Tag: ಮೊಕದ್ದಮೆ

  • ಸಲ್ಮಾನ್ ಖಾನ್‌ಗೆ ಬಿಗ್ ರಿಲೀಫ್ – ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

    ಸಲ್ಮಾನ್ ಖಾನ್‌ಗೆ ಬಿಗ್ ರಿಲೀಫ್ – ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

    ಮುಂಬೈ: ಬಾಲಿವುಡ್ (Bollywood) ನಟ ಸಲ್ಮಾನ್ ಖಾನ್ (Salman Khan) ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು (Criminal Lawsuit) ಬಾಂಬೆ ಹೈಕೋರ್ಟ್ (High Court) ರದ್ದುಗೊಳಿಸಿದೆ. 2019ರಲ್ಲಿ ಪತ್ರಕರ್ತರೊಬ್ಬರು ಕ್ರಿಮಿನಲ್ ಬೆದರಿಕೆ ಆರೋಪದಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಭಾರತಿ ಡಾಂಗ್ರೆ (Bharati Dangre) ನೇತೃತ್ವದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.

    ಮುಂಬೈನ (Mumbai) ಬೀದಿಗಳಲ್ಲಿ ಸಲ್ಮಾನ್ ಖಾನ್ ಸೈಕ್ಲಿಂಗ್ ಮಾಡುತ್ತಿದ್ದ ವೇಳೆ ಪತ್ರಕರ್ತರೊಂದಿಗೆ ಜಗಳವಾಡಿ ಅವರ ಫೋನ್ ಕಸಿದುಕೊಂಡಿದ್ದರು ಎಂದು ಆರೋಪಿಸಿ ಪತ್ರಕರ್ತರೊಬ್ಬರು ದೂರು ನೀಡಿದ್ದರು. ದೂರಿನ ಅನ್ವಯ ನೀಡಲಾದ ಸಮನ್ಸ್ ಆದೇಶವನ್ನು ಪ್ರಶ್ನಿಸಿ ಸಲ್ಮಾನ್ ಖಾನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಇದನ್ನೂ ಓದಿ: ಮಹಿಳಾ ಸಮಾನತೆ ಸಾರಿದ ನೆಲದಲ್ಲಿ ಪುರುಷರದ್ದೇ ದರ್ಬಾರ್

    ಈ ಮೊದಲು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಅಪರಾಧಗಳನ್ನು ಮಾಡಲಾಗಿತ್ತು. ಈ ಹಿನ್ನೆಲೆ ಸಲ್ಮಾನ್ ಖಾನ್ ವೈಯಕ್ತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಇದನ್ನೂ ಓದಿ: ದೈವನರ್ತನದ ವೇಳೆಯೇ ನರ್ತಕ ಕುಸಿದು ಬಿದ್ದು ಸಾವು

    ಈ ಆದೇಶಕ್ಕೆ ತಡೆ ನೀಡುವಂತೆ ಮತ್ತು ಪ್ರಕರಣವನ್ನು ರದ್ದು ಮಾಡುವಂತೆ ಸಲ್ಮಾನ್ ಖಾನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಖಾನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಬದ್ ಪೊಂಡಾ (Abad Ponda), ಪತ್ರಕರ್ತರು ತಮ್ಮ ಫೋಟೊ/ವೀಡಿಯೋ ಚಿತ್ರೀಕರಣ ಮಾಡದಂತೆ ತಡೆಯುವಂತೆ ತಮ್ಮ ಅಂಗರಕ್ಷಕರು ಕೇಳಿಕೊಂಡಿದ್ದರು. ಅದಾಗ್ಯೂ ಪೊಟೊ ವಿಡಿಯೋ ಚಿತ್ರಿಕರಣಕ್ಕೆ ಮುಂದಾದಾಗ ವಾಗ್ವಾದ ಏರ್ಪಟ್ಟಿತ್ತು ಎಂದು ಹೇಳಿದ್ದರು. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಭಾರೀ ಸ್ಫೋಟ- ಪೊಲೀಸರಿಂದ ಶೋಧ

  • 200 ಕೋಟಿ ವಂಚನೆ ಕೇಸ್ : ‘ವಿಕ್ರಾಂತ್ ರೋಣ’ ಬೆಡಗಿಯ ವಿರುದ್ಧ ಮಾನನಷ್ಟ ಮೊಕದ್ದಮೆ

    200 ಕೋಟಿ ವಂಚನೆ ಕೇಸ್ : ‘ವಿಕ್ರಾಂತ್ ರೋಣ’ ಬೆಡಗಿಯ ವಿರುದ್ಧ ಮಾನನಷ್ಟ ಮೊಕದ್ದಮೆ

    ಕನ್ನಡದ ವಿಕ್ರಾಂತ್ ರೋಣ ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡಿಗೆ ಸೊಂಟ ಬಳುಕಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ, ಬಾಲಿವುಡ್ ನಟಿ ನೋರಾ ಫತೇಹಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಇಬ್ಬರೂ ನಟಿಯರು ಸುಕೇಶ್ ಚಂದ್ರಶೇಖರ್ ವಿರುದ್ಧದದ 200 ಕೋಟಿ ವಂಚನೆ ಪ್ರಕರಣದ ಆರೋಪಿಗಳಾಗಿದ್ದಾರೆ ಎನ್ನುವುದು ವಿಶೇಷ. ಇದೇ ಕಾರಣಕ್ಕಾಗಿಯೇ ಜಾಕ್ವೆಲಿನ್ ಮೇಲೆ ನೋರಾ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

    ಸುಕೇಶ್ ವಂಚನೆ ಪ್ರಕರಣದಲ್ಲಿ ಈ ನಟಿಯರ ಹೆಸರು ಕೇಳಿ ಬಂದಿತ್ತು. ಜಾರಿ ನಿರ್ದೇಶನಾಲಯ ಕೂಡ ಇಬ್ಬರನ್ನೂ ಕರೆಯಿಸಿ ವಿಚಾರಣೆಗೆ ಒಳಪಡಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೋರಾ ಫತೇಹಿ ವಿರುದ್ಧ ಜಾಕ್ವೆಲಿನ್ ಮಾನಹಾನಿ ಆಗುವಂತಹ ಮತ್ತು ದುರುದ್ದೇಶಪೂರಿತ ಕಾರಣಗಳನ್ನು ನೀಡುತ್ತಿದ್ದಾರಂತೆ. ಅದರಿಂದಾಗಿ ತಮಗೆ ಮಾನ ಹಾನಿ ಆಗುತ್ತಿದೆ ಎಂದು ನೋರಾ ಆರೋಪಿಸಿದ್ದಾರೆ. ಇದನ್ನೂ ಓದಿ: ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್

    ಈ ಇಬ್ಬರೂ ನಟಿಯರು ಮೂಲತಃ ವಿದೇಶಿಗರಾಗಿದ್ದು, ಬಾಲಿವುಡ್ ನಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಕಾರಣದಿಂದಾಗಿಯೇ ಇವರು ಸುಕೇಶ್ ಸಂಪರ್ಕಕ್ಕೂ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹಲವು ಬಾರಿ ಈ ನಟಿಯರನ್ನು ಜಾರಿ ನಿರ್ದೇಶನಾಲಯವು ವಿಚಾರಣೆಗಾಗಿ ಕರೆದಿದೆ. ಆದರೆ, ಈ ಕೇಸ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ನಟಿಯರು ಹೇಳಿಕೆ ಕೊಡುತ್ತಲೇ ಬಂದಿದ್ದಾರೆ. ಸುಕೇಶ್ ತಮಗೆ ನೇರವಾಗಿ ಪರಿಚಯವೇ ಇಲ್ಲವೆಂದು ನೋರಾ ಹೇಳಿದ್ದರೆ, ಅವನಿಂದ ಯಾವುದೇ ಉಡುಗೊರೆ ಪಡೆದಿಲ್ಲ ಎಂದು ಜಾಕ್ವೆಲಿನ್ ವಾದಿಸಿದ್ದಾರೆ.

    ಈ ಇಬ್ಬರೂ ನಟಿಯರು ಏನೇ ಹೇಳಿದರೂ, ಈಗಾಗಲೇ ಕೋರ್ಟ್ ಕಟಕಟೆಯಲ್ಲಿ ನಿಂತು ಬಂದಿದ್ದಾರೆ. ಜಾರಿ ನಿರ್ದೇಶನಾಲಯವು ಇಬ್ಬರ ಮೇಲೂ ಗುರುತರ ಆರೋಪ ಮಾಡಿ ಜಾರ್ಜ್ ಶೀಟ್ ಕೂಡ ಸಲ್ಲಿಸಲಾಗಿದೆ. ನೂರಾರು ಕೋಟಿಯ ವಂಚನೆಯ ಪ್ರಕರಣ ಇದಾಗಿದ್ದರಿಂದ, ಗಂಭೀರವಾಗಿ ಈ ಪ್ರಕರಣವನ್ನು ತಗೆದುಕೊಳ್ಳಲಾಗಿದೆ. ಇಬ್ಬರೂ ಇಕ್ಕಟ್ಟಿಗೆ ಸಿಲುಕಿದ್ದರೂ, ಒಬ್ಬರ ಮೇಲೆ ಒಬ್ಬರು ಆರೋಪ ಮಾಡಿ, ಬೇರೆ ಕಾರಣಗಳಿಂದಾಗಿ ಮತ್ತೆ ಕೋರ್ಟ್ ಮೆಟ್ಟಿಲು ಹತ್ತುವಂತಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಶ್ಲೀಲ ವಿಡಿಯೋ ಆರೋಪ: ನಟಿ ರಾಣಿ ಮೇಲೆ ಮಾನನಷ್ಟ ಮೊಕದ್ದಮೆ ಎಂದ ಡಿಂಗ್ರಿ

    ಅಶ್ಲೀಲ ವಿಡಿಯೋ ಆರೋಪ: ನಟಿ ರಾಣಿ ಮೇಲೆ ಮಾನನಷ್ಟ ಮೊಕದ್ದಮೆ ಎಂದ ಡಿಂಗ್ರಿ

    ನ್ನಡ ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್ ಮೇಲೆ ನಟಿ ರಾಣಿ ಗುರುತರ ಆರೋಪಗಳನ್ನು ಮಾಡಿದ್ದರು. ಸಂಘದಲ್ಲಿ ಹಣದ ದುರುಪಯೋಗ ಮತ್ತು ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್, ಮಹಿಳೆಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಾರೆ ಎನ್ನುವುದು ರಾಣಿ ಆರೋಪವಾಗಿತ್ತು. ರಾಣಿ ಅವರ ಆರೋಪಕ್ಕೆ ಅಧ್ಯಕ್ಷ ಡಿಂಗ್ರಿ ನಾಗರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ರಾಣಿ ಆರೋಪ ಎಲ್ಲವೂ ನಿರಾಧಾರ ಎಂದು ತಿಳಿಸಿದ್ದಾರೆ.

    ‘ರಾಣಿ ವಿರುದ್ದ ಮಾನನಷ್ಟ ಮೊಕದ್ದಮೆ ಹಾಕ್ತಿವಿ. ಪೋಷಕ ಕಲಾವಿದರ ಸಂಘದ ಹಣ ದುರುಪಯೋಗ ಮಾಡಿಲ್ಲ. ಅವರು ಸಂಘದ ಆವರಣದಲ್ಲಿ ವೈಯಕ್ತಿಕ ಕಾರಣಕ್ಕಾಗಿ ಗಲಾಟೆ ಶುರು ಮಾಡಿದ್ರು. ಹಾಗಾಗಿ ಅವರನ್ನು ಸಂಘದಿಂದ ಉಚ್ಚಾಟನೆ ಮಾಡಿದ್ದೇವೆ. ಈಗ ನಾವು ಕಾರ್ಯಕ್ರಮ ಮಾಡ್ತಿದ್ದಿವಿ. ಅದನ್ನು ವಿರೋಧಿಸೋಕೆ ಈ ರೀತಿ ಆರೋಪ ಮಾಡಿದ್ದಾರೆ. ಅಶ್ಲೀಲ ವಿಡಿಯೋ ಕಳಿಸಿರೋದು ಸುಳ್ಳು ಮಾಹಿತಿ. ನಾವೇ ರಾಣಿ ಮೇಲೆ ಮಾನನಷ್ಟ ಮೊಕದ್ದಮೆ ಹಾಕ್ತೀವಿ’ ಎಂದಿದ್ದಾರೆ ಡಿಂಗ್ರಿ ನಾಗರಾಜ್. ಇದನ್ನೂ ಓದಿ:`ಕಾಂತಾರ’ ಮುಂದೆ ಬೆದರಿದ ಬಾಲಿವುಡ್: ಥಿಯೇಟರ್‌ಗೆ `ಗುಡ್ ಬೈ’ ಹೇಳಿದ ರಶ್ಮಿಕಾ ಚಿತ್ರ

    ಕರ್ನಾಟಕ ಪೋಷಕ ಕಲಾವಿದರ ಸಂಘದ ಭಿನ್ನಾಭಿಪ್ರಾಯ ಇದೀಗ ಬೀದಿಗೆ ಬಂದಿದೆ. ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿಯ ನಡೆಗೆ ಸಿನಿಮಾ ಹಾಗೂ ಕಿರುತೆರೆ ನಟಿ ರಾಣಿ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹಣಕಾಸಿನ ಅವ್ಯವಹಾರದ ಜೊತೆ ಮಹಿಳೆಯರಿಗೆ ಸಂಘದಲ್ಲಿರುವವರು ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದರು ಎಂದು ಗುರುತರ ಆರೋಪ ಮಾಡಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟಿ ರಾಣಿ, ‘ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್ ಮೇಲೆ ಆರೋಪ ಮಾಡಿದ್ದು, ತಮ್ಮದು ಪೋಷಕ ಕಲಾವಿದರ ಸಂಘದ ಮೇಲೆ ಆರೋಪ ಮಾಡುವುದಿಲ್ಲ’  ಎಂದಿದ್ದಾರೆ. ಮಹಿಳೆಯರನ್ನು ಅಗೌರವದಿಂದ ಇವರು ನಡೆಸಿಕೊಳ್ಳುತ್ತಾರೆ. ಅದರಲ್ಲೂ ಸಂಘದ ಕಾರ್ಯದರ್ಶಿಗಳೇ ಸಂಘದಲ್ಲಿ ಇರುವಂತಹ ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಾರೆ ಎಂದು ಆರೋಪ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜೂಮ್ ಕಾಲ್‌ನಲ್ಲೇ 900 ಉದ್ಯೋಗಿಗಳನ್ನು ವಜಾಗೊಳಿಸಿದ್ದ ಸಿಇಒ ವಿರುದ್ಧವೇ ಕೇಸ್

    ವಾಷಿಂಗ್ಟನ್: ಸಂಸ್ಥೆಯ ಆರ್ಥಿಕ ನಿರೀಕ್ಷೆ ಹಾಗೂ ಕಾರ್ಯಕ್ಷಮತೆಯ ಬಗ್ಗೆ ಹೂಡಿಕೆದಾರರನ್ನು ತಪ್ಪುದಾರಿಗೆಳೆಯುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಬೆಟರ್ ಡಾಟ್ ಕಾಮ್‌ನ ಮುಖ್ಯ ಕಾರ್ಯನಿರ್ವಾಹಕ ವಿಶಾಲ್ ಗಾರ್ಗ್ ವಿರುದ್ಧ ಮೊಕದ್ದಮೆ ಹೂಡಲಾಗಿದೆ.

    ಸಾಫ್ಟ್‌ಬ್ಯಾಂಕ್ ಬೆಂಬಲಿತ ಕಂಪನಿಯ ಮಾರಾಟ ಹಾಗೂ ಕಾರ್ಯಾಚರಣೆಗಳ ಮಾಜಿ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಸಾರಾ ಪಿಯರ್ಸ್ ತನ್ನ ಮೊಕದ್ದಮೆಯಲ್ಲಿ ಗಾರ್ಗ್ ತನ್ನ ಆರ್ಥಿಕ ಸ್ಥಿತಿಯ ಕಾರಣ ಹೂಡಿಕೆದಾರರು ಹಿಂದೇಟು ಹಾಕುವ ಸಂದರ್ಭ ಎಸ್‌ಪಿಎಸಿ ಯೊಂದಿಗೆ ವಿಲೀನವಾಗುವ ಬಗ್ಗೆ ತಪ್ಪಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಡಿ ಸಮನ್ಸ್ – ವಿಚಾರಣೆಯಿಂದ ವಿನಾಯಿತಿ ಕೋರಿದ ಸೋನಿಯಾ

    ನ್ಯಾಯಾಲಯದಲ್ಲಿ ಪಿಯರ್ಸ್ ಸಲ್ಲಿಸಿದ ಮೊಕದ್ದಮೆಯಲ್ಲಿ ಈ ಒಪ್ಪಂದದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗೂ ಆರ್ಥಿಕ ಪರಿಹಾರ ಕೋರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬೆಟರ್ ಡಾಟ್ ಕಾಮ್‌ನ ವಕೀಲರು, ಕಂಪನಿಯ ಹಣಕಾಸು, ಲೆಕ್ಕಪತ್ರದ ಬಗ್ಗೆ ವಿಶ್ವಾಸವಿದೆ ಹಾಗೂ ಈ ಮೊಕದ್ದಮೆಯನ್ನು ನಾವು ಬಲವಾಗಿ ಸಮರ್ಥಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೆಪೋ ರೇಟ್ ಏರಿಸಿದ ಆರ್‌ಬಿಐ – ಹೆಚ್ಚಳವಾಗಲಿದೆ ಲೋನ್, ಇಎಂಐಗಳ ಬಡ್ಡಿ ದರ

    ಕಳೆದ ವರ್ಷ ಬೆಟರ್ ಡಾಟ್ ಕಾಮ್ ಸಾರ್ವಜನಿಕರಿಂದ ಬಂಡವಾಳ ಸಂಗ್ರಹಿಸಲು ಷೇರು ಬಿಡುಗಡೆ ಮಾಡಲು ಮುಂದಾಗಿತ್ತು. ಈ ಸಂಬಂಧ ಬೆಟರ್ ಡಾಟ್ ಕಾಮ್ ವಿಶೇಷ ಉದ್ದೇಶದ ಸ್ವಾದೀನ ಕಂಪನಿ ಅರೋರಾ ಜೊತೆ ವಿಲೀನ ಮಾಡಿಕೊಂಡಿತ್ತು. 7.7 ಶತಕೋಟಿ ಡಾಲರ್(ಸುಮಾರು 59 ಸಾವಿರ ಕೋಟಿ ರೂ.) ಮೌಲ್ಯದ ಒಪ್ಪಂದ ಮಾಡಿಕೊಂಡಿತ್ತು. ಈ ವಿಲೀನ ಪ್ರಕ್ರಿಯೆ ಶೀಘ್ರವೇ ಕೊನೆಯಾಗುವ ಸಾಧ್ಯತೆಯಿದೆ.

  • ಸಂಜನಾ ವಿರುದ್ಧ 4 ಕೋಟಿ ರೂ. ಮಾನನಷ್ಟ ಮೊಕದ್ದಮೆ

    ಸಂಜನಾ ವಿರುದ್ಧ 4 ಕೋಟಿ ರೂ. ಮಾನನಷ್ಟ ಮೊಕದ್ದಮೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸಂಜನಾ ಮತ್ತು ಬಾಲಿವುಡ್ ನಿರ್ಮಾಪಕಿ ವಂದನಾ ಗಲಾಟೆ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ಇದೀಗ ವಂದನಾ 4 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಯನ್ನು ಸಂಜನಾ ವಿರುದ್ಧ ದಾಖಲು ಮಾಡಿದ್ದಾರೆ.

    ಸಂಜನಾ ನನ್ನ ಮೇಲೆ ಇಲ್ಲ-ಸಲ್ಲದ ಆರೋಪ ಮಾಡಿದ್ದಾರೆ. ಆವತ್ತು ಅವರು ಮಾಡಿದ ಗಲಾಟೆಯಿಂದ ನನ್ನ ಕಣ್ಣಿನ ಮೇಲೆ ಗಾಯವಾಗಿದೆ. ಅದಕ್ಕೆ ಸಂಬಂಧಿಸಿದಂತೆ ನಾನು ದೂರು ನೀಡಿದ್ದೀನಿ. ದೂರಿನ ಬಗ್ಗೆ ಸುದ್ದಿ ಪ್ರಸಾರವಾದಾಗ ಸಂಜನಾ ನನ್ನ ಮೇಲೆ ಇಲ್ಲ-ಸಲ್ಲದ ಆರೋಪ ಮಾಡಿದ್ದಾರೆ. ನನ್ನ ವೈಯಕ್ತಿಕ ವಿಚಾರಗಳನ್ನೆಲ್ಲ ಸಾರ್ವಜನಿಕವಾಗಿ ಬಹಿರಂಗವಾಗಿ ಮಾತನಾಡಿದ್ದಾರೆ. ಇದರಿಂದ ನನಗೆ ಅವಮಾನವನ್ನೂ ಮಾಡಿದ್ದಾರೆ ಎಂದು ನಾಲ್ಕು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಇದನ್ನೂ ಓದಿ:  ಅವಳು ಮಾಡಿದ್ದು ಮಾಡಲಿ, ನಾನು ಅವಳಷ್ಟು ಚೀಪ್ ಅಲ್ಲ: ವಂದನಾ ಜೈನ್

    ಅಷ್ಟೇ ಅಲ್ಲದೆ ಸಂಜನಾಗೆ ಲೀಗಲ್ ನೋಟಿಸ್ ಸಹ ನೀಡಿದ್ದಾರೆ. ಇದೆಲ್ಲದರ ಮಧ್ಯೆ ಸಂಜನಾ ಮಾಡಿದ ಆರೋಪಗಳಿಗೆ ವಂದನಾ ಉತ್ತರವನ್ನು ನೀಡಿದ್ದಾರೆ. 8 ನಿಮಿಷಗಳ ವಿಡಿಯೋ ಬಿಡುಗಡೆ ಮಾಡಿರುವ ವಂದನಾ, ಸಂಜನಾ ಆರೋಪಗಳಿಗೆಲ್ಲ ಪ್ರತ್ಯುತ್ತರವನ್ನು ನೀಡಿದ್ದಾರೆ. ಇದನ್ನೂ ಓದಿ: ವಂದನಾ ಪ್ರಚಾರಕ್ಕಾಗಿ ಗಲಾಟೆ ಮಾಡ್ತಿದ್ದಾಳೆ: ನಟಿ ಸಂಜನಾ ಆರೋಪ

    ಏನಿದು ಪ್ರಕರಣ?
    ಬಾಲಿವುಡ್ ನಿರ್ಮಾಪಕಿ ವಂದನಾ ಜೈನ್ ಮತ್ತು ಸ್ಯಾಂಡಲ್‍ವುಡ್ ನಟಿ ಸಂಜನಾ ಇಬ್ಬರು ಸ್ನೇಹಿತರಾಗಿದ್ದರು. ಹೀಗೆ ಇಬ್ಬರೂ ಸ್ಟಾರ್ ಹೋಟೆಲಿನಲ್ಲಿ ಪಾರ್ಟಿ ಮಾಡುತ್ತಿದ್ದರು. ಒಂದೇ ಟೇಬಲ್‍ನಲ್ಲಿ ಕುಳಿತು ಕುಡಿಯುತ್ತಾ ಇದ್ದ ಇಬ್ಬರ ಮಧ್ಯೆ ಯಾವುದೋ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದಿದೆ. ಮಾತು ಅತಿರೇಕಕ್ಕೆ ಹೋಗಿದ್ದೇ ತಡ, ಇಬ್ಬರೂ ಪರಸ್ಪರ ಕೆಟ್ಟ ಮಾತುಗಳಿಂದ ಬೈದುಕೊಂಡಿದ್ದಾರೆ.

    ಈ ವೇಳೆ ಸಿಟ್ಟಿಗೆದ್ದ ಸಂಜನಾ ಅವರು ವಂದನಾರಿಗೆ ಹೊಡೆಯಲು ಮುಂದಾಗಿದ್ದು, ತನ್ನ ಕೈಯಲ್ಲಿದ್ದ ವಿಸ್ಕಿ ಗ್ಲಾಸನ್ನು ವಂದನಾ ಮೇಲೆ ಬಿಸಾಕಿದ್ದಾರೆ. ನಟಿ ಬಿಸಾಡಿದ ವೇಗಕ್ಕೆ ಗ್ಲಾಸ್ ನಿರ್ಮಾಪಕಿಯ ಹಣೆಗೆ ಬಂದು ಬಡಿದಿದೆ. ಇದಾದ ಬಳಿಕ ನಿರ್ಮಾಪಕಿಯು ನಟಿಯ ಮೇಲೆ ಕ್ರಮ ಕೈಗೊಳ್ಳಿ ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಬಳಿಕ ರಾಜಿ ಪಂಚಾಯ್ತಿ ಮಾಡಿಕೊಂಡು ಕೇಸನ್ನು ಹಿಂಪಡೆದುಕೊಂಡಿದ್ದಾರೆ.