Tag: ಮೈಸೂರು ರಾಜಮನೆತನ

  • 1,450 ಏಕರೆ ಭೂ ವಿವಾದ – ಮೈಸೂರು ರಾಜ ವಂಶಕ್ಕೆ ಗೆಲುವು

    1,450 ಏಕರೆ ಭೂ ವಿವಾದ – ಮೈಸೂರು ರಾಜ ವಂಶಕ್ಕೆ ಗೆಲುವು

    ಮೈಸೂರು: ಚಾಮುಂಡಿಬೆಟ್ಟ ತಪ್ಪಲಿನ ಕುರುಬಾರಹಳ್ಳಿ, ಆಲನಹಳ್ಳಿ, ಚೌಡಹಳ್ಳಿಯ ಭೂ ಮಾಲೀಕತ್ವ ವಿವಾದ ಸಂಬಂಧ ಮೈಸೂರಿನ ಹಿಂದಿನ ಡಿಸಿ ರೋಹಿಣಿ ಸಿಂಧೂರಿ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

    ಈ ಮೂರು ಸರ್ವೇ ನಂಬರ್ ಗಳಿಗೆ ಸೇರಿದ ಭೂಮಿ ಮಹಾರಾಜರ ಖಾಸಗಿ ಆಸ್ತಿಯೆಂದು ಹೈಕೋರ್ಟ್ ವಿಭಾಗೀಯ ಪೀಠ ಕಳೆದ ವರ್ಷ ತೀರ್ಪು ನೀಡಿತ್ತು. ಹೈಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಭೂ ಮಾಲೀಕರು ನ್ಯಾಯಾಂಗ ನಿಂದನೆ ಅರ್ಜಿ ಹಾಕಿದ್ದರು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೈಸೂರಿನ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೊರೆ ಹೋಗಿದ್ದರು. ಹಿರಿಯ ವಕೀಲರೊಬ್ಬರಿಗೆ ದುಬಾರಿ ಶುಲ್ಕ ನೀಡಿ ವಕಾಲತ್ತಿಗೆ ವಹಿಸಲಾಗಿತ್ತು. ಇದನ್ನೂ ಓದಿ: ರಾಜೀನಾಮೆ ಸುದ್ದಿ ಕೇಳಿ ಅಭಿಮಾನಿ ಆತ್ಮಹತ್ಯೆ – ಬಿಎಸ್‍ವೈ ಸಂತಾಪ

    ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಇದು ವಿಚಾರಣೆಗೆ ಯೋಗ್ಯವಲ್ಲವೆಂದು ಮೇಲ್ಮನವಿ ತಿರಸ್ಕರಿಸಿದೆ. ಈ ಮೂಲಕ ಕಳೆದ ಎರಡು ದಶಕಗಳಿಂದ ಸರ್ಕಾರ ಮತ್ತು ಭೂ ಮಾಲೀಕರ ನಡುವೆ ನಡೆಯುತ್ತಿದ್ದ ಕಾನೂನು ಸಮರಕ್ಕೆ ತೆರೆ ಬಿದ್ದಂತಾಗಿದೆ. 3 ಸರ್ವೇ ನಂಬರ್ ಗಳಿಂದ 1450 ಎಕರೆಯಷ್ಟು ಇರೋ ಭೂಮಿ. ಈಗ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಹಿನ್ನೆಲೆಯಲ್ಲಿ ಮೈಸೂರು ಮಹಾರಾಜರ ಖಾಸಗಿ ಆಸ್ತಿ ಇದಾಗಿದೆ. ಇದನ್ನೂ ಓದಿ: ಅಸ್ಸಾಂ, ಮಿಜೊರಾಂ ಗಡಿಯಲ್ಲಿ ಹಿಂಸಾಚಾರ – ಐವರು ಪೊಲೀಸರು ಹುತಾತ್ಮ

  • ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಲು ರಾಜಮನೆತನಕ್ಕೆ ಮೋಸ ಮಾಡಲು ಮುಂದಾಯಿತೇ ಸರ್ಕಾರ?

    ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಲು ರಾಜಮನೆತನಕ್ಕೆ ಮೋಸ ಮಾಡಲು ಮುಂದಾಯಿತೇ ಸರ್ಕಾರ?

    ಮಂಡ್ಯ: ಜಮೀನಿನ ಹಕ್ಕುಪತ್ರ ಬದಲಾವಣೆ ವಿಚಾರದಲ್ಲಿ ಸರ್ಕಾರವು ಮೈಸೂರು ರಾಜಮನೆತನಕ್ಕೆ ಮೋಸ ಮಾಡುತ್ತಿದೆ ಎನ್ನವು ಅನುಮಾನ ವ್ಯಕ್ತವಾಗಿದ್ದು, ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಲು ಹೀಗೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಕೇಳಿಬರುತ್ತಿವೆ.

    ಮೈಸೂರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು, ತಮಗೆ ಸೇರಬೇಕಾದ ಜಮೀನಿನ ಹಕ್ಕು ಬದಲಾವಣೆ ಮಾಡಿಕೊಡಿ ಎಂದು ಪಾಂಡವಪುರ ತಹಶೀಲ್ದಾರ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಮೀನು ಸರ್ಕಾರಿ ಜಾಗ ಅಂತಾ ತಹಶೀಲ್ದಾರ್ ಪತ್ರಕ್ಕೆ ಹಿಂಬರಹ ನೀಡಿರುವ ದಾಖಲೆ ಲಭ್ಯವಾಗಿದೆ. ಈ ಮೂಲಕ ಸರ್ಕಾರ ರಾಜ ಮನೆತನಕ್ಕೆ ಮೋಸ ಮಾಡುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

    ಪಾಂಡವಪುರ ತಾಲೂಕು ಬೇಬಿಬೆಟ್ಟದ ಕಾವಲು ಗ್ರಾಮದ ಸರ್ವೆ ನಂಬರ್ 1ರ ಅಮೃತಮಹಲ್ ಕಾವಲ್ ಜಮೀನಿನ ಖಾತೆಯನ್ನು ಕೋರಿ, ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಕಳೆದ ವರ್ಷ ಅಕ್ಟೋಬರ್ 24ರಂದು ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದ್ದರು. ಮನವಿ ಸಲ್ಲಿಸಿದ ಒಂದು ತಿಂಗಳ ನಂತರ (ನವೆಂಬರ್ 25)ರಂದು ತಹಶೀಲ್ದಾರ್ ಹಿಂಬರಹ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಕಲ್ಲುಗಣಿಗಾರಿಕೆಗೆ ನೆರವಾದ ಆರೋಪ- ಮಾಜಿ ಸಿಎಂ ಸಿದ್ದರಾಮಯ್ಯರ ವಿರುದ್ಧ ದೂರು ದಾಖಲು

    ತಹಶೀಲ್ದಾರ್ ಪತ್ರದಲ್ಲಿ ಏನಿದೆ?:
    ಅಮೃತ ಮಹಲ್ ಕಾವಲ್‍ನಲ್ಲಿ ಬರುವ 1,487 ಎಕರೆ ಜಮೀನು ಸರ್ಕಾರಿ ಖರಾಬು ಎಂದು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಖರಾಬು ಜಮೀನನ್ನು ಖಾತೆ ಬದಲಾವಣೆ ಮಾಡುವ ಅಧಿಕಾರ ನಮ್ಮ ಪ್ರಾಧಿಕಾರದ ವ್ಯಾಪ್ತಿಗೆ ಬರುವುದಿಲ್ಲ. ಈ ಬಗ್ಗೆ ನೀವು ಮೇಲ್ಮನವಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

    ಇತ್ತ ಬೇಬಿಬೆಟ್ಟದ ಸುತ್ತಮುತ್ತ ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಕಳೆದ ವಾರ ನಿಷೇಧ ಹೇರಲಾಗಿದೆ. ಅಕ್ರಮ ಗಣಿಗಾರಿಕೆಗೆ ಸಹಾಯ ಮಾಡುವ ಸಲುವಾಗಿ ರಾಜಕುಟುಂಬಕ್ಕೆ ಮೋಸ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂಬರಹದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv