Tag: ಮೆಟ್ರೋ ರೈಲು

  • ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿ – ಮೆಟ್ರೋ ರೈಲು ಹಳಿಗೆ ಧುಮುಕಿ ಆತ್ಮಹತ್ಯೆ

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿ – ಮೆಟ್ರೋ ರೈಲು ಹಳಿಗೆ ಧುಮುಕಿ ಆತ್ಮಹತ್ಯೆ

    ನವದೆಹಲಿ: ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ 39 ವರ್ಷದ ವ್ಯಕ್ತಿಯೊಬ್ಬ ಮೆಟ್ರೋ ರೈಲು (Metro Train) ಬರುತ್ತಿದ್ದಂತೆ ಹಳಿಗೆ (ಹಳದಿ ಮೆಟ್ರೋ ಲೇನ್) ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

    ದೆಹಲಿಯ ಉದ್ಯೋಗ ಭವನ ಮೆಟ್ರೋ ನಿಲ್ದಾಣದಲ್ಲಿ (Udyog Bhawan Metro Station) ಘಟನೆ ನಡೆದಿದೆ. ದೆಹಲಿ ವಿಶ್ವವಿದ್ಯಾಲಯದ ಕಡೆಗೆ ಹೋಗುತ್ತಿದ್ದ ರೈಲಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂದರ್ಭದಲ್ಲಿ ಸುಮಾರು 35 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿತ್ತು ಎಂದು ಡಿಎಂಆರ್‌ಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕೇವಲ 100 ರೂ. ಕ್ಯಾನ್ಸರ್‌ಗೆ ಚಿಕಿತ್ಸೆ – ಟಾಟಾ ಸಂಸ್ಥೆಯಿಂದ ಮಾತ್ರೆ ಅಭಿವೃದ್ಧಿ

    ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?
    ದೆಹಲಿ ಪೊಲೀಸರ (Delhi Police) ಪ್ರಕಾರ, ಆತ್ಮಹತ್ಯೆ ಮಾಡಿಕೊಂಡ 39 ವರ್ಷದ ವ್ಯಕ್ತಿ ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ. ಇದರಿಂದ ತೀವ್ರ ಅಸಮಾಧಾನಗೊಂಡಿದ್ದ. ಹಾಗಾಗಿಯೇ ಆತ್ಮಹತ್ಯೆಗೆ ಮುಂದಾಗಿದ್ದಾನೆ ಎಂದು ತಿಳಿಸಿದ್ದಾರೆ.

    ಬುಧವಾರ ಬೆಳಗ್ಗೆ 11:30ರ ಸುಮಾರಿಗೆ ಘಟನೆ ನಡೆದಿದೆ. ಬಳಿಕ ರಾಜೀವ್ ಚೌಕ್ ಪೊಲೀಸ್ ಠಾಣೆಗೆ ಪಿಸಿಆರ್ ದೂರವಾಣಿ ಕರೆ ಮಾಡಿ ಮೆಟ್ರೋ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಇಸ್ರೋ ರಾಕೆಟ್‌ನಲ್ಲಿ ಚೀನಾ ಧ್ವಜ – ಭಾರತದ ಸಾಧನೆ ಒಪ್ಪಿಕೊಳ್ಳಲು ಡಿಎಂಕೆಗೆ ಆಗಲ್ಲ ಎಂದ ಮೋದಿ

    ದೆಹಲಿಯ ಮುಕುಂದಪುರದಲ್ಲಿ ವಾಸಿಸುತ್ತಿದ್ದ ಮೃತ ವ್ಯಕ್ತಿ, ಕ್ಯಾನ್ಸರ್‌ನಿಂದ ಬಳಲುತ್ತಿದ್ದ. ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅನಾರೋಗ್ಯ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಸರಿಯಾಗಿ ಕೆಲಸ ಮಾಡಲೂ ಆಗುತ್ತಿರಲಿಲ್ಲ ಎಂದು ಅವರ ಪತ್ನಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

    ಮೃತದೇಹವನ್ನು ಆರ್‌ಎಂಎಲ್‌ ಆಸ್ಪತ್ರೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಸಿಆರ್‌ಪಿಸಿಯ ಸೆಕ್ಷನ್ 174 (ಅಸ್ವಾಭಾವಿಕ ಸಾವು) ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆಗಳು ನಡೆಯುತ್ತಿವೆ. ಇದರೊಂದಿಗೆ ಮೃತ ವ್ಯಕ್ತಿಯ ಜೇಬಿನಿಂದ ಸಿಕ್ಕ ಚೀಟಿಯಲ್ಲಿ ಮೊಬೈಲ್‌ ನಂಬರ್‌ ಪತ್ತೆಯಾಗಿದ್ದು, ಅದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: 2026 ರ ಅಸೆಂಬ್ಲಿ ಚುನಾವಣೆ ಹೊತ್ತಿಗೆ ಕೆಲವೇ ಮುಸ್ಲಿಮರು ಕಾಂಗ್ರೆಸ್‌ನಲ್ಲಿ ಉಳಿಯುತ್ತಾರೆ: ಅಸ್ಸಾಂ ಸಿಎಂ

    ಕಳೆದ ತಿಂಗಳು ಜನವರಿಯಲ್ಲಿ ಬೆಂಗಳೂರಿನಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ಮೆಟ್ರೋ ರೈಲು ಮುಂದೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿತ್ತು. ಕೇರಳ ಮೂಲದ 23 ವರ್ಷದ ಶಾರೋನ್‌ ರಾತ್ರಿ 7.12ರ ವೇಳೆಗೆ ರೈಲು ಬಂದಾಗ ಉದ್ದೇಶಪೂರ್ವಕವಾಗಿಯೇ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಕಿಗೆ ಬಂದಿತ್ತು.

  • ಸೀರೆಯ ಸೆರಗು ಮೆಟ್ರೋ ಬಾಗಿಲಿಗೆ ಸಿಲುಕಿ ಎಳೆದೊಯ್ದ ರೈಲು – ಮಹಿಳೆ ಸಾವು

    ಸೀರೆಯ ಸೆರಗು ಮೆಟ್ರೋ ಬಾಗಿಲಿಗೆ ಸಿಲುಕಿ ಎಳೆದೊಯ್ದ ರೈಲು – ಮಹಿಳೆ ಸಾವು

    ನವದೆಹಲಿ: ಮೆಟ್ರೋ (Metro) ರೈಲಿನ ಬಾಗಿಲಿಗೆ ಮಹಿಳೆಯೊಬ್ಬರ ಸೀರೆಯ (Saree) ಸೆರಗು ಸಿಲುಕಿಕೊಂಡ ಪರಿಣಾಮ ಮಹಿಳೆ ರೈಲಿನಿಂದ ಎಳೆಯಲ್ಪಟ್ಟು ಸಾವನ್ನಪ್ಪಿರುವ ಘಟನೆ ದೆಹಲಿಯ (Delhi) ಇಂದರ್‌ಲೋಕ್ (Inderlok) ಮೆಟ್ರೋ ನಿಲ್ದಾಣದಲ್ಲಿ (Metro Station)  ನಡೆದಿದೆ.

    ಗುರುವಾರ ಇಂದರ್‌ಲೋಕ್ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ರೀನಾ (35) ರೈಲಿನಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಶನಿವಾರ ಮೃತಪಟ್ಟಿದ್ದಾರೆ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಘಟನೆ ಬಗ್ಗೆ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ನಡೆಸಲಿದ್ದಾರೆ ಎಂದು ದೆಹಲಿ ಮೆಟ್ರೋ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನುಜ್ ದಯಾಲ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮೃತ ಮಹಿಳೆಯ ಸಂಬAಧಿ ವಿಕ್ಕಿ, ರೀನಾ ಅವರು ಪಶ್ಚಿಮ ದೆಹಲಿಯ ನಾಂಗ್ಲೋಯ್‌ನಿಂದ ಮೋಹನ್ ನಗರಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವೈದ್ಯ, ಆರ್ಮಿ ಡಾಕ್ಟರ್‌, ಪ್ರಧಾನ ಮಂತ್ರಿ ಕಚೇರಿ ಅಧಿಕಾರಿ.. ನಾನಾ ವೇಶ – ಮಹಿಳೆಯರನ್ನು ವಂಚಿಸುತ್ತಿದ್ದ ವ್ಯಕ್ತಿ ಬಂಧನ

    ರೀನಾ ಇಂದರ್‌ಲೋಕ್ ಮೆಟ್ರೋ ನಿಲ್ದಾಣಕ್ಕೆ ತಲುಪಿ ರೈಲು ಬದಲಾಯಿಸಲು ಮುಂದಾದಾಗ ಅವರ ಸೀರೆಯ ಸೆರಗು ಮೆಟ್ರೋ ಬಾಗಿಲಿಗೆ ಸಿಕ್ಕಿಹಾಕಿಕೊಂಡಿದೆ. ಅವರು ಈ ವೇಳೆ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಶನಿವಾರ ಸಂಜೆ ಅವರು ಸಾವನ್ನಪ್ಪಿದ್ದಾರೆ ಎಂದು ವಿಕ್ಕಿ ತಿಳಿಸಿದ್ದಾರೆ.

