾಗಲೇ ಬಹಿರಂಗವಾಗಿದೆ.

    ‘ಸೈರಾ ನರಸಿಂಹ ರೆಡ್ಡಿ’ ಚಿತ್ರದ ಶೂಟಿಂಗ್ ನ ಬಿಡುವಿನ ವೇಳೆ ಚಿರಂಜೀವಿ ಜೊತೆಗೆ ಸುದೀಪ್ ಕುಟುಂಬ ಸಮಯ ಕಳೆದಿದೆ. ಚಿರಂಜೀವಿ ಜೊತೆಗೆ ಸುದೀಪ್ ಪುತ್ರಿ ಸಾನ್ವಿ ಕೂಡ ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ.

    ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಚಿರಂಜೀವಿ, ಸುದೀಪ್ ಜೊತೆಗೆ ಜಗಪತಿ ಬಾಬು, ವಿಜಯ್ ಸೇತುಪತಿ, ನಯನತಾರಾ, ತಮನ್ನಾ, ಪೂನಂ ಕೌರ್ ನಟಿಸಿದ್ದಾರೆ. ವಿಶೇಷ ಪಾತ್ರವೊಂದರಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್ ಕೂಡ ಬಣ್ಣ ಹಚ್ಚಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv