Tag: ಮೊಸರು

  • ಬೇರೆಲ್ಲಾ ಚಟ್ನಿಗಳಿಗಿಂತ ವಿಭಿನ್ನ ಮೊಸರು ಚಟ್ನಿ

    ಬೇರೆಲ್ಲಾ ಚಟ್ನಿಗಳಿಗಿಂತ ವಿಭಿನ್ನ ಮೊಸರು ಚಟ್ನಿ

    ಭಾರತೀಯ ಅಡುಗೆಗಳಲ್ಲಿ ಚಟ್ನಿಗೆ ವಿಶೇಷ ಸ್ಥಾನವಿದೆ. ಅಡುಗೆ ಪರಿಣಿತರ ಪ್ರತಿಭೆಯಿಂದಾಗಿ ಕೆಲವೇ ಪದಾರ್ಥಗಳನ್ನು ಬಳಸಿ ಮಾಡುವ ಈ ಚಟ್ನಿ ಬಾಯಲ್ಲಿ ನೀರೂರಿಸುವಂತಿರುತ್ತದೆ. ದೋಸೆ, ಚಪಾತಿ, ರೊಟ್ಟಿಗೆ ಮೊಸರು ಚಟ್ನಿ ಮಾಡಿ.

    ಬೇಕಾಗುವ ಸಾಮಗ್ರಿಗಳು:
    * ಕೊತ್ತಂಬರಿ- ಸ್ವಲ್ಪ
    * ಪುದಿನಾ – ಸ್ವಲ್ಪ
    * ಹಸಿಮೆಣಸಿನಕಾಯಿ- 3
    * ಬೆಳ್ಳುಳ್ಳಿ- 1
    * ಶುಂಠಿ- ಸ್ವಲ್ಪ
    * ಮೊಸರು – 2 ಕಪ್
    * ಜೀರಿಗೆ ಪುಡಿ- ಸ್ವಲ್ಪ
    * ನಿಂಬೆ ರಸ- 1 ಚಮಚ
    * ಚಾಟ್ ಮಸಾಲಾ- ಸ್ವಲ್ಪ
    * ರುಚಿಗೆ ತಕ್ಕಷ್ಟು ಉಪ್ಪು

    ಮಾಡುವ ವಿಧಾನ:
    * ಮೊದಲಿಗೆ ಒಂದು ಮಿಕ್ಸಿ ಜಾರ್‌ನಲ್ಲಿ ಕೊತ್ತಂಬರಿ, ಪುದಿನಾ, ಹಸಿ ಮೆಣಸಿನಕಾಯಿ, ಬೆಳ್ಳುಳ್ಳಿ, ಶುಂಠಿ, ನಿಂಬೆ ರಸವನ್ನು ಹಾಕಿ
    * ಅಗತ್ಯವಿದ್ದರೆ ಮಾತ್ರ ನೀರನ್ನು ಸೇರಿಸಿ ರುಬ್ಬಿಕೊಳ್ಳಬೇಕು. ಇದನ್ನೂ ಓದಿ:  ನೀವೂ ಮಾಡಿ ಗರಿಗರಿಯಾದ ಚಿಕನ್ ಪಕೋಡಾ

    * ರುಬ್ಬಿದ ಮಿಶ್ರಣ, ಮೊಸರು, ಜೀರಿಗೆ ಪುಡಿ, ಚಾಟ್ ಮಸಾಲಾ, ಉಪ್ಪನ್ನು ಸೇರಿಸಿದರೆ ರುಚಿಯಾದ ಮೊಸರು ಚಟ್ನಿ ಸವಿಯಲು ಸಿದ್ಧವಾಗುತ್ತದೆ. ಇದನ್ನೂ ಓದಿ: ಚಳಿಗೆ ಬಿಸಿ ಬಿಸಿಯಾದ ಇಡ್ಲಿ ಮಂಚೂರಿ ಸಖತ್ ಟೇಸ್ಟ್

  • ಚಳಿಗಾಲದಲ್ಲಿ ನೀವು ಸೇವಿಸುವ ಆಹಾರದಲ್ಲಿ ಈ ಅಂಶಗಳು ಇರಲಿ

    ಚಳಿಗಾಲದಲ್ಲಿ ನೀವು ಸೇವಿಸುವ ಆಹಾರದಲ್ಲಿ ಈ ಅಂಶಗಳು ಇರಲಿ

    ಳಿಗಾಲ ಬಂತೆಂದರೆ ಸಾಕು ರೋಗ ರುಜಿನಗಳು ಹೆಚ್ಚಾಗುತ್ತದೆ. ನಮ್ಮ ದೇಹಕ್ಕೆ ಕೊಬ್ಬನಾಂಶವಿರುವ ಆಹಾರದ ಅವಶ್ಯಕತೆ ಈ ಸಮಯದಲ್ಲಿ ಹೆಚ್ಚಾಗಿರುತ್ತದೆ. ಕೊಬ್ಬಿನಾಂಶವಿರುವ ಆಹಾರವನ್ನು ಸೇವಿಸುವುದರಿಂದ ದೇಹವನ್ನು ಸಮೃದ್ಧವಾಗಿಸುವುದರ ಜೊತೆಗೆ ದೇಹಕ್ಕೆ ಜೀವಸತ್ವ ಹಾಗೂ ಇತರ ಪೋಷಕಾಂಶಗಳನ್ನು ಪಡೆಯಬಹುದು. ಇದರಿಂದಾಗಿ ಆರೋಗ್ಯಕರ ವ್ಯಕ್ತಿಯಾಗಲು ಸಾಧ್ಯವಾಗುತ್ತದೆ.

    ಅಷ್ಟೇ ಅಲ್ಲದೇ ಆಯಾಸ, ಚರ್ಮ ಹಾಗೂ ಕೂದಲಿನ ಸಮಸ್ಯೆಗಳು ಉಂಟಾಗುತ್ತದೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಹಾರ್ಮೋನ್‌ಗಳ ಸಮತೋಲನ ಕಾಪಾಡಲು ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇವು ಸಹಾಯಕವಾಗಿದೆ. ಚಳಿಗಾಲದಲ್ಲಿ ನಾಲಿಗೆ ರುಚಿಗಾಗಿ ಬಿಸಿ ಬಿಸಿ ಆಹಾರ ಸೇವಿಸುವುದರ ಜೊತೆಗೆ ಆರೋಗ್ಯಕ್ಕೆ ಅವಶ್ಯಕವಾಗಿರುವ ಪ್ರೋಟೀನ್ ಇರುವ ಪದಾರ್ಥಗಳನ್ನು ಸೇವಿಸುವುದು ಅಗತ್ಯವಾಗಿದೆ.

    ಮೊಟ್ಟೆ: ಮೊಟ್ಟೆಗಳು ದೇಹದ ಅಂಗಾಂಶಗಳನ್ನು ಸದೃಢಗೊಳಿಸುವುದರ ಜೊತೆಗೆ ಪ್ರೋಟಿನ್‌ನ್ನು ಹೆಚ್ಚಿಸುತ್ತದೆ. ವಯಸ್ಕರು ದಿನಕ್ಕೆ ಎರಡು ಮೊಟ್ಟೆಗಳನ್ನು ನಿಯಮಿತವಾಗಿ ತಿನ್ನಬಹುದು. ಮೊಟ್ಟೆಯಲ್ಲಿರುವ ಜೀವಸತ್ವಗಳು ಮತ್ತು ಖನಿಜಗಳಿವೆ. ಆರೋಗ್ಯಕ್ಕೆ ಬೇಕಾಗುವ ಅಂಶಗಳನ್ನು ಒದಗಿಸುತ್ತದೆ.

    ಮೀನು: ನಿಯಮಿತವಾಗಿ ಮೀನಿನ ಸೇವನೆಯಿಂದ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮೀನು ಸೇವನೆ ಸಹಾಯ ಮಾಡುತ್ತದೆ.

    ಡ್ರೈ ಫ್ರೂಟ್ಸ್: ಆರೋಗ್ಯಕರ ಜೀವನ ನಡೆಸಲು ಡ್ರೈ ಫ್ರೂಟ್ಸ್ ಗಳು ಅವಶ್ಯಕವಾಗಿದ್ದು, ಪ್ರೊಟೀನ್‌ಗಳು ಇದರಲ್ಲಿ ಹೆಚ್ಚಿರುತ್ತದೆ. ಡ್ರೈ ಫ್ರೂಟ್ಸ್ ಗಳನ್ನು ಪ್ರತಿದಿನ ಮುಂಜಾನೆ ತಿನ್ನುವುದರಿಂದ ಬೊಜ್ಜು, ಹೃದ್ರೋಗ ಮತ್ತು ಮಧುಮೇಹದಂತಹ ಅಪಾಯವನ್ನು ಕಡಿಮೆ ಮಾಡಬಹುದಾಗಿದೆ. ಡ್ರೈ ಫ್ರೂಟ್ಸ್ ಗಳನ್ನು ಹೆಚ್ಚಿನವರು ನೀರಿನಲ್ಲಿ ನೆನೆಹಾಕಿ ಸೇವಿಸುತ್ತಾರೆ. ಇದನ್ನೂ ಓದಿ: ಅನ್ನದಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ಗೊತ್ತಾ?

    ಮೊಸರು: ಸಾಮಾನ್ಯವಾಗಿ ಹಾಲಿನ ಉತ್ಪನ್ನಗಳಿಂದ ಹೆಚ್ಚಿನ ಪೋಷಕಾಂಶಗಳು ದೊರೆಯುತ್ತದೆ. ಅದರಲ್ಲೂ ಮೊಸರು ಜೀರ್ಣಕ್ರಿಯೆ ಸುಧಾರಿಸಲು ಸಹಾಯಕಾರಿಯಾಗಿದೆ ಜೊತೆಗೆ ಮೊಸರು ಸೇವನೆಯಿಂದ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.

    ಚೀಸ್ ಅಥವಾ ಬೆಣ್ಣೆ: ಟೋಸ್ಟ್, ತರಕಾರಿಗಳು, ದಾಲ್ ಅಥವಾ ಚಪಾತಿಗಳನ್ನು ತಿನ್ನುವಾಗ ಹೆಚ್ಚಾಗಿ ಚೀಸ್ ಅಥವಾ ಬೆಣ್ಣೆಯನ್ನು ಬಳಸಿ. ಇದರಲ್ಲಿ ಹೆಚ್ಚಿನ ಪ್ರಮಾಣದ ಕೊಬ್ಬಿನಾಂಶ ಮತ್ತು ವಿಟಮಿನ್ ಹೊಂದಿರುತ್ತದೆ. ಇದರಿಂದಾಗಿ ದೇಹವನ್ನು ಸಮೃದ್ಧವಾಗಿಡಲು ಸಹಾಯ ಮಾಡುತ್ತದೆ. ಇದನ್ನೂ ಓದಿ: ಮೂಲಂಗಿಯಲ್ಲಿದೆ ಆರೋಗ್ಯಕರ ಗುಣಗಳು

  • ಮೊಸರಿಗಾಗಿ ಪತ್ನಿಗೆ ಚಾಕು ಇರಿದ ಗಂಡನಿಗೆ 8 ವರ್ಷ ಜೈಲು

    ಮೊಸರಿಗಾಗಿ ಪತ್ನಿಗೆ ಚಾಕು ಇರಿದ ಗಂಡನಿಗೆ 8 ವರ್ಷ ಜೈಲು

    ಮುಂಬೈ: ಮನೆಗೆ ತಂದ ಮೊಸರನ್ನ ತಿಂದಿದ್ದಕ್ಕೆ ಪತ್ನಿಗೆ ಚಾಕು ಇರಿದ ಪತಿಗೆ ನ್ಯಾಯಾಲಯ 8 ವರ್ಷ ಜೈಲು ಶಿಕ್ಷೆಯನ್ನ ವಿಧಿಸಿದೆ.

    ಸಚಿನ್ ಮಾಲೊರೆ (39) ಆಂಟಾಪ್ ಹಿಲ್ ನಿವಾಸಿಯಾಗಿದ್ದಾನೆ. ಈತನಿಂದ ಹಲ್ಲೆಗೊಳಗಾದ ಪತ್ನಿ ರಂಜನಾ ಆಗಿದ್ದಾಳೆ. ದಂಪತಿ ಜಗಳ ಕೋರ್ಟ್ ಮೆಟ್ಟಲೇರಿತ್ತು. ಇದೀಗ ಆರೋಪಿಗೆ 8 ವರ್ಷ ಜೈಲು ಶಿಕ್ಷೆಯಾಗಿದೆ.

    ಪ್ರಕರಣ ಹಿನ್ನೆಲೆ:
    ಸಚಿನ್ ಮನೆಗೆ ತಂದಿದ್ದ ಮೊಸರನ್ನ ಪತಿಗೆ ನೀಡದೇ ರಂಜನಾ ತಿಂದಿದ್ದಳು. ಈ ವಿಚಾರವಾಗಿ ದಂಪತಿ ನಡುವೆ ಗಲಾಟೆಯಾಗಿದೆ. ಪತಿ ಆಕೆಗೆ ಬೆಕ್ಕು ನೀನು ಎಂದು ಕರೆದಿದ್ದಾನೆ. ಇದು ಅವರಿಬ್ಬರ ಮಧ್ಯೆ ವಾಗ್ವಾದಕ್ಕೆ ಕಾರಣವಾಗಿದೆ. ಕೋಪಗೊಂಡ ಪತಿ, ಪತ್ನಿಯ ಹೊಟ್ಟೆಗೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಅಗ ನೆರೆಹೊರೆಯವರು ಬಂದು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ರಂಜನಾ ಪತಿ ವಿರುದ್ಧ ದೂರನ್ನು ದಾಖಲಿಸಿದ್ದಳು. 2 ವರ್ಷಗಳ ಹಿಂದೆ ನಡೆದಿರುವ ಈ ಪ್ರಕರಣಕ್ಕೆ ಸೆಷನ್ಸ್ ನ್ಯಾಯಾಲಯವು ಅಪರಾಧಿ ಪತಿರಾಯನಿಗೆ 8 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

    2017ರಲ್ಲಿ ಬಂಧನಕ್ಕೊಳಗಾದ ಸಚಿನ್ ನನ್ನು ಜೈಲಿನಲ್ಲಿ ಇಡಲಾಗಿತ್ತು. ವಿಚಾರಣೆಯ ಸಮಯದಲ್ಲಿ, ಸೆಷನ್ಸ್ ನ್ಯಾಯಾಲಯವು ಪತ್ನಿ ರಂಜನಾ ಆಕಸ್ಮಿಕವಾಗಿ ಉಕ್ಕಿನ ಪಾತ್ರೆ ಮೇಲೆ ಬಿದ್ದು ಗಾಯಗೊಂಡಿದ್ದಾಳೆ ಎಂದು ಆರೋಪಿ ಅಪವಾದವನ್ನು ತಳ್ಳಿ ಹಾಕಿದ್ದನು.

    ಸಚಿನ್ ನಿರುದ್ಯೋಗಿ ಆಗಿದ್ದನು. ಕುಡಿದು ಮನೆಗೆ ಬರುತ್ತಿದ್ದನು. ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದನು ಎಂದು ರಂಜನಾ ತಾಯಿ ನ್ಯಾಯಾಲಯದಲ್ಲಿ ಹೇಳಿದ್ದಾರೆ. ದೂರುದಾರ ರಂಜನಾ ಸಾಕ್ಷ್ಯವನ್ನು ಹಾಗೂ ವೈದ್ಯಕೀಯ ಸಾಕ್ಷ್ಯಗಳು ಮತ್ತು ಪ್ರತ್ಯಕ್ಷದರ್ಶಿಗಳು ಆರೋಪಿ ಸಚಿನ್ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿರುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ. ಸಾಕ್ಷಿ ಆಧಾರಗಳನ್ನು ಪರಿಶೀಲನೆ ಮಾಡಿ ನ್ಯಾಯಾಲಯವಯ ತೀರ್ಪು ನೀಡಿದೆ.

  • ಲಾಕ್‍ಡೌನ್ ಎಫೆಕ್ಟ್ -ಹಾಲು, ಮೊಸರು ಕಳ್ಳತನ

    ಲಾಕ್‍ಡೌನ್ ಎಫೆಕ್ಟ್ -ಹಾಲು, ಮೊಸರು ಕಳ್ಳತನ

    ಕಾರವಾರ: ಬೆಳ್ಳಿ, ಬಂಗಾರ, ನಗನಾಣ್ಯಗಳ ಕಳ್ಳತನ ಮಾಡುವುದು ಸಾಮಾನ್ಯ. ಆದರೆ ಇಲ್ಲೋರ್ವ ಭೂಪ ಬೆಳಗ್ಗೆ ಮಾರಾಟಕ್ಕೆ ಇಳಿಸಿದ್ದ ಹಾಲು, ಮೊಸರು, ಮಜ್ಜಿಗೆಯನ್ನೂ ಕಳ್ಳತನ ಮಾಡಿದ್ದಾನೆ. ಈ ದೃಶ್ಯ ಇದೀಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದಿಪುರದ ಚಿಪ್ಪಿಹಕ್ಕಲ ಕ್ರಾಸ್ ಬಳಿಯ ಗೀತಾ ಕೊಲ್ಡ್ರಿಂಕ್ಸ್ ಅಂಗಡಿಯಲ್ಲಿ ಇಂತಹದೊಂದು ಕಳ್ಳತನ ನಡೆದಿದೆ. ಸುಮಾರು 30 ರಿಂದ 35 ವರ್ಷ ವಯಸ್ಸಿನ ವ್ಯಕ್ತಿ ಬೆಳಗಿನ ಜಾವ 4 ಗಂಟೆಗೆ ಬಂದು ಅಂಗಡಿ ಎದುರು ಇರಿಸಿದ್ದ ಹಾಲು, ಮೊಸರು, ಮಜ್ಜಿಗೆ ಪ್ಯಾಕೇಟ್ ಗಳನ್ನು ಕಳ್ಳತನ ನಡೆಸಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಒಂದೆರಡು ಹಾಲಿನ ಪ್ಯಾಕೇಟ್ ಕಳ್ಳತನ ಪ್ರಕರಣಗಳು ಆಗಾಗ ನಡೆಯುತ್ತಿರುತ್ತವೆ ಆದರೆ ಈ ಬಾರಿ ಅತಿ ಹೆಚ್ಚಿನ ಮೊತ್ತದ ಹಾಲು ಕದ್ದಿದ್ದಾರೆ ಎಂದು ಅಂಗಡಿ ಮಾಲೀಕ ಚಂದ್ರಕಾಂತ್ ಹೇಳುತ್ತಾರೆ. ಒಂದೇ ವಾರದಲ್ಲಿ ಎರಡು ಬಾರಿ ಕಳ್ಳತನವಾಗಿದೆ. ಕಳ್ಳತನ ನಡೆಸಿದ ವ್ಯಕ್ತಿ ಅಪರಿಚಿತನಾಗಿದ್ದು, ಈತನ ಮುಖಚಹರೆಯ ಬಗ್ಗೆ ಸ್ಥಳೀಯರಿಗೂ ಮಾಹಿತಿ ಇಲ್ಲ. ಇದೀಗ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

  • ಪ್ರತಿ ದಿನ ಮೊಸರು ತಿಂದು ಆರೋಗ್ಯವಾಗಿರಿ

    ಪ್ರತಿ ದಿನ ಮೊಸರು ತಿಂದು ಆರೋಗ್ಯವಾಗಿರಿ

    ನೀರು ಬಿಟ್ಟರೆ ನಮ್ಮ ದೇಹ ಅತಿ ಸುಲಭವಾಗಿ ಜೀರ್ಣಿಸಿಕೊಳ್ಳುವ ಆಹಾರವೆಂದರೆ ಮೊಸರು. ಮೊಸರಿನಲ್ಲಿರುವ ಆರೋಗ್ಯಕರ ಬ್ಯಾಕ್ಟೀರಿಯಾಗಳು ದೇಹಕ್ಕೆ ಒಳ್ಳೆದು. ಇದು ಆಹಾರವನ್ನು ಜೀರ್ಣಿಕೊಳ್ಳಲು ಸಹಕಾರಿಯಾಗಿದೆ. ಆದ್ದರಿಂದ ಮೊಸರು ಒಂದು ಆರೋಗ್ಯಕರ ಆಹಾರವಾಗಿದ್ದು, ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು.

    ಜೀರ್ಣ ಸಮಸ್ಯೆ ಇರುವ ರೋಗಿಗಳಿಗೆ ವೈದ್ಯರು ಕೂಡ ಹೆಚ್ಚಾಗಿ ಮೊಸರನ್ನೇ ತಿನ್ನಲು ಸೂಚಿಸುತ್ತಾರೆ. ಅದರಲ್ಲೂ ದಕ್ಷಿಣ ಭಾರತದ ಆಹಾರ ಪದ್ಧತಿಯಲ್ಲಿ ಮೊಸರಿಗೆ ವಿಶೇಷ ಸ್ಥಾನವಿದ್ದು, ಊಟದಲ್ಲಿ ಮೊಸರು ಇಲ್ಲವೆಂದರೆ ಊಟ ಪರಿಪೂರ್ಣವಾಗಲ್ಲ. ಊಟದ ಕೊನೆಯಲ್ಲಿ ನೀವು ಸೇವಿಸುವ ಮೊಸರು ನಿಮ್ಮ ಆರೋಗ್ಯಕ್ಕೆ ಹೆಚ್ಚಿನ ಲಾಭ ನೀಡುತ್ತದೆ. ಆದ್ದರಿಂದಲೇ ಹಿರಿಯರು, ವೈದ್ಯರು ಆರೋಗ್ಯವಾಗಿರಲು ಮೊಸರು ತಿನ್ನಿ ಎನ್ನುತ್ತಾರೆ. ಜೊತೆಗೆ ರಾತ್ರಿ ಹೊತ್ತು ಮೊಸರು ಸೇವಿಸುವುದು ಅಷ್ಟು ಸೂಕ್ತವಲ್ಲ ಎಂಬ ಮಾತುಗಳು ಕೂಡ ಇದೆ.

    ಮೊಸರಿನ ಆರೋಗ್ಯಕರ ಲಾಭವೇನು?

    ನಿಶ್ಯಕ್ತಿಯಿಂದ ಬಳಲುವವರು ಮೊಸರು ತಿನ್ನಿ:
    ನಿಶ್ಯಕ್ತಿಯಿಂದ ಬಳಲುವವರು ಮಿತವಾಗಿ ಮೊಸರನ್ನು ಸೇವಿಸಿದರೆ ದೇಹದಲ್ಲಿ ನಿಶ್ಯಕ್ತಿಯಾಗದಂತೆ ತಡೆಯುತ್ತದೆ. ಮೊಸರು ಜೀರ್ಣಿಸಿಕೊಳ್ಳಲು ಸುಲಭವಾಗಿರುವುದಕ್ಕೆ ನಿಶ್ಯಕ್ತಿಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮೊಸರು ಅತ್ಯುತ್ತಮವಾದ ಆಹಾರವಾಗಿದೆ.

    ನಿದ್ರಾಹೀನತೆಗೆ:
    ನಿದ್ರಾಹೀನತೆಯಿಂದ ಬಳಲುವವರು ರಾತ್ರಿ ಮಲಗುವ ಮುನ್ನ ಮೊಸರನ್ನು ಸೇವಿಸಿ ಮಲಗಬೇಕು. ಇದು ನಿದ್ರಾಹೀನತೆಯನ್ನು ದೂರಮಾಡಿ, ಆರೋಗ್ಯವನ್ನು ವೃದ್ಧಿಸುತ್ತದೆ.

    ಬಾಯಿ ಹುಣ್ಣಿಗೆ:
    ಬಾಯಿ ಹುಣ್ಣಿನ ಸಮಸ್ಯೆ ಇದ್ದವರು ರಾತ್ರಿ ಮಲಗುವ ಮುನ್ನ ಮತ್ತು ಬೆಳಗ್ಗೆ ಎದ್ದ ತಕ್ಷಣ ಗಟ್ಟಿ ಮೊಸರನ್ನು ಬಾಯಿಯ ಒಳಭಾಗದಲ್ಲಿ ಸವರಿಕೊಳ್ಳಬೇಕು. ಇದರಿಂದ ಶೀಘ್ರವೇ ಬಾಯಿ ಹುಣ್ಣಿನ ಸಮಸ್ಯೆ ಗುಣವಾಗುತ್ತದೆ.

    ಕರುಳು ಹಾಗೂ ಜಠರದ ತೊಂದರೆಗಳಿಗೆ:
    ದಿನವು ಮೊಸರನ್ನು ಆಹಾರದ ಒಂದು ಭಾಗವಾಗಿ ಸೇವಿಸುವ ವ್ಯಕ್ತಿಗಳಲ್ಲಿ ಕರುಳು ಹಾಗೂ ಜಠರದ ತೊಂದರೆಗಳು ಉಂಟಾಗುವ ಸಾಧ್ಯತೆ ಕಡಿಮೆ. ಒಂದು ವೇಳೆ ಹೊಟ್ಟೆಯೊಳಗೆ ಬಿಸಿಯಾಗಿರುವಂತೆ ಅನುಭವವಾದರೆ ಅನ್ನಕ್ಕೆ ಮೊಸರು ಕಲಸಿಕೊಂಡು ಸೇವಿಸುವು ಒಳ್ಳೆದು.

    ಮೂಲವ್ಯಾಧಿಯ ಸಮಸ್ಯೆಗೆ:
    ಮೂಲವ್ಯಾಧಿಯಿಂದ ಬಳಲುವವರು ಮೊಸರಿಗೆ ಸ್ವಲ್ಪ ನೀರು ಬೆರೆಸಿ, ಇದರಲ್ಲಿ ಕೆಲವು ಪಿಸ್ತಾಗಳನ್ನು ನೆನೆಸಿಟ್ಟು, ಅದನ್ನು ಅರೆದು ಕುಡಿದರೆ ಮೂಲವ್ಯಾಧಿ ನೋವಿನಿಂದ ಮುಕ್ತಿ ದೊರಕುತ್ತದೆ.

    ಮೂಳೆಗಳ ಆರೋಗ್ಯಕ್ಕೆ ಬೆಸ್ಟ್:
    ಮೂಳೆಗಳನ್ನು ದೃಢಗೊಳಿಸಲು ಹಾಲಿಗಿಂತಲೂ ಮೊಸರು ಬೆಸ್ಟ್. ಯಾಕೆಂದರೆ ಹಾಲಿನಲ್ಲಿರುವ ಕ್ಯಾಲ್ಸಿಯಂ ಅನ್ನು ನೇರವಾಗಿ ಪಡೆದುಕೊಳ್ಳಲು ನಮ್ಮ ದೇಹಕ್ಕೆ ಸಾಧ್ಯವಿಲ್ಲ. ಆದ್ದರಿಂದ ಹಾಲಿಗೆ ಜೇನು ತುಪ್ಪ ಸೇರಿಸಬೇಕಾಗುತ್ತದೆ. ಆದ್ರೆ ಮೊಸರಿನ ವಿಷಯದಲ್ಲಿ ಹಾಗಿಲ್ಲ. ಮೊಸರಿನಲ್ಲಿರುವ ಕ್ಯಾಲ್ಸಿಯಂ ಅನ್ನು ಜೇನು ತುಪ್ಪದ ಅಗತ್ಯವಿಲ್ಲದೇ ದೇಹ ಹೀರಿಕೊಳ್ಳುತ್ತದೆ. ಹೀಗಾಗಿ ಮೂಳೆಗಳ ಆರೋಗ್ಯಕ್ಕೆ ಇದು ಒಳ್ಳೆದು ಎನ್ನಲಾಗುತ್ತೆ.

    ಹೃದಯದ ಕಾಯಿಲೆ, ರಕ್ತದೊತ್ತಡಕ್ಕೆ:
    ಹೃದಯದ ಕಾಯಿಲೆ, ಅಧಿಕ ರಕ್ತದೊತ್ತಡಗಳಿಂದ ರಕ್ಷಣೆ ದೊರಕಲು ಮೊಸರನ್ನು ಸೇವಿಸಿ. ಮೊಸರು ದೇಹದಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಿ ಹೃದಯದ ಬಡಿತದ ವೇಗ ಹಾಗೂ ಒತ್ತಡವನ್ನೂ ನಿಯಂತ್ರಿಸಲು ಸಹಕಾರಿಯಾಗಿದೆ.

  • ನಂದಿನಿ ಹಾಲು, ಮೊಸರಿನ ಬೆಲೆ ಏರಿಕೆ – ರೈತರಿಗೆ ಸ್ವೀಟ್ ಗ್ರಾಹಕರಿಗೆ ಶಾಕ್ ಕೊಟ್ಟ ಸರ್ಕಾರ

    ನಂದಿನಿ ಹಾಲು, ಮೊಸರಿನ ಬೆಲೆ ಏರಿಕೆ – ರೈತರಿಗೆ ಸ್ವೀಟ್ ಗ್ರಾಹಕರಿಗೆ ಶಾಕ್ ಕೊಟ್ಟ ಸರ್ಕಾರ

    ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆ ಮಾಡಲು ಕರ್ನಾಟಕ ಹಾಲು ಒಕ್ಕೂಟ (ಕೆ.ಎಂ.ಎಫ್) ನಿರ್ಧಾರ ಮಾಡಿದೆ.

    ಪ್ರತಿ ಲೀಟರಿಗೆ ಎರಡು ರೂ. ಏರಿಕೆ ಮಾಡಲು ಕೆ.ಎಂ.ಎಫ್ ನಿರ್ಧಾರ ಮಾಡಿದೆ. ಹೊಸ ದರ ಫೆಬ್ರವರಿ 1 ರಿಂದ ಜಾರಿಯಾಗಲು ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರೊಂದಿಗೆ 2 ರೂ. ದರ ಏರಿಕೆಯಿಂದ ಬರುವ ಹಣದಲ್ಲಿ 1 ರೂ. ರೈತರಿಗೆ ನೀಡಲು ಸರ್ಕಾರ ತೀರ್ಮಾನ ಮಾಡಿದ್ದು, ರಾಜ್ಯ ರೈತರಿಗೆ ಶುಭ ಸುದ್ದಿ ಕೊಟ್ಟಿದೆ.

    ಬೆಲೆ ಏರಿಕೆ ಇಂದ ಬರುವ 2 ರೂ. ಲಾಭದಲ್ಲಿ 1 ರೂ. ರೈತರಿಗೆ ಕೊಟ್ಟು, ಉಳಿದ ಒಂದು ರೂ. ಅನ್ನು ಆಯಾ ಜಿಲ್ಲಾ ಹಾಲು ಒಕ್ಕೂಟಗಳಿಗೆ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ದರ ಏರಿಕೆಯಿಂದ ಲಭಿಸಿದ 1 ರೂಪಾಯಿಯಲ್ಲಿ 40 ಪೈಸೆ ಹಸುಗಳಿಗೆ ಇನ್ಶುರೆನ್ಸ್, 40 ಪೈಸೆ ಹಾಲು ಮಾರಾಟಗಾರರ ಏಜೆಂಟ್‍ಗಳಿಗೆ ಕಮಿಷನ್ ಮತ್ತು ಉಳಿದ 20 ಪೈಸೆ ಒಕ್ಕೂಟಗಳ ಸೆಕ್ರೇಟರಿಗಳಿಗೆ ಕಮಿಷನ್ ನೀಡಲು ಕೆ.ಎಂ.ಎಫ್ ನಿರ್ಧಾರ ಮಾಡಿದೆ ಎನ್ನಲಾಗಿದೆ.

    ಬೆಲೆ ಏರಿಕೆ ವಿಚಾರವಾಗಿ ಇತ್ತೀಚೆಗೆ ಕೆ.ಎಂ.ಎಫ್ ಸಭೆ ನಡೆಸಿದ್ದು, ಈ ಸಭೆಯಲ್ಲಿ ನಂದಿನಿ ಹಾಲು ಮತ್ತು ಮೊಸರಿನ ಬೆಲೆಯನ್ನು ಮೂರು ರೂ. ಜಾಸ್ತಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿತ್ತು. ಆದರೆ ಮೂರು ರೂ. ಹೆಚ್ಚಳ ಮಾಡಲು ಒಪ್ಪದ ಸರ್ಕಾರ ಎರಡು ರೂ. ಏರಿಕೆ ಮಾಡಲು ಹಸಿರು ನಿಶಾನೆ ತೋರಿದೆ.

  • ಮೊಸರು ಕಳ್ಳಿಯನ್ನು ಪತ್ತೆಹಚ್ಚಲು ಪೊಲೀಸರು ಡಿಎನ್‍ಎ ಟೆಸ್ಟ್ ಮಾಡಿದ್ರು!

    ಮೊಸರು ಕಳ್ಳಿಯನ್ನು ಪತ್ತೆಹಚ್ಚಲು ಪೊಲೀಸರು ಡಿಎನ್‍ಎ ಟೆಸ್ಟ್ ಮಾಡಿದ್ರು!

    ಬೀಜಿಂಗ್: ತೈವಾನ್ ನಲ್ಲಿ ಮೊಸರು ಕಳ್ಳಿಯನ್ನು ಪತ್ತೆಹಚ್ಚಲು, ಪೊಲೀಸರು ಡೀಆಕ್ಸಿರೈಬೊ ನ್ಯೂಕ್ಲೀಯಿಕ್ ಆಮ್ಲ(ಡಿಎನ್‍ಎ) ಟೆಸ್ಟ್ ಮಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಚೈನಿಸ್ ಸಾಂಸ್ಕೃತಿಕ ವಿಶ್ವವಿದ್ಯಾನಿಲಯದ ಯುವತಿಯರು ತೈವಾನಿನ ತೈಪೆ ನಗರದಲ್ಲಿ ಒಂದೇ ಕೊಠಡಿಯಲ್ಲಿ ವಾಸವಾಗಿದ್ದರು. ಈ ವೇಳೆ ಯುವತಿಯೊಬ್ಬಳು ರೂಮಿನಲ್ಲಿ ಮೊಸರಿನ ಬಾಟಲಿಯನ್ನು ತಂದಿದ್ದಳು. ಆದರೆ ಆ ಮೊಸರನ್ನು ರೂಮಿನಲ್ಲಿದ್ದವರ ಪೈಕಿ ಯಾರೋ ಒಬ್ಬರು ಕುಡಿದು ಖಾಲಿ ಮಾಡಿದ್ದರು. ರೂಮಿಗೆ ವಾಪಾಸ್ಸಾದ ಬಳಿಕ ಮೊಸರಿನ ಖಾಲಿ ಬಾಟಲಿಯನ್ನು ನೋಡಿ, ಉಳಿದವರನ್ನು ಪ್ರಶ್ನಿಸಿದ್ದಾಳೆ. ಆದರೆ ಯಾರೂ ಸಹ ಈ ಬಗ್ಗೆ ಒಪ್ಪಿಕೊಂಡಿಲ್ಲ. ಇದರಿಂದ ಸಿಟ್ಟಿಗೆದ್ದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದಾಳೆ.

    ಪೊಲೀಸರ ಮುಂದೆ ಆದ ಘಟನೆಯನ್ನೆಲ್ಲಾ ವಿವರಿಸಿದಾಗ, ಪೊಲೀಸರು ಆಕೆಯ ದೂರನ್ನು ಸ್ವೀಕರಿಸಿದ್ದಾರೆ. ಆದರೆ ಬಾಟಲಿ ತುಂಬಾ ತೇವದಿಂದ ಕೂಡಿದ್ದರಿಂದ, ಫಿಂಗರ್ ಪ್ರಿಂಟ್ ತೆಗೆದುಕೊಳ್ಳಲು ಅಸಾಧ್ಯವಾಗಿತ್ತು. ಈ ವೇಳೆ ಯುವತಿ ರೂಮಿನಲ್ಲಿರುವ ಎಲ್ಲಾ ಯುವತಿಯರನ್ನು ಕರೆಸಿ, ಡಿಎನ್‍ಎ ಟೆಸ್ಟ್ ಮಾಡಿಸುವಂತೆ ಕೇಳಿದ್ದಾಳೆ. ಅದಕ್ಕೆ ಒಪ್ಪಿದ ಪೊಲೀಸರು ಐವರು ಸಹಪಾಠಿಗಳನ್ನು ಕರೆಸಿ, ಪರೀಕ್ಷೆ ನಡೆಸಿದ್ದರು. ಡಿಎನ್‍ಎ ವರದಿ ಬಂದ ಬಳಿಕ, ಐವರ ಪೈಕಿ ಇಬ್ಬರ ಮೇಲೆ ದೂರು ದಾಖಲಿಸಿಕೊಂಡಿದ್ದರು.

    ಮೊಸರು ಕಳ್ಳಿಯನ್ನು ಪತ್ತೆಮಾಡಲು ಪೊಲೀಸರು ಡಿಎನ್‍ಎ ಟೆಸ್ಟ್ ಮಾಡಿಸಿದ್ದ ಸುದ್ದಿ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆಗೆ ಗುರಿಯಾಗಿತ್ತು. ಅಲ್ಲದೇ ಪೊಲೀಸರು ಸಾರ್ವಜನಿಕರ ಹಣವನ್ನು ಪೋಲು ಮಾಡುತ್ತಿದ್ದಾರೆಂದು ಸ್ಥಳೀಯ ಮಾಧ್ಯಮಗಳು ಸುದ್ದಿ ಪ್ರಕಟಿಸಿತ್ತು.

    ಈ ಕುರಿತು ಸ್ಥಳೀಯರಾದ ಲಿಯು ಎಂಬವರು ಮಾತನಾಡಿ, ಪೊಲೀಸರು ಕೇವಲ 2 ಡಾಲರ್(142 ರೂ.) ಗಾಗಿ ಡಿಎನ್‍ಎ ಟೆಸ್ಟ್ ನಡೆಸುವ ಮೂಲಕ ಸರ್ಕಾರಕ್ಕೆ 98 ಡಾಲರ್ (6,960ರೂ.) ಗಳನ್ನು ಖರ್ಚು ಮಾಡಿದ್ದಾರೆ. ದೂರು ನೀಡಲು ಬಂದಿದ್ದ ಯುವತಿಗೆ, ಅವರೇ ಸಮಾಧಾನ ಮಾಡಿ 2 ಡಾಲರ್ ಹಣ ಕೊಟ್ಟು ಮೊಸರನ್ನು ಕೊಡಿಸಬಹುದಿತ್ತು. ಪೊಲೀಸರು ತೆರಿಗೆದಾರರ ಹಣವನ್ನು ವ್ಯರ್ಥ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.

    ಸಾಮಾನ್ಯವಾಗಿ ಕೊಲೆ, ಅತ್ಯಾಚಾರದಂತಹ ದೊಡ್ಡ ದೊಡ್ಡ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಕೊನೆಯದಾಗಿ ಡಿಎನ್‍ಎ ಪರೀಕ್ಷೆಯನ್ನು ಕೈಗೊಳ್ಳುತ್ತಾರೆ. ಆದರೆ ಚೀನಾದ ಪೊಲೀಸರು ಕೇವಲ ಮೊಸರು ಕಳ್ಳಿಯನ್ನು ಪತ್ತೆಹಚ್ಚಲು ಡಿಎನ್‍ಎ ಪರೀಕ್ಷೆ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿ ಜನರು ಕಿಡಿಕಾರಿದ್ದಾರೆ.

    ಏನಿದು ಡಿಎನ್‍ಎ?
    ಡಿಎನ್‍ಎ ವಿಸ್ತೃತ ರೂಪ ಡೀಆಕ್ಸಿರೈಬೊ ನ್ಯೂಕ್ಲೀಯಿಕ್ ಆಮ್ಲ ಆಗಿದೆ. ಮನುಷ್ಯರು ಮತ್ತು ಜೀವಿಗಳಲ್ಲಿರುವ ಅನುವಂಶಿಕ ದ್ರವ್ಯವಾಗಿದೆ. ಮನುಷ್ಯನ ಶರೀರದ ಬಹುತೇಕ ಜೀವಕೋಶಗಳಲ್ಲಿ ಡಿಎನ್‍ಎ ಇದ್ದು, ಇವುಗಳಲ್ಲಿ ಅಧಿಕ ಜೀವಕೋಶಗಳ ಡಿಎನ್‍ಎ ಗಳು ಒಂದೇ ರೀತಿಯಾಗಿರುತ್ತವೆ. ಜೀವಕೋಶಗಳ ಕೋಶಕೇಂದ್ರಗಳಲ್ಲಿ ತುಸು ಅಧಿಕಪ್ರಮಾಣದ ಮತ್ತು ಉಳಿದ ಭಾಗಗಳಲ್ಲಿ ಅಲ್ಪಪ್ರಮಾಣದ ಡಿಎನ್‍ಎ ಗಳು ಇರುತ್ತವೆ.

    ಡಿಎನ್‍ಎ ಬೆರಳಚ್ಚು ವಿಧಾನದಲ್ಲಿ ಒಂದು ನಿರ್ದಿಷ್ಟ ವಿಧದ ಡಿಎನ್‍ಎ ಅನುಕ್ರಮ (Sequence) ವಿಧಾನವನ್ನು ಅನುಸರಿಸಲಾಗುತ್ತಿದ್ದು, (ಇದನ್ನು micro satellite ಎನ್ನುತ್ತಾರೆ) ತನ್ಮೂಲಕ ಇವುಗಳನ್ನು ಗುರುತಿಸುವುದು ಸುಲಭಸಾಧ್ಯವೆನಿಸುತ್ತದೆ.

    ಮನುಷ್ಯನ ಜೀವಕೋಶದಲ್ಲಿರುವ ಡಿಎನ್‍ಎ ಗಳು ತಂದೆತಾಯಂದಿರಿಂದ ಅನುವಂಶಿಕವಾಗಿ ಬಂದಿರುವುದರಿಂದ, ಯಾವುದೇ ವ್ಯಕ್ತಿಯಲ್ಲೂ ತನ್ನ ತಂದೆತಾಯಂದಿರಲ್ಲಿ ಇರದಂತಹ ಡಿಎನ್‍ಎ ಗಳು ಇರಲು ಸಾಧ್ಯವಿಲ್ಲ. ಇದರಿಂದಾಗಿ ಒಬ್ಬ ವ್ಯಕ್ತಿಯ ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಮಕ್ಕಳಲ್ಲಿರುವ ಡಿಎನ್‍ಎ ಗಳಲ್ಲಿ ಸಾಮ್ಯತೆಗಳಿರುವುದರಿಂದ, ಈ ವ್ಯಕ್ತಿಯ ಡಿಎನ್‍ಎ ಗಳೊಂದಿಗೆ ಇವರೆಲ್ಲರ ಡಿಎನ್‍ಎ ಗಳು ತಾಳೆಯಾಗಲೇಬೇಕು. ಇದರಿಂದಾಗಿ ತನ್ನ ಪತ್ನಿ ಹೆತ್ತಿರುವ ಮಗುವಿನ ತಂದೆ ತಾನಲ್ಲ ಅಥವಾ ತಾನು ಇಂತಹ ವ್ಯಕ್ತಿಯೊಬ್ಬರ ಮಗನೆಂದು ನ್ಯಾಯಾಲಯದಲ್ಲಿ ಯಾರಾದರೂ ದಾವೆಯನ್ನು ಹೂಡಿದಾಗ, ಡಿಎನ್‍ಎ ಪರೀಕ್ಷೆಯ ಮೂಲಕವೇ ಇಂತಹ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೊಸರಿನಲ್ಲಿ ಅಡಗಿದೆ ನಿಮ್ಮ ಅಂದ!

    ಮೊಸರಿನಲ್ಲಿ ಅಡಗಿದೆ ನಿಮ್ಮ ಅಂದ!

    ಪ್ರತಿಯೊಬ್ಬರಿಗೂ ತಮ್ಮ ತ್ವಚೆಯನ್ನು ಸದಾ ಕಾಪಾಡಿಕೊಳ್ಳಬೇಕು ಅಂದುಕೊಳ್ಳುತ್ತಾರೆ. ಕೆಲವರು ವೈದ್ಯರ ಸಲಹೆಯನ್ನು ತೆಗೆದುಕೊಳ್ಳುತ್ತಾರೆ. ಕೆಲವರು ತಮಗೆ ಗೊತ್ತಿರುವ ಟಿಪ್ಸ್ ಬಳಸಿ ತ್ವಚೆಯನ್ನು ಕಾಪಾಡಿಕೊಳ್ಳುತ್ತಾರೆ. ಪ್ರತಿಯೊಬ್ಬರ ತ್ವಚೆಯೂ ವಾತಾವರಣಕ್ಕೆ ತಕ್ಕಂತೆ ಬದಲಾಗುತ್ತಿರುತ್ತದೆ. ಆಗಾಗ ನಾವು ಕೂಡ ನಮ್ಮ ತ್ವಚೆಗೆ ಆರೈಕೆ ಮಾಡಿಕೊಳ್ಳಬೇಕು.

    ಮೊಸರು ತ್ವಚೆಗೆ ಒಳ್ಳೆಯ ಔಷಧಿಯಾಗಿದೆ. ಪ್ರತಿಯೊಬ್ಬರ ಮನೆಯಲ್ಲೂ ಮೊಸರು ಇರುತ್ತದೆ. ಮೊಸರಿಯಲ್ಲಿರುವ ಅಂಶದಿಂದ ನಮ್ಮ ಆರೋಗ್ಯ ಮತ್ತು ತ್ವಚೆಯನ್ನು ಕಾಪಾಡಿಕೊಳ್ಳಬಹುದು. ಮೊಸರಿನಲ್ಲಿರುವ ಲ್ಯಾಕ್ಟಿಕ್ ಆಸಿಡ್ ತ್ವಚೆಯ ಕೋಶಗಳಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರೊಟೀನ್, ವಿಟಮಿನ್ ಮತ್ತು ಮಿನರಲ್‍ಗಳು ನಿಮ್ಮ ತ್ವಚೆಯನ್ನು ತಾಜಾ ಆಗಿರಿಸುವ ಅಂಶ ಅದರಲ್ಲಿದೆ.

     

    ಸುಂದರ ಮೊಗಕ್ಕೆ ಮೊಸರೆ ಮದ್ದು:
    * ಎರಡು ಚಮಚ ಮೊಸರಿಗೆ ಚಿಟಿಕೆ ಸಕ್ಕರೆ ಹಾಕಿ ಮಿಕ್ಸ್ ಮಾಡಿ. ಬಳಿಕ ಅದನ್ನ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. 15 ನಿಮಿಷ ನಂತರ ಬೆಚ್ಚಗಿನ ನೀರಿನಲ್ಲಿ ಮುಖ ತೊಳೆಯಿರಿ. ಈ ರೀತಿ ವಾರಕ್ಕೆ 2-3 ಬಾರಿ ಮಾಡಿದರೆ ಮುಖದಲ್ಲಿನ ಧೂಳು ಮತ್ತು ಕೊಳೆ ನಿವಾರಣೆಯಾಗುತ್ತದೆ.

    * ಒಂದು ಚಮಚ ಮೊಸರನ್ನು ಮುಖಕ್ಕೆ ಹಚ್ಚಿ, ಮಸಾಜ್ ಮಾಡಿಕೊಳ್ಳಿ ಬಳಿಕ ಅರ್ಧ ಗಂಟೆ ನಂತರ ಮುಖವನ್ನು ತೊಳೆದರೆ ಕಪ್ಪುಕಲೆ ಮಾಯವಾಗಿ ಮುಖ ಸುಂದರವಾಗಿ ಕಾಣುತ್ತದೆ.

    * ಎರಡು ಚಮಚ ಮೊಸರಿಗೆ ಒಂದು ಚಮಚ ಜೇನುತುಪ್ಪ ಸೇರಿಸಿ, ಮುಖಕ್ಕೆ ಹಚ್ಚಿ. ಬಳಿಕ ಅರ್ಧ ಗಂಟೆ ಬಿಟ್ಟು ತೊಳೆಯಿರಿ. ಇದರಿಂದ ಒಣಚರ್ಮ ನಿವಾರಣೆಯಾಗುತ್ತದೆ.

    * ಮೊಸರು ಅರ್ಧ ಕಪ್, 3 ಚಮಚ ತುರಿದ ಸೌತೆಕಾಯಿಯನ್ನು ಡಾರ್ಕ್ ಸರ್ಕಲ್ ಹಾಗೂ ಟ್ಯಾನ್ ಇರುವ ಜಾಗಕ್ಕೆ ಹಚ್ಚಿಕೊಳ್ಳಬೇಕು. 15 ನಿಮಿಷದ ನಂತರ ತಣ್ಣಗಿರುವ ನೀರಿನಿಂದ ತೊಳೆಯಬೇಕು. ಈ ರೀತಿ ವಾರಕ್ಕೆ 2 ಬಾರಿ ಮಾಡುವುದರಿಂದ ಟ್ಯಾನ್ ಮತ್ತು ಚರ್ಮದ ಕಪ್ಪು ಕಡಿಮೆಯಾಗುತ್ತದೆ.

    * ಒಂದು ಚಮಚ ಕಡಲೆ ಹಿಟ್ಟಿಗೆ 2 ಚಮಚ ಮೊಸರನ್ನು ಹಾಕಿ ಮಿಕ್ಸ್ ಮಾಡಿಕೊಳ್ಳಬೇಕು. ಬಳಿಕ ಮುಖಕ್ಕೆ ಹಚ್ಚಿಕೊಂಡು 15 ನಿಮಿಷಗಳ ನಂತರ ಮುಖವನ್ನು ತೊಳೆದುಕೊಳ್ಳಬೇಕು. ಇದು ಜಿಡ್ಡಿನ ಮತ್ತ ಸೂಕ್ಷ್ಮ ತ್ವಚೆಗೆ ಸೂಕ್ತವಾಗಿದೆ. ಜೊತೆಗೆ ತಾಜಾ ಕಾಂತಿಯನ್ನು ನೀಡುತ್ತದೆ.

    * ಮೊಸರು ಕೂದಲಿನ ನೈಸರ್ಗಿಕ ಪೋಷಣೆ ನೀಡುತ್ತದೆ. ಆದ್ದರಿಂದ ಮೊಸರನ್ನು ಕೂದಲಿನ ಬುಡಕ್ಕೆ ಮಸಾಜ್ ಮಾಡುವುದರಿಂದ ಕೂದಲಿನ ಹೊಳಪು ಹೆಚ್ಚುತ್ತದೆ.

    * 2 ಚಮಚ ಮೊಸರಿಗೆ 1 ಚಮಚ ಅರಶಿಣವನ್ನು ಹಾಕಿ ಮಿಶ್ರಣ ಮಾಡಿಕೊಳ್ಳಿ, ಬಳಿಕ ನಿಮ್ಮ ಮುಖವನ್ನು ಸ್ವಚ್ಛವಾಗಿ ತೊಳೆದುಕೊಂಡು ಈ ಮಿಶ್ರಣವನ್ನು ಹಚ್ಚಿಕೊಳ್ಳಿ. 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳಿ.

    * ಮೆಹಂದಿ ಪುಡಿಗೆ ಮೊಸರು ಮಿಕ್ಸ್ ಮಾಡಿ ತಲೆಗೆ ಹಚ್ಚಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

    * ಬೇಯಿಸಿದ ಆಲೂಗಡ್ಡೆ, 2 ಚಮಚ ಮೊಸರು ಮತ್ತು ಸ್ವಲ್ಪ ಜೇನು ತುಪ್ಪ ಸೇರಿಸಿ ಮಿಕ್ಸ್ ಮಾಡಿ, ನಿಮ್ಮ ಮುಖವನ್ನು ತೊಳೆದುಕೊಂಡ ನಂತರ ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿಕೊಳ್ಳಿ. ನಂತರ 20 ನಿಮಿಷಗಳ ತರುವಾಯ ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳಿ.

    * ನಿಂಬೆ ಸಿಪ್ಪೆ, ಕಿತ್ತಳೆ ಸಿಪ್ಪೆ ಒಣಗಿಸಿ, ಪುಡಿಮಾಡಿ ಮೊಸರಿನಲ್ಲಿ ಕಲಸಿ, ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ಮುಖ ತೊಳೆಯಿರಿ. ಇದರಿಂದ ಮುಖದ ಮೇಲಿನ ಕಲೆ ಕಡಿಮೆಯಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಏಪ್ರಿಲ್ ಒಂದರಿಂದ ನಂದಿನಿ ಹಾಲು, ಮೊಸರು ದುಬಾರಿ

    ಏಪ್ರಿಲ್ ಒಂದರಿಂದ ನಂದಿನಿ ಹಾಲು, ಮೊಸರು ದುಬಾರಿ

    ಬೆಂಗಳೂರು: ಏಪ್ರಿಲ್ ಒಂದರಿಂದ ನಂದಿನಿ ಹಾಲು, ಮೊಸರು ದುಬಾರಿಯಾಗಲಿದೆ. ಪ್ರತಿ ಲೀಟರ್ ಹಾಲು, ಮೊಸರಿಗೆ ಎರಡು ರೂಪಾಯಿ ಏರಿಕೆಯಾಗಿದೆ.

    ಬೆಂಗಳೂರಿನ ಕೆಎಂಎಫ್ ಕಚೇರಿಯಲ್ಲಿ ನಡೆದ ಸಭೆ ದರ ಏರಿಕೆಯ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಈ ಏರಿಕೆಗೆ ಸರ್ಕಾರ ಅಸ್ತು ಎಂದಿದೆ. ಒಂದು ಲೀಟರ್ ಹಾಲಿಗೆ 34 ರೂ. ಇತ್ತು. ಈಗ 36 ರೂ. ಆಗಿದೆ. 38 ರೂ. ಇದ್ದ ಮೊಸರಿನ ದರ 40 ರೂ. ಏರಿಕೆಯಾಗಿದೆ.

    2016ರ ಜನವರಿಯಲ್ಲಿ ಪ್ರತಿ ಲೀಟರ್ ಹಾಲಿನ ಬೆಲೆ 4 ರೂ. ಏರಿಕೆಯಾಗಿದ್ದರೆ, ಮೊಸರಿನ ಬೆಲೆ 2 ರೂ. ಏರಿಕೆಯಾಗಿತ್ತು.

    ಇದನ್ನೂ ಓದಿ: ಯುಗಾದಿ ಬೆನ್ನಲ್ಲೆ ಕರೆಂಟ್ ಶಾಕ್- ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