Tag: ಮೆಡಿಕಲ್ ಕಾಲೇಜು

  • ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವೈದ್ಯಕೀಯ ವಿದ್ಯಾರ್ಥಿ ಕೆರೆಯಲ್ಲೇ ಮುಳುಗಿ ಸಾವು

    ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವೈದ್ಯಕೀಯ ವಿದ್ಯಾರ್ಥಿ ಕೆರೆಯಲ್ಲೇ ಮುಳುಗಿ ಸಾವು

    ಹಾವೇರಿ: ಕೆರೆಯ ಆಳ ಗೊತ್ತಿಲ್ಲದೆ ಐವರು ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವೈದ್ಯಕೀಯ ಕಾಲೇಜು (Medical College) ವಿದ್ಯಾರ್ಥಿ (Student) ಕೆರೆಯಲ್ಲೇ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ನಗರದ ಹೊರ ವಲಯದಲ್ಲಿ ನಡೆದಿದೆ.

    ಹೊಸ ವೈದ್ಯಕೀಯ ಕಾಲೇಜು ಪ್ರಾರಂಭವಾಗಿ, ಮೊದಲ ಬ್ಯಾಚ್‌ಗೆ ತರಗತಿ ಆರಂಭವಾಗಿತ್ತು. 15 ದಿನಗಳು ಕಳೆಯೋದ್ರಲ್ಲೆ ಇಂತಹ ದುರಂತ ಸಂಭವಿಸಿದೆ. ಕಾಲೇಜಿಗೆ ಪ್ರವೇಶ ಪಡೆದಿದ್ದ ಮೈಸೂರು ಮೂಲದ ವಿದ್ಯಾರ್ಥಿ ನೋಮನ್ ಪಾಷಾ ತಾನು ತಂಗಿರುವ ಹಾಸ್ಟೆಲ್ (Hostel) ಬಳಿಯ ಕೆರೆಗೆ ಈಜಲು ಹೋದಾಗ ಮುಳುಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಚಡ್ಡಿ ಹಾಕೊಂಡು ಬರೋರೂ ನನ್ನ ನೇರವಾಗಿ ಮಾತಾಡಿಸ್ಬೋದು – ಸಿದ್ದರಾಮಯ್ಯ

    ಭಾನುವಾರ ರಜಾದಿನ ಹಿನ್ನೆಲೆ ನೋಮನ್ ಪಾಷಾ ಮತ್ತು ಸ್ನೇಹಿತರು ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಚೌಡಮ್ಮನ ಕೆರೆಗೆ ಈಜಲು ಹೋಗಿದ್ದಾರೆ. ಕೆರೆಯಲ್ಲಿ ಯಾವ ಪ್ರದೇಶದಲ್ಲಿ ಎಷ್ಟು ಆಳ ಇದೆ ಎನ್ನುವುದನ್ನು ತಿಳಿದುಕೊಳ್ಳದೇ ಈಜಲು ಹಾರಿದ್ದಾರೆ. ಕೆರೆಯ ಆಳ ಹಾಗೂ ಕಲ್ಲು ಬರಿತ ಪ್ರದೇಶದಲ್ಲಿ ಜಿಗಿದ ಪರಿಣಾಮ ನೋಮನ್ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಇಂದು ಮೃತದೇಹ ಪತ್ತೆಯಾಗಿದೆ.

    ಗ್ರಾಮ ಪಂಚಾಯಿತಿ (Gram Panchayat) ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆರೆಯ ಸುತ್ತಲೂ ಸೂಚನಾ ಫಲಕ ಹಾಗೂ ಕಬ್ಬಿಣದ ತಂತಿ ಬೇಲಿಯನ್ನು ಹಾಕಿಸಿ ಸುರಕ್ಷತೆ ಕಾಪಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ ಚಂದನ್ ಶೆಟ್ಟಿ -ನಿವೇದಿತಾ

    ಕಳೆದ 6 ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ ನೋಮನ್ ಪಾಷಾ, ಡಾಕ್ಟರ್ ಆಗಿ ತಾಯಿ, ತಮ್ಮ ಹಾಗೂ ತಂಗಿಯನ್ನು ಸಾಕಬೇಕು ಅಂತಾ ಕನಸು ಕಂಡಿದ್ದ. ತನ್ನ ತಾಯಿ ಮಗನ ಓದಿಗಾಗಿ ಸಾಲ ಮಾಡಿ 68 ಸಾವಿರ ಹಣ ಕೊಟ್ಟಿದ್ದರು. ಆದ್ರೆ ಈಗ ಸಾಲ ಮಾಡಿದ ಹಣದ ಜೊತೆಗೆ ಮಗನೂ ಇಲ್ಲವಾಗಿದ್ದಾನೆ. ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಗುವಿಗೆ ಜನ್ಮ ನೀಡಿದ ಅತ್ಯಾಚಾರಕ್ಕೊಳಗಾಗಿದ್ದ 12ರ ಬಾಲಕಿ

    ಮಗುವಿಗೆ ಜನ್ಮ ನೀಡಿದ ಅತ್ಯಾಚಾರಕ್ಕೊಳಗಾಗಿದ್ದ 12ರ ಬಾಲಕಿ

    ಲಕ್ನೋ: ಅತ್ಯಾಚಾರಕ್ಕೊಳಗಾಗಿದ್ದ ಗಾಜಿಯಾಬಾದ್‍ನ (Ghaziabad) 12 ವರ್ಷದ ಬಾಲಕಿ ಮೆಡಿಕಲ್ ಕಾಲೇಜಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

    ಗಾಜಿಯಾಬಾದ್‍ನ ಖೋಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಬಾಲಕಿಯನ್ನು ಅಕ್ಟೋಬರ್ 1 ರಂದು ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು. ಇದೀಗ ಸಿ-ಸೆಕ್ಷನ್‍ನಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಆರ್.ಕೆ.ಗುಪ್ತಾ ತಿಳಿಸಿದ್ದಾರೆ.

    ಬಾಲಕಿ 7ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯಾಗಿದ್ದು, ಅವರ ಅಪಾರ್ಟ್‍ಮೆಂಟ್‍ನಲ್ಲಿ ವಾಸಿಸುತ್ತಿದ್ದ 19 ವರ್ಷದ ಯುವಕ ಆಕೆಗೆ ಬೆದರಿಸಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ತಮ್ಮ ಮಾತು ಕೇಳದೇ ಹೋದರೆ ನಿನ್ನ ತಂದೆ ತಾಯಿಯನ್ನು ಕೊಲ್ಲುತ್ತೇವೆ ಎಂದು ಬೆದರಿಸಿ 21 ವರ್ಷದ ಆರೋಪಿ ಸಹೋದರ ಕೂಡ ಅತ್ಯಾಚಾರ ವೆಸಗಿದ್ದಾನೆ ಎಂದು ಕುಟುಂಬಸ್ಥರು ಪೊಲೀಸರಿಗೆ ಹೇಳಿದ್ದಾರೆ.

