Tag: ಮೊರದಾಬಾದ್

  • Lok Sabha Elections 2024- ಶುಕ್ರವಾರ ಮತದಾನ ಮಾಡಿದ್ದ ಅಭ್ಯರ್ಥಿ ಇಂದು ನಿಧನ

    Lok Sabha Elections 2024- ಶುಕ್ರವಾರ ಮತದಾನ ಮಾಡಿದ್ದ ಅಭ್ಯರ್ಥಿ ಇಂದು ನಿಧನ

    ಲಕ್ನೋ: ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸರ್ವೇಶ್ ಸಿಂಗ್ (Kunwar Sarvesh Singh) ಇಂದು ನಿಧನರಾಗಿದ್ದಾರೆ. ಮೊರಾದಾಬಾದ್‌ನಲ್ಲಿ ಶುಕ್ರವಾರ ಚುನಾವಣೆ ನಡೆದಿತ್ತು.

    72 ವರ್ಷದ ಸಿಂಗ್ ಅವರು ಮಾರ್ಚ್ ತಿಂಗಳಲ್ಲಿ ಹಲ್ಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದಿನಿಂದ ಅವರು ಅಸ್ವಸ್ಥರಾಗಿದ್ದರು. ಏಪ್ರಿಲ್ 19 ರಂದು ಅವರು ತಮ್ಮ ಹುಟ್ಟೂರಾದ ರತುಪುರ ಗ್ರಾಮದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇಂದು ಬೆಳಗ್ಗೆ ಅವರನ್ನು ಚಿಕಿತ್ಸೆಗಾಗಿ ಏಮ್ಸ್‌ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಹೃದಯಾಘಾತದಿಂದ ನಿಧನರಾದರು ಎಂದು ಸಂಬಂಧಿಕರು ಹೇಳಿದ್ದಾರೆ.

    ಸರ್ವೇಶ್ ಸಿಂಗ್ 1991 ರಲ್ಲಿ ಬಿಜೆಪಿ (BJP) ಟಿಕೆಟ್‌ನಲ್ಲಿ ಠಾಕುರ್ದ್ವಾರ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. 2009ರಲ್ಲಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ವಿರುದ್ಧ ಸುಮಾರು 50 ಸಾವಿರ ಮತಗಳಿಂದ ಸೋತಿದ್ದರು. 2014ರಲ್ಲಿ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಇದಕ್ಕೂ ಮೊದಲು ಅವರು ಜಿಲ್ಲೆಯ ಠಾಕುರ್ದ್ವಾರ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಮೊರಾದಾಬಾದ್ ಲೋಕಸಭಾ ಕ್ಷೇತ್ರದಿಂದ ಸರ್ವೇಶ್ ಸಿಂಗ್ ಅವರನ್ನು ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿತ್ತು. ಇದನ್ನೂ ಓದಿ: 7 ಲಕ್ಷ ರೂ. ವರೆಗೆ ತೆರಿಗೆ ಕಟ್ಟುವಂತಿಲ್ಲ – 10 ವರ್ಷಗಳ ಸಾಧನೆ ಬಣ್ಣಿಸಿದ ಮೋದಿ

  • ಪತ್ನಿಯನ್ನು ಅಪ್ಪಿಕೊಂಡು ಹೊಡೆದ ಗುಂಡು ತನಗೂ ಮುಳುವಾಯ್ತು- ದಂಪತಿ ಸಾವು

    ಪತ್ನಿಯನ್ನು ಅಪ್ಪಿಕೊಂಡು ಹೊಡೆದ ಗುಂಡು ತನಗೂ ಮುಳುವಾಯ್ತು- ದಂಪತಿ ಸಾವು

    ಲಕ್ನೋ: ಪತ್ನಿಯ (Wife) ಮೇಲೆ ಹಾರಿಸಿದ ಗುಂಡು ತನಗೂ ತಗುಲಿ ದಂಪತಿ (Couple) ಸಾವನ್ನಪ್ಪಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಉತ್ತರ ಪ್ರದೇಶದ ಮೊರದಾಬಾದ್‌ನಲ್ಲಿ (Moradabad) ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ತಬ್ಬಿಕೊಂಡು ಗುಂಡು ಹಾರಿಸಿದ್ದ. ಅದೇ ಗುಂಡು ತನಗೂ ತಗುಲಿ ಇಬ್ಬರೂ ಸಾವನ್ನಪ್ಪಿದ್ದಾರೆ.

    ಅನೇಕ್ ಪಾಲ್ (40) ಹಾಗೂ ಆತನ ಪತ್ನಿ ಸುಮನ್ ಪಾಲ್ (38) ಇಬ್ಬರೂ ಮೊಬೈಲ್ ಫೋನ್ ಕಳೆದು ಹೋಗಿದ್ದಕ್ಕಾಗಿ ಮಂಗಳವಾರ ಜಗಳವಾಡಿದ್ದರು. ಗಲಾಟೆ ತಿಳಿಯಾದ ಬಳಿಕ ಅನೇಕ್ ಪಾಲ್ ರಾತ್ರಿ ಪ್ರಾರ್ಥನೆ ಮುಗಿಸಿ ತನ್ನ ಪತ್ನಿಯ ಬಳಿಗೆ ಹೋಗಿದ್ದಾನೆ. ಏಕಾಏಕಿ ಪತ್ನಿಯನ್ನು ಅಪ್ಪಿಕೊಂಡು ಆಕೆಯ ಬೆನ್ನಿಗೆ ಗುಂಡು ಹಾರಿಸಿದ್ದಾನೆ. ಆದರೆ ಆತ ಪತ್ನಿಯನ್ನು ಅಪ್ಪಿಕೊಂಡಿದ್ದ ಕಾರಣ ಅದೇ ಗುಂಡು ಅನೇಕ್ ಪಾಲ್‌ನ ಎದೆಗೂ ತಗುಲಿದೆ. ಇದನ್ನೂ ಓದಿ: Biparjoy Cyclone ಅಬ್ಬರ ನಡುವೆ ಹೆಣ್ಣುಮಗುವಿಗೆ ‘ಬಿಪರ್‌ಜಾಯ್‌’ ಅಂತ ಹೆಸರಿಟ್ಟ ದಂಪತಿ

    ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾರೂ ಇಬ್ಬರೂ ಸಾವನ್ನಪ್ಪಿದ್ದಾರೆ. ಅನೇಕ್ ಪಾಲ್ ದೇಶೀಯ ನಿರ್ಮಿತ ಬಂದೂಕು ಬಳಸಿದ್ದು, ಅದನ್ನು ಆತ ಹೇಗೆ ಸಂಗ್ರಹಿಸಿದ್ದ ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ದಂಪತಿಗೆ ಒಂದು ಹೆಣ್ಣು ಹಾಗೂ ಮೂವರು ಗಂಡು ಮಕ್ಕಳಿದ್ದಾರೆ. ಇದೀಗ ಹೆಚ್ಚಿನ ತನಿಖೆಗೆ ದಂಪತಿಯ ಕುಂಟುಂಬದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಯುವತಿ ಹತ್ಯೆಗೈದು ಕುತ್ತಿಗೆಯಲ್ಲಿ ಚಾಕು ಇಟ್ಟು ಸ್ಕೂಟಿ ಕೊಂಡೊಯ್ದರು!