Tag: ಮೇಯರ್ ಗಂಗಾಬಿಕೆ

  • ಬೆಂಗಳೂರಿಗರೇ ಸೆಪ್ಟೆಂಬರ್‌ನಿಂದ ಹುಷಾರ್: ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರ ಕಠಿಣ ಕ್ರಮ

    ಬೆಂಗಳೂರಿಗರೇ ಸೆಪ್ಟೆಂಬರ್‌ನಿಂದ ಹುಷಾರ್: ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರ ಕಠಿಣ ಕ್ರಮ

    ಬೆಂಗಳೂರು: ಮಾರ್ಷಲ್‍ಗಳು ಮತ್ತಷ್ಟು ಕಾರ್ಯೊನ್ಮುಖವಾಗಲಿದ್ದು, ಸಿಕ್ಕ ಸಿಕ್ಕಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಈ ನಿಟ್ಟಿನಲ್ಲಿ ದಂಡದ ಪ್ರಮಾಣವನ್ನು ಸೆಪ್ಟಂಬರ್ ನಿಂದ 100 ರೂ. ರಿಂದ 500 ರೂ.ಗೆ ಏರಿಕೆ ಮಾಡಲು ಮುಂದಾಗಿದೆ.

    ಘನತ್ಯಾಜ್ಯ ನಿರ್ವಹಣೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಅವರು, ಕಸದ ಹೊಸ ಟೆಂಡರ್ ಗುತ್ತಿಗೆದಾರರು ಮಿಕ್ಸ್ ಕಸ ಪಡೆಯುವುದಿಲ್ಲ. ಹಸಿ ಕಸ, ಒಣ ಕಸ ಗುತ್ತಿಗೆದಾರರು ಬೇರೆ ಬೇರೆ ಎಂದು ಗುರುತಿಸಲಾಗುತ್ತದೆ. ಪೌರ ಕಾರ್ಮಿಕರಿಗೆ ಕಸ ಕೊಡದಿದ್ದರೆ ಆ ಮನೆಗಳಿಗೆ ಅಧಿಕಾರಿಗಳೇ ಭೇಟಿ ಮಾಡುತ್ತಾರೆ. ಎಲ್ಲಂದರಲ್ಲಿ ಕಸ ಹಾಕಿದರೆ, ರೋಡ್ – ಅಂಡರ್ ಪಾಸ್, ಬ್ಲಾಕ್ ಸ್ಪಾರ್ಟ್ ಗಳಲ್ಲಿ ಕಸ ಕಂಡರೆ ಭಾರೀ ಪ್ರಮಾಣದಲ್ಲಿ ದಂಡ ಹಾಕಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಕಡ್ಡಾಯವಾದ ತ್ಯಾಜ್ಯ ವಿಂಗಡನೆಗೆ ಡೆಡ್ ಲೈನ್ ನಿಗದಿಯಾಗಿದೆ. ಡಿಸೆಂಬರ್ ತಿಂಗಳ ಕಡೆಯ ವಾರದೊಳಗೆ ನಗರವು ಸಂಪೂರ್ಣವಾಗಿ ಸ್ವಚ್ಛವಾಗಬೇಕು. ಮನೆ ಮನೆಯಲ್ಲೇ ತ್ಯಾಜ್ಯ ವಿಂಗಡಣೆ ಪಕ್ಕಾ ಆಗಬೇಕು. ಸೆಪ್ಟೆಂಬರ್ ತಿಂಗಳಿಗೆ ಶೇ.90ರಷ್ಟು ತ್ಯಾಜ್ಯ ವಿಂಗಡನೆ ಮಾಡಲಾಗುತ್ತದೆ. ಲ್ಯಾಂಡ್ ಫೀಲ್ ಶೇ.13 ರಿಂದ 15 ರಷ್ಟು ಇಳಿಸಲು ತೀಮಾನಿಸಲಾಗಿದೆ. ಪ್ಲಾಸ್ಟಿಕ್ ಬಳಕೆಯ ಸಂಪೂರ್ಣ ನಿಷೇಧಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

    ಕಸದ ಸೆಸ್ ಏರಿಕೆಗೂ ಚಿಂತನೆ ನಡೆದಿದೆ. ಶೇ.15ರಷ್ಟು ಹೆಚ್ಚಳ ಮಾಡುವ ಕುರಿತು ಚರ್ಚೆಯಾಗಿದೆ. ಅಪಾಟ್ರ್ಮೆಂಟ್‍ಗಳ ಬಲ್ಕ್ ತ್ಯಾಜ್ಯ ಸಂಸ್ಕರಣೆ ಮಾಡಿಕೊಳ್ಳಬೇಕು. ಪೌರಕಾರ್ಮಿಕರಿಗೆ ಪ್ರತಿ ತಿಂಗಳು 27 ಕೋಟಿ ರೂ. ವೇತನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಬ್ಲಾಕ್ ಸ್ಪಾರ್ಟ್ ಗಳಿಗೆ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ. ರಾತ್ರೋ ರಾತ್ರಿ ಕಸ ಹಾಕುವವರ ಮೇಲೆ ಕಣ್ಣು ಇಡಲಾಗುತ್ತದೆ. ಮಾರ್ಷಲ್‍ಗಳು ಕಸ ಹಾಕುವವರ ಪತ್ತೆ ಹಚ್ಚಲಿದ್ದಾರೆ. ಈ ನಿಟ್ಟಿನಲ್ಲಿ ರಾತ್ರಿ 8 ಗಂಟೆಯಿಂದ 1 ಗಂಟೆರಯವರೆಗೂ ಮಾರ್ಷಲ್ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

    ಈ ವೇಳೆ ಬಿಬಿಎಂಪಿ ಮೇಯರ್ ಗಂಗಾಂಬಿಕೆ, ಆಡಳಿತ ಪಕ್ಷ ನಾಯಕ ಅಬ್ದುಲ್ ವಾಜೀದ್, ಜೆಡಿಎಸ್ ನಾಯಕಿ ನೇತ್ರಾ ನಾರಾಯಣ್ ಹಾಗೂ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಉಪಸ್ಥಿತರಿದ್ದರು.

  • ಬಿಬಿಎಂಪಿಗೂ ತಟ್ಟಿದ ಕಾಂಗ್ರೆಸ್-ಜೆಡಿಎಸ್ ವೈಮನಸ್ಸು

    ಬಿಬಿಎಂಪಿಗೂ ತಟ್ಟಿದ ಕಾಂಗ್ರೆಸ್-ಜೆಡಿಎಸ್ ವೈಮನಸ್ಸು

    – ಮಾಸಿಕ ಸಭೆಯಲ್ಲಿ ಮೇಯರ್ ಪಕ್ಕ ಕೂರಲ್ಲ: ಉಪಮೇಯರ್

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೋಸ್ತಿಗಳ ಮಧ್ಯೆ ವೈಮನಸ್ಸಿನ ಬಿಸಿ ಈಗ ಬೆಂಗಳೂರು ಮಹಾನಗರ ಪಾಲಿಕೆಗೂ ತಟ್ಟಿದೆ.

    ಮೇಯರ್ ಗಂಗಾಬಿಕೆ ಹಾಗೂ ಉಪ ಮೇಯರ್ ಭದ್ರೇಗೌಡ ಮಧ್ಯೆ ಮತ್ತೆ ಶೀತಲ ಸಮರ ಶುರುವಾಗಿದೆ. ಹೀಗಾಗಿ ಪಾಲಿಕೆಯ ಮಾಸಿಕ ಸಭೆಯಲ್ಲಿ ಮೇಯರ್ ಅವರ ಪಕ್ಕದ ಕುರ್ಚಿಯಲ್ಲಿ ಕೂರದಿರಲು ಭದ್ರೇಗೌಡ ಅವರು ತೀರ್ಮಾನಿಸಿದ್ದಾರೆ.

    ನಾಗಪುರ ವಾರ್ಡಿನಲ್ಲಿ ಪಾಲಿಕೆಯ ಕಲ್ಯಾಣ ಕಾರ್ಯಕ್ರಮದ ಅಡಿ 50 ಮನೆಗಳ ನಿರ್ಮಾಣವಾಗಿತ್ತು. ಹೀಗಾಗಿ ಫಲಾನುಭವಿಗಳಿಗೆ ಮನೆಗಳ ಕೀಲಿ ಕೈ ಹಾಗೂ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಮೇಯರ್ ಗಂಗಾಬಿಕೆ ಅವರಿಗೆ ಆಮಂತ್ರಣ ನೀಡಲಾಗಿತ್ತು. ಆದರೆ ಅವರು ಗೈರಾಗಿದ್ದು ಉಪ ಮೇಯರ್ ಭದ್ರೇಗೌಡ ಅವರ ಕೋಪಕ್ಕೆ ಕಾರಣವಾಗಿದೆ.

    ಕಾರ್ಯಕ್ರಮಕ್ಕೆ ಮೇಯರ್ ಮತ್ತು ಆಡಳಿತ ಪಕ್ಷದ ನಾಯಕರಿಗೆ ಆಮಂತ್ರಣ ನೀಡಿದ್ದೇನೆ. ಆದರೂ ಅವರು ಕಲ್ಯಾಣ ಕಾರ್ಯಕ್ರಮಗಳ ಉದ್ಘಾಟನೆಗೆ ಬಂದಿಲ್ಲ. ಕನಿಷ್ಠ ನಮಗೆ ಬರಲು ಸಾಧ್ಯವಾಗುತ್ತಿಲ್ಲ ಅಂತ ಫೋನ್ ಮಾಡಿ ಹೇಳಬಹುದಿತ್ತು. ಅವರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿಯಿಲ್ಲ. ಮೇಯರ್ ಗಂಗಾಬಿಕೆ, ಆಡಳಿತ ಪಕ್ಷದ ನಾಯಕರು ಪರಿಶಿಷ್ಟ ಜನಾಂಗದ ವಿರೋಧಿಗಳು ಎಂದು ಭದ್ರೇಗೌಡ ಅಸಮಾಧಾನ ಹೊರ ಹಾಕಿದ್ದಾರೆ.

    ಮಾಸಿಕ ಸಭೆಗೆ ಮೇಯರ್ ಪಕ್ಕದಲ್ಲಿ ಕೂರುವುದಿಲ್ಲ ಎಂದು ಡಿಸಿಎಂ ಪರಮೇಶ್ವರ್ ಅವರಿಗೆ ಹೇಳಿದ್ದೇನೆ. ಅವರು ಹಾಗೆಲ್ಲಾ ಮಾಡಬೇಡಿ, ಮಾಸಿಕ ಸಭೆಗೂ ಮುನ್ನವೇ ನಾನು ಬಂದು ಮನೆಗಳನ್ನು ವೀಕ್ಷಣೆ ಮಾಡುತ್ತೇನೆ ಅಂತ ಹೇಳಿದ್ದಾರೆ. ಒಂದು ಅವರು ಮನೆಗಳನ್ನು ವೀಕ್ಷಣೆ ಮಾಡದಿದ್ದರೆ ನಾನು ಮಹಾಪೌರರ ಪಕ್ಕ ಕೂರುವುದಿಲ್ಲ ಎಂದು ಹೇಳಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಕಸ ವಿಂಗಡಣೆ ಆಗದಿದ್ದರೆ ಸಿಎಂಗೂ ದಂಡ ಹಾಕ್ತೀವಿ- ಮೇಯರ್ ಗಂಗಾಂಬಿಕೆ

    ಕಸ ವಿಂಗಡಣೆ ಆಗದಿದ್ದರೆ ಸಿಎಂಗೂ ದಂಡ ಹಾಕ್ತೀವಿ- ಮೇಯರ್ ಗಂಗಾಂಬಿಕೆ

    ಬೆಂಗಳೂರು: ಕಸ ವಿಂಗಡಣೆ ಮಾಡಿ ಕಸದ ವಾಹನಕ್ಕೆ ಹಾಕದಿದ್ದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ದಂಡ ಹಾಕುತ್ತೇವೆ ಎಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಹೇಳಿದ್ದಾರೆ.

    ಜನಪ್ರತಿನಿಧಿಗಳ ಮನೆಯ ಕೆಲಸಗಾರರು ಕಸವಿಂಗಡಣೆ ಮಾಡದೆ ವಾಹನಕ್ಕೆ ಹಾಗೂ ಕಸದ ತೊಟ್ಟಿಗೆ ಹಾಕುವ ಕುರಿತು ಪಬ್ಲಿಕ್ ಟಿವಿ ಇಂದು ವರದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ ಬಿಬಿಎಂಪಿ ರಾಜಕೀಯ ನಾಯಕರಿಗೆ ಹಾಗೂ ಸಚಿವರಿಗೆ ಖಡಕ್ ಸಂದೇಶ ನೀಡಿದೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಮೇಯರ್ ಗಂಗಾಬಿಕೆ, ಜನಪ್ರತಿನಿಧಿಗಳು ತಮ್ಮ ಮನೆಯ ಕೆಲಸಗಾರರಿಗೆ ಕಸವಿಂಗಡಣೆ ಮಾಡುವಂತೆ ತಿಳಿಹೇಳಬೇಕು. ಕೆಸಗಾರರಿಗೆ ಗೊತ್ತಾಗದೆ ತಪ್ಪು ನಡೆಯುತ್ತಿದ್ದರೆ ತಕ್ಷಣವೇ ರಾಜಕೀಯ ನಾಯಕರು, ಸಚಿವರು ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಎಲ್ಲರಂತೆ ಅವರಿಗೂ ದಂಡ ಹಾಕಲಾಗುತ್ತದೆ ಎಂದು ಹೇಳಿದ್ದಾರೆ.

    ಮನೆಗಳಿಗೆ ಬಂದು ಕಸ ಪಡೆಯುವ ಹಾಗೂ ನಗರವನ್ನು ಸ್ವಚ್ಛವಾಗಿರಿಸುವ ಪೌರಕಾರ್ಮಿಕರಿಗೆ ಪ್ರತಿಯೊಬ್ಬರು ಸಹಕಾರ ನೀಡಬೇಕು. ನಮ್ಮ ಅನೇಕ ಪೌರ ಕಾರ್ಮಿಕರು ಕಸ ವಿಂಗಡಣೆ ಮಾಡಿಕೊಡುವಂತೆ ತಿಳಿ ಹೇಳುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

    ಸಿಲಿಕಾನ್ ಸಿಟಿ ಕಸದ ನಗರಿ ಅಂತ ಈಗಾಗಲೇ ಜಗಜ್ಜಾಹೀರಾಗಿದೆ. ಬಿಬಿಸಿಯೇ ಬೆಂಗಳೂರು ನಗರವನ್ನು ಕೊಳಕು ನಗರ ಅಂತಲೂ ಘೋಷಿಸಿ ಬಿಟ್ಟಿದೆ. ಈ ಹಣೆಪಟ್ಟಿಯಿಂದ ಹೊರ ಬರೋದಕ್ಕೆ ಜಾಹೀರಾತಿಗಾಗಿ ಬಿಬಿಎಂಪಿ ಕೋಟಿಗಟ್ಟಲೇ ಹಣ ಕೂಡ ಖರ್ಚು ಮಾಡುತ್ತಿದೆ. ಹಸಿ ಕಸ, ಒಣ ಕಸ ಅಂತ ವಿಂಗಡಣೆ ಮಾಡದಿದ್ರೆ, ನಿಮ್ಮ ಮನೆ ಕಸ ಸ್ವೀಕರಿಸಲ್ಲ ಅಂತ ಬಿಬಿಎಂಪಿ ಫರ್ಮಾನು ಕೂಡ ಹೊರಡಿಸಿದೆ. ಬೆಳಗ್ಗೆ ಹೊತ್ತು ಮನೆ ಮುಂದೆ ಬರೋ ಪೌರ ಕಾರ್ಮಿಕರು ಕಸ ವಿಂಗಡಣೆ ಮಾಡದಿದ್ದರೆ ನಾವು ಸ್ವೀಕರಿಸಲ್ಲ ಅಂತ ಬಿಸಾಡಿ ಹೊರಡುತ್ತಾರೆ. ಆದ್ರೆ, ಇದೀಗ ಈ ರೂಲ್ಸ್ ಗಳನ್ನ ಜನಪ್ರತಿನಿಧಿಗಳು ಫಾಲೋ ಮಾಡುತ್ತಿಲ್ಲ ಎಂಬುದು ಪಬ್ಲಿಕ್ ಟಿವಿ ಬೆಳಗ್ಗೆ ಪರೀಕ್ಷೆ ನಡೆಸಲು ಹೊರಟಿತ್ತು. ರಾಜ್ಯದ ಅಧಿಪತಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಡಿಸಿಎಂ ಪರಮೇಶ್ವರ್, ಸಚಿವೆ ಜಯಮಾಲಾ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನೆ ಬಳಿ ಸ್ಟಿಂಗ್ ಆಪರೇಷನ್ ಕೂಡ ನಡೆಸಿತ್ತು. ಈ ವೇಳೆ ಅಲ್ಲಿ ಕಂಡು ಬಂದ ದೃಶ್ಯ ನಿಜಕ್ಕೂ ಮುಜುಗರ ತರಿಸುವಂತಿತ್ತು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೈಕೋರ್ಟ್ ನಿಂದ ಯಾವುದೇ ಸೂಚನೆ ಬರದಂತೆ ಕಾರ್ಯನಿರ್ವಹಿಸುವೆ- ಮೇಯರ್ ಗಂಗಾಂಬಿಕೆ

    ಹೈಕೋರ್ಟ್ ನಿಂದ ಯಾವುದೇ ಸೂಚನೆ ಬರದಂತೆ ಕಾರ್ಯನಿರ್ವಹಿಸುವೆ- ಮೇಯರ್ ಗಂಗಾಂಬಿಕೆ

    ಬೆಂಗಳೂರು: ಮುಂದಿನ ದಿನಗಳಲ್ಲಿ ಹೈಕೋರ್ಟ್ ನಿಂದ ಯಾವುದೇ ಸೂಚನೆ ಬರದಂತೆ ಎಚ್ಚೆತ್ತುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದು ಬಿಬಿಎಂಪಿ ನೂತನ ಮೇಯರ್ ಗಂಗಾಂಬಿಕೆ ಹೇಳಿದ್ದಾರೆ.

    ಮೇಯರ್ ಆಗಿ ಇಂದು ಆಯ್ಕೆಯಾದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ. ಅಕ್ಟೋಬರ್ ನಲ್ಲಿ ಭಾರೀ ಮಳೆಯಾಗಲಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ಅಧಿಕಾರಿಗಳ ಜೊತೆ ತೆರಳಿ ಖುದ್ದಾಗಿ ಪರಿಶೀಲಿಸುತ್ತೇನೆ ಎಂದರು.

    ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದೇವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ಇತರರಿಗೆ ನಾವೇ ಮಾದರಿಯಾಗಬೇಕು ಎಂದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು ಹೇಳಿದರು.

    ಇದಕ್ಕೂ ಮುನ್ನ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ್ದ ಅವರು, ನಾನು ಹಾಗೂ ಉಪ ಮೇಯರ್ ಚರ್ಚೆ ಮಾಡಿ, ಆಡಳಿತ ನಡೆಸುತ್ತೇವೆ. ನಮ್ಮ ಮುಂದೆ ಅನೇಕ ಸಮಸ್ಯೆಗಳು ಇದ್ದರೂ, ಅವು ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿರುತ್ತದೆ. ಬಿಬಿಎಂಪಿಯ ಎಲ್ಲ ಸದಸ್ಯರ ಸಲಹೆ ಹಾಗೂ ಸೂಚನೆ ಪಡೆದುಕೊಂಡು ಕಾರ್ಯ ನಿರ್ವಹಿಸುತ್ತೇವೆ ಎಂದು ಭರವಸೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv