Tag: ಮೇಯರ್

  • ಬಸವನಗುಡಿಯಲ್ಲಿ ಶುರುವಾಯ್ತು ಸಂಭ್ರಮದ ಕಡಲೆಕಾಯಿ ಪರಿಷೆ

    ಬಸವನಗುಡಿಯಲ್ಲಿ ಶುರುವಾಯ್ತು ಸಂಭ್ರಮದ ಕಡಲೆಕಾಯಿ ಪರಿಷೆ

    ಬೆಂಗಳೂರು: ಕಾರ್ತಿಕ ಮಾಸದ ಕಡೆಯ ಸೋಮವಾರವಾದ ಇಂದು ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ವಿದ್ಯುಕ್ತವಾಗಿ ಚಾಲನೆ ದೊರೆತಿದೆ.

    ಹೌದು, ರಾಜಧಾನಿಯ ಪ್ರಮುಖ ಹಬ್ಬಗಳಲ್ಲೊಂದಾದ ಕಡಲೆಕಾಯಿ ಪರಿಷೆಗೆ ಸೋಮವಾರ ಚಾಲನೆ ದೊರೆತಿದೆ. ಬಿಬಿಎಂಪಿ ಮಹಾಪೌರರಾದ ಗಂಗಾಬಿಕೆಯವರು ಬೆಳಗ್ಗೆ 10 ಗಂಟೆಗೆ ಬಸವಣ್ಣನಿಗೆ ಕಡಲೆಕಾಯಿ ತುಲಾಭಾರ ಮೂಲಕ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಿದ್ದಾರೆ.

    ಮುಂಜಾನೆಯಿಂದಲೇ ಭಕ್ತರು ಬಸವನಗುಡಿಯ ದೊಡ್ಡ ಗಣೇಶ ಹಾಗೂ ದೊಡ್ಡ ಬಸವಣ್ಣನ ದರ್ಶನಕ್ಕಾಗಿ ಸಾಲುಗಟ್ಟಿ ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು. ಭಕ್ತರು ಕಡಲೆಕಾಯಿಗಳನ್ನು ದೇವರಿಗೆ ಅರ್ಪಿಸುವ ಮೂಲಕ ತಮ್ಮ ಕೋರಿಕೆಯನ್ನು ಬೇಡಿಕೊಂಡಿದ್ದಾರೆ. ಅಲ್ಲದೇ ಗಣೇಶನಿಗೆ ಬೆಣ್ಣೆ ಅಲಂಕಾರದೊಂದಿಗೆ ಕಡಲೆಕಾಯಿ ಅಲಂಕಾರ ಮಾಡುವ ಮೂಲಕ ವಿಶೇಷ ಪೂಜೆ ನೆರವೇರಿಸಲಾಗಿದೆ.

    ಕಡಲೆಕಾಯಿ ಪರಿಷೆಗೆ ಸೇಲಂ, ಯಶವಂತಪುರ, ದೊಡ್ಡಬಳ್ಳಾಪುರ, ಮೈಸರೂ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕಡಲೆಕಾಯಿ ವ್ಯಾಪಾರಿಗಳು ಆಗಮಿಸಿದ್ದಾರೆ. ಈ ಬಾರಿ ಹಿಂದಿನ ವರ್ಷಕ್ಕಿಂತಲೂ ಅತಿ ಹೆಚ್ಚು ಕಡಲೆಕಾಯಿ ಸ್ಟಾಲ್ ಗಳು ತಲೆ ಎತ್ತಿದೆ.

    ಪರಿಷೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮೇಯರ್ ಗಂಗಾಬಿಕೆ, ಪ್ರತಿ ವರ್ಷ ಕಡಲೆಕಾಯಿ ಪರಿಷೆ ನಡೆಯುವದರಿಂದ ಬಸವನಗುಡಿಗೆ ಗ್ರಾಮೀಣ ಸೊಗಡು ನೀಡುತ್ತದೆ. ಪರಿಷೆಗೆ ಬರುವ ಪ್ರತಿಯೊಬ್ಬರು ಹಾಗೂ ವ್ಯಾಪಾರಸ್ಥರು ಪ್ಲಾಸ್ಟಿಕ್ ಕವರ್‍ಗಳನ್ನು ಬಳಸಬಾರದು. ಸ್ವಚ್ಛ ಬೆಂಗಳೂರಿಗೆ ಕಡಲೆಕಾಯಿ ಪರಿಷೆ ಅಡಿಪಾಯವಾಗಬೇಕು. ಕಳೆದ ವರ್ಷದ ಪರಿಷೆಯಲ್ಲಿ ದಿವಂಗತ ಅನಂತ ಕುಮಾರ್ ಅವರು ಪಾಲ್ಗೊಂಡಿದ್ದರು. ಆದರೆ ಈ ಬಾರಿ ಅವರು ಇಲ್ಲ ಅನ್ನುವುದು ತುಂಬಾ ದುಃಖಕರ ವಿಚಾರ. ಅವರು ಈ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ. ಅವರ ಕನಸನ್ನು ನನಸಾಗಿಸುವ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಲಿದೆ ಎಂದು ಹೇಳಿದ್ರು.

    ಕಡಲೆಕಾಯಿ ಪರಿಷೆ ಉದ್ಘಾಟನಾ ಕಾರ್ಯಕ್ರಮಕ್ಕೆ ಮೇಯರ್ ಗಂಗಾಂಬಿಕೆ, ಶಾಸಕ ಗರುಡಾಚಾರ್, ವಿಧಾನ ಪರಿಷತ್ ಸದಸ್ಯ ಸಿ.ಶರವಣ, ಶಾಸಕ ರವಿ ಸುಬ್ರಹ್ಮಣ್ಯ ಸೇರಿದಂತೆ ಪ್ರಮುಖ ಗಣ್ಯರು ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಮ್ಮನ್ನ ಮಣಿಸಲು ದುರ್ಬಲರೆಲ್ಲ ಒಂದಾಗಿದ್ದಾರೆ- ಪ್ರತಾಪ್ ಸಿಂಹ

    ನಮ್ಮನ್ನ ಮಣಿಸಲು ದುರ್ಬಲರೆಲ್ಲ ಒಂದಾಗಿದ್ದಾರೆ- ಪ್ರತಾಪ್ ಸಿಂಹ

    ಮೈಸೂರು: ಒಂದು ಪಕ್ಷದ ವಿರುದ್ಧ ಉಳಿದೆಲ್ಲ ಪಕ್ಷಗಳು ಒಗ್ಗೂಡುತ್ತಿವೆ. ಇದು ಅವರಲ್ಲಿರುವ ಬಿಜೆಪಿ ಕುರಿತಾದ ಭಯವನ್ನು ತಿಳಿಸುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಲೋಕಸಭಾ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಂಜನಗೂಡು, ಗುಂಡ್ಲುಪೇಟೆ ವಿಧಾಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಆದರೆ ನಂತರದ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲನುಭವಿಸಿತು ಎಂದು ಹೇಳುವ ಮೂಲಕ ಉಪಚುನಾವಣೆ ಫಲಿತಾಂಶವನ್ನು ಸಮರ್ಥಿಸಿಕೊಂಡರು. ಸಂಸದರು, ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.

    ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು. ಇದರಿಂದಾಗಿ ನಾನು ಚುನಾವಣೆಯಲ್ಲಿ ಭಾಗವಹಿಸಿ ಮತದಾನ ಮಾಡುವ ಅವಶ್ಯಕತೆ ಇರಲಿಲ್ಲ. ಆದ್ದರಿಂದ ಗೈರಾಗಿದ್ದೆ. ಈಗ ಆಯ್ಕೆಯಾಗಿರುವ ಮೇಯರ್ ಆಗಿ ಕಾಂಗ್ರೆಸ್‍ನ ಪುಷ್ಪಲತಾ ಜಗನ್ನಾಥ್, ಉಪ ಮೇಯರ್ ಆಗಿ ಜೆಡಿಎಸ್‍ನ ಶಫಿ ಅಹಮದ್ ಅವರಿಗೆ ಶುಭಕೋರಲು ಬಂದಿರುವೆ ಎಂದು ತಿಳಿಸಿದರು.

    ಪ್ರತಾಪ್ ಸಿಂಹ ಅವರು ಪ್ರಮಾಣವಚನ ಕಾರ್ಯಕ್ರಮದ ಸಭಾಂಗಣಕ್ಕೆ ಆಗಮಿಸುತ್ತಿದ್ದಂತೆ ಉನ್ನತ ಶಿಕ್ಷಣ ಸಚಿವ ಜಿ.ಡಿ.ದೇವೇಗೌಡ ಅವರ ಕೈ ಕುಲುಕಿ, ಮಂದಹಾಸದಿಂದಲೇ ಮಾತನಾಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪಟ್ಟು ಬಿಡದೆ ಪವರ್ ತೋರಿದ ಸಿದ್ದರಾಮಯ್ಯ – `ಕೈ’ ಅಭ್ಯರ್ಥಿಗೆ ಒಲಿದ ಮೇಯರ್ ಪಟ್ಟ

    ಪಟ್ಟು ಬಿಡದೆ ಪವರ್ ತೋರಿದ ಸಿದ್ದರಾಮಯ್ಯ – `ಕೈ’ ಅಭ್ಯರ್ಥಿಗೆ ಒಲಿದ ಮೇಯರ್ ಪಟ್ಟ

    ಮೈಸೂರು: ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕೆ ನಡೆದ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪಟ್ಟು ಬಿಡದೆ ಕಾಂಗ್ರೆಸ್ ಅಭ್ಯರ್ಥಿಗೆ ಮೇಯರ್ ಪಟ್ಟ ಲಭಿಸುವಂತೆ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಷ್ಪಲತಾ ಜಗನ್ನಾಥ್ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

    ಇಂದು ನಡೆದ ಚುನಾವಣೆಯಲ್ಲಿ ಪುಷ್ಪಲತಾ ಜಗನ್ನಾಥ್ ಅವರಿಗೆ 48 ಮತಗಳು ಲಭಿಸಿದ್ದು, ಈ ಮೂಲಕ 21 ನೇ ಅವಧಿಗೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಚುನಾವಣೆಯಲ್ಲಿ ಎದುರಾಳಿ ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರಾ ಅವರು 24 ಮತಗಳನ್ನು ಪಡೆದರು. ಪಾಲಿಕೆಯ ನೂತನ ಉಪ ಮೇಯರ್ ಆಗಿ ಜೆಡಿಎಸ್ ಅಭ್ಯರ್ಥಿ ಶಫಿ ಅಹಮದ್ ಆಯ್ಕೆಯಾದರು. ಇತ್ತ ತಮ್ಮ ಗೆಲುವು ಖಚಿತವಾಗುತ್ತಿದಂತೆ ಮೇಯರ್ ಪುಷ್ಪಲತಾ ಅವರು ಕೌನ್ಸಿಲ್ ಸಭಾಂಗದಲ್ಲಿ ಎಲ್ಲಾ ಸದಸ್ಯರ ಬಳಿಗೆ ಹೋಗಿ ಕೈ ಮುಗಿದು ಧನ್ಯವಾದ ಅರ್ಪಿಸಿದರು.

    ಈ ಚುನಾವಣೆಯ ಗೆಲುವು ಪುಷ್ಪಲತಾ ಅವರ ಗೆಲುವಾದರು ಇದರ ಹಿಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ತಂತ್ರ ಫಲನೀಡಿದೆ ಎಂದು ಹೇಳಬಹುದು. ಇದರೊಂದಿಗೆ ಮೈತ್ರಿ ಸರ್ಕಾರದಲ್ಲಿ ಮೈತ್ರಿ ಕೂಟದ ಅಭ್ಯರ್ಥಿಗೆ ಜಯಭೇರಿ ಆಗಿದ್ದು, ತಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ ಎಂಬ ಸೂಚನೆ ನೀಡಲು ನಾಯಕರು ಯಶಸ್ವಿಯಾದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಇಂದು ಮೈಸೂರು ಮೇಯರ್-ಉಪಮೇಯರ್ ಚುನಾವಣೆ: ಕಾಂಗ್ರೆಸ್‍ಗೆ ಕುರ್ಚಿ ಸಾಧ್ಯತೆ

    ಇಂದು ಮೈಸೂರು ಮೇಯರ್-ಉಪಮೇಯರ್ ಚುನಾವಣೆ: ಕಾಂಗ್ರೆಸ್‍ಗೆ ಕುರ್ಚಿ ಸಾಧ್ಯತೆ

    ಮೈಸೂರು: ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

    ಈ ನಡುವೆ ಮೇಯರ್ ಸ್ಥಾನ ನಮಗೆ ಬೇಕು, ನಮಗೆ ಬೇಕು ಅಂತ ದೋಸ್ತಿ ಪಕ್ಷಗಳೇ ಕಿತ್ತಾಡಿಕೊಂಡಿವೆ. ಸಚಿವ ಸಾ.ರಾ.ಮಹೇಶ್ ಮೇಯರ್ ಸ್ಥಾನ ನಮಗೆ ಬೇಕು, ಮೇಯರ್ ಸಿಗದಿದ್ದರೆ ನಾವು ಮುಂದಿನ ನಿರ್ಧಾರ ಮಾಡಬೇಕಾಗುತ್ತೆ ಎಂದು ಪರೋಕ್ಷವಾಗಿ ಬಿಜೆಪಿ ಜೊತೆ ಹೋಗುವ ಸುಳಿವು ನೀಡಿದ್ರು.

    ಸಾ.ರಾ.ಮಹೇಶ್ ಹೇಳಿಕೆ ನೀಡುತ್ತಿದ್ದಂತೆಯೇ ಅವರ ಕಚೇರಿಗೆ ಬಂದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಏನಪ್ಪ ಹೀಗಂತೀಯ ಅಂತ ಒಂದು ಗಂಟೆಗೂ ಹೆಚ್ಚು ಕಾಲ ಸಾರಾ ಜೊತೆ ಮಾತುಕತೆ ನಡೆಸಿದ್ರು. ಲೋಕಲ್ ಅಖಾಡಕ್ಕೆ ಇಳಿದ ಸಿದ್ದರಾಮಯ್ಯ ಸಹ ಮೇಯರ್ ಸ್ಥಾನ ನಮಗೇ ಬೇಕು ಎಂದು ಪಟ್ಟಿ ಹಿಡಿದಿದ್ದರು. ಹೀಗಾಗಿ ಮೈಸೂರು ನಿವಾಸದಿಂದಲೇ ಎಚ್.ಡಿ. ದೇವೇಗೌಡರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಮೇಯರ್ ಸ್ಥಾನ ಬಿಟ್ಟುಕೊಡುವಂತೆ ಮನವಿ ಮಾಡಿದ್ರು. ದೇವೇಗೌಡರು ಸಹ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಇದೀಗ ಮೇಯರ್ ಸ್ಥಾನ ಕಾಂಗ್ರೆಸ್‍ಗೆ ಪಕ್ಕಾ ಆಗಿದೆ.

    ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಒಮ್ಮೆ ನೋವಾಗಿದೆ. ಮೈತ್ರಿ ವೇಳೆ ಇದ್ದಕಿದ್ದಂತೆ ನಾಮಪತ್ರ ಸಲ್ಲಿಸಿ ತೊಂದರೆ ಕೊಟ್ಟಿದ್ದರು. ಅದಕ್ಕಾಗಿ ಈ ಬಾರಿ ಮೊದಲಿಗೆ ಜೆಡಿಎಸ್‍ಗೆ ಮೇಯರ್ ಸ್ಥಾನ ಬೇಕು ಎಂದು ಕೇಳಿದ್ದೇವೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ಚು ಮತ ಇರುವವರಿಗೇ ಮೇಯರ್ ಸ್ಥಾನ ಎಂದು ಹೇಳಿದ್ದಾರೆ. ಸದ್ಯ ಮೇಯರ್ ಆಯ್ಕೆ ಮಾಡುವ ಮತದಾರರ ಸಂಖ್ಯೆ ಜೆಡಿಎಸ್‍ನಲ್ಲಿ ಹೆಚ್ಚಿದೆ. ನಾವು ಈಗಾಗಲೇ ಬಿಬಿಎಂಪಿಯಲ್ಲೂ ಕಾಂಗ್ರೆಸ್ಸಿಗೆ ಅಧಿಕಾರ ಬಿಟ್ಟುಕೊಟ್ಟಿದ್ದೇವೆ. ಈಗ ನಮಗೆ ಅಧಿಕಾರ ಕೇಳುತ್ತಿದ್ದೇವೆ. ಬಿಜೆಪಿ ನಾಯಕರು ಈಗಾಗಲೇ ಜೆಡಿಎಸ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕಾಂಗ್ರೆಸ್ಸಿಗೆ ಸಚಿವ ಸಾ.ರಾ.ಮಹೇಶ್ ನೇರವಾಗಿ ಟಾಂಗ್ ಕೊಟ್ಟಿದ್ದರು.