    ರೀನಾ ಪತಿ 7 ವರ್ಷಗಳ ಹಿಂದೆ ನಿಧನರಾಗಿದ್ದು, ಅವರು ಒಬ್ಬ ಮಗ ಹಾಗೂ ಮಗಳನ್ನು ಅಗಲಿದ್ದಾರೆ. ಘಟನೆ ಬಗ್ಗೆ ದೆಹಲಿ ಪೊಲೀಸರು ಸದ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಇಂದಿನಿಂದ ಹರಿಣರ ವಿರುದ್ಧ ಏಕದಿನ ಸರಣಿ – ಹೊಸ ತಾರೆಗಳ ಉಗಮಕ್ಕೆ ರೈಟ್‌ ಟೈಂ, ರಾಹುಲ್‌ ನಾಯಕತ್ವಕ್ಕೂ ಸವಾಲ್‌

  • ಪೀಣ್ಯದಲ್ಲಿ ಕೆಟ್ಟು ನಿಂತ ರೈಲು : ನಾಗಸಂದ್ರ – ಪೀಣ್ಯ ಮೆಟ್ರೋ ಸಂಚಾರ ಸ್ಥಗಿತ

    ಪೀಣ್ಯದಲ್ಲಿ ಕೆಟ್ಟು ನಿಂತ ರೈಲು : ನಾಗಸಂದ್ರ – ಪೀಣ್ಯ ಮೆಟ್ರೋ ಸಂಚಾರ ಸ್ಥಗಿತ

    ಬೆಂಗಳೂರು: ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ (Peenya Metro Station) ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ.

    ಬೆಳಗ್ಗೆ 10 ಗಂಟೆಯ ವೇಳೆಗೆ ರೈಲು ಕೆಟ್ಟು ನಿಂತಿದ್ದು ಹಸಿರು ಮಾರ್ಗದ ಮೆಟ್ರೋ (Green Line Metro) ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

    ಸದ್ಯ ಯಶವಂತಪುರ – ಸಿಲ್ಕ್ ಇನ್‌ಸ್ಟಿಟ್ಯೂಟ್‌ ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಸುತ್ತಿದ್ದು ಪೀಣ್ಯ – ನಾಗಸಂದ್ರ ರೈಲು ಸಂಚಾರ ಸ್ಥಗಿತಗೊಂಡಿದೆ. ಮುಂದಿನ 2 ಗಂಟೆಯ ಒಳಗಡೆ ತಾಂತ್ರಿಕ ದೋಷವನ್ನು ಸರಿಪಡಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

  • ಆರ್‌ವಿ ರಸ್ತೆ, ಬೊಮ್ಮಸಂದ್ರ ಪ್ರಯಾಣಿಕರಿಗೆ ಗುಡ್ ನ್ಯೂಸ್ – ವರ್ಷಾಂತ್ಯಕ್ಕೆ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

    ಆರ್‌ವಿ ರಸ್ತೆ, ಬೊಮ್ಮಸಂದ್ರ ಪ್ರಯಾಣಿಕರಿಗೆ ಗುಡ್ ನ್ಯೂಸ್ – ವರ್ಷಾಂತ್ಯಕ್ಕೆ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

    ಬೆಂಗಳೂರು: ಸಿಲಿಕಾನ್ ಸಿಟಿ (Bengaluru) ಜನರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಬಿಎಂಆರ್‌ಸಿಎಲ್ (BMRCL) ಮುಂದಾಗಿದೆ. ನಮ್ಮ ಮೆಟ್ರೋವಿನ ಹಳದಿ ಮಾರ್ಗ (Metro Yellow Line) ಈ ವರ್ಷಾಂತ್ಯಕ್ಕೆ ಕಾರ್ಯಾಚರಣೆಗೊಳ್ಳಲಿದೆ.

    ಬಹು ನಿರೀಕ್ಷಿತ ಆರ್‌ವಿ ರಸ್ತೆಯಿಂದ (RV Road) ಬೊಮ್ಮಸಂದ್ರ (Bommasandra) ಮೆಟ್ರೋ (Metro) ಮಾರ್ಗವನ್ನು ಈ ವರ್ಷದ ಅಂತ್ಯಕ್ಕೆ ಆರಂಭಿಸಲು ಬಿಎಂಆರ್‌ಸಿಎಲ್ ಸಜ್ಜಾಗಿದೆ. ಪ್ರಸಕ್ತ ವರ್ಷಾಂತ್ಯಕ್ಕೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮವು ತಿಳಿಸಿದೆ.

     

    ಬಿಎಂಆರ್‌ಸಿಎಲ್ ಈ ಮೊದಲು ಎರಡು ಹಂತಗಳಲ್ಲಿ ಮೆಟ್ರೋ ರೈಲು ಕಾರ್ಯಾಚರಣೆ ಆರಂಭಿಸಲು ನಿರ್ಧರಿಸಿತ್ತು. ಮೊದಲ ಹಂತದಲ್ಲಿ ಜೂನ್ ತಿಂಗಳಲ್ಲಿ ಬೊಮ್ಮಸಂದ್ರದಿಂದ ಸಿಲ್ಕ್‌ಬೋರ್ಡ್‌ವರೆಗೆ ಮತ್ತು ಎರಡನೇ ಹಂತದಲ್ಲಿ ಡಿಸೆಂಬರ್‌ನಲ್ಲಿ ಸೆಂಟ್ರಲ್ ಸಿಲ್ಕ್‌ಬೋರ್ಡ್‌ನಿಂದ ಆರ್‌ವಿ ರಸ್ತೆವರೆಗೆ ರೈಲುಗಳ ಸಂಚಾರಕ್ಕೆ ಉದ್ದೆಶಿಸಿತ್ತು. ಈ ಕ್ರಮದಿಂದ ಪ್ರಯಾಣಿಕರನ್ನು ಆಕರ್ಷಿಸುವುದು ಕಷ್ಟವೆಂದು ಅರಿತು ಒಂದೇ ಹಂತದಲ್ಲಿ ಪೂರ್ಣಗೊಳಿಸಲು ನಿರ್ಧರಿಸಿದೆ.

    ಆರ್‌ವಿ ರಸ್ತೆ-ಬೊಮ್ಮಸಂದ್ರ ನಡುವಿನ ಮಾರ್ಗವು ಅತ್ಯಧಿಕ ವಾಹನ ದಟ್ಟಣೆಯಿಂದ ಕೂಡಿದೆ. ಇದರಿಂದ ವಾಹನ ಸವಾರರು ಬಹುಪಾಲು ಸಮಯವನ್ನು ರಸ್ತೆಯಲ್ಲಿಯೇ ಕಳೆಯುವಂತಾಗಿದೆ. ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಶುರುವಾದರೆ ಸಾಕಷ್ಟು ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಕ್ಕೆ ಪ್ರಮುಖ ಸಂಪರ್ಕ ಸೇತುವೆಯಾಗಲಿದೆ.

     

    namma metro

    ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರವರೆಗಿನ ಮೆಟ್ರೋ ಮಾರ್ಗ ನಿರ್ಮಾಣಕ್ಕೆ 4,255 ಕೋಟಿ ರೂ. ವೆಚ್ಚವಾಗಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಶೇ.50 ಕ್ಕೂ ಅಧಿಕ ಕಾಮಗಾರಿ ಮುಗಿದಿದ್ದು, ಉಳಿದಂತೆ ಬಾಕಿ ಇರುವ ಕಾಮಗಾರಿಯನ್ನು ಮುಂದಿನ 6 ತಿಂಗಳಲ್ಲಿ ಪೂರೈಸಿಕೊಳ್ಳಲು ಬಿಎಂಆರ್‌ಸಿಎಲ್ ಮುಂದಾಗಿದೆ. ಇದನ್ನೂ ಓದಿ: ಗ್ಯಾರಂಟಿ ಲಾಭ ಪಡೆಯಲು ದುಂಬಾಲು – ಬೆಂಗಳೂರಿನಲ್ಲಿ ಬಿಪಿಎಲ್ ಕಾರ್ಡ್‍ಗೆ ಫುಲ್‌ ಡಿಮ್ಯಾಂಡ್‌

    ನಿಲ್ದಾಣಗಳು:
    ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರವರೆಗೆ ಬರುವ ಮೆಟ್ರೋ ನಿಲ್ದಾಣಗಳೆಂದರೆ, ಆರ್‌ವಿ ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸೆಂಟ್ರಲ್ ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲುಗೇಟ್, ಸಿಂಗಸಂದ್ರ, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಇನ್ಫೋಸಿಸ್ ಫೌಂಡೇಶನ್, ಕೋನಪ್ಪನ ಅಗ್ರಹಾರ, ಹೊಸೂರು ರಸ್ತೆ, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ.

    ಐಟಿ-ಬಿಟಿ ಕಂಪನಿಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ನಮ್ಮ ಮೆಟ್ರೋ ಉತ್ತಮ ಆದಾಯವನ್ನೂ ತಂದುಕೊಡಲಿದೆ. ಈ ಮಾರ್ಗದಲ್ಲಿ ಸುಮಾರು 3.70 ಲಕ್ಷ ಮಂದಿ ಪ್ರಯಾಣಿಸಬಹುದೆಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಕಳೆದ 5 ವರ್ಷಗಳಲ್ಲೇ ಕಡಿಮೆ ಮಟ್ಟಕ್ಕೆ ಕುಸಿದ ಕೆಆರ್‌ಎಸ್‌ ಡ್ಯಾಂ ನೀರು ಸಂಗ್ರಹ

  • ಟೀ ಶರ್ಟ್ ವಿಚಾರಕ್ಕೆ ಲವರ್ಸ್‌ ಕಿತ್ತಾಟ – ಮೆಟ್ರೋದಲ್ಲೇ ಬಾಯ್ ಫ್ರೆಂಡ್ ಕೆನ್ನೆಗೆ ಬಾರಿಸಿದ್ಲು

    ಟೀ ಶರ್ಟ್ ವಿಚಾರಕ್ಕೆ ಲವರ್ಸ್‌ ಕಿತ್ತಾಟ – ಮೆಟ್ರೋದಲ್ಲೇ ಬಾಯ್ ಫ್ರೆಂಡ್ ಕೆನ್ನೆಗೆ ಬಾರಿಸಿದ್ಲು

    ನವದೆಹಲಿ: ಟೀ ಶರ್ಟ್ ವಿಚಾರಕ್ಕೆ ದೆಹಲಿ ಮೆಟ್ರೋದಲ್ಲಿ ಬಾಯ್‍ಫ್ರೆಂಡ್ ಕಪಾಳಕ್ಕೆ ಯುವತಿ ಬಾರಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ದೆಹಲಿ ಮೆಟ್ರೋ ರೈಲಿನಲ್ಲಿ ಯುವಕ, ಯುವತಿ ಪ್ರಯಾಣಿಸುತ್ತಿರುತ್ತಾರೆ. ಈ ವೇಳೆ ಯುವತಿ 1,000 ರೂಪಾಯಿಗೆ ಟಿ-ಶರ್ಟ್ ಖರೀದಿಸಿರುವ ಬಗ್ಗೆ ತನ್ನ ಬಾಯ್‍ಫ್ರೆಂಡ್ ಬಳಿ ಹೇಳಿಕೊಂಡಿದ್ದಾಳೆ. ಇದಕ್ಕೆ ಯುವಕ ಈ ಟೀ ಶರ್ಟ್ ಬೆಲೆ ರೂಪಾಯಿಗಿಂತಲೂ ಹೆಚ್ಚಿಲ್ಲ ಎಂದು ಹೇಳಿದ್ದಾನೆ. ಇದರಿಂದ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕೊನೆಗೆ ಕೋಪಗೊಂಡ ಯುವತಿ ಯುವಕನಿಗೆ ಎಲ್ಲರ ಮುಂದೆ ಹೊಡೆಯುತ್ತಾಳೆ. ಇದನ್ನೂ ಓದಿ: ಗರ್ಭಪಾತ ಬೇಡ, ಮಗುವಿಗೆ ಜನ್ಮ ನೀಡಿ ದತ್ತು ಕೊಡಿ – ದೆಹಲಿ ಹೈಕೋರ್ಟ್

    ನಂತರ ಯುವಕ ಇದು ಸಾರ್ವಜನಿಕ ಸ್ಥಳ ಎಂದು ಆಕೆಗೆ ವಾರ್ನಿಂಗ್ ಕೊಡುತ್ತಾನೆ. ಆದರೂ ಹಿಂಜರಿಯದೇ ಯುವತಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಬಳಿಕ ರೊಚ್ಚಿಗೆದ್ದು ಯುವಕ ಕೂಡ ಆಕೆಯ ಕೆನ್ನೆಗೆ ಬಾರಿಸಿದ್ದಾನೆ. ಇದನ್ನೂ ಓದಿ: ನರ್ತನ್ ನಿರ್ದೇಶನದಲ್ಲಿ ಯಶ್ ನಟಿಸ್ತಾರಾ ಅಥವಾ ಇಲ್ಲವಾ? : ಒಂದು ವಾರ ಡೆಡ್ ಲೈನ್

    ಈ ವೀಡಿಯೋವನ್ನು ಮಂದರ್ ಅವರು ಟ್ವಿಟರ್‍ನಲ್ಲಿ ಶೇರ್ ಮಾಡಿಕೊಂಡಿದ್ದು, ಇದು ಕೇವಲ ತಮಾಷೆಯ ವೀಡಿಯೋವೋ ಅಥವಾ ಇಬ್ಬರು ನಿಜವಾಗಿಯೂ ಜಗಳವಾಡುತ್ತಿದ್ದಾರೋ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ವೀಡಿಯೊ ನೋಡಿ ನೆಟ್ಟಿಗರು ಇವರಿಬ್ಬರು ದಂಪತಿಗಳು ಎಂದರೆ, ಮತ್ತೆ ಕೆಲವರು ಈ ಇಬ್ಬರು ಸಹೋದರ ಮತ್ತು ಸಹೋದರಿ ಇರಬಹುದು ಎಂದು ಕಾಮೆಂಟ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೆಟ್ರೋ ಸಂಚಾರ ರಾತ್ರಿ 1.30ರ ವರೆಗೂ ವಿಸ್ತರಣೆ – ಯಾಕೆ ಗೊತ್ತೇ?

    ಮೆಟ್ರೋ ಸಂಚಾರ ರಾತ್ರಿ 1.30ರ ವರೆಗೂ ವಿಸ್ತರಣೆ – ಯಾಕೆ ಗೊತ್ತೇ?

    ಬೆಂಗಳೂರು: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಪದ್ಯದ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರವನ್ನು ವಿಸ್ತರಿಸಲಾಗಿದೆ.

    namma metro

    ಜೂನ್ 19ರಂದು ಭಾರತ – ದಕ್ಷಿಣ ಆಫ್ರಿಕಾ ನಡುವಿನ ಕಡೆಯ ಟಿ20 ಪಂದ್ಯ ನಡೆಯಲಿದೆ. ಇದರಿಂದ ನಗರದ ವಿವಿಧೆಡೆ ವೀಕ್ಷಣೆಗೆ ಅವಕಾಶ ವಿರುತ್ತದೆ. ವೀಕ್ಷಣೆ ಮುಗಿದ ನಂತರ ಮನೆಗೆ ತೆರಳುವವರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹೆಚ್ಚುವರಿ ಸಮಯ ನಿಗದಿಗೊಳಿಸಲಾಗಿದೆ. ಇದನ್ನೂ ಓದಿ: ಸೋನಿಯಾ ಗಾಂಧಿಗೆ ಮನೆ ಬೇಕಿದ್ರೆ ಇಂದೇ ಅರ್ಜಿ ಸಲ್ಲಿಸಿ: ಡಿಕೆಶಿಗೆ ಬಿಜೆಪಿ ಟಾಂಗ್

    ಅಂದು ರಾತ್ರಿ 1.30ರ ವರೆಗೆ ಮೆಟ್ರೋ ಸಂಚಾರ ಇರಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಪೇಪರ್ ಟಿಕೆಟ್ ವ್ಯವಸ್ಥೆಯನ್ನು ಮಾಡಲಾಗಿದೆ. ರಾತ್ರಿ 10 ಗಂಟೆಯ ನಂತರ ಪೇಪರ್ ಟಿಕೆಟ್‌ಗೆ ಮಾನ್ಯತೆ ನೀಡಲಾಗುತ್ತದೆ. ಎಲ್ಲ ನಿಲ್ದಾಣಗಳಿಂದ 50 ರೂಪಾಯಿ ಟಿಕೆಟ್ ವ್ಯವಸ್ಥೆ ಮಾಡಲಿದ್ದು, ನೇರಳೆ ಮತ್ತು ಹಸಿರು ಮಾರ್ಗದಲ್ಲಿ ರಾತ್ರಿ 1.30ರ ವರೆಗೆ ಮೆಟ್ರೋ ರೈಲು ಸಂಚರಿಸಲಿದೆ.

    Live Tv

  • ಟಿಕೆಟ್ ಖರೀದಿಸಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಮೋದಿ

    ಟಿಕೆಟ್ ಖರೀದಿಸಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಮೋದಿ

    ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪುಣೆ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಿದರು. ಸ್ವಲ್ಪ ಸಮಯದ ಬಳಿಕ ಯಂಗ್ ಫ್ರೆಂಡ್ಸ್ ಜೊತೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.

    ಒಟ್ಟು 32.2 ಕಿಲೋಮೀಟರ್ ಪುಣೆ ಮೆಟ್ರೋ ರೈಲು ಯೋಜನೆಯ 12 ಕಿ.ಮೀ. ವ್ಯಾಪ್ತಿಯನ್ನು ಉದ್ಘಾಟಿಸಿದ ಮೋದಿ ಅವರು ನಂತರ ಟಿಕೆಟ್ ಖರೀದಿಸಿ ಮಕ್ಕಳೊಂದಿಗೆ ಗಾರ್ವೇರ್ ಮೆಟ್ರೋ ನಿಲ್ದಾಣದಿಂದ ಆನಂದನಗರ ನಿಲ್ದಾಣದವರೆಗೆ ಪ್ರಯಾಣಿಸಿದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಪುಣೆಯ ಜನತೆ ಅನುಕೂಲಕರವಾಗಿ ಮತ್ತು ಆರಾಮದಾಯಕವಾಗಿ ಪ್ರಯಾಣಿಸಬಹುದು ಎಂದು ಖಾತ್ರಿಪಡಿಸಿರುವ ಮೋದಿ ಅವರು, ಟ್ವಿಟ್ಟರ್‌ನಲ್ಲಿ ಮಕ್ಕಳ ಜೊತೆ ಕುಳಿತಿರುವ ಫೋಟೋವನ್ನು ಹಂಚಿಕೊಳ್ಳುವುದರ ಜೊತೆಗೆ ಕ್ಯಾಪ್ಷನ್‍ನಲ್ಲಿ ಪುಣೆ ಮೆಟ್ರೋದಲ್ಲಿ ಯಂಗ್ ಫ್ರೆಂಡ್ಸ್ ಜೊತೆಗೆ ಪ್ರಯಾಣ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಯುಪಿ ಭವಿಷ್ಯ ಅಖಿಲೇಶ್ ಯಾದವ್ ಕೈಯಲ್ಲಿ ಸುರಕ್ಷಿತವಾಗಿರುತ್ತೆ: ಮಯಾಂಕ್ ಜೋಶಿ

    ಪುಣೆ ಮೆಟ್ರೋ ಯೋಜನೆಗೆ ಒಟ್ಟು 11,400 ಕೋಟಿಗೂ ಹೆಚ್ಚು ಮೊತ್ತ ವೆಚ್ಚವಾಗಿದ್ದು, ಈ ಯೋಜನೆಗೆ 2016ರ ಡಿಸೆಂಬರ್ 24 ರಂದು ಮೋದಿ ಅವರು ಅಡಿಗಲ್ಲು ಹಾಕಿದ್ದರು. ಇದನ್ನೂ ಓದಿ: ಮೊದಲು ಉಕ್ರೇನ್ ಸ್ವರ್ಗದಂತಿತ್ತು, ಈಗ ನರಕವಾಗಿದೆ – ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಯುವಕ

  • ನಾಳೆಯಿಂದ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ – ಮುಂಜಾನೆ 5ರಿಂದಲೇ ರೈಲು ಸಂಚಾರ

    ನಾಳೆಯಿಂದ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ – ಮುಂಜಾನೆ 5ರಿಂದಲೇ ರೈಲು ಸಂಚಾರ

    ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್ ಲಿಮಿಟೆಡ್ (ಬಿಎಂಆರ್​ಸಿಎಲ್) ನಿರ್ಧರಿಸಿದೆ.

    ಇಷ್ಟು ದಿನ ಬೆಳಗ್ಗೆ 6ಗಂಟೆಗೆ ಆರಂಭವಾಗುತ್ತಿದ್ದ ಮೆಟ್ರೋ ರೈಲು ಸಂಚಾರ ಸೇವೆಗಳು ಡಿಸೆಂಬರ್ 20ರಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 11ರವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್‍ಸಿಎಲ್ ಪ್ರಕಟಿಸಿದೆ. ಇದನ್ನೂ ಓದಿ: ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ: ಬಿಎಸ್‍ವೈ

    namma metro

    ಕೋವಿಡ್‍ಗೂ ಮುನ್ನ ಇದ್ದ ವೇಳಾಪಟ್ಟಿಯಂತೆಯೇ ಮೆಟ್ರೋ ಸೇವೆಗಳು ಎಂದಿನಂತೆ ಡಿಸೆಂಬರ್ 20ರಿಂದ ಪ್ರಾರಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ರೈಲು ಟರ್ಮಿನಲ್ ನಿಲ್ದಾಣಗಳಾದ ಕೆಂಗೇರಿ, ಸಿಲ್ಕ್ ಇನ್‍ಸ್ಟಿಟ್ಯೂಟ್, ನಾಗಸಂದ್ರ ಮತ್ತು ಬೈಯಪ್ಪನಹಳ್ಳಿಯಿಂದ ಬೆಳಿಗ್ಗೆ 5 ಗಂಟೆಗೆ ಹೊರಡಲಿದೆ. ಈ ನಿಲ್ದಾಣಗಳಿಂದ ಕೊನೆಯದಾಗಿ ರಾತ್ರಿ 11 ಗಂಟೆಗೆ ರೈಲು ಸಂಚರಿಸಲಿದೆ ಮತ್ತು ಎಂದಿನಂತೆ ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಶ್ವದ ಅತ್ಯಂತ ಪ್ರಸಿದ್ಧ ವಾಸ್ತುಶಿಲ್ಪಿ ರಿಚರ್ಡ್ ರೋಜರ್ಸ್ ನಿಧನ

    ನಗರದ ಮುಖ್ಯ ನಿಲ್ದಾಣ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್)ನಿಂದ ಕೊನೆಯ ರೈಲು ರಾತ್ರಿ 11.30 ಕ್ಕೆ ಸಂಚಾರ ಮಾಡಲಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

  • ಇಂದಿನಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸಲಿರುವ ಬೆಂಗಳೂರು ಮೆಟ್ರೋ

    ಇಂದಿನಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸಲಿರುವ ಬೆಂಗಳೂರು ಮೆಟ್ರೋ

    ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿ) ಶುಕ್ರವಾರ ತಿಳಿಸಿದಂತೆ, ಸೆಪ್ಟೆಂಬರ್ 18ರಿಂದ ಪ್ರತಿದಿನ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಮೆಟ್ರೋ ರೈಲುಗಳು ಕಾರ್ಯನಿರ್ವಹಿಸಲಿದೆ.

    ವಾರದ ಎಲ್ಲಾ ದಿನಗಳಲ್ಲಿ ಕೊನೆಯ ಮೆಟ್ರೋ ರಾತ್ರಿ 9.30ಕ್ಕೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದೆ. ಇದನ್ನೂ ಓದಿ: ನಂಗೆ ಕಣ್ಣು ಕಾಣಿಸಲ್ಲ, ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲ – ಲಸಿಕೆಗೆ ಅಜ್ಜಿ, ಅಜ್ಜಾ ನಿರಾಕರಣೆ

    ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣದ ನಡುವೆ ರೈಲು ಸಂಚರಿಸಿದರೆ, ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ನಾಗಸಂದ್ರ ನಿಲ್ದಾಣಗಳ ನಡುವಿನ ರೈಲು ಸಂಚರಿಸಲಿದೆ. ಅಲ್ಲದೇ ಪ್ರತಿ 5 ಮತ್ತು 10 ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಲಿದೆ. ಇದನ್ನೂ ಓದಿ: ಭಾನುವಾರ ಮನೆ ಬಿಟ್ಟಿದ್ದ ಮನೆ ಯಜಮಾನ ನಿನ್ನೆ ವಾಪಸ್‌ ಬಂದಾಗ ಕಂಡಿದ್ದು ಐವರ ಮೃತದೇಹ

    ಪ್ರತಿದಿನ ಸಿಲ್ಕ್ ಇನ್ಸ್ಟಿಟ್ಯೂಟ್ ಮತ್ತು ಕೆಂಗೇರಿ ನಿಲ್ದಾಣಗಳಿಗೆ ಪ್ರತಿ 10 ನಿಮಿಷಕ್ಕೊಮ್ಮೆ ರೈಲು ಓಡಾಡಲಿದೆ. ಆದರೆ ವಾರಾಂತ್ಯಗಳಲ್ಲಿ ಮೆಟ್ರೋ ರೈಲು ಸಂಚಾರವನ್ನು ಹೆಚ್ಚಿಸಬಹುದು ಅಥವಾ ಕಡಿತಗೊಳಿಸಬಹುದು ಎಂದು ಬಿಎಂಆರ್‌ಸಿ ಸೂಚಿಸಿದೆ. ಇನ್ನೂ ಮೆಟ್ರೋ ರೈಲಿನಲ್ಲಿ ಓಡಾಡುವ ಎಲ್ಲಾ ಪ್ರಯಾಣಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕೈಗಳನ್ನು ಸ್ವಚ್ಛವಾಗಿ ನೋಡಿಕೊಳ್ಳುವುದು ಇತರೆ ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗಿ ತಿಳಿಸಲಾಗಿದೆ.

     

  • ನಮ್ಮ ಮೆಟ್ರೋ ರೈಲು ಸೇವಾವಧಿ ವಿಸ್ತರಣೆ

    ನಮ್ಮ ಮೆಟ್ರೋ ರೈಲು ಸೇವಾವಧಿ ವಿಸ್ತರಣೆ

    ಬೆಂಗಳೂರು: ನಗರದಲ್ಲಿ ಕೊರೊನಾದಿಂದಾಗಿ ನೈಟ್ ಕರ್ಫ್ಯೂ ವಿಧಿಸಲಾಗಿತ್ತು. ಇದರಿಂದ ಮೆಟ್ರೋ ಸೇವೆಗೆ ಅವಧಿ ನಿಗದಿ ಪಡಿಸಿತ್ತು. ಆದರೆ ಇದೀಗ ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯ ಅವಧಿ ವಿಸ್ತರಣೆಗೊಂಡಿದೆ.

    ಈ ಕುರಿತಂತೆ ಬಿಎಂಆರ್‌ಸಿಎಲ್(BMRCL) ಆದೇಶ ಹೊರಡಿಸಿದ್ದು, ನಗರದಲ್ಲಿ ಮೆಟ್ರೋ ರೈಲು ಸಂಚಾರ ಸೇವೆಯು ಸೆಪ್ಟೆಂಬರ್ 18ರ ಶನಿವಾರದಿಂದ ಬೆಳಗ್ಗೆ 6ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಇರಲಿದೆ ಎಂಬುದಾಗಿ ತಿಳಿಸಿದೆ. ಇದನ್ನೂ ಓದಿ: ಸರ್ಕಾರದಿಂದ್ಲೇ ಹುಚ್ಚಗಣಿ ದೇವಸ್ಥಾನ ಪುನರ್ ನಿರ್ಮಾಣ- ಸಂಪುಟ ಸಭೆಯಲ್ಲಿ ತೀರ್ಮಾನ ನಿರೀಕ್ಷೆ

    ಮೆಜೆಸ್ಟಿಕ್‍ನ ಕೆಂಪೇಗೌಡ ಮೆಟ್ರೋ ನಿಲ್ದಾಣ, ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳಿಂದ ರಾತ್ರಿ 9.30ಕ್ಕೆ ಕೊನೆಯ ಮೆಟ್ರೋ ರೈಲು ಹೊರಡಲಿದೆ. ಜೊತೆಗೆ ಬೆಳಿಗ್ಗೆ 7ರ ಬದಲಾಗಿ 6 ಗಂಟೆಯಿಂದಲೇ ಮೆಟ್ರೋ ರೈಲು ಸೇವೆ ಆರಂಭಗೊಳ್ಳಲಿದೆ. ರಾತ್ರಿ 9 ಗಂಟೆಗೆ ಕೊನೆಗೊಳ್ಳುತ್ತಿದ್ದಂತ ಮೆಟ್ರೋ ರೈಲು ಸಂಚಾರ ನಾಳೆಯಿಂದ ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಪ್ರಯಾಣಿಕರ ಸೇವೆಗೆ ಲಭ್ಯವಾಗಲಿದೆ. ಇದನ್ನೂ ಓದಿ: ಹಾಸನದಲ್ಲಿ ಲಘು ಭೂಕಂಪನ- ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲು