Tag: ಮೆಟ್ರೋ ಸ್ಟೇಷನ್

  • ನಮ್ಮ ಮೆಟ್ರೋ ಎಡವಟ್ಟು – ಮೆಟ್ರೋ ಸ್ಟೇಷನ್ ಫುಲ್ ರಷ್

    ನಮ್ಮ ಮೆಟ್ರೋ ಎಡವಟ್ಟು – ಮೆಟ್ರೋ ಸ್ಟೇಷನ್ ಫುಲ್ ರಷ್

    – ಮೆಟ್ರೋ ವಿಳಂಬದಿಂದ ಪರದಾಡಿದ ಪ್ರಯಾಣಿಕರು

    ಬೆಂಗಳೂರು: ನಮ್ಮ ಮೆಟ್ರೋ (Namma Metro) ಎಡವಟ್ಟಿಗೆ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಅಂಬೇಡ್ಕರ್ ಜಯಂತಿಯ ಸಲುವಾಗಿ ಇಂದು ರಜೆ ಎಂದು ಪ್ರತಿ ಹತ್ತು ನಿಮಿಷಕ್ಕೊಂದು ಮೆಟ್ರೋ ರೈಲಿನ ಸಂಚಾರವಿದ್ದುದರಿಂದ ಮೆಟ್ರೋ ಸ್ಟೇಷನ್‌ಗಳಲ್ಲಿ ಪ್ರಯಾಣಿಕರು ಪರದಾಡಿದ್ದಾರೆ.

    ಉಳಿದೆಲ್ಲಾ ದಿನದಲ್ಲಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ಸೇವೆ ಇರುತ್ತದೆ. ಆದರೆ ಇಂದು ಹತ್ತು ನಿಮಿಷಕ್ಕೊಂದು ಮೆಟ್ರೋ ಸೇವೆ ಇದ್ದುದರಿಂದ ಸ್ಟೇಷನ್‌ನಲ್ಲಿ ಜನದಟ್ಟಣೆಯಿಂದ ಪ್ರಯಾಣಿಕರು ಪರದಾಡುವಂತಾಯಿತು. ಇದನ್ನೂ ಓದಿ: ವಕ್ಫ್ ಹೆಸ್ರಲ್ಲಿ ಬಡವರ ಭೂಮಿ ಕಿತ್ತುಕೊಳ್ಳಲು ಸಾಧ್ಯವಿಲ್ಲ, ಲೂಟಿ ನಿಲ್ಲಲಿದೆ – ನರೇಂದ್ರ ಮೋದಿ

    ಸಾಮಾನ್ಯವಾಗಿ ಭಾನುವಾರ ಮಾತ್ರ ಈ ರೀತಿ ಮಾಡುತ್ತಿದ್ದ ಮೆಟ್ರೋ ಸಂಸ್ಥೆಯು, ಈಗ ಸಾರ್ವತ್ರಿಕ ರಜಾ ದಿನವೂ ಮೆಟ್ರೋ ಸೇವೆಯನ್ನು ವಿಳಂಬ ಮಾಡುತ್ತಿದೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಮೆಟ್ರೋ ವಿರುದ್ಧ ಸಂಸದ ಪಿ.ಸಿ.ಮೋಹನ್ ವೀಡಿಯೋ ಟ್ಯಾಗ್ ಮಾಡಿ ಕಿಡಿಕಾರಿದ್ದಾರೆ. ಇದನ್ನೂ ಓದಿ: 4,500 ಎಕ್ರೆಗೆ ದಾಖಲೆ ಇದೆ, ಅರಮನೆ ಹೆಸರಿಗೆ ಜಮೀನು ಬಂದ್ರೂ ಗ್ರಾಮಸ್ಥರು ಆತಂಕ ಪಡಬೇಕಿಲ್ಲ: ಪ್ರಮೋದಾದೇವಿ ಒಡೆಯರ್

  • ಮೆಟ್ರೋ ಸ್ಟೇಷನ್ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಯತ್ನ – CISF ಯೋಧರಿಂದ ರಕ್ಷಣೆ

    ಮೆಟ್ರೋ ಸ್ಟೇಷನ್ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಯತ್ನ – CISF ಯೋಧರಿಂದ ರಕ್ಷಣೆ

    ನವದೆಹಲಿ: ಅಕ್ಷರಧಾಮ ಮೆಟ್ರೋ ನಿಲ್ದಾಣದಲ್ಲಿ 25 ವರ್ಷದ ಯುವತಿಯೊಬ್ಬಳು ಸೈಡ್‍ವಾಲ್‍ನ ಅಂಚಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ರಂಪಾಟ ಮಾಡಿದ್ದಾಳೆ.

    ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್‍ಎಫ್) ಸಿಬ್ಬಂದಿ ಯುವತಿಯನ್ನು ಗಮನಿಸಿದ ತಕ್ಷಣವೇ ಶಿಫ್ಟ್ ಇನ್ ಚಾರ್ಜ್‍ಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಮುಖ್ಯಸ್ಥರು ಯುವತಿಯನ್ನು ಕೆಳಗೆ ಬರುವಂತೆ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ಈ ವೇಳೆ ಯುವತಿ ತಾನು ಅಂಚಿನ ಮೇಲಿನಿಂದ ಇಳಿಯುವುದಿಲ್ಲ ಎಂದು ಜಗಳವಾಡಿದ್ದಾಳೆ. ಇದನ್ನೂ ಓದಿ: ಸಂತೋಷ್ ಕೇಸ್ ಹಿಂದೆಯೂ ‘ಮಹಾನಾಯಕ’ ಇದ್ದಾನೆ: ರಮೇಶ್ ಜಾರಕಿಹೊಳಿ

    ನಂತರ ಶಿಫ್ಟ್ ಇನ್ ಚಾರ್ಜ್ ಸ್ಟೇಷನ್ ಕಂಟ್ರೋಲರ್, ಮೆಟ್ರೋ ಕಂಟ್ರೋಲ್, ಕ್ಲಸ್ಟರ್ ಇನ್ಸ್‌ಪೆಕ್ಟರ್ ಮತ್ತು ಲೈನ್ ಇನ್ ಚಾರ್ಜ್ ಅವರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ಆಂಬ್ಯುಲೆನ್ಸ್ ವ್ಯವಸ್ಥೆಗೊಳಿಸಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆ ಯಾವಾಗ? – ಬಿಜೆಪಿಯ ನೈತಿಕತೆ ಎಲ್ಲಿ ಹೋಯ್ತು?

    ಕೊನೆಗೆ ಸಮೀಪದಲ್ಲಿದ್ದ ಮಾಲ್‍ವೊಂದರ ನಾಲ್ವರು ಸಿಬ್ಬಂದಿಯೊಂದಿಗೆ ಶಿಫ್ಟ್ ಇನ್ ಚಾರ್ಜ್ ಕೆಳಗೆ ಹೋಗಿ ದಪ್ಪವಾದ ಕಂಬಳಿ ವ್ಯವಸ್ಥೆಗೊಳಿಸಿ ಯುವತಿಯನ್ನು ರಕ್ಷಿಸಲು ಮುಂದಾದರು. ಹೀಗೆ ಸಕಲ ಪ್ರಯತ್ನಗಳ ನಂತರವೂ ಯುವತಿ ಅಂಚಿನಿಂದ ಕೆಳಗೆ ಬಿದ್ದಿದ್ದಾಳೆ. ಆದರೆ ಆಕೆಯನ್ನು ರಕ್ಷಿಸಿ, ತಕ್ಷಣವೇ ಸಮೀಪದ ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಇದೀಗ ಯುವತಿಗೆ ಪ್ರಜ್ಞೆ ಬಂದಿದ್ದು, ಆಕೆಯ ಬಲಗಾಲಿಗೆ ಕೆಲವು ಗಾಯಗಳಾಗಿದೆ.

  • ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಬಳಿ ದರೋಡೆ ಪ್ರಕರಣ- ಓರ್ವ ಆರೋಪಿಯ ಬಂಧನ

    ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಬಳಿ ದರೋಡೆ ಪ್ರಕರಣ- ಓರ್ವ ಆರೋಪಿಯ ಬಂಧನ

    – ಒಂಟಿಯಾಗಿ ಓಡಾಡುವವರೇ ಇವರ ಟಾರ್ಗೆಟ್

    ಬೆಂಗಳೂರು: ಲಾಕ್‍ಡೌನ್ ಸಂದರ್ಭದಲ್ಲಿ ಜನರಿಗೆ ಬೆದರಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ನಗರ ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.

    22 ವರ್ಷದ ಜಾನಿ ಬಂಧಿತ ಆರೋಪಿಯಾಗಿದ್ದು, ಈತ ಆಜಾದ್ ನಗರ ನಿವಾಸಿ ಎಂಬ ಮಾಹಿತಿ ಲಭಿಸಿದೆ. ಈ ಹಿಂದೆಯೇ ಆರೋಪಿ ದರೋಡೆ ಪ್ರಕರಣದಲ್ಲಿ ಜೈಲು ಸೇರಿ ಕಳೆದ ಮಾರ್ಚ್‍ನಲ್ಲಿ ಬಿಡುಗಡೆಯಾಗಿದ್ದ. ಆ ಬಳಿಕ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದ್ದ ಆರೋಪಿ, ಡ್ರ್ಯಾಗರ್ ಹಿಡಿದು ಬೆದರಿಸಿ ಹಣ, ಚಿನ್ನ ದರೋಡೆ ಮಾಡ್ತಿದ್ದ.

    ಹಾಡಹಗಲೇ ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಆತನ ಮೇಲೆ ಹಲ್ಲೆ ಮಾಡಿ, ಬೆದರಿಸಿ ದರೋಡೆ ಮಾಡಲು ಮುಂದಾಗಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೇ ವಿಡಿಯೋವನ್ನು ಹಂಚಿಕೊಂಡಿದ್ದ ಐಪಿಎಸ್ ಅಧಿಕಾರಿ ರೂಪ ಅವರು, ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ ಕ್ರಮಕೈಗೊಳ್ಳಲು ಮನವಿ ಮಾಡಿದ್ದರು. ಬೆಂಗಳೂರು ಪೊಲೀಸರು ಕೂಡ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

    ದರೋಡೆ ಪ್ರಕರಣದ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಆದರೆ ವಿಡಿಯೋ ವೈರಲ್ ಆದ ಬಳಿಕ ಪಶ್ಚಿಮ ವಿಭಾಗದ ಡಾ.ಸಂಜೀವ್. ಎಂ.ಪಾಟೀಲ್ ಅವರ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದರು. ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಸಿಟಿ ಮಾರ್ಕೆಟ್ ಪೊಲೀಸರು ಸದ್ಯ ವಿಡಿಯೋದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಜಾನಿ ಬಂಧಿಸಿದ್ದಾರೆ. ಇದೀಗ ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

  • ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳಾ ಎಸ್‍ಐಯನ್ನು ಗುಂಡಿಕ್ಕಿ ಕೊಂದ ಪಿಎಸ್‍ಐ

    ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳಾ ಎಸ್‍ಐಯನ್ನು ಗುಂಡಿಕ್ಕಿ ಕೊಂದ ಪಿಎಸ್‍ಐ

    – ಕೊಲೆ ಮಾಡಿದ ಪಿಸ್ತೂಲ್‍ನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    – ಮೂರು ಬಾರಿ ಗುಂಡು ಹಾರಿಸಿದ ಪಾಗಲ್ ಪ್ರೇಮಿ

    ನವದೆಹಲಿ: ರಾತ್ರೋರಾತ್ರಿ ಮಹಿಳಾ ಎಸ್‍ಐ ಪ್ರೀತಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಕೊಲೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ದೀಪಾಂಶು ರತಿ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. 2018ರಲ್ಲಿ ಪ್ರೀತಿ ಹಾಗೂ ದೀಪಾಂಶು ದೆಹಲಿ ಪೊಲೀಸ್ ಸೇರಿದ್ದು, ಇಬ್ಬರು ಬ್ಯಾಚ್‍ಮೇಟ್ ಆಗಿದ್ದರು. ಶುಕ್ರವಾರ ರಾತ್ರಿ ಪ್ರೀತಿ ಅವರನ್ನು ಕೊಲೆ ಮಾಡಿದ ಬಳಿಕ ದೀಪಾಂಶು ಹರ್ಯಾಣದ ಸೋನಿಪತ್ ಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೀತಿಯನ್ನು ಕೊಲೆ ಮಾಡಿದ ಪಿಸ್ತೂಲಿನಲ್ಲಿಯೇ ದೀಪಾಂಶು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ರಾತ್ರೋರಾತ್ರಿ ಗುಂಡಿಟ್ಟು ಮಹಿಳಾ ಎಸ್‍ಐ ಹತ್ಯೆ

    ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ದೀಪಾಂಶು ಪಿಎಸ್‍ಐ ಆಗಿದ್ದು, ಪ್ರೀತಿ ಜೊತೆ ತನ್ನ ಪ್ರೇಮ ನಿವೇದನೆಯನ್ನು ಹೇಳಿಕೊಂಡಿದ್ದ. ಆದರೆ ಪ್ರೀತಿ ಆತನನ್ನು ಪ್ರೇಮ ನಿವೇದನೆಯನ್ನು ತಿರಸ್ಕರಿಸಿ ಮದುವೆಯಾಗುವುದಿಲ್ಲ ಎಂದು ಹೇಳಿದ್ದಳು. ಇದರಿಂದ ಕೋಪಗೊಂಡ ದೀಪಾಂಶು ಗುಂಡಿಕ್ಕಿ ಆಕೆಯನ್ನು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಅಲ್ಲಿಂದ ಪರಾರಿ ಆಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ.

    ನಡೆದಿದ್ದೇನು?
    ದೆಹಲಿಯ ರೋಹಿಣಿ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಸುಮಾರು 9.30ಕ್ಕೆ ಮಹಿಳಾ ಎಸ್‍ಐ ಪ್ರೀತಿ ಅಲ್ಲಾವತ್ ಮೇಲೆ ದೀಪಾಂಶು ಗುಂಡಿಕ್ಕಿ ಹತ್ಯೆ ಮಾಡಿದ್ದ. ನಗರದ ಪಾಟ್‍ಪರ್ಗಂಜ್ ಕೈಗಾರಿಕಾ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಪ್ರೀತಿ ಅವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ರಾತ್ರಿ ಪ್ರೀತಿ ತನ್ನ ಡ್ಯೂಟಿ ಮುಗಿಸಿಕೊಂಡು ಮೆಟ್ರೋದಲ್ಲಿ ರೋಹಿಣಿ ಮೆಟ್ರೋ ಸ್ಟೇಷನ್‍ಗೆ ಹೋಗಿದ್ದರು. ನಿಲ್ದಾಣದಿಂದ ಇಳಿದು ಮನೆಗೆ ನಡೆದುಕೊಂಡು 50 ಮೀ. ದೂರ ಹೋಗುತ್ತಿದ್ದಂತೆ ದೀಪಾಂಶು ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ದೀಪಾಂಶು ಮೂರು ಬಾರಿ ಗುಂಡು ಹಾರಿಸಿದ್ದು, ಎರಡು ಬಾರಿ ಪ್ರೀತಿಗೆ ತಗುಲಿದೆ. ಮೂರನೇ ಬಾರಿ ಬುಲೆಟ್ ಪ್ರೀತಿ ಪಕ್ಕದಲ್ಲಿ ಹೋಗುತ್ತಿದ್ದ ಕಾರಿನ ಹಿಂದಿನ ಗ್ಲಾಸ್‍ಗೆ ತಗುಲಿದೆ. ಬುಲೆಟ್ ಪ್ರೀತಿ ತಲೆಗೆ ತಗುಲಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಪ್ರೀತಿಯನ್ನು ಕೊಲೆ ಮಾಡಿದ ನಂತರ ದೀಪಾಂಶು ಅಲ್ಲಿಂದ ಪರಾರಿಯಾಗಿದ್ದ. ಘಟನೆಯನ್ನು ನೋಡಿದ್ದ ಸ್ಥಳೀಯರು ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಕೊಲೆ ಆಗಿರುವುದನ್ನು ಖಚಿತ ಪಡಿಸಿದ್ದಾರೆ. ಕೂಡಲೇ ವಿಧಿವಿಜ್ಞಾನ ಪ್ರಯೋಗಾಲಯ ತಂಡವನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಲು ಸೂಚನೆ ನೀಡಿದ್ದರು.

    ಕೊಲೆಯಾದ ಸ್ಥಳದಿಂದ ಪ್ರೀತಿಯ ಮನೆ ಸ್ವಲ್ಪ ದೂರದಲ್ಲೇ ಇತ್ತು. ಸೋನಿಪತ್‍ನ ನಿವಾಸಿಯಾಗಿರುವ ಪ್ರೀತಿ ರೋಹಿಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿಯನ್ನು ಪರಿಶೀಲಿಸಿದ್ದು, ಈ ವೇಳೆ ಆರೋಪಿ ಒಬ್ಬನೇ ಇರುವುದು ಗೊತ್ತಾಗಿತ್ತು. ಸಿಸಿಟಿವಿ ನೋಡಿ ಪೊಲೀಸರು ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಹೇಳಿದ್ದರು. ಆದರೆ ಅಷ್ಟರಲ್ಲೇ ದೀಪಾಂಶು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ರಾತ್ರೋರಾತ್ರಿ ಗುಂಡಿಟ್ಟು ಮಹಿಳಾ ಎಸ್‍ಐ ಹತ್ಯೆ

    ರಾತ್ರೋರಾತ್ರಿ ಗುಂಡಿಟ್ಟು ಮಹಿಳಾ ಎಸ್‍ಐ ಹತ್ಯೆ

    – ಚುನಾವಣೆಯ ಹೊತ್ತಲ್ಲೇ ಬರ್ಬರ ಹತ್ಯೆ
    – ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ

    ನವದೆಹಲಿ: ರಾತ್ರೋರಾತ್ರಿ ಮಹಿಳಾ ಎಸ್‍ಐಯನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ಮೆಟ್ರೋ ಸ್ಟೇಷನ್‍ನಲ್ಲಿ ನಡೆದಿದೆ.

    ಪ್ರೀತಿ ಅಹ್ಲಾವತ್ ಕೊಲೆಯಾದ ಎಸ್‍ಐ. ನಗರದ ಪಾಟ್‍ಪರ್ಗಂಜ್ ಕೈಗಾರಿಕಾ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಪ್ರೀತಿ ಅವರನ್ನು ಪೋಸ್ಟ್ ಮಾಡಲಾಗಿತ್ತು. ರಾತ್ರಿ ಸುಮಾರು 9.30ಕ್ಕೆ ಈ ಘಟನೆ ಬಗ್ಗೆ ನಮಗೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ನಮಗೆ ಕರೆ ಬರುತ್ತಿದ್ದಂತೆ ನಾವು ಸ್ಥಳಕ್ಕೆ ಭೇಟಿ ನೀಡಿದ್ದೆವು. ಈ ವೇಳೆ ಪ್ರೀತಿ ಅವರ ತಲೆಗೆ ಗುಂಡೇಟು ಗಾಯಗಳಾಗಿದೆ. ನಾವು ಶಂಕಿತರನ್ನು ಗುರುತಿಸಿದ್ದು, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್.ಡಿ ಮಿಶ್ರಾ ಹೇಳಿದ್ದಾರೆ.

    ಘಟನೆ ನಡೆದ ಸ್ಥಳದಲ್ಲಿ ಮೂರು ಖಾಲಿ ಕಾರ್ಟ್ರಿಡ್ಜ್ ಗಳು ಪತ್ತೆಯಾಗಿದೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ. ವೈಯಕ್ತಿಕ ದ್ವೇಷದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಇತ್ತ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಇದೇ ಹೊತ್ತಲ್ಲಿ ದುಷ್ಕರ್ಮಿಗಳು ಮಹಿಳಾ ಎಸ್‍ಐನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿ ಆಗಿದ್ದು, ಇಡೀ ರಾಜಧಾನಿಯೇ ಬೆಚ್ಚಿಬಿದ್ದಿದೆ.

  • ಮೆಟ್ರೋ ಸ್ಟೇಷನ್‍ನಲ್ಲಿ ಜೋಡಿಯ ಸೆಕ್ಸ್ ವಿಡಿಯೋ ಪೋರ್ನ್ ಸೈಟ್‍ನಲ್ಲಿ ಅಪ್ಲೋಡ್

    ಮೆಟ್ರೋ ಸ್ಟೇಷನ್‍ನಲ್ಲಿ ಜೋಡಿಯ ಸೆಕ್ಸ್ ವಿಡಿಯೋ ಪೋರ್ನ್ ಸೈಟ್‍ನಲ್ಲಿ ಅಪ್ಲೋಡ್

    ನವದೆಹಲಿ: ಮೆಟ್ರೋ ನಿಲ್ದಾಣದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಜೋಡಿಯ ಸೆಕ್ಸ್ ವಿಡಿಯೋ ಇದೀಗ ಪೋರ್ನ್ ವೆಬ್‍ಸೈಟ್‍ನಲ್ಲಿ ಅಪ್ಲೋಡ್ ಆದ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.

    ಪೋರ್ನ್ ವೆಬ್‍ಸೈಟ್‍ನಲ್ಲಿ ನೋಡುತ್ತಿದ್ದಂತೆ ಈ ವಿಡಿಯೋ ಜುಲೈ 18ರಂದು ಮಧ್ಯಾಹ್ನ 2.22ರ ಸುಮಾರಿಗೆ ದೆಹಲಿಯ ಮೆಟ್ರೋ ಸಿಸಿಟಿವಿ ನಿಯಂತ್ರಣ ಕೊಠಡಿಯೊಳಗಿನ ಲೈವ್ ಫೀಡ್‍ನಿಂದ ಸ್ಮಾರ್ಟ್ ಫೋನಿನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

    ಜೋಡಿಯ ಈ ವಿಡಿಯೋವನ್ನು ಪೋರ್ನ್ ವೆಬ್‍ಸೈಟ್‍ನಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ವಿಡಿಯೋಗೆ ಇದುವರೆಗೂ 1 ಲಕ್ಷ ವ್ಯೂ ಬಂದಿದೆ. ಅಪರಿಚಿತ ಜೋಡಿ ವಿರುದ್ಧ ಅಜಾದ್‍ಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ ಎಂದು ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್‌ಸಿ) ಖಚಿತಪಡಿಸಿದೆ.

    ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ನಡೆದುಕೊಂಡಿದ್ದಕ್ಕೆ ಡಿಎಂಆರ್‌ಸಿ ದೆಹಲಿ ಪೊಲೀಸರ ಜೊತೆ ಸೇರಿ ಎಫ್‍ಐಆರ್ ದಾಖಲಿಸಿಕೊಂಡಿದೆ. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಈ ಘಟನೆಗೆ ಸಂಬಂಧಿಸಿದ ಮಾಹಿತಿ, ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದೇವೆ ಹಾಗೂ ಅವರಿಗೆ ವಿಚಾರಣೆಗೆ ಸಹಾಯ ಮಾಡುತ್ತಿದ್ದೇವೆ ಎಂದು ಡಿಎಂಆರ್‌ಸಿ ಸಿಬ್ಬಂದಿ ಅನುಜ್ ದಯಾಲ್ ತಿಳಿಸಿದ್ದಾರೆ.

    ಅಲ್ಲದೆ ಪ್ರಯಾಣಿಕರು ಸಾರ್ವಜನಿಕರ ಸ್ಥಳದಲ್ಲಿ ಈ ರೀತಿಯ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಬಾರದು ಎಂದು ಅನುಜ್ ಮನವಿ ಮಾಡಿಕೊಂಡಿದ್ದಾರೆ.