Tag: ಮೈಲಾರಲಿಂಗೇಶ್ವರ

  • ನ್ಯಾಯದ ತಕ್ಕಡಿ ಜರುಗಿತು, ಜೀವರಾಶಿ ಸಂಪಾದಲೆ ಪರಾಕ್ – ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

    ನ್ಯಾಯದ ತಕ್ಕಡಿ ಜರುಗಿತು, ಜೀವರಾಶಿ ಸಂಪಾದಲೆ ಪರಾಕ್ – ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

    ಚಿಕ್ಕಮಗಳೂರು: ಜಿಲ್ಲೆಯ (Chikkamagaluru) ಕಡೂರು ತಾಲೂಕಿನ ಬೀರೂರಿನ ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ (Mylaralingeshwar Karnika)ನುಡಿಮುತ್ತು ಹೊರಬಿದ್ದಿದೆ. ಕಾರ್ಣಿಕದ ನುಡಿಯಲ್ಲಿ, ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ ಪರಾಕ್ ಎಂಬ ಭವಿಷ್ಯ ಹೊರಬಿದ್ದಿದೆ.

    ಮಹಾನವಮಿ ಬಯಲಿನಲ್ಲಿ ದಶರಥ ಪೂಜಾರ್ ಅವರಿಂದ ಮುಂಜಾನೆ ಕಾರ್ಣಿಕದ ನುಡಿ ಹೊರಬಿದ್ದಿದೆ. ಬೀರೂರು ಪಟ್ಟಣದಲ್ಲಿರುವ ಮೈಲಾರಲಿಂಗ ಸ್ವಾಮಿ ದೇವಸ್ಥಾನದಲ್ಲಿ ರಾತ್ರಿಯಿಂದ ಹೂವಿನ ಪಲಕ್ಕಿಯೊಂದಿಗೆ ಮೈಲಾರಲಿಂಗ ಸ್ವಾಮಿಯ ಮೆರವಣಿಗೆ ನಡೆಯಿತು.

    ಮೈಲಾರಲಿಂಗೇಶ್ವರ ದರ್ಶನಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಅಗಮಿಸಿರುವ ಭಕ್ತರು. ಹಲವು ಬಾರಿ ಕಾರ್ಣಿಕದ ನುಡಿಯಂತೆ ನಡೆದಿರುವ ಉದಾಹರಣೆ ಇದೆ. ಕಾರ್ಣಿಕ ಕೇಳಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.

    ಕಾರ್ಣಿಕ ನುಡಿದಿರುವ ಭವಷ್ಯವಾಣಿ ಬಗ್ಗೆ ಭಕ್ತರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

  • ಭಿಕ್ಷುಕರೆಂದು ಗೊರವಯ್ಯನವವರನ್ನು ನಿರಾಶ್ರಿತರ ಕೇಂದ್ರಕ್ಕೆ ಕರೆದೊಯ್ದ ಅಧಿಕಾರಿಗಳು

    ಭಿಕ್ಷುಕರೆಂದು ಗೊರವಯ್ಯನವವರನ್ನು ನಿರಾಶ್ರಿತರ ಕೇಂದ್ರಕ್ಕೆ ಕರೆದೊಯ್ದ ಅಧಿಕಾರಿಗಳು

    ಯಾದಗಿರಿ: ಇಲ್ಲಿನ ಮೈಲಾಪುರದ (Mylapura) ಮಲ್ಲಯ್ಯನ ಜಾತ್ರೆಯಲ್ಲಿ ಅಧಿಕಾರಿಗಳಿಂದ ಮಹಾ ಎಡವಟ್ಟು ನಡೆದಿದೆ. ಭಿಕ್ಷುಕರೆಂದು ಗೊರವಯ್ಯನವರನ್ನು (Goravayya) ನಿರಾಶ್ರಿತರ ಕೇಂದ್ರಕ್ಕೆ ಕರೆದುಕೊಂಡು ಹೋದ ಘಟನೆ ನಡೆದಿದೆ.

    ಪ್ರತಿ ವರ್ಷ ಹಾವೇರಿ (Haveri) ಹಾಗೂ ಗದಗ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಗೊರವಯ್ಯನವರು ಮೈಲಾಪುರ ಮಲ್ಲಯ್ಯನ ಸೇವೆಗೆ ಪಾದಯಾತ್ರೆ ಮೂಲಕ ಬರುತ್ತಾರೆ. ಪಾದಯಾತ್ರೆ ಮೂಲಕ ಬರುವ ಗೊರವಯ್ಯನವರ ಜಾತ್ರೆಯ ದಿನ ಮಲ್ಲಯ್ಯನ ಸೇವೆ ಸಲ್ಲಿಸುತ್ತಾರೆ. ಅದೇ ಪದ್ಧತಿಯಂತೆ ಈ ಬಾರಿಯೂ ಮೈಲಾಪುರದ ಮಲ್ಲಯ್ಯನ ದೇವಸ್ಥಾನಕ್ಕೆ ಬಂದಿದ್ದ ಐದಾರು ಗೊರವಯ್ಯನವರನ್ನ ಅಧಿಕಾರಿಗಳು ಭಿಕ್ಷುಕರೆಂದು ಭಾವಿಸಿ ರಾಯಚೂರು ನಿರಾಶ್ರಿತರ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಕರುನಾಡಿಗೆ ಬಿಗ್ ಶಾಕ್, ಡ್ಯಾಂ ನೀರಿನ ಮಟ್ಟ ಭಾರೀ ಕುಸಿತ – ಕಳೆದ ವರ್ಷ ಎಷ್ಟಿತ್ತು? ಈ ಬಾರಿ ಎಷ್ಟಿದೆ?

    ಅಧಿಕಾರಿಗಳ ಈ ನಡೆಯಿಂದ ರೊಚ್ಚಿಗೆದ್ದ ಗೊರವಯ್ಯನವರ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ. ಕರೆದುಕೊಂಡು ಹೋಗಿರುವ ಗೊರವಯ್ಯರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಗೊರವಯ್ಯನವರಿಂದ ಅಧಿಕಾರಿಗಳು ಹಣ ಕಟ್ಟುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರಿಂದ ಮಾಹಿತಿ ಪಡೆದು ಅಧಿಕಾರಿಗಳು ಕರೆದುಕೊಂಡು ಹೋಗಬೇಕಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

    ಈ ಸಂಬಂಧ ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿಯವರು, ಅಧಿಕಾರಿಗಳ ನಡೆಯನ್ನ ಖಂಡಿಸಿದ್ದಾರೆ. ಅಧಿಕಾರಿಗಳೇ ಕಳ್ಳರಿದ್ದಾರೆ. ಮೈಲಾಪುರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇದೀಗ ಸೇವೆಗೆ ಬಂದ ಗೊರವಯ್ಯರನ್ನು ಕೂಡಿ ಹಾಕಿದ್ದಾರೆ. ಅಧಿಕಾರಿಗಳಿಗೆ ತಾಕತ್ ಇದ್ದರೆ ಜಾತ್ರೆ ಬಂದ್ ಮಾಡಿಸಲಿ. ಗೊರವಪ್ಪರನ್ನ ಕರೆದುಕೊಂಡು ಹೋಗಿ ಹಾಲುಮತ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕುಟುಂಬಸ್ಥರೆಲ್ಲರೂ ರಾಯಚೂರಿನ ನಿರಾಶ್ರಿತರ ಕೇಂದ್ರದ ಬಳಿ ಜಮಾಯಿಸಿ, ಅಲ್ಲಿಯೇ ಅಡುಗೆ ಮಾಡಿ ಅಧಿಕಾರಿಗಳ ನಡೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗೊರವಯ್ಯರವರನ್ನ ಕರೆದುಕೊಂಡು ಬಂದ ಅಧಿಕಾರಿಗಳು ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಕ್ಕೆ ನಾವು ಜವಾಬ್ದಾರರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇದೀಗ ರಾಜ್ಯದ ಬೇರೆ ಬೇರೆ ಜಿಲ್ಲೆಯ ಗೊರವಯ್ಯನವರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ತಪ್ಪಿತಸ್ಥರಿಗೆ ಕ್ಷಮೆ ಇಲ್ಲ – ಹಾನಗಲ್‌ ಗ್ಯಾಂಗ್‌ರೇಪ್ ಪ್ರಕರಣ ಕುರಿತು ಸಿಎಂ ಮೊದಲ ಪ್ರತಿಕ್ರಿಯೆ

  • ಅಂಬಲಿ ಹಳಿಸಿತು, ಕಂಬಳಿ ಬೀಸಿತಲೆ ಪರಾಕ್ – ಮೈಲಾರಲಿಂಗೇಶ್ವರ ವರ್ಷದ ದೈವವಾಣಿ

    ಅಂಬಲಿ ಹಳಿಸಿತು, ಕಂಬಳಿ ಬೀಸಿತಲೆ ಪರಾಕ್ – ಮೈಲಾರಲಿಂಗೇಶ್ವರ ವರ್ಷದ ದೈವವಾಣಿ

    ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ವರ್ಷದ ಭವಿಷ್ಯವಾಣಿ ಮೈಲಾರಲಿಂಗೇಶ್ವರನ (Mylaralingeshwar) ಕಾರ್ಣಿಕೋತ್ಸವ ನಡೆಯಿತು. 15 ಅಡಿ ಬಿಲ್ಲನ್ನೇರಿದ ರಾಮಪ್ಪ ಗೊರವಯ್ಯ ಸದ್ದಲೇ ಎನ್ನುತ್ತಲೆ ಅಂಬಲಿ ಹಳಿಸಿತು, ಕಂಬಳಿ ಬೀಸಿತಲೆ ಪರಾಕ್ ಎಂದು ಈ ವರ್ಷದ ಕಾರ್ಣಿಕ (prediction) ನುಡಿದಿದ್ದಾರೆ.

    ಸುಮಾರು ವರ್ಷಗಳಿಂದ ವರ್ಷಕ್ಕೊಮ್ಮೆ ನಡೆಯುವ ಕಾರ್ಣಿಕವನ್ನು ಕೇಳಲು ಲಕ್ಷಾಂತರ ಜನ ಭಕ್ತರು ಜಮಾಯಿಸುತ್ತಾರೆ. ಭಾರತ ಹುಣ್ಣಿಮೆಯ ಸಮಯದಲ್ಲಿ ನಡೆಯುವ ಜಾತ್ರೆಯ ವೇಳೆ ರಾಮಪ್ಪ ಗೊರವಯ್ಯ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬಿಲ್ಲನ್ನೇರಿ ಡೆಂಕನಮರಡಿಯಲ್ಲಿ ಸದ್ದಲೇ ಅನ್ನುತ್ತ ಕಾರ್ಣಿಕ ನುಡಿಯುತ್ತಾರೆ.

    ಗೊರವಯ್ಯ ನುಡಿಯುವ ಕಾರ್ಣಿಕವನ್ನು ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಣೆ ಮಾಡುತ್ತಾರೆ. ಈ ವರ್ಷ ಗೊರವಯ್ಯ ನುಡಿದ ಕಾರ್ಣಿಕವಾಣಿ ಅಂಬಲಿ ಹಳಸಿತು ಕಂಬಳಿ ಬೀಸಿತಲೆ ಪರಾಕ್ ಎನ್ನುವುದನ್ನು ದೇಶದ ಅನ್ನದಾತರು ಹಾಗೂ ರಾಜಕಾರಣದ ದೈವನುಡಿಯನ್ನು ವಿಶ್ಲೇಷಣೆ ಮಾಡಿದರು. ರೈತರಿಗೆ ರಾಜ್ಯದಲ್ಲಿ ಮಳೆ ಬೆಳೆ ಜಾಸ್ತಿ ಆಗಿ, ಸಮೃದ್ಧಿಯಾಗಲಿದೆ. ಇದರ ಜೊತೆಗೆ ಮಳೆ ಜಾಸ್ತಿಯಾಗಿ ಬೆಳೆ ಹಾನಿಯಾಗಲಿದೆ. ರೈತರಿಗೆ ಬೆಳೆದ ಬೆಳೆ ಸಿಗುತ್ತದೆ. ಈ ಸೂಚನೆ ಮೈಲಾರಲಿಂಗೇಶ್ವರನ ವಾಣಿಯಿಂದ ಸಿಕ್ಕಿದೆ.

    ರಾಜಕೀಯವಾಗಿ 2023ರಲ್ಲಿ ನ್ಯಾಯಯುತವಾಗಿರುವ ನಾಯಕ ಮುಖ್ಯಮಂತ್ರಿ ಆಗಲಿದ್ದಾರೆ. ಪ್ರಾಮಾಣಿಕವಾಗಿ ನಿಷ್ಠೆಯಿಂದ ಇರುವ ವ್ಯಕ್ತಿ ರಾಜ್ಯ ಹಾಗೂ ರಾಷ್ಟ್ರವನ್ನು ಆಳುತ್ತಾರೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ನಿಷ್ಠೆಯಿಂದ ಇರುವ ನಾಯಕರಿಗೆ ರಾಜ್ಯದ ಪಟ್ಟ ಸಿಗಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ವಿಶ್ಲೇಷಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಮುತ್ತಿನರಾಶಿ ಮೂರು ಭಾಗ ಆದಿತಲೆ ಪರಾಕ್’ ಮೈಲಾರಲಿಂಗೇಶ್ವರ ಕಾರ್ಣಿಕ

    ‘ಮುತ್ತಿನರಾಶಿ ಮೂರು ಭಾಗ ಆದಿತಲೆ ಪರಾಕ್’ ಮೈಲಾರಲಿಂಗೇಶ್ವರ ಕಾರ್ಣಿಕ

    ಬಳ್ಳಾರಿ: ಜಿಲ್ಲೆಯ ಐತಿಹಾಸಿಕ ಮೈಲಾರಲಿಂಗೇಶ್ವರ ಜಾತ್ರೆಯ ವರ್ಷದ ಕಾರ್ಣಿಕೋತ್ಸವ ನಡೆಯಿತು. ಮುತ್ತಿನರಾಶಿ ಮೂರು ಭಾಗ ಆದಿತಲೆ ಪರಾಕ್ ಎಂದು ಗೊರವಯ್ಯ ಸ್ವಾಮಿ ಡೆಂಕನಮರಡಿಯಲ್ಲಿ ಬಿಲ್ಲನ್ನೇರಿ ಕಾರ್ಣಿಕವಾಣಿ ನುಡಿದಿದ್ದಾರೆ.

    ಐತಿಹಾಸಿಕ ಸುಕ್ಷೇತ್ರ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿ ನಡೆದ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ 15 ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ಸ್ವಾಮಿ ಬಿಲ್ಲನೇರಿ ಸದ್ದಲೇ ಎನ್ನುತ್ತಾ ಈ ವರ್ಷದ ಭವಿಷ್ಯವಾಣಿ “ಮುತ್ತಿನರಾಶಿ ಮೂರು ಭಾಗ ಆದಿತಲೆ ಪರಾಕ್” ಎಂದು ದೈವವಾಣಿ ನುಡಿದಿದ್ದಾರೆ.

    ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರಣಿಕವನ್ನು ವಿಶ್ಲೇಷಿಸಿದ್ದು, ಮೂರು ಭಾಗದಲ್ಲಿ ಮಳೆ ಬೆಳೆ ಸಮೃದ್ಧಿಯಾಗಿ, ಒಂದು ಭಾಗದಲ್ಲಿ ಸ್ವಲ್ಪ ಸಮಸ್ಯೆ ಆಗಲಿದೆ. ರಾಜಕೀಯವಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಸರ್ಕಾರ ಛಿದ್ರ ಛಿದ್ರ ಆಗಲಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರುವ ಮುನ್ಸೂಚನೆ ಇದೆ ಎಂದು ಕಾರ್ಣಿಕವಾಣಿಯನ್ನು ವಿಶ್ಲೇಷಣೆ ಮಾಡಿದರು.

    ಮಾಜಿ ಸಚಿವ ಪಿ.ಟಿ ಪರಮೇಶ್ವರ್ ನಾಯಕ್ ರಾಜ್ಯದಲ್ಲಿ ರಾಜಕೀಯವಾಗಿ ಮೂರು ಭಾಗ ಆಗುವ ಸಾದ್ಯತೆ ಇದೆ. ಯಡಿಯೂರಪ್ಪ ಒಂದು ಭಾಗ, ಯತ್ನಾಳ್ ಇನ್ನೊಂದು ಭಾಗ ಮತ್ತು ಬಿಜೆಪಿಗೆ ಹೋದವರು ಒಂದು ಭಾಗವಾಗಿ ಛಿದ್ರ ಛಿದ್ರವಾಗಲಿದ್ದಾರೆ ಎಂದು ವಿಶ್ಲೇಷಣೆ ಮಾಡಿದರು.

    ಕೊರೊನಾ ನಿರ್ಬಂಧದ ನಡುವೆ ಈ ಬಾರಿಯ ಜಾತ್ರೆಯಲ್ಲಿ ಭಕ್ತರ ಸಂಖ್ಯೆ ಸ್ವಲ್ಪ ಇಳಿಮುಖವಾಗಿತ್ತು. ಗೊರವಯ್ಯಸ್ವಾಮಿ ವರ್ಷ ಭವಿಷ್ಯವಾಣಿ ಕೇಳಿದ ನಂತರು ಭಕ್ತರು ತಮ್ಮ ತಮ್ಮ ಊರಿಗೆ ಹೆಜ್ಜೆ ಹಾಕಿದರು.

  • ಕಾರ್ಣಿಕ ಹೇಳೋ ಮುನ್ನವೇ ಕಳಚಿಬಿದ್ದ ಮೈಲಾರಲಿಂಗೇಶ್ವರ ದೇವರ ತ್ರಿಶೂಲ

    ಕಾರ್ಣಿಕ ಹೇಳೋ ಮುನ್ನವೇ ಕಳಚಿಬಿದ್ದ ಮೈಲಾರಲಿಂಗೇಶ್ವರ ದೇವರ ತ್ರಿಶೂಲ

    ಬಳ್ಳಾರಿ: ಮೈಲಾರಲಿಂಗೇಶ್ವರ ದೇವಸ್ಥಾನದ ಮುಂದೆ ಇರುವ ಶಿಬಾರದ ತ್ರಿಶೂಲ ಕಳಚಿಬಿದ್ದ ಘಟನೆ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕು ಮೈಲಾರದಲ್ಲಿ ನಡೆದಿದೆ.

    ಮೈಲಾರಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ಮಂಭಾಗದ ಶಿಬಾರ ತ್ರಿಶೂಲ ಕಳಚಿಬಿದ್ದಿದೆ. ಮುಂಜಾನೆ ಐದು ಗಂಟೆ ಸುಮಾರಿಗೆ ದೇವರ ಉತ್ಸವ ಮೂರ್ತಿಯ ಮೆರವಣಿಗೆ ಹೊರಟ್ಟಿತ್ತು. ಈ ವೇಳೆ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ ಆಗಿದೆ. ದೇವರ ಉತ್ಸವ ನಿಂತು ಮುಂದೆ ಸಾಗಿತು. ಜಾತ್ರೆಗೆ ಮುನ್ನವೇ ಅಪ ಶಕುನವಾಗಿದೆ. ಶಿಬಾರದ ಕಲಶ ಭಗ್ನವಾಗುತ್ತಿದ್ದಂತೆ ಭಕ್ತರು ಬೇಸರಗೊಂಡಿದ್ದಾರೆ.

    ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಎಸಿ ಪ್ರಕಾಶ್ ಅವರನ್ನು ಭಕ್ತರು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಪದ್ದತಿಯಂತೆ ಮೈಲಾರ ಕಾರ್ಣೀಕೋತ್ಸವ ಮಾಡಲು ಅವಕಾಶ ಕೋಡಬೇಕಿತ್ತು. ಸಂಪ್ರದಾಯದ ಪ್ರಕಾರ ಪ್ರತಿಷ್ಠಾಪನೆ ಮಾಡಿ ಎಂದು ಒತ್ತಾಯ ಮಾಡಿದರು. ಜಾತ್ರೆಗೆ ನಿರ್ಬಂಧ ಹೇರಿದ್ದರಿಂದ ಈ ಅಪಶಕುನ ನಡೆದಿದೆ ಎಂದು ಭಕ್ತರು ಅಭಿಪ್ರಾಯ ಪಟ್ಟಿದ್ದಾರೆ.