Tag: ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣ

  • Bengaluru | ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಪ್ರಯಾಣಿಕ

    Bengaluru | ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಪ್ರಯಾಣಿಕ

    ಬೆಂಗಳೂರು: ಪ್ರಯಾಣಿಕನೊಬ್ಬ ಮೆಟ್ರೋ ಹಳಿಗೆ (Metro Track) ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಾಡಪ್ರಭು ಕೆಂಪೇಗೌಡ (Nadaprabhu Kempegowda Metro Station, Majestic) ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

    ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗದ ಗ್ರೀನ್ ಲೇನ್‌ನಲ್ಲಿ ಘಟನೆ ನಡೆದಿದ್ದು, ಮೆಜೆಸ್ಟಿಕ್ 3ನೇ ಪ್ಲಾಟ್ ಫಾರ್ಮ್‌ನಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಮೆಟ್ರೋ ಸ್ಥಗಿತದಿಂದ ಗ್ರೀನ್ ಲೈನ್‌ನಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಇದನ್ನೂ ಓದಿ: ಬೆಂಗಳೂರು | ಮೊದಲ ದಿನವೇ ಜಾತಿಗಣತಿ ಸಮೀಕ್ಷೆಗೆ ವಿಘ್ನ – ಗೊಂದಲ ನಿವಾರಣೆಗೆ ಗಣತಿದಾರರಿಂದ ಪ್ರತಿಭಟನೆ

    ಪ್ಲಾಟ್ ಫಾರ್ಮ್‌ನಲ್ಲಿ ನಿಂತಿದ್ದ ಪ್ರಯಾಣಿಕ ರೈಲು ಬರುತ್ತಿದ್ದಂತೆ ಹಳಿಗೆ ಹಾರಿದ್ದಾನೆ. ಸದ್ಯ ಮೆಟ್ರೋ ರೈಲಿನಡಿ ಪ್ರಯಾಣಿಕ ಸಿಲುಕಿಕೊಂಡಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಹಸಿರು ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ: ಡಿಕೆಶಿ ಮನವಿ

    ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕನ ರಕ್ಷಣೆಗೆ ಮುಂದಾಗಿರುವ ಅಧಿಕಾರಿಗಳು ಶೀಘ್ರದಲ್ಲೇ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ‘ಕಾಂತಾರ’ಗೆ ಟಿಕೆಟ್‌ ಸಿಗದ ಕಾರ್ಯಕರ್ತರಿಗೆ ಸೋಮವಾರ ವ್ಯವಸ್ಥೆ ಮಾಡುತ್ತೇನೆ: ಪ್ರತಾಪ್‌ ಸಿಂಹ

  • ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ ಲೋಕಾರ್ಪಣೆ ಮಾಡಿದ ಸಿಎಂ

    ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ ಲೋಕಾರ್ಪಣೆ ಮಾಡಿದ ಸಿಎಂ

    ಬೆಂಗಳೂರು: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ (Majestic Metro Station) ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನಂದಿನಿ ಮಳಿಗೆಯನ್ನು ಲೋಕಾರ್ಪಣೆ ಮಾಡಿದರು.

    ಪ್ರಾರಂಭಿಕವಾಗಿ ಮೂರು ಮೆಟ್ರೋ ಸ್ಟೇಷನ್‌ಗಳಲ್ಲಿ ನಂದಿನಿ ಮಳಿಗೆಗಳು (Nandini Outlet) ನಿರ್ಮಾಣ ಆಗಿದ್ದು, ಬಳಿಕ 10 ಮೆಟ್ರೋ ನಿಲ್ದಾಣದಲ್ಲಿ ನಿರ್ಮಾಣ ಆಗಲಿದೆ. ಅದರಂತೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಸೆಂಟ್ರಲ್ ಕಾಲೇಜ್ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ಆರಂಭವಾಗಲಿದೆ.

    ನಂದಿನಿ ಮಳಿಗೆ ಉದ್ಘಾಟನೆ ವೇಳೆ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರು ಡೈರಿ ಅಧ್ಯಕ್ಷ ಡಿ.ಕೆ.ಸುರೇಶ್, ಕೆಎಂಎಫ್ ಎಂಡಿ ಶಿವಸ್ವಾಮಿ ಉಪಸ್ಥಿತರಿದ್ದರು.ಇದನ್ನೂ ಓದಿ: ಗಾಝಾ ನಗರವನ್ನು ನಾಶ ಮಾಡ್ತೇವೆ – ಹಮಾಸ್‍ಗೆ ಇಸ್ರೇಲ್ ವಾರ್ನಿಂಗ್

  • ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆ!

    ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆ!

    – ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ ಹಿನ್ನೆಲೆ ಕ್ರಮ

    ಬೆಂಗಳೂರು: ಜುಲೈ 6ರಿಂದ ಜಾರಿಗೆ ಬರುವಂತೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ (Purple Line Metro Train) ವೇಳಾಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ಹೆಚ್ಚುವರಿ ಮೆಟ್ರೋ ರೈಲು ಸೇವೆ ಕಲ್ಪಿಸಲಾಗುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ.

    ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ (kempegowda Metro station) ಪ್ರಸ್ತುತ 9 ರೈಲುಗಳ ಬದಲಿಗೆ ಹೆಚ್ಚುವರಿ 15 ಮೆಟ್ರೋ ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುತ್ತದೆ. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು, ಅಗ್ರಹಾರದ (ಐಟಿಪಿಎಲ್‌) ವರೆಗೆ, 4 ರೈಲುಗಳು ವೈಟ್‌ಫೀಲ್ಡ್‌ ಮತ್ತು 1 ರೈಲು ಬೈಯಪ್ಪನಹಳ್ಳಿ ಕಡೆಗೆ ಸಂಚರಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

    ಅದರಂತೆ ರೈಲುಗಳು ಕೆಂಪೇಗೌಡ ನಿಲ್ದಾಣದಿಂದ ಬೆಳಗ್ಗೆ 8:48 ಗಂಟೆಯಿಂದ 8:58, 9:18, 9:29, 9:39, 9:50, 10:00, 10:21, 10:39, 10:50, 11:00, 11:22 ಗಂಟೆಗೆ ಪೂರ್ವಕ್ಕೆ ಸಂಚರಿಸಲಿವೆ. ಅಲ್ಲದೇ ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳ ಆವರ್ತನದಲ್ಲಿ ಬೆಳಗ್ಗೆ 10:25 ಗಂಟೆ ವರೆಗೆ ನಿಯಮಿತವಾಗಿ ಸಾಗುವ ರೈಲು ಸೇವೆಯೂ ಲಭ್ಯವಿರಲಿದೆ.

    ಪ್ರಯಾಣಿಕರ ಬೇಡಿಕೆ ಪೂರೈಸಲು ಪ್ರಸ್ತುತ, ಗರುಡಾಚಾರ್‌ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ITPL) ಅಥವಾ ವೈಟ್‌ಫೀಲ್ಡ್‌ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್‌ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಪಟ್ಟಂದೂರು ಅಗ್ರಹಾರ ಕಡೆಗೆ ಪ್ರಯಾಣಿಸಲು ಮುಂದಿನ ರೈಲು 3.5 ನಿಮಿಷಗಳ ಆವರ್ತನದಲ್ಲಿ ಲಭ್ಯವಿರಲಿದೆ.

    ಜೊತೆಗೆ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40ರ ಬದಲಿಗೆ 4:20ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಆದ್ರೆ ಹಸಿರು ಮಾರ್ಗದ ರೈಲುಗಳಲ್ಲಿ ಯಾವುದೇ ಬದಲಾವಣೆಯಿಲ್ಲ, ಎಂದಿನಂತೆ ಸಂಚರಿಸಲಿವೆ. ಪ್ರಯಾಣಿಕರು ವೇಳಾಪಟ್ಟಿಯನ್ನು ಗಮನಿಸುವಂತೆ ಬಿಎಂಆರ್‌ಎಲ್‌ ಕೋರಿದೆ.