Tag: ಮೈಶುಗರ್ ಕಾರ್ಖಾನೆ

  • ಮಂಡ್ಯ| ಎರಡು ತಿಂಗಳಿಂದ ಮೈಶುಗರ್ ನೌಕರರಿಗಿಲ್ಲ ಸಂಬಳ

    ಮಂಡ್ಯ| ಎರಡು ತಿಂಗಳಿಂದ ಮೈಶುಗರ್ ನೌಕರರಿಗಿಲ್ಲ ಸಂಬಳ

    – ವೇತನಕ್ಕಾಗಿ ಹೋರಾಟಕ್ಕಿಳಿದ ನೌಕರರು

    ಮಂಡ್ಯ: ಮೈಶುಗರ್ ಕಾರ್ಖಾನೆ (Mysugar Factory) ಸಕ್ಕರೆ ನಾಡು ಮಂಡ್ಯ ಜನರಿಗೆ ಪ್ರತಿಷ್ಠೆ ಸಂಕೇತ. ಯಾವುದೇ ಚುನಾವಣೆ ಎದುರಾಗಲಿ ರಾಜಕೀಯ ಪಕ್ಷಗಳು ಮೈಶುಗರ್ ಅಸ್ತ್ರ ಪ್ರಯೋಗ ಮಾಡೋದನ್ನು ಮಾತ್ರ ಮರೆಯೋದಿಲ್ಲ. ಕಳೆದ ಎರಡು ದಶಕದಿಂದ ರಾಜ್ಯ ಸರ್ಕಾರ ಕಾರ್ಖಾನೆ ಪುನಶ್ಚೇತನಕ್ಕೆಂದು ನೂರಾರು ಕೋಟಿ ಅನುದಾನ ನೀಡಿದೆ. ಆದರೆ ಇಂದಿಗೂ ರೋಗಗ್ರಸ್ತ ಹಣೆಪಟ್ಟಿಯಿಂದ ಹೊರ ಬಂದಿಲ್ಲ. ಒಂದಲ್ಲೊಂದು ಸಮಸ್ಯೆಗಳಿಂದಲೇ ಸುದ್ದಿಯಾಗುತ್ತಿದ್ದು, ಇದೀಗ ಕಾರ್ಖಾನೆಯ ನೌಕರರು ತಮ್ಮ ಸಂಬಳ ನೀಡುವಂತೆ ಆಗ್ರಹಿಸಿ ಬೀದಿಗೆ ಇಳಿದಿದ್ದಾರೆ.

    ಮೈಶುಗರ್ ಕಾರ್ಖಾನೆಯಲ್ಲಿ 250ಕ್ಕೂ ಹೆಚ್ಚು ನೌಕರರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಂಡ್ಯ ಮಾತ್ರವಲ್ಲ ಬಿಹಾರ ಸೇರಿದಂತೆ ಹೊರ ರಾಜ್ಯದ ಕಾರ್ಮಿಕರೂ ಕಡಿಮೆ ಸಂಬಳಕ್ಕೆ ಹಗಲಿರುಳು ದುಡಿಯುತ್ತಿದ್ದಾರೆ. ಈ ನೌಕರರಿಗೆ ಕಳೆದ ಎರಡು ತಿಂಗಳಿಂದ ವೇತನ ನೀಡಿಲ್ಲ. ಸಂಬಳ (Salary) ನೀಡುವಂತೆ ಹಲವು ಭಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಮೊದಲೇ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಾರ್ಮಿಕರು ಇದೀಗ ದಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಆಕ್ರೋಶಗೊಂಡು ಪ್ರತಿಭಟನೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಬಂಧನ

    ಇನ್ನು ಮೈಶುಗರ್ ವ್ಯಾಪ್ತಿಯ ಕಬ್ಬು ಸಂಪೂರ್ಣ ಖಾಲಿಯಾಗುವ ಮೊದಲೇ ಕಬ್ಬು ಅರೆಯುವ ಕಾರ್ಯ ಬಂದ್ ಮಾಡಿದ್ದರಿಂದ ಇತ್ತೀಚೆಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ನೌಕರರು ಆಡಳಿತ ಮಂಡಳಿ ವಿರುದ್ಧ ಕಿಡಿಕಾರುತ್ತಿದ್ದಾರೆ. ಗುತ್ತಿಗೆ ಪಡೆದಿರುವ ಆರ್.ಬಿ.ಟೆಕ್ ಏಜೆನ್ಸಿ ಅಧಿಕಾರಿಗಳನ್ನು ಕೇಳಿದರೆ ಕಾರ್ಖಾನೆಯಿಂದ ಹಣ ಬಿಡುಗಡೆಯಾಗಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಮತ್ತೊಂದೆಡೆ ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಸೂಚನೆ ನೀಡಿದರೂ ಕೆಲವು ಅಧಿಕಾರಿಗಳು ಸಂಬಳದ ಹಣ ಪಾವತಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಹಾಯುತಿ 2.0 ಸರ್ಕಾರ – ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಇಂದು ಪ್ರಮಾಣವಚನ

  • PUBLiC TV Impact | ಮಂಡ್ಯದ ಕಬ್ಬು ಬೆಳೆಗಾರರ ಆತಂಕ ದೂರ

    PUBLiC TV Impact | ಮಂಡ್ಯದ ಕಬ್ಬು ಬೆಳೆಗಾರರ ಆತಂಕ ದೂರ

    ಮಂಡ್ಯ: ಸರ್ಕಾರದ ಮೈಶುಗರ್ ಕಾರ್ಖಾನೆ (Mysugar Factory) ಸ್ಥಗಿತಗೊಂಡಿದ್ದು, ರೈತರು ಬೆಳೆದ ಕಬ್ಬನ್ನು ಬೇರೆ ಕಾರ್ಖಾನೆಗಳಿಗೆ ಪೂರೈಸಲು ಜಿಲ್ಲಾಡಳಿತ ಮುಂದಾಗಿದೆ.

    ಕಾರ್ಖಾನೆ ಸ್ಥಗಿತಗೊಂಡಿ ಪರಿಣಾಮ, ಕಾರ್ಖಾನೆ ವ್ಯಾಪ್ತಿಯಲ್ಲಿ ಸಾವಿರಾರು ಹೆಕ್ಟೇರ್ ಕಬ್ಬು ಉಳಿದಿತ್ತು. ಇದರಿಂದ ಕಾರ್ಖಾನೆ ಹಾಗೂ ಸರ್ಕಾರದ ವಿರುದ್ಧ ರೈತರು (Farmers) ಆಕ್ರೋಶ ವ್ಯಕ್ತಪಡಿಸಿದದ್ದರು. ಈ ಕುರಿತು `ಪಬ್ಲಿಕ್ ಟಿವಿ’ಯಲ್ಲಿ ವಿಸ್ತೃತ ವರದಿ ಪ್ರಸಾರವಾಗಿತ್ತು. ಇದರ ಬೆನ್ನಲ್ಲೇ ಸರ್ಕಾರ ಹಾಗೂ ಮಂಡ್ಯ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.

    ಮೈಶುಗರ್ ಕಾರ್ಖಾನೆ ವ್ಯಾಪ್ತಿಯಲ್ಲಿ ಕಟಾವು ಆಗದೇ ಉಳಿದಿರುವ ಕಬ್ಬನ್ನು ಖಾಸಗಿ ಕಾರ್ಖಾನೆಗಳಿಗೆ ಪೂರೈಕೆಗೆ ನಿರ್ಧಾರ ಮಾಡಲಾಗಿದೆ. ಕಬ್ಬು ಬೆಳೆದ ರೈತರು ಬಂದು ಮನವಿ ಮಾಡಿದ್ರೆ ಬೇರೆ ಕಾರ್ಖಾನೆಗಳಿಗೂ ಪೂರೈಕೆಗೆ ಚಿಂತನೆ ಮಾಡಲಾಗುತ್ತದೆ ಎಂದು ಮೈಶುಗರ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದ್ದಾರೆ.

    ನವೆಂಬರ್ 24 ರಂದು ಮೈಶುಗರ್ ಕಾರ್ಖಾನೆ ಕಬ್ಬು ಅರೆಯುವಿಕೆಯನ್ನು ಸ್ಥಗಿತ ಮಾಡಿತ್ತು. ಪ್ರಸಕ್ತ ವರ್ಷ 2.01 ಲಕ್ಷ ಟನ್ ಕಬ್ಬು ಅರೆದಿದ್ದ ಕಾರ್ಖಾನೆ, ತನ್ನ ವ್ಯಾಪ್ತಿಯಲ್ಲಿ ಕಬ್ಬು ಇದ್ದರೂ ಕಾರ್ಖಾನೆ ಸ್ಥಗಿತ ಮಾಡಲಾಗಿತ್ತು. ಇನ್ನೊಂದೆಡೆ ಇಳುವರಿ ಜೊತೆಗೆ ಕಬ್ಬಿಗೆ ಬೆಲೆಯೂ ಸಿಗದೆ ರೈತರು ಆತಂಕದಲ್ಲಿದ್ದರು. ಬೇರೆ ಖಾಸಗಿ ಕಾರ್ಖಾನೆಗಳು ಕೂಡ ಕಬ್ಬು ತೆಗೆದುಕೊಳ್ಳುವುದಿಲ್ಲ ಎಂಬ ಆತಂಕದಲ್ಲಿ ರೈತರು ಇದ್ದರು. ಇದೀಗ ರೈತರ ಆತಂಕವನ್ನು ಜಿಲ್ಲಾಡಳಿತ ದೂರ ಮಾಡಿದೆ.

  • ಬಜೆಟ್‍ನಲ್ಲಿ ಮಂಡ್ಯದ ಜನರಿಗೆ ಸಿಹಿ ಸುದ್ದಿ ಸಿಗಲಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

    ಬಜೆಟ್‍ನಲ್ಲಿ ಮಂಡ್ಯದ ಜನರಿಗೆ ಸಿಹಿ ಸುದ್ದಿ ಸಿಗಲಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

    ಮಂಡ್ಯ: ಈ ಬಾರಿಯ ಬಜೆಟ್‍ನಲ್ಲಿ ನಗರದ ಜನರಿಗೆ ಸಿಹಿ ಸುದ್ದಿ ಸಿಗಲಿದ್ದು, ಸಕ್ಕರೆ ನಾಡಿನಲ್ಲಿ ಆದಷ್ಟು ಬೇಗ ಮೈಶುಗರ್ ಕಾರ್ಖಾನೆ ಪ್ರಾರಂಭವಾಗುತ್ತೆ ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಆಶ್ವಾಸನೆ ನೀಡಿದರು.

    ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಖಾನೆ ಪ್ರಾರಂಭಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ಸುಕರಾಗಿದ್ದಾರೆ. ಕಾರ್ಖಾನೆಯು ರೈತರಿಗೆ ಅನುಕೂಲವಾಗಬೇಕು ಎಂಬುದೆ ನಮ್ಮ ಉದ್ದೇಶವಾಗಿದೆ. ಈಗಾಗಲೇ ಕಾರ್ಖಾನೆಯ ಕುರಿತು ತಾಂತ್ರಿಕ ಸಮಿತಿ ರಚನೆಯಾಗಿದೆ ಎಂದರು. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

    ಸಮಿತಿಯು ನೀಡುವ ಸಲಹೆಗಳ ಆಧಾರದ ಮೇಲೆ ಕಾರ್ಖಾನೆ ಆರಂಭಿಸುತ್ತೇವೆ. ಈ ಬಾರಿ ಬಜೆಟ್‍ನಲ್ಲಿ ಮಂಡ್ಯದ ಜನರಿಗೆ ಸಿಹಿ ಸುದ್ದಿ ಸಿಗಲಿದೆ. ಇದು ಖಾಸಗಿ ಸಹಭಾಗಿತ್ವದಲ್ಲಿ ಮಾಡಬೇಕೇ ಅಥವಾ ಸರ್ಕಾರಿ ಸ್ವಾಮ್ಯದಲ್ಲಿ ಆರಂಭಿಸಬೇಕೇ ಎಂಬುದು ತಾಂತ್ರಿಕ ಸಮಿತಿ ನೀಡುವ ವರದಿ ಆಧಾರದ ಮೇಲೆ ನಿರ್ಧಾರವಾಗುತ್ತೆ ಎಂದು ತಿಳಿಸಿದರು.

  • ಮೈಶುಗರ್‌ನಲ್ಲಿ ಯಂತ್ರ ಹೊತ್ತೊಯ್ಯಲು ನಿರಾಣಿ ಸಿಬ್ಬಂದಿ ಪ್ರಯತ್ನ

    ಮೈಶುಗರ್‌ನಲ್ಲಿ ಯಂತ್ರ ಹೊತ್ತೊಯ್ಯಲು ನಿರಾಣಿ ಸಿಬ್ಬಂದಿ ಪ್ರಯತ್ನ

    ಮಂಡ್ಯ: ಸರ್ಕಾರಿ ಸ್ವಾಮ್ಯದ ಮೈಶುಗರ್ ಕಾರ್ಖಾನೆಗೆ ನುಗ್ಗಿ ಯಂತ್ರವನ್ನು ಸಾಗಣೆ ಮಾಡಲು ಸಚಿವ ಮುರುಗೇಶ್ ನಿರಾಣಿ ಸಿಬ್ಬಂದಿ ಪ್ರಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.

    ಸದ್ಯ ಮೈಶುಗರ್ ಕಾರ್ಖಾನೆ ಆರಂಭವಾಗದ ಕಾರಣ ಖಾಸಗಿಯವರ ಕಣ್ಣು ಈ ಕಾರ್ಖಾನೆಯ ಮೇಲೆ ಬಿದ್ದಂತೆ ಕಾಣುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಮುರುಗೇಶ್ ನಿರಾಣಿಯ ಸಿಬ್ಬಂದಿ ನಡೆದುಕೊಂಡಿದ್ದಾರೆ.

    ಸಚಿವ ಮುರುಗೇಶ್ ನಿರಾಣಿ ಗುತ್ತಿಗೆ ಪಡೆದಿರುವ ಮಂಡ್ಯ ಜಿಲ್ಲೆಯ ಪಾಂಡವಪುರದ ಪಿಎಸ್‌ಎಸ್‌ಕೆ ಕಾರ್ಖಾನೆಯಲ್ಲಿ ಟರ್ಬೈನ್ ಗವರ್ನರ್ ಎಂಬ ಯಂತ್ರ ಕೆಟ್ಟು ಹೋಗಿತ್ತು. ಇದರಿಂದಾಗಿ ಅಲ್ಲಿನ ಸಿಬ್ಬಂದಿ ಸರ್ಕಾರಿ ಸ್ವಾಮ್ಯದ ಮೈಶುಗರ್ ಕಾರ್ಖಾನೆಗೆ ಯಾರಿಗೂ ಹೇಳದೆ ನುಗ್ಗಿ ಆ ಯಂತ್ರವನ್ನು ತೆಗೆದುಕೊಂಡು ಹೋಗುವ ಕೆಲಸಕ್ಕೆ ಮುಂದಾಗಿದ್ದಾರೆ. ದನ್ನೂ ಓದಿ: ನಕಲಿ ದಾಖಲೆಯಿಂದ ರೈಲು ಇಂಜಿನ್ ಮಾರಾಟ ಮಾಡಿದ ಎಂಜಿನಿಯರ್

    ಪಿಎಸ್‌ಎಸ್‌ಕೆ ಕಾರ್ಖಾನೆಯಲ್ಲಿ ಟರ್ಬೈನ್ ಗವರ್ನರ್ ಎಂಬ ಯಂತ್ರಕ್ಕೆ ಸುಮಾರು 25 ಲಕ್ಷ ರೂ.ಗಳಿದೆ. ಹೀಗಾಗಿ ಸರ್ಕಾರಿ ಸ್ವಾಮ್ಯದ ಮೈಶುಗರ್ ಕಾರ್ಖಾನೆಯಿಂದ ಈ ಯಂತ್ರವನ್ನು ತೆಗೆದುಕೊಂಡು ಹೋಗಲು ಪಿಎಸ್‌ಎಸ್‌ಕೆ ಸಿಬ್ಬಂದಿ ಬಂದಿದ್ದಾರೆ. ಈ ಹಿಂದೆ ಇವರು ಮೈಶುಗರ್ ಕಾರ್ಖಾನೆಯ ಸಿಬ್ಬಂದಿ ಆಗಿದ್ದರು. ದನ್ನೂ ಓದಿ: ಮಾಜಿ ಪತ್ನಿಗೆ 5516 ಕೋಟಿ ಜೀವನಾಂಶ ನೀಡುವಂತೆ ದುಬೈ ದೊರೆಗೆ ಹೈಕೋರ್ಟ್ ಆದೇಶ

    ನಿನ್ನೆ ಕಾರ್ಖಾನೆಯ ಬಳಿ ಬಂದ ಇವರು ಯಾರಿಗೂ ತಿಳಿಸದೆ ಮೈಶುಗರ್ ಒಳಭಾಗಕ್ಕೆ ನುಗ್ಗಿದ್ದಾರೆ. ನಂತರ ಅಲ್ಲಿ ಟರ್ಬೈನ್ ಯಂತ್ರವನ್ನು ಹುಡುಕಿ ಸಾಗಣೆ ಮಾಡಲು ಯತ್ನಿಸಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕರವೇ ಜಿಲ್ಲಾಧ್ಯಕ್ಷ ಜಯರಾಂ ಅವರನ್ನು ತಡೆದು ಪ್ರಶ್ನೆ ಮಾಡಿದ್ದಾರೆ. ನಂತರ ಅಲ್ಲಿಂದ ಪಿಎಸ್‌ಎಸ್‌ಕೆ ಸಿಬ್ಬಂದಿ ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

  • ಮೈಶುಗರ್ ಖಾಸಗೀಕರಣದಲ್ಲಿ ಅಂಧ್ರದ ಕಂಪನಿಯೊಂದಿಗೆ ಬಿಎಸ್‍ವೈ ಕುಟುಂಬ ಶಾಮೀಲು: ಎಎಪಿ

    ಮೈಶುಗರ್ ಖಾಸಗೀಕರಣದಲ್ಲಿ ಅಂಧ್ರದ ಕಂಪನಿಯೊಂದಿಗೆ ಬಿಎಸ್‍ವೈ ಕುಟುಂಬ ಶಾಮೀಲು: ಎಎಪಿ

    – ಖಾಸಗೀಕರಣದ ನೆಪದಲ್ಲಿ ಕಪ್ಪು ಹಣ ಹೂಡಿಕೆಗೆ ಯತ್ನ

    ಬೆಂಗಳೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ನಾಡಿನ ರೈತರಿಗಾಗಿ ಆರಂಭಿಸಿದ ಮೈಶುಗರ್ ಸಂಸ್ಥೆಯನ್ನು ಖಾಸಗೀಕರಣ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡದಿದ್ದರೆ ಭಾರೀ ವಿರೋಧ ಎದುರಿಸಬೇಕಾಗುತ್ತದೆ ಎಂದು ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡರವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಕಾಳೇಗೌಡರವರು, ಮೈಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ನೀಡುವುದಿಲ್ಲ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುತ್ತೇವೆ ಎಂದು ವಿಧಾನಸಭಾ ಅಧಿವೇಶನದಲ್ಲಿ ಸಿ.ಎಂ.ಯಡಿಯೂರಪ್ಪನವರು ಹೇಳಿದ್ದರು. ಆದರೆ ಈಗ ಅವರೇ ಉಲ್ಟಾ ಹೊಡೆದಿದ್ದಾರೆ. ಯಡಿಯೂರಪ್ಪನವರ ಮಕ್ಕಳು, ಮೊಮ್ಮಕಳು ಆಂಧ್ರ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ್ದು, ಖಾಸಗೀಕರಣದ ನಂತರ ಭಾರೀ ಪ್ರಮಾಣದ ಕಪ್ಪುಹಣವನ್ನು ಇದರಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಮೈಶುಗರ್‍ಗಾಗಿ ಎಎಪಿಯು 2016ರಲ್ಲೇ ಬೃಹತ್ ರ್ಯಾಲಿ ನಡೆಸಿದ್ದು, ಈಗ ಅದರ ಖಾಸಗೀಕರಣವನ್ನು ನೋಡಿ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

    ಒಡೆಯರ್‍ರವರು ವಿಶೇಷ ಶ್ರಮವಹಿಸಿ 1933ರಲ್ಲಿ ಮೈಶುಗರ್ ಕಾರ್ಖಾನೆಯನ್ನು ಆರಂಭಿಸಿದರು. ಇದನ್ನು ರಾಜ್ಯದ ಮೊದಲ ಕಾರ್ಖಾನೆ ಎಂದು ಗೌರವದಿಂದ ಕಾಣಲಾಗುತ್ತದೆ. ಸ್ವಾತಂತ್ರ್ಯ ಬಂದು 73 ವರ್ಷವಾದರೂ ರಾಜ್ಯವನ್ನು ಆಳಿದ ಯಾವ ಮುಖ್ಯಮಂತ್ರಿಗೂ ಇಂತಹ ಮತ್ತೊಂದು ಕಾರ್ಖಾನೆಯನ್ನು ಆರಂಭಿಸಲು ಸಾಧ್ಯವಾಗಿಲ್ಲ. ನಾಡಿನ ರೈತರ ಬದುಕನ್ನು ಸುಧಾರಿಸುವುದರಲ್ಲಿ ಮೈಶುಗರ್ ಪಾತ್ರ ಮಹತ್ವದ್ದಾಗಿದೆ. ಕಾರ್ಖಾನೆಯ ನೌಕರರು ಹಾಗೂ ಕಬ್ಬು ಬೆಳೆಗಾರರು ಮೈಶುಗರ್ ಸಂಸ್ಥೆಯೊಂದಿಗೆ ಆರ್ಥಿಕ ಸಂಬಂಧ ಮಾತ್ರವಲ್ಲದೇ ಭಾವನಾತ್ಮಕ ಸಂಬಂಧವನ್ನೂ ಹೊಂದಿದ್ದಾರೆ ಎಂದು ಕಾಳೇಗೌಡರವರು ತಿಳಿಸಿದರು. ಇದನ್ನೂ ಓದಿ: ಮೈಶುಗರ್ ಆರಂಭಕ್ಕೆ ಆಸಕ್ತಿ ತೋರಿಸದ ಸರ್ಕಾರದ ವಿರುದ್ಧ ಆಕ್ರೋಶ

    ಪ್ರತಿದಿನವೂ 5 ಟನ್ ಸಕ್ಕರೆ ಅರೆಯುವ ಸಾಮರ್ಥ್ಯವನ್ನು ಮೈಶುಗರ್ ಕಾರ್ಖಾನೆ ಹೊಂದಿದೆ. 14 ಸಾವಿರಕ್ಕೂ ಹೆಚ್ಚು ರೈತರು ಇದರ ಷೇರುದಾರರಾಗಿದ್ದಾರೆ. ಈ ಹಿಂದೆ 18ಕ್ಕೂ ಹೆಚ್ಚು ವರ್ಷಗಳ ಕಾಲ ಮೈಶುಗರ್ ಕಂಪನಿಯು ಶೇ. 20ರಿಂದ ಶೇ. 30ರಷ್ಟು ಡಿವಿಡೆಂಡ್ ನೀಡಿದ ಕೀರ್ತಿ ಹೊಂದಿದೆ. 14ಕ್ಕೂ ಹೆಚ್ಚು ಫಾರ್ಮ್‍ಗಳು, ವಿದ್ಯಾಸಂಸ್ಥೆಗಳು ಮತ್ತು ರೈತ ಸಮುದಾಯ ಭವನಗಳು ಸೇರಿ 207 ಎಕರೆಗಿಂತ ಹೆಚ್ಚಿನ ಭೂಮಿಯು ಮೈಶುಗರ್ ಸಂಸ್ಥೆಯ ಬಳಿಯಲ್ಲಿದೆ. ಇಷ್ಟು ಸಮೃದ್ಧವಾದ ಇತಿಹಾಸ ಹೊಂದಿರುವ ಸಂಸ್ಥೆಯು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಸ್ಥಗಿತಗೊಂಡಿದೆ. ಸರ್ಕಾರವು ಬಂಡವಾಳ ಹೂಡಿ ಸಂಸ್ಥೆಯನ್ನು ಆಧುನೀಕರಣಗೊಳಿಸಬೇಕೇ ಹೊರತು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡಬಾರದು ಎಂದು ನಂಜಪ್ಪ ಕಾಳೇಗೌಡ ಹೇಳಿದರು. ಇದನ್ನೂ ಓದಿ: ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಬೆಂಬಲ

  • ಮೈಶುಗರ್ ಆರಂಭಕ್ಕೆ ಆಸಕ್ತಿ ತೋರಿಸದ ಸರ್ಕಾರದ ವಿರುದ್ಧ ಆಕ್ರೋಶ

    ಮೈಶುಗರ್ ಆರಂಭಕ್ಕೆ ಆಸಕ್ತಿ ತೋರಿಸದ ಸರ್ಕಾರದ ವಿರುದ್ಧ ಆಕ್ರೋಶ

    ಮಂಡ್ಯ: ರಾಜ್ಯ ಸರ್ಕಾರ ಅಭಿವೃದ್ಧಿ ಹೆಸರಲ್ಲಿ ಸಾವಿರಾರು ಕೋಟಿ ನೀಡಿ ವ್ಯರ್ಥ ಮಾಡುತ್ತಿದೆ. ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾದ ಮೈಶುಗರ್ ಕಾರ್ಖಾನೆ. ಕಾರ್ಖಾನೆ ಆರಂಭಿಸಲು ಕೇವಲ 14 ಕೋಟಿ ರೂಪಾಯಿ ಕೊಡಲು ಸಾಧ್ಯವಾಗಲಿಲ್ಲ ಎಂದು ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಸ್.ಎಂ.ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಂಡ್ಯದಲ್ಲಿ ಮಾತನಾಡಿದ ಅವರು, ಮೈಶುಗರ್ ಆಸ್ತಿ ಪಾರಂಪರಿಕವಾದುದು, ಅದನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಹೊಣೆ ಆಗಿದೆ. ಆದರೆ ಮೈಶುಗರ್ ಕಾರ್ಖಾನೆಯನ್ನು 40 ವರ್ಷಕ್ಕೆ ಗುತ್ತಿಗೆ ನೀಡಿ ಮಾರಾಟ ಮಾಡಲು ನಿಂತಿರುವ ಸರ್ಕಾರದ ಕ್ರಮ ಸರಿ ಇಲ್ಲ. ಬಳ್ಳಾರಿ ಜಿಂದಾಲ್ ಫ್ಯಾಕ್ಟರಿಯನ್ನು ಮಾರಾಟ ಮಾಡಲು ಹೋಗಿ ರೈತರು ಮತ್ತು ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿ ಮಾರಾಟದ ವಿಷಯ ಕೈಬಿಟ್ಟರು. ಆದರೆ ಮೈಶುಗರ್ ಮಾರಾಟ ಮಾಡಲು ಮುಂದಾದರೆ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಮೈಸೂರು ಸಕ್ಕರೆ ಕಾರ್ಖಾನೆಯ ವ್ಯಾಪ್ತಿಯ ಕಬ್ಬನ್ನು ಜಿಲ್ಲೆಯ ಇತರೆ ಕಾರ್ಖಾನೆಳಿಗೆ ಹಾಗೂ ಹೊರ ಜಿಲ್ಲೆಯ ಕಾರ್ಖಾನಗಳಿಗೆ ಸಾಗಣಿಕೆ ಮಾಡುತ್ತಿರುವುದರಿಂದ ಮಂಡ್ಯ ಸಕ್ಕರೆ ಕಂಪನಿಗೆ ತೆಗೆದುಕೊಳ್ಳುವಷ್ಟೇ ಸಾಗಾಣಿಕೆ ವೆಚ್ಚವನ್ನು ತೆಗೆದುಕೊಳ್ಳಬೇಕು. ಹೆಚ್ಚಿನ ಸಾಕಾಣಿಕೆ ವೆಚ್ಚವನ್ನು ಆಯಾಯ ಕಾರ್ಖಾನೆಯವರೇ ಭರಸಿಕೊಳ್ಳಬೇಕು. ಇದರ ಹೊರೆಯನ್ನು ಕಬ್ಬು ಬೆಳೆಗಾರರಿಗೆ ಹೊರೆಸಬಾರದು. ಇದಕ್ಕೆ ಸರ್ಕಾರ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

  • ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಬೆಂಬಲ

    ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಬೆಂಬಲ

    ಮಂಡ್ಯ: ರೈತರ ಪಾಲಿಗೆ ಜೀವ ನಾಡಿಯಾಗಿದ್ದ ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಯದುವೀರ್ ಫೇಸ್‍ಬುಕ್‍ನಲ್ಲಿ, ರೈತರು ಬೆಳೆದಿರುವ ಕಬ್ಬನ್ನು ಮಾರಾಟ ಮಾಡಲು ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ ಎಂದು ಕಾರ್ಖಾನೆ ಖಾಸಗೀಕರಣಕ್ಕೆ ಬೆಂಬಲ ನೀಡಿ ಪೋಸ್ಟ್ ಮಾಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಮಂಡ್ಯ ಜಿಲ್ಲೆಯು ಕಬ್ಬುಬೆಳೆ ಮತ್ತು ಸಕ್ಕರೆ ಉತ್ಪಾದನೆಯಲ್ಲಿ ಸಮಾನವಾಗಿದೆ. ಮೈಶುಗರ್ ಕಾರ್ಖಾನೆಯ ಪರಂಪರೆಯ ದೃಷ್ಟಿಯಿಂದ ಖಾಸಗೀಕರಣಕ್ಕೆ ನಿರಂತರ ಪ್ರತಿರೋಧ ವ್ಯಕ್ತವಾಗುತ್ತಿರುವುದು ಅರ್ಥವಾಗುವಂತಹದ್ದಾಗಿದೆ. ಆದರೆ ಪ್ರತಿರೋಧವು ಕಳವಳಕ್ಕೆ ಕಾರಣವಾಗಿದೆ. ಏಕೆಂದರೆ ಮಂಡ್ಯ ಜಿಲ್ಲೆಯ ರೈತರು ಬೆಳೆದಿರುವ ಕಬ್ಬನ್ನು ಮಾರಾಟ ಮಾಡಲು ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ ಎಂದಿದ್ದಾರೆ.

    “ಕಾರ್ಖಾನೆಯನ್ನು ನಡೆಸುವಲ್ಲಿ ಸರ್ಕಾರದ ವೈಫಲ್ಯ ಮತ್ತು ಸಂಪೂರ್ಣ ಖಾಸಗೀಕರಣದ ವಿರುದ್ಧ ಸಾರ್ವಜನಿಕರ ಭಾವನೆಯ ನಡುವೆ ನಮಗೆ ಇರುವ ಒಂದು ಆಯ್ಕೆಯೆಂದರೆ, ಕಾರ್ಯಾಚರಣೆ ಮತ್ತು ನಿರ್ವಹಣೆ (operations and maintenance) ವ್ಯವಸ್ಥೆಯಡಿಯಲ್ಲಿ ಸಕ್ಕರೆ ಕಾರ್ಖಾನೆಯನ್ನು ನಡೆಸುವುದು. ಈ ಮಧ್ಯಮ ವ್ಯವಸ್ಥೆಯು ಖಾಸಗೀಕರಣದ ವಿರುದ್ಧ ಸಾರ್ವಜನಿಕರಿಗಿರುವ ಭಾವನೆಯನ್ನು ತೃಪ್ತಿಪಡಿಸುವುದಲ್ಲದೆ ಕಾರ್ಖಾನೆಯು ಮತ್ತೊಮ್ಮೆ ಸಮೃದ್ಧಿಯಾಗಿ ಕಾರ್ಯನಿರ್ವಹಿಸಬಹುದಾಗಿದೆ. ಇದರಿಂದ ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರು ಯಾವುದೇ ಸಂಕಷ್ಟಗಳನ್ನು ಎದುರಿಸಬೇಕಾಗಿರುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

    ಮೈಶುಗರ್ ಕಾರ್ಖಾನೆಯನ್ನು ಮೈಸೂರಿನ ಮಹಾರಾಜರು ಸ್ಥಾಪಿಸಿರುವ ಸಕ್ಕರೆ ಕಾರ್ಖಾನೆಯಾಗಿದೆ. ಹೀಗಾಗಿ ರೈತರ ಕಷ್ಟಕ್ಕೆ ಯದುವೀರ್ ಸ್ಪಂದಿಸಿದ್ದು, ಕಾರ್ಖಾನೆ ಖಾಸಗೀಕರಣಕ್ಕೆ ಬೆಂಬಲ ಸೂಚಿಸಿದ್ದಾರೆ.