Tag: ಮೊಟ್ಟೆ ವಿವಾದ

  • ಮಂಡ್ಯ| ಶಾಲೆಯಲ್ಲಿ ಮೊಟ್ಟೆ ನೀಡಿದ್ದಕ್ಕೆ 70ಕ್ಕೂ‌ ಅಧಿಕ ಮಕ್ಕಳು ಬೇರೆ ಶಾಲೆಗೆ ಸೇರ್ಪಡೆ

    ಮಂಡ್ಯ| ಶಾಲೆಯಲ್ಲಿ ಮೊಟ್ಟೆ ನೀಡಿದ್ದಕ್ಕೆ 70ಕ್ಕೂ‌ ಅಧಿಕ ಮಕ್ಕಳು ಬೇರೆ ಶಾಲೆಗೆ ಸೇರ್ಪಡೆ

    ಮಂಡ್ಯ: ಸರ್ಕಾರಿ ಶಾಲೆಯ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗೆ ಮೊಟ್ಟೆ ನೀಡುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಕಡ್ಲೆ ಮಿಠಾಯಿ ಹಾಗೂ ಬಾಳೆಹಣ್ಣನ್ನು ನೀಡುತ್ತಾ ಬರುಲಾಗುತ್ತಿದೆ. ಸಕ್ಕರೆ ನಾಡು ಮಂಡ್ಯದ ಆಲಕೆರೆ ಗ್ರಾಮದಲ್ಲಿ ಇದೀಗ ಮೊಟ್ಟೆಯ ತಕರಾರು ಎದ್ದಿದೆ.

    ಆಲಕೆರೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಸರ್ಕಾರ ಸರ್ಕಾರಿ ಶಾಲೆಗಳಿಗೆ ಮೊಟ್ಟೆ ಕೊಡುವ ಕಾರ್ಯಕ್ರಮವನ್ನು ಪ್ರಾರಂಭ ಮಾಡಿದಾಗಿನಿಂದ ಈ ಗ್ರಾಮದ ಜನರು, ಶಾಲೆಯಲ್ಲಿ ಮೊಟ್ಟೆ ಕೊಡುವುದು ಬೇಡಾ ಎಂದು ಒಕ್ಕೊರಲಿನಿಂದ ತೀರ್ಮಾನ ಮಾಡಿದ್ದರು. ಏಕೆಂದರೆ ಈ ಶಾಲೆ ಇರುವ 100 ಮೀಟರ್ ಅಂತರದಲ್ಲಿ ವೀರಭದ್ರಸ್ವಾಮಿ‌ ದೇವಸ್ಥಾನವಿದೆ. ಹೀಗಾಗಿ, ದೇವಸ್ಥಾನದ ಸುತ್ತಮುತ್ತ ಮಾಂಸಾಹಾರ ಹಾಗೂ ಮೊಟ್ಟೆಯನ್ನು ಸೇವನೆ ಮಾಡಲ್ಲ. ಶಾಲೆಯಲ್ಲೂ ಮೊಟ್ಟೆಯ ಬದಲಿಗೆ ಇಷ್ಟು ದಿನ ಕಡ್ಲೆ ಮಿಠಾಯಿ ಹಾಗೂ ಬಾಳೆಹಣ್ಣನ್ನು ಕೊಡಲಾಗುತ್ತಿತ್ತು. ಇದನ್ನೂ ಓದಿ: ವಿದೇಶಕ್ಕೂ ಹರಡಿದೆ ಬೆಗ್ಗರ್‌ ಜಾಲ – ಪಾಕ್‌ ಭಿಕ್ಷುಕರ ವಾರ್ಷಿಕ ಆದಾಯ ಕೇಳಿದ್ರೆ ಬೆಚ್ಚಿ ಬೀಳ್ತೀರಿ…

    ಕಳೆದ 20 ದಿನಗಳ ಹಿಂದೆ ಈ ಶಾಲೆಯಲ್ಲಿ ಓದುವ ಕೆಲ ಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಮೊಟ್ಟೆ ಕೊಡಬೇಕೆಂದು ಪಟ್ಟು ಹಿಡಿದಿದ್ದರು. ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದರು. ಆದರೆ, ಅಧಿಕಾರಿಗಳು ಕಾನೂನಿನ ಪ್ರಕಾರ ಮೊಟ್ಟೆ ಕೊಡಲೇಬೇಕೆಂದು, ಮೊಟ್ಟೆ ತಿನ್ನುವ ಮಕ್ಕಳಿಗೆ ಮೊಟ್ಟೆಯನ್ನು ನೀಡಿದ್ದಾರೆ.

    ಅಧಿಕಾರಿಗಳ ಈ ನಿರ್ಧಾರ ಇದೀಗ ಇಲ್ಲಿನ ಗ್ರಾಮಸ್ಥರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ, 124 ಮಕ್ಕಳ ಪೈಕಿ 70ಕ್ಕೂ‌ ಅಧಿಕ ಮಕ್ಕಳ ಪೋಷಕರು ತಮ್ಮ ಮಕ್ಕಳನ್ನು ಆಲಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಬಿಡಿಸಿದ್ದಾರೆ. ಇದೀಗ 70ಕ್ಕೂ ಅಧಿಕ ಮಕ್ಕಳನ್ನು ಆಲಕೆರೆಯ ಪಕ್ಕದ ಊರಾದ ಕೀಲಾರ ಗ್ರಾಮದ ಸರ್ಕಾರಿ ಶಾಲೆ‌ ಹಾಗೂ ಇತರ ಶಾಲೆಗಳಿಗೆ ದಾಖಲು ಮಾಡಿದ್ದಾರೆ. ಇದನ್ನೂ ಓದಿ: 354ನೇ ಆರಾಧನಾ ಮಹೋತ್ಸವದ ಕೊನೆಯ ಘಟ್ಟ – ಮಂತ್ರಾಲಯ ರಾಜಬೀದಿಯಲ್ಲಿಂದು ಮಹಾರಥೋತ್ಸವ

  • ಮಂಡ್ಯದಲ್ಲಿ ಮೊಟ್ಟೆ ವಿವಾದ – ಮೊಟ್ಟೆ ಕೊಟ್ರೆ ಮಕ್ಕಳನ್ನ ಶಾಲೆಗೆ ಕಳ್ಸಲ್ಲ ಎಂದ ಪೋಷಕರು

    ಮಂಡ್ಯದಲ್ಲಿ ಮೊಟ್ಟೆ ವಿವಾದ – ಮೊಟ್ಟೆ ಕೊಟ್ರೆ ಮಕ್ಕಳನ್ನ ಶಾಲೆಗೆ ಕಳ್ಸಲ್ಲ ಎಂದ ಪೋಷಕರು

    ಮಂಡ್ಯ: ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ಆದರೆ ಮೊಟ್ಟೆ (Egg) ವಿತರಣೆಯೇ ಮಂಡ್ಯದ ಗ್ರಾಮವೊಂದರಲ್ಲಿ ವಿವಾದಕ್ಕೆ ಕಾರಣವಾಗಿದ್ದು, ಮೊಟ್ಟೆ ಕೊಡುವುದೇ ಆದರೆ ನಮ್ಮ ಮಕ್ಕಳನ್ನ ಶಾಲೆಗೆ ಕಳ್ಸಲ್ಲ ಎಂದು ಪೋಷಕರು ಹೇಳ್ತಿದ್ದಾರೆ.

    ಮಂಡ್ಯದ (Madya) ಆಲಕೆರೆ (Alakere) ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ವಿಚಾರಕ್ಕೆ ಕಿರಿಕ್ ಶುರುವಾಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ 120 ವಿದ್ಯಾರ್ಥಿಗಳ ಪೈಕಿ 80 ಮಕ್ಕಳು ಮೊಟ್ಟೆ ಬೇಡ ಅಂತಿದ್ದಾರೆ. ಪೋಷಕರು ಕೂಡ ಮೊಟ್ಟೆ ವಿತರಣೆಗೆ ವಿರೋಧಿಸಿದ್ದು, ಮೊಟ್ಟೆ ಕೊಟ್ರೆ ನಮ್ಮ ಮಕ್ಕಳಿಗೆ ಟಿಸಿ ಕೊಡಿ ಬೇರೆ ಶಾಲೆಗೆ ಸೇರಿಸ್ತೀವಿ ಅನ್ನೋ ಹಠಕ್ಕೆ ಬಿದ್ದಿದ್ದಾರೆ. ಇದನ್ನೂ ಓದಿ: ಇಂದು, ನಾಳೆ ಹಾಲು ಮಾರಾಟ ಬಂದ್ – ಟೀ, ಕಾಫಿ ಇಲ್ಲ.. ಓನ್ಲಿ ಲೆಮನ್, ಬ್ಲ್ಯಾಕ್ ಟೀ ಸಿಗುತ್ತೆ ಅಂತ ಬೋರ್ಡ್

    ಅಂದಹಾಗೇ ಇವರು ಹೀಗೆ ಹೇಳಲು ಕಾರಣ ಕೂಡ ಇದೆ. ಶಾಲೆ ಸಮೀಪದಲ್ಲೇ ವೀರಭದ್ರೇಶ್ವರ ಸ್ವಾಮಿಯ ದೇವಸ್ಥಾನವಿದೆ. ಹಿಂದಿನಿಂದಲೂ ದೇವಾಲಯ ಸುತ್ತಮುತ್ತ ಮಾಂಸಾಹಾರ ನಿಷೇಧಿಸಲಾಗಿದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ನಡೆದು ಬಂದಿದ್ದು, ಶಾಲೆಯಲ್ಲಿ ಮೊಟ್ಟೆ ನೀಡಿ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಬೇಡಿ ಎಂದು ಪೋಷಕರು ಹೇಳುತ್ತಿದ್ದಾರೆ. ಇದನ್ನೂ ಓದಿ: ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣ – ಓವರ್ ಸ್ಪೀಡ್‌ನಿಂದ ಡಿವೈಡರ್‌ಗೆ ಡಿಕ್ಕಿ; ಓರ್ವ ಸಾವು

    ಇದೇ ಕಾರಣದಿಂದ ಕಳೆದ 3 ವರ್ಷಗಳ ಹಿಂದೆ ವಿದ್ಯಾರ್ಥಿಗಳಿಗೆ ಸರ್ಕಾರ ಮೊಟ್ಟೆ ವಿತರಿಸಲು ನಿರ್ಧರಿಸಿದಾಗಲೂ ಈ ಶಾಲೆಯಲ್ಲಿ ಮೊಟ್ಟೆ ಬದಲಿಗೆ ಬಾಳೆಹಣ್ಣು, ಚಿಕ್ಕಿ ನೀಡಲು ಶಾಲೆಯ ಎಸ್‌ಡಿಎಂಸಿ ನಿರ್ಧರಿಸಿದೆ. ಅಂದಿನಿಂದ ಇಲ್ಲಿಯವರೆಗೂ ಈ ನಿಯಮವನ್ನೇ ಪಾಲಿಸಿಕೊಂಡು ಬರಲಾಗ್ತಿದೆ. ಇದನ್ನೂ ಓದಿ: ಅವಳ ಮೂಗಿನ ತುದಿ ಕೋಪ ನಂಗಿಷ್ಟ!

    ಆದರೆ ಈಗ ಗ್ರಾಮದ ಕೆಲವರು ಮಕ್ಕಳಿಗೆ ಪೌಷ್ಟಿಕಾಹಾರ ಪೂರೈಕೆ ದೃಷ್ಟಿಯಿಂದ ಮೊಟ್ಟೆ ವಿತರಿಸಲು ಆಗ್ರಹಿಸಿದ್ದಾರೆ. ಶಿಕ್ಷಣ ಇಲಾಖೆ ಕೂಡ ಸರ್ಕಾರದ ನಿಯಮದಂತೆ ಮೊಟ್ಟೆ ಕೊಡಲು ಮುಂದಾಗಿದ್ದು, ಅಧಿಕಾರಿಗಳ ನಿರ್ಧಾರ ಗ್ರಾಮಸ್ಥರನ್ನ ಕೆರಳಿಸಿದೆ. ಮೊಟ್ಟೆ ತಿನ್ನುವ ಮಕ್ಕಳಿಗೆ ಅವರ ಮನೆಗೆ ಮೊಟ್ಟೆ ತಲುಪಿಸಿ. ಆದರೆ ಶಾಲೆಯಲ್ಲಿ ಮೊಟ್ಟೆ ವಿತರಿಸಿ ಜನರ ಭಾವನೆಗೆ ನೋವುಂಟು ಮಾಡಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಒಟ್ಟಾರೆ ಆಲಕೆರೆ ಗ್ರಾಮದ ಮೊಟ್ಟೆ ವಿವಾದ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಸಂದಿಗ್ಧ ಪರಿಸ್ಥಿತಿಗೆ ತಳ್ಳಿದೆ. ಮೊಟ್ಟೆ ಕೊಟ್ಟರೇ 80 ವಿದ್ಯಾರ್ಥಿಗಳು ಶಾಲೆ ಬಿಡುವ ಆತಂಕ ಒಂದೆಡೆಯಾದರೆ, ಮೊಟ್ಟೆ ಕೊಡದಿದ್ರೆ ಸರ್ಕಾರದ ಪೌಷ್ಟಿಕಾಹಾರ ಪೂರೈಕೆ ನಿಯಮ ಉಲ್ಲಂಘನೆಯಾಗುವ ಭಯ ಅಧಿಕಾರಿಗಳನ್ನು ಕಾಡುತ್ತಿದೆ.