Tag: ಮೈಸೂರು ರಂಗಾಯಣ

  • ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ

    ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ

    ಮೈಸೂರು: ಚುನಾವಣೆಯಲ್ಲಿ ಕಾಂಗ್ರೆಸ್ (Congress) ಸ್ಪಷ್ಟ ಬಹುಮತ ಸಾಧಿಸಿದ ಬೆನ್ನಲ್ಲೇ ಮೈಸೂರಿನ ರಂಗಾಯಣ (Mysuru Rangayana) ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ (Addanda C Cariappa) ರಾಜೀನಾಮೆ (Resignation) ನೀಡಿದ್ದಾರೆ.

    ಅಡ್ಡಂಡ ಕಾರ್ಯಪ್ಪ ಮೈಸೂರು ರಂಗಾಯಣದ ನಿರ್ದೇಶಕರಾದ ಮೇಲೆ ಹಲವು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ‘ಟಿಪ್ಪು ನಿಜಕನಸುಗಳು’ ನಾಟಕ ರಚಿಸಿ ವಿವಾದವನ್ನು ಸೃಷ್ಟಿಸಿ ಬಳಿಕ ‘ಸಿದ್ದರಾಮಯ್ಯ ನಿಜ ಕನಸುಗಳು’ ಪುಸ್ತಕ ಬಿಡುಗಡೆ ಮಾಡಿ ತೀವ್ರ ಟೀಕೆಗೆ ಗುರಿಯಾಗಿದ್ದರು.

    ಚುನಾವಣೆಗೆ ಮುನ್ನ ಉರಿಗೌಡ ಹಾಗೂ ನಂಜೇಗೌಡ ಪಾತ್ರಗಳನ್ನು ಮುನ್ನಲೆಗೆ ತಂದು ಒಕ್ಕಲಿಗ ಹಾಗೂ ಮುಸ್ಲಿಮರನ್ನು ಎತ್ತಿಕಟ್ಟುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿತ್ತು. ಇದನ್ನೂ ಓದಿ: ಕೌನ್ ಬನೇಗಾ ರಾಜ್ಯದ ಮುಖ್ಯಮಂತ್ರಿ? ಹೈಕಮಾಂಡ್ ಲೆಕ್ಕಾಚಾರ ಏನು?

    ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ ಸರ್ಕಾರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದೆ. ಇದು ಜನಾದೇಶ, ಇದನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ನನ್ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಡ್ಡಂಡ ಕಾರ್ಯಪ್ಪ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ವಿಜಯೇಂದ್ರ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

  • ಮೈಸೂರು ರಂಗಾಯಣದಲ್ಲಿ ಟಿಪ್ಪು ವಿರುದ್ಧ ನಾಟಕ ರೆಡಿ

    ಮೈಸೂರು ರಂಗಾಯಣದಲ್ಲಿ ಟಿಪ್ಪು ವಿರುದ್ಧ ನಾಟಕ ರೆಡಿ

    ಮೈಸೂರು: ರಾಜ್ಯದಲ್ಲಿ ಮತ್ತೆ ಟಿಪ್ಪು ವಿವಾದ (Tippu Sultan Controversy) ಗರಿಗೆದರುವ ಸೂಚನೆ ಸ್ಪಷ್ಟವಾಗಿದೆ. ಈ ವಿವಾದಕ್ಕೆ ಮತ್ತೆ ಮೈಸೂರಿನ ರಂಗಾಯಣವೇ (Mysore Rangayana) ವೇದಿಕೆ ಆಗ್ತಿದೆ. ಇದೇ ತಿಂಗಳ ನವೆಂಬರ್ 20 ರಿಂದ ಮೈಸೂರಿನ ರಂಗಾಯಣದಲ್ಲಿ `ಟಿಪ್ಪು ನಿಜ ಕನಸುಗಳು’ ಎಂಬ ನಾಟಕ (Drama) ಪ್ರದರ್ಶನವಾಗಲಿದೆ.

    ಟಿಪ್ಪುವನ್ನು ಹೆಜ್ಜೆ ಹೆಜ್ಜೆಗೂ ವಿರೋದಿ ಸುತ್ತಾ ಬಂದಿರುವ ಮೈಸೂರು ರಂಗಾಯಣದ (Mysore Rangayana) ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ (Addanda C Cariappa) `ಟಿಪ್ಪು ನಿಜ ಕನಸುಗಳು’ ಎಂಬ ನಾಟಕ ಬರೆದು ರಂಗಾಯಣ ಕಲಾವಿದರ ಮೂಲಕ ಅದನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ನವೆಂಬರ್ 20 ರಿಂದ ಇದರ ಪ್ರಥಮ ಪ್ರದರ್ಶನ ಶುರುವಾಗಲಿದೆ. ಒಟ್ಟು ಮೂರುವರೆ ತಾಸಿನ ನಾಟಕ ಇದು. ನಾಟಕ ಪ್ರದರ್ಶನಕ್ಕೆ ಮುನ್ನ ಈ ನಾಟಕ ಕೃತಿಯನ್ನು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ (SL Bhyrappa) ಕೃತಿ ಬಿಡುಗಡೆ ಮಾಡಲಿದ್ದಾರೆ. ಇದನ್ನೂ ಓದಿ: ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ- ಲಲಿತಾ ನಾಯಕ್‌ಗೆ ಖಾದರ್ ತಿರುಗೇಟು

    ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅಡ್ಡಂಡ ಸಿ. ಕಾರ್ಯಪ್ಪ, ಕನ್ನಡವನ್ನು ಕೊಂದ ಮುಸ್ಲಿಂ (Muslims) ಸುಲ್ತಾನ ಟಿಪ್ಪುವನ್ನು ಕನ್ನಡ ಪ್ರೇಮಿ ಎಂದು ಕೆಲವರು ಬಣ್ಣಿಸಿದ್ದಾರೆ. ಟಿಪ್ಪು ವಿಶ್ವಧರ್ಮ ಪ್ರೇಮಿ ಎಂಬಂತೆ ಡೋಂಗಿ ಬುದ್ದಿಜೀವಿಗಳು ಬಿಂಬಿಸಿದ್ದಾರೆ. ಟಿಪ್ಪು ಬಗ್ಗೆ ಅತಿ ರಂಜಿತ ಸುಳ್ಳು ಚರಿತ್ರೆ ಸೃಷ್ಟಿಸಿದ್ದಾರೆ. ಇಂತಹ ಸುಳ್ಳಿನ ಚರಿತ್ರೆಯ ಅಸಲಿಯತ್ತನ್ನು ಬಯಲು ಮಾಡುವುದು ಈ ನಾಟಕದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]