Tag: ಮೈಕ್ರೋ ಫೈನಾನ್ಸ್

  • ಮೈಕ್ರೋ ಫೈನಾನ್ಸ್‌ ಕಿರುಕುಳ ಆರೋಪ – ಗೃಹಿಣಿ ಆತ್ಮಹತ್ಯೆ

    ಮೈಕ್ರೋ ಫೈನಾನ್ಸ್‌ ಕಿರುಕುಳ ಆರೋಪ – ಗೃಹಿಣಿ ಆತ್ಮಹತ್ಯೆ

    ಚಿತ್ರದುರ್ಗ: ತಾಲೂಕಿನ ಕವಾಡಿಗರಹಟ್ಟಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋಫೈನಾನ್ಸ್‌ (Micro Finance) ಕಿರುಕುಳ ಆರೋಪ ಕೇಳಿಬಂದಿದೆ.

    ಗೃಹಿಣಿ ನೇತ್ರಾ (30) ಆತ್ಮತ್ಯೆ ಮಾಡಿಕೊಂಡ ಮಹಿಳೆ. ನೇತ್ರಾ ಮೈಕ್ರೋ ಫೈನಾನ್ಸ್‌ನಲ್ಲಿ 50 ಸಾವಿರ ರೂ. ಸಾಲ ಪಡೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: Nelamangala | 16 ವರ್ಷದ ಬಾಲಕಿ ನೇಣಿಗೆ ಶರಣು

    ಸಾಂದರ್ಭಿಕ ಚಿತ್ರ

    ಹೀಗಾಗಿ ಮೃತಳ ಸಂಬಂಧಿಕರಿಂದ ಮೈಕ್ರೋ ಫೈನಾನ್ಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ (Chitradurga Rural Police Station) ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.  ಇದನ್ನೂ ಓದಿ: ಹೈದ್ರಾಬಾದ್‌ನಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ನಿಗೂಢ ಸಾವು

  • ಮೈಕ್ರೋ ಫೈನಾನ್ಸ್‌ನಿಂದ ಮುಂದುವರಿದ ಕಿರುಕುಳ – ಗ್ರಾಮವನ್ನೇ ತೊರೆದ 7-8 ಕುಟುಂಬಗಳು

    ಮೈಕ್ರೋ ಫೈನಾನ್ಸ್‌ನಿಂದ ಮುಂದುವರಿದ ಕಿರುಕುಳ – ಗ್ರಾಮವನ್ನೇ ತೊರೆದ 7-8 ಕುಟುಂಬಗಳು

    ದಾವಣಗೆರೆ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಸಿಬ್ಬಂದಿ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಗೊಳಿಸಿದೆ. ಅಲ್ಲದೇ ಅಧಿಕ ಬಡ್ಡಿ ಪಡೆಯುವುದನ್ನ ತಡೆಯುವ ವಿಧೇಯಕ್ಕೆ ತಿದ್ದುಪಡಿ ತರಲು ತಯಾರಿ ನಡೆಸಿದೆ. ಹೀಗಿದ್ದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ಮುಂದುವರಿದಿದೆ.

    ಕಿರುಕುಳದಿಂದ ಬೇಸತ್ತ ಏಳೆಂಟು ಕುಟುಂಬಗಳು ಊರು ಬಿಟ್ಟಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ತಾಲೂಕಿನ ಶಿವಗಂಗನಾಳ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಹಿಂದೂ ನೌಕರರು ಉಪವಾಸ ಆಚರಣೆಗೆ ಮನವಿ ಮಾಡಿದ್ರೆ ಸರ್ಕಾರಿ ಕಚೇರಿಗಳೇ ಖಾಲಿ ಖಾಲಿ – ಮುತಾಲಿಕ್

    ಗ್ರಾಮದ ಹಲವು ಕುಟುಂಬಗಳಿಗೆ ಸಾಲದ ಕಂತು ಪಾವತಿಸುವಂತೆ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಪದೇ ಪದೇ ಕಿರುಕುಳ ನೀಡುತ್ತಾ ಬಂದಿದ್ದಾರೆ. ನಿಮಗೆ ಸಿಬಿಲ್ ಸ್ಕೋರ್ ಬರದಿದ್ದರೆ ಎಲ್ಲೂ ನಯಾ ಪೈಸೆ ಸಾಲ ಹುಟ್ಟಲ್ಲ ಅಂತ ಹೆದರಿಸಿದ್ದಾರೆ. ಕೆಲವರನ್ನ ಪೊಲೀಸ್‌ ಠಾಣೆಗೆ ಕರೆಸಿ ಬೆದರಿಸುವಂತೆ ಮಾಡಿದ್ದಾರೆ. ಯಾರ ಕೈ-ಕಾಲು ಹಿಡಿದಾದರೂ ಸಾಲ ತಂದುಕೊಡು ಅಂತ ಮಾನಸಿಕ ಹಿಂಸೆ ನೀಡಿದ್ದಾರೆ.

    ಇದರಿಂದ ಬೇಸತ್ತ ಶಿವಗಂಗನಾಳ ಗ್ರಾಮದ ಕುಟುಂಬಗಳು ಮನೆಗೆ ಬೀಗ ಹಾಕಿಕೊಂಡು ಊರು ಬಿಟ್ಟಿವೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೈಕ್ರೋ ಫೈನಾನ್ಸ್‌ನಿಂದ ಸಾಲ ಪಡೆದ ಕುಟುಂಬಳದ್ದೂ ಇದೇ ಪರಿಸ್ಥಿತಿ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಹಬ್ಬದ ಸಂಭ್ರಮದಲ್ಲಿ ಮಾರಕಾಸ್ತ್ರ ಹಿಡಿದು ಮಧ್ಯರಾತ್ರಿ ವ್ಹೀಲಿಂಗ್ ಮಾಡಿದ್ದ ಪುಂಡರು ಅರೆಸ್ಟ್

  • ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ

    ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ

    ವಿಜಯಪುರ: ಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್ (Micro Finance) ಹಾವಳಿ ಹೆಚ್ಚಾಗಿದ್ದು, ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆ ಮೇಲೆ ವಿಜಯಪುರ ಪೊಲೀಸರ ದಾಳಿ ನಡೆಸಿ, ಬಿಸಿ ಮುಟ್ಟಿಸಿದ್ದಾರೆ.ಇದನ್ನೂ ಓದಿ: ಅತ್ತೆಯ ಕೊಲೆಗೆ ವೈದ್ಯರ ಬಳಿ ಮಾತ್ರೆ ಕೇಳಿದ್ದ ಸೊಸೆ ಕೊನೆಗೂ ಪತ್ತೆ

    ವಿಜಯಪುರದಲ್ಲಿ ಕಳೆದ ಕೆಲವು ವಾರಗಳಿಂದ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಜೊತೆಗೆ ಬಡ್ಡಿ, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ಕೂಡ ಹೆಚ್ಚಾಗಿದೆ. ಹೀಗಾಗಿ ಎಸ್ಪಿ ಲಕ್ಷ್ಮಣ ನಿಂಬರಗಿ ಆದೇಶದ ಮೇರೆಗೆ ಬೆಳ್ಳಂಬೆಳಿಗ್ಗೆ ಮನೆಗಳ ಮೇಲೆ ದಾಳಿ ನಡೆಸಿ, ಶಾಕ್ ನೀಡಿದ್ದಾರೆ.

    ಜಿಲ್ಲೆಯ ಹಲವೆಡೆ ಪೋಲಿಸರು ದಾಳಿ ನಡೆಸಿದ್ದು, ದಾಳಿ ಮಾಡಿ ಅಕ್ರಮ ಹಣ, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ಮೈಕ್ರೋಫೈನಾನ್ಸ್ ಹಾಗೂ ಅಕ್ರಮ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬಡ ಜನರು ಬೇಸತ್ತು ಹೋಗಿದ್ದು, ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಾಳಿ ನಡೆಸಿದ್ದಾರೆ.ಇದನ್ನೂ ಓದಿ:Champions Trophy 2025 | ಇಂದು ಭಾರತ-ಬಾಂಗ್ಲಾ ಮುಖಾಮುಖಿ – ಹಿಟ್‌ಮ್ಯಾನ್‌ ಪಡೆಗೆ ಗೆಲುವಿನ ತವಕ

     

  • ನಾಳೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ರಾಜ್ಯಪಾಲರಿಗೆ ಮರು ರವಾನೆ

    ನಾಳೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ರಾಜ್ಯಪಾಲರಿಗೆ ಮರು ರವಾನೆ

    – ರಾಜ್ಯಪಾಲರ ಆಕ್ಷೇಪಗಳಿಗೆ ಸೂಕ್ತ ಸ್ಪಷ್ಟೀಕರಣ ಕಳಿಸಲು ಸರ್ಕಾರದ ಸಿದ್ಧತೆ

    ಬೆಂಗಳೂರು: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ವ್ಯಕ್ತಪಡಿಸಿರುವ ಎಲ್ಲ ಆಕ್ಷೇಪಣೆಗಳಿಗೂ ಕಾನೂನು ಇಲಾಖೆ ಸೂಕ್ತ ಸ್ಪಷ್ಟೀಕರಣಗಳನ್ನು ಸಿದ್ಧಪಡಿಸಿದೆ. ನಾಳೆ ಸ್ಪಷ್ಟೀಕರಣ ಸಹಿತ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ರಾಜ್ಯಪಾಲರಿಗೆ ಕಳಿಸಲಾಗ್ತಿದೆ. ಸದ್ಯ ಕಾನೂನು ಇಲಾಖೆ ಸಿದ್ಧಪಡಿಸಿರುವ ಸ್ಪಷ್ಟೀಕರಣಗಳನ್ನು ಸಿಎಂ ಅವಗಾಹನೆಗೆ ಕಳಿಸಲಾಗಿದೆ. ಕರಡನ್ನು ಸಿಎಂ ಕಚೇರಿಯಿಂದ ಅಂತಿಮಗೊಳಿಸಿ ರಾಜ್ಯಪಾಲರಿಗೆ ನಾಳೆ ಕಳಿಸಲಾಗುತ್ತದೆ.

    ಸರ್ಕಾರವು ಸುಗ್ರೀವಾಜ್ಞೆಯನ್ನು ಸಮರ್ಥಿಸಿಕೊಂಡು ಸ್ಪಷ್ಟೀಕರಣ ಕೊಡಲು ಮುಂದಾಗಿದೆ. ಇದು ವ್ಯಕ್ತಿ ಮೂಲಭೂತ ಹಕ್ಕನ್ನು ನಿರ್ಬಂಧಿಸುವುದಿಲ್ಲ. ಸಾಲದಾತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿಲ್ಲ. ಸಾಲ ವಸೂಲಾತಿಯನ್ನು ನಿರ್ಬಂಧಿಸುವುದಿಲ್ಲ ಎಂದು ಸ್ಪಷ್ಟನೆ ಕೊಡಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಇತ್ತೀಚೆಗಷ್ಟೇ ವಾಪಸ್ ಕಳುಹಿಸಿದ್ರು. ಸುಗ್ರೀವಾಜ್ಞೆಯು ಸಹಜ ಹಾಗೂ ಸಾಲ ನೀಡುವವರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

    ಸರ್ಕಾರದ ಸ್ಪಷ್ಟೀಕರಣಗಳೇನು?
    * ಸುಗ್ರೀವಾಜ್ಞೆ ಇದು ವ್ಯಕ್ತಿ ಮೂಲಭೂತ ಹಕ್ಕನ್ನು ನಿರ್ಬಂಧಿಸುವುದಿಲ್ಲ.
    * ಸಾಲದಾತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿಲ್ಲ ಹಾಗೂ ಸಾಲ ವಸೂಲಾತಿಯನ್ನು ನಿರ್ಬಂಧಿಸುವುದಿಲ್ಲ.
    * ಸಾಲವನ್ನು ಖಾಸಗಿಯಾಗಿ, ಲೈಸೆನ್ಸ್ ಇಲ್ಲದೇ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡಿದರೆ ಅದು ಕಾನೂನು ವಿರೋಧಿ ಕ್ರಮ. ಅಂತಹ ಸಾಲವು ವಸೂಲಿಗೆ ಅರ್ಹವೂ ಅಲ್ಲ, ಯೋಗ್ಯವೂ ಅಲ್ಲ.
    * ಕಾನೂನಿನ ಪ್ರಕಾರ ವಿಧಿಸಿದ ಬಡ್ಡಿ ಮೇರೆಗೆ ನೀಡಿದ ಸಾಲ ಮಾತ್ರ ವಸೂಲಿಗೆ ಅರ್ಹ.
    * ಅಕ್ರಮ ಸಾಲ ಮತ್ತು ಬಡ್ಡಿ ವಸೂಲಾತಿ ಅರ್ಜಿಗಳನ್ನು ಕಾನೂನಾತ್ಮಕವಾಗಿ ನ್ಯಾಯಾಲಯಗಳು ಕೂಡಾ ವಿಚಾರಣೆಗೆ ಒಳಪಡಿಸಲು ಸಾಧ್ಯವೇ ಇಲ್ಲ.
    * ಕಾನೂನಾತ್ಮಕವಾಗಿ ನೋಂದಾಯಿತ ಸಂಸ್ಥೆ ಅಥವಾ ವ್ಯಕ್ತಿಗಳು ನಿಯಮಾನುಸಾರ ನೈಜ ಸಾಲ ನೀಡಿದವರು ವಸೂಲಿ ಮಾಡಬಾರದೆಂದು ಅಥವಾ ಅಂತಹ ಸಾಲಗಳು ವಸೂಲಿಗೆ ಅರ್ಹವಲ್ಲ
    ಎಂದು ಸುಗ್ರೀವಾಜ್ಞೆಯಲ್ಲಿ ಸರ್ಕಾರ ಎಲ್ಲಿಯೂ ಹೇಳಿಲ್ಲ.
    * ಕೇವಲ ಸಾಲ ವಸೂಲಾತಿಗೆ ಕಾನೂನು ಬಾಹಿರ ಕ್ರಮಗಳನ್ನು ಕೈಗೊಳ್ಳುವುದು, ಹಿಂಸೆ ಮಾಡುವುದು ಮತ್ತು ಒತ್ತಡ ತಂತ್ರ ಹೇರುವುದು ಹಾಗೂ ಕಿರುಕುಳಕ್ಕೆ ಕಾರಣವಾಗುವುದನ್ನು ತಡೆಯಲು/ನಿಷೇಧಿಸಲು ಸುಗ್ರೀವಾಜ್ಞೆ ಪ್ರಸ್ತಾಪಿಸುತ್ತದೆ.
    * ಸಾಲ ನೀಡಿದವರು ಅನುಸರಿಸುವ ಕಾನೂನುಬಾಹಿರ ಕ್ರಮಗಳನ್ನು, ಆ ಕ್ರಮಗಳ ಸ್ವರೂಪದ ಕಾರಣಕ್ಕೆ ಶಿಕ್ಷಿಸಲು ಕಾನೂನುಗಳಿವೆ. ಆದರೆ ಸಾಲದ ಕಾರಣಕ್ಕೆ ಇಂತಹ ಕೃತ್ಯ ಎಸಗಿದಾಗ ಶಿಕ್ಷೆಗೆ ಒಳಪಡಿಸಲು ನಿರ್ದಿಷ್ಟ ಕಾನೂನು ಇಲ್ಲ. ಸಾಲಗಾರರ ಹಿತ ಕಾಪಾಡಲು ಪ್ರತ್ಯೇಕ ಕಾನೂನಿನ ಅವಶ್ಯಕತೆ ಇದೆ.
    * ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದಂತೆ ರಿಸರ್ವ್‌ ಬ್ಯಾಂಕ್‌ನ ಮಾರ್ಗಸೂಚಿಗಳು ನೋಂದಾಯಿತ ಮತ್ತು ಪರವಾನಗಿ ಹೊಂದಿದ ಕಂಪನಿಗಳಿಗಷ್ಟೇ ಅನ್ವಯವಾಗುತ್ತದೆ. ನೋಂದಣಿ ಮತ್ತು ಪರವಾನಗಿ ಇಲ್ಲದ ಕಂಪನಿಗಳಿಗೆ ಇದು ಅನ್ವಯವಾಗುವುದಿಲ್ಲ. ಅವುಗಳ ಕಾನೂನುಬಾಹಿರ ನಡೆಗಳಿಂದ ಜನರನ್ನು ರಕ್ಷಿಸಲು ಸುಗ್ರೀವಾಜ್ಞೆ ಅಗತ್ಯ.

