Tag: ಮೊಮ್ಮಕ್ಕಳು

  • Mysuru | ನೀರಿನಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಜಲಸಮಾಧಿ

    Mysuru | ನೀರಿನಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಜಲಸಮಾಧಿ

    ಮೈಸೂರು: ನೀರಿನಲ್ಲಿ ಮುಳುಗಿ ತಾತ (Grandfather) ಹಾಗೂ ಇಬ್ಬರು ಮೊಮ್ಮಕ್ಕಳು (Grandchildren) ಜಲಸಮಾಧಿಯಾದ ಘಟನೆ ಮೈಸೂರು (Mysuru) ಜಿಲ್ಲೆ ಟಿ.ನರಸಿಪುರ (T Narasipura) ತಾಲೂಕಿನಲ್ಲಿ ನಡೆದಿದೆ.

    ಚೌಡಯ್ಯ (70), ಭರತ್ (13), ಧನುಷ್ (10) ಮೃತ ದುರ್ದೈವಿಗಳು. ಮೃತರು ಟಿ.ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳಾಗಿದ್ದು, ಕಾವೇರಿ ನದಿ ಬಳಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಇದನ್ನೂ ಓದಿ: ಜಮೀರ್ ಕಣ್ಣೀರು ಮತ್ತು 100 ಬಿರಿಯಾನಿ..!

    ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗಿದ್ದ ಹಿನ್ನೆಲೆ ತಾತ ಮಕ್ಕಳ ರಕ್ಷಣೆಗೆಂದು ತಾವೂ ನೀರಿಗಿಳಿದಿದ್ದರು. ಈ ವೇಳೆ ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೇ ಚೌಡಯ್ಯ ಕೂಡ ಸಾವನ್ನಪ್ಪಿದ್ದಾರೆ. ಮೂವರ ಮೃತದೇಹಗಳನ್ನು ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು?

  • ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಾಯಿ

    ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಾಯಿ

    ಹೈದರಾಬಾದ್: ಮದ್ಯದ ಅಮಲಿನಲ್ಲಿದ್ದ ಮಗನನ್ನು 55 ವರ್ಷದ ಮಹಿಳೆ ಕೊಡಲಿಯಿಂದ ಕೊಚ್ಚಿ ಕೊಂದಿರುವ ಘಟನೆ ವಿಜಯವಾಡದಲ್ಲಿ ನಡೆದಿದೆ.

    ಅಪ್ಪಲ ಬಾಲ ಕೋಟಾಯ್ಯ (35) ಮೃತ ದುರ್ದೈವಿಯಾಗಿದ್ದು, ಈತ ಟ್ರಕ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದನು. ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಅಪ್ಪಲ ಚಿಟ್ಟೆಮಾ ಎಂದು ಗುರುತಿಸಲಾಗಿದೆ.

    crime

    ಆರು ವರ್ಷಗಳ ಹಿಂದೆ ಅಪ್ಪಲ ಬಾಲ ಕೋಟಾಯ್ಯ, ಕಂಚಿಕಚೆರ್ಲಾದ ಸಿರಿಶಾರನ್ನು ಮದುವೆಯಾಗಿದ್ದನು. ಆದರೆ ಇತ್ತೀಚೆಗೆ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದನು. ಆದರೆ ಭಾನುವಾರ ರಾಮನವಮಿ ಆಚರಿಸಲು ಚಿಟ್ಟೆಮ್ಮ ತನ್ನ ಮೊಮ್ಮಕ್ಕಳನ್ನು (ಕೋಟಯ್ಯನ ಮಕ್ಕಳು) ಆಹ್ವಾನಿಸಿದ್ದಳು. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು- ಇಂದು ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

    crime

    ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಕುಡಿದ ಅಮಲಿನಲ್ಲಿ ಚಿಟ್ಟೆಮ್ಮ ಅವರ ಮನೆಗೆ ಅಪ್ಪಲ ಬಾಲ ಕೋಟಾಯ್ಯ ಬಂದಿದ್ದರು. ಈ ವೇಳೆ ಕೋಟಾಯ್ಯ ತನ್ನ ತಾಯಿ ಮತ್ತು ಇಬ್ಬರು ಮಕ್ಕಳ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ. ನಂತರ ಚಿಟ್ಟೆಮ್ಮ ಮಕ್ಕಳನ್ನು ರಕ್ಷಿಸಿ ಅಕ್ಕಪಕ್ಕದ ಮನೆಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ಇದನ್ನೂ ಓದಿ: ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ

    ಕೋಟಾಯ್ಯ ಮತ್ತೆ ತಮ್ಮ ಮೇಲೆ ಎಲ್ಲಿ ಹಲ್ಲೆ ನಡೆಸುತ್ತಾನೋ ಮತ್ತು ಆತನಿಂದ ತಮ್ಮ ಮೊಮ್ಮಕ್ಕಳನ್ನು ಹೇಗೆ ರಕ್ಷಿಸುವುದೋ ಎಂಬ ಭಯದಿಂದ ಚಿಟ್ಟೆಮ್ಮ ಕೊಡಲಿಯಿಂದ ಕೋಟಾಯ್ಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಕೋಟಾಯ್ಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಈ ಸಂಬಂಧ ಸಾಕ್ಷಿ ಹೇಳಿಕೆಗಳ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಬಡ ರೈತನ ಸಂಕಷ್ಟಕ್ಕೆ ಮಿಡಿದ ಜ್ಯೋತಿಷಿ ಹೃದಯ- ಎತ್ತುಗಳ ಕೊಡುಗೆ

    ಬಡ ರೈತನ ಸಂಕಷ್ಟಕ್ಕೆ ಮಿಡಿದ ಜ್ಯೋತಿಷಿ ಹೃದಯ- ಎತ್ತುಗಳ ಕೊಡುಗೆ

    – ಅಜ್ಜನಿಗೆ ಉಳುಮೆಯಲ್ಲಿ ಸಹಾಯ ಮಾಡಲು ಹೆಗಲು ಕೊಟ್ಟಿದ್ದ ಮೊಮ್ಮಕ್ಕಳು

    ಮಂಡ್ಯ: ಅಜ್ಜನಿಗೆ ಎತ್ತುಗಳನ್ನು ಕೊಳ್ಳಲು ಕಷ್ಟವಾಗಿರುವ ಕಾರಣ ಇಬ್ಬರು ಮೊಮ್ಮಕ್ಕಳು ನೊಗಕ್ಕೆ ಹೆಗಲು ಕೊಟ್ಟು ವ್ಯವಸಾಯ ಮಾಡುತ್ತಿರುವ ಮನಕಲಕುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಬಳಘಟ್ಟ ಗ್ರಾಮದಲ್ಲಿ ಜರುಗಿತ್ತು. ಈ ಸುದ್ದಿಯನ್ನು ಪಬ್ಲಿಕ್ ಟಿವಿ ಪ್ರಸಾರ ಮಾಡಿತ್ತು. ಈ ಸುದ್ದಿ ನೋಡಿದ ಜ್ಯೋತಿಷಿ ಕಮಲಾಕರ ಭಟ್ ಅವರು ಬಡ ರೈತನಿಗೆ ಎತ್ತುಗಳನ್ನು ನೀಡಲು ಮುಂದೆ ಬಂದಿದ್ದಾರೆ.

    ಎತ್ತುಗಳಿಲ್ಲದ ಕಾರಣ ಅಜ್ಜನಿಗೆ ಕಷ್ಟವಾಗಬಾರದು ಎಂದು ಮೊಮ್ಮಕ್ಕಳು ನೋಗವನ್ನು ಹೊತ್ತು ಹೊಲ ಉಳುಮೆ ಮಾಡುವ ಮೂಲಕ ಸಹಾಯವಾಗಿದ್ದರು. ಈ ಕುರಿತು ಬುಧವಾರ ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗಿತ್ತು. ವರದಿಯನ್ನು ನೋಡಿದ ಜ್ಯೋತಿಷಿ ಕಮಲಾಕರ ಭಟ್ ಅವರು ಅಜ್ಜನಿಗೆ ಎತ್ತುಗಳನ್ನು ಕೊಡಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಕಾಡಾನೆಗಳನ್ನು ಸ್ಥಳಾಂತರಿಸಿ, ಇಲ್ಲವೇ ನಮ್ಮನ್ನೇ ಸ್ಥಳಾಂತರಿಸಿ- ಸರ್ಕಾರಕ್ಕೆ ಮಲೆನಾಡಿಗರ ಆಗ್ರಹ

    ಬಳಘಟ್ಟ ಗ್ರಾಮದ ರೈತ ಸಣ್ಣಸ್ವಾಮಿ ಅವರು 1.5 ಎಕರೆ ಜಮೀನು ಹೊಂದಿದ್ದು, ಬೇಸಾಯ ಮಾಡಲು ಇವರ ಬಳಿ ಎತ್ತುಗಳಿಲ್ಲ. ಕೂಲಿ ಕೊಟ್ಟು ಉಳುಮೆ ಮಾಡಿಸಲು ಆರ್ಥಿಕ ಪರಿಸ್ಥಿತಿ ಚೆನ್ನಾಗಿ ಇಲ್ಲ. ಹೀಗಾಗಿ ಸಣ್ಣಸ್ವಾಮಿ ಅವರಿಗೆ ಅವರ ಮೊಮ್ಮಕ್ಕಳಾದ ವರ್ಷಿತಾ, ಅಂಕಿತ ಹೆಗಲು ಕೊಟ್ಟು ಸಹಾಯ ಮಾಡುತ್ತಿದ್ದಾರೆ.

    ಎತ್ತುಗಳ ರೀತಿ ನೊಗ ಹೊತ್ತು ಈ ಇಬ್ಬರು ಹೆಣ್ಣು ಮಕ್ಕಳು ಹೊಲದಲ್ಲಿ ನೆಟ್ಟಿರುವ ರಾಗಿಗೆ ಉಳಿಮೆ ಮಾಡಲು ಸಹಾಯಕರಾಗಿದ್ದಾರೆ. ಕಾಲೇಜಿಗೆ ಹೋಗುವ ಈ ಇಬ್ಬರು ಹೆಣ್ಣು ಮಕ್ಕಳು, ಬಿಡುವಿನ ವೇಳೆ ಜಮೀನಿಗೆ ಬಂದು ಅಜ್ಜನ ಜೊತೆ ಇದೇ ರೀತಿಯ ಸಹಾಯವನ್ನು ಮಾಡುತ್ತಿದ್ದಾರೆ. ನಮ್ಮ ಬಳಿ ಎತ್ತುಗಳಿಲ್ಲ ಅದಕ್ಕಾಗಿ ಈ ಪರಿಸ್ಥಿತಿ ಬಂದಿದೆ. ಕೂಲಿ ಕೊಟ್ಟು ವ್ಯವಸಾಯ ಮಾಡುವಷ್ಟು ಶಕ್ತಿ ನಮಗೆ ಇಲ್ಲ. ಯಾರಾದರೂ ಎತ್ತುಗಳನ್ನು ಕೊಡಿಸಿದರೆ ಸಹಾಯವಾಗುತ್ತದೆ ಎಂದು ಅಜ್ಜ ಹಾಗೂ ಮೊಮ್ಮಕ್ಕಳು ಕೇಳಿಕೊಂಡಿದ್ದರು.

  • ಅಜ್ಜನ ಕಷ್ಟಕ್ಕೆ ಮರುಗಿ ಎತ್ತುಗಳಾದ ಮೊಮ್ಮಕ್ಕಳು

    ಅಜ್ಜನ ಕಷ್ಟಕ್ಕೆ ಮರುಗಿ ಎತ್ತುಗಳಾದ ಮೊಮ್ಮಕ್ಕಳು

    – ಹೆಣ್ಣುಮಕ್ಕಳಿಂದಲೇ ನೊಗಕ್ಕೆ ಹೆಗಲು ಕೊಟ್ಟು ಉಳುಮೆ

    ಮಂಡ್ಯ: ಅಜ್ಜನಿಗೆ ಎತ್ತುಗೊಳ್ಳನ್ನು ಕೊಳ್ಳಲು ಕಷ್ಟವಾಗಿರುವ ಕಾರಣ ಇಬ್ಬರು ಮೊಮ್ಮಕ್ಕಳು ನೊಗಕ್ಕೆ ಹೆಗಲು ಕೊಟ್ಟು ವ್ಯವಸಾಯ ಮಾಡುತ್ತಿರುವ ಮನಕಲಕುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಬಳಘಟ್ಟ ಗ್ರಾಮದಲ್ಲಿ ನಡೆದಿದೆ.

    ಬಳಘಟ್ಟ ಗ್ರಾಮದ ರೈತ ಸಣ್ಣಸ್ವಾಮಿ ಅವರಿಗೆ 1.5 ಎಕರೆ ಜಮೀನು ಇದ್ದು, ಬೇಸಾಯ ಮಾಡಲು ಇವರ ಬಳಿ ಎತ್ತುಗಳಿಲ್ಲ. ಕೂಲಿ ಕೊಟ್ಟು ಉಳುಮೆ ಮಾಡಿಸಲು ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಹೀಗಾಗಿ ಸಣ್ಣಸ್ವಾಮಿ ಅವರಿಗೆ ಅವರ ಮೊಕ್ಕಳಾದ ವರ್ಷಿತಾ, ಅಂಕಿತ ಹೆಗಲು ಕೊಟ್ಟಿದ್ದಾರೆ. ಇದನ್ನೂ ಓದಿ: ವಿದ್ಯಾಪೀಠಕ್ಕೆ ಬನ್ನಿ – ಕಾಲೇಜ್‌, ಕೋರ್ಸ್‌ಗಳ ಬಗ್ಗೆ ಉಚಿತವಾಗಿ ಮಾಹಿತಿ ಪಡೆದುಕೊಳ್ಳಿ

    ಎತ್ತುಗಳ ರೀತಿ ನೊಗ ಹೊತ್ತು, ಇಬ್ಬರು ಹೆಣ್ಣು ಮಕ್ಕಳು ಹೊಲದಲ್ಲಿ ನೆಟ್ಟಿರುವ ರಾಗಿಗೆ ಉಳಿಮೆ ಮಾಡಲು ಸಹಾಯಕರಾಗಿದ್ದಾರೆ. ಕಾಲೇಜಿಗೆ ಹೋಗುವ ಈ ಇಬ್ಬರು ಹೆಣ್ಣು ಮಕ್ಕಳು, ಬಿಡುವಿನ ವೇಳೆ ಜಮೀನಿಗೆ ಬಂದು ಅಜ್ಜನ ಜೊತೆ ಇದೇ ರೀತಿಯ ಸಹಾಯವನ್ನು ಮಾಡುತ್ತಿದ್ದಾರೆ. ನಮ್ಮ ಬಳಿ ಎತ್ತುಗಳಿಲ್ಲ, ಅದಕ್ಕಾಗಿ ಈ ಪರಿಸ್ಥಿತಿ ಬಂದಿದೆ. ಕೂಲಿ ಕೊಟ್ಟು ವ್ಯವಸಾಯ ಮಾಡುವಷ್ಟು ಶಕ್ತಿ ನಮಗೆ ಇಲ್ಲ. ಯಾರಾದರೂ ಎತ್ತುಗಳನ್ನು ಕೊಡಿಸಿದರೆ ಸಹಾಯವಾಗುತ್ತದೆ ಎನ್ನುತ್ತಾರೆ ಅಜ್ಜ ಹಾಗೂ ಮೊಮ್ಮಕ್ಕಳು.

  • ಸರ್ಕಾರಿ ಶಾಲೆಯಲ್ಲಿ ಕನ್ನಡವೇ ಬೇಕು ಎನ್ನುತ್ತಿದ್ದಾರೆ ಮಾಜಿ ಸಿಎಂ..!

    ಸರ್ಕಾರಿ ಶಾಲೆಯಲ್ಲಿ ಕನ್ನಡವೇ ಬೇಕು ಎನ್ನುತ್ತಿದ್ದಾರೆ ಮಾಜಿ ಸಿಎಂ..!

    – ಸಿದ್ದರಾಮಯ್ಯ ಮೊಮ್ಮಕ್ಕಳು ಓದುತ್ತಿರೋದು ಇಂಗ್ಲಿಷ್ ಶಾಲೆಗಳಲ್ಲೇ

    ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಇಂಗ್ಲೀಷ್ ಮಾಧ್ಯಮ ಬೇಡ. ಕನ್ನಡವೇ ಮಾಧ್ಯಮ ಆಗಿರಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾದ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಕನ್ನಡವೇ ಸೌರ್ವಭಾಮ, ಇಂಗ್ಲೀಷ್ ಮಾಧ್ಯಮಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ `ಕನ್ನಡ ಮೇಷ್ಟ್ರು’ ಸಿದ್ದರಾಮಯ್ಯ ಅವರ ಕನ್ನಡ ಪ್ರೇಮದ ಅಸಲಿಯತ್ತು ಇಲ್ಲಿದೆ.

    ಹೌದು. ಸಿದ್ದರಾಮಯ್ಯನವರ ಮೊಮ್ಮಕ್ಕಳು ಇಂಗ್ಲೀಷ್ ಶಾಲೆಗಳಲ್ಲೇ ಓದುತ್ತಿದ್ದಾರೆ. ಹಿರಿಯ ಮಗ ರಾಕೇಶ್ ಪುತ್ರ ಧವನ್ ಪುತ್ರ ಕೆನೆಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಓದುತ್ತಿದ್ದಾರೆ. ಈ ಶಾಲೆಯಲ್ಲಿ ವರ್ಷಕ್ಕೆ ಡೊನೇಶನ್ 5ರಿಂದ 6 ಲಕ್ಷ ರೂಪಾಯಿ ಇರುತ್ತದೆ. ಇನ್ನು ಸಿದ್ದರಾಮಯ್ಯರ ಎರಡನೇ ಮೊಮ್ಮಗಳು ತನ್ಮಯಾ ಕೂಡ ಇಂಗ್ಲೀಷ್ ಮೀಡಿಯಾಂನಲ್ಲೇ ಓದುತ್ತಿದ್ದು, ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನಲ್ಲಿ ತನ್ಮಯಾ ವಿದ್ಯಾರ್ಥಿಯಾಗಿದ್ದಾರೆ.

    ಒಟ್ಟಿನಲ್ಲಿ ಸಿದ್ದರಾಮಯ್ಯನವರ ಮೊಮ್ಮಕ್ಕಳೆಲ್ಲಾ ಇಂಗ್ಲೀಷ್ ಮೀಡಿಯಂನಲ್ಲಿ ಓದಬಹುದು. ಬಡವರ ಮಕ್ಕಳಿಗೆ ಇಂಗ್ಲೀಷ್ ಮೀಡಿಯಂ ಬೇಡ್ವಾ..? ಸರ್ಕಾರಿ ಶಾಲೆಯಲ್ಲಿ ಇಂಗ್ಲೀಷ್ ಮೀಡಿಯಾಂನಲ್ಲಿ ಬಡವರ ಮಕ್ಕಳು ಓದಬಾರದಾ..? ನಿಮ್ಮ ಮೊಮ್ಮಕಳಿಗೊಂದು ನ್ಯಾಯ, ಬೇರೆಯವರಿಗೊಂದು ನ್ಯಾಯನಾ ಎಂಬಂತಹ ಪ್ರಶ್ನೆಗಳು ಇದೀಗ ಜನಸಾಮಾನ್ಯರಲ್ಲಿ ಮೂಡಿದೆ.

    ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರ ಮುಂದಿನ ವರ್ಷದಿಂದ 1 ಸಾವಿರ ಆಂಗ್ಲ ಮಾಧ್ಯಮ ಶಾಲೆ ತೆರೆಯಬೇಕು ಅನ್ನೋ ನಿಲುವಿಗೆ ಸಿದ್ದರಾಮಯ್ಯನವರು ಕಳೆದ ಒಂದು ವಾರದಿಂದ ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿ, ಕರ್ನಾಟಕದಲ್ಲಿ ಕನ್ನಡವೇ ಅಂತಿಮ ಭಾಷೆಯಾಗಬೇಕು. ಭಾಷೆಯ ವಿಚಾರದಲ್ಲಿ ಸರ್ಕಾರಕ್ಕೆ ಆದ್ಯತೆ ಬೇಕು. ಹೀಗಾಗಿ ಈ ಶಾಲೆಗಳನ್ನು ತೆರೆಯದಂತೆ ನಾನು ಕುಮಾರಸ್ವಾಮಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದ್ದರು. ಸದನದಲ್ಲಿಯೂ ಕನ್ನಡ ವಿಚಾರವಾಗಿ ಎಲ್ಲರ ಕಾಲೆಳೆಯುವ ಸಿದ್ದರಾಮಯ್ಯನವರು ತಮ್ಮ ಮೊಮ್ಮಕ್ಕಳನ್ನು ಇಂಗ್ಲಿಷ್ ಮೀಡಿಯಂಗೆ ಯಾಕೆ ಕಳುಹಿಸುತ್ತಾರೆ ಎಂಬ ಪ್ರಶ್ನೆಗಳು ಇದೀಗ ತೀವ್ರ ಚರ್ಚೆಯಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೊಮ್ಮಕ್ಕಳ ಪಾಲಿಗೆ ವಿಲನ್ ಆದ ಅಜ್ಜ!

    ಮೊಮ್ಮಕ್ಕಳ ಪಾಲಿಗೆ ವಿಲನ್ ಆದ ಅಜ್ಜ!

    ಯಾದಗಿರಿ: ತಂದೆಗೆ ಬರುವ ಆಸ್ತಿ ಪಾಲು ಕೇಳಿದ ಮೊಮ್ಮಕ್ಕಳ ಪಾಲಿಗೆ ಅಜ್ಜ ವಿಲನ್ ಆಗಿದ್ದಾನೆ. ಖಳನಾಯಕನಂತೆ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಮೊಮ್ಮಕ್ಕಳಿಗೆ ಥಳಿಸಿದ್ದಾನೆ.

    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೊಮ್ಮಕ್ಕಳಾದ ಗೋವಿಂದ ಹಾಗೂ ವಿಜಯಲಕ್ಷ್ಮಿ, ಸೊಸೆಯಾದ ಹುಲಿಗೆಮ್ಮ ಆಸ್ತಿ ಹಾಗೂ ರಾಶಿ ಮಾಡಿರುವ ತಮ್ಮ ಪಾಲಿನ ಭತ್ತ ಕೇಳಿದ್ದಾರೆ. ಆದ್ರೆ ಅಜ್ಜ ಯಂಕಣ್ಣ ದೊಣ್ಣೆ ಹಿಡಿದುಕೊಂಡು ಹೊಡೆದಿದ್ದಾರೆ.

    ತಾತ ಹಾಗೂ 8 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ ಈ ಘಟನೆ ಜರುಗಿದೆ. ಘಟನೆಯಲ್ಲಿ ಮೊಮ್ಮಕಳು ಹಾಗೂ ಸೊಸೆಗೆ ಗಾಯವಾಗಿದ್ದು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದುವೆಯಾದ ನಿನ್ನ ಮಗ ಅನೈತಿಕ ಸಂಬಂಧ ಹೊಂದಿದ್ದಾನೆ. ನೀನಾದರೂ ಆಸ್ತಿಯಲ್ಲಿ ಪಾಲು ನೀಡೆಂದು ಮೊಮ್ಮಕ್ಕಳು ಅಜ್ಜನ ದುಂಬಾಲು ಬಿದ್ದಿದ್ದಾರೆ.

    ಅಜ್ಜನ ವಿರುದ್ಧ ಈಗ ಮೊಮ್ಮಗ ಗೋವಿಂದ ದೂರು ನೀಡಿದ್ದಾನೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಸ್ತಿ ನೀಡಲು ಒಪ್ಪದ್ದಕ್ಕೆ ಅಜ್ಜನ ಮರ್ಮಾಂಗ ಹಿಚುಕಿ ಕೊಲೆಗೈದ ಮೊಮ್ಮಕ್ಕಳು!

    ಆಸ್ತಿ ನೀಡಲು ಒಪ್ಪದ್ದಕ್ಕೆ ಅಜ್ಜನ ಮರ್ಮಾಂಗ ಹಿಚುಕಿ ಕೊಲೆಗೈದ ಮೊಮ್ಮಕ್ಕಳು!

    ಬಾಗಲಕೋಟೆ: ಆಸ್ತಿಗಾಗಿ ಮೊಮ್ಮಕ್ಕಳು ತಮ್ಮ ಅಜ್ಜನ ಮರ್ಮಾಂಗವನ್ನು ಹಿಚುಕಿ ಕೊಲೆ ಮಾಡಿದ ಅಮಾನವೀಯ ಘಟನೆ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ನೀರಲಕೇರಿ ಗ್ರಾಮದ ಯಲ್ಲಪ್ಪ ಪಟಾತ್ (85) ಮೃತ ಹಿರಿಯ ವ್ಯಕ್ತಿ. ಯಲ್ಲಪ್ಪ ಅವರ ಮೊಮ್ಮಕ್ಕಳಾದ ಬೀರಪ್ಪ ಪಟಾತ್, ಸೋಮವ್ವ ಕೋರಕೊಪ್ಪ ಕೊಲೆಗೈದ ಆರೋಪಿಗಳು.

    ನಡೆದಿದ್ದು ಏನು?
    ಮೃತ ಅಜ್ಜ ಯಲ್ಲಪ್ಪ ಅವರು ತಮ್ಮ ಪಾಲಿನ ಆಸ್ತಿಯನ್ನು ಮಗಳ ಹೆಸರಿಗೆ ವರ್ಗಾವಣೆ ಮಾಡಲು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡೆಸಿದ ಬೀರಪ್ಪ ಹಾಗೂ ಸೋಮವ್ವ ಆಸ್ತಿ ತಮಗೆ ಮಾತ್ರ ಸೇರಬೇಕೆಂದು ಯಲ್ಲಪ್ಪ ಅವರಿಗೆ ತಾಕೀತು ಮಾಡಿದ್ದರು. ಆದರೆ ಇದಕ್ಕೆ ಯಲ್ಲಪ್ಪ ಒಪ್ಪದೇ ಇದ್ದಾಗ
    ಜೂನ್ 17 ರಂದು ಕೊಲೆ ಮಾಡಿದ್ದಾರೆ.

    ಯಲ್ಲಪ್ಪ ಅವರ ಅಂತ್ಯಸಂಸ್ಕಾರ ಮಾಡಲು ಧಾರ್ಮಿಕ ವಿಧಿವಿಧಾನಕ್ಕೆ ಬೀರಪ್ಪ ಹಾಗೂ ಸೋಮವ್ವ ಮುಂದಾಗಿದ್ದರು. ಕೃತ್ಯದ ಮಾಹಿತಿ ಪಡೆದು ಗ್ರಾಮಕ್ಕೆ ಭೇಟಿ ನೀಡಿದ ಕೆರೂರು ಪೊಲೀಸರು ಶವವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು, ಯಲ್ಲಪ್ಪ ಅವರ ಮರ್ಮಾಂಗಕ್ಕೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎನ್ನುವ ಮಾಹಿತಿ ಮರಣೋತ್ತರ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಶಂಕೆಯ ಆಧಾರದಲ್ಲಿ ಬೀರಪ್ಪ ಪಟಾತ್ ಮತ್ತು ಸೋಮವ್ವ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ. ಆರೋಪಿಗಳಾದ ಬೀರಪ್ಪ ಪಟಾತ್ ಹಾಗೂ ಸೋಮವ್ವ ಕೋರಕೊಪ್ಪರನ್ನು ಕೆರೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.