
Tag: ಮೆಥೋಡಿಸ್ಟ್ ಚರ್ಚ್
-

ಕ್ರಿಸ್ಮಸ್ ಹಬ್ಬ – ಕೋಲಾರದ ಮೆಥೋಡಿಸ್ಟ್ ಚರ್ಚ್ನಲ್ಲಿ ದೀಪಾಲಂಕಾರ
ಕೋಲಾರ: ಡಿ.25ರಂದು ಕ್ರಿಸ್ಮಸ್ (Christmas) ಹಬ್ಬದ ಹಿನ್ನೆಲೆ ಕೋಲಾರ (Kolar) ನಗರದ ಮೆಥೋಡಿಸ್ಟ್ ಚರ್ಚ್ (Methodist Church) ದೀಪಾಲಂಕಾರದೊಂದಿಗೆ ಕ್ರಿಸ್ಮಸ್ ಆಚರಣೆಗೆ ಸಿದ್ಧಗೊಂಡಿದೆ.
ಕೋಲಾರ ನಗರದ ಹಳೆ ಬಸ್ ನಿಲ್ದಾಣದ ಬಳಿ ಇರುವ ಮೆಥೋಡಿಸ್ಟ್ ಚರ್ಚ್ ಅದ್ಧೂರಿ ದೀಪಾಲಂಕಾರದ ಮೂಲಕ ಸಿಂಗಾರಗೊಂಡಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ. ಚರ್ಚ್ನ ಒಳಗೆ ಹಾಗೂ ಹೊರಗಡೆ ಬಣ್ಣಬಣ್ಣದ ಲೈಟಿಂಗ್ಸ್ ಹಾಕಲಾಗಿದೆ. ಇದನ್ನೂ ಓದಿ: ಹೋಟೆಲ್ಗೆ ಕರೆಸಿ ಪ್ರಿಯಕರನ ಮರ್ಮಾಂಗ ಕಟ್ ಮಾಡಿದ್ಳು ಪ್ರಿಯತಮೆ!ಕ್ರಿಶ್ಚಿಯನ್ನರ ಮಹತ್ವದ ಹಬ್ಬ ಇದಾಗಿದೆ. ಈ ಹಿನ್ನೆಲೆ ಚರ್ಚ್ನ ಒಳಗೆ ಬಣ್ಣದ ಪೇಪರ್ನಿಂದ ಅಲಂಕರಿಸಲಾಗಿದೆ. ಇನ್ನು ಹೊರಗಡೆ ನಾನಾ ರೀತಿಯ ಬಣ್ಣದ ಲೈಟಿಂಗ್ಸ್ಗಳಿಂದ ಅಲಂಕರಿಸಲಾಗಿದೆ. ಇದನ್ನೂ ಓದಿ: ಶಿವಣ್ಣಗೆ ಇಂದು ಶಸ್ತ್ರಚಿಕಿತ್ಸೆ – ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ಪೂಜೆ
-

ಕ್ರಿಶ್ಚಿಯನ್ ಸಮುದಾಯದ ಪರವಾಗಿ ನಾನಿರುತ್ತೇನೆ – ಸಿದ್ದರಾಮಯ್ಯ
ಕೋಲಾರ: ನನ್ನ ಸರ್ಕಾರದಲ್ಲಿ (Government) ನಾನು ಎಂದೂ ಭೇದ-ಭಾವ ಮಾಡಿಲ್ಲ, ಮುಂದೆಯೂ ಮಾಡಲ್ಲ. ನನ್ನ 5 ವರ್ಷ ಆಡಳಿತ ನೋಡಿದ್ದೀರಿ, ಸಂವಿಧಾನದ (Constitution Of Indian) ಅಡಿಯಲ್ಲಿ ನಾವೆಲ್ಲ ಕೆಲಸ ಮಾಡಬೇಕು. ನಾನು ಕ್ರಿಶ್ಚಿಯನ್ ಸಮುದಾಯದ (Christian Community) ಅಭಿವೃದ್ಧಿ ಪರವಾಗಿ ನಾವಿರುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.

ಕೋಲಾರದ ಮೆಥೋಡಿಸ್ಟ್ ಚರ್ಚ್ಗೆ (Church) ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕೋಲಾರದಲ್ಲಿ ಸ್ಪರ್ಧೆ ಮಾಡುವಂತೆ ನನ್ನ ಮೇಲೆ ಒತ್ತಡ ಇದೆ. ನಾನೂ ಈಗ ಬಾದಾಮಿ ಕ್ಷೇತ್ರದ ಶಾಸಕನಾಗಿದ್ದೇನೆ. ವರುಣಾ, ಬಾದಾಮಿಯಿಂದಲೂ ಸ್ಪರ್ಧೆಗೆ ಮನವಿಯಿದೆ. ನಾನು ಕೋಲಾರದ ಜನತೆಗೆ ಅಬಾರಿಯಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಕೋಲಾರ ಎಂಟ್ರಿ ಬೆನ್ನಲ್ಲೇ ಗುಂಪು ರಾಜಕೀಯ- ಸಿದ್ದರಾಮಯ್ಯ ಮೇಲೆ ಮುನಿಯಪ್ಪ ಮುನಿಸು

ನಾನು 5 ವರ್ಷ ಮುಖ್ಯಮಂತ್ರಿ (Chief Minister) ಆಗಿದ್ದೆ. ಎಲ್ಲ ವರ್ಗದ ಜನರನ್ನ ಸಮಾನವಾಗಿ ಕಂಡಿದ್ದೆ, ಬಡವರ ಪರವಾಗಿದ್ದೆ. ನಾನು ಧರ್ಮದ ಆಧಾರದಲ್ಲಿ ಕೆಲಸ ಮಾಡಿಲ್ಲ. ಈ ದೇಶ ಬಹುತ್ವದ ದೇಶ, ಮನುಷ್ಯರ ಮತ್ತೊಬ್ಬ ಮನುಷ್ಯರನ್ನ ಪ್ರೀತಿಸಬೇಕು. ಆದ್ರೆ ಬಿಜೆಪಿ (BJP) ಧರ್ಮದ ಆಧಾರದಲ್ಲಿ ರಾಜಕೀಯ ಮಾಡ್ತಿದೆ. ಕಾಂಗ್ರೆಸ್ (Congress) ಸರ್ವಧರ್ಮದಲ್ಲಿ ಸಮಾನತೆ ಕಾಣುತ್ತಿದೆ ಎಂದರು. ಇದನ್ನೂ ಓದಿ: ಟಿಕೆಟ್ ಸಿಗದ್ದಕ್ಕೆ ಟವರ್ ಹತ್ತಿ ಬೆದರಿಕೆ ಹಾಕಿದ ಆಪ್ ಮುಖಂಡ

ನಾನು ನಾಮಿನೇಷನ್ ಹಾಕಬೇಕು ಅಂದಾಗ ಮತ್ತೆ ಚರ್ಚ್ ಗೆ ಬರುತ್ತೇನೆ ಎಂದರು. ಈ ವೇಳೆ ಸ್ಪರ್ಧೆ ಮಾಡಲೇಬೇಕು ಎಂದು ಮುಖಂಡರು ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು.
Live Tv
[brid partner=56869869 player=32851 video=960834 autoplay=true]