    ಜೆಡಿಎಸ್ ಸದಸ್ಯರು ಈಗಾಗಲೇ ರೆಸಾರ್ಟ್‍ಗೆ ತೆರಳಿದ್ದು, ನಮ್ಮ ಸದಸ್ಯರು ಕಾಂಗ್ರೆಸ್ಸಿನಂತೆ ಹೆದರಿಕೊಂಡು ರೆಸಾರ್ಟ್ ಗೆ ಹೋಗಿಲ್ಲ. ಎಲ್ಲರೂ ಕೂತು ಸಮಾಲೋಚನೆ ನಡೆಸಲು ನಾವೇ ಕಳುಹಿಸಿಕೊಟ್ಟಿದ್ದೇವೆ. ಶಾಸಕ ತನ್ವೀರ್ ಸೇಠ್ ಈಗಾಗಲೇ ಬಂದು ಭೇಟಿಯಾಗಿ ಹೋಗಿದ್ದಾರೆ. ಮಾತುಕತೆ ನಡೆಸಿ ಮತ್ತೊಮ್ಮೆ ಬರುವುದಾಗಿ ತಿಳಿಸಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಸುಳಿವು ಕೊಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಾಯಿಗಳ ಹಾವಳಿ ತಡೆಯಲಾಗದ ಬಿಬಿಎಂಪಿಯಿಂದ ಹೊಸ ಪ್ಲಾನ್

    ನಾಯಿಗಳ ಹಾವಳಿ ತಡೆಯಲಾಗದ ಬಿಬಿಎಂಪಿಯಿಂದ ಹೊಸ ಪ್ಲಾನ್

    ಬೆಂಗಳೂರು: ನಾಯಿಗಳ ಹಾವಳಿಯನ್ನು ತಡೆಯಲು ಸಾಧ್ಯವಾಗದೆ ಇದೀಗ ಬಿಬಿಎಂಪಿ ಹೊಸ ಪ್ಲಾನ್ ಮಾಡಿದೆ. ಪುಂಡ-ಪೋಕರಿಗಳಿಂದ ತಪ್ಪಿಸಿಕೊಳ್ಳಲು ಮಕ್ಕಳು ಕರಾಟೆ ಸೇರಿ ಇನ್ನಿತರ ವಿದ್ಯೆ ಕಲಿಯುತ್ತಾರೆ. ಆದರೆ ಈಗ ಬಿಬಿಎಂಪಿ ಮಕ್ಕಳಿಗೆ ಮತ್ತೊಂದು ರೀತಿಯ ಪಾಠ ಹೇಳುವುದಕ್ಕೆ ಸಿದ್ಧವಾಗಿದೆ.

    ಬೆಂಗಳೂರಿನ ನಾಯಿಗಳು ಬನ್ನೇರುಘಟ್ಟ ಸಿಂಹಗಳ ತರ ಇರುತ್ತವೆ ಅನ್ನೋ ಮಾತಿದೆ. ಇದಕ್ಕೆ ಪೂರಕ ಎನ್ನುವಂತೆ ತಿಂಗಳಿಗೊಂದು ನಾಯಿ ಕಚ್ಚಿದ ಪ್ರಕರಣಗಳು ದಾಖಲಾಗುತ್ತಿವೆ. ಮೂರು ವರ್ಷಗಳಲ್ಲಿ ಹೆಚ್ಚು ಮಕ್ಕಳು ಮತ್ತು ವಯಸ್ಕರು ಸೇರಿ 35 ಸಾವಿರಕ್ಕೂ ಹೆಚ್ಚು ನಾಯಿ ಕಡಿತ ಪ್ರಕರಣಗಳು ಬೆಂಗಳೂರಿನಲ್ಲಿ ನಡೆದಿದೆ.

    ಕಳೆದ ಒಂದು ತಿಂಗಳ ಹಿಂದೆ ವಿಭೂತಿ ಪುರದಲ್ಲಿ 11 ವರ್ಷದ ಮಗುವೊಂದನ್ನು ನಾಯಿಗಳ ಗುಂಪು ಕಚ್ಚಿ ಕೊಂದಿದ್ದವು. ಇಷ್ಟೆಲ್ಲ ನಾಯಿ ಕಚ್ಚಿದ ಪ್ರಕರಣಗಳು ನಡೆಯುತ್ತಿರುವಾಗ ನಾಯಿ ಹಾವಳಿಯನ್ನು ತಡೆಯಬೇಕಿದೆ. ಹೀಗಾಗಿ ನಾಯಿಗಳ ಕಚ್ಚುವಿಕೆಯಿಂದ ಪರಾರಿ ಆಗೋದು ಹೇಗೆ ಅನ್ನುವ ಪಾಠ ಮಾಡಿಸಬೇಕು ಎಂದು ಮೇಯರ್ ಗಂಗಾಂಬಿಕೆ ಹೇಳಿದ್ದಾರೆ.

    ಮೇಯರ್ ಗಂಗಾಂಬಿಕೆ ಮಾತು ಕೇಳಿ ಕೆಲವು ಸಂಘಟನೆಗಳ ಮೂಲಕ ಶಾಲಾ ಮಕ್ಕಳೊಂದಿಗೆ, ನಾಯಿ ಹಾವಳಿಯಿಂದ ಮರಣದಂತಹ ಪ್ರಕರಣಗಳು ನಡೆದಿರುವ ಬಡಾವಣೆಗಳಿಗೆ ಹೋಗಿ ಸಾರ್ವಜನಿಕರಿಗೆ ನಾಯಿಗಳೊಂದಿಗೆ ಹೇಗೆ ವರ್ತಿಸಬೇಕು ಎಂದು ಜಾಗೃತಿ ಮೂಡಿಸಲು ಚಿಂತಿಸಲಾಗಿದೆ.

    ನಾಯಿ ಹಾವಳಿ ನಿಯಂತ್ರಣಕ್ಕೆ ಬಿಬಿಎಂಪಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸುವ ಬದಲಿಗೆ ಮಕ್ಕಳಿಗೆ ಪಾಠ ಹೇಳುವುದಕ್ಕೆ ಮೇಯರ್ ಸಿದ್ಧವಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಧಿಕಾರವಹಿಸಿಕೊಳ್ತಿದ್ದಂತೆ ಮೇಯರ್, ಉಪಮೇಯರ್ ರಿಂದ ದಿಢೀರ್ ಸಿಟಿರೌಂಡ್ಸ್

    ಅಧಿಕಾರವಹಿಸಿಕೊಳ್ತಿದ್ದಂತೆ ಮೇಯರ್, ಉಪಮೇಯರ್ ರಿಂದ ದಿಢೀರ್ ಸಿಟಿರೌಂಡ್ಸ್

    – ಪಾಲಿಕೆ ಸದಸ್ಯರ ಬೆವರಿಳಿಸಿದ ಗಂಗಾಂಬಿಕೆ

    ಬೆಂಗಳೂರು: ಬಿಬಿಎಂಪಿ ನೂತನ ಮೇಯರ್ ಹಾಗೂ ಉಪಮೇಯರ್ ಆಗಿ ಅಧಿಕಾರವಹಿಸಿಕೊಂಡ ಬೆನ್ನಲ್ಲೇ ಮಂಗಳವಾರ ರಾತ್ರಿ ದಿಢೀರ್ ನಗರ ಪ್ರದಕ್ಷಿಣೆ ಮಾಡಿದ್ದಾರೆ.

    ಮೇಯರ್ ಗಂಗಾಬಿಕೆ ಹಾಗೂ ಉಪಮೇಯರ್ ರಮೀಳ ಬೈಕ್‍ಗಳಲ್ಲಿ ಸಿಟಿ ರೌಂಡ್ಸ್ ಮಾಡಿದ್ದಾರೆ. ನಗರ ಪ್ರದಕ್ಷಿಣೆ ವೇಳೆ ಮೇಯರ್ ಗಂಗಾಬಿಕೆ ಅವರು ಪಾಲಿಕೆ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದು, ಈಸ್ಟ್ ಜೋನ್ ಎಕ್ಸಿಕ್ಸ್ಯೂಟಿವ್ ಎಂಜಿನಿಯರ್ ಶಿವಪ್ರಕಾಶ್ ಬೆವರಿಳಿಸಿದ್ದಾರೆ. ಇದನ್ನೂ ಓದಿ: ಕುರ್ಚಿ ಮೇಲೆ ಬಸವಣ್ಣನ ಫೋಟೋ ಇಟ್ಟು, ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡ ನೂತನ ಮೇಯರ್

    ರಾತ್ರಿ ಈಸ್ಟ್ ಜೋನ್ ನ ಕಸ್ತೂರಿ ಬಾ ರಸ್ತೆ, ಜಯಮಾಹಲ್, ಕನ್ನಿಂಗ್ ಹ್ಯಾಂ ರಸ್ತೆ ಮತ್ತು ಹೆಬ್ಬಾಳ ಸೇರಿ ಹಲವೆಡೆ ತಪಾಸಣೆ ಮಾಡಿದ್ದಾರೆ. ನಗರದ ಜಯಮಹಾಲ್ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ರಸ್ತೆಗುಂಡಿಗಳನ್ನ ಮುಚ್ಚಿದ್ದ ಗುತ್ತಿಗೆದಾರನಿಗೆ 1 ಲಕ್ಷ ರೂ. ದಂಡ ಹಾಕಿದ್ದಾರೆ. ಅಷ್ಟೇ ಅಲ್ಲದೇ ಇಂದು ಸಂಜೆಯೊಳಗಡೆ ಜಯಮಹಲ್ ರಸ್ತೆಗುಂಡಿಗಳನ್ನ ವೈಜ್ಞಾನಿಕವಾಗಿ ಮುಚ್ಚಿಸಿ ವರದಿ ನೀಡಬೇಕು ಅಂತ ಖಡಕ್ ಆಗಿ ಆದೇಶಿಸಿದ್ದಾರೆ.

    ಒಂದು ವೇಳೆ ಈ ಬಗ್ಗೆ ಅಸಡ್ಡೆ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠೀಣ ಕ್ರಮ ಜರಗಿಸುವುದಾಗಿ ಖಡಕ್ ವಾರ್ನ್ ಕೂಡ ಮಾಡಿದ್ದಾರೆ. ಮೇಯರ್ ಸಿಟಿ ರೌಂಡ್ಸ್ ವೇಳೆ ನಗರದಲ್ಲಿ ಅಕ್ರಮವಾಗಿ ಹೋಲ್ಡಿಂಗ್ಸ್ ಗಳನ್ನ ತೆರವು ಮಾಡಿಸಿದ್ದಾರೆ.

    ಸೆಪ್ಟೆಂಬರ್ 28 ರಂದು ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ರಣರಂಗದ ಆಟದಲ್ಲಿ ಕಾಂಗ್ರೆಸ್ಸಿನ ಗಂಗಾಂಬಿಕೆ ಮೇಯರ್ ಆಗಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಜೆಡಿಎಸ್ ನ ರಮೀಳಾ ಆಯ್ಕೆಯಾಗಿದ್ದರು. ಇವರಿಬ್ಬರೂ ಸೋಮವಾರ ಅಧಿಕಾರ ವಹಿಸಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=K3IuXehQ3sw

  • ಕುರ್ಚಿ ಮೇಲೆ ಬಸವಣ್ಣನ ಫೋಟೋ ಇಟ್ಟು, ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡ ನೂತನ ಮೇಯರ್

    ಕುರ್ಚಿ ಮೇಲೆ ಬಸವಣ್ಣನ ಫೋಟೋ ಇಟ್ಟು, ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡ ನೂತನ ಮೇಯರ್

    ಬೆಂಗಳೂರು: ನೂತನವಾಗಿ ಬಿಬಿಎಂಪಿ ಮೇಯರ್ ಆಗಿ ಆಯ್ಕೆಯಾಗಿರುವ ಗಂಗಾಂಬಿಕೆಯವರು ಕುರ್ಚಿಯ ಮೇಲೆ ಬಸವಣ್ಣನವರ ಫೋಟೋ ಇಟ್ಟು, ಪೂಜೆ ಸಲ್ಲಿಸುವ ಮೂಲಕ ಅಧಿಕಾರ ವಹಿಸಿಕೊಂಡಿದ್ದಾರೆ.

    ಹೌದು, ಹೊಸ ಮೇಯರ್ ಆದವರು ಮೇಯರ್ ಕುರ್ಚಿಗೆ ಪೂಜೆ ಸಲ್ಲಿಸುವುದು ವಾಡಿಕೆ. ಆದರೆ ಇಂದು ಅಧಿಕೃತವಾಗಿ ಮೇಯರ್ ಕಛೇರಿಗೆ ಪ್ರವೇಶಿಸಿದ ನೂತನ ಮೇಯರ್ ಗಂಗಾಂಬಿಕೆಯವರು ಕುರ್ಚಿಯ ಮೇಲೆ ಬಸವಣ್ಣನವರ ಫೋಟೋ ಇಟ್ಟು, ಪೂಜೆ ಸಲ್ಲಿಸಿ ಗೌರವ ಸೂಚಿಸುವ ಮೂಲಕ ಅಧಿಕೃತ ಮೇಯರ್ ಗಿರಿ ಸ್ಥಾನವನ್ನು ವಹಿಸಿಕೊಂಡಿದ್ದಾರೆ.

    ಸೆಪ್ಟೆಂಬರ್ 28 ರಂದು ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ರಣರಂಗದ ಆಟದಲ್ಲಿ ಕಾಂಗ್ರೆಸ್ಸಿನ ಗಂಗಾಂಬಿಕೆ ಮೇಯರ್ ಆಗಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಜೆಡಿಎಸ್ಸಿನ ರಮೀಳಾ ಆಯ್ಕೆಯಾಗಿದ್ದರು. ಇಂದು ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಗಂಗಾಂಬಿಕೆಯವರು ಬಿಬಿಎಂಪಿ ಆವರಣದ ಬಳಿ ಸಸಿನೆಟ್ಟು ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಿದರು.

    ಅಧಿಕಾರ ಸ್ವೀಕಾರ ಮಾಡಿದ ದಿನವೇ ಅಧಿಕಾರಿಗಳಿ ಚಾಟಿ ಬೀಸಿದ ಅವರು, ನಾನು ಮೊದಲು ಸ್ವಚ್ಛತೆಗೆ ಆದ್ಯತೆ ನೀಡುತ್ತೇನೆ. ಹೀಗಾಗಿ ಆವರಣದಲ್ಲಿ ಗಿಡ ನೆಡುವ ಕೆಲಸ ಮಾಡಿದ್ದೇನೆ. ನಾನು ಪ್ರತಿಬಾರಿ ಹೇಳುತ್ತಿದ್ದೆ ನನಗೆ ಬೊಕ್ಕೆ ತರಬೇಡಿ ಅಂತಾ ಆದರೂ ಸಹ ತರುತಿದ್ದೀರಿ. ಇನ್ನೊಮ್ಮೆ ತರಬೇಡಿ ಎಂದು ಮನವಿ ಮಾಡಿಕೊಂಡರು. ರಸ್ತೆ ಗುಂಡಿ ಬಗ್ಗೆ ನನಗೂ ಬೇಸರವಿದೆ. ವೈಜ್ಞಾನಿಕವಾಗಿ ಗುಂಡಿ ಮುಚ್ಚಿಲ್ಲ ಎನ್ನುವ ದೂರುಗಳು ಕೇಳಿಬರುತ್ತಿವೆ. ನಾನು ಮೊದಲು ಗುಂಡಿ ಮುಚ್ಚಿದ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಒಂದು ವೇಳೆ ವೈಜ್ಞಾನಿಕವಾಗಿ ಗುಂಡಿಗಳನ್ನು ಮುಚ್ಚಿಲ್ಲವೆಂದರೆ ಮತ್ತೆ ಕೀಳಿಸಿ ಮುಚ್ಚಿಸುತ್ತೇನೆ ಎಂದು ಹೇಳಿದರು.

    ನಮ್ಮ ಎಂಜಿನಿಯರ್ ಗಳು ಕೇವಲ ಸರ್ಟಿಫೀಕೆಟ್ ತೆಗೆದುಕೊಂಡಿದ್ದಾರೆ ಅಷ್ಟೇ. ಆದರೆ ಅವರಿಗಿಂತ ನಮ್ಮ ಗಾರೆ ಕೆಲಸದವರೇ ಚೆನ್ನಾಗಿ ಕೆಲಸ ಮಾಡುತ್ತಾರೆ. ಇದಲ್ಲದೇ ಕಸದ ವಿಚಾರವಾಗಿ ಹೊಸ ಟೆಂಡರ್ ಕರೆಯಬೇಕು. ಇದಕ್ಕೆ ಸಂಬಂಧಪಟ್ಟಂತೆ ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದೇನೆ. ಬ್ಲಾಕ್ ಸ್ಪಾಟ್ ಆಗಿರುವ ಕಡೆ ಗಮನ ಹರಿಸುತ್ತೇನೆ ಎಂದು ತಿಳಿಸಿದರು.

    50 ವರ್ಷದ ನಂತರ ಲಿಂಗಾಯತ ಮೇಯರ್:
    ಗಂಗಾಂಬಿಕೆ ಲಿಂಗಾಯತ ಸಮುದಾಯದವರಾಗಿದ್ದು, 50 ವರ್ಷಗಳ ನಂತರ ಮೇಯರ್ ಹುದ್ದೆ ಈ ಸಮುದಾಯಕ್ಕೆ ಸಿಕ್ಕಿದೆ. 1960ರಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ಇಬ್ಬರು ಮೇಯರ್ ಆಗಿದ್ದರು. 2003ರಲ್ಲಿ ಬಿ.ಎಸ್. ಪುಟ್ಟರಾಜು ಉಪಮೇಯರ್ ಆಗಿ ಆಯ್ಕೆಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತುಮಕೂರಿನಲ್ಲಿ ಮಾಜಿ ಮೇಯರ್ ಬರ್ಬರ ಹತ್ಯೆ

    ತುಮಕೂರಿನಲ್ಲಿ ಮಾಜಿ ಮೇಯರ್ ಬರ್ಬರ ಹತ್ಯೆ

    ತುಮಕೂರು: ಮಾಜಿ ಮೇಯರ್ ರವಿಕುಮಾರ್ ರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಬಟವಾಡಿ ಬಳಿ ನಡೆದಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೆ ಬಳಸಿದ್ದ 407 ಟೆಂಪೋ, ಘಟನಾ ಸ್ಥಳದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಅಕ್ಕ-ತಂಗಿ ಕೆರೆಯ ಬಳಿ ಪತ್ತೆಯಾಗಿದೆ. ಅದರಲ್ಲಿ ಒಂದು ಲಾಂಗ್ ಇರುವುದು ಬೆಳಕಿಗೆ ಬಂದಿದೆ.

    ಘಟನೆ ವಿವರ:
    ಬೆಳ್ಳಂಬೆಳಗ್ಗೆ 8 ಗಂಟೆಗೆ ಟೀ ಕುಡಿಯುವ ವೇಳೆ ಟಾಟಾ ಏಸ್‍ನಲ್ಲಿ ಬಂದ 7 ಜನ ದುಷ್ಕರ್ಮಿಗಳು ರವಿಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ರವಿ ಅವರು ಟೀಯನ್ನು ದುಷ್ಕರ್ಮಿಗಳ ಮುಖದ ಮೇಲೆ ಎರಚಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಅವರು ರವಿಯ ತಲೆಗೆ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹೊಡೆತದ ರಭಸಕ್ಕೆ ರವಿ ತಲೆ ಛಿದ್ರ ಛಿದ್ರವಾಗಿದೆ.

    ಈ ಹಿಂದೆ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ರವಿ, ಕಳೆದ 10 ವರ್ಷ ಜೆಡಿಎಸ್ ಪಕ್ಷ ಕಾರ್ಯಕರ್ತನಾಗಿದ್ದರು. ಕಳೆದ 6 ತಿಂಗಳ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2015 ರಲ್ಲಿ ಹಟ್ಟಿ ಮಂಜಣ್ಣ ಕೊಲೆ ನಡೆದಿದ್ದು, ಅದರಲ್ಲಿ ರವಿಯ ಕೈವಾಡವಿತ್ತು. ಈ ಹಿನ್ನೆಲೆಯಲ್ಲಿ ಹಟ್ಟಿ ಮಂಜ ಸಹಚರರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

    ಬಟವಾಡಿಯಲ್ಲಿರುವ ಫ್ಲೈಓವರ್‍ನ ಕೆಳಗಡೆ ರವಿಕುಮಾರ್ ಶವ ಅಪಘಾತವಾದ ರೀತಿಯಲ್ಲಿ ಬಿದ್ದಿತ್ತು. ಆದ್ರೆ ಶವ ನೋಡಿ ಇದೊಂದು ಕೊಲೆ ಎಂದು ಹೇಳಲಾಗಿತ್ತು. ಅಪಘಾತವಾದರೆ ಬದಿಯಲ್ಲಿ ಬೀಳಲು ಸಾಧ್ಯವಿಲ್ಲ. ರವಿಕುಮಾರ್ ರೌಡಿಶೀಟರ್ ಆಗಿದ್ದರಿಂದ ಅವರ ಮೇಲೆ ಅನೇಕರು ಕಣ್ಣಿಟ್ಟಿದ್ದರು. ಅಷ್ಟೇ ಅಲ್ಲದೇ ಅವರ ಮೇಲೆ 3-4 ಬಾರಿ ಹಲ್ಲೆ ಪ್ರಯತ್ನಗಳು ಕೂಡ ನಡೆದ್ದಿದ್ದವು. ಹೀಗಾಗಿ ಇದು ಕೊಲೆ ಎಂದು ಹೇಳಲಾಗುತ್ತಿತ್ತು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸೀಲನೆ ನಡೆಸಿ ತನಿಖೆ ನಡೆಸಿದ ವೇಳೆ ಟೆಂಪೋ ಪತ್ತೆಯಾಗಿದೆ. ಹೀಗಾಗಿ ಇದು ಕೊಲೆ ಎಂದು ಸ್ಪಷ್ಟವಾಗಿದೆ.

    ಈ ಘಟನೆಗೆ ಸಂಬಂಧಪಟ್ಟಂತೆ ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Vj8oWtMye1E

  • ಕಾಂಗ್ರೆಸ್‍ನಲ್ಲಿ ಯಾವುದೇ ಅಸಮಾಧಾನ ಇಲ್ಲ: ಮಾಜಿ ಸಚಿವ ರಾಮಲಿಂಗಾರೆಡ್ಡಿ

    ಕಾಂಗ್ರೆಸ್‍ನಲ್ಲಿ ಯಾವುದೇ ಅಸಮಾಧಾನ ಇಲ್ಲ: ಮಾಜಿ ಸಚಿವ ರಾಮಲಿಂಗಾರೆಡ್ಡಿ

    ಬೆಂಗಳೂರು: ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಮೇಯರ್ ಆಯ್ಕೆ ಆಗುವ ಸಂದರ್ಭದಲ್ಲಿ ಯಾರೂ ಯಾವ ಕೆಟಗೇರಿ ಎಂದು ಕೇಳುವುದು ಸಾಮಾನ್ಯ. ಆದರೆ ಇದನ್ನು ನಾವು ಅಸಮಾಧಾನ ಎಂದು ಹೇಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದಾರೆ.

    ಕಾಂಗ್ರೆಸ್‍ನಲ್ಲಿ ಯಾವುದೇ ಅಸಮಾಧಾನ ಇಲ್ಲ. ಮೇಯರ್ ಆಯ್ಕೆ ವೇಳೆ ಆಕಾಂಕ್ಷಿಗಳು ಇರೋದು ಸಾಮಾನ್ಯ. ಹಾಗಂತ ಇದನ್ನು ಭಿನ್ನಮತ ಎನ್ನುವುದು ಸರಿಯಲ್ಲ. ಆಶಾ ಸುರೇಶ್ ಇಲ್ಲೇ ಒಳಗೆ ಕೂತಿದ್ದಾರೆ. ಅಲ್ಲದೇ 6 ಪಕ್ಷೇತರರು ಕೂಡ ಬಂದಿದ್ದಾರೆ ಎಂದು ಹೇಳಿದ್ರು.

    ಜೆಡಿಎಸ್‍ನವರು ಯಾರೂ ವಿಪ್ ಉಲ್ಲಂಘನೆ ಮಾಡಲ್ಲ. 1993ರಿಂದ ಎಲ್ಲಾ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ಪರಮೇಶ್ವರ್, ದಿನೇಶ್ ಗುಂಡೂರಾವ್, ಹ್ಯಾರಿಸ್ ಎಲ್ಲರೂ ಒಟ್ಟಾಗಿ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಬಿಬಿಎಂಪಿ ಮೇಯರ್ ಚುನಾವಣೆಗೂ ರೆಸಾರ್ಟ್ ರಾಜಕೀಯ!

    ಬಿಬಿಎಂಪಿ ಮೇಯರ್ ಚುನಾವಣೆಗೂ ರೆಸಾರ್ಟ್ ರಾಜಕೀಯ!

    ರಾಮನಗರ: ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿಯೂ ರೆಸಾರ್ಟ್ ರಾಜಕೀಯ ಆರಂಭವಾಗಿದೆ. ಬಿಜೆಪಿ ಹೈಜಾಕ್ ಭೀತಿಯಿಂದಾಗಿ ಗುರುವಾರ ರಾತ್ರಿ ಪಾಲಿಕೆಯ ಐವರು ಪಕ್ಷೇತರ ಸದಸ್ಯರನ್ನು ಬಿಡದಿ ಸಮೀಪದ ಈಗಲ್‍ಟನ್ ರೆಸಾರ್ಟ್‍ಗೆ ಕಾಂಗ್ರೆಸ್ ನಾಯಕರು ಕರೆತಂದಿದ್ದಾರೆ.

    ಈ ಬಾರಿಯ ಬಿಬಿಎಂಪಿ ಮೇಯರ್ ಸ್ಥಾನವನ್ನು ಕೈ ತಪ್ಪಿಸಲು ಬಿಜೆಪಿ ತಂತ್ರ ರೂಪಿಸುತ್ತಿದೆ ಎನ್ನುವ ಭಯ ಕಾಂಗ್ರೆಸ್ ಪಾಳ್ಯದಲ್ಲಿ ಶುರುವಾಗಿದೆ. ಈಗಾಗಲೇ ಪಾಲಿಕೆಯ ಇಬ್ಬರು ಪಕ್ಷೇತರ ಅಭ್ಯರ್ಥಿಗಳಿಗೆ ಹಲವು ಆಮಿಷಗಳನ್ನು ಒಡ್ಡಿ ಬಿಜೆಪಿ ತನ್ನತ್ತ ಸೆಳೆದುಕೊಂಡಿದೆ ಎನ್ನುವುದು ಕಾಂಗ್ರೆಸ್ ನಾಯಕರ ಆರೋಪ. ಹೀಗಾಗಿ ಉಳಿದ ಐವರನ್ನು ತಮ್ಮ ಜೊತೆಗೆ ಇಟ್ಟುಕೊಳ್ಳಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಈ ರೆಸಾರ್ಟ್ ವಾಸದ ಮೊರೆ ಹೋಗಿದೆ.

    ಕಳೆದ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್ ನಾಯಕರು ಶಾಸಕರಾದ ಮುನಿರತ್ನ, ಎಸ್.ಟಿ. ಸೋಮಶೇಖರ್, ಭೈರತಿ ಬಸವರಾಜ್ ಅವರಿಗೆ ಪಕ್ಷೇತರ ಶಾಸಕರನ್ನು ಆಪರೇಷನ್ ನಿಂದ ಬಚಾವ್ ಮಾಡುವ ಹೊಣೆ ನೀಡಿದ್ದಾರೆ. ಬೆಂಗಳೂರಿನಿಂದ ಬಿಡದಿಯ ರೆಸಾರ್ಟ್‍ಗೆ ಆಗಮಿಸಿದ ಪಕ್ಷೇತರ ಕಾರ್ಪೋರೇಟರ್‍ಗಳು ಇಂದು ರೆಸಾರ್ಟ್‍ನಲ್ಲಿ ಕಾಲ ಕಳೆಯಲಿದ್ದಾರೆ. ರೆಸಾರ್ಟ್‍ಗೆ ಆಗಮಿಸುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, ಕಳೆದ ಮೂರು ವರ್ಷಗಳಿಂದ ನಮಗೆ 7 ಜನ ಬಿಬಿಎಂಪಿ ಪಕ್ಷೇತರ ಸದಸ್ಯರು ಬೆಂಬಲ ನೀಡುತ್ತಿದ್ದರು. ಆದರೆ ಅವರಲ್ಲಿ ಇಬ್ಬರು ಬಿಜೆಪಿಯ ಆಮಿಷದ ಹಿನ್ನೆಲೆಯಲ್ಲಿ ನಮ್ಮನ್ನು ತೊರೆದಿದ್ದಾರೆ. ಅಷ್ಟೇ ಅಲ್ಲದೆ ಉಳಿದಿರುವ ಐವರನ್ನು ಸೆಳೆಯುವ ಯತ್ನಕ್ಕೆ ಬಿಜೆಪಿಯವರು ಕೈಹಾಕಿದ್ದಾರೆ. ಬಿಜೆಪಿಯವರು ನೀಡುತ್ತಿರುವ ಮಾನಸಿಕ ಕಿರುಕುಳದಿಂದ ತಪ್ಪಿಸಲು ಪಾಲಿಕೆ ಸದಸ್ಯರನ್ನು ಇಲ್ಲಿಗೆ ಕರೆತಂದಿದ್ದೇವೆ. ಸದ್ಯಕ್ಕೆ ಬಂದೋಬಸ್ತ್ ಮಾಡಿಕೊಂಡಿದ್ದು, ಚುನಾವಣೆಯ ಸಮಯಕ್ಕೆ ನೇರವಾಗಿ ಬಿಬಿಎಂಪಿ ಕಚೇರಿಗೆ ಹೋಗುತ್ತೇವೆ ಎಂದು ತಿಳಿಸಿದರು.

    ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಪಕ್ಷೇತರ ಸದಸ್ಯರನ್ನು ರೆಸಾರ್ಟ್‍ಗೆ ಕರೆದೊಯ್ಯಲು ಸೂಚನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv