Tag: ಮೇಘಶ್ರೀ

  • ಮ್ಯೂಸಿಕಲ್ ಲವ್ ಸ್ಟೋರಿಗೆ ನಾಯಕಿಯಾದ ಮೇಘಶ್ರೀ

    ಮ್ಯೂಸಿಕಲ್ ಲವ್ ಸ್ಟೋರಿಗೆ ನಾಯಕಿಯಾದ ಮೇಘಶ್ರೀ

    ನ್ನಡ ಚಿತ್ರರಂಗದಲ್ಲಿ ಬಹಳ ದಿನಗಳ ನಂತರ ಮ್ಯೂಸಿಕಲ್ ಲವ್‌ಸ್ಟೋರಿ ಹೊಂದಿರುವ ಚಿತ್ರವೊಂದು ರೆಡಿಯಾಗಿದೆ. ಪ್ರೇಮಲೋಕ, ಎಕ್ಸ್ಕ್ಯೂಸ್‌ಮಿ ಚಿತ್ರಗಳ ನಂತರ ಅದೇ ಜಾನರ್‌ನಲ್ಲಿ ತಯಾರಾಗಿರುವ ಮತ್ತೊಂದು ಚಿತ್ರದ ಹೆಸರು ರಿದಂ. ಚಿತ್ರೋದ್ಯಮದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಪಳಗಿರುವ ಮಂಜು ಮಿಲನ್ ಅವರ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರವಿದು. ಈಗಾಗಲೇ ಬಿಡುಗಡೆಯ ಹಂತ ತಲುಪಿರುವ ರಿದಂ, ಸದ್ಯದಲ್ಲೇ ಸೆನ್ಸಾರ್ ಮನೆಗೆ ತೆರಳಲಿದೆ.

    ಚಿತ್ರದಲ್ಲಿ ನಾಯಕನಾಗೂ ನಟಿಸಿರುವ ಮಂಜುಮಿಲನ್ ಈಗಾಗಲೇ ತಮ್ಮ ಬ್ಯಾನರ್ ಮೂಲಕ ೨ ಚಿತ್ರಗಳನ್ನು ಕನ್ನಡಿಗರಿಗೆ ನೀಡಿದ್ದು, ಇದು ಅವರ ಮೂರನೇ ಚಿತ್ರ. ಜೋಗಿ ಪ್ರೇಮ್, ಕಾಶೀನಾಥ್, ವಾಸು ಅವರಂಥ ನಿರ್ದೇಶಕರ ಬಳಿ ಪಳಗಿರುವ ಇವರು,  ಒಬ್ಬ ಸಿಂಗರ್ ಹಾಗೂ ವಯಲಿನ್ ನುಡಿಸೋ ಯುವತಿಯ  ನಡುವೆ ನಡೆಯುವ ಲವ್‌ಸ್ಟೋರಿಯನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಚಿತ್ರದ ನಾಯಕಿಯಾಗಿ ಕೃಷ್ಣತುಳಸಿ ಖ್ಯಾತಿಯ ಮೇಘಶ್ರೀ ಅವರು ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

    ಈಗಾಗಲೇ ಬೆಂಗಳೂರು, ಮೈಸೂರು, ಮೇಲುಕೋಟೆ ಅಲ್ಲದೆ ಸಾಗರದಾಚೆಯ ಸಿಂಗಪೂರ್‌ನಲ್ಲಿ ಸುಮಾರು ೬೨ ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಿಕೊಂಡು ಬಂದಿದ್ದಾರೆ. ಚಿತ್ರದಲ್ಲಿ ಸಪ್ತಸ್ವರಗಳನ್ನು ಪ್ರತಿನಿಧಿಸುವಂತೆ ಏಳು ಸುಂದರವಾದ. ಹಾಡುಗಳಿದ್ದು, ಎ.ಟಿ. ರವೀಶ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಮಂಜುನಾಥ್ ಹಾಗೂ ಮಲ್ಲಿಕಾರ್ಜುನ್ ಚಿತ್ರಕ್ಕೆ ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ.  ಹಿರಿಯ ಕಲಾವಿದರಾದ ಸುಮನ್, ಪದ್ಮಾವಾಸಂತಿ, ವಿನಯಾಪ್ರಸಾದ್, ಗಿರಿಜಾ ಲೋಕೇಶ್ ಈ ಚಿತ್ರದಲ್ಲಿ ನಟಿಸಿದ್ದಾರೆ.

    ಫ್ಯಾಮಿಲಿ ಸೆಂಟಿಮೆಂಟ್ ಜೊತೆಗೆ ಒಂದು ಎಮೋಷನಲ್ ಲವ್‌ಸ್ಟೋರಿಯನ್ನು ರಿದಂ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ಹೇಳಹೊರಟಿರುವ ನಿರ್ದೇಶಕ ಕಮ್ ನಾಯಕ ಮಂಜು ಮಿಲನ್ ಅವರು ಮುಂದಿನ ತಿಂಗಳು ಚಿತ್ರದ ಟ್ರೈಲರನ್ನು ಸ್ಟಾರ್ ನಟರೊಬ್ಬರ ಕೈಲಿ ಬಿಡುಗಡೆ ಮಾಡಿಸುವ ಯೋಜನೆಯನ್ನೂ ಹಾಕಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭೋಜ್‍ಪುರಿ ಸಿನಿಮಾದಲ್ಲಿ ಕನ್ನಡತಿ ಮೇಘಶ್ರೀ ಮಿಂಚು

    ಭೋಜ್‍ಪುರಿ ಸಿನಿಮಾದಲ್ಲಿ ಕನ್ನಡತಿ ಮೇಘಶ್ರೀ ಮಿಂಚು

    ಬೆಂಗಳೂರು: ಕಿರುತೆರೆ ಬೆಡಗಿ, ಸ್ಯಾಂಡಲ್‍ವುಡ್ ಚೆಂದದ ನಟಿ, ಕೃಷ್ಣ ತುಳಸಿ ಸಿನಿಮಾದಲ್ಲಿ ಸಂಚಾರಿ ವಿಜಯ್ ಜೊತೆ ನಟಿಸಿ ಗಮನ ಸೆಳೆದ ಮಲೆನಾಡಿನ ಹುಡುಗಿ ಮೇಘಶ್ರೀ, ಸ್ಯಾಂಡಲ್‍ವುಡ್, ಟಾಲಿವುಡ್, ಕಾಲಿವುಡ್ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಈಕೆ ಇದೀಗ ಭೋಜ್‍ಪುರಿ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದ್ದಾರೆ.

    ಭೋಜ್‍ಪುರಿಯ ಖ್ಯಾತ ನಟನ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿರುವ ಸಂಭ್ರಮದಲ್ಲಿರುವ ಮೇಘಶ್ರೀ ಈ ಮೂಲಕ ಕನ್ನಡದ ಕಂಪು ಪಸರಿಸುತ್ತಿದ್ದಾರೆ. ಭೋಜ್‍ಪುರಿ ಚಿತ್ರರಂಗದ ಖ್ಯಾತ ನಟ ಕೇಸರಿಲಾಲ್ ಯಾದವ್ ಅಭಿನಯದ “ಅಪರಾಧಿ” ಸಿನಿಮಾದಲ್ಲಿ ಮೇಘಶ್ರೀ ನಟಿಸುತ್ತಿದ್ದಾರೆ. ಕೇಸರಿಲಾಲ್ ಯಾದವ್ ಜೊತೆ ನಾಯಕಿಯಾಗಿ ಸ್ಕ್ರೀನ್ ಶೇರ್ ಮಾಡಿರುವ ಸಂತಸದಲ್ಲಿರುವ ಮೇಘಶ್ರೀ ತಮ್ಮ ಪಾತ್ರದ ಬಗ್ಗೆಯೂ ಸಖತ್ ಥ್ರಿಲ್ ಆಗಿದ್ದಾರೆ. ಕ್ರೈಂ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಈ ಚಿತ್ರದ ಶೂಟಿಂಗ್ ಉತ್ತರಪ್ರದೇಶದ ಗೋರಖ್‍ಪುರ್ ನಲ್ಲಿ ಭರದಿಂದ ಸಾಗುತ್ತಿದೆ. “ಅಪರಾಧಿ” ಚಿತ್ರಕ್ಕೆ ಶೇಖರ್ ಶರ್ಮಾ ಎಂಬುವವರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ಎಲ್ಲಾ ಅಡೆತಡೆಗಳಿಗೂ ‘ಗ್ರೂಫಿ’ ಸಕ್ಸಸ್ ಉತ್ತರ – 25 ದಿನದ ಸಂಭ್ರಮದಲ್ಲಿ ಚಿತ್ರತಂಡ

    ಇದಕ್ಕೂ ಮುನ್ನ ಕೇಸರಿಲಾಲ್ ಯಾದವ್ ಜೊತೆ “ರೈಟ್” ಸಿನಿಮಾದಲ್ಲಿ ನಟಿಸಿರುವ ಮೇಘಶ್ರೀಗೆ “ಅಪರಾಧಿ” ಎರಡನೇ ಭೋಜ್‍ಪುರಿ ಸಿನಿಮಾ. “ರೈಟ್” ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಚಿತ್ರರಂಗದ ವಾತಾವರಣ, ಚಿತ್ರತಂಡದ ಸಹಕಾರ ಹಾಗೂ ಭೋಜ್ ಪುರಿ ಸಂಸ್ಕೃತಿ ವೇಷ ಭೂಷಣ ತುಂಬಾ ಖುಷಿ ಕೊಟ್ಟಿದೆ. ಸಿನಿಮಾ ಬಿಡುಗಡೆಯನ್ನು ಎದುರು ನೋಡುತ್ತಿದ್ದೇನೆ ಎನ್ನುತ್ತಾರೆ ಮೇಘಶ್ರೀ.

    ಕಿರುತೆರೆ, ಹಿರಿತೆರೆ ಎರಡರಲ್ಲೂ ಸಿಕ್ಕಾಪಟ್ಟೆ ಬ್ಯುಸಿಯಾಗಿರುವ ಮೇಘಶ್ರೀ ಮೂಲತಃ ಮಲೆನಾಡಿನವರು. ಕಿರುತೆರೆ ಮೂಲಕ ಪ್ರೇಕ್ಷಕರ ಮನಗೆದ್ದ ನಟಿಗೆ ಸಾಲು ಸಾಲು ಸಿನಿಮಾ ಆಫರ್‍ ಗಳು ಒಲಿದು ಬಂತು. ಕೃಷ್ಣ ತುಳಸಿ, ಕದ್ದುಮುಚ್ಚಿ, ಮಾರ್ಚ್ 22, ದಶರಥ, ರಾಜಾಮಾತಾರ್ಂಡ ಚಿತ್ರದಲ್ಲಿ ನಟಿಸಿರುವ ಮೇಘಶ್ರೀ ಕೈಯಲ್ಲಿ ಹಲವು ಕನ್ನಡ ಸಿನಿಮಾಗಳಿವೆ. ಇದರ ಜೊತೆಗೆ ತಮಿಳು ಚಿತ್ರರಂಗದಲ್ಲೂ ಬ್ಯುಸಿಯಾಗಿದ್ದಾರೆ. ತಮಿಳು ಸಿನಿಮಾವೊಂದರಲ್ಲಿ ಲೀಡ್ ರೋಲ್ ನಲ್ಲಿ ಬಣ್ಣಹಚ್ಚಿದ್ದಾರೆ. ತಮಿಳಿನ ಖ್ಯಾತ ಧಾರಾವಾಹಿಯೊಂದರಲ್ಲೂ ಅಭಿನಯಿಸುತ್ತಿದ್ದಾರೆ. ಇದನ್ನೂ ಓದಿ: ನಾನಿನ್ನೂ ಬದುಕುವುದಿಲ್ಲ: ನಟಿ ವಿಜಯಲಕ್ಷ್ಮೀ ಅತಂಕ

  • ‘ಆಸಿಂಕೋಜಿಲ್ಲ’ ಶೀರ್ಷಿಕೆ ಟ್ರೈಲರ್ ಅನಾವರಣ

    ‘ಆಸಿಂಕೋಜಿಲ್ಲ’ ಶೀರ್ಷಿಕೆ ಟ್ರೈಲರ್ ಅನಾವರಣ

    ಬೆಂಗಳೂರು: ಶೀರ್ಷಿಕೆಯಿಂದಲೇ ಕುತೂಹಲ ಕೆರಳಿಸಿ ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಕರೆತರುವ ಪ್ರಯತ್ನ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದೆ. ಇಲ್ಲೊಂದು ಚಿತ್ರತಂಡ ಈಗಾಗಲೇ ತನ್ನ ಚಿತ್ರೀಕರಣವನ್ನೆಲ್ಲಾ ಮುಗಿಸಿಕೊಂಡ ನಂತರ ಶೀರ್ಷಿಕೆಯನ್ನು ಅನಾವರಣ ಮಾಡಿದೆ. ಜೊತೆಗೆ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಕೂಡ ಬಿಡುಗಡೆ ಮಾಡಿದೆ. ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ ನಡೆದ ಈ 3 ಕಾರ್ಯಕ್ರಮಗಳಲ್ಲಿ ಸದಸ್ಯರೆಲ್ಲರೂ ಭಾಗವಹಿಸಿದ್ದರು. ಶಮನ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಹೆಸರು `ಆಸಿಂಕೋಜಿಲ್ಲ’. ನಿರ್ಮಾಪಕ ಭಾಮ ಹರೀಶ್ ಈ ಚಿತ್ರದ ಟೈಟಲ್ ಅನಾವರಣಗೊಳಿಸಿದರು. ಅಲ್ಲದೆ ನಟ ಸುಮಂತ್ ಶೈಲೇಂದ್ರ ಈ ಚಿತ್ರದ ಟ್ರೈಲರ್ ಗೆ ಚಾಲನೆ ನೀಡಿದರು. ಮಂಜುನಾಥ್ ಕೆ.ಸಿ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಸಾಹಿತ್ಯ ರಚಿಸಿದ್ದಾರೆ.

    ಈ ಸಂದರ್ಭದಲ್ಲಿ ನಿರ್ದೇಶಕ ಶಮನ್ ಮಾತನಾಡುತ್ತಾ ಈ ಚಿತ್ರವನ್ನು ಡಿಫರೆಂಟಾಗಿ ಟ್ರೈ ಮಾಡಿದ್ದೇವೆ. ವಿಜ್ಞಾನಿಯೊಬ್ಬ ಸಮಾಜದಲ್ಲಿ ಒಂದು ಬದಲಾವಣೆ ತರಬೇಕೆಂದು ಯೋಚಿಸಿ ಕಾಡಿಗೆ ಹೋಗಿ ಹೊಸ ಸಾಹಸವನ್ನು ಮಾಡುತ್ತಾನೆ. ಆ ಪ್ರಕ್ರಿಯೆಗೆ ಆತ ಕೊಡುವ ಹೆಸರೇ `ಆಸಿಂಕೋಜಿಲ್ಲ’. ಈ ಸಂದರ್ಭದಲ್ಲಿ ಆತನ ಜೊತೆಗೆ ಇನ್ನೂ ನಾಲ್ಕು ಜನ ವಿಶೇಷ ವ್ಯಕ್ತಿಗಳು ಸೇರಿಕೊಳ್ಳುತ್ತಾರೆ. ಕಾಡಿನಲ್ಲಿ ಅವರಿಗೆ ಎದುರಾದ ಸಮಸ್ಯೆ ಏನು? ಅದರಿಂದ ಅವರು ಹೇಗೆ ಹೊರಬಂದರು? ಎಂಬುದನ್ನು ಆಸಿಂಕೋಜಿಲ್ಲ ಹೇಳುತ್ತದೆ. ಬೆಂಗಳೂರು, ಶಿವಮೊಗ್ಗ, ಮೈಸೂರು ಸುತ್ತಮುತ್ತ 50 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದೇವೆ ಎಂದು ಹೇಳಿದರು. ಈ ಚಿತ್ರದಲ್ಲಿ 2 ಹಾಡುಗಳಿದ್ದು, ಅಮೋಘವರ್ಷ ಸಂಗೀತ ಸಂಯೋಜನೆ ಮಾಡಿದ್ದಾರೆ. ಸೋಮಶೇಖರ್ ಶೆಟ್ಟಿ ಈ ಚಿತ್ರಕ್ಕೆ ಬಂಡಾವಳ ಹೂಡಿ ನಿರ್ಮಾಣ ಮಾಡಿದ್ದಾರೆ. ಹಿರಿಯ ನಟ ಹೊನ್ನಾವಳ್ಳಿ ಕೃಷ್ಣ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ನಿರ್ಮಾಪಕ ಸೋಮಶೇಖರ ಶೆಟ್ಟಿ ಮಾತನಾಡುತ್ತಾ ಈ ಚಿತ್ರದ ಕಥೆ ಹಲವಾರು ವಿಶೇಷತೆಗಳನ್ನು ಹೊಂದಿದೆ. ಈ ಚಿತ್ರದಲ್ಲಿ ಕೆಲಸ ಮಾಡಿದವರೆಲ್ಲ ಹೊಸಬರಾದರು ಹೊಸದಾಗಿ ಪ್ರಯತ್ನ ಮಾಡಿದ್ದಾರೆ. ಮುಂದಿನ ತಿಂಗಳು ಚಿತ್ರವನ್ನು ಬಿಡುಗಡೆ ಮಾಡುವ ಪ್ಲಾನ್ ಹಾಕಿಕೊಂಡಿದ್ದೇವೆ ಎಂದು ಹೇಳಿದರು.

    ವಿಷ್ಣು ತೇಜ, ಪ್ರಶಾಂತ್, ತಾರಕ್ ಸೋನಮ್ ರಾಯ್, ಭಾನು ಪ್ರಿಯ ಶೆಟ್ಟಿ, ಮೇಘಶ್ರೀ ಹಾಗೂ ರಕ್ಷಿಕ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕ ನಟ ವಿಷ್ಣು ತೇಜ ಮಾತನಾಡಿ ಈ ಹಿಂದೆ ತೆಲುಗು ಚಿತ್ರವೊಂದರಲ್ಲಿ ನಟಿಸಿದ್ದೆ ಇದು ನನ್ನ 2ನೇ ಚಿತ್ರ ಎಂದರೆ ಮತ್ತೊಬ್ಬ ನಟ ಪ್ರಶಾಂತ್ ಮಾತನಾಡಿ ಮುಂಗೋಪಿ ಯುವಕನ ಪಾತ್ರ ಸಿಸ್ಟಂನಲ್ಲಿ ಬದಲಾವಣೆ ತರಲು ಹೋಗಿ ಏನೇನೆಲ್ಲಾ ಮಾಡುತ್ತಾನೆ ಅನ್ನೋದೆ ನನ್ನ ಪಾತ್ರ ಎಂದು ಹೇಳಿಕೊಂಡರು. ನಂತರ ನಟಿಯರಾದ ರಕ್ಷಿಕ, ಭಾನುಪ್ರಿಯ ಶೆಟ್ಟಿ ಹಾಗೂ ಸೋನಮ್ ರಾಯ್ ಕೂಡ ತಮ್ಮ ತಮ್ಮ ಪಾತ್ರಗಳ ಬಗ್ಗೆ ಚುಟುಕಾಗಿ ಹೇಳಿಕೊಂಡರು.