    POLICE JEEP

    ಇಷ್ಟಲ್ಲದೇ ಇಬ್ಬರು ಸಹೋದರರು ಸೇರಿಕೊಂಡು ಹಣಕ್ಕಾಗಿ ಬಾಲಕಿಯನ್ನು ಇನ್ನೊಬ್ಬರಿಗೂ ಹಸ್ತಾಂತರಿಸಿದ್ದಾರೆ. ಇದರಿಂದ ಲೈಂಗಿಕ ಲಾಭವನ್ನು ಕೂಡ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಈ ವಿಚಾರ ತಿಳಿದು ಆಕೆಯ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ.  ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಮಹಿಳೆಯರಿಂದ ಸೆಕ್ಯೂರಿಟಿ ಗಾರ್ಡ್ ಮೇಲೆ ದೌರ್ಜನ್ಯ

    ಬಾಲಕಿ ಗರ್ಭಿಣಿಯಾದಾಗ ಆಕೆಗೆ ಯಾವುದೇ ಗುಣಲಕ್ಷಣಗಳು ಕಾಣಿಸಲಿಲ್ಲ ಮತ್ತು ಹೆರಿಗೆ ಸಮಯದವರೆಗೂ ಸಾಮಾನ್ಯವಾಗಿಯೇ ಇದ್ದಳು. ಆದರೆ ಆಸ್ಪತ್ರೆಗೆ ಕರೆದೊಯ್ದ ನಂತರ ತನ್ನ ಕಿಡ್ನಿಯಲ್ಲಿ ಕಲ್ಲು ಇದೆ ಮತ್ತು ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದ್ದಳು. ಆದರೀಗ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    ಈ ಸಂಬಂಧ ಕುಟುಂಬಸ್ಥರು ಇಬ್ಬರು ಸಹೋದರರು ಮತ್ತು 35 ವರ್ಷದ ವ್ಯಕ್ತಿಯ ವಿರುದ್ಧ ಸೆಪ್ಟೆಂಬರ್ 5 ರಂದೇ ದೂರು ದಾಖಲಿಸಿದ್ದು, ಇದೀಗ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಖೋಡಾ ಪೊಲೀಸ್ ಠಾಣೆಯ (Khoda police station) ಇನ್ಸ್‌ಸ್ಪೆಕ್ಟರ್ ಅಲ್ತಾಫ್ ಅನ್ಸಾರಿ ಹೇಳಿದ್ದಾರೆ. ಇದನ್ನೂ ಓದಿ: ಸ್ವಚ್ಛ ನಗರ ಪಟ್ಟಿಯಲ್ಲಿ ಬೆಂಗಳೂರು ಲಾಸ್ಟ್ – ಷರತ್ತಿನೊಂದಿಗೆ ನೂತನ ಕಸದ ಟೆಂಡರ್‌ಗೆ BBMP ಸಿದ್ಧತೆ

    Live Tv
    [brid partner=56869869 player=32851 video=960834 autoplay=true]

  • ಪ್ರಿಯಕರನೊಂದಿಗೆ ಬೆಟ್ಟಕ್ಕೆ ತೆರಳಿದ್ದ ಮಹಿಳೆ ಅನುಮಾನಸ್ಪದ ಸಾವು – ಅಪಘಾತವೆಂದು ಆಸ್ಪತ್ರೆಗೆ ಸೇರಿಸಿದ್ದ ಲವರ್‌

    ಪ್ರಿಯಕರನೊಂದಿಗೆ ಬೆಟ್ಟಕ್ಕೆ ತೆರಳಿದ್ದ ಮಹಿಳೆ ಅನುಮಾನಸ್ಪದ ಸಾವು – ಅಪಘಾತವೆಂದು ಆಸ್ಪತ್ರೆಗೆ ಸೇರಿಸಿದ್ದ ಲವರ್‌

    ಕೋಲಾರ: ಅವರಿಬ್ಬರು ಸ್ನೇಹಿತರು ಆದ್ರೂ ಅವರಿಬ್ಬರಿಗೆ ಬೇರೆಯವರೊಂದಿಗೆ ಮದುವೆಯಾಗಿ ವಿಚ್ಚೇದನ ವಿವಾದ ಇನ್ನೂ ಕೋರ್ಟ್ನಲ್ಲಿ ನಡೆಯುತ್ತಿತ್ತು. ಹೀಗಿರುವಾಗ ಆ ಇಬ್ಬರು ಸ್ನೇಹಿತರು ಕದ್ದುಮುಚ್ಚಿ ಸೇರ್ತಾ ಇದ್ರು. ಆದರೆ ಅಲ್ಲೇನಾಗಿದೆ ಗೊತ್ತಾಗಿಲ್ಲ, ಕೊಲೆಯಂತೆ ಅನುಮಾನ ಹುಟ್ಟಿಸುವ ಅಪಘಾತವೊಂದು ನಡೆದು ಆಕೆ ಸಾವನ್ನಪ್ಪಿದ್ದಾಳೆ.

    ಕುತ್ತಿಗೆ ಭಾಗದಲ್ಲಿ ಗಾಯವಾಗಿ ಮೃತಪಟ್ಟ ಮಹಿಳೆ ಕೋಲಾರ ನಗರದ ಮಹಾಲಕ್ಷ್ಮೀ ಬಡಾವಣೆಯ ತಸ್ಮಿಯಾ ಬಾನು. ಇದನ್ನೂ ಓದಿ: ಊಟ ಬೇಕಂದ್ರೆ ಕೇಳಿ ಹಾಕಿಸ್ಕೋತಿನಿ ಬಿಡು ಗುರು – ನಟ ಕೋಮಲ್ ಶೈಲಿ ಕಾಪಿ ಹೊಡೆದ್ರಾ ಶಿಖರ್ ಧವನ್?

    ಹೌದು ನಿನ್ನೆ ತಸ್ಮಿಯಾ ಹಾಗೂ ಆಕೆ ಸ್ನೇಹಿತ ಮುಜ್ಜು ಅಂತರಗಂಗೆ ಬೆಟ್ಟಕ್ಕೆ ಬಂದಿದ್ದರು. ಸುಂದರ ವಾತಾವರಣದಲ್ಲಿ ಕೆಲ ಹೊತ್ತು ಕಾಲ ಕಳೆದ ನಂತರ ಇಬ್ಬರು ವಾಪಸ್ಸಾಗುವ ವೇಳೆ ಅಲ್ಲಿ ನಡೆಯಬಾರದೊಂದು ಘಟನೆ ನಡೆದು ಹೋಗಿತ್ತು. ಮುಜ್ಜು ಜೊತೆಗೆ ಹೋಗಿದ್ದ ತಸ್ಮಿಯಾಬಾನು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾಳೆ. ಇಬ್ಬರೂ ಅಂತಗಂಗೆ ಬೆಟ್ಟಕ್ಕೆ ಇನ್ನೋವಾ ಕಾರ್‌ನಲ್ಲಿ ಹೋಗಿ ವಾಪಸ್ ಬರುವಾಗ ಯಾರಾದರೂ ನೋಡಿದ್ರೆ ಅಂತ ತಸ್ಮಿಯಾಬಾನು ಕಾರ್‌ನ ಹಿಂಬದಿ ಸೀಟ್‌ನಲ್ಲಿ ಮಲಗಿದ್ದಳಂತೆ.

    ಈ ವೇಳೆ ಮುಜ್ಜು ಕಾರ್ ಚಲಾಯಿಸುತ್ತಿದ್ದ ಆಗ ಅಂತರಗಂಗೆ ರಸ್ತೆಯ ಕೀಲುಕೋಟೆ ತಿರುವಿನಲ್ಲಿ ರೋಡ್ ಹಂಪ್ ಇದ್ದ ಕಾರಣಕ್ಕೆ ಸಡನ್ ಆಗಿ ಬ್ರೇಕ್ ಹೊಡೆದಿದ್ದಾನೆ. ಆಗ ಹಿಂದೆ ಸೀಟ್‌ನಲ್ಲಿ ಮಲಗಿದ್ದ ತಸ್ಮಿಯಾಬಾನು ಒಂದೆ ಬಾರಿ ಮುಂದೆ ಬಿದ್ದಿದಾಳೆ ಅದೇ ಹೊತ್ತಿಗೆ ಮದ್ಯದ ಪೋಲ್ಡಿಂಗ್ ಸೀಟ್ ಮುಂದಕ್ಕೆ ಹೋಗಿ ಹಿಂದಕ್ಕೆ ಬಂದು ಸೀಟ್ ಕೆಳಗಿದ್ದ ಹರಿತವಾದ ಮೊಳೆ ಅವಳ ಕುತ್ತಿಗೆ ಭಾಗಕ್ಕೆ ಚುಚ್ಚಿದೆ. ಇದರಿಂದ ಉಸಿರಾಟದ ಸಮಸ್ಯೆಯಾಗಿದೆ ತಕ್ಷಣ ಅದೇ ಕಾರ್‌ನಲ್ಲಿ ಕೋಲಾರ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಸೂಕ್ತ ಚಿಕಿತ್ಸೆ ಸಿಗದಿದ್ದರಿಂದ ಹೆಚ್ಚುವರಿ ಚಿಕಿತ್ಸೆಗಾಗಿ ಆರ್.ಎಲ್.ಜಾಲಪ್ಪ ವೈದ್ಯಕೀಯ ಕಾಲೇಜಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತಸ್ಮಿಯಾಬಾನು ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಒಂದು ಹುಡುಗಿ ನಿಮ್ಮೊಂದಿಗೆ ಸೆಕ್ಸ್ ಮಾಡಬೇಕು ಅಂದ್ರೆ..? – ಶಕ್ತಿಮಾನ್ ಖ್ಯಾತಿಯ ಮುಖೇಶ್ ವಿವಾದಾತ್ಮಕ ಹೇಳಿಕೆ

    KILLING CRIME

    ತಸ್ಮಿಯಾಬಾನುಗೆ ಮದುವೆಯಾಗಿದ್ದು ಒಂದು ಮಗು ಕೂಡಾ ಇದೆ. ಈ ನಡುವೆ ತಸ್ಮಿಯಾಬಾನು ಗಂಡನೊಂದಿಗೆ ವಿರಸ ಉಂಟಾಗಿ ವಿಚ್ಚೇದನ ಪ್ರಕರಣ ಕೋರ್ಟ್‌ ನಲ್ಲಿ ವಿಚಾರಣೆ ನಡೆಯುತ್ತಿದೆ. ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ತಸ್ಮಿಯಾಗೆ ಕೋಲಾರ ತಾಲ್ಲೂಕು ಮಹಾಲಕ್ಷ್ಮೀ ಬಡಾವಣೆಯಲ್ಲೇ ವಾಸವಿದ್ದ ಮುಜ್ಜು ಎಂಬುವನ ಜೊತೆಗೆ ಸ್ನೇಹ, ಅಕ್ರಮ ಸಂಬಂಧ ಕೂಡಾ ಇತ್ತು ಎನ್ನಲಾಗುತ್ತಿದೆ. ಆಗಾಗ ಇಬ್ಬರು ಕೆಲವೊಂದು ಸ್ಥಳಗಳಿಗೆ ಹೋಗಿ ಬರ್ತಾ ಇದ್ದರು ಎಂದು ಹೇಳಲಾಗಿದೆ.

    ನಿನ್ನೆಯೂ ಹೀಗೆ ಅಂತರಗಂಗೆ ಬೆಟ್ಟಕ್ಕೆ ಹೋಗಿ ಬರುವಾಗ ಅಚಾನಕ್ಕಾಗಿ ನಡೆದ ಘಟನೆಯಿಂದ ಕುತ್ತಿಗೆ ಬಳಿ ಹರಿತವಾದ ಕಂಬಿ ತಗುಲಿ ಸಾವನ್ನಪ್ಪಿದ್ದಾಳೆ ಎಂದು ಮುಜ್ಜು ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ಆದರೆ ತಸ್ಮಿಯಾ ಬಾನು ಸಂಬಂಧಿಕರು ಇದು ಅಪಘಾತವಲ್ಲ ಇದು ಕೊಲೆ ಎಂದು ಹೇಳುತ್ತಿದ್ದಾರೆ. ಅಪಘಾತವಾದರೆ ಕಾರ್‌ಗೆ ಏನೂ ಆಗಿಲ್ಲ ಕಾರ್ ಚಲಾಯಿಸುತ್ತಿದ್ದ ಮುಜ್ಜುಗೂ ಏನೂ ಆಗಿಲ್ಲ ಆದರೆ ಈಕೆಗೆ ಮಾತ್ರ ಸಾಯುವಷ್ಟು ಗಾಯವಾಗಿದೆ. ಘಟನೆಯಾದ ನಂತರ ಆಸ್ಪತ್ರೆಗೆ ದಾಖಲು ಮಾಡಿ ಆರೋಪಿ ಮುಜ್ಜು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು ಕೋಲಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮುಜ್ಜುವನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]

  • ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್: ಡಾ.ಕೆ ಸುಧಾಕರ್

    ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್: ಡಾ.ಕೆ ಸುಧಾಕರ್

    ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯದ ಬಲವರ್ಧನೆಗಾಗಿ ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುವ ಕಾರ್ಯದಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಈಗ 500 ಕೋಟಿ ರೂ. ವೆಚ್ಚದ ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

    ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಈ ಮಹತ್ವದ ಹೆಜ್ಜೆಯಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು ಆದ್ಯತೆ ದೊರೆತಿದೆ ಎಂದು ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ 100 ಎಂಬಿಬಿಎಸ್ ಸೀಟುಗಳ ಕಾಲೇಜು ಆರಂಭವಾಗಲಿದ್ದು, ನೂತನ ಕಟ್ಟಡ ನಿರ್ಮಾಣ ಭರದಿಂದ ಸಾಗಿದೆ. ಈ ನಡುವೆಯೇ, ಚಿತ್ರದುರ್ಗದಲ್ಲಿ 150 ಎಂಬಿಬಿಎಸ್ ಸೀಟುಗಳನ್ನು ಹೊಂದಲಿರುವ ‘ಚಿತ್ರದುರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ’ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಿವಿಲ್ ಕಾಮಗಾರಿ ಸೇರಿ ಒಟ್ಟು 500 ಕೋಟಿ ರೂ. ಖರ್ಚಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

    ಜನಸಂಖ್ಯೆಗೆ ಅನುಗುಣವಾಗಿ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿರುವ 17 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಜೊತೆ ಹೊಸದಾಗಿ 4 ಸಂಸ್ಥೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥಗೆ 100 ಎಂಬಿಬಿಎಸ್ ಸೀಟುಗಳ ಪ್ರವೇಶ ಮಿತಿಯೊಂದಿಗೆ 2022-23 ನೇ ಸಾಲಿಗೆ ಲೆಟರ್ ಆಫ್ ಇಂಟೆಂಟ್ ನೀಡಲಾಗಿದೆ. ಇದರ ಜೊತೆಗೆ ಈಗ ಚಿತ್ರದುರ್ಗದಲ್ಲೂ ಕಾಲೇಜು ಕಟ್ಟಡದ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಈ ಮೂಲಕ ರಾಜ್ಯದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯರಾಗುವ ಕನಸು ನನಸಾಗಲಿದೆ. ಅಷ್ಟೇ ಅಲ್ಲದೆ ವೈದ್ಯಕೀಯ ಕಾಲೇಜುಗಳಿಗೆ ಹೊಂದಿಕೊಂಡ ಆಸ್ಪತ್ರೆಗಳಲ್ಲಿ ಬಡವರಿಗೆ ಉನ್ನತ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಲಿದೆ ಎಂದು ತಿಳಿಸಿದ್ದಾರೆ.

    ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳ ಪ್ರಕಾರ ಪ್ರತಿ 1,000 ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕು. ಆದರೆ ಕರ್ನಾಟಕದಲ್ಲಿ 1,800 ಜನಸಂಖ್ಯೆಗೆ ಒಬ್ಬ ವೈದ್ಯರ ಲಭ್ಯತೆ ಇದೆ. ಈ ಅಸಮತೋಲನ ಸರಿಪಡಿಸಲು ಹಾಗೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಇದೇ ಪ್ರಯತ್ನದ ಭಾಗವಾಗಿ ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಸಲಗದ ನಂತರ ಮತ್ತೆ ನಿರ್ದೇಶನಕ್ಕೆ ದುನಿಯಾ ವಿಜಯ್

    2014-15 ಸಾಲಿನ ಆಯವ್ಯಯದಲ್ಲಿನ ಘೋಷಣೆಯಂತೆ ಚಿತ್ರದುರ್ಗದಲ್ಲಿ 150 ಸೀಟುಗಳ ಎಂಬಿಬಿಎಸ್ ಕಾಲೇಜನ್ನು 2015-16ರಲ್ಲೇ ಸ್ಥಾಪಿಸಲು ತಾತ್ವಿಕ ಒಪ್ಪಿಗೆ ನೀಡಲಾಗಿತ್ತು. ಆದರೆ 2013-14 ರ ಆರ್ಥಿಕ ವರ್ಷದಲ್ಲಿ ಕಲಬುರ್ಗಿ, ಗದಗ, ಕೊಪ್ಪಳ, ಕಾರಾವಾರ, ಕೊಡಗು ಮತ್ತು ಚಾಮರಾಜನಗರದಲ್ಲಿ ಹೊಸ 6 ಮೆಡಿಕಲ್ ಕಾಲೇಜುಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಹೊಂದಿಸಿಕೊಳ್ಳಬೇಕಾಗಿದ್ದರಿಂದ ತುಮಕೂರು, ಚಿತ್ರದುರ್ಗ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮುಂದೂಡಲಾಗಿತ್ತು. 2021-22ನೇ ಸಾಲಿನ ಬಜೆಟ್ ನಲ್ಲಿ, ಚಿತ್ರದುರ್ಗ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.

    ಚಿತ್ರದುರ್ಗದ ಮೆಡಿಕಲ್ ಕಾಲೇಜನ್ನು 2023-24 ನೇ ಸಾಲಿನಿಂದ ಆರಂಭಿಸಲು ಅಗತ್ಯ ಪ್ರಕ್ರಿಯೆಗಳನ್ನು ನಡೆಸಬೇಕೆಂದು ರಾಜ್ಯ ಸರ್ಕಾರ ಸೂಚಿಸಿದೆ. ಇದಕ್ಕೆ ಪೂರಕವಾಗಿ ಸಿದ್ಧತೆ ನಡೆಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವೈದ್ಯಕೀಯ ಶಿಕ್ಷಣದಲ್ಲಿ ಸುಧಾರಣೆ ತರುತ್ತಿದ್ದು, ಈ ಹೊಸ ಕಾಲೇಜು ನಿರ್ಮಾಣ ಕೂಡ ಸುಧಾರಣೆಯ ಭಾಗವಾಗಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಈ ವಾರ 10 ಚಿತ್ರಗಳು ರಿಲೀಸ್ : ಯಾವುದು ನೋಡ್ಬೇಕು, ಯಾವುದು ಬಿಡ್ಬೇಕು?

  • ತೆಲಂಗಾಣದ ಮೆಡಿಕಲ್ ಕಾಲೇಜಿನ 43 ವಿದ್ಯಾರ್ಥಿಗಳಿಗೆ ಕೊರೊನಾ

    ತೆಲಂಗಾಣದ ಮೆಡಿಕಲ್ ಕಾಲೇಜಿನ 43 ವಿದ್ಯಾರ್ಥಿಗಳಿಗೆ ಕೊರೊನಾ

    ಹೈದರಾಬಾದ್: ತೆಲಂಗಾಣದ ಕರೀಂನಗರ ಜಿಲ್ಲೆಯ ಬೊಮ್ಮಕಲ್‍ನಲ್ಲಿರುವ ಚಲ್ಮೇಡಾ ಆನಂದ್ ರಾವ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ 43 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು, ತರಗತಿಗಳನ್ನು ಅಮಾನತುಗೊಳಿಸುವಂತೆ ಮತ್ತು ಕ್ಯಾಂಪಸ್ ಅನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಒತ್ತಾಯಿಸಲಾಗಿದೆ.

    ಒಂದು ವಾರದ ಹಿಂದೆಯಷ್ಟೇ ಕಾಲೇಜಿನಲ್ಲಿ ವಾರ್ಷಿಕೋತ್ಸವವನ್ನು ನಡೆಸಲಾಗಿತ್ತು. ಇದರಿಂದಾಗಿ ವೈರಸ್ ಹರಡಿರಬಹುದಾಗಿದೆ. ಈ ಕುರಿತಂತೆ ಮಾತನಾಡಿದ ಕರೀಂನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಜುವೇರಿಯಾ ಅವರು, ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಇಷ್ಟು ಜನ ಪಾಲ್ಗೊಳ್ಳುತ್ತಿರುವುದರ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡಲಾಗಿಲ್ಲ ಮತ್ತು ಸಮಾರಂಭದಲ್ಲಿ ಹಲವಾರು ಮಂದಿ ಮಾಸ್ಕ್ ಧರಿಸಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ತಂಡಕ್ಕೆ ಗೆಲುವಿನ ಶ್ರೇಯಸ್ಸು ದೊರೆಯಬೇಕು: ರಾಹುಲ್ ದ್ರಾವಿಡ್

