Tag: ಮೆಡಿಕಲ್ ಟೆಸ್ಟ್

  • ಕಾರವಾರ | ಮೆಡಿಕಲ್‌ ಟೆಸ್ಟ್‌ಗೆ ಕರೆತಂದಿದ್ದ ಆರೋಪಿ ಪರಾರಿ

    ಕಾರವಾರ | ಮೆಡಿಕಲ್‌ ಟೆಸ್ಟ್‌ಗೆ ಕರೆತಂದಿದ್ದ ಆರೋಪಿ ಪರಾರಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದ ವ್ಯಕ್ತಿಯು ಕುಮಟಾ ಪೊಲೀಸರು ನ್ಯಾಯಾಲಯಕ್ಕೆ ಹಾಜುರುಪಡಿಸಲು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವೇಳೆ ಪೊಲೀಸರನ್ನು ದೂಡಿ ಪರಾರಿಯಾಗಿದ್ದಾನೆ.

    ಅಂಗಡಿಯೊಂದರ ಎಕ್ಸಿಟ್ ಬ್ಯಾಟರಿ ಕಳ್ಳತನ ಹಾಗೂ ಕಾರುಗಳ ಕಳ್ಳತನದಲ್ಲಿ ಆರೋಪಿಯಾಗಿರುವ ಭಟ್ಕಳದ ಫಾಸಾನ್ ಪರಾರಿಯಾದವನಾಗಿದ್ದು, ಹಲವು ಕಳ್ಳತನ ಪ್ರಕರಣದಲ್ಲಿ ಈತನನ್ನು ಬಂಧಿಸಿ ಕುಮಟಾ ಪೊಲೀಸರು ಭಟ್ಕಳದಿಂದ ಕುಮಟಾಕ್ಕೆ ವಿಚಾರಣೆಗೆ ಕರೆತಂದಿದ್ದರು.

    ನ್ಯಾಯಾಲಯಕ್ಕೆ ಹಾಜುರುಪಡಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸುವ ಸಲವಾಗಿ ಈತನ ವೈದ್ಯಕೀಯ ಪರೀಕ್ಷೆಗಾಗಿ ಕುಮಟಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈವೇಳೆ ಇದನ್ನ ಅವಕಾಶ ಮಾಡಿಕೊಂಡ ಫಾಸಾನ್ ಪೂಲೀಸರನ್ನು ದೂಡಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಈತನ ಹುಡುಕಾಟ ನಡೆಸುತಿದ್ದಾರೆ.

    ಇನ್ನು ಈತ ಮಧ್ಯಮ ಗಾತ್ರದ ಗಡ್ಡದಾರಿ ವ್ಯಕ್ತಿಯಾಗಿದ್ದು 5.4 ಅಡಿ ಎತ್ತರವಿದ್ದು ತಪ್ಪಿಸಿಕೊಳ್ಳುವಾಗ ಕಪ್ಪು ಅಂಗಿ ಹಾಕಿಕೊಂಡಿದ್ದನು.ಸದ್ಯ ಈತನ ಹುಡುಕಾಟ ನಡೆಯುತಿದ್ದಾರೆ.

  • ಅತ್ಯಾಚಾರಿ ಆರೋಪಿ ಪ್ರಜ್ವಲ್‍ಗೆ ಮೆಡಿಕಲ್ ಟೆಸ್ಟ್

    ಅತ್ಯಾಚಾರಿ ಆರೋಪಿ ಪ್ರಜ್ವಲ್‍ಗೆ ಮೆಡಿಕಲ್ ಟೆಸ್ಟ್

    ಬೆಂಗಳೂರು: ಅತ್ಯಾಚಾರಿ ಆರೋಪಿ ಪ್ರಜ್ವಲ್ ರೇವಣ್ಣಗೆ (Prajwal Revanna) ಇಂದು ಮೆಡಿಕಲ್ ಟೆಸ್ಟ್ ನಡೆಸಲಾಯಿತು.

    ಎಸ್‍ಐಟಿ ಅಧಿಕಾರಿಗಳು ಅಂಬುಲೆನ್ಸ್ ನಲ್ಲಿ ಮೆಡಿಕಲ್ ಟೆಸ್ಟ್ ಗೆ (Medical Test) ಕರೆದೊಯ್ದರು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ ಜೊತೆಗೆ ವಿಶೇಷ ಮೆಡಿಕಲ್ ಟೆಸ್ಟ್ ಗೆ ಪ್ರಜ್ವಲ್ ರೇವಣ್ಣ ಅವರನ್ನು ಒಳಪಡಿಸಲಾಯಿತು.

    ಕೋರ್ಟಿಗೆ ಸಬ್ಮಿಟ್ ಮಾಡಲು ಮೂರ್ನಾಲ್ಕು ರೀತಿಯ ಟೆಸ್ಟ್ ಗಳಿಗೆ ಪೊಲೀಸರು ರಿಕ್ವೆಸ್ಟ್ ಮಾಡಿದ್ದರು. ಪೊಲೀಸರು ರಿಕ್ವೆಸ್ಟ್ ಕೊಟ್ಟಿರುವ ಟೆಸ್ಟ್ ಗಳನ್ನು ವೈದ್ಯರು ಮಾಡಿದ್ದಾರೆ. ಮೆಡಿಕಲ್ ಕಾಲೇಜಿನ ಡೀನ್, ಸೂಪರಿಂಡೆಂಟ್ ಸಮ್ಮುಖದಲ್ಲಿ ಈ ಟೆಸ್ಟ್ ನಡೆಸಲಾಯಿತು.

    ಇದೇ ವೇಳೆ ಅತ್ಯಾಚಾರಕ್ಕೆ ಸಂಬಂಧಿಸಿದ ಟೆಸ್ಟ್ ಬಗ್ಗೆಯೂ ಪೊಲೀಸರು ಮನವಿ ಮಾಡಿಕೊಂಡರು. ಹೀಗಾಗಿ ಪೊಲೀಸರ ಮನವಿ ಮೇರೆಗೆ ವೈದ್ಯರು ಕೆಲವು ಸ್ಯಾಂಪಲ್‍ಗಳನ್ನು ಸಂಗ್ರಹಿಸಿದ್ದಾರೆ. ಈ ಮೂಲಕ ಸ್ಥಳ ಮಹಜರಿಗೂ ಮುನ್ನ ವಿವಿಧ ಟೆಸ್ಟ್ ಗಳನ್ನ ಮಾಡಿ ಸಾಕ್ಷ್ಯ ಸಂಗ್ರಹಿಸಲು ಎಸ್‍ಐಟಿ ಮುಂದಾಗಿದೆ.

    ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವೈದ್ಯರು, ಕೋರ್ಟ್‍ಗೆ ನೀಡಬೇಕಾಗಿರುವ ಮೂರ್ನಾಲ್ಕು ರೀತಿಯ ಟೆಸ್ಟ್‍ಗಳನ್ನು ಮಾಡಿದ್ದೇವೆ. ಈ ಟೆಸ್ಟ್ ನ ರಿಪೋರ್ಟ್‍ಗಳನ್ನು ಎಸ್‍ಐಟಿ ಅಧಿಕಾರಿಗಳಿಗೆ ಕೊಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

  • ಇಂದು ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ – ರೇವಣ್ಣ ಕುಟುಂಬಕ್ಕಿಂದು ಬಿಗ್‌ ಡೇ; ಏಕೆ ಗೊತ್ತೇ?

    ಇಂದು ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ – ರೇವಣ್ಣ ಕುಟುಂಬಕ್ಕಿಂದು ಬಿಗ್‌ ಡೇ; ಏಕೆ ಗೊತ್ತೇ?

    ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ಶುಕ್ರವಾರ) ನಡೆಯಲಿದೆ.

    ಲೈಂಗಿಕ ದೌರ್ಜನ್ಯ, ಅತ್ಯಾಚಾರ ಸೇರಿ ಎಫ್‌ಐಆರ್‌ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ವಕೀಲರಾದ ಅರುಣ್ ಮೂಲಕ ಮೇ 29ರಂದು ಜನಪ್ರತಿನಿಧಿಗಳ ಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮೇ 31ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

    ಭವಾನಿ ರೇವಣ್ಣ ಬೇಲ್‌ ಭವಿಷ್ಯವೂ ಇಂದೇ:
    ಅಲ್ಲದೇ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರ ಪತ್ನಿ ಭವಾನಿ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ತೀರ್ಪು ಕೂಡ ಶುಕ್ರವಾರವೇ ಹೊರಬೀಳಲಿದೆ. ಇದರಿಂದಾಗಿ ಶುಕ್ರವಾರವು ಎಚ್‌.ಡಿ.ರೇವಣ್ಣ ಕುಟುಂಬಕ್ಕೆ ಬಿಗ್‌ ಡೇ ಆಗಿದೆ. ಇದನ್ನೂ ಓದಿ: ಕೊನೆಗೂ ಪ್ರಜ್ವಲ್‌ ರೇವಣ್ಣ ಬಂಧನ: ಎಸ್‌ಐಟಿ ಮುಂದಿನ ತನಿಖೆ ಪ್ರಕ್ರಿಯೆ ಏನು?

    ಮೆಡಿಕಲ್‌ ಟೆಸ್ಟ್‌ ಬಳಿಕ ಕೋರ್ಟ್‌ ಮುಂದೆ ಹಾಜರ್‌:
    ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ವಾಸ್ತವ್ಯ ಹೂಡಿರುವ ಪ್ರಜ್ವಲ್‌ ರೇವಣ್ಣ ಅವರ ವಿಚಾರಣೆಯನ್ನು ಬೆಳಗ್ಗೆ 8 ಗಂಟೆಯಿಂದ ಎಸ್‌ಐಟಿ ಅಧಿಕಾರಿಗಳು ಆರಂಭಿಸಲಿದ್ದಾರೆ. ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್‌ಗೆ ಒಳಪಡಿಸಲಿದ್ದಾರೆ. ಈಗಾಗಲೇ ಬೌರಿಂಗ್‌ ಆಸ್ಪತ್ರೆ ಬಳಿಯೂ ಬ್ಯಾರಿಕೇಡ್‌ಗಳನ್ನ ಅಳವಡಿಸಿದ್ದು, ಬಿಗಿ ಪೊಲೀಸ್‌ ಬಂದೋ ಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಮೆಡಿಕಲ್‌ ಟೆಸ್ಟ್‌ ಮುಗಿದ ಬಳಿಕ ಕೋರ್ಟ್‌ ಮುಂದೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

    ವಿದೇಶಕ್ಕೆ ತೆರಳಿದ್ದ ಪ್ರಜ್ವಲ್ ರೇವಣ್ಣರನ್ನ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ತಡರಾತ್ರಿ ಬಂಧಿಸಲಾಗಿದೆ. ದೇವನಹಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಆಗಮಿಸುತ್ತಲೇ ಇಮಿಗ್ರೇಷನ್ ಅಧಿಕಾರಿಗಳು ವಿಚಾರಣೆ ನಡೆಸಿ, ಸಂಸದರನ್ನು ಎಸ್‌ಐಟಿ ಅಧಿಕಾರಿಗಳಿಗೆ ವಹಿಸಿದ್ದಾರೆ. ಬಳಿಕ ಎಸ್‌ಐಟಿ ಕಚೇರಿಗೆ ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು ರಾತ್ರಿ ತಂದೆ ಹೆಚ್.ಡಿ ರೇವಣ್ಣ ಅವರಿಗೆ ನೀಡಿದ್ದ ಕೊಠಡಿಯಲ್ಲೇ ಪ್ರಜ್ವಲ್ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದರು. ಎಸ್‌ಐಟಿ ಅಧಿಕಾರಿಗಳು, ರೇವಣ್ಣ ಅವರಿಗೆ ನೀಡಿದ್ದ ಹಾಸಿಗೆಯನ್ನೇ ವಿತರಣೆ ಮಾಡಿದ್ದರು. ಕಚೇರಿ ಸುತ್ತಲೂ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಅರೆಸ್ಟ್‌ ಬಳಿಕ SIT ಕಚೇರಿಗೆ ಪ್ರಜ್ವಲ್‌ ರೇವಣ್ಣ; ಏರ್‌ಪೋರ್ಟ್‌ನಲ್ಲಿ ಏನೆಲ್ಲಾ ಬೆಳವಣಿಗೆ ಆಯ್ತು? – ಮುಂದೇನು ಕ್ರಮ?

  • ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಬೆಂಗಳೂರು: ಮುರಘಾ ಮಠದ ಶ್ರೀಗಳಿಗೆ ಚಿಕಿತ್ಸೆ ನಿಡಿದ್ದ ವೈದ್ಯಾಧಿಕಾರಿ ಸೇರಿ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

    ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಂಗನಾಥ್, ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್, ಕಾರಾಗೃಹ ಅಧಿಕಾರಿ ಎಂ.ಎಂ ಮರಕಟ್ಟಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಈ ಮೂವರು ಜಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಕರ್ತವ್ಯಲೋಪ ಎಸಗಿದ್ದಾರೆ, ಪ್ರಭಾವಿ ಆರೋಪಿಯ ರಕ್ಷಣೆ ಮಾಡುವ ಹುನ್ನಾರವನ್ನೂ ನಡೆಸಿದ್ದಾರೆ. ಹಾಗಾಗಿ ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅರ್ಶ್‌ದೀಪ್‌ ಟೀಕಿಸುವ ಬದಲು ಧೈರ್ಯ ತುಂಬಿ – ಮುಂದಿನ ಭಾನುವಾರಕ್ಕೆ ಸಜ್ಜಾಗಿ: ಮಾಜಿ ಆಟಗಾರರ ಸಲಹೆ

    ದೂರಿನಲ್ಲಿ ಏನಿದೆ?
    ಚಿತ್ರದುರ್ಗ ಜಿಲ್ಲೆಯ ಮುರಘಾ ಮಠದಲ್ಲಿನ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೊದಲನೇ ಆರೋಪಿ ನ್ಯಾಯಾಂಗ ಬಂಧನಲ್ಲಿದ್ದರು. ಈ ವೇಳೆ ತುಂಬಾ ಎದೆ ನೋವಿದೆ ಎಂದ ತಕ್ಷಣ ನ್ಯಾಯಾಲಯದ ಗಮನಕ್ಕೂ ತರದೆ ಚಿತ್ರದುರ್ಗ ಜಿಲ್ಲಾಸತ್ರೆಗೆ ಮುಂಜಾನೆ ದಾಖಲಿಸಿ ಚಿಕಿತ್ಸೆ ನಿಡಲು ಮುಂದಾಗಿದ್ದರು. ಚಿಕಿತ್ಸೆ ನೀಡುವ ಹಂತದಲ್ಲಿ ಅಲ್ಲಿನ ವೈದ್ಯಾಧಿಕಾರಿ ಇವರಿಗೆ ತೀವ್ರ ತರವಾದ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಸುಳ್ಳು ಹೇಳಿ, ದಾಖಲೆಗಳನ್ನೂ ಸೃಷ್ಟಿಸಿ ದಾವಣಗೆರೆಯ ಖಾಸಗಿ ಹೃದಯ ತಜ್ಞರನ್ನು ಕರೆಸಿ ಆರೋಪಿಗೆ ತೀವ್ರತರವಾದ ಎದೆ ನೋವಿದೆ, ಹೃದಯಕ್ಕೆ ಘಾಸಿಯಾಗಿದೆ. ಈ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲು ಹೆಚ್ಚಿನ ವೈದ್ಯಕೀಯ ಸೌಲಭ್ಯವಿಲ್ಲ, ಇವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆ ನೀಡಬೇಕೆಂದು ಹೇಳಿದ್ದಾರೆ. ತಕ್ಷಣ ಆರೋಪಿಯನ್ನು ಐಸಿಯುನಲ್ಲಿ ದಾಖಲಿಸಿ, ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಹುನ್ನಾರವನ್ನೂ ನಡೆಸಿದ್ದರು.

    ಪ್ರಭಾವಿ ಸ್ಥಾನದಲ್ಲಿರುವ ಆರೋಪಿಯ ರಕ್ಷಣೆಗೆ ನಿಂತ ಈ ಸರ್ಕಾರದ ಅಧಿಕಾರಿಗಳಾದ ಜಿಲ್ಲಾ ಕಾರಾಗೃಹ ಅಧೀಕ್ಷಕಿ ಎಂ.ಎಂ ಮರಕಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಂಗನಾಥ್, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್ ಕರ್ತವ್ಯ ಲೋಪವೆಸಗಿ ಆರೋಪಿಯ ಜೊತೆ ಶಾಮೀಲಾಗಿ ಬೃಹತ್ ನಾಟಕ ಆಡಿರುತ್ತಾರೆ. ಇಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಯಾರನ್ನೂ ವಿಚಾರಣೆ ಮಾಡ್ಬೇಡಿ: ಮಡಿವಾಳೇಶ್ವರ ಸ್ವಾಮೀಜಿ ಡೆತ್‍ನೋಟ್

    ಮುರುಘಾ ಶ್ರೀ ಜೈಲಿಗೆ:
    ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಶ್ರೀ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭಾನುವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾ ಕೋಮಲಾ ವಿಚಾರಣೆ ಮುಗಿತಾ ಎಂದು ಪ್ರಶ್ನಿಸಿದರು. ಈ ವೇಳೆ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಳ್ಳದ ಕಾರಣ ನ್ಯಾಯಾಧೀಶರು ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀಗಳ ವಿರುದ್ಧ ಆರೋಪ- ಇಂದು ಜಡ್ಜ್ ಮುಂದೆ ಸಂತ್ರಸ್ತೆಯರ ಹೇಳಿಕೆ ದಾಖಲು

    ಮುರುಘಾ ಶ್ರೀಗಳ ವಿರುದ್ಧ ಆರೋಪ- ಇಂದು ಜಡ್ಜ್ ಮುಂದೆ ಸಂತ್ರಸ್ತೆಯರ ಹೇಳಿಕೆ ದಾಖಲು

    ಚಿತ್ರದುರ್ಗ: ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಮುರುಘಾ ಮಠಕ್ಕೆ ಈಗ ಕಂಟಕ ಶುರವಾಗಿದೆ. ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮುರುಘಾ ಶ್ರೀಗಳ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ. ಸಂತ್ರಸ್ತ ಬಾಲಕಿಯರ ಬಳಿ ತನಿಖಾಧಿಕಾರಿಗಳು ವಿಚಾರಣೆ ನಡೆಸಿ ಮೆಡಿಕಲ್ ಟೆಸ್ಟ್ ಗೆ ಒಳಪಡಿಸಿದ್ದಾರೆ. ಇದೀಗ ನ್ಯಾಯಾಧೀಶರ ಮುಂದೆ ಸಂತ್ರಸ್ತ ಬಾಲಕಿಯರನ್ನು ಹಾಜರುಪಡಿಸುವುದು ಒಂದೇ ಬಾಕಿ ಇದೆ.

    ಮಠದಲ್ಲಿ ಹತ್ತನೇ ತರಗತಿ ಓದುತ್ತಿದ್ದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಅನ್ನೋ ಆರೋಪ ಶ್ರೀಗಳಿಗೆ ಕಂಟಕವಾಗಿದೆ. ತನಿಖಾಧಿಕಾರಿ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ಒಡನಾಡಿ ಸಂಸ್ಥೆಯ ಇಬ್ಬರು ಸದಸ್ಯರು, ಸಿಡಬ್ಲ್ಯೂಸಿ ಕಮಿಟಿಯ ಅಧ್ಯಕ್ಷ ಪ್ರಭಾಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗು ಮಹಿಳಾ ಪೊಲೀಸ್ ಸಿಬ್ಬಂದಿ ಸಮ್ಮುಖದಲ್ಲಿ ಸಂತ್ರಸ್ತೆಯರ ವಿಚಾರಣೆ ನಡೆಸಲಾಯ್ತು. ಸತತ ಐದು ಗಂಟೆಗಳ ಕಾಲ ವಿವರಣೆ ಪಡೆದಿದ್ದು, ಮೈಸೂರಿನಲ್ಲಿ ಹೇಳಿದ ಹೇಳಿಕೆಯನ್ನೇ ಪುನರುಚ್ಚರಿಸಿದ್ದಾರೆ. ಬಳಿಕ ಜಿಲ್ಲಾಸ್ಪತ್ರೆಯ ಡಾ.ಉಮಾರಿಂದ 2 ಗಂಟೆಗಳ ಕಾಲ ಬಾಲಕಿಯರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಯ್ತು. ಸದ್ಯ ಬಾಲಮಂದಿರದಲ್ಲಿ ಸಂತ್ರಸ್ತ ಬಾಲಕಿಯರು ಇದ್ದಾರೆ.

    ಸಿಡಬ್ಲ್ಯೂಸಿ ಕೌನ್ಸಿಲಿಂಗ್ ನಂತರ ಬಾಲಕಿಯರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇತ್ತು. ಆದರೆ ನಿನ್ನೆ ಭಾನುವಾರವಾಗಿದ್ದರಿಂದ ಇಂದು ಮಹಿಳಾ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ದತೆ ನಡೆಸಿದ್ದಾರೆ. ಮೈಸೂರಿನಲ್ಲಿ ಹೇಳಿದನ್ನೇ ನ್ಯಾಯಾಧೀಶರ ಮುಂದೆ ಹೇಳಿದರೆ, ಮುರುಘಾ ಶ್ರೀಗಳು ಪೋಕ್ಸೋ ಪ್ರಕರಣದ ಬಲೆಗೆ ಬೀಳಲಿದ್ದು, ವಿಚಾರಣೆ ಎದುರಿಸಲಿದ್ದಾರೆ. ಇದನ್ನೂ ಓದಿ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ- ಸಂತ್ರಸ್ತೆಯರ ಹೇಳಿಕೆ ಪಡೆದ ತನಿಖಾ ತಂಡ

    ಏನೇ ಆಗಲಿ ನ್ಯಾಯಾಧೀಶರ ಮುಂದೆ ಸಂತ್ರಸ್ತ ಬಾಲಕಿಯರ ಹೇಳಿಕೆ ಶ್ರೀಗಳ ಭವಿಷ್ಯ ನಿರ್ಧಾರ ಮಾಡಲಿದೆ. ಇಂದು ಬೆಳಗ್ಗೆಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಎಲ್ಲಾ ರೀತಿಯ ಸಿದ್ಧತೆಯನ್ನು ತನಿಖಾ ಅಧಿಕಾರಿಗಳು ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿಡಿ ಲೇಡಿಗೆ ಮೆಂಟಲ್ ಮೆಡಿಕಲ್ ಟೆಸ್ಟ್ ಆಗಬೇಕು: ನಾರಾಯಣ ಗೌಡ

    ಸಿಡಿ ಲೇಡಿಗೆ ಮೆಂಟಲ್ ಮೆಡಿಕಲ್ ಟೆಸ್ಟ್ ಆಗಬೇಕು: ನಾರಾಯಣ ಗೌಡ

    – ಸತ್ಯಾಂಶ ಇದ್ರೆ ನಮ್ಮ ಸಿಡಿನೂ ಬಿಡುಗಡೆ ಮಾಡ್ಲಿ

    ಚಿಕ್ಕಬಳ್ಳಾಪುರ: ಸಿಡಿ ಲೇಡಿಗೆ ಮೆಂಟಲ್ ಮೆಡಿಕಲ್ ಟೆಸ್ಟ್ ಆಗಬೇಕು ಎಂದು ಸಚಿವ ನಾರಾಯಾಣಗೌಡ ಹೇಳಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲೆಗೆ ಆಗಮಿಸಿದ್ದ ಸಚಿವರು ಅಧಿಕಾರಿಗಳ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ನ್ಯಾಯಾಧೀಶರ ಮುಂದೆ ಹಾಜರಾದ ಸಿಡಿ ಲೇಡಿ ಹೇಳಿಕೆ ಏನು ಅನ್ನೋದು ಯಾರಿಗೂ ಗೊತ್ತಿಲ್ಲ. ಹೆಣ್ಣು ಮಗಳ ಹೇಳಿಕೆ ಹೊರಗೆ ಬಂದಿಲ್ಲ. ಆ ಹೆಣ್ಣು ಮಗಳು ಕನ್ಫ್ಯೂಸ್ ನಲ್ಲಿದ್ದಾಳೆ. ಒಂದೊಂದು ದಿನ ಒಂದೊಂದು ತರ ಹೇಳಿಕೆ ಕೊಡ್ತಿದ್ದಾಳೆ. ಹಾಗಾಗಿ ಆಕೆಗೆ ಕೂಲ್ ಅಗಿ ಮೆಂಟಲ್ ಚೆಕ್ ಅಪ್ ಮಾಡಿಸಬೇಕಿದೆ ಎಂದು ಹೇಳಿದ್ದಾರೆ.

    ಮೆಡಿಕಲ್ ಚೆಕ್ ಅಪ್ ಅದ ಮೇಲೆ ಸತ್ಯಾಂಶ ಗೊತ್ತಾಗಲಿದೆ. ಈಗಾಗಲೇ ಎಫ್‍ಐಆರ್ ದಾಖಲಾಗಿದ್ರೂ ನಾಳೆ ಹೇಳಿಕೆ ಬದಲಾಗಬಹುದು. ಆಕೆ ಮೊದಲು ಮೆಂಟಲಿ ಫಿಟ್ ಇದ್ದಾಳಾ ಇಲ್ವಾ ಅನ್ನೋದು ಸಹ ಮುಖ್ಯ ತಾನೆ ಅಂತ ಹೇಳಿದರು.

    ಇದಕ್ಕೂ ಮುನ್ನ ಮಾತನಾಡಿದ್ದ ಸಚಿವರು, ಸಿ.ಡಿ ವಿಚಾರದಲ್ಲಿ ಯಾರ್ಯಾರು ಏನೇನು ಮಾಡಿದ್ದಾರೋ ಅದರಷ್ಟೇ ಊಟ ಮಾಡ್ತಾರೆ. ಉಪಚುನಾವಣೆ ಮೇಲೆ ಸಿಡಿ ಪ್ರಕರಣದ ಪ್ರಭಾವ ಬೀರೋಲ್ಲ. ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

    ಇದೇ ವೇಳೆ ಆರು ಜನ ಸಚಿವರ ಕೋರ್ಟ್ ಮೆಟ್ಟೇಲೇರಿ ತಂದ ತಡೆಯಾಜ್ಞೆ ಇಂದಿಗೆ ಅಂತ್ಯ ಹಿನ್ನೆಲೆ ಅದಕ್ಕೆ ಪ್ರತಿಕ್ರಿಯಸಿ, ಅದರ ಬಗ್ಗೆ ನಮಗೇನು ತೊಂದರೆ ಇಲ್ಲ. ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದರೆ ಚರಂಡಿ ಗಲೀಜು ಬೀಳುತ್ತೆ ಅಂತ ಹೈಕೋರ್ಟಿಗೆ ಹೋಗಿದ್ವಿ. ಈಗಲೂ ಸತ್ಯಾಂಶ ಇದ್ರೆ ನಮ್ಮ ಸಿಡಿನೂ ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.

    ರಮೇಶ್ ಜಾರಕಿಹೊಳಿ ಅವಿತುಕೊಂಡಿಲ್ಲ. ಕೆಲಸ ಕಾರ್ಯಕ್ಕೆ ಅಂತ ಮಹಾರಾಷ್ಟ್ರಕ್ಕೆ ಹೋಗಿ ಬರ್ತಾರೆ. ಅವರಿಗೆ ಬಂಧನದ ಭೀತಿ ಇಲ್ಲ, ಅವಿತುಕೊಳ್ಳುವ ಪ್ರಶ್ನೆ ಯೇ ಇಲ್ಲ ಎಂದರು.