Tag: ಮೈಸೂರು ಮೃಗಾಲಯ

  • ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಮುಂದಾದ ಸರ್ಕಾರ

    ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಮುಂದಾದ ಸರ್ಕಾರ

    -ಮೈಸೂರು ಮೃಗಾಲಯ, ಬನ್ನೇರುಘಟ್ಟ ಝೂ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳ
    – ಸಫಾರಿ ದರದಲ್ಲಿ ಹೆಚ್ಚಳ ಇಲ್ಲ, ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಸೂಚನೆ

    ಮೈಸೂರು: ಜಿಲ್ಲೆಯ ಕಾರಂಜಿ ಕೆರೆಯಲ್ಲಿರುವ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ (Penguin Park) ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಜೊತೆಗೆ ಮೈಸೂರು ಮೃಗಾಲಯ (Mysuru Zoo), ಬನ್ನೇರುಘಟ್ಟ ಝೂ (Bannerghatta) ಪ್ರವೇಶ ಶುಲ್ಕವನ್ನು ಶೇ.20ರಷ್ಟು ಹೆಚ್ಚಿಸಲು ನಿರ್ಧರಿಸಿದೆ.

    ವಿಕಾಸಸೌಧದಲ್ಲಿಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಈಶ್ವರ ಬಿ ಖಂಡ್ರೆ ಅವರು, ಮತ್ಸ್ಯಾಗಾರದ ಕಟ್ಟಡದಲ್ಲಿ ಪೆಂಗ್ವಿನ್ ಧಾಮ ಮಾಡುವುದು ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.ಇದನ್ನೂ ಓದಿ: ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ

    ಮೃಗಾಲಯಗಳಲ್ಲಿ ಆಧುನಿಕ ಸೌಲಭ್ಯ ಕಲ್ಪಿಸಿದರೆ, ಹೊಸ ವನ್ಯಜೀವಿಗಳು ಸೇರ್ಪಡೆಯಾದರೆ ಪ್ರವಾಸಿಗರಿಗೆ ಹೆಚ್ಚಿನ ಆಕರ್ಷಣೆ ಇರುತ್ತದೆ. ಈ ನಿಟ್ಟಿನಲ್ಲಿ ವಿದೇಶಿ ಮೃಗಾಲಯಗಳೊಂದಿಗೆ ವಿನಿಮಯ ಕಾರ್ಯಕ್ರಮಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಮುಂದಿನ 5 ವರ್ಷಗಳಲ್ಲಿ ಆಯಾ ಮೃಗಾಲಯಗಳು ತಮ್ಮ ಖರ್ಚು, ವೆಚ್ಚವನ್ನು ತಾವೇ ನಿರ್ವಹಿಸಲು ಶಕ್ತವಾಗುವಂತೆ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುವಾಗುವಂತೆ ಯೋಜನೆ ರೂಪಿಸಲು ತಿಳಿಸಿದರು.

    ಗಣಿಬಾಧಿತ ಜಿಲ್ಲೆಗಳಲ್ಲಿರುವ ಮೃಗಾಲಯಗಳ ಅಭಿವೃದ್ಧಿಗೆ ಕೆಎಂಇಆರ್‌ಸಿ ನಿಧಿಯನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ದಾವಣಗೆರೆಯ ಮೃಗಾಲಯ ಅಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದರು. ಬೀದರ್‌ನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಪಕ್ಷಿಧಾಮ, ವಿದೇಶಿ ಹಕ್ಕಿ, ಪಕ್ಷಿಗಳ ವಿಶಿಷ್ಟವಾದ ಪಕ್ಷಿಲೋಕವನ್ನು ನಿರ್ಮಿಸಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ತಿಳಿಸಿದರು. ಜೊತೆಗೆ ಈ ಯೋಜನೆಗೆ 20 ಕೋಟಿ ರೂ.ಗಳನ್ನು ಹಂಚಿಕೆ ಮಾಡಲು ಸೂಚಿಸಿದರು.

    ಇನ್ನೂ ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟ ಮೃಗಾಲಯದಲ್ಲಿನ ಪಶು, ಪಕ್ಷಿಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶ ದರವನ್ನು ಶೇ.50ರಷ್ಟು ಹೆಚ್ಚಿಸಬೇಕೆಂಬ ಪ್ರಾಧಿಕಾರದ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದರು. ಏಕಾಏಕಿ ಶೇ.50ರಷ್ಟು ಹೆಚ್ಚಳ ಮಾಡುವುದು ಸರಿಯಲ್ಲ. ಶೇ.20ರಷ್ಟು ಮಾತ್ರವೇ ದರ ಹೆಚ್ಚಳ ಮಾಡಿ ಎಂದು ಅನುಮೋದನೆ ನೀಡಿದರು. ಸಫಾರಿ ದರ ಹೆಚ್ಚಿಸದಂತೆ ಸೂಚಿಸಿದರು. ವನ್ಯಜೀವಿ ವೀಕ್ಷಣೆಗೆ ದೇಶ ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಮೃಗಾಲಯದಲ್ಲಿ ಮತ್ತು ಜೈವಿಕ ಉದ್ಯಾನದಲ್ಲಿ ಶುದ್ಧ ಕುಡಿಯುವ ನೀರು, ವಿಶ್ರಾಂತಿ ಧಾಮ, ಪುರುಷ ಮತ್ತು ಮಹಿಳೆಯರ ಶೌಚಾಲಯದ ಜೊತೆಗೆ ಹೆಚ್ಚಿನ ಸೌಲಭ್ಯ, ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು. ಯಾವುದೇ ಕಾರಣಕ್ಕೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಮೃಗಾಲಯ ಮತ್ತು ಜೈವಿಕ ಉದ್ಯಾನ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಿದರು.

    ಸಭೆಯಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ.ರೇ,ಅಧಿಕಾರಿಗಳಾದ ಸುನೀಲ್ ಪಾಂವಾರ್, ಸೂರ್ಯಸೇನ್ ಮತ್ತಿತರರು ಪಾಲ್ಗೊಂಡಿದ್ದರು.ಇದನ್ನೂ ಓದಿ: ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ ಮಾಡುವ ಖಾತೆಗಳು ಕಂಡ್ರೆ ಸೈಬರ್‌ ಸೆಲ್‌ಗೆ ದೂರು ನೀಡಿ – ಸಿಎಂ

  • ಅನಾರೋಗ್ಯದಿಂದ ಬಳಲುತ್ತಿದ್ದ ಹುಲಿ ಸೆರೆ – ಚಿಕಿತ್ಸೆಗೆ ಮೈಸೂರಿನ ಮೃಗಾಲಯಕ್ಕೆ ರವಾನೆ

    ಅನಾರೋಗ್ಯದಿಂದ ಬಳಲುತ್ತಿದ್ದ ಹುಲಿ ಸೆರೆ – ಚಿಕಿತ್ಸೆಗೆ ಮೈಸೂರಿನ ಮೃಗಾಲಯಕ್ಕೆ ರವಾನೆ

    ಮಡಿಕೇರಿ: ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷದ ಗಂಡು ಹುಲಿಯೊಂದನ್ನು (Tiger) ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿದು ಚಿಕಿತ್ಸೆಗಾಗಿ ಮೈಸೂರಿನ ಮೃಗಾಲಯಕ್ಕೆ (Mysuru Zoo) ಕಳುಹಿಸಿದ್ದಾರೆ.

    ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದಲ್ಲಿ ಹುಲಿ ಮಂಗಳವಾರ ಸೆರೆಯಾಗಿದೆ. ಗ್ರಾಮದ ಅಸ್ತಾನ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕಳುಹಿಸಿದ್ದಾರೆ.

    ಸಾಕಾನೆಗಳಾದ ಪ್ರಶಾಂತ, ಸುಗ್ರೀವ, ಶ್ರೀರಾಮ, ಹರ್ಷ, ವಿಕ್ರಂ, ಈಶ್ವರ ಸಹಕಾರದೊಂದಿಗೆ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ವನ್ಯಜೀವಿ ವೈದ್ಯಾಧಿಕಾರಿ ಡಾ. ರಮೇಶ್ ಹಾಗೂ ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ರಂಜನ್ ಹುಲಿಗೆ ಅರಿವಳಿಕೆ ಚುಚ್ಚುಮದ್ದು ಪ್ರಯೋಗಿಸಿದ್ದರು. ಇದನ್ನೂ ಓದಿ: ಭಾರತದೊಂದಿಗೆ ಭಿನ್ನಾಭಿಪ್ರಾಯ ಮರೆತು ನಮ್ಮ ಲಸಿಕೆಯನ್ನು ತರಿಸಿಕೊಳ್ಳಿ: ಚೀನಾಗೆ ಪೂನಾವಾಲಾ ಸಲಹೆ

    ಕೆಲಕಾಲ ಓಡಿದ ಹುಲಿ, ಬಳಿಕ ಅಸ್ತಾನ ಗ್ರಾಮದ ಬಳಿ ನಿತ್ರಾಣಗೊಂಡು ಬಿದ್ದಿತ್ತು. ನಂತರ ಹುಲಿಯನ್ನು ಬಲೆ ಹಾಕಿ ಹಿಡಿಯಲಾಯಿತು. ಹುಲಿಯ ಹಲ್ಲು ಹಾಗೂ ಕಾಲಿನ ಭಾಗದಲ್ಲಿ ಗಾಯಗಳಾಗಿದ್ದು, ಆಹಾರ ಸೇವನೆ ಮಾಡದೇ ಇದ್ದಿದ್ದರಿಂದ ಸಾಕಷ್ಟು ಬಳಲಿತ್ತು. ವನ್ಯಜೀವಿ ವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಹಾಗೂ ಡಾ. ರಮೇಶ್ ಹುಲಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಆರೈಕೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕಳುಹಿಸಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಿದ ಖಾಕಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ

    ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ

    ಮೈಸೂರು: ನನಗೆ ಸಿಎಂ ಆಗುವ ಎಲ್ಲಾ ಅರ್ಹತೆಯಿದೆ. ಹಣೆ ಬರಹದಲ್ಲಿ ಬರೆದಿದ್ದರೆ ನಾನೂ ಸಿಎಂ ಆಗ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಮೈಸೂರಿನಲ್ಲಿಂದು ಪ್ರತ್ಯೇಕ ರಾಜ್ಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆ ಹೊರತು ಬೇರೆ ಉದ್ದೇಶ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್‌ವರೆಗೂ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ ದೆಹಲಿ ಸರ್ಕಾರ

    ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಸಿಎಂ ಆಗಿವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ ಆಗಬೇಕಾದರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ. ಆದರೆ ಸಿಎಂ ಸ್ಥಾನಕ್ಕಾಗಿ ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ಪ್ರತ್ಯೇಕ ರಾಜ್ಯವಾದರೂ ನಾವು ಕನ್ನಡಿಗರೇ, ಆಂಧ್ರ, ತೆಲಂಗಾಣ ರೀತಿಯಲ್ಲೇ ನಮ್ಮದೂ ಪ್ರತ್ಯೇಕವಾಗಲಿ ಎಂದು ಬಯಸಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಆಕೆಯ ಮೇಲೆ ಪದೇ-ಪದೇ ಅತ್ಯಾಚಾರ ಮಾಡಿದ್ರು, ನರಮಾಂಸ ತಿನ್ನುವಂತೆ ಒತ್ತಾಯಿಸಿದ್ರು!

    ನಮ್ಮ ಜನರ ದೃಷ್ಟಿಯಿಂದ ನಾನೇ ಹಿರಿಯನಾಗಿ ಧ್ವನಿ ಎತ್ತಿದ್ದೇನೆ. ಹೈಕಮಾಂಡ್ ಮಟ್ಟದಲ್ಲೂ ಹೊಸ ರಾಜ್ಯಗಳ ರಚನೆ ಬಗ್ಗೆ ಚಿಂತನೆ ನಡೆದಿದೆ ಎಂಬುದು ನನ್ನ ಅನಿಸಿಕೆ. ನಾನು ಮಾತನಾಡಿದರೆ ಆ ವಿಚಾರ ಕೇಂದ್ರದ ಮಟ್ಟಕ್ಕೂ ಹೋಗುತ್ತದೆ. ಆದ್ದರಿಂದಲೇ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

    bjP

    ಬೆಂಗಳೂರಿನಲ್ಲಿ ಲಾ ಅಂಡ್ ಆರ್ಡರ್ ಎಲ್ಲಿದೆ?
    ಇದೇ ವೇಳೆ ಸ್ವಪಕ್ಷೀಯ ಸರ್ಕಾರದ ಆಡಳಿತವನ್ನೇ ಪ್ರಶ್ನಿಸಿದ ಉಮೇಶ್ ಕತ್ತಿ, ದೊಡ್ಡ ರಾಜ್ಯಗಳಾದಾಗ ಇಂತಹ ಸಮಸ್ಯೆಗಳು ಇದ್ದೇ ಇರುತ್ತವೆ. ಇದೇ ಕಾರಣಕ್ಕೆ ನಾವು ರಾಜ್ಯ ಇಬ್ಬಾಗ ಆಗಬೇಕೆಂದು ಕೇಳುತ್ತಿದ್ದೇನೆ. ಜಲಾಶಯಗಳ ನೀರಿನ ಬಳಕೆ, ಗಡಿ ಸಮಸ್ಯೆಗಳ ನಿವಾರಣೆ ಇದರ ದೃಷ್ಟಿಯಿಂದ ಚಿಕ್ಕ ರಾಜ್ಯಗಳು ಆಗಬೇಕು. ಅತಿ ಹೆಚ್ಚು ಜನಸಂಖ್ಯೆ ಇದ್ದಾಗ ಯಾವ ಸಮಸ್ಯೆಗಳೂ ಬಗೆಹರಿಯುವುದಿಲ್ಲ ಎಂದು ಕುಟುಕಿದ್ದಾರೆ.

    ಪ್ರತಿ ಜಿಲ್ಲೆಗಳಿಗೂ ಮೃಗಾಲಯ?
    ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲೂ ಮೃಗಾಲಯಗಳನ್ನು ಸ್ಥಾಪಿಸುವ ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಎಲ್ಲ ಜಿಲ್ಲೆಗಳಲ್ಲೂ ಸೂಕ್ತ ಸ್ಥಳವನ್ನು ಗುರುತು ಮಾಡುತ್ತಿದ್ದೇವೆ. ರಾಜ್ಯದ ಈ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸುತ್ತೇವೆ. ಕೇಂದ್ರದ ಅನುಮತಿ ಬಂದ ಮೇಲೆಯೇ ಈ ಕಾರ್ಯ ಶುರುವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

    Live Tv

  • ಮೈಸೂರು ಮೃಗಾಲಯದ ನೀರು ಕುದುರೆ ಶಿವಮೊಗ್ಗಕ್ಕೆ ಶಿಫ್ಟ್‌!

    ಮೈಸೂರು ಮೃಗಾಲಯದ ನೀರು ಕುದುರೆ ಶಿವಮೊಗ್ಗಕ್ಕೆ ಶಿಫ್ಟ್‌!

    ಮೈಸೂರು: ಶ್ರೀಚಾಮರಾಜೇಂದ್ರ ಒಡೆಯರ್‌ ಮೃಗಾಲಯದಿಂದ ಶಿವಮೊಗ್ಗ ಮೃಗಾಲಯಕ್ಕೆ ನೀರು ಕುದುರೆಯನ್ನು ರವಾನಿಸಲಾಯಿತು.

    ದಿವಾ ಎಂಬ ಹೆಸರಿನ ನೀರು ಕುದುರೆಯನ್ನು ಮೈಸೂರು ಮೃಗಾಲಯದಿಂದ ರವಾನೆ ಮಾಡಲಾಯಿತು. ಶಿವಮೊಗ್ಗ ಸಫಾರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಣಿ ರವಾನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪುಗೆ ಇಸಿಜಿ ಟೆಸ್ಟ್‌ನಲ್ಲಿ ಹಾರ್ಟ್ ಅಟ್ಯಾಕ್ ಸುಳಿವು: ಡಾ. ರಮಣ ರಾವ್

    ಮೃಗಾಲಯ ಸಿಬ್ಬಂದಿಯು ಟ್ರಕ್ ಮೂಲಕ ಯಶಸ್ವಿಯಾಗಿ ಪ್ರಾಣಿ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಪತಿ, ಪತ್ನಿ ನಡುವೆ ಒಡವೆ ವಿಚಾರಕ್ಕೆ ಕಿರಿಕ್ – ಕೊಲೆಯಲ್ಲಿ ಅಂತ್ಯ

  • ವಿದೇಶಿ ಒರಾಂಗೂಟಾನ್‍ಗಳಿಗೆ ಮೈಸೂರು ZOOನಲ್ಲಿ 1.2 ಕೋಟಿ ರೂ. ವೆಚ್ಚದ ಹೊಸ ಮನೆ!

    ವಿದೇಶಿ ಒರಾಂಗೂಟಾನ್‍ಗಳಿಗೆ ಮೈಸೂರು ZOOನಲ್ಲಿ 1.2 ಕೋಟಿ ರೂ. ವೆಚ್ಚದ ಹೊಸ ಮನೆ!

    ಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿರುವ ವಿದೇಶಿ ಒರಾಂಗೂಟಾನ್‍ಗಳಿಗೆ ಹೊಸದಾಗಿ ಮನೆಯನ್ನು ನಿರ್ಮಿಸಲಾಗಿದೆ.

    ORANGUTAN MYSORE ZOO

    ಬ್ಯಾಂಕ್ ನೋಟ್ ಪೇಪರ್ ಇಂಡಿಯಾ ವತಿಯಿಂದ ಸಿಎಸ್‍ಆರ್ ನಿಧಿಯಡಿ 70 ಲಕ್ಷ ರೂ. ನೆರವು ನೀಡಲಾಗಿತ್ತು. ಸುಮಾರು 1.2 ಕೋಟಿ ರೂ. ವೆಚ್ಚದಲ್ಲಿ ಮನೆ ನಿರ್ಮಿಸಲಾಗಿದೆ. ಇದನ್ನೂ ಓದಿ: ಕೋತಿಗಳಿಗೆ ಬಾಳೆಹಣ್ಣು ತಿನ್ನಿಸಿದ ಸಾರಿಗೆ ಸಚಿವ ಶ್ರೀರಾಮುಲು

    ಬ್ಯಾಂಕ್ ನೋಟ್ ಪೇಪರ್ ಇಂಡಿಯಾದ ಅಧ್ಯಕ್ಷೆ ತೃಪ್ತಿ ಪಾತ್ರ ಘೋಷ್ ಅವರು ಈ ನೂತನ ಮನೆಯನ್ನು ಉದ್ಘಾಟಿಸಿದರು.

    ORANGUTAN

    ಮಲೇಶಿಯಾ, ಸಿಂಗಾಪುರ್‍ನಿಂದ ತಂದಿರುವ 2 ಜೊತೆ ಒರಾಂಗೂಟಾನ್‍ಗಳಿಗೆ ಮನೆ ನಿರ್ಮಿಸಿಕೊಡಲಾಗಿದೆ. ಮೃಗಾಲಯದಲ್ಲಿ ಅವುಗಳಿಗೆ ಪೂರಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಇದನ್ನೂ ಓದಿ: 75 ಕೆಜಿಯ ಮೀನು 36 ಲಕ್ಷ ರೂಪಾಯಿಗೆ ಮಾರಾಟ

    ಮನೆ ಉದ್ಘಾಟನೆ ವೇಳೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಮೃಗಾಲಯ ನಿರ್ದೇಶಕ ಅಜಿತ್ ಎಂ.ಕುಲಕರ್ಣಿ ಉಪಸ್ಥಿತರಿದ್ದರು.

  • ಹುಲಿ ಹುಡುಕೋ ಕಾರ್ಯಾಚರಣೆ ವೇಳೆ ಸಿಕ್ತು ಕಾಡುಕೋಣ..!

    ಹುಲಿ ಹುಡುಕೋ ಕಾರ್ಯಾಚರಣೆ ವೇಳೆ ಸಿಕ್ತು ಕಾಡುಕೋಣ..!

    ಚಿಕ್ಕೋಡಿ: ಹುಲಿ ಬಂದಿದೆ ಎಂಬ ಶಂಕೆಯಿಂದ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳಿಗೆ ಕಾಡುಕೋಣ ಸಿಕ್ಕಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕಾಡುಕೋಣವನ್ನು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

    ಗ್ರಾಮದಲ್ಲಿ ಇತ್ತೀಚಿಗೆ ಹುಲಿ ಬಂದಿದೆಯೆಂದು ಶಂಕೆ ವ್ಯಕ್ತವಾಗಿದ್ದು, ಹುಲಿ ಹುಡುಕಾಟದಲ್ಲಿ ಕಾಡುಕೋಣ ಪತ್ತೆಯಾಗಿದೆ. ಗ್ರಾಮದಲ್ಲಿ ಕಾಡುಕೋಣ ಕಾಣಿಸಿಕೊಂಡು ಜನರಲ್ಲಿ ಭಯ ಉಂಟು ಮಾಡಿತ್ತು. ಕೊನೆಗೆ ಹರಸಾಹಸಪಟ್ಟು ಗ್ರಾಮಸ್ಥರು ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಕಾಡುಕೋಣವನ್ನು ಸೆರೆ ಹಿಡಿದಿದ್ದಾರೆ. ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶ ಪತ್ರ

    ಬೃಹದಾಕಾರದ ಕಾಡುಕೋಣ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು. ಹಲವಾರು ಬೆಳೆಗಳನ್ನು ನಾಶ ಪಡಿಸುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನ ಮೃಗಾಲಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಬೆಳಗಾವಿ ಅರಣ್ಯ ಇಲಾಖೆ ಅರಣ್ಯಾಧಿಕಾರಿ ಅಂಥೋನಿ ಮರಿಯಪ್ಪ ಮತ್ತು ಪ್ರಶಾಂತ್ ಗಾಣಿಗೇರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಸತತ ನಾಲ್ಕು ದಿನ ಕಾರ್ಯಾಚರಣೆ ನಡೆಸಿ ಕಾಡುಕೋಣವನ್ನು ಹಿಡಿದಿದ್ದಾರೆ. ಇದನ್ನೂ ಓದಿ: ಸರಕು, ಸೇವೆಗಳ ಬೇಡಿಕೆ ಹೆಚ್ಚಿಸಲು ಗುಣಮಟ್ಟದ ರಫ್ತು ಅವಶ್ಯಕ – ವಸಂತ ಲದ್ವಾ

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಥಣಿ ಅರಣ್ಯ ಇಲಾಖೆ ಅಧಿಕಾರಿ ಪ್ರಶಾಂತ್ ಗಾಣಿಗೇರ್, ಈ ಭಾಗದಲ್ಲಿ ಕಾಡುಕೋಣ ಕಾಣಿಸಿಕೊಳ್ಳುವುದು ಅಪರೂಪ. ಸುತ್ತಮುತ್ತ ನೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾಡುಕೋಣ ಕಾಣಿಸುವುದಿಲ್ಲ. ಖಾನಾಪುರ ಕಾಡಿನಲ್ಲಿ ಕಾಡು ಕೋಣಗಳಿವೆ. ಆದರೂ ಅಥಣಿ ತಾಲೂಕಿನ ಬಯಲುಸೀಮೆಯಲ್ಲಿ ಕಾಡುಕೋಣ ಬಂದಿರೋದು ಅಪರೂಪದ ಘಟನೆಯೆಂದು ಮಾಹಿತಿ ಹಂಚಿಕೊಂಡರು. ಸದ್ಯ ಕಾಡುಕೋಣ ಆರೋಗ್ಯದಿಂದಿದ್ದು, ಮೈಸೂರು ಮೃಗಾಲಯಕ್ಕೆ ರವಾನೆ ಮಾಡಲಾಗಿದೆ ಎಂದು ತಿಳಿಸಿದರು.

  • 75 ಸಾವಿರ ನೀಡಿ ಆನೆ ದತ್ತು ಪಡೆದ ಹ್ಯಾಟ್ರಿಕ್ ಹೀರೋ

    75 ಸಾವಿರ ನೀಡಿ ಆನೆ ದತ್ತು ಪಡೆದ ಹ್ಯಾಟ್ರಿಕ್ ಹೀರೋ

    ಮೈಸೂರು: ಸ್ಯಾಂಡಲ್‍ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅರಮನೆ ನಗರಿಯಲ್ಲಿ ಆನೆಯೊಂದನ್ನು ದತ್ತು ಪಡೆದಿದ್ದಾರೆ.

    ಹೌದು. ಶಿವಣ್ಣ ಅವರು ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ‘ಪಾರ್ವತಿ’ ಎಂಬ ಹೆಸರಿನ ಆನೆಯನ್ನು 75 ಸಾವಿರ ನೀಡಿ ದತ್ತು ಪಡೆದುಕೊಂಡಿದ್ದಾರೆ. ಒಂದು ವರ್ಷದ ಅವಧಿಗೆ ಅಂದರೆ ಆಗಸ್ಟ್ 19 2020 ರಿಂದ 2021 ಆಗಸ್ಟ್ 19ರವರೆಗೆ ಈ ಆನೆಯನ್ನು ನಟ ದತ್ತು ಸ್ವೀಕರಿಸಿದ್ದಾರೆ.

    ಈ ಮೊದಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೃಗಾಲಯದಿಂದ ಸಾಕಷ್ಟು ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ. ನಟ ಚಿಕ್ಕಣ್ಣ, ದೇವರಾಜ್,ಸೃಜನ್ ಲೋಕೇಶ್ ಸೇರಿ ಕ್ರಿಕೆಟರ್ಸ್ ಹಾಗೂ ಹಲವು ರಾಜಕಾರಣಿಗಳೂ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ.

    ಸದ್ಯ ಶಿವಣ್ಣ ಅವರು ಲಾಕ್‍ಡೌನ್ ನಂತರ ಶೂಟಿಂಗ್ ಆರಂಭಿಸಿದ್ದಾರೆ. ಭಜರಂಗಿ 2 ಚಿತ್ರೀಕರಣಕ್ಕೆ ಸೆಂಚುರಿ ಸ್ಟಾರ್ ಬಣ್ಣ ಹಚ್ಚಿದ್ದಾರೆ. ಟೀಂ ಕರ್ನಾಟಕದಲ್ಲಿ ಶೂಟಿಂಗ್ ಶುರು ಮಾಡಿದೆ. ಹರ್ಷ ಸಾರಥ್ಯದಲ್ಲಿ ಜಯಣ್ಣ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಚಿತ್ರೀಕರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಪಾಲಿಸಿ ಚಾಲನೆ ಕೊಡಲಾಗಿದೆ.

  • ಮೈಸೂರು ಮೃಗಾಲಯದಲ್ಲಿ ದುರಂತ – ಎತ್ತಿ ಕೆಳಕ್ಕೆ ಹಾಕಿ ತುಳಿದು ಮಾವುತನನ್ನೇ ಕೊಂದ ಆನೆ

    ಮೈಸೂರು ಮೃಗಾಲಯದಲ್ಲಿ ದುರಂತ – ಎತ್ತಿ ಕೆಳಕ್ಕೆ ಹಾಕಿ ತುಳಿದು ಮಾವುತನನ್ನೇ ಕೊಂದ ಆನೆ

    ಮೈಸೂರು: ವಿಶ್ವವಿಖ್ಯಾತ ಚಾಮರಾಜೇಂದ್ರ ಮೃಗಾಲಯದಲ್ಲಿ ದುರಂತ ಸಂಭವಿಸಿದ್ದು, ಆನೆಯೊಂದು ತನ್ನ ಮಾವುತನನ್ನೇ ತುಳಿದು ಸಾಯಿಸಿರುವ ಘಟನೆ ಶುಕ್ರವಾರ ನಡೆದಿದೆ.

    ಹರೀಶ್ (38) ಮೃತಪಟ್ಟ ಮಾವುತ. ಅಭಿ ಹೆಸರಿನ ಆನೆಗೆ ಮಧ್ಯಾಹ್ನ ಹರೀಶ್‌ ಅವರು ಹುಲ್ಲು ಹಾಕಿದ್ದಾರೆ. ಮೈದಡವಿ ಹುಲ್ಲು ಹಾಕುವ ಸಂದರ್ಭದಲ್ಲಿ ಹರೀಶ್‌ ಅವರನ್ನು ಸೊಂಡಿಲಿನಿಂದ ಎತ್ತಿ ಕೆಳಕ್ಕೆ ಹಾಕಿ ತುಳಿದಿದೆ.

    ಈ ವಿಚಾರ ತಿಳಿದ ಕೂಡಲೇ ಅಲ್ಲಿದ್ದ ಸಿಬ್ಬಂದಿ ಹರೀಶ್‌ ಅವರನ್ನು ಆನೆಯಿಂದ ಬಿಡಿಸಿಕೊಂಡು ಕೂಡಲೇ ಗೋಪಾಲಗೌಡ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹರೀಶ್‌ ಮೃತಪಟ್ಟಿದ್ದಾರೆ.

    ಹರೀಶ್​ ಮೈಸೂರಿನ ಲಲಿತಾದ್ರಿಪುರ ಗ್ರಾಮದ ನಿವಾಸಿಯಾಗಿದ್ದು, ಗುತ್ತಿಗೆ ನೌಕರನಾಗಿ ಮೃಗಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಐದು ದಿನಗಳಿಂದ ರಜೆ ಮೇಲೆ ತೆರಳಿದ್ದ ಹರೀಶ್ ಶುಕ್ರವಾರ ಕೆಲಸಕ್ಕೆ ಹಾಜರಾಗಿದ್ದರು. ಘಟನೆ ಸಂಬಂಧ ನಜರ್‌ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮೈಸೂರು ಮೃಗಾಲಯದಲ್ಲಿ ಕೋಬ್ರಾ, ಹುಲಿ ಸಾವು

    ಮೈಸೂರು ಮೃಗಾಲಯದಲ್ಲಿ ಕೋಬ್ರಾ, ಹುಲಿ ಸಾವು

    ಮೈಸೂರು: ಶ್ರೀ ಚಾಮರಾಜೇಂದ್ರ ಝೂಲಾಜಿಕಲ್ ಗಾರ್ಡನ್(ಮೈಸೂರು ಮೃಗಾಲಯ)ನಲ್ಲಿ ಹುಲಿ ಹಾಗೂ ಕಿಂಗ್ ಕೋಬ್ರಾ ಸಾವನ್ನಪ್ಪಿವೆ. ಕಿಂಗ್ ಕೋಬ್ರಾ ಲಿವರ್ ಸಮಸ್ಯೆಯಿಂದ ಮೃತಪಟ್ಟಿದ್ದರೆ, ಹುಲಿ ಹೃದಯಾಘಾತದಿಂದ ಸಾವನ್ನಪ್ಪಿದೆ ಎನ್ನಲಾಗಿದೆ.

    ಈ ಬಗ್ಗೆ ಮೈಸೂರು ಮೃಗಾಲಯ ನಿರ್ದೇಶಕ ಅಜಿತ್ ಕುಲಕರ್ಣಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಪ್ರಾಣಿಗಳ ವಿನಿಮಯ ಯೋಜನೆಯಡಿ ಮಂಗಳೂರಿನ ಪಿಲಿಕುಳ ಮೃಗಾಲಯದಿಂದ 2 ಹುಲಿ, 2 ಹಾವುಗಳನ್ನ ಮೈಸೂರು ಮೃಗಾಲಯಕ್ಕೆ ತರಿಸಲಾಗಿತ್ತು. ಆದರೆ ಪ್ರಾಣಿಗಳನ್ನು ಆರೋಗ್ಯ ವಿಚಾರಿಸಲು ಪ್ರತ್ಯೇಕವಾಗಿ ಇಡಲಾಗಿತ್ತು. ಫೆ. 29ರ ಬೆಳಗ್ಗೆ ಪೈಥಾನ್ ಹೆಸರಿನ ಕಿಂಗ್ ಕೋಬ್ರಾ ಸಾವನ್ನಪ್ಪಿತ್ತು. ನಂತರ ಅದರ ಮೃತದೇಹವನ್ನ ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಹಾವು ಲಿವರ್ ಸಮಸ್ಯೆಯಿಂದ ಸಾವನ್ನಪ್ಪಿರುವುದು ಬೆಳಕಿಗೆ ಬಂದಿತ್ತು.

    ಭಾನುವಾರ ಬೆಳಗ್ಗೆ ಒಂದು ಹುಲಿ ಸಹ ಮೃಗಾಲಯದಲ್ಲಿ ಮೃತಪಟ್ಟಿದೆ. ಅದರ ಮೃತದೇಹವನ್ನ ಸಹ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದು ಹೃದಯಾಘಾತದಿಂದ ಸಾವನ್ನಪ್ಪಿರುವುದು ತಿಳಿದು ಬಂದಿದೆ. ಪರೀಕ್ಷೆಗೆ ಒಳಪಡಿಸಿದ ತಕ್ಷಣವೇ ವೈದ್ಯರು ಈ ಬಗ್ಗೆ ತಿಳಿಸಿದ್ದಾರೆ.

    ಪ್ರಾಣಿಗಳು ಮೃತಪಡಲು ಆರೋಗ್ಯ ಸಮಸ್ಯೆಯೇ ಕಾರಣವಾ? ಅಥವಾ ಬೇರೆ ವೈರಸ್ ಇದೆಯಾ? ಬ್ಯಾಕ್ಟೀರಿಯಾ ಇದೇಯ ಎಂಬುದನ್ನ ತಿಳಿಯಬೇಕಿದೆ. ಅದಕ್ಕಾಗಿ ಪ್ರಾಣಿಗಳ ಸ್ಯಾಂಪಲ್ ಲ್ಯಾಬ್ ಗೆ ಕಳುಹಿಸಿದ್ದೇವೆ. ರಿಪೋರ್ಟ್ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಸದ್ಯ ಮೃಗಾಲಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಮೃಗಾಲಯ ನಿರ್ದೇಶಕರು ಹೇಳಿದ್ದಾರೆ.

  • ಆದಾಯದಲ್ಲಿ ಏರಿಕೆ ಕಂಡ ಮೈಸೂರು ಮೃಗಾಲಯ

    ಆದಾಯದಲ್ಲಿ ಏರಿಕೆ ಕಂಡ ಮೈಸೂರು ಮೃಗಾಲಯ

    ಮೈಸೂರು: ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುವುದರ ಜೊತೆ ಮೈಸೂರು ಮೃಗಾಲಯದ ಆದಾಯ ಕಳೆದ ಹಣಕಾಸು ವರ್ಷದಲ್ಲಿ ಏರಿಕೆ ಕಂಡಿದೆ.

    ಮೈಸೂರು ಮೃಗಾಲಯದ ಪ್ರವೇಶದ್ವಾರ ಶುಲ್ಕವನ್ನು ಈ ಬಾರಿ ಏರಿಸಲಾಗಿದೆ. ಅಷ್ಟೇ ಅಲ್ಲದೇ ಪ್ರಾಣಿ ದತ್ತು ಯೋಜನೆಯಲ್ಲಿ ಭಾರೀ ಏರಿಕೆ ಕಂಡಿದೆ. ಎಲ್ಲದರ ಪರಿಣಾಮ ಮೃಗಾಲಯದ ಆದಾಯದಲ್ಲಿ ಏರಿಕೆ ಕಂಡಿದೆ.

    2016-17 ಸಾಲಿನ ಹಣಕಾಸು ವರ್ಷದಲ್ಲಿ ಮೃಗಾಲಯ 19 ಕೋಟಿ ರೂ. ಆದಾಯ ಗಳಿಸಿತ್ತು. 2017-18 ಸಾಲಿನ ಹಣಕಾಸು ವರ್ಷದಲ್ಲಿ 23.10 ಕೋಟಿ ರೂ. ಆದಾಯ ಗಳಿಸಿದೆ. ಒಂದೇ ವರ್ಷದಲ್ಲಿ ಒಟ್ಟು 3 ಕೋಟಿ ರೂ. ಆದಾಯದಲ್ಲಿ ಏರಿಕೆ ಕಂಡಿದೆ.

    ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ 1 ಲಕ್ಷದ 30 ಸಾವಿರ ಮಂದಿ ಮೃಗಾಲಯಕ್ಕೆ ಭೇಟಿ ನೀಡಿದ್ದರೆ ಈ ವರ್ಷ ಮಾರ್ಚ್ ತಿಂಗಳಲ್ಲಿ 1 ಲಕ್ಷದ 60 ಸಾವಿರ ಮಂದಿ ಭೇಟಿ ನೀಡಿದ್ದಾರೆ. ಮೇ ತಿಂಗಳ ಪ್ರವಾಸಿಗರ ಸಂಖ್ಯೆಯಲ್ಲೂ ಕಳೆದ ವರ್ಷಕ್ಕಿಂತ 60 ಸಾವಿರ ಹೆಚ್ಚಳವಾಗಿದೆ. 2017-18 ಸಾಲಿನಲ್ಲಿ 35 ಲಕ್ಷ ಮಂದಿ ಪ್ರವಾಸಿಗರು ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ.

    ಮೃಗಾಲಯಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಸಿಗದ ಕಾರಣ 17 ವರ್ಷಗಳಲ್ಲಿ 4,041 ಪ್ರಾಣಿಗಳನ್ನು 3,149 ವ್ಯಕ್ತಿಗಳು ದತ್ತು ಸ್ವೀಕರಿಸಿದ್ದಾರೆ. 17 ವರ್ಷಗಳ ಹಿಂದೆ ಆರ್ಥಿಕ ನಷ್ಟದಿಂದಾಗಿ ಮೈಸೂರು ಮೃಗಾಲಯ ಮುಚ್ಚುವ ಹಂತ ತಲುಪಿತ್ತು. ಹೀಗಾಗಿ, ಅಂದಿನ ಕಾರ್ಯನಿರ್ವಾಹಕ ನಿರ್ದೇಶಕ ಕುಮಾರ ಪುಷ್ಕರ್ ಅವರು ಪ್ರಾಣಿಗಳ ದತ್ತು ಯೋಜನೆ ಆರಂಭಿಸಿದ್ದರು. ಈ ಯೋಜನೆ ಅಸ್ತಿತ್ವಕ್ಕೆ ಬಂದ 2001-02ನೇ ಸಾಲಿನಲ್ಲಿ 40 ಸಾವಿರ ಲಭಿಸಿತ್ತು. ಅಲ್ಲಿಂದ ದತ್ತು ಪಡೆಯುವವರ ಸಂಖ್ಯೆ ಹಾಗೂ ಆದಾಯ ಹೆಚ್ಚಾಗುತ್ತಿದೆ. ಒಂದು ಹುಲಿ ನಿರ್ವಹಣೆಗೆ ವರ್ಷಕ್ಕೆ 4 ಲಕ್ಷ ರೂ. ಖರ್ಚಾಗುತ್ತದೆ.