    ಇಲ್ಲಿಯವರೆಗೂ ಸುಮಾರು 200 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಮವಾರ, ಕ್ಯಾಂಪಸ್‍ನಲ್ಲಿರುವ 1,000 ಜನರನ್ನು ಪರೀಕ್ಷಿಸಲು ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ. ಶನಿವಾರ 13 ವಿದ್ಯಾರ್ಥಿಗಳಲ್ಲಿ ಕೊರೊನಾ ಧೃಡಪಟ್ಟಿದ್ದು, ಭಾನುವಾರ 26 ವಿದ್ಯಾರ್ಥಿಗಳಿಗೆ ಕೊರೊನಾ ಧೃಡಪಟ್ಟಿದೆ. ಇದೀಗ ಸಂಪೂರ್ಣ ಕಾಲೇಜನ್ನು ಸ್ಯಾನಿಟೈಸ್ ಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬೀದರ್‌ನಲ್ಲಿ ಕುದುರೆ ವ್ಯಾಪಾರ ಜೋರು

    ಮತ್ತೊಂದೆಡೆ ತೆಲಂಗಾಣದ ಸಾರ್ವಜನಿಕ ಆರೋಗ್ಯ ನಿರ್ದೇಶಕ ಡಾ ಜಿ ಶ್ರೀನಿವಾಸ್ ಅವರು, ಜನವರಿ ಹಾಗೂ ಫೆಬ್ರವರಿ ಮಧ್ಯದ ವೇಳೆಗೆ ಹೆಚ್ಚಿನ ಪ್ರಕರಣಗಳು ದಾಖಲಾಗುವ ಸಾಧ್ಯತೆಗಳಿದೆ ಎಂದು ಹೇಳಿದ್ದಾರೆ. ಓಮಿಕ್ರಾನ್ ಡೆಲ್ಟಾಕ್ಕಿಂತ ಆರು ಪಟ್ಟು ಶರ ವೇಗವಾಗಿ ಹರಡುತ್ತದೆ ಎಂದು ಸೂಚಿಸಿದ್ದಾರೆ.

  • ಧಾರವಾಡ ಎಸ್‍ಡಿಎಂ ಕಾಲೇಜಿನಲ್ಲಿ ಮತ್ತೆ ಕೊರೊನಾ ಸ್ಫೋಟ – 77 ಮಂದಿಗೆ ಸೋಂಕು

    ಧಾರವಾಡ ಎಸ್‍ಡಿಎಂ ಕಾಲೇಜಿನಲ್ಲಿ ಮತ್ತೆ ಕೊರೊನಾ ಸ್ಫೋಟ – 77 ಮಂದಿಗೆ ಸೋಂಕು

    ಧಾರವಾಡ: ಕಳೆದೆರಡು ದಿನಗಳಿಂದ ಧಾರವಾಡದ ಎಸ್‍ಡಿಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಸೋಂಕಿತರ ಸಂಖ್ಯೆ ಅಧಿಕವಾಗಿದ್ದು, ಇಂದು ಮತ್ತೆ ಕೊರೊನಾ ಸ್ಫೋಟಗೊಂಡಿದೆ. ಇಂದು 77 ಜನರಲ್ಲಿ ಕೊವಿಡ್ ಪಾಸಿಟಿವ್ ದೃಢವಾಗಿದೆ.

    ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಇಂದು 77 ಪ್ರಕರಣಗಳು ಸೇರಿ ಒಟ್ಟು 281 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಸೋಂಕಿತರೆಲ್ಲರಿಗೂ ಸರಿಯಾದ ರೀತಿಯಲ್ಲಿ ಚಿಕಿತ್ಸೆ, ಔಷಧೋಪಚಾರ ನಡೆಯುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಮಾಹಿತಿ ನೀಡಿದರು. ಇದನ್ನೂ ಓದಿ:  ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ: ನವಾಬ್ ಮಲಿಕ್

    ನ.17ರಂದು ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವವರೆಗೆಲ್ಲಗೂ ತಪಾಸಣೆ ಮಾಡಿಕೊಳ್ಳಲು ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಪಟ್ಟವರನ್ನು ಪ್ರತ್ಯೇಕವಾಗಿ ಇರಲು ವ್ಯವಸ್ಥೆ ಮಾಡಲಾಗಿದೆ. ಇನ್ನೂ 1,822 ಜನರ ತಪಾಸಣಾ ವರದಿಗಳು ಬರಬೇಕಾಗಿದೆ.

    ಕಿಮ್ಸ್, ಡೆಮಾನ್ಸ್, ಎಸ್‍ಡಿಎಂ ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಈ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ. ಕೋವಿಡ್ ಲಸಿಕೆಯ 2 ಡೋಸ್ ಪಡೆದಿರುವುದರಿಂದ ಸೋಂಕಿತರಲ್ಲಿ ಸೋಂಕಿನ ಗಂಭೀರ ಸ್ವರೂಪ ಲಕ್ಷಣ ಕಾಣಿಸಿಕೊಂಡಿಲ್ಲ.

  • ನಮಗೆ ಮೀಸಲಾತಿ ಬಗ್ಗೆ ಪಾಠ ಮಾಡುವ ನೈತಿಕತೆ ಬಿಜೆಪಿಗಿಲ್ಲ: ಸಿದ್ದರಾಮಯ್ಯ

    ನಮಗೆ ಮೀಸಲಾತಿ ಬಗ್ಗೆ ಪಾಠ ಮಾಡುವ ನೈತಿಕತೆ ಬಿಜೆಪಿಗಿಲ್ಲ: ಸಿದ್ದರಾಮಯ್ಯ

    ಬೆಂಗಳೂರು: ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ನೀಟ್ ಮೂಲಕ ಅಖಿಲ ಭಾರತ ಕೋಟಾದಡಿಯಲ್ಲಿ ಸೇರ್ಪಡೆಗೊಳ್ಳುವ ಹಿಂದುಳಿದ ಜಾತಿಯ ವಿದ್ಯಾರ್ಥಿಗಳಿಗೆ ಶೇ.27ರಷ್ಟು ಮೀಸಲಾತಿ ನೀಡುವ ಪ್ರಧಾನಿ ನರೇಂದ್ರ ಮೋದಿ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಪ್ರಧಾನಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಆದರೆ ಇದೀಗ ಬಿಜೆಪಿ ಈ ಬಗ್ಗೆ ಬೇರೆ ರೀತಿ ಉತ್ತರ ಕೊಡುತ್ತಿದೆ. ಮೀಸಲಾತಿ ಬಗ್ಗೆ ನಮಗೆ ಪಾಠ ಮಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುಡುಗಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜುಲೈ ಮೂರರಂದು ಸೋನಿಯಾ ಗಾಂಧಿಯವರು ಪ್ರಧಾನಮಂತ್ರಿಯವರಿಗೆ ಪತ್ರ ಬರೆದು ಹಿಂದುಳಿದ ಜಾತಿಯ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಸೆಳೆದಿದ್ದರು. ರಾಜ್ಯದ ವೈದ್ಯಕೀಯ ಕಾಲೇಜುಗಳಿಂದ ಅಖಿಲ ಭಾರತ ಕೋಟಾದಡಿಯಲ್ಲಿ ಪಡೆದಿರುವ ಶೇಕಡಾ 15ರಷ್ಟು ಸೀಟುಗಳಲ್ಲಿಯೂ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದರು. ಮೀಸಲಾತಿ ನಿರಾಕರಣೆಯಿಂದಾಗಿ 2017ರಿಂದ 11000 ವಿದ್ಯಾರ್ಥಿಗಳು ಅವಕಾಶ ವಂಚಿತರಾಗಿರುವುದನ್ನು ಸೋನಿಯಾ ಗಾಂಧಿಯವರು ಪತ್ರದಲ್ಲಿ ಉಲ್ಲೇಖಿಸಿ ಅಖಿಲಭಾರತ ಕೋಟಾದಲ್ಲಿಯೂ ಒಬಿಸಿಗಳಿಗೆ ಮೀಸಲಾತಿ ನೀಡಬೇಕೆಂದು ಆಗ್ರಹ ಪಡಿಸಿದ್ದರು. ಇದಕ್ಕಾಗಿ ಸೋನಿಯಾಗಾಂಧಿಯವರಿಗೆ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.

    ನನ್ನ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಹತ್ತು ವರ್ಷ ಯುಪಿಎ ಸರ್ಕಾರವಿದ್ದಾಗ ಒಬಿಸಿ ಮೀಸಲು ಬಗ್ಗೆ ಸೋನಿಯಾಗಾಂಧಿ ಅವರಿಗೆ ಜ್ಞಾನ ಇರಲಿಲ್ಲವೇ? ಎಂದು ಪ್ರಶ್ನಿಸಿದೆ. ಬಿಜೆಪಿಯ ಬಡವರ, ರೈತರ, ದಲಿತರ, ಹಿಂದುಳಿದ ಜಾತಿಗಳ ವಿರೋಧಿ ಎನ್ನುವದು ನನಗೆ ಗೊತ್ತಿದೆ. ಆದರೆ ಈ ಪಕ್ಷ ಇಷ್ಟೊಂದು ಬೌದ್ದಿಕ ದಿವಾಳಿತನದಿಂದ ಬಳಲುತ್ತಿದೆ ಎಂದು ಗೊತ್ತಿರಲಿಲ್ಲ. ಇತ್ತೀಚಿನ ಇತಿಹಾಸವನ್ನಾದರೂ ಸರಿಯಾಗಿ ಓದಿಕೊಂಡು ಪ್ರತಿಕ್ರಿಯಿಸಿ ಎಂದು ಅವರಿಗೆ ವಿನಯಪೂರ್ವಕವಾಗಿ ಮನವಿ ಮಾಡುತ್ತೇನೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಜನ ಬಯಸಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ: ಅಭಿಷೇಕ್ ಅಂಬರೀಶ್

    ಬಿಜೆಪಿ ನಾಯಕರ ಗಮನಕ್ಕಾಗಿ ಕೆಲವು ವಾಸ್ತವಾಂಶಗಳನ್ನು ಮುಂದಿಡ ಬಯಸುತ್ತೇನೆ. ಮೊದಲನೇಯದಾಗಿ, ದೇಶದಲ್ಲಿಯೇ ಮೊದಲಬಾರಿ ಅತ್ಯಂತ ವೈಜ್ಞಾನಿಕವಾದ ಎಲ್.ಜಿ ಹಾವನೂರು ವರದಿಯ ಅನುಷ್ಠಾನದ ಮೂಲಕ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ತಂದುಕೊಟ್ಟಿರುವುದು ರಾಜ್ಯದ ದೇವರಾಜ್ ಅರಸು ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ.

    ಎರಡನೇಯದಾಗಿ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರವಿದ್ದಾಗ ಸಂವಿಧಾನಕ್ಕೆ 104ನೇ ತಿದ್ದುಪಡಿ ಮಾಡಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿರುವ ಐಐಟಿ ಮತ್ತು ಐಐಎಂ ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ಜಾರಿಗೆ ತರಲಾಯಿತು. ವಿ.ಪಿ ಸಿಂಗ್ ಅವರು ಮಂಡಲವರದಿ ಅನುಷ್ಠಾನದ ಮೂಲಕ ಹಿಂದುಳಿದ ಜಾತಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದ್ದರು. ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದ ಅರ್ಜುನ್ ಸಿಂಗ್ ಅವರು ಶಿಕ್ಷಣ ಕ್ಷೇತ್ರದಲ್ಲಿಯೂ ಹಿಂದುಳಿದ ಜಾತಿಗಳಿಗೆ ಸಂವಿಧಾನಕ್ಕೆ 104ನೇ ತಿದ್ದುಪಡಿಯ ಮೂಲಕ ಮೀಸಲಾತಿ ಕಲ್ಪಿಸಿದ್ದರು ಎಂದು ಮಾಹಿತಿ ಹಂಚಿಕೊಂಡರು.

    ಮನಮೋಹನ್ ಸಿಂಗ್ ಸರ್ಕಾರ, ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ನಿರ್ಧಾರ ಕೈಗೊಂಡಾಗ ಅದನ್ನು ವಿರೋಧಿಸಿದ್ದು ಬಿಜೆಪಿ. ಭಾರತೀಯ ಜನತಾ ಪಕ್ಷ ಸೈದ್ಧಾಂತಿಕವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಗೆ ವಿರುದ್ಧವಾಗಿರುವ ಪಕ್ಷ. ಆರ್‍ಎಸ್‍ಎಸ್‍ನ ಮೋಹನ್ ಭಾಗವತ ಅವರು ಬಹಿರಂಗವಾಗಿಯೇ ಮೀಸಲಾತಿ ವಿರೋಧಿಸಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ದಿವಂಗತ ನ್ಯಾಯಮೂರ್ತಿ ರಾಮಾ ಜೋಯಿಸ್ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ವಿರೋಧಿಸಿ ನ್ಯಾಯಾಲಯಕ್ಕೆ ಹೋಗಿದ್ದರು. ಹುಟ್ಟಿನಿಂದಲೇ ಮೀಸಲಾತಿ ವಿರೋಧಿಯಾದ ಬಿಜೆಪಿ ಈಗ ರಾಜಕೀಯ ಅನಿವಾರ್ಯತೆಗೆ ಸಿಕ್ಕಿ ಮೀಸಲಾತಿಯನ್ನು ಒಪ್ಪಿಕೊಂಡಿದೆ ಅಷ್ಟೆ. ನಮ್ಮದು ಬದ್ಧತೆ, ಬಿಜೆಪಿಯದ್ದು ಆತ್ಮವಂಚನೆಯ ನಾಟಕ ಎಂದು ವಾಗ್ದಾಳಿ ನಡೆಸಿದರು.

    ರಾಜ್ಯದ ವೈದ್ಯಕೀಯ ಕಾಲೇಜುಗಳಿಂದ ಶೇಕಡಾ 15ರಷ್ಟು ಸೀಟುಗಳನ್ನು ಅಖಿಲಭಾರತ ಕೋಟಾಕ್ಕಾಗಿ ಕಿತ್ತುಕೊಂಡಿರುವುದೇ ಮಹಾದ್ರೋಹ. ಈ ನಿರ್ಧಾರವನ್ನು ಕೈಗೊಂಡಿದ್ದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ. ನಮ್ಮ ಭೂಮಿ, ನಮ್ಮವರ ತೆರಿಗೆ ಹಣದಿಂದ ನೀಡಿರುವ ವಿನಾಯಿತಿ-ರಿಯಾಯಿತಿಯಿಂದ ನಿರ್ಮಾಣಗೊಂಡ ವೈದ್ಯಕೀಯ ಕಾಲೇಜುಗಳ ಸೀಟನ್ನು ಬೇರೆ ರಾಜ್ಯಗಳ ವಿದ್ಯಾರ್ಥಿಗಳಿಗೆ ಯಾಕೆ ಉಡುಗೊರೆಯಾಗಿ ನೀಡಬೇಕು? ಬಿಜೆಪಿ ನಾಯಕರು ಉತ್ತರಿಸಬೇಕಾಗುತ್ತದೆ ಎಂದರು.

    ಅಖಿಲಭಾರತ ಕೋಟಾಕ್ಕಾಗಿ ರಾಜ್ಯದ ಮೆಡಿಕಲ್ ಕಾಲೇಜುಗಳ ಸೀಟುಗಳನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುವುದನ್ನು ನಾನು ಮುಖ್ಯಮಂತ್ರಿಯಾಗಿರುವಾಗಲೇ ವಿರೋಧಿಸಿದ್ದೆ. ತಮಿಳುನಾಡು ಸರ್ಕಾರ ಇದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದೆ. ಅದರ ಮುಂದಿನ ವಿಚಾರಣೆ ಆಗಸ್ಟ್ 3ಕ್ಕೆ ಇದೆ. ನ್ಯಾಯಾಲಯದ ತೀರ್ಪಿನಿಂದ ಮುಖ ಉಳಿಸಿಕೊಳ್ಳಲು ನರೇಂದ್ರ ಮೋದಿ ಸರ್ಕಾರ ಅಖಿಲಭಾರತ ಕೋಟಾದಡಿಯಲ್ಲಿಯೂ ಒಬಿಸಿಗಳಿಗೆ ಶೇಕಡಾ 27ರಷ್ಟು ಮೀಸಲಾತಿಯನ್ನು ಘೋಷಿಸಿದೆ. ಹಿಂದುಳಿದ ಜಾತಿಯ ಬಗ್ಗೆ ಪ್ರಧಾನಿಗಳ ಈ ಕಾಳಜಿಯ ನಾಟಕಕ್ಕೆ ಮುಂಬರುವ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯೂ ಕಾರಣವಾಗಿರಬಹುದು. ಉಳಿದಂತೆ ಪ್ರಧಾನಿಯವರ ಈ ಘೋಷಣೆಯಲ್ಲಿ ಯಾವುದೇ ಬದ್ಧತೆ ಇಲ್ಲ ಎಂದು ಟೀಕೆ ವ್ಯಕ್ತಪಡಿಸಿದರು.

  • ಜೈನ್ ಮಿಷನ್ ಆಸ್ಪತ್ರೆ ಉದ್ಘಾಟಿಸಿದ ಸಚಿವ ಸುಧಾಕರ್

    ಜೈನ್ ಮಿಷನ್ ಆಸ್ಪತ್ರೆ ಉದ್ಘಾಟಿಸಿದ ಸಚಿವ ಸುಧಾಕರ್

    – 1 ವರ್ಷದೊಳಗೆ ಸರ್ಕಾರಿ ಮೆಡಿಕಲ್ ಕಾಲೇಜು ಲೋಕಾರ್ಪಣೆ

    ಚಿಕ್ಕಬಳ್ಳಾಪುರ: ನಗರದ ಬೆಂಗಳೂರು ಮುಖ್ಯ ರಸ್ತೆಯ ಜಡಲತಿಮ್ಮನಹಳ್ಳಿ ಕ್ರಾಸ್ ಬಳಿ ನಿರ್ಮಾಣಗೊಂಡಿರುವ ನೂತನ ಜೈನ್ ಮಿಷನ್ ಆಸ್ಪತ್ರೆಯನ್ನ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಲೋಕಾರ್ಪಣೆ ಮಾಡಿದರು.

    ಜೈನ್ ಮಿಷನ್ ಸಂಸ್ಥೆಯಿಂದ ನೂತನ ಅತ್ಯಾಧುನಿಕ ಸೌಲಭ್ಯಗಳುಳ್ಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ನೂತನ ಆಸ್ಪತ್ರೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಸುಧಾಕರ್‍ರವರು, ಜಿಲ್ಲೆಗೆ ಇಂತಹದೊಂದು ಆಸ್ಪತ್ರೆ ಅತ್ಯವಶ್ಯಕವಾಗಿದ್ದು, ಜೈನ್ ಮಿಷನ್ ವತಿಯಿಂದ ಆರಂಭವಾಗಿರುವ ಈ ಆಸ್ಪತ್ರೆಯನ್ನ ಜಿಲ್ಲೆಯ ಜನತೆ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

    ಜೈನ್ ಸಮುದಾಯದವರು ಸೇವಾ ಮನೋಭಾವದವರು ಆ ಸಮುದಾಯದ ಬಗ್ಗೆ ನನಗೆ ಹೆಮ್ಮೆ ಇದೆ. ಚಿಕ್ಕಬಳ್ಳಾಪುರದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಿ ಜನರ ಸೇವೆ ಮಾಡಲು ಮುಂದಾಗಿರುವ ಜೈನ್ ಮಿಷನ್ ಸೇವೆ ಶ್ಲಾಘನೀಯವಾದದ್ದು. ಲಾಭ ರಹಿತ ಉದ್ದೇಶದಿಂದ ಈ ಆಸ್ಪತ್ರೆ ಆರಂಭವಾಗಿದೆ. ಈ ಆಸ್ಪತ್ರೆಗೆ ಬೇಕಾದ ಎಲ್ಲ ಸಹಕಾರವನ್ನ ತಾವು ನೀಡುವುದಾಗಿ ತಿಳಿಸಿದರು.

    ಆಸ್ಪತ್ರೆ ಶೇ. 90 ರಷ್ಟು ನಿರ್ಮಾಣ ಆಗಿದ್ದಾಗಲೇ ಇಡೀ ಆಸ್ಪತ್ರೆಯನ್ನ ಕೋವಿಡ್ ಆಸ್ಪತ್ರೆ ಮಾಡಿ ಸೋಂಕಿತರಿಗೆ ಚಿಕಿತ್ಸೆ ಕೊಡಲು ಬಳಸಿಕೊಳ್ಳಿ ಅಂತ ಆಸ್ಪತ್ರೆಯ ಮುಖ್ಯಸ್ಥರಾದ ನರಪತ್ ಸೋಲಂಕಿಯವರು, ಉತ್ತಮ್ ಚಂದ್‍ರವರು ಉದಾರತಾ ಭಾವದಿಂದ ಹೇಳಿದ್ದರು. ಕೋವಿಡ್ ಆಸ್ಪತ್ರೆ ಮಾಡಲು ಸಕಲ ಸಿದ್ದತೆಗಳನ್ನ ಸಹ ಜಿಲ್ಲಾಡಳಿತ ಮಾಡಿಕೊಂಡಿತ್ತು. ಆದರೆ ಈಗ ಕೋವಿಡ್ ಕಡಿಮೆ ಆದ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆ ಆರಂಭ ಮಾಡುವುದು ಅವಶ್ಯಕವಾಗಲಿಲ್ಲ. ಹೀಗಾಗಿ ಸದ್ಯ ಜೈನ್ ಮಿಷನ್ ಸಂಸ್ಥೆಯವರೇ ಜನರಲ್ ಆಸ್ಪತ್ರೆ ಆರಂಭಿಸಿದ್ದು, ಜನತೆಗೆ ಉತ್ತಮ ಚಿಕಿತ್ಸೆ ಸಿಗುವಂತಗಾಲಿ ಎಂದು ಸಚಿವರು ಆಶಿಸಿದರು. ಇದನ್ನೂ ಓದಿ: ಲಾಕ್‍ಡೌನ್ ವೇಳೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಶೇಷ ಜೋಡಿ

    ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಕಾರ್ಯ ಸಹ ಭರದಿಂದ ಸಾಗುತ್ತಿದ್ದು 1 ವರ್ಷದೊಳಗೆ ಕಾಲೇಜು ಲೋಕಾರ್ಪಣೆ ಮಾಡುವುದಾಗಿ ತಿಳಿಸಿದರು.

  • ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್ – 7 ಜನ ವಿದ್ಯಾರ್ಥಿಗಳು ಹಾಸ್ಟೆಲ್‍ನಿಂದ ಹೊರಕ್ಕೆ

    ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್ – 7 ಜನ ವಿದ್ಯಾರ್ಥಿಗಳು ಹಾಸ್ಟೆಲ್‍ನಿಂದ ಹೊರಕ್ಕೆ

    ಚಾಮರಾಜನಗರ: ಜಿಲ್ಲೆಯ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿರುವ ರ‍್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರ‍್ಯಾಗಿಂಗ್ ನಡೆಸಿದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ಕೊಟ್ಟು ಪ್ರಕರಣಕ್ಕೆ ತೆರೆ ಎಳೆಯಲು ಆಡಳಿತ ಮಂಡಳಿ ನಿರ್ಧರಿಸಿದೆ.

    ರ‍್ಯಾಗಿಂಗ್ ನಡೆದಿರುವ ಪ್ರಕರಣ ಬೆಳಕಿಗೆ ಬಂದ ನಂತರ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಸಾರ ಥಾಮಸ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಕಾಲೇಜಿಗೆ ಭೇಟಿ ನೀಡಿ ರ್ಯಾಗಿಂಗ್ ಪ್ರಕರಣದ ಬಗ್ಗೆ ಸರ್ಕಾರಿ ಕಾಲೇಜಿನ ಡೀನ್ ಡಾ.ಸಂಜೀವ್ ಹಾಗೂ ರ‍್ಯಾಗಿಂಗ್ ವಿರೋಧಿ ಸಮಿತಿಯ ಸದಸ್ಯರೊಡನೆ ಸಭೆ ನಡೆಸಿದರು.

    ಈ ನಡುವೆ ರ‍್ಯಾಗಿಂಗ್ ಗೆ ಒಳಗಾದ ತುಮಕೂರು ಮೂಲದ ವಿದ್ಯಾರ್ಥಿಯ ಪೋಷಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರವೊಂದನ್ನು ಇ -ಮೇಲ್ ಮಾಡಿ ರ‍್ಯಾಗಿಂಗ್ ಮಾಡಿರುವ ವಿದ್ಯಾರ್ಥಿಗಳು ನಮ್ಮೂರಿನವರೇ ಆಗಿದ್ದು, ಯಾವುದೇ ಕ್ರಮ ಕೈಗೊಳ್ಳುವುದು ಬೇಡ, ಈ ಪ್ರಕರಣವನ್ನು ಇಲ್ಲಿಗೆ ಕೊನೆಗೊಳಿಸಿ ಎಂದು ಮನವಿ ಮಾಡಿದ್ದಾರೆ. ಹಾಗಾಗಿ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಪ್ರಕರಣವನ್ನು ಇಲ್ಲಿಗೆ ಮುಗಿಸಲಾಗುವುದು ಎಂದು ಸರ್ಕಾರಿ ಮೆಡಿಕಲ್ ಕಾಲೇಜಿನ ಡೀನ್ ಡಾ.ಸಂಜೀವ್ ತಿಳಿಸಿದ್ದಾರೆ.

    ನಮ್ಮ ಕಾಲೇಜಿನಲ್ಲಿ ಎಂಬಿಬಿಎಸ್, ಬಿಎಸ್‍ಸಿ ನರ್ಸಿಂಗ್ ಹಾಗೂ ಅಲೈಡ್ ಸೈನ್ಸ್ ಸೇರಿದಂತೆ ಒಟ್ಟು 1,100ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಇವರಿಗೆಲ್ಲ ರ‍್ಯಾಗಿಂಗ್ ಪಿಡುಗಿನ ಆಗು-ಹೋಗುಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ರ‍್ಯಾಗಿಂಗ್ ಕಾಯ್ದೆ ಬಗ್ಗೆ ವಿಶೇಷ ತರಗತಿಗಳ ಮೂಲಕ ತಿಳುವಳಿಕೆ ನೀಡಲು ನಿರ್ಧರಿಸಲಾಗಿದೆ. ಪ್ರತಿ ದಿನ ಒಂದು ಗಂಟೆಯಂತೆ ದಿನ ಬಿಟ್ಟು ದಿನ ಈ ವಿಶೇಷ ತರಗತಿಗಳನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

    ರ‍್ಯಾಗಿಂಗ್ ನಡೆಸಿರುವ ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿಲ್ಲ. ಆದರೆ ಈ ಪ್ರಕರಣದ ಬಗ್ಗೆ ಅಂತಿಮ ತೀರ್ಮಾನವಾಗುವವರೆಗೆ ರ‍್ಯಾಗಿಂಗ್ ನಡೆಸಿದ ವಿದ್ಯಾರ್ಥಿಗಳು ಹಾಸ್ಟೆಲ್ ಕಟ್ಟಡದಿಂದ ಹೊರಗಿರಬೇಕು ಸೂಚಿಸಲಾಗಿದೆ.

  • ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

    ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

    ಬೀದರ್: ಬ್ರೀಮ್ಸ್ ಮೇಡಿಕಲ್ ಕಾಲೇಜು ವಿದ್ಯಾರ್ಥಿ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬ್ರೀಮ್ಸ್ ಮೇಡಿಕಲ್ ಕಾಲೇಜಿನ ಪಿಜಿ ಹಾಸ್ಟೆಲ್ ನಲ್ಲಿ ನಡೆದಿದೆ.

    ವಿನೂತ್ ಕಾಂಬಳೆ(24) ಆತ್ಮಹತ್ಯೆಗೆ ಶರಣಾದ ಮೇಡಿಕಲ್ ವಿದ್ಯಾರ್ಥಿಯಾಗಿದ್ದು, ಆತ್ಮಹತ್ಯೆ ಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿ ಇಂದು ಬೆಳಗಿನ ಜಾವ ನೇಣಿಗೆ ಶರಣಾಗಿದ್ದಾನೆ.

    ಮೂಲತಃ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ವಿದ್ಯಾರ್ಥಿಯಾಗಿದ್ದು, ಸ್ಥಳಕ್ಕೆ ಬಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.