  • ಸಾಲಗಾರರ ಕಿರುಕುಳಕ್ಕೆ ಎದೆಗುಂದಿ ತಪ್ಪು ನಿರ್ಧಾರಕ್ಕೆ ಮುಂದಾಗಬೇಡಿ: ಉ.ಕನ್ನಡ ಎಸ್‌ಪಿ ಸಲಹೆ

    ಸಾಲಗಾರರ ಕಿರುಕುಳಕ್ಕೆ ಎದೆಗುಂದಿ ತಪ್ಪು ನಿರ್ಧಾರಕ್ಕೆ ಮುಂದಾಗಬೇಡಿ: ಉ.ಕನ್ನಡ ಎಸ್‌ಪಿ ಸಲಹೆ

    ಕಾರವಾರ: ಸಾಲಗಾರರಿಂದ ಯಾವುದೇ ಕಿರುಕುಳ ಬಂದರೂ ಸಮೀಪದ ಪೊಲೀಸ್ ಠಾಣೆಗೆ ತಿಳಿಸಿ. ಉತ್ತರ ಕನ್ನಡ ಜಿಲ್ಲಾಡಳಿತ ನಿಮ್ಮ ಜೊತೆ ಇದೆ ಎಂದು ಉತ್ತರ ಕನ್ನಡ ಎಸ್‌ಪಿ ನಾರಾಯಣ .ಎಂ ಸಲಹೆ ನೀಡಿದರು.

    ಮೀಟರ್ ಬಡ್ಡಿ ದಂಧೆಕೋರರಿಂದ ಚೆಕ್‌ಬೌನ್ಸ್ ಕಿರುಕುಳ ವಿಚಾರವಾಗಿ ಮಾತನಾಡಿ, ಚೆಕ್‌ಬೌನ್ಸ್ ಕೇಸ್ ವಿಚಾರದಲ್ಲಿ ಹಳಿಯಾಳದಲ್ಲಿ ಒಂದು ಕೇಸ್ ದಾಖಲಾಗಿದೆ. ಮಹಿಳೆಯೊಬ್ಬರಿಂದ ಹಳಿಯಾಳ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಬ್ದುಲ್, ಶಾಂತಾ, ಭಾಷಾ, ರಾಜು ಮತ್ತು ಸುಭಾನಿ ಐವರ ಮೇಲೆ ದೂರು ಕೊಟ್ಟಿದ್ದಾರೆ. ಈ ಐವರು ಹತ್ತು ಸಾವಿರ ರೂಪಾಯಿಯಂತೆ 50,000 ರೂಪಾಯಿ ಸಾಲ ಕೊಟ್ಟಿದ್ದರು. ಐದು ಜನ ಪ್ರತ್ಯೇಕವಾಗಿ ಐದು ಖಾಲಿ ಚೆಕ್‌ಗಳನ್ನ ಮಹಿಳೆಯಿಂದ ಪಡೆದಿದ್ದಾರೆ. ಆಕೆ ಬಡ್ಡಿ ಸಮೇತ ಸಾಲ ಮರುಪಾವತಿ ಮಾಡಿದ್ದರೂ ಚೆಕ್ ಮರಳಿ ನೀಡಿರಲಿಲ್ಲ. ಈ ಐವರು ಸೇರಿ ಮಹಿಳೆಯನ್ನು ಲೈಂಗಿಕತೆಗೆ ಬಳಸಲು ಮುಂದಾಗಿರುವ ಬಗ್ಗೆ ದೂರು ಬಂದಿದೆ. ದೂರು ಬಂದ ಕೂಡಲೇ ಅಬ್ದುಲ್ ಎಂಬ ಎ1 ಆರೋಪಿಯನ್ನ ಕೂಡಲೇ ಬಂಧಿಸಲಾಗಿದೆ ಎಂದು ತಿಳಿಸಿದರು.

    ಸಾಲಗಾರರಿಂದ ಯಾವುದೇ ಕಿರುಕುಳ ಬಂದರೂ ಸಮೀಪದ ಪೊಲೀಸ್ ಠಾಣೆಗೆ ತಿಳಿಸಿ. ಉತ್ತರ ಕನ್ನಡ ಜಿಲ್ಲಾಡಳಿತ ನಿಮ್ಮ ಜೊತೆ ಇದೆ. ಯಾವುದೇ ಕಿರುಕುಳಕ್ಕೂ ಎದೆಗುಂದಿ ತಪ್ಪು ನಿರ್ಧಾರಕ್ಕೆ ಮುಂದಾಗಬೇಡಿ. ಕಿರುಕುಳ ತಪ್ಪಿಸಲೆಂದೇ ಜಿಲ್ಲೆಯ ಪ್ರತಿ ಠಾಣೆಯಲ್ಲಿ ಹೆಲ್ಪ್ ಡೆಸ್ಕ್ ಆರಂಭ ಮಾಡಲಾಗಿದೆ ಎಂದರು.

    ಮೈಕ್ರೋ ಫೈನಾನ್ಸ್ ಹಾಗೂ ಮೀಟರ್ ಬಡ್ಡಿ ಕಿರುಕುಳ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿ, ಆರ್‌ಬಿಐ ನಿಯಮ ಉಲ್ಲಂಘಿಸಿ ಬಡ್ಡಿ ವಸೂಲಿ ಮಾಡಿದಕ್ಕೆ 4 ಪ್ರಕರಣ ದಾಖಲಾಗಿದೆ. ಬಡ್ಡಿ ವಸೂಲಿಗೆ ಕ್ರಿಮಿನಲ್‌ಗಳನ್ನ ಬಳಿಸಿ ಕಿರುಕುಳ ಕೊಡುತ್ತಿರುವ ಬಗ್ಗೆ ದೂರು ಬಂದಿತ್ತು. ಮೀಟರ್ ಬಡ್ಡಿ ವಸೂಲಿಗೆ ಕಿರುಕುಳ ವಿಚಾರವಾಗಿ 9 ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ದಾಖಲು ಆದ ಬಳಿಕ ಇದುವರೆಗೂ ಒಟ್ಟು 39 ಜನರನ್ನ ಬಂಧಿಸಲಾಗಿದೆ ಎಂದು ಹೇಳಿದರು.

    ಕಾರವಾರ ತಾಲೂಕಿನ ಚಿತ್ತಾಕುಲ ಗ್ರಾಮದ ಸುಲಕ್ಷಮಿ ಎಂಬ ಮಹಿಳೆ, ಕಂಪನಿಯೊಂದರಿಂದ ಸಾಲ ಪಡೆದಿದ್ದು, 2018ರಲ್ಲಿ 4.5 ಲಕ್ಷ ಸಾಲ ಪಡೆದಿದ್ದ ಈಕೆ ಇದುವರೆಗೂ ಬಡ್ಡಿ ತುಂಬ್ತಾನೆ ಇದಾಳೆ ಆದ್ರೆ ಪೂರ್ತಿ ಆಗಿಲ್ಲ. ಬಡ್ಡಿ ಕಂತು ತುಂಬಿಲ್ಲ ಅಂತಾ 5 ಜನ ರಾತ್ರಿ ಮನೆಗೆ ನುಗ್ಗಿ ಅನುಚಿತ ವರ್ತನೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಂಪನಿ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿಸಿದರು.

  • ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ

    ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ

    ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ (Microfinance Bill) ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು (Ordinance) ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆಯಾಗಿದೆ.

    ಹಲವು ಲೋಪದೋಷಗಳನ್ನ ಗುರುತಿಸಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ವಾಪಸ್ ಕಳುಹಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ಕಳುಹಿಸಿ ಎಂದು ಸುಗ್ರೀವಾಜ್ಞೆ ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಸರ್ಕಾರ ಈಗ ಸುಗ್ರೀವಾಜ್ಞೆ ಕರಡು ಬಿಲ್ ಪರಿಷ್ಕರಣೆ ಮಾಡಿ ಮಸೂದೆ ತರಬೇಕಿದೆ.

    ಈ ಮೊದಲು ಕೆಲ ದೋಷಗಳನ್ನು ಸರಿಪಡಿಸುವಂತೆ ಸ್ಪಷ್ಟೀಕರಣಕ್ಕೆ ರಾಜ್ಯಪಾಲರು ಸರ್ಕಾರಕ್ಕೆ ಕಳುಹಿಸಿದರು. ಆದಾದ ಬಳಿಕ ಮತ್ತೆ ಸುಗ್ರೀವಾಜ್ಞೆ ಕಳುಹಿಸಿದ್ದ ಸರ್ಕಾರ. ಅಲ್ಲದೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಎಂ ಸಿಎಸ್ ರಾಜ್ಯಪಾಲರನ್ನ ಭೇಟಿ ಮಾಡಿ ವಿವರಣೆ ನೀಡಿದ್ದಾರೆ. ಆದ್ರೆ ಆರ್‌ಬಿಐ ನಿಯಮಾವಳಿಗಳಿಗೆ ಅಡ್ಡಿ, ಸಾಲ ಕೊಟ್ಟವರ ರಕ್ಷಣೆ ಬಗ್ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು, ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

    ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದೇಕೆ?
    ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್‌ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕು. ವಿಧಾನ ಮಂಡಲ ಅಧಿವೇಶನ ಹತ್ತಿರದಲ್ಲೇ ಇದೆ. ಅಲ್ಲೇ ಮಸೂದೆ ಮಂಡನೆ ಮಾಡಿ, ಚರ್ಚೆ ಬಳಿಕ ಅಂಗೀಕಾರ ಮಾಡಬಹುದು ಎಂದು ರಾಜ್ಯಪಾಲರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

    ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ‌ ಹೇಗೆ ಹಾಕುತ್ತೀರಾ? ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಿ. ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ 10 ವರ್ಷ ವಿಧಿಸಲಾಗಿದೆ, ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ, ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರೋದಕ್ಕೆ ಮತ್ತೊಂದು ಕಾನೂನಿನ ಅಗತ್ಯತೆ ಕಾಣ್ತಿಲ್ಲ. ಆದ್ದರಿಂದ ಬಜೆಟ್ ಅಧಿವೇಶನದ ಹತ್ತಿರವಾಗ್ತಿರುವಾಗ ಸದನದಲ್ಲಿ ‌ಮಸೂದೆ ಮಂಡನೆ ಮಾಡಿ ಸಾದಕಬಾಧಕ ಚರ್ಚಿಸಿ ಎಂದು ತಿಳಿವಳಿಕೆ ನೀಡಿದ್ದಾರೆ.

    * ಈಗಿನ ಸುಗ್ರೀವಾಜ್ಞೆಯಲ್ಲಿರುವ ಅಂಶಗಳೇನು?
    > 10 ವರ್ಷ ಜೈಲು, 5 ಲಕ್ಷದ ತನಕ ದಂಡ
    > ನೋಂದಣಿರಹಿತ ಮತ್ತು ಪರವಾನಗಿರಹಿತ ಸಂಸ್ಥೆ, ಲೇವಾದೇವಿದಾರರ ಸಾಲ, ಬಡ್ಡಿ ಮನ್ನಾ
    > ಸಾಲಗಾರರ ಮೇಲೆ ಯಾವುದೇ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅವಕಾಶವಿಲ್ಲ
    > ಎಲ್ಲ ಮೈಕ್ರೋ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರ ಸಂಸ್ಥೆಗಳು ನೋಂದಣಿ ಕಡ್ಡಾಯ
    > ಸುಗ್ರೀವಾಜ್ಞೆ ಹೊರಡಿಸಿದ 30 ದಿನಗಳ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿ ಕಡ್ಡಾಯ
    > ಸಾಲಗಾರರ ಸಂಪೂರ್ಣ ಮಾಹಿತಿ, ಸಾಲದ ಮೊತ್ತ, ಬಡ್ಡಿ ದರ ಪ್ರಕಟಿಸಬೇಕು
    > ವಸೂಲಿಗೆ ಬಾಕಿ, ಸಾಲ ಪಡೆಯುವಾಗ ಲಿಖಿತ ಮುಚ್ಚಳಿಕೆ ನೀಡಬೇಕು
    > ನೋಂದಣಿ ಅವಧಿ ಒಂದು ವರ್ಷ ಮಾತ್ರ, ಅವಧಿ ಮುಗಿಯುವ 60 ದಿನಗಳ ನವೀಕರಣಕ್ಕೆ ಅರ್ಜಿ
    > ದೂರು ಬಂದರೆ ಅಥವಾ ಸ್ವಯಂಪ್ರೇರಿತವಾಗಿ ನೋಂದಣಿ ರದ್ದು ಮಾಡುವ ಅಧಿಕಾರ
    > ಸಾಲಗಾರರಿಂದ ಭದ್ರತೆಯಾಗಿ ಯಾವುದೇ ವಸ್ತು ಅಥವಾ ಆಸ್ತಿ ಅಡಮಾನ ಇಟ್ಟುಕೊಳ್ಳುವಂತಿಲ್ಲ

    * ದೂರು ಸಲ್ಲಿಸುವುದು ಹೇಗೆ?
    > ಸಾಲಗಾರರು ಕಿರುಕುಳಕ್ಕೆ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ನೀಡಬಹುದು
    > ಪೊಲೀಸರು ಪ್ರಕರಣ ದಾಖಲಿಸಲು ಯಾವುದೇ ಕಾರಣಕ್ಕೂ ನಿರಾಕರಿಸಬಾರದು
    > ಡಿವೈಎಸ್‌ಪಿ ರ‍್ಯಾಂಕ್‌ಗಿಂತ ಮೇಲಿನ ಅಧಿಕಾರಿಗಳಿಗೆ ಸ್ವಯಂಪ್ರೇರಿತ ದೂರು ದಾಖಲಿಸಲು ಅವಕಾಶ
    > ವಿವಾದಗಳನ್ನು ಇತ್ಯರ್ಥಪಡಿಸಲು ಮಧ್ಯವರ್ತಿಯಾಗಿ ಒಂಬುಡುಮನ್ ನೇಮಕಕ್ಕೂ ಅವಕಾಶ

    * ಸಾಲ ವಸೂಲಿ ಹೇಗಿರಬೇಕು?
    > ಸಾಲಗಾರರು, ಕುಟುಂಬದವರ ಮೇಲೆ ಒತ್ತಡ ಹೇರಬಾರದು, ಅವಮಾನ, ಹಿಂಸೆ ಮಾಡಬಾರದು
    > ಸಾಲಗಾರರು, ಕುಟುಂಬದವರನ್ನ ನಿರಂತರವಾಗಿ ಹಿಂಬಾಲಿಸಬಾರದು, ಸ್ವತ್ತು ಅಡಮಾನ ಇಟ್ಟುಕೊಳ್ಳುವಂತಿಲ್ಲ
    > ಬಲವಂತದಿಂದ ಸಾಲ ವಸೂಲಿ ಮಾಡುವಂತಿಲ್ಲ, ಹೊರಗುತ್ತಿಗೆ ಸಿಬ್ಬಂದಿ, ರೌಡಿಗಳ ಬಳಕೆ ಇಲ್ಲ
    > ಸರ್ಕಾರದಿಂದ ಯಾವುದೇ ಸೌಲಭ್ಯ ಪಡೆಯಲು ಅಗತ್ಯವಿರುವ ದಾಖಲೆಗಳನ್ನು ಕಿತ್ತುಕೊಳ್ಳುವಂತಿಲ್ಲ.

  • 10 ಸಾವಿರ ಸಾಲ.. ಒಂದೂವರೆ ಲಕ್ಷ ಬಡ್ಡಿ – ಮೈಕ್ರೋ ಫೈನಾನ್ಸ್‌ ಬೆನ್ನಲ್ಲೇ ಮೀಟರ್ ಬಡ್ಡಿ ಹಾವಳಿ

    10 ಸಾವಿರ ಸಾಲ.. ಒಂದೂವರೆ ಲಕ್ಷ ಬಡ್ಡಿ – ಮೈಕ್ರೋ ಫೈನಾನ್ಸ್‌ ಬೆನ್ನಲ್ಲೇ ಮೀಟರ್ ಬಡ್ಡಿ ಹಾವಳಿ

    ಚಿಕ್ಕಬಳ್ಳಾಪುರ: ಮೈಕ್ರೋ ಫೈನಾನ್ಸ್ (Microfinance) ಕಿರುಕುಳಕ್ಕೆ ಜನ ವಿಲವಿಲ ಒದ್ದಾಡಿ ಸಾವು ನೋವು ಆಗಿರುವ ಸಂದರ್ಭದಲ್ಲೇ ಮೀಟರ್ ಬಡ್ಡಿ ಹಾವಳಿಯೂ ಹೆಚ್ಚಾಗಿದೆ. ನೂರು ರೂಪಾಯಿ ಸಾಲಕ್ಕೆ ಪ್ರತಿ ತಿಂಗಳು 10-15 ಪರ್ಸೆಂಟ್ ವಸೂಲಿ ಮಾಡಿದ್ದಲ್ಲದೇ ಬಡ್ಡಿ, ಚಕ್ರಬಡ್ಡಿ, ಅಸಲು ಸಮೇತ ಸಾಲ ತೀರಿಸಿದ್ರೂ ಶ್ಯೂರಿಟಿ ಇಟ್ಟುಕೊಂಡಿದ್ದ ಚೆಕ್‌ಗಳನ್ನು ನೀಡದೇ ಕಿರುಕುಳ ನೀಡುತ್ತಿರುವ ಆರೋಪ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯಲ್ಲಿ ಕೇಳಿಬಂದಿದೆ.

    ಬಡ್ಡಿ, ಚಕ್ರಬಡ್ಡಿ, ಅಸಲು ಸಮೇತ ಸಾಲ ಮೀಟರ್ ಬಡ್ಡಿ ಸಾಲ ತೀರಿಸಿದ್ರೂ.. ಶ್ಯೂರಿಟಿ ಇಟ್ಟುಕೊಂಡಿದ್ದ ಚೆಕ್‌ಗಳನ್ನು ನೀಡದೆ ಕಿರುಕುಳ ನೀಡುತ್ತಿದ್ದಾನೆ ಅಂತ ಆರೋಪಿಸಿ ಆತನ ಫೋಟೋಗಳನ್ನು ಪ್ರದರ್ಶನ ಮಾಡಿ ಚಿಕ್ಕಬಳ್ಳಾಪುರ ತಾಲೂಕಿನ ಎಲೆಹಳ್ಳಿ, ಕಂಡಕನಹಳ್ಳಿ ಹಾಗೂ ಆವಲಹಳ್ಳಿ ಗ್ರಾಮದ ಸಂತ್ರಸ್ತರು ನ್ಯಾಯ ಕೇಳ್ತಿದ್ದಾರೆ. ಇದನ್ನೂ ಓದಿ: ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಯೋಗ್ಯ ಅಂದ್ರೆ ಜನರ ವೋಟು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು

    ಮದುವೆ ಸೇರಿದಂತೆ ಕೃಷಿ ಕಾಯಕಕ್ಕೆ ಕೈ ಸಾಲ ಅಂತ 10 ಸಾವಿರ 20 ಸಾವಿರ ರೂಪಾಯಿಯನ್ನ ಎಲೆಹಳ್ಳಿ ಗ್ರಾಮದ ವೆಂಕಟೇಶ್ ಬಳಿ ಪಡೆದುಕೊಂಡಿದ್ರಂತೆ. ಸಾಲ ಕೊಡುವಾಗ ಖಾಲಿ ಚೆಕ್ ಪಡೆದಿದ್ದ ವೆಂಕಟೇಶ್. 100 ರೂ.ಗೆ 10 ರಿಂದ 15 ಪರ್ಸೆಂಟ್ ಬಡ್ಡಿ ಹಾಕ್ತಿದ್ದನಂತೆ. ಆದ್ರೂ ಕಷ್ಟ ಅಂತ ತಗೊಂಡು ವರ್ಷಾನುಗಟ್ಟಲೇ ಬಡ್ಡಿ ಕಟ್ಟಿ ಸಾಕಾಗಿ ಕೊನೆಗೆ ಅಸಲು ಹಣ ಕೊಟ್ಟು ಕೈ ತೊಳೆದುಕೊಂಡಿದ್ದಾರಂತೆ. ಆದ್ರೆ ಸಾಲ ಪಡೆಯುವಾಗ ಶ್ಯೂರಿಟಿಯಾಗಿ ಕೊಟ್ಟಿದ್ದ ಖಾಲಿ ಚೆಕ್ ವಾಪಾಸ್ ಕೊಡದ ವೆಂಕಟೇಶ್, 10 ಸಾವಿರಕ್ಕೆ 1.20 ಲಕ್ಷ ಸೇರಿ 2 ಲಕ್ಷ ಹಣ ಕೊಡಬೇಕು ಅಂತ ಖಾಲಿ ಚೆಕ್‌ನಲ್ಲಿ ಬರೆದುಕೊಂಡು ಚೆಕ್ ಬೌನ್ಸ್ ಕೇಸ್ ಹಾಕಿ ಕೋರ್ಟ್‌ಗೆ ಅಲೆದಾಡಿಸುತ್ತಿದ್ದಾನಂತೆ ಅಂತ ಆರೋಪಿಸುತ್ತಿದ್ದಾರೆ.

    ಅಲ್ಲದೇ ಕಂಡಕನಹಳ್ಳಿ ನಿವಾಸಿ ಶಿವಶಂಕರ ಬಾಬು, ಆವಲಹಳ್ಳಿ ಮುನಿರಾಜು, ಕಂಡಕನಹಳ್ಳಿ ನಿವಾಸಿ ಭಾಗ್ಯಮ್ಮ, ಕಂಡಕನಹಳ್ಳಿ ನಿವಾಸಿ ನಾರಾಯಣಸ್ವಾಮಿ, ಅಂಗರೇಖನಹಳ್ಳಿ ಲಕ್ಷ್ಮಿದೇವಮ್ಮ, ಕಾಡದಿಬ್ಬೂರು ಮುನಿರಾಜು, ಕಾಡದಿಬ್ಬೂರು ಮುರಳಿ, ವರಮಲ್ಲೇನಹಳ್ಳಿ ಎಂ. ಮುನಿರಾಜು ಸೇರಿದಂತೆ ಹಲವರು ಈಗಾಗಲೇ ವೆಂಕಟೇಶ್ ಮೀಟರ್ ಬಡ್ಡಿ ದಂಧೆ ಮೂಲಕ ನಮಗೆ ಕೊಡಬಾರದ ಕಾಟ ಕೊಟ್ಟಿದ್ದಾನೆ. ನಮ್ಮ ಖಾಲಿ ಚೆಕ್ ನಮಗೆ ವಾಪಸ್ ಕೊಡದೆ ವಂಚನೆ ನಮ್ಮ ಮೇಲೆಯೇ ಕೇಸ್ ಹಾಕಿ ಬೆದರಿಸ್ತಿದ್ದಾನೆ ಅಂತ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿಗೆ ದೂರು ನೀಡಿದ್ದಾರೆ.

    ಈ ಬಗ್ಗೆ ವೆಂಕಟೇಶ್ ದೂರವಾಣಿ ಮೂಲಕ ಸ್ಪಷ್ಟನೆ ನೀಡಿದ್ದು, ನಾನು ಸಾಲ ಕೊಟ್ಟಿರೊದು ನಿಜ. ಆದ್ರೆ ಬಡ್ಡಿ ಪಡೆದಿಲ್ಲ ಮೀಟರ್ ಬಡ್ಡಿ ದಂಧೆ ನಡೆಸಿಲ್ಲ. ಸಾಲ ಪಡೆವದರೆಲ್ಲ ನಮ್ಮ ಸಂಬಂಧಿಕರು ಹಣ ಪಡೆದು ಸಾಲ ವಾಪಸ್ ಕೊಡ್ತೀವಿ ಅಂತ ಒಪ್ಕೊಂಡು ಈಗ ಹೀಗೆ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪರ ಸ್ತ್ರೀ ಜೊತೆ ಸಲುಗೆ – ಪತಿಯ ಕಾಲು ಮುರಿಯಲು ಪತ್ನಿಯಿಂದಲೇ 5 ಲಕ್ಷಕ್ಕೆ ಸುಪಾರಿ

  • ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬಲಿಯಾದವರಿಗೆ ನ್ಯಾಯ ಕೊಡಿ: ಆರ್‌.ಅಶೋಕ್‌ 

    ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬಲಿಯಾದವರಿಗೆ ನ್ಯಾಯ ಕೊಡಿ: ಆರ್‌.ಅಶೋಕ್‌ 

    – ನ್ಯಾಯಾಂಗ ತನಿಖೆಗೆ ಆಗ್ರಹ

    ಬೆಂಗಳೂರು: ಮೈಕ್ರೋ ಫೈನಾನ್ಸ್‌ಗಳ (Microfinance) ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R.Ashok) ಆಗ್ರಹಿಸಿದ್ದಾರೆ.

    ಮಂಡ್ಯದ (Mandya) ಕೊನ್ನಾಪುರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ 6 ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದ್ದಾರೆ.

    ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರಿಗೆ ಕಣ್ಣಿಲ್ಲ. ಕೊನ್ನಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ, ನವಚೇತನ, ಸೂರ್ಯೋದಯ, ಯುನಿಟಿ, ಪ್ರಗತಿ ಸೇರಿದಂತೆ 24 ಮೈಕ್ರೋ ಫೈನಾನ್ಸ್‌ಗಳು ಈ ಹಳ್ಳಿಗೆ ಬಂದು ವರ್ಷಕ್ಕೆ 12% ರಂತೆ ಸಾಲ ನೀಡಿವೆ. ಒಬ್ಬರಿಗೆ ಒಂಬತ್ತು ಜನರು ಶೂರಿಟಿ ನೀಡಿದ್ದಾರೆ. ಒಬ್ಬರು ಸಾಲ ಮರುಪಾವತಿ ಮಾಡಿಲ್ಲವೆಂದರೆ ಉಳಿದವರು ಹೊಣೆಯಾಗುತ್ತಾರೆ. ಸಾಲ ಕಟ್ಟದೆ ಮಾನ ಹೋದಾಗ ನೊಂದವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಪೊಲೀಸರು ಕೂಡ ಇಲ್ಲಿ ಮೈಕ್ರೋ ಫೈನಾನ್ಸ್‌ಗೆ ಬೆಂಬಲ ನೀಡಿದ್ದಾರೆ. ಮನೆ ವಶಕ್ಕೆ ಪಡೆಯುವ ಸಮಯದಲ್ಲಿ ಪೊಲೀಸರು ಕುಟುಂಬದ ಸದಸ್ಯರನ್ನು ಎಳೆದು ಹೊರಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಂಡ್ಯದಲ್ಲಿ 60 ಮೈಕ್ರೋ ಫೈನಾನ್ಸ್‌ಗಳಿದ್ದು, ಕೇವಲ 18 ಮಾತ್ರ ಅಧಿಕೃತವಾಗಿವೆ. ಉಳಿದವುಗಳಲ್ಲಿ ರೌಡಿಗಳಿದ್ದಾರೆ. ತಹಶೀಲ್ದಾರ್‌ ಹಾಗೂ ಪೊಲೀಸರು ಎಲ್ಲಾ ಹಳ್ಳಿಗೂ ಹೋಗಿ ಕ್ರಮ ಕೈಗೊಳ್ಳಬೇಕಿತ್ತು. ಈ ಸಾವುಗಳಿಗೆ ನ್ಯಾಯ ನೀಡಲು ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಬೇಕು. ಅನಧಿಕೃತ ಮೈಕ್ರೋ ಫೈನಾನ್ಸ್‌ಗಳನ್ನು ಪತ್ತೆ ಮಾಡಿ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

  • ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್: ವಿಜಯೇಂದ್ರ

    ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್: ವಿಜಯೇಂದ್ರ

    – ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ

    ಬೆಂಗಳೂರು: ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರ್ಕಾರ ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್ (Microfinance) ಸಂಸ್ಥೆಗಳಿಗೆ ಸಂಜೆ 5 ಗಂಟೆ ತನಕ ವಸೂಲಿಗೆ ಹೋಗಲು ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ಕಿಡಿಕಾರಿದ್ದಾರೆ.

    ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. ಈ ವೇಳೆ ಬೆಳಿಗ್ಗೆ 10 ರಿಂದ 5ಗಂಟೆ ವರೆಗೆ ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗೆ ಹೋಗಿ ಎಂಬ ಮಾತನ್ನು ರಾಜ್ಯ ಸರ್ಕಾರ ಹೇಳುತ್ತಿರುವುದು ದುರ್ದೈವದ ಸಂಗತಿ. ಒಂದು ಕಡೆ ತಮ್ಮ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಜನರು ಸಮೃದ್ಧರಾಗಿದ್ದಾರೆ. ಆಲ್ ಈಸ್ ವೆಲ್ ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದು ಕಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದೌರ್ಜನ್ಯ ಮತ್ತು ಭರಾಟೆಯಿಂದ ರಾಜ್ಯದಲ್ಲಿ ಬಡವರು, ಮಹಿಳೆಯರು, ಕೂಲಿ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್: ವಿಜಯೇಂದ್ರ

    ಮೈಕ್ರೋ ಫೈನಾನ್ಸ್ ಹಾವಳಿಯ ಕುರಿತು ಬಹಳಷ್ಟು ಚರ್ಚೆ ಆಗುತ್ತಿದೆ. ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ವಸೂಲಾತಿ ದೌರ್ಜನ್ಯದಿಂದ ಭಯಭೀತರಾಗಿ ಹಣ ಮರುಪಾವತಿ ಮಾಡಲು ಸಾಧ್ಯವಾಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವ್ಯೂಹಕ್ಕೆ ಬಡವರು ಸಿಲುಕಿದ್ದಾರೆ. ರಾಜ್ಯ ಸರ್ಕಾರದ ದೌರ್ಜನ್ಯಕ್ಕೆ ಅವಕಾಶ ಕೊಡುವುದನ್ನು ಬದಿಗಿಟ್ಟು ಮುಗ್ಧ ಬಡಜನರ, ರೈತರ ರಕ್ಷಣೆಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅನುದಾನ ಇಲ್ಲದೇ ಶಾಸಕರು ಅಭಿವೃದ್ಧಿ ರಹಿತ ಕ್ಷೇತ್ರದೊಂದಿಗೆ ಕೈಕಟ್ಟಿ ಕುಳಿತಿರುವ ದಾರುಣ ಪರಿಸ್ಥಿತಿ ಇದೆ. ರೈತರ ಗೋಳನ್ನು ಸರ್ಕಾರ ಕೇಳುತ್ತಿಲ್ಲ. ಹಗಲು ದರೋಡೆ, ಕೊಲೆ, ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ. ಇದಲ್ಲದೇ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದಲ್ಲಿ ಚುನಾಯಿತ ಸರ್ಕಾರ, ಮುಖ್ಯಮಂತ್ರಿಗಳು ಇದ್ದಾರಾ? ಸರ್ಕಾರ ರಾಜ್ಯದ ಅಭಿವೃದ್ಧಿ ಸೇರಿ ಎಲ್ಲವನ್ನೂ ಮರೆತಿದೆ. ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡಿದೆ ಎಂದಿದ್ದಾರೆ.

    ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ: ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಏರುವ ವಿಶ್ವಾಸವಿದೆ. 9-10 ಸಮೀಕ್ಷೆಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದಂತೆ 27 ವರ್ಷಗಳ ನಂತರ ದೆಹಲಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಗ್ಯಾರಂಟಿಗಳ ಭ್ರಮೆಯಲ್ಲಿದ್ದ ಆಮ್ ಆದ್ಮಿ ಪಾರ್ಟಿಗೆ ತಕ್ಕ ಪಾಠವನ್ನು ಆ ರಾಜ್ಯದ ಜನರು ಕಲಿಸುತ್ತಾರೆ. ಭ್ರಷ್ಟಾಚಾರದ ವಿರುದ್ಧ ಆಂದೋಲನ ಮಾಡಿ, ರಾಜ್ಯದ ಚುಕ್ಕಾಣಿ ಹಿಡಿದ ಆಮ್ ಆದ್ಮಿ ಪಾರ್ಟಿಗೆ ತಕ್ಕ ಉತ್ತರವನ್ನು ನೀಡಿದ್ದಾರೆ. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸ ನಮಗಿದೆ ಎಂದಿದ್ದಾರೆ.

    ಕೇಂದ್ರದ ಅತ್ಯುತ್ತಮ ಬಜೆಟ್: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅತ್ಯುತ್ತಮ ಬಜೆಟ್ ಮಂಡನೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕನಸು ನನಸಾಗುವ ನಿಟ್ಟಿನಲ್ಲಿ ಅಭಿವೃದ್ಧಿಗೆ ಪೂರಕವಾದ, ಬಡವರು, ರೈತರು, ಯುವಕರು, ಮಹಿಳೆಯರ ಪರವಾಗಿ ಒಂದು ಅತ್ಯುತ್ತಮ ಬಜೆಟ್ ಇದಾಗಿದೆ ಎಂದಿದ್ದಾರೆ.

    12 ಲಕ್ಷದವರೆಗೆ ಆದಾಯ ತೆರಿಗೆ ಕಟ್ಟುವಂತಿಲ್ಲ ಎಂಬ ನಿರ್ಧಾರದಿಂದ ಮಧ್ಯಮ ವರ್ಗದವರಿಗೆ ಬಹಳಷ್ಟು ಅನುಕೂಲವಾಗಿದೆ. ಜನರ ಬಹುವರ್ಷಗಳ ನಿರೀಕ್ಷೆಗೆ ತಕ್ಕಂತೆ ಬಜೆಟ್ ಮಂಡಿಸಿದ್ದು, ಇದು ಪ್ರತಿಯೊಬ್ಬರೂ ಸಂತಸ ಪಡುವ ವಿಚಾರವಾಗಿದೆ. ಸಿದ್ದರಾಮಯ್ಯನವರಿಂದ ಕೇಂದ್ರದ ಬಜೆಟ್ ಬಗ್ಗೆ ಒಳ್ಳೆಯ ಮಾತು ಕೇಳಲು ಸಾಧ್ಯವಿಲ್ಲ. ಸಹಜವಾಗಿ ಅವರು ಟೀಕೆಗಳನ್ನು ಮಾಡಿದ್ದಾರೆ. ಕರ್ನಾಟಕವೂ ಸೇರಿದಂತೆ ದೇಶದ ಪ್ರತಿಯೊಂದು ರಾಜ್ಯದಲ್ಲೂ ಸಹ ಈ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಕುರಿತ ದೇವೇಗೌಡರ ಹೇಳಿಕೆ ಸರಿಯಾಗಿದೆ: ಛಲವಾದಿ ನಾರಾಯಣಸ್ವಾಮಿ

  • ಮೈಕ್ರೋ ಫೈನಾನ್ಸ್ ಕಿರುಕುಳ – 99 ರೂ. ಬಾಕಿ ಇರೋದಕ್ಕೆ 58,000 ಕಟ್ಟುವಂತೆ ನೋಟೀಸ್

    ಮೈಕ್ರೋ ಫೈನಾನ್ಸ್ ಕಿರುಕುಳ – 99 ರೂ. ಬಾಕಿ ಇರೋದಕ್ಕೆ 58,000 ಕಟ್ಟುವಂತೆ ನೋಟೀಸ್

    ದಾವಣಗೆರೆ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Microfinance) ಕಿರುಕುಳ ತಡೆಗಟ್ಟಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯಪಾಲರ ಅಂಕಿತಕ್ಕೆ ಸುಗ್ರೀವಾಜ್ಞೆ ಕಳುಹಿಸಿದೆ. ಈ ನಡುವೆಯೂ ಸಾರ್ವಜನಿಕರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮುಂದುವರಿದೆ. ಅದನ್ನೋದಕ್ಕೆ ದಾವಣಗೆರೆಯ (Davangere) ಈ ಪ್ರಕರಣ ಸಾಕ್ಷಿಯಾಗಿದೆ.

    ಹೌದು. ಕೇವಲ 99 ರೂ. ಬಾಕಿ ಇರೋದಕ್ಕೆ 58,000 ರೂ. ಕಟ್ಟುವಂತೆ ಬ್ಯಾಂಕೊಂದು ದಾವಣಗೆರೆ ನಗರದ ಚಂದ್ರಶೇಖರ್‌ಗೆ ನೋಟೀಸ್ ಕೊಟ್ಟು, ಹಣ ಪಾವತಿಸುವಂತೆ ಕಿರುಕುಳ ನೀಡುತ್ತಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂಸಾಚಾರದ ಕಿಡಿ ಹೊತ್ತಿಸಿದ ಭಾಷಣ – ಉದ್ರಿಕ್ತರಿಂದ ಶೇಖ್ ಹಸೀನಾ ತಂದೆ ನಿವಾಸ ಧ್ವಂಸ

    ಚಂದ್ರಶೇಖರ್ ಆನ್‌ಲೈನ್ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ 10 ಲಕ್ಷ ರೂ. ಸಾಲ ಮಾಡಿದ್ದರು. ಪ್ರತಿ ತಿಂಗಳು ಕಂತಿನಂತೆ ಎಲ್ಲಾ ಸಾಲವನ್ನು ಕಟ್ಟಿದ್ದರು. ಉಳಿದ 99 ರೂ. ಕಟ್ಟಿಸಿಕೊಂಡು ಕ್ಲೀಯರೆನ್ಸ್ ಕೊಡಿ ಎಂದು ಕೇಳಿದಾಗ 58,000 ರೂ. ಕಟ್ಟುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಗೌತಮ್‌ ಅದಾನಿ ಪುತ್ರನ ವಿವಾಹ ಪ್ರತಿಜ್ಞೆ – ಪ್ರತಿ ವರ್ಷ 500 ಅಂಗವಿಕಲ ಹೆಣ್ಣುಮಕ್ಕಳ ವಿವಾಹಕ್ಕೆ 10 ಲಕ್ಷ ನೆರವು ಘೋಷಣೆ

    ನಿಮಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ಬೇಕು ಅಂದ್ರೆ 58,000 ಕಟ್ಟಬೇಕು ಎಂದು ಚಂದ್ರಶೇಖರ್‌ಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹೇಳಿದ್ದಾರೆ. ದಾಖಲೆ ಪ್ರಕಾರ ಕೇವಲ 99 ರೂಪಾಯಿ ಕಟ್ಟಿದರೆ ಸಾಲ ಮುಕ್ತವಾಗುತ್ತದೆ. ಆದರೆ ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿ 58,000 ಕಟ್ಟಲೇಬೇಕು ಎಂದು ಚಂದ್ರಶೇಖರ್‌ಗೆ ಕಿರುಕುಳ ನೀಡುತ್ತಿದ್ದಾರೆ. ಚಂದ್ರಶೇಖರ್ ಕಿರುಕುಳ ತಾಳಲಾರದೆ ಈ ಬಗ್ಗೆ ಆರ್‌ಬಿಐಗೆ ಪತ್ರ ಬರೆಯಲು ಮುಂದಾಗಿದ್ದಾರೆ.

    ಆನ್‌ಲೈನ್‌ನಲ್ಲಿ ಸಾಲ ಪಡೆದರು ಸಹ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನಿಲ್ಲುತ್ತಿಲ್ಲ. ಎಲ್ಲಾ ಹಣವನ್ನು ಬಡ್ಡಿ ಸಮೇತ ಕಟ್ಟಿದರೂ ಕೂಡ ಇನ್ನೂ ಹಣ ಕಟ್ಟಿ ನಂತರ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕೊಡುತ್ತೇವೆ ಎಂದು ಸತಾಯಿಸುತ್ತಿದ್ದಾರೆ ಎಂದು ಅಲವತ್ತುಕೊಂಡಿದ್ದಾರೆ. ಜೊತೆಗೆ ದೂರು ನೀಡುವುದಾಗಿಗೂ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬಾವಿಯಲ್ಲಿ ಪತ್ತೆಯಾದ ಬುಲೆಟ್ ಬೈಕ್ ಸುತ್ತ ಅನುಮಾನದ ಹುತ್ತ!