Tag: ಮೊರ್ಬಿ

  • ಗುಜರಾತ್ ಸೇತುವೆ ಕುಸಿತ – ಇಂದು ಮೊರ್ಬಿಗೆ ಪ್ರಧಾನಿ ಮೋದಿ ಭೇಟಿ

    ಗುಜರಾತ್ ಸೇತುವೆ ಕುಸಿತ – ಇಂದು ಮೊರ್ಬಿಗೆ ಪ್ರಧಾನಿ ಮೋದಿ ಭೇಟಿ

    ನವದೆಹಲಿ: ಗುಜರಾತ್‌ನ (Gujarat) ಮೊರ್ಬಿಯಲ್ಲಿ (Morbi Bridge Collapse) ಹಳೆಯ ತೂಗು ಸೇತುವೆ ಕುಸಿದು 135 ಜನರ ಸಾವಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಅಪಘಾತ ಸ್ಥಳಕ್ಕೆ ಭೇಟಿ ನೀಡಲಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ‌. ಜೊತೆಗೆ ಗಾಯಾಳುಗಳನ್ನು ಭೇಟಿ ಮಾಡಲಿದ್ದಾರೆ.

    ಪ್ರಧಾನಿ ಮೋದಿ ಇಂದು ಮಧ್ಯಾಹ್ನ 3:45ಕ್ಕೆ ಅಪಘಾತ ಸಂಭವಿಸಿದ ಮೊರ್ಬಿ ಸೇತುವೆ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಮೊರ್ಬಿ ಸಿವಿಲ್ ಆಸ್ಪತ್ರೆಗೆ ಪ್ರಧಾನಿ ಭೇಟಿ ನೀಡಲಿದ್ದು, ಸಂಜೆ 4:15ಕ್ಕೆ ಎಸ್ಪಿ ಕಚೇರಿಗೆ ತೆರಳಲಿದ್ದಾರೆ. ಇದನ್ನೂ ಓದಿ: ಮೊರ್ಬಿ ತೂಗು ಸೇತುವೆ ದುರಂತ – ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ

    ಅವರ ಇಂದಿನ ಬೇರೆಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದ್ದು, ಪ್ರಧಾನಿಗಳ ಗುಜರಾತ್ ಭೇಟಿಯನ್ನು ಪ್ರಧಾನಿ ಕಾರ್ಯಲಯ ಖಚಿತಪಡಿಸಿದೆ. ಈ ಹಿಂದೆ ಮೃತರ ಕುಟುಂಬಗಳಿಗೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಣೆ ಮಾಡಿದ್ದ ಅವರು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಂತಾಪ ಸೂಚಿಸಿದ್ದರು.

    ಗುಜರಾತ್‌ನ ಮೊರ್ಬಿ ನಗರದಲ್ಲಿನ ಮಚ್ಚು ನದಿಗೆ ಅಡ್ಡಲಾಗಿ ಹಳೆಯದಾದ ತೂಗು ಸೇತುವೆ ಕಟ್ಟಲಾಗಿತ್ತು. ಶತಮಾನಗಳಷ್ಟು ಹಳೆತಾದ ಈ ಸೇತುವೆ ನವೀಕರಣಗೊಂಡ ಮೂರು ದಿನಗಳಿಗೆ ಅಂದರೆ ಭಾನುವಾರ ಸಂಜೆ ಕುಸಿದು 135 ಜನರು ಸಾವನ್ನಪ್ಪಿದರು. ಇದರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಮೃತರಾಗಿದ್ದಾರೆ. ಸೇತುವೆ ಮೇಲೆ ಅಗತ್ಯಕ್ಕಿಂತ ಹೆಚ್ಚು ಜನರು ಕಿಕ್ಕಿರಿದು ತುಂಬಿದ್ದರು. ಅತಿಯಾದ ಭಾರ ಮತ್ತು ನೂಕುನುಗ್ಗಲು ಉಂಟಾದ ಹಿನ್ನೆಲೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಗುಜರಾತ್‍ನ ಮೋರ್ಬಿ ದುರಂತ- ಉತ್ತರವಿಲ್ಲದ ಐದು ಪ್ರಶ್ನೆಗಳು

    Live Tv
    [brid partner=56869869 player=32851 video=960834 autoplay=true]

  • ಮೊರ್ಬಿ ತೂಗು ಸೇತುವೆ ದುರಂತ – ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ

    ಮೊರ್ಬಿ ತೂಗು ಸೇತುವೆ ದುರಂತ – ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ

    ನವದೆಹಲಿ: ಗುಜರಾತ್‌ನ (Gujarat) ಮೊರ್ಬಿ (Morbi) ತೂಗು ಸೇತುವೆ (Bridge) ಕುಸಿತ ಪ್ರಕರಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ (Supreme Court) ಒಪ್ಪಿಕೊಂಡಿದೆ. ನವೆಂಬರ್ 14 ರಂದು ಕೋರ್ಟ್ ವಿಚಾರಣೆ ನಡೆಸಲಿದೆ.

    ವಕೀಲ ವಿಶಾಲ್ ತಿವಾರಿ ಈ ಪಿಐಎಲ್ ಸಲ್ಲಿಸಿದ್ದರು. ಅರ್ಜಿಯಲ್ಲಿ, ಸೇತುವೆ ಕುಸಿದು 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ 40ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ರಚನೆ ಮಾಡಿದೆ. ಆದರೆ ಚುನಾವಣಾ ರಾಜ್ಯವಾಗಿರುವ ಹಿನ್ನೆಲೆ ಸ್ವತಂತ್ರ ತನಿಖೆಗೆ ಹಲವು ನಾಯಕರು ಮನವಿ ಮಾಡಿದ್ದಾರೆ.

    ಈ ಹಿನ್ನೆಲೆ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು. ಈ ದುರ್ಘಟನೆ ಬಗ್ಗೆ ನಿಖರವಾದ ಕಾರಣ ಪತ್ತೆಹಚ್ಚಬೇಕು. ಜೊತೆಗೆ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಲಾಗಿದೆ. ಇದನ್ನೂ ಓದಿ: ಗುಜರಾತ್‍ನ ಮೋರ್ಬಿ ದುರಂತ- ಉತ್ತರವಿಲ್ಲದ ಐದು ಪ್ರಶ್ನೆಗಳು

    ಇದರೊಂದಿಗೆ ದೇಶದಲ್ಲಿರುವ ಹಳೆಯ ಮತ್ತು ಅಪಾಯಕಾರಿ ಸ್ಮಾರಕಗಳು, ಸೇತುವೆಗಳ ಸಮೀಕ್ಷೆ ಮಾಡಿ, ಅದರ ಅಪಾಯದ ಮೌಲ್ಯಮಾಪನ ಮಾಡಬೇಕು. ಇದಕ್ಕಾಗಿ ಸಮಿತಿಯನ್ನು ರಚಿಸಬೇಕು. ಈ ನಿಟ್ಟಿನಲ್ಲಿ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಲಯಕ್ಕೆ ಕೋರಲಾಗಿದೆ. ಇದನ್ನೂ ಓದಿ: ಮೋರ್ಬಿ ದುರಂತ ರಾಜಕೀಯಗೊಳಿಸೋದು ಅಗೌರವ – ಮೃದು ಸ್ವಭಾವ ತೋರಿದ ರಾಹುಲ್

    Live Tv
    [brid partner=56869869 player=32851 video=960834 autoplay=true]

  • ತೂಗು ಸೇತುವೆ ದುರಂತ- ಸಾವಿನ ಸಂಖ್ಯೆ 132ಕ್ಕೆ ಏರಿಕೆ; ಸ್ಥಳಕ್ಕೆ ಮೋದಿ ಭೇಟಿ ನೀಡುವ ಸಾಧ್ಯತೆ

    ತೂಗು ಸೇತುವೆ ದುರಂತ- ಸಾವಿನ ಸಂಖ್ಯೆ 132ಕ್ಕೆ ಏರಿಕೆ; ಸ್ಥಳಕ್ಕೆ ಮೋದಿ ಭೇಟಿ ನೀಡುವ ಸಾಧ್ಯತೆ

    ಅಹಮದಾಬಾದ್: ಗುಜರಾತ್‍ನ (Gujarat) ಮೊರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ (Cable Bridge Collapse) ದುರಂತದಲ್ಲಿ 132 ಮಂದಿ ಬಲಿಯಾಗಿದ್ದಾರೆ.

    ಮಚ್ಚು ನದಿಗೆ ನಿರ್ಮಿಸಿರುವ ಮೊರ್ಬಿ ತೂಗು ಸೇತುವೆ ನಿನ್ನೆ ಕುಸಿದು ಬಿದ್ದು ದುರಂತ ಸಂಭವಿಸಿದೆ. ನಾಪತ್ತೆಯಾದವರಿಗಾಗಿ, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಎನ್‍ಡಿಆರ್‌ಎಫ್, ವಾಯುಪಡೆ, ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ದೋಣಿ, ಬೋಟ್‍ಗಳ ಸಹಾಯದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಈಗಾಗಲೇ 177ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದಾರೆ(Rescue).

    140ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಈ ತೂಗು ಸೇತುವೆ ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೇಬಲ್‍ಗಳ ಸಹಾಯದಿಂದ ಬ್ರಿಟಿಷರು ನಿರ್ಮಿಸಿರುವ ಅತಿ ಉದ್ದದ ತೂಗು ಸೇತುವೆ ಇದಾಗಿದೆ. ನಿನ್ನೆ ರಜೆ ದಿನದ ಹಿನ್ನೆಲೆ ಈ ಪ್ರದೇಶದಲ್ಲಿ ಜನ ದಟ್ಟನೆ ಇತ್ತು. ನೂರು ಜನರ ಸಾಮರ್ಥ್ಯಯುಳ್ಳ ಸೇತುವೆ ಮೇಲೆ ಐದು ನೂರಕ್ಕೂ ಅಧಿಕ ಮಂದಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೇಬಲ್ ಕಟ್ ಆಗಿ ಧರಗೆ ಉರುಳಿದೆ ಎನ್ನಲಾಗುತ್ತಿದೆ.

    ಶಿಥಿಲಗೊಂಡಿದ್ದ ಹಿನ್ನೆಲೆ 2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗಿತ್ತು. ನವೀಕರಣಗೊಂಡ ಸೇತುವೆಯನ್ನು ಐದು ದಿನಗಳ ಹಿಂದೆ ಉದ್ಘಾಟಿಸಲಾಗಿತ್ತು. ಮೂರು ದಿನದ ಹಿಂದೆ ಜನರ ಪ್ರವೇಶಕ್ಕೆ ಮುಕ್ತಗೊಳಿಸಲಾಗಿತ್ತು. ಈಗ ಏಕಾಏಕಿ ಕುಸಿದಿರುವುದು ಅಕ್ರಮ ಕಾಮಗಾರಿ ಅನುಮಾನಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಇದನ್ನೂ ಓದಿ: 5 ದಿನಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಗುಜರಾತ್‌ನ ಕೇಬಲ್‌ ಸೇತುವೆ ಕುಸಿತ – ಅಪಾಯದಲ್ಲಿ 100ಕ್ಕೂ ಹೆಚ್ಚು ಮಂದಿ

    ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆ ಇದೆ. ಈಗಾಗಲೇ ಮೃತರ ಕುಟುಂಬಕ್ಕೆ ಸಾಂತ್ವಾನ ತಿಳಿಸಿರುವ ಅವರು ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಐವತ್ತು ಸಾವಿರ ಪರಿಹಾರ ನೀಡಿದ್ದಾರೆ. ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ತೂಗು ಸೇತುವೆ ಕುಸಿತ – ಸಾವಿನ ಸಂಖ್ಯೆ 60ಕ್ಕೇರಿಕೆ, ನೂರಾರು ಮಂದಿ ನೀರುಪಾಲು

    Live Tv
    [brid partner=56869869 player=32851 video=960834 autoplay=true]

  • ಗುಜರಾತ್‌ನಲ್ಲಿ ತೂಗು ಸೇತುವೆ ಕುಸಿತ – ಸಾವಿನ ಸಂಖ್ಯೆ 60ಕ್ಕೇರಿಕೆ, ನೂರಾರು ಮಂದಿ ನೀರುಪಾಲು

    ಗುಜರಾತ್‌ನಲ್ಲಿ ತೂಗು ಸೇತುವೆ ಕುಸಿತ – ಸಾವಿನ ಸಂಖ್ಯೆ 60ಕ್ಕೇರಿಕೆ, ನೂರಾರು ಮಂದಿ ನೀರುಪಾಲು

    ಗಾಂಧೀನಗರ: ಈಚೆಗಷ್ಟೇ ನವೀಕರಣಗೊಂಡು ಉದ್ಘಾಟನೆಯಾಗಿದ್ದ ಗುಜರಾತ್‌ನ (Gujarat) ತೂಗು ಸೇತುವೆ (Cable Bridge Collapse) ಕುಸಿತದಿಂದಾಗಿ ಈವರೆಗೆ 60 ಮಂದಿ ಸಾವನ್ನಪ್ಪಿದ್ದು, ನೂರಾರು ಅಪಾಯದಲ್ಲಿ ಸಿಲುಕಿದ್ದಾರೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.

    ಕುಸಿತದ ವೇಳೆ ಸೇತುವೆ ಮೇಲೆ 500ಕ್ಕೂ ಹೆಚ್ಚು ಮಂದಿ ಇದ್ದರು. ಕುಸಿತದಿಂದಾಗಿ ಇನ್ನೂ 100ಕ್ಕೂ ಹೆಚ್ಚು ಮಂದಿ ನೀರುಪಾಲಾಗಿದ್ದಾರೆ. ಅಪಾಯದಲ್ಲಿದ್ದವರ ರಕ್ಷಣೆ ಕಾರ್ಯಾಚರಣೆ ಭರದಿಂದ ಸಾಗಿದೆ. ಇದನ್ನೂ ಓದಿ: 5 ದಿನಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಗುಜರಾತ್‌ನ ಕೇಬಲ್‌ ಸೇತುವೆ ಕುಸಿತ – ಅಪಾಯದಲ್ಲಿ 100ಕ್ಕೂ ಹೆಚ್ಚು ಮಂದಿ

    ಇಂದು ಗುಜರಾತ್‌ನಲ್ಲಿದ್ದ ಪ್ರಧಾನಿ ನರೇಂದ್ರ ಅವರು ತುರ್ತು ರಕ್ಷಣಾ ಕಾರ್ಯಾಚರಣೆಗೆ ಆದೇಶ ನೀಡಿದ್ದಾರೆ. ಗಾಯಾಳುಗಳನ್ನು ರಕ್ಷಿಸುವ ಪ್ರಯತ್ನದಲ್ಲಿ ಹಲವು ಸ್ಥಳೀಯರು ಸಹ ಕೈಜೋಡಿಸಿದ್ದಾರೆ. ಪ್ರಧಾನಿಯವರು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಮಾತನಾಡಿದ್ದು, ಪರಿಸ್ಥಿತಿಯನ್ನು ಅವಲೋಕಿಸುವಂತೆ ಹೇಳಿದರು. ಅಪಘಾತದ ಸುದ್ದಿ ಬರುತ್ತಿದ್ದಂತೆ ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಮೊರ್ಬಿಗೆ ಧಾವಿಸಿದ್ದಾರೆ.

    ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಲಾಗಿದೆ. ಮೃತರ ಕುಟುಂಬಕ್ಕೆ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ರಾಜ್ಯ ಸರ್ಕಾರ ನೀಡಲಿದೆ. ಇದನ್ನೂ ಓದಿ: 50ಕ್ಕೂ ಹೆಚ್ಚು ಜನರನ್ನು ಹೊತ್ತು ಹಳ್ಳದಾಟುತ್ತಿದ್ದಾಗ ಸಿಲುಕಿದ ಲಾರಿ

    ಮೊರಬಿ ಪಟ್ಟಣಕ್ಕೆ ಭೇಟಿ ನೀಡುವ ಪ್ರವಾಸಿಗರ ಪ್ರಮುಖ ಆಕರ್ಷಣಿಯ ಕೇಂದ್ರವಾಗುರುವ ತೂಗು ಸೇತುವೆ ಇದಾಗಿದೆ. ಸೇತುವೆಯ ನವೀಕರಣಕ್ಕೆ ಖಾಸಗಿ ಒಡೆತನದ ಒರೆವಾ ಕಂಪನಿಗೆ ನೀಡಲಾಗಿತ್ತು. ಶಿಥಿಲಗೊಂಡಿದ್ದ ಹಿನ್ನೆಲೆ ನವೀಕರಣಕ್ಕೆ ನೀಡಲಾಗಿತ್ತು. ನವೀಕರಣಕ್ಕಾಗಿ ಆರು ತಿಂಗಳ ಹಿಂದೆ ಬಂದ್ ಮಾಡಲಾಗಿತ್ತು. ಎರಡು ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿತ್ತು. 2001 ರಲ್ಲಿ ಗುಜರಾತ್‌ನಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ ಮೊದಲ ಬಾರಿಗೆ ಸೇತುವೆಯು ಹಾನಿಗೊಳಗಾಗಿತ್ತು. 140 ವರ್ಷದ ಹಳೆಯ ತೂಗು ಸೇತುವೆ ಇದಾಗಿತ್ತು.

    Live Tv
    [brid partner=56869869 player=32851 video=960834 autoplay=true]