Tag: ಮೇಣದ ಬತ್ತಿ

  • ಬಾಲಕಿಯ ಗುಪ್ತಾಂಗದ ಮೇಲೆ ಮೇಣದ ಬತ್ತಿ ಇಟ್ಟು ಅತ್ಯಾಚಾರ- ಬಂಧನ ಭೀತಿಗೆ ವಿಷ ಸೇವಿಸಿದ ವೃದ್ಧ

    ಬಾಲಕಿಯ ಗುಪ್ತಾಂಗದ ಮೇಲೆ ಮೇಣದ ಬತ್ತಿ ಇಟ್ಟು ಅತ್ಯಾಚಾರ- ಬಂಧನ ಭೀತಿಗೆ ವಿಷ ಸೇವಿಸಿದ ವೃದ್ಧ

    ಲಕ್ನೋ: ಬಾಲಕಿಯ (Girl) ಮೇಲೆ ಅತ್ಯಾಚಾರ ಎಸಗಿದ್ದ ವೃದ್ಧನೊಬ್ಬ(Old Man) ಬಂಧನದ ಭೀತಿಯ ಹಿನ್ನೆಲೆಯಲ್ಲಿ ವಿಷ ಸೇವಿಸಿದ ಘಟನೆ ಉತ್ತರಪ್ರದೇಶದ (Uttar Pradesh) ಮಥುರಾ ಜಿಲ್ಲೆಯಲ್ಲಿ ನಡೆದಿದೆ.

    ಮಥುರಾ ಜಿಲ್ಲೆಯಲ್ಲಿ ಪ್ಯಾರೇಲಾಲ್(60) ಎಂಬಾತ 8 ವರ್ಷದ ಬಾಲಕಿಗೆ ಆಮಿಷವೊಡ್ಡಿ ತನ್ನ ಮನೆಗೆ ಕರೆದುಕೊಂಡು ಬಂದಿದ್ದಾನೆ. ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೇ ಆಕೆಯ ಖಾಸಗಿ ಭಾಗಗಳಲ್ಲಿ ಮೇಣದ ಬತ್ತಿ (Candle) ಇಟ್ಟು ವಿಕೃತಿ ಮೆರೆದಿದ್ದ.

    ಆದರೆ ಬಾಲಕಿ ಆಳುತ್ತಾ ತನ್ನ ಮನೆಗೆ ಓಡಿ ಬಂದು ಘಟನೆಯನ್ನು ಕುಟುಂಬಸ್ಥರಿಗೆ ತಿಳಿಸಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರು ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಕೋಲಾರದ JDS ಮುಖಂಡ ಸುಹೆಲ್ ದಿಲ್ ನವಾಜ್ AAP ಸೇರ್ಪಡೆ

    POLICE JEEP

    ಪ್ರಕರಣ ದಾಖಲಾಗಿರುವ ವಿಷಯ ತಿಳಿದ ಬಳಿಕ ಪ್ಯಾರೇಲಾಲ್ ವಿಷ ಸೇವಿಸಿದ್ದಾನೆ. ಪೊಲೀಸರು ಆತನನ್ನು ಬಂಧಿಸಲು ಹೋದಾಗ ವಿಷಯ ತಿಳಿದಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ಯಾರೇಲಾಲ್ ಸದ್ಯ ಅಪಾಯದಿಂದ ಪಾರಾಗಿದ್ದಾನೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೆಡಿಕಲ್ ಶಿಕ್ಷಣ ಲಾಭಗಳಿಸುವ ವ್ಯವಹಾರವಲ್ಲ – ಬೋಧನಾ ಶುಲ್ಕ ಕೈಗೆಟುಕುವಂತಿರಬೇಕು ಎಂದ ಸುಪ್ರೀಂ

    Live Tv
    [brid partner=56869869 player=32851 video=960834 autoplay=true]

  • ಬರ್ತ್‍ಡೇ ಕ್ಯಾಂಡಲ್ ಊದುವಾಗ ಕೂದಲಿಗೆ ಬೆಂಕಿ – ಕಿರುಚಾಡಿದ ಟಿವಿ ಸ್ಟಾರ್

    ಬರ್ತ್‍ಡೇ ಕ್ಯಾಂಡಲ್ ಊದುವಾಗ ಕೂದಲಿಗೆ ಬೆಂಕಿ – ಕಿರುಚಾಡಿದ ಟಿವಿ ಸ್ಟಾರ್

    ವಾಷಿಂಗ್ಟನ್: ಹುಟ್ಟುಹಬ್ಬದ ಸಮಾರಂಭದಲ್ಲಿ ಬರ್ತ್‍ಡೇ ಕ್ಯಾಂಡಲ್ ಊದುವಾಗ ಅಮೇರಿಕ ಸ್ಟಾರ್ ನಟಿ ನಿಕೋಲ್ ರಿಚಿ ಕೂದಲಿಗೆ ಬೆಂಕಿ ಹೊತ್ತಿ ಕಿರುಚಾಡಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    birthday candle

    ಸಾಮಾನ್ಯವಾಗಿ ಬರ್ತ್‍ಡೇ ದಿನ ಪ್ರತಿಯಬ್ಬರು ತಮ್ಮ ಪ್ರೀತಿ ಪಾತ್ರರೊಂದಿಗೆ ಇರಲು ಇಚ್ಛಿಸುತ್ತಾರೆ. ಅದರಲ್ಲಿಯೂ ಕೇಕ್, ಮೇಣದ ಬತ್ತಿ, ಬರ್ತ್‍ಡೇ ಕ್ಯಾಪ್ ಇವೆಲ್ಲವೂ ಸದಾ ನೆನಪಿನಲ್ಲಿ ಉಳಿಯುತ್ತದೆ. ಆದರೆ ಅಮೇರಿಕದ ಟಿವಿ ಸ್ಟಾರ್ ನಿಕೋಲ್ ರಿಚಿಯವರ 40ನೇ ವರ್ಷದ ಹುಟ್ಟುಹಬ್ಬದ ದಿನದಂದು ನಡೆದಿದ್ದೇ ಬೇರೆಯಾಗಿದೆ. ಸದ್ಯ ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಬರ್ತ್‍ಡೇ ಸಮಾರಂಭದಲ್ಲಿ ನಿಕೋಲ್ ರಿಚಿ ಮಾತ್ರವಲ್ಲ ಪಾರ್ಟಿಗೆ ಆಗಮಿಸಿದ್ದವರು ಕೂಡ ಈ ಘಟನೆಯನ್ನು ಸದಾ ನೆನಪಿನಲ್ಲಿಟ್ಟುಕೊಂಡಿರುತ್ತಾರೆ. ಇದನ್ನೂ ಓದಿ: ಮೂಲೆಗುಂಪಾಗಿರೋ ಕಾಂಗ್ರೆಸ್ ಟಾಂಗಾ, ಸೈಕಲ್ ಓಡಿಸೋದಕ್ಕೆ ಮಾತ್ರ ಸೀಮಿತ: ಆರ್. ಅಶೋಕ್

    ಸೆಪ್ಟೆಂಬರ್ 21ರಂದು 40ನೇ ವಸಂತಕ್ಕೆ ಕಾಲಿಟ್ಟ ರಿಚಿ, ಕುಟುಂಬ ಮತ್ತು ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೇಳೆ ಕಪ್ಪು ಬಣ್ಣದ ಆಫ್ ಶೋಲ್ಡರ್ ಟಾಪ್ ಧರಿಸಿ, ಕೇಕ್ ಮೇಲೆ ನಿಲ್ಲಿಸಿದ್ದ ಕ್ಯಾಂಡಲ್‍ನನ್ನು ಊದಲು ಮುಂದಕ್ಕೆ ವಾಲಿದಾಗ ರಿಚಿ ಗುಂಗುರು ಕೂದಲು ಕ್ಯಾಂಡಲ್‍ಗೆ ತಾಗಿ ಬೆಂಕಿ ಹೊತ್ತಿಕೊಳ್ಳುತ್ತದೆ. ಈ ವೇಳೆ ಗಾಬರಿಗೊಂಡ ರಿಚಿ ಕಿರುಚಾಡುತ್ತಾ ಕೂದಲನ್ನು ಹೊಡೆದುಕೊಳ್ಳುತ್ತಾರೆ. ಆಗ ಇತರರು ಕೂಡ ಆಕೆಗೆ ಸಹಾಯ ಮಾಡುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

    ಸದ್ಯ ಹುಟ್ಟುಹಬ್ಬದ ದಿನದಂದು ತಮ್ಮ ಅನುಯಾಯಿಗಳೊಂದಿಗೆ ನಡೆದ ಈ ಅಹಿತಕರವಾದ ಘಟನೆಯನ್ನು ರಿಚಿಯವರು ಹಂಚಿಕೊಂಡಿದ್ದಾರೆ. ವೈರಲ್ ಆಗುತ್ತಿರುವ ಈ ವೀಡಿಯೋ, ಇಲ್ಲಿಯವರೆಗೂ 2.8 ಮಿಲಿಯನ್‌ಗೂ  ಅಧಿಕ ಮಂದಿ ವೀಕ್ಷಿಸಿದ್ದು, ಕೆಲವರು  ಅದೃಷ್ಟವಶಾತ್ ಒಳ್ಳೆಯದಾಯಿತು ಎಂದರೆ, ಮತ್ತಷ್ಟು ಮಂದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಇದನ್ನೂ ಓದಿ: ನಾನು ಸಾಮಾನ್ಯ ಮುನುಷ್ಯ, ನನಗೆ ಸೆಕ್ಯೂರಿಟಿ ಬೇಡವೆಂದ: ಪಂಜಾಬ್ ಸಿಎಂ

  • ಮೇಣದ ಬತ್ತಿ ಹಿಡಿದು ಕೋವಿಡ್ ವಾರಿಯರ್ಸ್ ಪ್ರತಿಭಟನೆ

    ಮೇಣದ ಬತ್ತಿ ಹಿಡಿದು ಕೋವಿಡ್ ವಾರಿಯರ್ಸ್ ಪ್ರತಿಭಟನೆ

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ವಾರಿಯರ್ಸ್ ಸರ್ಕಾರದ ವಿರುದ್ಧ ಸಿಡಿದೆದ್ದು, ಮೌನ ಪ್ರತಿಭಟನೆಗೆ ಇಳಿದಿದ್ದಾರೆ.

    ಕಳೆದ ಹದಿನೈದು ದಿನದಿಂದ ಕೋವಿಡ್ ವಾರಿಯರ್ಸ್ ಪ್ರತಿಭಟನೆ ಮಾಡುತ್ತಿದ್ದಾರೆ. ಸೋಮವಾರ ರಾತ್ರಿ ನಗರದ ಬೆಂಗಳೂರು ಮೆಡಿಕಲ್ ಕಾಲೇಜ್ ವಿಕ್ಟೋರಿಯಾ ಆವರಣದಲ್ಲಿ ವೈದ್ಯಕೀಯ ಸಿಬ್ಬಂದಿ ಮೇಣದ ಬತ್ತಿ ಹಿಡಿದು ಆಸ್ಪತ್ರೆಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದರು. ಜೊತೆಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ್ದಾರೆ.

    ಖಾಯಂ ನೌಕರರಿಗೆ ವೇತನ ಹೆಚ್ಚಳ, ಮೂಲಭೂತ ಸೌಕರ್ಯ, ಪಿಂಚಣಿ ವ್ಯವಸ್ಥೆ ಸೇರಿದಂತೆ ಅನೇಕ ಬೇಡಿಕೆಯನ್ನು ಮುಂದಿಟ್ಟು ರಾತ್ರಿ ಆಸ್ಪತ್ರೆಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದರು.

    ಕಿಮ್ಸ್ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ
    ಇತ್ತ ಹುಬ್ಬಳ್ಳಿಯಲ್ಲಿ ಎನ್‍ಪಿಎಸ್ ಸೌಲಭ್ಯ ಸೇರಿದಂತೆ ಜ್ಯೋತಿ ಸಂಜೀವಿನಿ ಒದಗಿಸುವಂತೆ ಆಗ್ರಹಿಸಿ ಕಿಮ್ಸ್ ಶುಶ್ರೂಷಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಸಿಬ್ಬಂದಿ ಸೋಮವಾರ ಸಂಜೆ ಕೂಡ ಕಪ್ಪು ಪಟ್ಟಿ ಧರಿಸಿ, ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

    ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಹುಬ್ಬಳ್ಳಿಯ ಕಿಮ್ಸ್ ಆವರಣದ ಎದುರು ಕಪ್ಪು ಪಟ್ಟಿ ಧರಿಸಿ ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದೆ ಕಾರ್ಯ ಮಾಡಿದ್ದೇವೆ. ಪಿಂಚಣಿ ಸೌಲಭ್ಯವನ್ನು ನಮಗೂ ನೀಡಿ ಎಂದು ಒತ್ತಾಯಿಸಿದರು. ಅಲ್ಲದೇ ವೈದ್ಯಕೀಯ ವಿದ್ಯಾಲಯದಲ್ಲಿ ಹಾಗೂ ಸಂಶೋಧನಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ತಾರತಮ್ಯವನ್ನು ನಿಭಾಯಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

  • ಮೇಣದ ಬತ್ತಿಯಿಂದ ಹಾಸಿಗೆಗೆ ಬೆಂಕಿ- ತಾಯಿ ಸಹಿತ ಹಸುಗೂಸು ಸಾವು

    ಮೇಣದ ಬತ್ತಿಯಿಂದ ಹಾಸಿಗೆಗೆ ಬೆಂಕಿ- ತಾಯಿ ಸಹಿತ ಹಸುಗೂಸು ಸಾವು

    ಚಿತ್ರದುರ್ಗ: ಮನೆಯೊಳಗಡೆ ಕತ್ತಲು ಅಂತ ಬೆಳಕಿಗಾಗಿ ಹಚ್ಚಿಟ್ಟಿದ್ದ ಮೇಣದ ಬತ್ತಿಯು ಹಾಸಿಗೆ ಮೇಲೆ ಬಿದ್ದು ಬೆಂಕಿ ಹೊತ್ತಿ ಉರಿದು 11 ದಿನದ ಮಗು ಸಹಿತ ಬಾಣಂತಿ ಸಾವನ್ನಪ್ಪಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೊಡ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಗೌರಮ್ಮ(20) ಹಾಗೂ 15 ದಿನದ ಗಂಡು ಮಗು ಬೆಂಕಿಗೆ ಆಹುತಿಯಾದ ದುರ್ದೈವಿಗಳು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತೊಡ್ಲಾರಹಟ್ಟಿ ಗ್ರಾಮದಲ್ಲಿ ಗೌರಮ್ಮ ಕಳೆದ ಮೂರು ವರ್ಷಗಳ ಹಿಂದೆ ಇದೇ ಗ್ರಾಮದ ಸೋದರ ಮಾವನ ಮಗನಾದ ಲೋಕೇಶ್ ಎಂಬವರ ಜೊತೆ ವಿವಾಹವಾಗಿದ್ದರು. ಈ ದಂಪತಿಗೆ 11 ದಿನಗಳ ಹಿಂದೆ ಗಂಡು ಮಗು ಜನನವಾಗಿತ್ತು.

    ಗುರುವಾರ ಸಂಜೆ ಮನೆಯಲ್ಲಿ ಕರೆಂಟ್ ಹೋದ ಕಾರಣ ಮೇಣದ ಬತ್ತಿ ಹಚ್ಚಿದ್ದಾರೆ. ಮಗು ಹಾಗೂ ತಾಯಿ ಮಲಗಿದ್ದ ಹಾಸಿಗೆ ಮೇಲ್ಭಾಗದಲ್ಲೇ ಮೇಣದ ಬತ್ತಿ ಹಚ್ಚಿದ್ದರಿಂದ ಆಕಸ್ಮಿಕವಾಗಿ ಮೇಣದಬತ್ತಿ ಹಾಸಿಗೆ ಮೇಲೆ ಬಿದ್ದಿದೆ. ಆ ಸಮಯದಲ್ಲಿ ತಾಯಿ ಮತ್ತು ಮಗು ಗಾಢ ನಿದ್ರೆಯಲ್ಲಿದ್ದರು ಎಂದು ಹೇಳಲಾಗುತ್ತಿದ್ದು, ಮೇಣದ ಬತ್ತಿಯಲ್ಲಿದ್ದ ಬೆಂಕಿ ಹಾಸಿಗೆಯ ಪೂರ್ಣಭಾಗಕ್ಕೆ ಹೊತ್ತಿಕೊಂಡಿದೆ. ಹೀಗಾಗಿ ಬೆಂಕಿ ನೊಡುವಷ್ಟರಲ್ಲಿ ತಾಯಿ ಹಾಗೂ ಮಗುವಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಸುಗೂಸು ಸ್ಥಳದಲ್ಲೇ ಸಾವನ್ನಪ್ಪಿದೆ.

    ಈ ವಿಚಾರ ತಿಳಿದ ಕೂಡಲೇ ಗೌರಮ್ಮಳ ತಾಯಿ ಹಾಗೂ ಗಂಡ ಲೋಕೇಶ್ ಸ್ಥಳಕ್ಕೆ ಧಾವಿಸಿ, ಬೆಂಕಿಯಲ್ಲಿ ಬೆಂದಿದ್ದ ಗೌರಮ್ಮನನ್ನು ತಕ್ಷಣ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಗೌರಮ್ಮ ಸಾವನ್ನಪ್ಪಿದ್ದಾರೆ.

    ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ತಹಶೀಲ್ದಾರ್ ವೆಂಕಟೇಶಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

  • ಮಹಿಳಾ ಕೈದಿಗಳ ಕೈಯಲ್ಲಿ ಅರಳಿತು ಬಣ್ಣ ಬಣ್ಣದ ದೀಪ, ಮೇಣದ ಬತ್ತಿ

    ಮಹಿಳಾ ಕೈದಿಗಳ ಕೈಯಲ್ಲಿ ಅರಳಿತು ಬಣ್ಣ ಬಣ್ಣದ ದೀಪ, ಮೇಣದ ಬತ್ತಿ

    ಧಾರವಾಡ: ದೀಪಾವಳಿ ಹಬ್ಬ ಬಂದ್ರೆ ಸಾಕು ಮಾರುಕಟ್ಟೆಗೆ ವಿವಿಧ ರೀತಿಯ ಬಣ್ಣ ಬಣ್ಣದ ದೀಪದ ಹಣತೆಗಳು ರಾರಾಜಿಸುತ್ತವೆ. ಅಷ್ಟೆ ಅಲ್ಲದೆ ವಿವಿಧ ರೀತಿಯ ವಿದ್ಯುತ್ ಅಲಂಕಾರಿಕ ವಸ್ತುಗಳು ಲಗ್ಗೆಯಿಟ್ಟು, ಗುಡಿಕೈಗಾರಿಕೆಗಳಿಗೆ ಮಾರಕವಾಗಿವೆ. ಇವೆಲ್ಲದರ ನಡುವೆಯೇ ಧಾರವಾಡದ ಜೈಲಿನ ಮಹಿಳಾ ಕೈದಿಗಳು ಬಣ್ಣ ಬಣ್ಣದ ದೀಪ, ಮೇಣದ ಬತ್ತಿಗಳ ತಯಾರಿಕೆಗೆ ಇಳಿದಿದ್ದಾರೆ.

    ಧಾರವಾಡ ಕೇಂದ್ರ ಕಾರಾಗೃಹದಲ್ಲಿಗ ಬಣ್ಣ ಬಣ್ಣ ದೀಪಗಳನ್ನು ತಯಾರಿಸಿ ಮಾರಾಟ ಮಾಡಲು ಸಜ್ಜಾಗಿದ್ದಾರೆ. ಬಂಧಿತ ಕೈದಿಗಳು ಇಂತಹ ಕೆಲಸಕ್ಕೆ ಮುಂದಾಗಿದ್ದು ಜೈಲು ಅಧೀಕ್ಷಕಿ ಅನಿತಾ ಅವರು ಎಲ್ಲ ಸಹಕಾರವನ್ನು ನೀಡಿದ್ದಾರೆ.

    ಜೈಲು ಅಧೀಕ್ಷಕಿ ಅನಿತಾ ಈ ಬಗ್ಗೆ ಮಾತನಾಡಿ, ಸುಮಾರು 15-20 ಮಂದಿ ಮಹಿಳಾ ಕೈದಿಗಳು ಬಣ್ಣದ ದೀಪ ಹಾಗೂ ಮೇಣದ ಬತ್ತಿಗಳನ್ನು ತಯಾರಿಸಿದ್ದಾರೆ. ಸುಮಾರು 3 ಸಾವಿರ ದೀಪಗಳು ಈಗಾಗಲೇ ತಯಾರಾಗಿದೆ. ಅದನ್ನು ಜೈಲು ಸಮೀಪವಿರುವ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತದೆ. ಈ ಮೂಲಕ ಮಹಿಳಾ ಬಂಧಿಗಳನ್ನು ಚಟುವಟಿಕೆಯಲ್ಲಿರುವಂತೆ ಮಾಡುವ ಉದ್ದೇಶವಾಗಿದೆ. ಇಲ್ಲಿನ ಕೈದಿಗಳು ಬಿಡುಗಡೆಯ ನಂತರವು ಸಹ ಈ ಕೌಶಲ್ಯ ಅವರ ಜೀವನ ರೂಪಿಸಿಕೊಳ್ಳುವಲ್ಲಿ ಅನೂಕುಲವಾಗಲಿದೆ ಎನ್ನುತ್ತಾರೆ. ಈ ಬಾರಿಯ ಈ ದೀಪಾವಳಿ ಹಬ್ಬಕ್ಕೆ ಮೂರು ಸಾವಿರ ಬಣ್ಣದ ದೀಪ ಹಾಗೂ ಮೇಣದ ಬತ್ತಿ ತಯಾರಿಸಿದ್ದಾರೆ ಅಂತ ಹೇಳಿದ್ರು.

    ಮಹಿಳಾ ಕೈದಿಗಳು ಈ ಬಾರಿ ದೀಪಾವಳಿ ಪರಿಣಿತಿಯನ್ನು ಮಾಡಿದ್ದಾರೆ. ಆದ್ರೆ ಅದಕ್ಕೆ ಸರಿಯಾದ ಮಾರುಕಟ್ಟೆ ಸಿಗುತ್ತಿಲ್ಲ ಅಂತ ಜೈಲು ಅಧೀಕ್ಷಕಿ ಹೇಳಿದಾಗ, ಇದೆಲ್ಲಾ ನಮ್ಮ ಜವಾಬ್ದಾರಿ ಅಂತ ನನಗೆ ಅನ್ನಿಸಿತ್ತು. ಕೈದಿಗಳು ಮಾಡುವ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆಯನ್ನು ಒದಗಿಸಿದ್ರೆ ಅವರ ಆರ್ಥಿಕ ಪರಿಸ್ಥಿತಿ ಬದಲಾಗುವುದರಲ್ಲಿ ಎರಡು ಮಾತಿಲ್ಲ. ಈ ಮೂಲಕ ಅವರಲ್ಲಿ ಅಪರಾಧಿ ಎಂಬ ಮನೋಭಾವದಿಂದ ಹೊರಬಂದು ಆತ್ಮಗೌರವ ಹುಟ್ಟಿಸುವಲ್ಲಿ ನೆರವಾಗುತ್ತದೆ. ಹೀಗಾಗಿ ಸರ್ಕಾರ ಹಾಗೂ ಸರ್ಕಾರೇತರ ಸಂಘ-ಸಂಸ್ಥೆಗಳು ಇಂತಹ ಒಂದು ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಬೇಕು ಅಂತ ಹಣತೆ ಮಾರಾಟದ ಉಸ್ತುವಾರಿ ವಹಿಸಿಕೊಂಡ ಸುಜಾತಾ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv