Tag: ಮೈಸೂರು ಪ್ರಕರಣ

  • ನುಡಿದಂತೆ ನಡೆದ ಜಗ್ಗೇಶ್- 1 ಲಕ್ಷ ರೂ. ಚೆಕ್ ಹಸ್ತಾಂತರ

    ನುಡಿದಂತೆ ನಡೆದ ಜಗ್ಗೇಶ್- 1 ಲಕ್ಷ ರೂ. ಚೆಕ್ ಹಸ್ತಾಂತರ

    ಬೆಂಗಳೂರು: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತಕ್ಷಣವೇ ಪೊಲೀಸರಿಗೆ ಮೆಚ್ಚುಗೆ ವ್ಯಕ್ತಪಡಿಸಿ ನಟ ಜಗ್ಗೇಶ್ ಬಹುಮಾನ ಘೋಷಿಸಿದ್ದರು. ಇದರ ಬೆನ್ನಲ್ಲೇ ಇದೀಗ ಪತ್ನಿ ಸಮೇತರಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಚೆಕ್ ನೀಡಿದ್ದಾರೆ.

    ಪತ್ನಿ ಸಮೇತರಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿದ ನಟ ಜಗ್ಗೇಶ್, ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ವೈಯಕ್ತಿಕವಾಗಿ 1 ಲಕ್ಷ ರೂ.ಗಳ ಚೆಕ್ ನೀಡಿದ್ದಾರೆ.

    ಪರಿಹಾರ ಘೋಷಿಸಿ ಟ್ವೀಟ್ ಮಾಡಿದ್ದ ಜಗ್ಗೇಶ್, ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಕಾಮ ಪಿಪಾಸುಗಳನ್ನು ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ವೈಯಕ್ತಿಕ ಅಭಿನಂದನೆಗಳು. ಐ ಆ್ಯಮ್ ಪ್ರೌಡ್ ಆಫ್ ಮೈ ಸ್ಟೇಟ್ ಪೊಲೀಸ್, ಪ್ರಕರಣ ಬೇಧಿಸಿದ ನಲ್ಮೆಯ ಪೋಲಿಸರಿಗೆ ನನ್ನ ಕಡೆಯಿಂದ 1 ಲಕ್ಷ ರೂ. ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೇ ಮುಂದುವರಿಯಲಿ, ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲಿಸ್ ಎಂದು ಬರೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಅತ್ಯಾಚಾರ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರಿಗೆ ಬಹುಮಾನ ಘೋಷಿಸಿದ ಜಗ್ಗೇಶ್

    ಪ್ರಕರಣದ ಬಗ್ಗೆ ಈ ಹಿಂದೆ ಸಹ ಆಕ್ರೋಶ ವ್ಯಕ್ತಪಡಿಸಿದ್ದ ಜಗ್ಗೇಶ್, ಎಂಥ ಕ್ರೂರಿಗಳು, ತಾಯಿ ಹೆಣ್ಣಲ್ಲವೆ? ಅಕ್ಕ, ತಂಗಿ ಹೆಣ್ಣಲ್ಲವೆ? ಮಡದಿ ಹೆಣ್ಣಲ್ಲವೆ? ಹೆಣ್ಣು ಗೌರವಿಸದವರು ರಕ್ಕಸರು, ಈ ಕೃತ್ಯ ಎಸಗಿದ ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು. ಈ ಕ್ರೂರ ಕೃತ್ಯಕ್ಕೆ ಖಂಡನೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದರು.

    ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ತನಿಖೆ ನಡೆಸಿ ಆರೋಪಿಗಳ ಹಡೆಮುರಿ ಕಟ್ಟಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

    ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಸ್ಥಳದಲ್ಲಿ ಸಿಕ್ಕ ಬಿಯರ್ ಬಾಟ್ಲಿ, ತಳವಾಡಿಯ ಬಸ್ ಟಿಕೆಟ್ ಮತ್ತು ಯುವಕನ ಹೇಳಿಕೆ ಆಧರಿಸಿ ತನಿಖೆ ನಡೆಸಿದ್ದರು. ಘಟನೆ ನಡೆಯುವ ಮೂರು ದಿನಗಳ ಮುಂಚೆ ಮತ್ತು ಒಂದು ದಿನದ ಹಿಂದೆ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಘಟನಾ ಸ್ಥಳಕ್ಕೆ ಬಂದಿರುವುದನ್ನು ಕಾಮಕರು ಫಾಲೋ ಮಾಡಿದ್ದರು. ಘಟನೆ ನಡೆದ ದಿನದಿಂದ ಕಾಮುಕರು ಎಸ್ಕೇಪ್ ಆಗಿದ್ದರು, ಪೊಲೀಸರು ತನಿಖೆ ಮುಂದುವರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

  • ಅತ್ಯಾಚಾರ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರಿಗೆ ಬಹುಮಾನ ಘೋಷಿಸಿದ ಜಗ್ಗೇಶ್

    ಅತ್ಯಾಚಾರ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರಿಗೆ ಬಹುಮಾನ ಘೋಷಿಸಿದ ಜಗ್ಗೇಶ್

    ಬೆಂಗಳೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪೊಲೀಸರು ಮಿಂಚಿನ ವೇಗದಲ್ಲಿ ಬೇಧಿಸಿದ್ದು, ಕೇವಲ 86 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಹೀಗಾಗಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಸರ್ಕಾರ ಪೊಲೀಸ್ ತಂಡಕ್ಕೆ 5 ಲಕ್ಷ ರೂ.ಬಹುಮಾನ ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ನಟ ಜಗ್ಗೇಶ್ ಸಹ ಬಹುಮಾನ ಘೋಷಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಕಾಮ ಪಿಪಾಸುಗಳನ್ನು ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ವೈಯಕ್ತಿಕ ಅಭಿನಂದನೆಗಳು. ಐ ಆ್ಯಮ್ ಪ್ರೌಡ್ ಆಫ್ ಮೈ ಸ್ಟೇಟ್ ಪೊಲೀಸ್, ಪ್ರಕರಣ ಬೇಧಿಸಿದ ನಲ್ಮೆಯ ಪೋಲಿಸರಿಗೆ ನನ್ನ ಕಡೆಯಿಂದ 1 ಲಕ್ಷ ರೂ. ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೇ ಮುಂದುವರಿಯಲಿ, ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲಿಸ್ ಎಂದು ಬರೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

    ಪ್ರಕರಣದ ಬಗ್ಗೆ ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದ ಜಗ್ಗೇಶ್, ಎಂಥ ಕ್ರೂರಿಗಳು, ತಾಯಿ ಹೆಣ್ಣಲ್ಲವೆ? ಅಕ್ಕ, ತಂಗಿ ಹೆಣ್ಣಲ್ಲವೆ? ಮಡದಿ ಹೆಣ್ಣಲ್ಲವೆ? ಹೆಣ್ಣು ಗೌರವಿಸದವರು ರಕ್ಕಸರು, ಈ ಕೃತ್ಯ ಎಸಗಿದ ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು. ಈ ಕ್ರೂರ ಕೃತ್ಯಕ್ಕೆ ಖಂಡನೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದರು.

    ಇದೀಗ ಪ್ರಕರಣ ಬೇಧಿಸಿದ ಪೊಲೀಸರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಬಹುಮಾನವನ್ನೂ ಘೋಷಿಸಿದ್ದಾರೆ. ಈಗಾಗಲೇ ಪೊಲೀಸರ ಕಾರ್ಯ ಮೆಚ್ಚಿ ಸರ್ಕಾರ ತನಿಖಾ ತಂಡಕ್ಕೆ 5 ಲಕ್ಷ ರೂ. ಬಹುಮಾನ ಘೊಷಿಸಿದೆ.

    ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ತನಿಖೆ ನಡೆಸಿ ಆರೋಪಿಗಳ ಹಡೆಮುರಿ ಕಟ್ಟಿದ್ದಾರೆ ಎಂದು ವರದಿಯಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಸ್ಥಳದಲ್ಲಿ ಸಿಕ್ಕ ಬಿಯರ್ ಬಾಟ್ಲಿ, ತಳವಾಡಿಯ ಬಸ್ ಟಿಕೆಟ್ ಮತ್ತು ಯುವಕನ ಹೇಳಿಕೆ ಆಧರಿಸಿ ತನಿಖೆ ನಡೆಸಿದ್ದರು. ಘಟನೆ ನಡೆಯುವ ಮೂರು ದಿನಗಳ ಮುಂಚೆ ಮತ್ತು ಒಂದು ದಿನದ ಹಿಂದೆ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಘಟನಾ ಸ್ಥಳಕ್ಕೆ ಬಂದಿರುವುದನ್ನು ಕಾಮಕರು ಫಾಲೋ ಮಾಡಿದ್ದರು. ಘಟನೆ ನಡೆದ ದಿನದಿಂದ ಕಾಮುಕರು ಎಸ್ಕೇಪ್ ಆಗಿದ್ದರು, ಪೊಲೀಸರು ತನಿಖೆ ಮುಂದುವರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

  • ಮೈಸೂರು ಪ್ರಕರಣದ ಬಗ್ಗೆ ಸುಳಿವು ಸಿಕ್ಕಿದ್ದರೂ, ಈ ಪರಿಸ್ಥಿತಿಯಲ್ಲಿ ಹೇಳಲು ಸಾಧ್ಯವಿಲ್ಲ: ಪ್ರವೀಣ್ ಸೂದ್

    ಮೈಸೂರು ಪ್ರಕರಣದ ಬಗ್ಗೆ ಸುಳಿವು ಸಿಕ್ಕಿದ್ದರೂ, ಈ ಪರಿಸ್ಥಿತಿಯಲ್ಲಿ ಹೇಳಲು ಸಾಧ್ಯವಿಲ್ಲ: ಪ್ರವೀಣ್ ಸೂದ್

    ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಸುಳಿವು ಸಿಕ್ಕರೂ ಸದ್ಯ ನಾವು ಅದನ್ನು ಹೇಳುವ ಪರಿಸ್ಥಿತಿಯಲ್ಲಿ ಇಲ್ಲ. ಆರೋಪಿಗಳು ಪತ್ತೆಯಾದ ತಕ್ಷಣ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನೀಡುತ್ತೇವೆ ಎಂದು ಡಿಜಿಪಿ ಪ್ರವೀಣ್ ಸೂದ್ ಭರವಸೆ ನೀಡಿದರು.

    ಈ ಕುರಿತು ನಗರದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ಪ್ರಕರಣದ ಕುರಿತು ಗಂಭೀರ ತನಿಖೆ ನಡೆಯುತ್ತಿದೆ. ಘಟನಾ ಸ್ಥಳದಿಂದ ಎಲ್ಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂತ್ರಸ್ತೆ ಮಾನಸಿಕ ಸ್ಥಿತಿ ಸರಿ ಇಲ್ಲ. ಹುಷಾರಾದ ಬಳಿಕ ಮಾಹಿತಿ ನೀಡುವುದಾಗಿ ಸಂತ್ರಸ್ತೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ

    ಆಗಸ್ಟ್ 24 ರಂದು ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸೂಕ್ಷ್ಮತೆಯಿಂದ ವರ್ತಿಸಬೇಕಿದೆ. ಸಂತ್ರಸ್ತೆ ಯಾರು, ಎಲ್ಲಿಂದ ಬಂದರು ಎಂಬ ವಿಚಾರ ಅಗತ್ಯವಿಲ್ಲ. ಆದರೆ ಈ ಘಟನೆ ಆಗಿರುವುದು ಬೇಸರ ತಂದಿದೆ. ಏನು ನಡೆದಿದೆ ಎಂಬುದನ್ನು ನಾವು ಬೇರೆ, ಬೇರೆ ರೀತಿಯಿಂದ ಪತ್ತೆ ಮಾಡಿದ್ದೇವೆ. ದರೋಡೆ ಪ್ರಕರಣದ ಕುರಿತು ಮಾಹಿತಿ ನೀಡಿದಂತೆ ಈ ಸಾಮೂಹಿಕ ಅತ್ಯಾಚಾರದ ಪ್ರಕರಣದ ಕುರಿತು ಆರೋಪಿಗಳು ಪತ್ತೆಯಾದ ತಕ್ಷಣ ಮಾಹಿತಿ ನೀಡುತ್ತೇವೆ ಎಂದರು.

    ಪ್ರಕರಣದಲ್ಲಿ ಆರೋಪಿಗಳು ಪತ್ತೆಯಾಗುತ್ತಾರೆ ಎಂಬ ವಿಶ್ವಾಸ ನಮಗಿದೆ, ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳು ದೆಹಲಿಯಲ್ಲಿ ಇದ್ದರೂ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಬೇಕೆಂದು ಸೂಚಿಸಿದ್ದಾರೆ. ಇದೊಂದು ದುರದೃಷ್ಟಕರ ಘಟನೆ ನಡೆದಿದೆ. ದರೋಡೆ ಪ್ರಕರಣದ ರೀತಿಯಲ್ಲೇ ಈ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುತ್ತೇವೆ. ಸುಳಿವು ಸಿಕ್ಕಿದ್ದರೂ ನಾವು ಈ ಪರಿಸ್ಥಿತಿಯಲ್ಲಿ ಹೇಳಲು ಸಾಧ್ಯವಿಲ್ಲ. ಸುಳಿವಿನ ಕುರಿತು ಮಾಹಿತಿ ನೀಡಿದರೆ, ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ

    ದರೋಡೆ ಪ್ರಕರಣದ ಆರೋಪಿಗಳು ಪತ್ತೆಯಾದ ತಕ್ಷಣ ಈ ಬಗ್ಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಈ ಪ್ರಕರಣದ ಆರೋಪಿಗಳನ್ನು ಪತ್ತೆಯಾದ ಬಳಿಕ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

    ದರೋಡೆ ಮಾಡಿ ಶೂಟೌಟ್ ಮಾಡಿದ್ದ ಪ್ರಕರಣ ನಡೆದಿತ್ತು. ಇದನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಶೂಟೌಟ್ ಪ್ರಕರಣ ಪತ್ತೆಗೆ ಐದು ಸ್ಕ್ವಾಡ್ ಮಾಡಲಾಗಿತ್ತು. ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿದ್ದೇವೆ. ಘಟನೆಯ ಪ್ಲಾನ್ ಮಾಡಿದವರನ್ನು ಸಹ ಬಂಧಿಸಿದ್ದೇವೆ. ಬೆಂಗಳೂರು, ಮುಂಬೈ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ರಾಜಸ್ಥಾನದಲ್ಲಿ ಇವರು ಅಡಗಿದ್ದರು. ಆರು ಜನರನ್ನು ಬಂಧಿಸಲಾಗಿದೆ. ಒಟ್ಟು 8 ಜನ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಪ್ಲಾನ್ ಮಾಡಿದ ಇಬ್ಬರನ್ನು ಬಂಧಿಸಿದ್ದೇವೆ. ಇದರಲ್ಲಿ ಒಬ್ಬರು ಮೈಸೂರಿನವರು, ಮತ್ತೊಬ್ಬರು ಬೆಂಗಳೂರಿನವರು ಎಂದು ಮಾಹಿತಿ ನೀಡಿದ್ದರು.

    ಪಕ್ಕಾ ಪ್ಲಾನ್ ಮಾಡಿ ಈ ಕೃತ್ಯವನ್ನು ನಡೆಸಲಾಗಿತ್ತು. ಘಟನೆ ಬಳಿಕ ಆರೂ ಜನ ಸಹ ದೇಶದ ವಿವಿಧ ಮೂಲೆಗಳಲ್ಲಿ ತಲೆಮರೆಸಿಕೊಂಡಿದ್ದರು. ಆದರೂ ಒಟ್ಟು 8 ಜನ ಆರೋಪಿಗಳ ಪೈಕಿ 6 ಜನರನ್ನು ಬಂಧಿಸಿದ್ದೇವೆ. ಕಳ್ಳತನವಾದ ಹಲವು ಸಾಮಗ್ರಿಗಳು ಸಿಕ್ಕಿವೆ, ಇನ್ನೂ ಕೆಲವು ಸಿಗಬೇಕಿದೆ ಎಂದರು. ಇದನ್ನೂ ಓದಿ: ಮಾಜಿ ಗಂಡನ ಹೇಳಿಕೆಯಿಂದ ಚೀನಾದ ಖ್ಯಾತ ನಟಿಗೆ ಬಿತ್ತು 340 ಕೋಟಿ ರೂ. ದಂಡ

    ಹೈ ಕೋರ್ಟ್ ಆದೇಶದನ್ವಯ ಹೆಚ್ಚು ಮಾಹಿತಿ ನೀಡಲು ಸಾಧ್ಯವಾಗುತ್ತಿಲ್ಲ. 8 ಜನರ ಪೈಕಿ ಈಗ 6 ಜನರನ್ನು ಬಂಧಿಸಿದ್ದೇವೆ. ಅಲ್ಲಿಂದ ವಿವಿಧ ರಾಜ್ಯಗಳಿಂದ ಆರೋಪಿಗಳನ್ನು ಕರೆತರಲು ಕೆಲ ಕಾನೂನುಗಳ ಪಾಲನೆ ಅಗತ್ಯವಾಗಿದೆ. ಸ್ಥಳೀಯ ಕೋರ್ಟ್ ಸೆಕ್ಯೂರ್ ಮಾಡಿದ ಬಳಿಕ ಅವರನ್ನು ಮೈಸೂರಿಗೆ ಕರೆ ತಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದರು.

    ಪ್ಲಾನ್ ಮಾಡಿದವರು ಮೊದಲು ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ಜ್ಯುವೆಲ್ಲರಿ ಅಂಗಡಿ ಇಟ್ಟುಕೊಂಡಿದ್ದರು. ಈ ಹಿಂದೆ ಮೋಸ ಮಾಡಿದ ಕೇಸ್‍ನಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ. ಇನ್ನೊಬ್ಬರು ಬೆಂಗಳೂರಿನವರು ಮತ್ತೊಂದು ಕೇಸ್‍ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಈ ಇಬ್ಬರು ಪ್ಲಾನ್ ಮಾಡಿದವರು ಬೇರೆ ರಾಜ್ಯದವನ್ನು ಕರೆಸಿಕೊಂಡು ಇಲ್ಲಿ ದರೋಡೆ ನಡೆಸಿದ್ದಾರೆ ಎಂದು ವಿವರಿಸಿದರು.

    ಅರಗ ಜ್ಞಾನೇಂದ್ರ ಮಾತನಾಡಿ, ಸಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿರುವ ಎರಡು ಘಟನೆಗಳು ದುರದೃಷ್ಟಕರ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಹಾಗೂ ಮುಖ್ಯಮಂತ್ರಿಗಳು ಪೊಲೀಸ್ ಅಧಿಕಾರಿಗಳಿಗೆ ಒತ್ತಡ ಹಾಕಿದ್ದೆವು. ಏನಾದರೂ ಮಾಡಿ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ, ಆ ಭಾಗದ ಜನರಿಗೆ ವಿಶ್ವಾಸ ತುಂಬಬೇಕೆಂದು ಹೇಳಿದ್ದೆವು. ಪ್ರವೀಣ್ ಸೂದ್ ಅವರು ತನಿಖೆ ನಡೆಸಿ ಕೆಲವರನ್ನು ಬಂಧಿಸಿದ್ದಾರೆ, ಅಲ್ಲದೆ ಕೆಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಸಂಪೂರ್ಣ ಸಾಕ್ಷ್ಯ ಲಭಿಸಿ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದರು. ಇದನ್ನೂ ಓದಿ: ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ?: ಶ್ರುತಿ

    ಇದೀಗ ಅತ್ಯಾಚಾರ ಪ್ರಕರಣವನ್ನು ಇದೇ ರೀತಿ ಸದ್ಯದಲ್ಲೇ ಇತ್ಯರ್ಥಪಡಿಸುತ್ತಾರೆ. ಪೊಲೀಸ್ ಅಧಿಕಾರಿಗಳ ಮೇಲೆ ಭರವಸೆ ಇಡೋಣ ಎಂದು ಹೇಳಿದರು.

  • ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ

    ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ

    ಹಾಸನ: ಹೊರಗಡೆ ನಾಯಿಗಳು ಇದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ? ಹಾಗಂತ ಮಕ್ಕಳನ್ನು ತಡೆಯುವುದೋ, ನಾಯಿಗಳನ್ನೋ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೈಸೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಖಂಡನೀಯವಾದದ್ದು ವೈಯಕ್ತಿಕವಾಗಿ ಪಕ್ಷದ ಪರವಾಗಿ ಉಗ್ರವಾಗಿ ಖಂಡಿಸುತ್ತೇನೆ. ನೈತಿಕತೆ ಇದ್ದರೆ ಗೃಹ ಸಚಿವರು ಪ್ರಕರಣ ಸಂಬಂಧ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯ ಹೊಣೆಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಹೊರಬೇಕಾಗುತ್ತದೆ. ಪೊಲೀಸ್ ಇಲಾಖೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ದೆಹಲಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ರೀತಿ ನಡೆದಿದೆ. ಈ ಘಟನೆ ರಾಜ್ಯಕ್ಕೆ ಹಾಗೂ ಮೈಸೂರಿಗೆ ದೊಡ್ಡ ಕಪ್ಪುಚುಕ್ಕೆ ಎಂದ ಅವರು ಪ್ರಕರಣ ಸಂಬಂಧ ಪೊಲೀಸರನ್ನು ಗೃಹಸಚಿವರು ಸಮರ್ಥಿಸಿಕೊಳ್ಳುತ್ತಿರುವುದು ಹೇಸಿಗೆ ತರುತ್ತಿದೆ ಅವರ ವೈಯಕ್ತಿಕ ಲಾಭಕ್ಕಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವಂತಹದ್ದು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಅರಗ ಜ್ಞಾನೇಂದ್ರ ನೆಗೆಟಿವ್ ಆಗಿ ಹೇಳಿಕೆ ಕೊಟ್ಟಿಲ್ಲ: ಪೂರ್ಣಿಮಾ ಶ್ರೀನಿವಾಸ್

    ಹೆಣ್ಣುಮಕ್ಕಳು ಸಂಜೆ 7 ಮೇಲೆ ಹೊರಬರಬಾರದು ಎಂದಾದರೆ, ಸಂಜೆ 6:00 ರ ಮೇಲೆ ಹೆಣ್ಣು ಮಕ್ಕಳು ಹೊರ ಬಾರದಂತೆ ಆದೇಶ ಹೊರಡಿಸಲಿ. ಈಗಾಗಲೇ ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಅಮಾನತ್ತಿನಲ್ಲಿ ಇಡಬೇಕಿತ್ತು ಘಟನೆ ನಡೆದ ಸ್ಥಳ ನಗರ ಪ್ರದೇಶದಿಂದ ಆರೇಳು ಕಿಲೋಮೀಟರ್ ದೂರದಲ್ಲಿದೆ. ಇಲ್ಲಿ ಪೊಲೀಸರ ಗಸ್ತು ಮಾಡುವುದು ಕಷ್ಟಕರವಲ್ಲ ಎಂದಿದ್ದಾರೆ.

    ಈ ಘಟನೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕುಡಿದು ತಿಂದು ಅನಾಗರಿಕವಾಗಿ ವರ್ತಿಸುತ್ತಿದ್ದಾರೆ. ಪೊಲೀಸರು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಬಿಜೆಪಿ ಸರ್ಕಾರ ಬಂದ ಮೇಲೆ ದಲಿತರು ಮಹಿಳೆಯರು ಮಕ್ಕಳು ಅಸಹಾಯಕರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದೆ. ನಿರ್ಭಯಾ ಪ್ರಕರಣದಲ್ಲಿ ದೆಹಲಿ ಸರ್ಕಾರ ಹೇಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ ಶಿಕ್ಷೆ ನೀಡಿತು. ಅದೇ ರೀತಿ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

  • ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳು ಯಾರೇ ಆಗಿರಲಿ ಕಠಿಣ ಕ್ರಮ: ಸಿಎಂ

    ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳು ಯಾರೇ ಆಗಿರಲಿ ಕಠಿಣ ಕ್ರಮ: ಸಿಎಂ

    ನವದೆಹಲಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳು ಯಾರೇ ಆಗಿರಲಿ, ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಸ್ಪಷ್ಟ ಆದೇಶ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ. ಪ್ರಕರಣದ ತನಿಖಾ ವರದಿಯನ್ನು ನೇರವಾಗಿ ನನಗೇ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರು, ಎಡಿಜಿಪಿ ಪ್ರತಾಪ್ ರೆಡ್ಡಿ ಹಾಗೂ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರ ಜೊತೆ ಮಾತನಾಡಿದ್ದೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪಿತಸ್ಥರಿಗೆ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ – ಕ್ಷಮೆಯಾಚಿಸಿದ ಗೃಹ ಸಚಿವ

    ಈ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ. ತನಿಖೆ ಚುರುಕಾಗಿ ನಡೆಯುತ್ತಿದೆ. ವಿರೋಧ ಪಕ್ಷದವರ ಟೀಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಗೃಹ ಸಚಿವರು ಸ್ಪಷ್ಟೀಕರಣ ನೀಡುತ್ತಾರೆ ಎಂದು ಅವರು ಹೇಳಿದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಿರಾತಕರು!

  • ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್

    ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್

    ಚಾಮರಾಜನಗರ: ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.

    ಮಲೆಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಬೇಕು. ಇಂತಹವನ್ನು ಯಾವುದೇ ಪರಿಸ್ಥಿತಿಯಲ್ಲಿ ಸಹಿಸಬಾರದು. ನ್ಯಾಯಂಗ ವ್ಯವಸ್ಥೆಯಲ್ಲಿ ಸಹ ಶೀಘ್ರ ನ್ಯಾಯ ನೀಡುವಂತಾಗಬೇಕು. ಹತ್ತಾರು ವರ್ಷಗಳ ಕಾಲ ಮುಂದೂಡಿದರೆ ಸಾಕ್ಷ್ಯ ನಾಶ, ಬೆದರಿಕೆ ಹಾಕುವ ಕೃತ್ಯ ನಡೆಸುತ್ತಾರೆ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಜಾಮೀನು ನೀಡಬಾರದು, ಕಾಲ ಮಿತಿಯಲ್ಲಿ ಪ್ರಕರಣ ಇತ್ಯರ್ಥಪಡಿಸಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಆಗ ಇಂತಹ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ತಿಳಿಸಿದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಿರಾತಕರು!

    ಆರೋಪಿಗಳು ಪರಾರಿಯಾಗಲು ಯತ್ನಿಸಿದರೆ ಎನ್‍ಕೌಂಟರ್ ಮಾಡಬೇಕು. ದುಷ್ಟ ಶಕ್ತಿಗಳಿಗೆ ಇಂತಹ ಶಿಕ್ಷೆಗಳು ಅನಿವಾರ್ಯ. ವಿಶೇಷ ಕೋರ್ಟ್ ರಚನೆ ಮಾಡಿ ಶೀಘ್ರವೇ ದುಷ್ಟರಿಗೆ ಕಠಿಣ ಶಿಕ್ಷೆಯಾಗಬೇಕು, 6 ತಿಂಗಳಲ್ಲಿ ನಿರ್ಣಯವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗಲಾಟೆ ಮಾಡಿ ತಲೆಗೆ ಕಲ್ಲಲ್ಲಿ ಹೊಡೆದು ಹುಡುಗಿಯನ್ನು ದೂರ ಕರೆದೊಯ್ದು ರೇಪ್ ಮಾಡಿದ್ರು: ಯುವಕ

    ನಡೆಯಬಾರದ ಘಟನೆ ನಡೆದಿದೆ. ಗೃಹ ಸಚಿವರು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಅವರು ಪ್ರಾಮಾಣಿಕರಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುಲ್ಲಿ, ಅತ್ಯಾಚಾರ, ದೌರ್ಜನ್ಯ ನಿಗ್ರಹ ಮಾಡಲು ಅವರು ಸಮರ್ಥರಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.