Tag: ಮೊಹಮ್ಮದ್ ಅಜರುದ್ದೀನ್

  • ಪಾಕ್‍ಗೆ ಹೆಚ್ಚು ಬಾರಿ ಸೋಲುಣಿಸಿದ ಭಾರತದ ನಾಯಕರಲ್ಲಿ ಅಜರುದ್ದೀನ್ ಟಾಪ್

    ಪಾಕ್‍ಗೆ ಹೆಚ್ಚು ಬಾರಿ ಸೋಲುಣಿಸಿದ ಭಾರತದ ನಾಯಕರಲ್ಲಿ ಅಜರುದ್ದೀನ್ ಟಾಪ್

    – ವಿಶ್ವಕಪ್ ಲೆಕ್ಕದಲ್ಲಿ ಧೋನಿಗೆ ಅಗ್ರಸ್ಥಾನ

    ನವದೆಹಲಿ: ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾವನ್ನು ಮುನ್ನಡೆಸುವುದು ಪ್ರತಿಯೊಬ್ಬ ಭಾರತೀಯ ನಾಯಕನ ದೊಡ್ಡ ಕನಸು. ಈ ಮೊದಲು ಉಭಯ ತಂಡಗಳ ನಡುವೆ ಸರಣಿ ನಡೆಯುತ್ತಿತ್ತು. ಆದರೆ 2012-13ರಿಂದ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡಿಲ್ಲ.

    ಭಾರತವು ವಿಶ್ವಕಪ್ ಮತ್ತು ಏಷ್ಯಾ ಕಪ್ ಸೇರಿದಂತೆ ಪ್ರಮುಖ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಪಾಕ್ ವಿರುದ್ಧ ಆಡುತ್ತದೆ. ಅಷ್ಟೇ ಅಲ್ಲದೆ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಶೀಘ್ರದಲ್ಲೇ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡುವ ಸಾಧ್ಯತೆಯಿಲ್ಲ. ಪಾಕಿಸ್ತಾನವು ಭಾರತದ ವಿರುದ್ಧ ಉತ್ತಮ ದಾಖಲೆಯನ್ನು ಹೊಂದಿದೆ. ಆದರೆ ವಿಶ್ವಕಪ್‍ನಲ್ಲಿ ಎಲ್ಲಾ ಏಳು ಪಂದ್ಯಗಳನ್ನು ಸೋತಿದೆ.

    ಮೂರು ವಿಶ್ವಕಪ್‍ಗಳಲ್ಲಿ ಭಾರತದ ನಾಯಕತ್ವ ವಹಿಸಿದ್ದ ಮೊಹಮ್ಮದ್ ಅಜರುದ್ದೀನ್, ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡವನ್ನು 3 ಸೋಲಿಸಿದ್ದರು. ಅಷ್ಟೇ ಅಲ್ಲದೆ ಅಜರುದ್ದೀನ್ ಅವರ ನಾಯಕತ್ವದಲ್ಲೇ ಭಾರತ ತಂಡವು ಪಾಕಿಸ್ತಾನಕ್ಕೆ 25 ಏಕದಿನ ಪಂದ್ಯಗಳಲ್ಲಿ ಸೋಲುಣಿಸಿದೆ. ಈ ಮೂಲಕ ಪಾಕ್ ವಿರುದ್ಧದ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಬಾರಿ ಭಾರತ ತಂಡವನ್ನು ಗೆಲ್ಲಿಸಿದ ದಾಖಲೆ ಅಜರುದ್ದೀನ್ ಅವರ ಹೆಸರಿನಲ್ಲಿದೆ.

    ಈ ಪಟ್ಟಿಯಲ್ಲಿ 21 ಬಾರಿ ತಂಡಕ್ಕೆ ಗೆಲುವು ತಂದುಕೊಟ್ಟ ಸಚಿನ್ ತೆಂಡೂಲ್ಕರ್ ಎರಡನೇ ಸ್ಥಾನದಲ್ಲಿದ್ದರೆ, ಮೂರನೇ ಸ್ಥಾನದಲ್ಲಿ ಎಂ.ಎಸ್.ಧೋನಿ ಇದ್ದಾರೆ. ಅವರು ಪಾಕಿಸ್ತಾನದ ವಿರುದ್ಧದ 18 ಏಕದಿನ ಪಂದ್ಯದಲ್ಲಿ ಜಯ ದಾಖಲಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿರುವ ಸೌರವ್ ಗಂಗೂಲಿ ಅವರು ತಮ್ಮ ನಾಯಕತ್ವದಲ್ಲಿ 17 ಬಾರಿ ಗೆದ್ದಿದ್ದಾರೆ.

    2007ರಲ್ಲಿ ನಾಯಕತ್ವವನ್ನು ವಹಿಸಿಕೊಂಡಿದ್ದ ಎಂ.ಎಸ್.ಧೋನಿ, ಪಾಕಿಸ್ತಾನ ವಿರುದ್ಧದ ಇತರ ನಾಯಕರಲ್ಲಿ ಅತ್ಯುತ್ತಮ ದಾಖಲೆಯನ್ನು ಹೊಂದಿದ್ದಾರೆ. ಏಕೆಂದರೆ ಅವರ ನೇತೃತ್ವದಲ್ಲಿ ಭಾರತ ತಂಡವು ಪಾಕ್ ವಿರುದ್ಧ 2011 ಮತ್ತು 2015ರ ವಿಶ್ವಕಪ್ ಟೂರ್ನಿಯಲ್ಲಿ ಸೇರಿ ಒಟ್ಟು 11 ಬಾರಿ ಜಯಗಳಿಸಿದೆ. 2011ರಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿ ಫೈನಲ್‍ಗೆ ಲಗ್ಗೆ ಇಟ್ಟಿತ್ತು. 2015ರ ವಿಶ್ವಕಪ್‍ನಲ್ಲಿಯೂ ಭಾರತವು ಪಾಕ್ ವಿರುದ್ಧ ಅದ್ಭುತ ಜಯದೊಂದಿಗೆ ಸಾಗಿತ್ತು. ಆದರೆ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‍ನಲ್ಲಿ ಪಾಕಿಸ್ತಾನವು ಭಾರತದ ವಿರುದ್ಧ 180 ರನ್ ಗಳಿಂದ ಗೆದ್ದು ಬೀಗಿತ್ತು.

    ವಿಶ್ವಕಪ್‍ನಲ್ಲಿ ಪಾಕಿಸ್ತಾನದ ವಿರುದ್ಧ ತಂಡಕ್ಕೆ ಗೆಲುವು ತಂದುಕೊಟ್ಟ ನಾಯಕ ಪಟ್ಟಿಯಲ್ಲಿ ಎಂ.ಎಸ್.ಧೋನಿ ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಧೋನಿ ನಂತರ ಸ್ಥಾನದಲ್ಲಿ ಅಜರುದ್ದೀನ್ ಅವರಿದ್ದಾರೆ. ಅವರ ನೇತೃತ್ವದ ಟೀಂ ಇಂಡಿಯಾ 1992, 1996 ಮತ್ತು 1999ರ ವಿಶ್ವಕಪ್ ಟೂರ್ನಿಗಳಲ್ಲಿ ಪಾಕಿಸ್ತಾನವನ್ನು 9 ಬಾರಿ ಸೋಲಿಸಿತ್ತು. ನಾಯಕನಾಗಿ ಹೆಚ್ಚು ರನ್ ಗಳಿಸದ ಸಚಿನ್ ತೆಂಡೂಲ್ಕರ್ ಅವರ ನಾಯಕತ್ವದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ 8 ಬಾರಿ ವಿಶ್ವಪಕ್ ಟೂರ್ನಿಯ ಪಂದ್ಯಗಳಲ್ಲಿ ಜಯಗಳಿಸಿತ್ತು. ಗಂಗೂಲಿ ಅವರ ನೇತೃತ್ವದಲ್ಲಿ ಭಾರತ 7 ಪಂದ್ಯಗಳನ್ನು ಗೆದ್ದಿದೆ.

    2003ರ ವಿಶ್ವಕಪ್ ಟೂರ್ನಿಯಲ್ಲಿ ಭಾರತವನ್ನು ಮುನ್ನಡೆಸಿದ್ದ ಸೌರವ್ ಗಂಗೂಲಿ ಅವರು ಪಾಕಿಸ್ತಾನ ವಿರುದ್ಧ ಜಯ ಸಾಧಿಸಿದ್ದರು. ಇದಲ್ಲದೆ ಅವರು 2004ರಲ್ಲಿ ಪಾಕಿಸ್ತಾನ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತದಕ್ಕೆ 3-2 ಅಂತರದಲ್ಲಿ ಗೆಲುವು ತಂದುಕೊಟ್ಟಿದ್ದರು. ಅದೇ ಪ್ರವಾಸದಲ್ಲಿ ಭಾರತವು ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತ್ತು.

  • ಎಚ್‍ಸಿಎ ವಿರುದ್ಧ ಭ್ರಷ್ಟಾಚಾರ ಆರೋಪ- ಮತ್ತೆ ಕ್ರಿಕೆಟ್‍ನಿಂದ ಹೊರಗುಳಿದ ರಾಯುಡು

    ಎಚ್‍ಸಿಎ ವಿರುದ್ಧ ಭ್ರಷ್ಟಾಚಾರ ಆರೋಪ- ಮತ್ತೆ ಕ್ರಿಕೆಟ್‍ನಿಂದ ಹೊರಗುಳಿದ ರಾಯುಡು

    ಹೈದರಾಬಾದ್: ನಿವೃತ್ತಿ ನಿರ್ಧಾರ ಬದಲಿಸಿದ್ದ ಟೀಂ ಇಂಡಿಯಾ ಕ್ರಿಕೆಟರ್ ಅಂಬಟಿ ರಾಯುಡು, ಹೈದರಾಬಾದ್ ಕ್ರಿಕೆಟ್ ಅಸೋಸಿಯೇಶನ್ (ಎಚ್‍ಸಿಎ) ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಕ್ರಿಕೆಟ್‍ನಿಂದ ಹೊರಗುಳಿದಿದ್ದಾರೆ.

    ಎಚ್‍ಸಿಎನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಅಂಬಟಿ ರಾಯುಡು ಗಂಭೀರ ಆರೋಪ ಮಾಡಿದ್ದಾರೆ. ಈ ವಿಚಾರವನ್ನು ರಾಯುಡು ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದು, ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಟ್ವೀಟ್ ಮಾಡಿರುವ ರಾಯುಡು, ಕೈಗಾರಿಕೆ ಮತ್ತು ನಗರಾ ಆಡಳಿತ ಸಚಿವ ಕೆ.ಟಿ.ರಾಮರಾವ್ ಅವರಿಗೆ ಟ್ಯಾಗ್ ಮಾಡಿ, ಹಲೋ ಸರ್, ಹೈದರಾಬಾದ್ ಕ್ರಿಕೆಟ್ ಅಸೋಸಿಯೇಶನ್‍ನಲ್ಲಿ (ಎಚ್‍ಸಿಎ) ಹರಡಿರುವ ಭ್ರಷ್ಟಾಚಾರದ ಬಗ್ಗೆ ಗಮನಹರಿಸಿ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ನಾನು ನಿಮ್ಮನ್ನು ಕೋರುತ್ತೇನೆ. ಹೈದರಾಬಾದ್ ತಂಡದಲ್ಲಿ ನಡೆಯುತ್ತಿರುವ ಭ್ರಷ್ಟ ತಡೆದರೆ ಉತ್ತಮ ತಂಡವಾಗಿ ಹೊರ ಹೊಮ್ಮುತ್ತದೆ ಎಂದು ಬರೆದುಕೊಂಡಿದ್ದಾರೆ.

    ಅಷ್ಟೇ ಅಲ್ಲದೆ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಶನ್‍ನ ಆಯ್ಕೆ ಸಮಿತಿಯ ಅಧ್ಯಕ್ಷ ಆರ್.ಎ.ಸ್ವರೂಪ್ ಅವರಿಗೆ ಪತ್ರ ಅಂಬಟಿ ರಾಯುಡು ಬರೆದಿದ್ದು, ಮುಂಬರುವ ರಣಜಿ ಟ್ರೋಫಿಗೆ ನಾನು ಆಡುವುದಿಲ್ಲ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

    ಭಾರತದ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಅದೇ ವರ್ಷ ಹೈದರಾಬಾದ್ ಕ್ರಿಕೆಟ್ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಂದಿನಿಂದ, ರಾಯುಡು ಎಚ್‍ಸಿಎ ರಾಜಕೀಯ ಮತ್ತು ಭ್ರಷ್ಟಾಚಾರದ ವಿಷಯವನ್ನು ಪದೇ ಪದೇ ಎತ್ತುತ್ತಿದ್ದಾರೆ.

    2019ರ ವಿಶ್ವಕಪ್ ಟೂರ್ನಿ ವೇಳೆ ಭಾರತ ತಂಡಕ್ಕೆ ರಾಯುಡು ಅವರನ್ನು ಅವರನ್ನು ಕೈಬಿಟ್ಟು ವಿಜಯ್ ಶಂಕರ್ ಅವರಿಗೆ ಮಣೆ ಹಾಕಲಾಗಿತ್ತು. ಈ ವಿಚಾರವಾಗಿ ರಾಯುಡು, ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ ಪ್ರಸಾದ್ ಅವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು.

    ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗದ ಹಿನ್ನೆಲೆಯಲ್ಲಿ ರಾಯುಡು ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಆಗಸ್ಟ್ ನಲ್ಲಿ ನಿವೃತ್ತಿ ಘೋಷಿಸಿದ್ದರು. ಆದರೆ ಒಂದು ತಿಂಗಳ ನಂತರ ತಮ್ಮ ನಿರ್ಧಾರವನ್ನು ಹಿಂಪಡೆದು, ಎಚ್‍ಸಿಎ ಪರ ಮತ್ತೆ ಮೈದಾನಕ್ಕೆ ಇಳಿಯಲು ಸಿದ್ಧ ಎಂದು ಹೇಳಿದ್ದರು.

    ನಿವೃತ್ತಿ ನಿರ್ಧಾರದಿಂದ ಹಿಂದಿರುಗಿದ ರಾಯುಡು, ವಿಜಯ್ ಹಜಾರೆ ಟ್ರೋಫಿಯಲ್ಲಿ 7 ಇನ್ನಿಂಗ್ಸ್ ಗಳಲ್ಲಿ 233 ರನ್ ಗಳಿಸಿದ್ದಾರೆ. ಹೈದರಾಬಾದ್ ಪರ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರಾಯದು ಎರಡನೇ ಸ್ಥಾನದಲ್ಲಿದ್ದಾರೆ. ರಾಯುಡು ಭಾರತದ ