Tag: ಮೇಘನಾ

  • ಮೇ 21ರಂದು ಹಸೆಮಣೆ ಏರಲು ಸಜ್ಜಾದ ‘ಲಕ್ಷ್ಮಿ ಬಾರಮ್ಮ’ ನಟ

    ಮೇ 21ರಂದು ಹಸೆಮಣೆ ಏರಲು ಸಜ್ಜಾದ ‘ಲಕ್ಷ್ಮಿ ಬಾರಮ್ಮ’ ನಟ

    ‘ಲಕ್ಷ್ಮಿ ಬಾರಮ್ಮ’ (Lakshmi Baramma) ನಟ ಶಮಂತ್ ಬ್ರೋ ಗೌಡ (Shamanth Bro Gowda) ಅವರು ಮೇ 21ರಂದು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮೇಕಪ್ ಆರ್ಟಿಸ್ಟ್ ಮೇಘನಾ ಜೊತೆ ದಾಂಪತ್ಯ ಜೀವನಕ್ಕೆ (Wedding) ಕಾಲಿಡಲಿದ್ದಾರೆ. ಇದೀಗ ಮದುವೆ ತಯಾರಿ ಜೋರಾಗಿ ನಡೆಯುತ್ತಿದೆ. ಅರಿಶಿನ ಶಾಸ್ತ್ರದಲ್ಲಿ ನಟ ಮಿಂದೆದಿದ್ದಾರೆ. ಇದನ್ನೂ ಓದಿ:ಮತ್ತೆ ಪ್ರೀತಿಯಲ್ಲಿ ಬಿದ್ರಾ ನಟಿ?- ನಿರ್ಮಾಪಕನ ತೋಳಲ್ಲಿ ತಲೆಯಿಟ್ಟು ಮಲಗಿದ ಸಮಂತಾ

    ಕಾಲೇಜ್ ಕಾರ್ಯಕ್ರಮವೊಂದರಲ್ಲಿ ಶಮಂತ್ ಗೆಸ್ಟ್ ಆಗಿ ಆಗಮಿಸಿದ್ದರು. ಅಲ್ಲಿ ಮೇಘನಾ (Meghana) ಪರಿಚಯ ಆಗಿತ್ತು. ಅಲ್ಲಿಂದ ಶುರುವಾದ ಸ್ನೇಹ ಮದುವೆಗೆ ಮುನ್ನುಡಿ ಬರೆದಿದೆ. ಮನೆಯವರ ಸಮ್ಮತಿ ಪಡೆದು ಇತ್ತೀಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಮೇ 21ರಂದು ಇಬ್ಬರ ಮದುವೆ ನಡೆಯಲಿದೆ. ಇದನ್ನೂ ಓದಿ:ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ

    ಶಮಂತ್ ಮೂಲತಃ ಉತ್ತರ ಕರ್ನಾಟಕದವರು. ಶಮಂತ್ ಹಿರೇಮಠ ಅವರ ಪೂರ್ಣ ಹೆಸರು, ಇನ್ನೂ ಮೇಘನಾ ಮರಾಠಿಗರು. ಹೀಗಾಗಿ ಎರಡು ರೀತಿಯ ಪದ್ಧತಿಯಂತೆ ಮದುವೆ ಶಾಸ್ತ್ರಗಳು ನಡೆಯಲಿದೆ.

    ‘ಬಿಗ್ ಬಾಸ್ ಕನ್ನಡ 8’ರಲ್ಲಿ ಶಮಂತ್ ಸ್ಪರ್ಧಿಯಾಗಿದ್ದರು. ಈ ಶೋನಲ್ಲಿ ಮಂಜು ಪಾವಗಡ ಗೆದ್ದಿದ್ದರು. ಈ ಕಾರ್ಯಕ್ರಮ ಬಳಿಕ ‘ಲಕ್ಷ್ಮಿ ಬಾರಮ್ಮ’ ಸೀರಿಯಲ್‌ನಲ್ಲಿ ಶಮಂತ್ ಲೀಡ್ ಹೀರೋ ಆಗಿ ನಟಿಸಿದ್ದರು.

  • ಕುತೂಹಲ ಮೂಡಿಸುವ ‘ದಿ ಡಾರ್ಕ್ ವೆಬ್’ ಟೀಸರ್

    ಕುತೂಹಲ ಮೂಡಿಸುವ ‘ದಿ ಡಾರ್ಕ್ ವೆಬ್’ ಟೀಸರ್

    ಸೈಬರ್ ಕ್ರೈಂ ಕಥಾ ಹಂದರ ಆಧಾರಿತ ‘ದಿ ಡಾರ್ಕ್ ವೆಬ್’ (The Dark Web) ಟೀಸರ್  (Teaser)ಕುತೂಹಲ ಹೆಚ್ಚಿಸಿದೆ. ಈ ಸಿನಿಮಾದಲ್ಲಿ ನಾಯಕನಾಗಿ ಯುವ ಪ್ರತಿಭೆ ಚೇತನ್ ಕಾಣಿಸಿಕೊಂಡಿದ್ದಾರೆ. ನಾಯಕಿ ಪಾತ್ರದಲ್ಲಿ ಮೇಘನಾ ಮಿಂಚಿದ್ದಾರೆ.  ಚಿತ್ರದಲ್ಲಿ ಬಹುತೇಕ ಪತ್ರಕರ್ತರೇ ಅಭಿನಯ ಮಾಡಿರೋದು ಈ ಸಿನಿಮಾದ ವಿಶೇಷ.

    ಮಂಜು ಬನವಾಸೆ ಅವರು ನಿರ್ಮಾಣದ ಜೊತೆಗೆ ಪೊಲೀಸ್  ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಚಿತ್ರಕ್ಕೆ ಕಿರಣ್ ಸ್ವಾಮಿ ಅವರ ಚೊಚ್ಚಲ  ನಿರ್ದೇಶನವಿದೆ. ಚಂದ್ರಮೌಳಿ ಕ್ಯಾಮೆರಾ ವರ್ಕ್ ಮಾಡಿದ್ದು ವಿಶಾಕ್ ನಾಗಲಾಪುರ ಸಂಗೀತ ನೀಡಿದ್ದಾರೆ. ಟೀಸರ್ ರಿಲೀಸ್ ಮಾಡುವ ಕಾರಣಕ್ಕೆ ಮಾಧ್ಯಮದ ಮುಂದೆ ಹಾಜರಾಗಿದ್ದ ಸಿನಿಮಾ ತಂಡ ಚಿತ್ರದ ಬಗ್ಗೆ ಒಂದಿಷ್ಟು ಇಂಟರೆಸ್ಟಿಂಗ್ ಮಾಹಿತಿ ಹಂಚಿಕೊಂಡರು.

    ನಟ, ನಿರ್ಮಾಪಕ ಮಂಜು ಬನವಾಸೆ ಮಾತನಾಡಿ, ‘ನಾವೆಲ್ಲ ಪತ್ರಕರ್ತರು, ಸಿನಿಮಾ ಕನಸು ಕಾಲೇಜು ದಿನಗಳಿಂದನೇ ಇತ್ತು. ಎಲ್ಲರೂ ಹೊಸಬರೆ ಆಗಿದ್ದರಿಂದ ತುಂಬಾ ಕಷ್ಟವಾಗಿತ್ತು. ನಾವು ಪ್ರತಿದಿನ ನೋಡುವ ಕಥೆಗಳೆ ಈ ಸಿನಿಮಾದಲ್ಲೂ ಇದೆ. ಹಣ ಜಾಸ್ತಿ ಆಗಿದೆ ಅಂತ ಸಿನಿಮಾ ಮಾಡಿಲ್ಲ, ಸಿನಿಮಾ ಹುಚ್ಚು ಹಾಗೂ ಪ್ರೀತಿಗಾಗಿ  ಈ ಸಿನಿಮಾ ಮಾಡಿದ್ದು. ನಾವು ಪ್ರತಿದಿನ ನೋಡ್ತಿದ್ದ ಕ್ರೈಮ್ ಗಳ ಬಗ್ಗೆಯೇ ಸಿನಿಮಾ ಮಾಡಿದ್ದೇವೆ’ ಎಂದರು.

    ನಿರ್ದೇಶಕ ಕಿರಣ್ ಮಾತನಾಡಿ, ‘ಶೂಟಿಂಗ್ ಅನುಭವ ಬಿಚ್ಚಿಟ್ಟರು. ಸಕಲೇಶಪುರ, ಚಿಕ್ಕಮಗಳೂರು  ಸೇರಿದಂತೆ ಅನೇಕ ಕಡೆ ಶೂಟ್ ಮಾಡಿರುವುದಾಗಿ ಹೇಳಿದರು. ಇನ್ನೂ ನಾಯಕ ಚೇತನ್ ಕಾಫಿ ಡೇ ಓನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಟೀಸರ್ ಮೂಲಕ ಕುತೂಹಲ ನಿರೀಕ್ಷೆ ಹೆಚ್ಚಿರುವ ಡಾರ್ಕ್ ವೆಬ್ ಸದ್ಯದಲ್ಲೇ ಅಭಿಮಾನಿಗಳ ಮುಂದೆ ಬರಲಿದೆ.

  • `ಛೂ ಮಂತರ್’ ಟೀಸರ್‌ ಔಟ್:‌ ಮಾರ್ಗನ್‌ ಹೌಸ್‌ ರಹಸ್ಯ ಭೇದಿಸಲು ಬಂದ ನಟ ಶರಣ್‌

    `ಛೂ ಮಂತರ್’ ಟೀಸರ್‌ ಔಟ್:‌ ಮಾರ್ಗನ್‌ ಹೌಸ್‌ ರಹಸ್ಯ ಭೇದಿಸಲು ಬಂದ ನಟ ಶರಣ್‌

    `ಗುರು ಶಿಷ್ಯರು’ (Guru Shishyaru) ಸಿನಿಮಾದಲ್ಲಿ ಪಿಟಿ ಮಾಸ್ಟರ್ ಆಗಿ ಗೆದ್ದಿದ್ದ ನಟ ಶರಣ್ `ಛೂ ಮಂತರ್’ (Choo Mantar Film) ಮಾಡಲು ಬರುತ್ತಿದ್ದಾರೆ. ಶರಣ್ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಬಿಗ್ ಗಿಫ್ಟ್ ನೀಡಿದ್ದಾರೆ. `ಛೂ ಮಂತರ್’ ಟೀಸರ್‌ನಿಂದ ಶರಣ್ ಸದ್ದು ಮಾಡ್ತಿದ್ದಾರೆ.

     

    View this post on Instagram

     

    A post shared by Tarun Talkies (@taruntalkies)

    ನಟ ಶರಣ್‌ ನಗಿಸಿ, ಹೆದರಿಸೋಕೆ ಬರುತ್ತಿದ್ದಾರೆ. ನಟ ಶರಣ್ ಈಗ `ಛೂ ಮಂತರ್’ ಚಿತ್ರದ ಟೀಸರ್ ಮೂಲಕ ಕಮಾಲ್ ಮಾಡ್ತಿದ್ದಾರೆ. ಮಾನಸ ತರುಣ್, ತರುಣ್ ಶಿವಪ್ಪ ನಿರ್ಮಾಣದಲ್ಲಿ `ಛೂ ಮಂತರ್’ ಸಿನಿಮಾ ಮೂಡಿ ಬಂದಿದೆ. ಸದ್ಯ `ಛೂ ಮಂತರ್’ ಟೀಸರ್ ಹಾರರ್ ಝಲಕ್ ಪ್ರೇಕ್ಷಕರನ್ನ ಬಡಿದೆಬ್ಬಿಸಿದೆ. ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿರುವ ಶರಣ್ ಅವರ ಹೊಸ ಅವತಾರ ಅಭಿಮಾನಿಗಳಿಗೆ ಇಷ್ಟವಾಗಿದೆ. ಇದನ್ನೂ ಓದಿ: `ಆರ್‌ಆರ್‌ಆರ್’ ಸಕ್ಸಸ್ ನಂತರ ಮುಂದಿನ ಚಿತ್ರದ ಬಗ್ಗೆ ಜ್ಯೂ.ಎನ್‌ಟಿಆರ್ ಪ್ರತಿಕ್ರಿಯೆ

     

    View this post on Instagram

     

    A post shared by Tarun Talkies (@taruntalkies)

    ಹಾಲಿವುಡ್ (Hollywood) ಸಿನಿಮಾಗಳನ್ನು ನೆನಪಿಸುವ ವಿಷ್ಯುವಲ್ಸ್ `ಛೂ ಮಂತರ್’ ಸಿನಿಮಾದಲ್ಲಿದೆ ಎನ್ನುವುದು ಟೀಸರ್ ನೋಡಿದ್ರೆ ಅರ್ಥವಾಗುತ್ತದೆ. ಪಾಳು ಬಿದ್ದ ಉತ್ತರಾಕಾಂಡದ ಮಾರ್ಗನ್ ಹೌಸ್ ಪ್ಯಾಲೇಸ್‌ನಲ್ಲಿ ಚಿತ್ರವಿಚಿತ್ರ ಘಟನೆಗಳು ನಡೆಯುತ್ತಿರುತ್ತದೆ. ಭೂತ ಪ್ರೇತ ಇರುವ ಆತಂಕ ಮನೆಯಲ್ಲಿರುವವರನ್ನು ಕಾಡುತ್ತಿರುತ್ತದೆ. ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ನಾಯಕನಾಗಿ ಶರಣ್ ಎಂಟ್ರಿ ಕೊಡುತ್ತಾರೆ. ಟೀಸರ್ ನೋಡುಗರನ್ನು ಕಥೆಯ ಒಳಗೆ ಕರೆದುಕೊಂಡು ಹೋಗುತ್ತದೆ.

    ನಟ ಶರಣ್ ಈ ಸಿನಿಮಾದಲ್ಲಿ ಒಬ್ಬ ಮಂತ್ರವಾದಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಮೇಘನಾ ಗಾಂವ್ಕರ್, ಅದಿತಿ, ನಟ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. `ಕರ್ವ’ (Karva) ಖ್ಯಾತಿಯ ನವನೀತ್ (Navaneeth) `ಛೂ ಮಂತರ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಯ ಮೇಲೆ ತೋರಿಸಲು ಹೊರಟಿದ್ದಾರೆ.

    ಸದ್ಯ ಸಿನಿಮಾದ ಪೋಸ್ಟರ್, ಟೀಸರ್ ಮೂಲಕ `ಛೂ ಮಂತರ್’ ಚಿತ್ರ ಸಂಚಲನ ಸೃಷ್ಟಿಸಿದೆ. ಸಿನಿಮಾ ಚಿತ್ರೀಕರಣ ಕೂಡ ಕಂಪ್ಲಿಟ್ ಆಗಿದ್ದು, ಸದ್ಯದಲ್ಲಿಯೇ ತೆರೆಯ ಮೇಲೆ ಅಬ್ಬರಿಸಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಂಕರಣ್ಣ@45: ಹೀಗೊಂದು ಸುದ್ದಿ ನಿಜನಾ?

    ಶಂಕರಣ್ಣ@45: ಹೀಗೊಂದು ಸುದ್ದಿ ನಿಜನಾ?

    ಖ್ಯಾತನಾಮರು ನಿಧನರಾದಾಗ ಅಥವಾ ಸುದ್ದಿಯಾದಾಗ ಅವರ ಮೇಲೆ ಸಿನಿಮಾ ಮಾಡುವ ಖಯಾಲಿಯನ್ನು ಸ್ಯಾಂಡಲ್ ವುಡ್ ನಲ್ಲಿ ಕೆಲವರು ಬೆಳೆಸಿಕೊಂಡಿದ್ದಾರೆ. ಆದರೆ, ಆ ಸಿನಿಮಾಗಳು ಈವರೆಗೂ ಆಗಿಲ್ಲ. ಆದರೂ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆ ನೋಂದಾಯಿಸಲಾಗುತ್ತದೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ಈ ಹಿಂದೆ ಭೂಗತ ಪಾತಕಿ, ಸುಪಾರಿ ಕಿಲ್ಲರ್ ಗುಂಡಿಗೆ ತಲೆಯೊಡ್ಡಿದ್ದ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯ ಪಿ.ಎಸ್.ಐ ಮಲ್ಲಿಕಾರ್ಜುನ್ ಬಂಡೆ ಅವರ ಮೇಲೆ ಸಿನಿಮಾ ಮಾಡಲು ಮೂವರು ರೆಡಿಯಾಗಿದ್ದರು. ಮೂರು ಟೈಟಲ್ ಗಳು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಣಿ ಆದವು. ಅದು ಈವರೆಗೂ ಸುದ್ದಿಯಿಲ್ಲ. ಐಎಎಸ್ ಅಧಿಕಾರಿ ಡಿ.ಕೆ ರವಿ ನಿಧನರಾದಾಗಲೂ ಅವರ ಬಗ್ಗೆ ಸಿನಿಮಾ ಮಾಡಲು ಹಲವರು ಮುಂದಾದರು. ವಾಣಿಜ್ಯ ಮಂಡಳಿಯು ಡಿ.ಕೆ. ರವಿ ಹೆಸರಿನಲ್ಲಿ ಶೀರ್ಷಿಕೆ ಕೊಡದೇ ಇದ್ದರೂ ಬೇರೆ ಬೇರೆ ಹೆಸರಿನಲ್ಲಿ ಟೈಟಲ್ ರೆಜಿಸ್ಟರ್ ಆಯಿತು. ಆ ಸಿನಿಮಾಗಳು ಈವರೆಗೂ ಸೆಟ್ಟೇರಿಲ್ಲ. ಐ.ಪಿ.ಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟಾಗ ಅವರ ಜೀವನವನ್ನು ಆಧರಿಸಿ ಸಿನಿಮಾ ಮಾಡುತ್ತೇನೆ ಎಂದು ಬಂದರು. ಅದು ಕೂಡ ಈವರೆಗೂ ಆಗಲಿಲ್ಲ. ಹೀಗೆ ಇಂತಹ ಘಟನೆಗಳು ನಡೆದಾಗೆಲ್ಲ ಸಿನಿಮಾ ಮಾಡುವ ಇಂಗಿತವನ್ನು ಕೆಲವರು ವ್ಯಕ್ತ ಪಡಿಸುತ್ತಾರೆ, ಕಾವು ಆರಿದ ನಂತರ ಸುಮ್ಮನಾಗುತ್ತಾರೆ. ಇದೀಗ 45ನೇ ವಯಸ್ಸಿಗೆ 25ರ ಹರೆಯದ ಹುಡುಗಿಯನ್ನು ಮದುವೆಯಾಗಿ ನೆನ್ನೆಯಷ್ಟೇ ನೇಣಿಗೆ ಕೊರಳೊಡ್ಡಿರುವ ಶಂಕರಣ್ಣನ ಬಗ್ಗೆ ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಗಿರಿಕಿ ಹೊಡೆಯುತ್ತಿದೆ.

    ಲಾಕ್ ಡೌನ್, ಕೊರೋನಾ, ಕೋವಿಡ್ ಎನ್ನುವ ಆತಂಕದ ನಡುವೆ 2021ರಲ್ಲಿ 45ರ ಇಳಿವಯಸ್ಸಿನ ಶಂಕರಣ್ಣ ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದ ಮೇಘನಾ ಅವರನ್ನು ಮದುವೆಯಾಗಿದ್ದರು. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಈಗ ಅದನ್ನೇ ಸಿನಿಮಾ ಮಾಡುವ ಆಲೋಚನೆ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ:  ರಶ್ಮಿಕಾ ವೀಡಿಯೋ ನೋಡಿ ಸುಸ್ತಾದ ಅಭಿಮಾನಿಗಳು – ಕೊಡಗಿನ ಬೆಡಗಿಯ ಜಿಮ್ ಕಸರತ್ತು

    ಶಂಕರಣ್ಣ ಮತ್ತು ಮೇಘನಾ ಅವರದ್ದು ಒಂದು ರೀತಿಯಲ್ಲಿ ಇಂಟ್ರಸ್ಟಿಂಗ್ ಸ್ಟೋರಿ ನಿಜ. ಮೇಘನಾ ಅವರಿಗೆ ಆಗಲೇ ಮದುವೆ ಆಗಿತ್ತು. ಎರಡು ವರ್ಷದಿಂದ ಗಂಡ ನಾಪತ್ತೆಯಾಗಿದ್ದ. ಮದುವೆಯಾಗಿಯೂ ಒಂಟಿ ಬದುಕು ನಡೆಸುವುದು ತುಂಬಾ ಕಷ್ಟ. ಹಾಗಾಗಿ ಇನ್ನೂ ಮದುವೆಯಾಗದೇ ಉಳಿದಿದ್ದ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಶಂಕರಣ್ಣನನ್ನು ಭೇಟಿಯಾಗುವ ಮೇಘನಾ, ತನ್ನನ್ನು ಮದುವೆ ಆಗುವಂತೆ ಕೇಳುತ್ತಾಳೆ. ನೊಂದಿರುವ ಹುಡುಗಿಗೆ ಬಾಳು ಕೊಡಲು ಶಂಕರಣ್ಣ ಒಪ್ಪುತ್ತಾನೆ. ಗುರು ಹಿರಿಯರ ಸಮ್ಮುಖದಲ್ಲಿ ಇಬ್ಬರೂ ಸತಿಪತಿಗಳಾಗುತ್ತಾರೆ. ಆ ಮದುವೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿತ್ತು. ಕೆಲವರು ಅವರನ್ನು ಆಡಿಕೊಂಡರೆ, ಇನ್ನೂ ಕೆಲವರು ಶಂಕರಣ್ಣನಿಗೆ ಶಹಭಾಷ್ ಹೇಳಿದ್ದರು. ಇದನ್ನೂ ಓದಿ: ರಣಬೀರ್ ಕಪೂರ್‌ಗೆ ಪತ್ನಿ ಆಗ್ತಾರಾ ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ?

    Shankaranna

    ಈ ದಾಂಪತ್ಯಕ್ಕೆ ಕೇವಲ ಐದೇ ಐದು ತಿಂಗಳು ಆಯುಷ್ಯ ಅಂತ ಯಾರೂ ಅಂದುಕೊಂಡಿರಲಿಲ್ಲ. ನೆನ್ನೆ ಶಂಕರಣ್ಣ ಬಾರದ ಲೋಕಕ್ಕೆ ಹೋಗಿ ಬಿಟ್ಟಿದ್ದಾರೆ. ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕರಣ್ಣನ ಸಾವು ಇದೀಗ ನಾನಾ ರೂಪ ಪಡೆದುಕೊಂಡಿದೆ. ಹೆಂಡತಿ ಮೇಘನಾ ಒಂದು ರೀತಿಯಲ್ಲಿ ಹೇಳಿದರೆ, ಶಂಕರಣ್ಣನ ತಾಯಿ ಮತ್ತೊಂದು ರೀತಿಯಲ್ಲಿ ಹೇಳುತ್ತಿದ್ದಾರೆ. ಹಾಗಾಗಿ ಶಂಕರಣ್ಣನ ಸಾವು ನಿಗೂಢ.

  • ಪತಿ ಶಂಕರಣ್ಣ ಸಾವಿಗೆ ಅತ್ತೆಯೇ ಕಾರಣ: ಪತ್ನಿ ಮೇಘನಾ ಆರೋಪ

    ಪತಿ ಶಂಕರಣ್ಣ ಸಾವಿಗೆ ಅತ್ತೆಯೇ ಕಾರಣ: ಪತ್ನಿ ಮೇಘನಾ ಆರೋಪ

    ತುಮಕೂರು: ನಾನೇನು ತಪ್ಪು ಮಾಡಿಲ್ಲ, ನನ್ನ ಪತಿ ಸಾವಿಗೆ ಅತ್ತೆಯೇ ಕಾರಣವಾಗಿದ್ದಾರೆ. ನಮ್ಮ ಅತ್ತೆ ಹೋಗಿ ಸಾಯಿ ಎಂದು ನನ್ನ ಪತಿಗೆ ಹೇಳಿದ್ರು, ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಶಂಕರಣ್ಣ ಪತ್ನಿ ಮೇಘನಾ ಗಂಭೀರ ಆರೋಪ ಮಾಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಮೇಘನಾ, ರಾತ್ರಿ ನೇಣಿಗೆ ಶರಣಾಗಿದ್ದಾರೆ. ನಮಗೆ ಬೆಳಗ್ಗೆ ಗೊತ್ತಾಗಿದೆ. ಅತ್ತೆ, ಸೊಸೆ ಜಗಳದಿಂದ ನನ್ನ ಪತಿ ಸಾವನ್ನಪ್ಪಿದ್ದಾರೆ ಎಂದು ಹೇಳುತ್ತಿದ್ದಾರೆ. ಇದು ಸುಳ್ಳು. ನನಗೆ ಬೆಂಗಳೂರಿಗೆ ಹೋಗಿ ಜೀವನ ನಡೆಸಬೇಕು ಎನ್ನುವ ಉದ್ದೇಶ ಇರಲಿಲ್ಲ. ಹಾಗಿದ್ದರೆ ನಾನು ಯಾಕೆ ಇವರನ್ನು ಮದುವೆಯಾಗುತ್ತಿದ್ದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ:  ಅತ್ತೆ-ಸೊಸೆ ಜಗಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ್ರಾ ಶಂಕರಣ್ಣ..?

    ನನ್ನ ಪತಿ ಸಹೋದರಿ ಪಾತ್ರೆ ತೊಳೆಯುತ್ತಿದ್ದರು. ನಾನು ಸುಮ್ಮನೆ ಕುಳಿತಿದ್ದೆ. ಆಗ ನಮ್ಮ ಅತ್ತೆ ಬಂದು ನನಗೆ ಬೈದಿದ್ದರು. ಇದರಿಂದ ಬೇಜಾರಾಗಿ ನಾನು ಕಣ್ಣೀರು ಹಾಕುತ್ತಾ ಮಲಗಿದ್ದೆ. ಆಗ ನನ್ನ ಪತಿ ಬಂದು ವಿಚಾರಿಸಿದರು. ಆಗಿನಿಂದ ನಮ್ಮ ಮನೆಯಲ್ಲಿ ಜಗಳ ಪ್ರಾರಂಭವಾಯಿತು. ನಿನ್ನ ಹೆಂಡತಿ ನಮ್ಮನ್ನು ಹೊಡೆಯಲು ಬಂದಿದ್ದಾಳೆ ಎಂದು ಪತಿ ಮುಂದೆ ನನ್ನನ್ನು ದೂರುತ್ತಾ ಅತ್ತೆ ಜಗಳ ಮಾಡುತ್ತಲೇ ಇದ್ದರು ಎಂದರು. ಇದನ್ನೂ ಓದಿ: ಶಂಕರಣ್ಣನ ಬಳಿ ಹೋಗಿ ಮದುವೆ ಆಗ್ತೀರಾ ಎಂದು ಕೇಳಿದ್ದ ಮೇಘನಾ

    ಒಂದು ದಿನ ಕಟ್ಟಿರುವ ನಾಯಿಯನ್ನು ನಾನು ಬಿಟ್ಟಿದ್ದೆ. ಆಗ ನಮ್ಮ ಅತ್ತೆ ನಿನ್ನ ಪತ್ನಿ ನಾಯಿ ಬಿಟ್ಟಳು. ನಾನು ಸಾಕಿದ್ದ ನಾಯಿಯನ್ನು ಅವಳು ಯಾಕೆ ಬಿಡಬೇಕು ಎಂದು ನಮ್ಮ ಅತ್ತೆ ಮತ್ತೆ ಗಲಾಟೆ ಮಾಡಲು ಪ್ರಾರಂಭಿಸಿದ್ದರು. ಆಗ ಪತಿ, ನಿಮ್ಮ ಇಬ್ಬರಲ್ಲಿ ಯಾರಿಗೂ ಬುದ್ಧಿ ಹೇಳಲು ನನಗೆ ಸಾಧ್ಯವಿಲ್ಲ ಎಂದು ಹೇಳಿದ್ದರು. ನಮ್ಮ ಅತ್ತೆ ಹೋಗಿ ನೀನು ಸಾಯಿ ಎಂದು ನನ್ನ ಪತಿಗೆ ಹೇಳಿದರು. ನಾನು ಸತ್ತರೆ ನೆಮ್ಮದಿಯಾಗಿ ಇರುತ್ತೀಯೆಂದು ನನ್ನ ಪತಿ ಹೇಳಿ ಹೊರಟು ಹೋದವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

  • ಅತ್ತೆ-ಸೊಸೆ ಜಗಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ್ರಾ ಶಂಕರಣ್ಣ..?

    ಅತ್ತೆ-ಸೊಸೆ ಜಗಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ್ರಾ ಶಂಕರಣ್ಣ..?

    – ಸಿಟಿಗೆ ಹೋಗಿ ನೆಲೆಸೋಣ ಅಂತ ಹಠ ಹಿಡಿದಿದ್ದ ಮೇಘನಾ
    – ಕಾಟ ಕೊಟ್ರೆ ಸಾಯ್ತೀನಿ ಅಂದ್ರೂ ಕ್ಯಾರೆ ಎಂದಿರಲಿಲ್ಲ ಪತ್ನಿ

    ತುಮಕೂರು: ಪ್ರೀತಿಗೆ ಕಣ್ಣಿಲ್ಲ ಎನ್ನುವ ಮಾತಿಗೆ ಹೇಳಿ ಮಾಡಿಸಿದಂತೆ ಇದ್ದ ಜೋಡಿ ತುಮಕೂರಿನ ಶಂಕರಣ್ಣ- ಮೇಘನಾ. ಈ ಜೋಡಿ ಮದುವೆಯಾಗಿ ಹೊಸ ಬಾಳಿಗೆ ಕಾಲಿಟ್ಟಿದ್ದು ಮಾತ್ರ ಸಖತ್ ಸುದ್ದಿಯಾಗಿತ್ತು. ಆದರೆ ಇದೀಗ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

    ಹೌದು. 5 ತಿಂಗಳ ಹಿಂದೆ ಮದುವೆಯಾಗಿದ್ದ ಶಂಕರಣ್ಣ ಮತ್ತು ಮೇಘನಾ ಮಧ್ಯೆ ವಯಸ್ಸಿನ ಅಂತರ ಇರುವುದರಿಂದ ಹಲವು ಟೀಕೆಗಳಿಗೆ ಗುರಿಯಾದರು. ಆದರೂ ಈ ಜೋಡಿ ಮಧ್ಯೆ ಇರುವ ನಂಬಿಕೆ, ಪ್ರೀತಿ ಮಾತ್ರ ಬಲವಾಗಿತ್ತು. ಹೀಗಾಗಿ ಇಬ್ಬರು ಸಾಮರಸ್ಯದ ಜೀವನವನ್ನು ಬರೋಬ್ಬರಿ 6 ತಿಂಗಳು ಕಳೆದರು. ಆದರೆ ಅದೇನಾಯ್ತೋ ಶಂಕರಣ್ಣ ಇಂದು ಹಲಸಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಚೌಡನಕುಪ್ಪೆ ನಿವಾಸಿಯಾಗಿರುವ ಶಂಕರಣ್ಣ ಕಳೆದ ವರ್ಷ 25ರ ಯುವತಿ ಮೇಘನಾಳನ್ನು ವರಿಸಿದ್ದರು. ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಅವರ ಮದುವೆ ನಡೆದಿತ್ತು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೆ ಮದುವೆಯಾದ ಐದು ತಿಂಗಳಿನಲ್ಲಿಯೇ ಶಂಕರಣ್ಣ ಅವರು ಸಾವಿಗೆ ಶರಣಾಗಿರುವುದು ದುರಂತವೇ ಸರಿ.

    ನಡೆದಿದ್ದೇನು?: ಶಂಕರಣ್ಣ, ಮೇಘನಾ ಮದುವೆಯಾದ ಹೊಸತರಲ್ಲಿ ಅನ್ಯೋನ್ಯವಾಗಿ ಜೀವನ ನಡೆಸುತ್ತಿದ್ದರು. ಇಬ್ಬರ ಮಧ್ಯೆ ವಯಸ್ಸಿನ ಅಂತರವಿತ್ತು. ಆದರೂ ಇಬ್ಬರು ಹೊಂದಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಕೆಲವು ದಿನಗಳ ಹಿಂದೆ ಮನೆಯಲ್ಲಿ ಅತ್ತೆ, ಸೊಸೆ ಮಧ್ಯೆ ಕಲಹ ಉಂಟಾಗಿತ್ತು. ಹೀಗಾಗಿ ಮೇಘನಾ, ಶಂಕರಣ್ಣನನ್ನು ಮೈಸೂರು ಅಥವಾ ಬೆಂಗಳೂರಿಗೆ ಹೋಗಿ ವಾಸಿಸೋಣ ಎಂದು ಪಟ್ಟು ಹಿಡಿದು ಕುಳಿತಿದ್ದಳು. ಇದಕ್ಕೆ ಶಂಕರಣ್ಣ ಮತ್ತು ಅವರ ತಾಯಿ ಒಪ್ಪಿಕೊಂಡಿರಲಿಲ್ಲ. ಇದನ್ನೂ ಓದಿ: ಶಂಕರಣ್ಣನ ಬಳಿ ಹೋಗಿ ಮದುವೆ ಆಗ್ತೀರಾ ಎಂದು ಕೇಳಿದ್ದ ಮೇಘನಾ

    ಇತ್ತ ಮೇಘನಾ ಮಾತ್ರ ಊರಿನಲ್ಲಿರುವ ಜಮೀನು ಮಾರಿ ಸಿಟಿಗೆ ಹೋಗೊಣ ಎಂದು ಶಂಕರಣ್ಣನ ಮೇಲೆ ಒತ್ತಡ ಹೇರುತ್ತಿದ್ದಳು. ಈ ವಿಚಾರವಾಗಿ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಲೇ ಇತ್ತು. 2.5 ಎಕರೆ ಜಮೀನು ಮಾರಾಟ ಮಾಡುವುದು ಬೇಡ. ತಾಯಿ ಜೊತೆಗೆ ಹಳ್ಳಿಯಲ್ಲಿ ಇರೋಣ ಎಂದು ಹೇಳುತ್ತಾ ಮೇಘನಾ ಮನವೊಲಿಸಲು ಶಂಕರಣ್ಣ ಪ್ರಯತ್ನಿಸುತ್ತಿದ್ದರು. ಆದರೆ ಮೇಘನಾ ಮಾತ್ರ ಯಾವುದಕ್ಕೂ ಒಪ್ಪಿರಲಿಲ್ಲ. ತನ್ನ ತಾಯಿಗೆ ಬಿಟ್ಟು ಹೋಗಲ್ಲ, ನೀನು ಹೀಗೆ ಗಲಾಟೆ, ಕಾಟ ಕೊಟ್ಟರೆ ನಾನು ಸಾಯುತ್ತೇನೆ ಎಂದು ಹಲವು ಬಾರಿ ಮೇಘನಾ ಬಳಿ ಹೇಳಿಕೊಂಡಿದ್ದನು. ಸಾಯ್ತೀನಿ ಎಂದರೂ ಮೇಘನಾ ಮಾತ್ರ ತಲೆಕೆಡಿಸಿಕೊಂಡಿರಲಿಲ್ಲ. ನಿನ್ನೆ ಮೇಘನಾ ಮತ್ತು ಶಂಕರಣ್ಣ ತಾಯಿ ನಡುವೆ ಜಗಳವಾಗಿದೆ. ಈ ವಿಚಾರವಾಗಿ ಶಂಕರಣ್ಣ ಮನಸ್ಸಿಗೆ ನೋವುಂಟಾಗಿತ್ತು ಎಂಬ ವಿಚಾರ ತಿಳಿದುಬಂದಿದೆ.

    ಇಂದು ಬೆಳ್ಳಂಬೆಳಗ್ಗೆ ಎದ್ದ ಶಂಕರಣ್ಣ ಹೊಲಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಗೆ ಬಂದಿದ್ದಾರೆ. ತೋಟಕ್ಕೆ ತೆರಳಿ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಂಕರಣ್ಣ ಮೃತದೇಹದ ಬಳಿ ಮೇಘನಾ ಮತ್ತು ಆತನ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಅತ್ತೆ, ಸೋಸೆ ಗಲಾಟೆ ಶಂಕರಣ್ಣನ ಪ್ರಾಣಕ್ಕೆ ಕುತ್ತು ತಂದಿತ್ತು ಎಂದು ಕೆಲವು ಸ್ಥಳೀಯರು ಗುಸುಗುಸು ಎನ್ನುತ್ತಿದ್ದಾರೆ. ಸದ್ಯ ಕುಣಿಗಲ್ ತಾಲೂಕಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

    ಅತ್ತೆ, ಸೊಸೆ ಗಲಾಟೆ ಮನೆಯಲ್ಲಿ ಹೆಚ್ಚಾಗಿತ್ತು. ಮೇಘನಾಗೆ ಬೆಂಗಳೂರಿನಲ್ಲಿ ಹೋಗಿ ಜೀವನ ನಡೆಸಬೇಕು ಎನ್ನವ ಆಸೆ ಇತ್ತು. ಆದರೆ ಅತ್ತೆ, ಗಂಡ ಮಾತ್ರ ಮೇಘನಾಗೆ ನಿರ್ಧಾರಕ್ಕೆ ಒಪ್ಪಿರಲಿಲ್ಲ ಎಂದು ಹಲವು ಊಹಾಪೋಹಗಳು ಹರಿದಾಡುತ್ತಿವೆ. ಒಟ್ಟಿನಲ್ಲಿ ಶಂಕರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಪೊಲೀಸರ ತನಿಖೆಯಿಂದಷ್ಟೇ ನಿಖರ ಕಾರಣ ತಿಳಿದು ಬರಬೇಕಾಗಿದೆ.

  • ಶಂಕರಣ್ಣನ ಬಳಿ ಹೋಗಿ ಮದುವೆ ಆಗ್ತೀರಾ ಎಂದು ಕೇಳಿದ್ದ ಮೇಘನಾ

    ಶಂಕರಣ್ಣನ ಬಳಿ ಹೋಗಿ ಮದುವೆ ಆಗ್ತೀರಾ ಎಂದು ಕೇಳಿದ್ದ ಮೇಘನಾ

    ತುಮಕೂರು: ತುಮಕೂರಿನಲ್ಲಿ ನಡೆದ ಮದುವೆಯೊಂದು ಕಳೆದ ವರ್ಷ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗಿತ್ತು. ಗಂಡ ಮೋಸ ಮಾಡಿದ್ದಕ್ಕೆ ಇಪ್ಪತ್ತು ವರ್ಷದ ಹಿರಿಯನಾಗಿದ್ದ ಶಂಕರಣ್ಣನನ್ನು ಮದುವೆಯಾಗುವಂತೆ ಮೇಘನಾ ಕೇಳಿಕೊಂಡು ವಿವಾಹವಾಗಿದ್ದರು. ಆದರೀಗ ಶಂಕರಣ್ಣನವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಮೇಘನಾ ಅವರು ಶಂಕರಣ್ಣ ಅವರ ಕೈಹಿಡಿಯುವ ಮುನ್ನವೇ ವಿವಾಹವಾಗಿದ್ದರು. ಆದರೆ ಮದುವೆಯಾಗಿ 2 ವರ್ಷಗಳೇ ಕಳೆದರೂ ಗಂಡ ವಾಪಸ್ ಬರೆದೇ ಮೋಸ ಮಾಡಿದ್ದನು. ನಂತರ ಶಂಕರಣ್ಣ ಅವರ ಮೇಲೆ ಮನಸ್ಸು ಹೊಂದಿದ್ದ ಮೇಘನಾ ಸ್ವತಃ ತಾವಾಗಿಯೇ ಹೋಗಿ ನನ್ನನ್ನು ಮದುವೆಯಾಗುತ್ತೀರಾ ಎಂದು ಕೇಳಿದ್ದರು. ಇದನ್ನೂ ಓದಿ: 25 ವರ್ಷದವಳನ್ನು ಮದ್ವೆಯಾಗಿ ವೈರಲ್ ಆಗಿದ್ದ ಶಂಕರಣ್ಣ ಆತ್ಮಹತ್ಯೆ

    45 ವರ್ಷವಾದರೂ ಶಂಕರಣ್ಣ ಅವರಿಗೆ ಇನ್ನೂ ಮದುವೆಯಾಗಿರಲಿಲ್ಲ. ಅಲ್ಲದೇ ಮೊದಲಿಗೆ ಶಂಕರಣ್ಣ ಅವರು ಮದುವೆಯಾಗಲು ಒಪ್ಪಿಕೊಂಡಿರಲಿಲ್ಲ. ಆದರೆ ನಂತರ ಮದುವೆಯಾಗಲು ಒಪ್ಪಿ ಇಬ್ಬರು ಇಷ್ಟಪಟ್ಟು 2021ರ ಅಕ್ಟೋಬರ್‌ನಲ್ಲಿ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ದೇವಾಲಯವೊಂದರಲ್ಲಿ ಸರಳವಾಗಿ ವಿವಾಹವಾಗಿದ್ದರು. ಇದನ್ನೂ ಓದಿ: 45 ವರ್ಷದ ವ್ಯಕ್ತಿಯ ಜೊತೆ 25ರ ಯುವತಿ ಮದುವೆ

    ಕಳೆದ ಮೂರ್ನಾಲ್ಕು ದಿನಗಳಿಂದ ಅತ್ತೆ, ಸೊಸೆ ನಡುವೆ ಜಗಳ ನಡೆದಿತ್ತು. ಇದರಿಂದ ಬೇಸತ್ತು ಶಂಕರಣ್ಣ ಮನೆ ಬಿಟ್ಟು ಕುಣಿಗಲ್ ತಾಲೂಕಿನ ಅಕ್ಕಿಮರಿಪಾಳ್ಯದಲ್ಲಿದ್ದ ತಮ್ಮ ತೋಟದಲ್ಲಿ ಇಂದು ಬೆಳ್ಳಂಬೆಳ್ಳಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ಪತಿಯನ್ನು ಕಳೆದುಕೊಂಡು ಮರದ ಕೆಳಗೆ ಕೂತು ಪತ್ನಿ ಮೇಘನಾ ರೋಧಿಸುತ್ತಿದ್ದಾರೆ.

    ಹಳ್ಳಿಯಲ್ಲಿರುವುದು ಬೇಡ ಬೆಂಗಳೂರಿಗೆ ಹೋಗೋಣ ಎಂದು ಮೇಘನಾ ಶಂಕರಣ್ಣ ಅವರಿಗೆ ಕಾಟ ಕೊಡುತ್ತಿದ್ದರಿಂದ ಈ ವಿಚಾರವಾಗಿ ಅತ್ತೆ, ಸೊಸೆ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ ಇದರಿಂದ ಬೇಸತ್ತು ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳಕ್ಕೆ ಹುಲಿಯೂರು ದುರ್ಗ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಶಂಕರಣ್ಣ ಅವರದ್ದು ಆತ್ಮಹತ್ಯೆಯೋ.. ಕೊಲೆಯೋ.. ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

  • 25 ವರ್ಷದವಳನ್ನು ಮದ್ವೆಯಾಗಿ ವೈರಲ್ ಆಗಿದ್ದ ಶಂಕರಣ್ಣ ಆತ್ಮಹತ್ಯೆ

    25 ವರ್ಷದವಳನ್ನು ಮದ್ವೆಯಾಗಿ ವೈರಲ್ ಆಗಿದ್ದ ಶಂಕರಣ್ಣ ಆತ್ಮಹತ್ಯೆ

    ತುಮಕೂರು: ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಶಂಕರಣ್ಣ(45) ಮೃತ ದುರ್ದೈವಿಯಾಗಿದ್ದು, ಕಳೆದ ವರ್ಷ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಅವರ ಮದುವೆ ನಡೆದಿತ್ತು. ಆದರೆ ಮದುವೆಯಾದ ಐದು ತಿಂಗಳಿನಲ್ಲಿಯೇ ಶಂಕರಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: 45 ವರ್ಷದ ವ್ಯಕ್ತಿಯ ಜೊತೆ 25ರ ಯುವತಿ ಮದುವೆ

    ಮೂರ್ನಾಲ್ಕು ದಿನದಿಂದ ಗಂಡ, ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ ಕೋಪ ಮಾಡಿಕೊಂಡು ಸೋಮವಾರ ಮನೆ ಬಿಟ್ಟು ಹೋಗಿದ್ದ ಶಂಕರಣ್ಣನವರು, ಕುಣಿಗಲ್ ತಾಲೂಕಿನ ಅಕ್ಕಿಮರಿಪಾಳ್ಯದಲ್ಲಿದ್ದ ತಮ್ಮ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಆರ್ಥಿಕ ಅವನತಿಯತ್ತ ಶ್ರೀಲಂಕಾ – ಸಕ್ಕರೆ, ಬೇಳೆಗೆ ಚಿನ್ನದ ಬೆಲೆ, 1 ಟೀಗೆ 100 ರೂ.

    2021ರಲ್ಲಿ ಮದುವೆಯಾಗಿದ್ದ ಈ ದಂಪತಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದ ಮೇಘನಾಗೆ ಈ ಮುನ್ನ ಬೇರೆಯವರೊಂದಿಗೆ ಮದುವೆಯಾಗಿತಂತೆ. ಆದರೆ ಪತಿ ಎರಡು ವರ್ಷಗಳಿಂದ ಕಾಣೆಯಾಗಿದ್ದರಿಂದ ಮೇಘನಾಳೇ ಹೋಗಿ ಶಂಕರಣ್ಣ ಅವರನ್ನು ಮದುವೆಯಾಗಿದ್ದಾಳಂತೆ. ಸ್ವತಃ ಮೇಘನಾ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಳು. ಆದರೆ ಮೊದಲಿಗೆ ಮದುವೆಯಾಗಲು ಒಪ್ಪದ ಶಂಕರಣ್ಣ ಕೊನೆಗೆ ಒಪ್ಪಿಕೊಂಡು ಮೇಘನಾಳನ್ನು ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದರು.

  • ಸೆ.3ರಂದು ರಿವೀಲ್ ಆಗಲಿದೆ ಜ್ಯೂನಿಯರ್ ಚಿರು ನಿಜವಾದ ಹೆಸರು

    ಸೆ.3ರಂದು ರಿವೀಲ್ ಆಗಲಿದೆ ಜ್ಯೂನಿಯರ್ ಚಿರು ನಿಜವಾದ ಹೆಸರು

    ಬೆಂಗಳೂರು: ಸ್ಯಾಂಡಲ್‍ವುಡ್ ದಿವಂಗತ ನಟ ಚಿರಂಜೀವಿ ಸರ್ಜಾ ಮತ್ತು ನಟಿ ಮೇಘನಾ ರಾಜ್ ದಂಪತಿಯ ಪ್ರೀತಿಯ ಪುತ್ರ ಜ್ಯೂನಿಯರ್ ಚಿರು ಹೆಸರು ನಾಳೆ ರಿವೀಲ್ ಆಗಲಿದೆ.

    ಇಷ್ಟು ದಿನ ಚಿಂಟು, ಸಿಂಬಾ, ಪಾಪ ಕುಟ್ಟಿ, ಜೂನಿಯರ್ ಚಿರು, ಜ್ಯೂನಿಯರ್ ಸಿಂಗ ಹೀಗೆ ಹಲವಾರು ಮುದ್ದಾದ ಹೆಸರುಗಳಲ್ಲಿ ಕುಟುಂಬದವರು ಹಾಗೂ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಿದ್ದರು. ಆದರೆ ಸೆಪ್ಟೆಂಬರ್ 3ರಂದು ಜ್ಯೂನಿಯರ್ ಚಿರು ನಿಜವಾದ ಹೆಸರನ್ನು ಕುಟುಂಬದವರು ರಿವೀಲ್ ಮಾಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ:ಕೃಷ್ಣನ ವೇಷದಲ್ಲಿ ಜ್ಯೂನಿಯರ್ ಚಿರು – ನನ್ನ ಬೆಣ್ಣೆ, ಮುದ್ದು, ಬಂಗಾರ ಅಂದ ಮೇಘನಾ

    ಈ ಕುರಿತಂತೆ ಮೇಘನಾ ರಾಜ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೋ ಮೇಘನಾ ಹಾಗೂ ಚಿರಂಜೀವಿ ಸರ್ಜಾ ಎಂಗೇಜ್ ಮೆಂಟ್ ವೀಡಿಯೋ ಆಗಿದ್ದು, ಇದರ ಜೊತೆಗೆ ಜ್ಯೂನಿಯರ್ ಚಿರುವಿನ ಹಲವಾರು ಹೆಸರುಗಳನ್ನು ಬಹಿರಂಗ ಪಡಿಸಿ. ಕೊನೆಗೆ ಸೆಪ್ಟೆಂಬರ್ 3 ರಂದು ಜ್ಯೂನಿಯರ್ ಚಿರು ನಿಜವಾದ ಹೆಸರನ್ನು ರಿವೀಲ್ ಮಾಡುವುದಾಗಿ ಮೇಘನಾ ತಿಳಿಸಿದ್ದಾರೆ.

     

    View this post on Instagram

     

    A post shared by Meghana Raj Sarja (@megsraj)

    ನಟ ಚಿರಂಜೀವಿ ಸರ್ಜಾ 2020ರ ಜೂನ್ 7ರಂದು ವಿಧಿವಶರಾಗಿದ್ದರು. ಬಳಿಕ 5 ತಿಂಗಳಿಗೆ ಅರ್ಥಾತ್ 22 ಅಕ್ಟೋಬರ್ ನಲ್ಲಿ ಮೇಘನಾ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದನ್ನೂ ಓದಿ: ಅಪ್ಪನ ಡಾನ್ಸ್ ನೋಡೊದ್ರಲ್ಲಿ ಬ್ಯುಸಿಯಾದ ಜ್ಯೂನಿಯರ್ ಚಿರು

  • ಚಿರುನಾ ಕಷ್ಟಪಟ್ಟು ಪಡೆದಿದ್ದೆ- ಅಳುತ್ತಿರೋ ಅತ್ತಿಗೆಗೆ ನೀರು ಕುಡಿಸಿ ಧ್ರುವ ಸಮಾಧಾನ

    ಚಿರುನಾ ಕಷ್ಟಪಟ್ಟು ಪಡೆದಿದ್ದೆ- ಅಳುತ್ತಿರೋ ಅತ್ತಿಗೆಗೆ ನೀರು ಕುಡಿಸಿ ಧ್ರುವ ಸಮಾಧಾನ

    ಬೆಂಗಳೂರು: ಚಿರುನಾ ಕಷ್ಟಪಟ್ಟು ಪಡೆದಿದ್ದೆ ಎಂದು ನಟಿ ಮೇಘನಾ ರಾಜ್ ಪತಿಯ ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ.

    ಮೇಘನಾ ರಾಜ್ ಇಂದು ಮುಂಜಾನೆ ಕೂಡ ಪತಿಯ ಪಾರ್ಥಿವ ಶರೀರದ ಎದುರು ಕೆಲಹೊತ್ತು ಕುಳಿತಿದ್ದರು. ಆಗ ಪತಿಯನ್ನೇ ನೋಡುತ್ತಾ ಮೌನವಾಗಿ ಕುಳಿತಿದ್ದರು. ಇದೀಗ ಪತಿಯ ಪಾರ್ಥಿವ ಶರೀರದ ಮುಂದೆ ಕುಳಿತು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಆಗ ಅತ್ತಿಗೆಯನ್ನು ಸಮಾಧಾನ ಮಾಡಲು ನಟ ಧ್ರುವ ಸರ್ಜಾ ಮುಂದಾಗಿದ್ದಾರೆ.

    ಈ ವೇಳೆ ಚಿರುನಾ ನಾನು ಕಷ್ಟಪಟ್ಟು ಪಡೆದಿದ್ದೆ. ಆದರೆ ಇಷ್ಟು ಬೇಗ ನನ್ನನ್ನು ಬಿಟ್ಟು ಹೋಗಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ. ಆಗ ಧ್ರುವ ಸಮಾಧಾನ ಮಾಡಿ ನೀರು ಕುಡಿಸಿ ಧೈರ್ಯ ತುಂಬಿದ್ದಾರೆ.

    ಚಿರಂಜೀವಿ ಮತ್ತು ಮೇಘನಾ ಪರಸ್ಪರ 10 ವರ್ಷದಿಂದ ಪ್ರೀತಿಸಿ ಮನೆಯವರನ್ನು ಒಪ್ಪಿಸಿ 2018 ರಲ್ಲಿ ಮದುವೆಯಾಗಿದ್ದರು. ಈ ಜೋಡಿ ಸದಾ ಸ್ನೇಹಿತರಂತೆ ಇದ್ದರು. ಇದೀಗ ಚಿರಂಜೀವಿ ಅಗಲಿಕೆಯಿಂದ   ಸರ್ಜಾ ಕುಟುಂಬವೇ ಆಘಾತಕ್ಕೆ ಒಳಗಾಗಿದೆ.

    ‘ಅಣ್ಣ ಸದಾ ನನ್ನ ಜೊತೆಗಿರಬೇಕು, ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗಲಿ’ ಎಂದು ಸಹೋದರ ಧ್ರುವ ಸರ್ಜಾ ಕೂಡ ಕಣ್ಣೀರು ಹಾಕಿದ್ದರು. ಈ ಹಿನ್ನೆಲೆಯಲ್ಲಿ ಕನಕಪುರ ರಸ್ತೆ ಬಳಿಯಿ ನೆಲಗೂಳಿ ಗ್ರಾಮದಲ್ಲಿ ತಮ್ಮ ಧ್ರುವ ಸರ್ಜಾರ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಈಗಾಗಲೇ ಫಾರ್ಮ್ ಹೌಸ್‍ನಲ್ಲಿ ಅಂತಿಯ ಕ್ರಿಯೆಗೆ ಸಕಲ ಸಿದ್ಧತೆ ನಡೆಯುತ್ತಿದೆ.