Tag: ಮೊಳೆ

  • 3 ಹೆಣ್ಣು ಹೆತ್ತು, ಗಂಡು ಮಗು ಆಗಲಿ ಅಂತ ಹಣೆಗೆ ಮೊಳೆ ಹೊಡೆದುಕೊಂಡ ಗರ್ಭಿಣಿ!

    3 ಹೆಣ್ಣು ಹೆತ್ತು, ಗಂಡು ಮಗು ಆಗಲಿ ಅಂತ ಹಣೆಗೆ ಮೊಳೆ ಹೊಡೆದುಕೊಂಡ ಗರ್ಭಿಣಿ!

    ಇಸ್ಲಾಮಾಬಾದ್‌: ಗಂಡು ಮಗುವಾಗುತ್ತದೆ ಎಂಬ ಮೂಢನಂಬಿಕೆಯಿಂದ ಪಾಕಿಸ್ತಾನದ ಗರ್ಭಿಣಿಯೊಬ್ಬರು ತಲೆಗೆ ಮೊಳೆ ಹೊಡೆದುಕೊಂಡಿರುವ ಪ್ರಸಂಗ ನಡೆದಿದೆ.

    ದಕ್ಷಿಣ ಏಷ್ಯಾದಲ್ಲಿ ಹೆಣ್ಣುಮಕ್ಕಳಿಗಿಂತ ಗಂಡು, ಪೋಷಕರಿಗೆ ಉತ್ತಮ ಆರ್ಥಿಕ ಭದ್ರತೆ ಒದಗಿಸುತ್ತಾನೆ ಎಂಬುದು ನಂಬಿಕೆ. ಈ ಹಿನ್ನೆಲೆಯಲ್ಲಿ ಪಾಕ್‌ ಗರ್ಭಿಣಿಯೊಬ್ಬರು ತಮಗೆ ಗಂಡು ಮಗು ಆಗಲಿ ಎಂದು ಗುಂಡು ಸೂಜಿಯಂತಹ ಮೊಳೆಗಳನ್ನು ತನ್ನ ಹಣೆಗೆ ಹೊಡೆದುಕೊಂಡಿದ್ದಾರೆ ವೈದ್ಯ ಹೈದರ್‌ ಖಾನ್‌ ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ್ದಕ್ಕಾಗಿ ಭಯಭೀತಗೊಳಿಸುವುದು ದಬ್ಬಾಳಿಕೆ, ಮುಸಲ್ಮಾನರ ಶೋಷಣೆಯಾಗಿದೆ: ಪಾಕ್‌ ಸಚಿವ

    ಮಹಿಳೆಗೆ ಯಾವುದೇ ಮಾನಸಿಕ ಸಮಸ್ಯೆ ಇಲ್ಲ. ಆದರೆ ಅತಿಯಾದ ನೋವಿನಿಂದಾಗಿ ಅವರು ಆಸ್ಪತ್ರೆಗೆ ಬಂದಿದ್ದರು. ಈಕೆಗೆ ಮೂವರು ಹೆಣ್ಣುಮಕ್ಕಳಿದ್ದಾರೆ. ಈಗ ಮತ್ತೆ ಗರ್ಭಿಣಿಯಾಗಿದ್ದು, ಅದು ಕೂಡ ಹೆಣ್ಣು ಎಂದು ವೈದ್ಯರು ಹೇಳಿದ್ದಾರೆ.

    ಎಕ್ಸರೇ ತೆಗೆದು ನೋಡಿದಾಗ ಸುಮಾರು 2 ಇಂಚಿನ ಸಣ್ಣ ಮೊಳೆಗಳನ್ನು ಹಣೆಗೆ ಹೊಡೆದುಕೊಂಡಿದ್ದಾರೆ. ಅದೃಷ್ಟವಶಾತ್‌, ಮಹಿಳೆಯ ಮಿದುಳಿಗೆ ಇದರಿಂದ ಯಾವುದೇ ಹಾನಿಯಾಗಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 17ರ ಹರೆಯದ ಪತ್ನಿಯ ರುಂಡ ಕತ್ತರಿಸಿ ಬೀದಿಯಲ್ಲಿ ಪ್ರದರ್ಶಿಸಿದ ಪಾಪಿ ಪತಿ..!

    ಈ ಕುರಿತು ಪ್ರತಿಕ್ರಿಯಿಸಿರುವ ಪೇಶಾವರ ಪೊಲೀಸರು, ನಾವು ಆಸ್ಪತ್ರೆಯಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದೇವೆ. ಶೀಘ್ರದಲ್ಲೇ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಮಹಿಳೆಗೆ ಸಲಹೆ ನೀಡಿದ ಮಾಂತ್ರಿಕನ ಮೇಲೂ ಸೂಕ್ತ ಕ್ರಮವಹಿಸಲಾಗುವುದು ಎಂದಿದ್ದಾರೆ.

  • ತಂದೆ ಬೈದಿದ್ದಕ್ಕೆ 21 ಕಬ್ಬಿಣದ ಮೊಳೆಗಳನ್ನು ನುಂಗಿದ ಹುಡುಗ!

    ತಂದೆ ಬೈದಿದ್ದಕ್ಕೆ 21 ಕಬ್ಬಿಣದ ಮೊಳೆಗಳನ್ನು ನುಂಗಿದ ಹುಡುಗ!

    – ಹುಡುಗನ ಶಸ್ತ್ರಚಿಕಿತ್ಸೆ ಯಶಸ್ವಿ

    ಭೋಪಾಲ್: ಅಪ್ಪ ಬೈದರೆಂದು 17 ವರ್ಷದ ಹುಡುಗನೊಬ್ಬ 21 ಕಬ್ಬಿಣದ ಮೊಳೆಗಳನ್ನು ನುಂಗಿದ ವಿಚಿತ್ರ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

    ಹುಡುಗನನ್ನು ಧನಂಜಯ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ಈತನನ್ನು ತಂದೆ ಯಾವುದೋ ಒಂದು ವಿಚಾರಕ್ಕೆ ಗದದ್ದಾರೆ. ಇಷ್ಟಕ್ಕೆ ಸಿಟ್ಟುಕೊಂಡ ಆತ 21 ಕಬ್ಬಿಣದ ಮೊಳೆಗಳನ್ನು ನುಂಗಿ ಬಿಟ್ಟಿದ್ದಾನೆ. ಇದಾದದ ಬಳಿಕ ಹುಡುಗನಿಗೆ ಪ್ರತಿದಿನ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ನೋವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕಗೊಂಡ ಪೋಷಕರು ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ತಾಯಿಯೊಂದಿಗೆ ಸೇರಿ ಅಕ್ಕನನ್ನು ಕೊಂದ ತಮ್ಮ- ಕತ್ತರಿಸಿದ ತಲೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ವಿಕೃತಿ

    ಇತ್ತ ಹುಡುಗನನ್ನು ಪರೀಕ್ಷೆ ನಡೆಸಿದ ವೈದ್ಯರಿಗೆ ಪರಿಸ್ಥಿತಿ ಏನೆಂಬುದು ಅರ್ಥವಾಗಲಿಲ್ಲ. ಹೀಗಾಗಿ ಅವರು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ನಡೆಸಬೇಕು ಎಂದು ಹೇಳಿದರು. ಈ ಸ್ಕ್ಯಾನಿಂಗ್ ವೇಳೆ ಹುಡುಗನ ಹೊಟ್ಟೆಯಲ್ಲಿ ಮೊಳೆಗಳಿರುವುದು ಕಂಡುಬಂದಿದೆ. ಇದನ್ನು ಕಂಡು ವೈದ್ಯರೇ ಒಂದು ಬಾರಿ ಶಾಕ್ ಗೆ ಒಳಗಾಗಿದ್ದು, ಕೂಡಲೇ ಆಪರೇಷನ್ ಮಾಡಿ ಮೊಳೆಗಳನ್ನು ಹೊರತೆಗೆಯಬೇಕು ಎಂದು ಹುಡುಗನ ಪೋಷಕರ ಬಳಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ: ಸಮಂತಾ

    ಪೋಷಕರ ಒಪ್ಪಿಗೆ ಸಿಕ್ಕ ಕೂಡಲೇ ಎರಡೂವರೆ ಗಂಟೆಗಳ ಸತತ ಶಸ್ತ್ರಚಿಕಿತ್ಸೆ ನಡೆಸಿ ಮೊಳೆಗಳನ್ನು ಹೊರತೆಗೆಯಲಾಗಿದೆ. ಸದ್ಯ ಯುವಕ ಆರೋಗ್ಯವಾಗಿದ್ದಾನೆ ಎಂದು ವೈದ್ಯರು ತಿಳಿಸಿದರು. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿದ ಪೊಲೀಸ್ – ಡಿಕ್ಕಿ ಹೊಡೆದು ಇಬ್ಬರಿಗೆ ಗಾಯ

  • ವ್ಯಕ್ತಿ ಹೊಟ್ಟೆಯಲ್ಲಿ 1ಕೆ.ಜಿ ಮೊಳೆ, ಬೋಲ್ಟ್, ಸ್ಕ್ರೂ ನೋಡಿ ವೈದ್ಯರು ಶಾಕ್

    ವ್ಯಕ್ತಿ ಹೊಟ್ಟೆಯಲ್ಲಿ 1ಕೆ.ಜಿ ಮೊಳೆ, ಬೋಲ್ಟ್, ಸ್ಕ್ರೂ ನೋಡಿ ವೈದ್ಯರು ಶಾಕ್

    ಮಾಸ್ಕೋ: ವ್ಯಕ್ತಿಯೋರ್ವನ ಹೊಟ್ಟೆಯಿಂದ 1ಕಿಲೋಗ್ರಾಂಗಿಂತಲೂ ಹೆಚ್ಚು ಮೊಳೆಗಳು, ಬೋಲ್ಟ್‌ಗಳು, ತಿರುಪು ಇರುವುದನ್ನು ಕಂಡು ವೈದ್ಯರು ಶಾಕ್ ಆಗಿದ್ದಾರೆ.

    ಹೌದು, ಮದ್ಯವ್ಯಸನನಾಗಿದ್ದ ವ್ಯಕ್ತಿ, ಮದ್ಯ ಸೇವನೆಯನ್ನು ತ್ಯಜಿಸಿದ ನಂತರ ಲೋಹದಂತಹ ವಸ್ತುಗಳನ್ನು ಸೇವಿಸಲು ಆರಂಭಿಸಿದ್ದಾನೆ. ಆದರೆ ನಂತರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆತನನ್ನು ಬಾಲ್ಟಿನ್ ನಗರದ ಕ್ಲೈಪೆಡಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ:  ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

    Nail bolt

    ಈ ವೇಳೆ ವ್ಯಕ್ತಿ ಹೊಟ್ಟೆಯನ್ನು ಎಕ್ಸ್ ರೇ ಮಾಡಿದ ವೈದ್ಯರಿಗೆ 4 ಇಂಚಿರುವ ಆತನ ಹೊಟ್ಟೆಯಲ್ಲಿ ಲೋಹದ ತುಂಡುಗಳಿರುವ ವಿಚಾರ ತಿಳಿದುಬಂದಿದೆ. ಮನುಷ್ಯ ದೇಹದಲ್ಲಿ ಇಷ್ಟೆಲ್ಲಾ ಇದ್ದರೂ ಆತ ಇದ್ದಾನೆ ಎಂದರೆ ಇದು ಸಾಮಾನ್ಯವಾದಂತಹ ಪ್ರಕರಣವಲ್ಲ. ಇದೊಂದು ವಿಭಿನ್ನವಾದಂತಹ ಪ್ರಕರಣ ಎಂದು ವೈದ್ಯರು ತಿಳಿಸಿದ್ದಾರೆ.

    ನಂತರ ಸತತ ಮೂರಗಂಟೆಗಳ ಎಲ್ಲಾ ಲೋಹದ ವಸ್ತುಗಳನ್ನು ಹೊರ ತೆಗೆಯುವ ಮೂಲಕ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕುರಿತಂತೆ ವೈದ್ಯ ಸರುನಾಸ್ ಡೈಲಿಡೆನಾ, ಎಕ್ಸ್ ರೇ ಬಳಿಕ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ, ವ್ಯಕ್ತಿಯ ಹೊಟ್ಟೆಯಿಂದ ಎಲ್ಲಾ ವಿದೇಶಿ ಲೋಹಗಳನ್ನು ಹೊರತೆಗೆಯಲಾಯಿತು. ಈ ವೇಳೆ ಸಣ್ಣ, ಸಣ್ಣ ಲೋಹಗಳನ್ನು ಹೊಟ್ಟೆಯಿಂದ ಹೊರತೆಗೆಯಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಜನಸಂದಣಿ ಮಧ್ಯೆಯೇ ಮಹಿಳೆ ಬರ್ಬರ ಹತ್ಯೆ – ಬೆಚ್ಚಿಬಿದ್ದ ದೆಹಲಿ ಮಂದಿ

    ಈ ಸಂಬಂಧ ಕ್ಲೈಪೆಡಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಆಲ್ಗಿರ್ದಾಸ್ ಸ್ಪೆಪಾವಿಸಿಯಸ್ ನಾವು ಈ ರೀತಿಯ ಪ್ರಕರಣವನ್ನು ಇಲ್ಲಿಯವರೆಗೂ ನೋಡೆ ಇಲ್ಲ. ಕಳೆದ ಒಂದು ತಿಂಗಳ ಹಿಂದೆ ಮದ್ಯಸೆವನೆಯನ್ನು ನಿಲ್ಲಿಸಿದ ನಂತರ ಲೋಹಗಳನ್ನು ನುಂಗಲು ವ್ಯಕ್ತಿ ಆರಂಭಿಸಿದ. ಇದೀಗ ವ್ಯಕ್ತಿ ಸ್ಥಿತಿ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿಸಿದ್ದಾರೆ.

  • ಹೆದ್ದಾರಿಗೆ ಹಾಕಿದ್ದ ಮೊಳೆಗಳನ್ನ ತೆಗೆದಿಲ್ಲ: ದೆಹಲಿ ಪೊಲೀಸರು

    ಹೆದ್ದಾರಿಗೆ ಹಾಕಿದ್ದ ಮೊಳೆಗಳನ್ನ ತೆಗೆದಿಲ್ಲ: ದೆಹಲಿ ಪೊಲೀಸರು

    ನವದೆಹಲಿ: ರೈತರು ದೆಹಲಿ ಪ್ರವೇಶಿಸದಂತೆ ಮಹಾಗೋಡೆ ನಿರ್ಮಿಸಿಕೊಂಡಿದ್ದ ಸರ್ಕಾರ ಹೆದ್ದಾರಿಯಲ್ಲಿ ದೊಡ್ಡ ಮೊಳೆಗಳನ್ನ ಹಾಕಿತ್ತು. ಇಂದು ಬೆಳಗ್ಗೆ ಮೊಳೆಗಳನ್ನ ತೆಗೆಯುತ್ತಿರುವ ಕೆಲ ವೀಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದವು. ಇದೀಗ ದೆಹಲಿ ಪೊಲೀಸರು ಮೊಳೆಗಳನ್ನ ತೆಗೆದಿಲ್ಲ, ಬದಲಾಗಿ ಮತ್ತೊಂದು ಕಡೆ ಶಿಫ್ಟ್ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಗಣರಾಜ್ಯೋತ್ಸವ ದಿನದಂದು ನಡೆದ ಅನಾಹುತ ಮತ್ತೊಮ್ಮೆ ಸಂಭವಿಸಿದಂತೆ ಎಚ್ಚೆತ್ತುಕೊಂಡಿರುವ ಮೋದಿ ಸರ್ಕಾರ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಿದೆ. ದೆಹಲಿಯ ಸಿಂಘು, ಟಿಕ್ರಿ ಮತ್ತು ಗಾಜೀಪುರ್ ಗಡಿಯಲ್ಲಿ ಭದ್ರತೆಯನ್ನು ಹೆಚ್ಚು ಮಾಡಿದೆ. ಗಡಿಯಲ್ಲಿರುವ ಟ್ರ್ಯಾಕ್ಟರ್ ದಿಲ್ಲಿ ಪ್ರವೇಶ ಮಾಡದಂತೆ ಆರೇಳು ಸುತ್ತಿನಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.

    ಬೃಹತ್ ಸಿಮೆಂಟ್ ಬ್ರಿಕ್ಸ್ ಗಳನ್ನು ಇಟ್ಟು ನಡುವೆ ಕಾಂಕ್ರೀಟ್ ತುಂಬಿದೆ. ಸಾಲದು ಅಂತಾ ಗಡಿಯುದ್ದಕ್ಕೂ ಮುಳ್ಳು ತಂತಿನ ಬೇಲಿ ಹಾಕಲಾಗಿದ್ದು, ರಸ್ತೆಗಳನ್ನು ಅಗೆದು ಮೊಳೆಗಳನ್ನು ನಡೆಲಾಗಿತ್ತು.

    ಈ ನಡುವೆ ಪ್ರತಿಭಟನಾ ನಿರತ ರೈತರ ಭೇಟಿಗೆ ತೆರಳಿದ್ದ ವಿಪಕ್ಷ ಸಂಸದರು ಸಂಸದರನ್ನ ಪೊಲೀಸರು ತಡೆದಿದ್ದಾರೆ. ಇತ್ತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿಭಟನೆ ವೇಳೆ ಮೃತ ರೈತ ನಿವಾಸಕ್ಕೆ ಭೇಟಿ ನೀಡಿದ್ದಾರೆ.

  • ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ  – ಚೀನಾ ಪೈಶಾಚಿಕ ಕೃತ್ಯ ಬಯಲು

    ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು

    ನವದೆಹಲಿ: ಕುತಂತ್ರಿ ಚೀನಾ ಪೂರ್ವನಿಯೋಜಿತವಾಗಿ ಈ ದಾಳಿ ನಡೆಸಿದೆ ಎಂದು ಭಾರತ ಹೇಳಿದ್ದರೂ ನಮ್ಮ ಸೈನಿಕರ ಮೇಲೆ ಯಾವ ರೀತಿ ಹೇಗೆ ದಾಳಿ ಮಾಡಿದ್ದರು ಎನ್ನುವ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗಳಿಗೆ ಫೋಟೋ ಈಗ ಉತ್ತರ ನೀಡಿದೆ.

    ಮೊಳೆಗಳಿರುವ ಕಬ್ಬಿಣದ ರಾಡ್‌ಗಳನ್ನು ಬಳಸಿ ಚೀನಾ ಸೈನಿಕರು ಪೈಶಾಚಿಕ ಕೃತ್ಯ ಎಸಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಘಟನೆಯ ವೇಳೆ ಗಾಯಗೊಂಡ ಸೈನಿಕರು ಈ ರಾಡ್‌ ಅನ್ನು ಭಾರತದ ನೆಲೆಗೆ ತಂದಿದ್ದು, ಅದರ ಫೋಟೋ ಈಗ ವೈರಲ್‌ ಆಗಿದೆ.

    ಪಾಕಿಸ್ತಾನದ ಬಾರ್ಡರ್‌ ಆಕ್ಷನ್‌ ಪಡೆ ಸಹ ಈ ತಂತ್ರವನ್ನೇ ಅನುಸರಿಸುತ್ತದೆ. ವೀರ ಯೋಧರ ಮರಣೋತ್ತರ ಪರೀಕ್ಷೆಯಲ್ಲೂ ದೇಹದ ಮೇಲೆ ಗಂಭೀರ ಗಾಯ ಇರುವುದು ದೃಢಪಟ್ಟಿದೆ.

    ಘಟನೆ ಹೇಗಾಯ್ತು?
    ಗಾಲ್ವಾನ್ ನದಿ ಪ್ರದೇಶದಲ್ಲಿ ಪೆಟ್ರೋಲಿಂಗ್ ಪಾಯಿಂಟ್ 14ರ ಬಳಿ ಚೀನಾ ಟೆಂಟ್‌ ನಿರ್ಮಿಸಿತ್ತು. ಕಳೆದ ವಾರ ಲೆಫ್ಟಿನೆಂಟ್ ಕಮಾಂಡರ್ ಮಟ್ಟದಲ್ಲಿ ಪಾಯಿಂಟ್ 14ನಲ್ಲಿ ಸಭೆ ನಡೆಸಿತ್ತು. ಮಾತುಕತೆಯಂತೆ ಟೆಂಟ್ ತೆರವು ಆಗಿದ್ಯಾ? ಇಲ್ವಾ? ಅಂತ ಪರಿಶೀಲನೆಗೆ ಭಾರತ ಹೋಗಿತ್ತು. ವಾಹನದಲ್ಲಿ ಕರ್ನಲ್ ಸಂತೋಷ್ ಬಾಬು, ಪಳನಿ, ಓಝೋ ಗಸ್ತು ಹೋಗಿದ್ದರು.

    ತಾತ್ಕಾಲಿಕವಾಗಿ ನಿರ್ಮಿಸಿದ್ದ ಟೆಂಟ್‌ ತೆರವು ಮಾಡದ ಹಿನ್ನೆಲೆಯಲ್ಲಿ ಮಾತುಕತೆ ನಡೆಸುತ್ತಿದ್ದಾಗಲೇ ಚೀನಿ ಸೈನಿಕರು ಹಲ್ಲೆ ನಡೆಸಿದ್ದರು. ನಡೆಸಿದ ವಿಚಾರ ತಿಳಿದು ಭಾರತದ ಸೈನಿಕರು ಮತ್ತಷ್ಟು ಸಂಖ್ಯೆಯಲ್ಲಿ ಸ್ಥಳಕ್ಕೆ ಬಂದಾಗ ಚೀನಿಯರು ಕಲ್ಲು ತೂರಾಟ ನಡೆಸಿ ಕಬ್ಬಿಣದ ರಾಡ್‌ಗಳಿಂದ ಹೊಡೆದಿದ್ದಾರೆ. ಪರಿಣಾಮ ಭಾರತದ 20 ಸೈನಿಕರು ಹುತಾತ್ಮರಾಗಿದ್ದಾರೆ. ಈ ವೇಳೆ ಭಾರತದ ಸೈನಿಕರು ತಿರುಗೇಟು ನೀಡಿ 43 ಚೀನಿ ಸೈನಿಕರನ್ನು ಹತ್ಯೆ ಮಾಡಿದ್ದಾರೆ.

    ಗನ್‌ ಫೈರ್‌ ಮಾಡುವಂತಿಲ್ಲ:
    ಭಾರತ ಮತ್ತು ಚೀನಾ ನಡುವೆ ಅಂತಾರಾಷ್ಟ್ರೀಯ ಗಡಿ ರೇಖೆ ಇಲ್ಲದ ಕಾರಣ ಗಡಿಯಲ್ಲಿ ಈ ರೀತಿ ಕಿತ್ತಾಟಗಳು ನಡೆಯುತಿತ್ತು. ಎರಡು ದೇಶಗಳ ಗಡಿಯನ್ನು ವಾಸ್ತವ ಗಡಿ ರೇಖೆಯಿಂದ(ಎಲ್‌ಎಸಿ – ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಗುರುತಿಸಲಾಗಿದೆ. ಆದರೆ ಹಲವು ಭಾಗಗಳಲ್ಲಿ ಭಾರತ ಮತ್ತು ಚೀನಾದ ನಡುವಿನ ಗಡಿಗಳು ನಿರ್ಧಾರವಾಗಿಲ್ಲ. ಹೀಗಾಗಿ ಹಲವು ಬಾರಿ ಎರಡು ಕಡೆಯ ಸೈನಿಕರು ಗಡಿಯಲ್ಲಿ ಪಹರೆ ಕಾಯುತ್ತಿದ್ದಾಗ ಕಿತ್ತಾಟಗಳು ನಡೆಯುತ್ತಿದ್ದವು. ಎರಡು ಕಡೆಯಿಂದಲೂ ಪ್ರತಿರೋಧಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ 1993, 1996ರಲ್ಲಿ ಭಾರತ ಮತ್ತು ಚೀನಾ ನಡುವೆ ಒಪ್ಪಂದ ನಡೆಯಿತು.

    1993ರ ಒಪ್ಪಂದದ ಪ್ರಕಾರ ಎಲ್‌ಎಸಿ ದಾಟಿ ಯಾರೇ ಒಳಬಂದರೂ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಬೇಕು. 1996ರ ಪ್ರಕಾರ ಎಲ್‌ಎಸಿಯ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಎರಡು ದೇಶಗಳು ಯಾವುದೇ ಸ್ಫೋಟ ನಡೆಸಬಾರದು, ಗುಂಡಿನ ದಾಳಿ ನಡೆಸಕೂಡದು ಎಂಬ ಒಪ್ಪಂದಕ್ಕೆ ಬರಲಾಗಿದೆ. ಹೀಗಾಗಿ ಭಾರತ ಚೀನಾ ಗಡಿಯಲ್ಲಿ ಸೈನಿಕರು ಈ ಒಪ್ಪಂದಕ್ಕೆ ಬದ್ಧವಾಗಿದ್ದಾರೆ. ಗುಂಡಿನ ದಾಳಿಯ ಬದಲು ಪರಸ್ಪರ ಕಲ್ಲು, ದೊಣ್ಣೆಗಳಿಂದ ಬಡಿದಾಡಿಕೊಳ್ಳುತ್ತಾರೆ.

    ಭಾರತ ಹೇಳಿದ್ದು ಏನು?
    ಜೂನ್‌ 6 ರಂದು ನಡೆದ ಮಿಲಿಟರಿ ಕಮಾಂಡರ್‌ ಮಟ್ಟದ ಮಾತುಕತೆಯ ವೇಳೆ ಎಲ್‌ಎಸಿಯಿಂದ ಸೇನೆ ಹಿಂದಕ್ಕೆ ಬರುವ ಸಂಬಂಧ ಮಾತುಕತೆ ನಡೆದಿತ್ತು. ಆದರೆ ಚೀನಾ ಸೇನೆ ಭಾರತದ ಎಲ್‌ಎಸಿ ಬಳಿ ಟೆಂಟ್‌ ನಿರ್ಮಿಸಿತ್ತು. ವಿವಾದಕ್ಕೆ ಕಾರಣವಾದ ಈ ಟೆಂಟ್‌ ಅನ್ನು ಚೀನಾ ತೆರವು ಮಾಡಬೇಕಿತ್ತು. ಈ ವಿಚಾರದ ಬಗ್ಗೆ ಮಾತುಕತೆ ನಡೆಯುತ್ತಿದ್ದಾಗ ಚೀನಾ ಸೇನೆ ಪೂರ್ವ ನಿಗದಿಯಂತೆ ದಾಳಿ ನಡೆಸಿದೆ. ಇದರಿಂದಾಗಿ ಸಾವು ನೋವು ಸಂಭವಿಸಿದೆ. ಈ ಘಟನೆಗೆ ಚೀನಾವೇ ನೇರ ಕಾರಣ.

    ಈ ಘಟನೆಯಿಂದ ದ್ವಿಪಕ್ಷೀಯ ಮಾತುಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಜೂನ್‌ 6 ರಂದು ಕಮಾಂಡರ್‌ ಮಟ್ಟ ಮಾತುಕತೆಯ ವೇಳೆ ಏನು ನಿರ್ಧಾರ ಮಾಡಲಾಗಿದೆಯೋ ಅದನ್ನು ಎರಡು ದೇಶಗಳು ಪಾಲಿಸಬೇಕು. ಎರಡು ಕಡೆಯ ಸೈನಿಕರು ದ್ವಿಪಕ್ಷೀಯ ಒಪ್ಪಂದವನ್ನು ಪಾಲಿಸಬೇಕು ಎಂದು ಭಾರತ ಹೇಳಿದೆ.

    ಚೀನಾ ಹೇಳಿದ್ದು ಏನು?
    ಭಾರತದ ಸೇನೆ ಎಲ್‌ಎಸಿ ದಾಟಿ ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದೆ. ಭಾರತ ಎಲ್ಲ ಒಪ್ಪಂದಗಳನ್ನು ಉಲ್ಲಂಘಿಸಿ ಈ ಕೃತ್ಯ ಎಸಗಿದೆ. ಚೀನಾ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಚೀನಿ ಸೈನಿಕರ ಮೇಲೆ ಹಲ್ಲೆ ಎಸಗಿದವರ ವಿರುದ್ಧ ಭಾರತ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿಯ ಘಟನೆ ಮರುಕಳಿಸಬಾರದು. ನೂರು ಕೋಟಿ ಜನಸಂಖ್ಯೆ ಇರುವ ದೇಶಗಳಾದ ನಾವು ಅಭಿವೃದ್ಧಿ ವಿಚಾರಗಳಿಗೆ ಮನ್ನಣೆ ನೀಡಬೇಕು.

  • ಕಾಲಲ್ಲಿ ಗಾಯವಾದ್ರೆ ರಕ್ತದ ಬದಲು ತ್ರಾಮದ ಮೊಳೆಗಳು ಹೊರಬಂದ್ವು- ಚಾಮರಾಜನಗರದಲ್ಲೊಂದು ಅಚ್ಚರಿ!

    ಕಾಲಲ್ಲಿ ಗಾಯವಾದ್ರೆ ರಕ್ತದ ಬದಲು ತ್ರಾಮದ ಮೊಳೆಗಳು ಹೊರಬಂದ್ವು- ಚಾಮರಾಜನಗರದಲ್ಲೊಂದು ಅಚ್ಚರಿ!

    ಚಾಮರಾಜನಗರ: ಕಾಲಿಗೆ ಗಾಯವಾದರೆ ರಕ್ತ ಬರುವುದನ್ನು ನೋಡಿದ್ದೀರ. ಆದರೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೊಡ್ಡತಪ್ಪೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಕಾಲಿಗೆ ಗಾಯವಾಗಿದ್ದು, ತಾಮ್ರದ ಮೊಳೆಗಳು ಹೊರಬಂದಿವೆ.

    ಗ್ರಾಮದ ಮಾದಪ್ಪ ಎಂಬವರ ಕಾಲಿನಲ್ಲಿ ಗಾಯವಾದ ಜಾಗದಲ್ಲಿ ರಕ್ತದ ಬದಲು ತಾಮ್ರದ ಮೊಳೆಗಳು ಬರುತ್ತಿವೆ. ಕಳೆದ ಪೂರ್ಣಿಮೆಯಂದು ಜಮೀನಿನಿಂದ ಮನೆಗೆ ಬರುವ ವೇಳೆ ಮಾಟ ಮಾಡಿದ ಜಾಗದಲ್ಲಿ ಮಾದಪ್ಪ ಕಾಲಿಟ್ಟಿದ್ದಾರೆ. ಮಾದಪ್ಪ ಅವರಿಗೆ ಮಾಟಮಂತ್ರದ ಬಗ್ಗೆ ಹೆಚ್ಚು ನಂಬಿಕೆ ಇಲ್ಲದ ಕಾರಣ ಇದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿರಲಿಲ್ಲ. ಆದ್ರೆ ಒಂದು ದಿನದ ನಂತರ ಪಾದದಲ್ಲಿ ದೊಡ್ಡ ಗುಳ್ಳೆಯೊಂದು ಆಗಿದೆ.

    ಇದನ್ನು ಗುಣಪಡಿಸಿಕೊಳ್ಳಲು ವೈದ್ಯರ ಬಳಿ ಹೋದ ಸಂದರ್ಭದಲ್ಲಿ ಗುಳ್ಳೆಯನ್ನು ಒಡೆದು, ಔಷಧಿಯನ್ನು ನೀಡಿದ್ದಾರೆ. ಆದರೂ ಸಹ ಗಾಯ ಮಾತ್ರ ವಾಸಿಯಾಗಿರಲಿಲ್ಲ. ಮಂಗಳವಾರ ಅಮವಾಸ್ಯೆಯಾದ್ದರಿಂದ ಪತ್ನಿಯ ಒತ್ತಾಯಕ್ಕೆ ಮಣಿದು ಗುಂಡ್ಲುಪೇಟೆ ತಾಲೂಕಿನ ತವರೆಕಟ್ಟೆಯಲ್ಲಿರುವ ಮಹದೇಶ್ವರ ಸನ್ನಿಧಿಗೆ ಹೋಗಿದ್ದಾರೆ. ಅಲ್ಲಿನ ಅರ್ಚಕರು ಗಾಯದ ಮೇಲೆ ನಿಂಬೆ ರಸವನ್ನು ಬಿಟ್ಟ ಸಂದರ್ಭದಲ್ಲಿ ಎಲ್ಲರಿಗೂ ಆಶ್ಚರ್ಯವಾಗುವ ರೀತಿಯಲ್ಲಿ ಕಾಲಿನಿಂದ ಸುಮಾರು 30 ರಿಂದ 40 ತಾಮ್ರದ ಮೊಳೆಗಳು ಹೊರಬಂದಿವೆ.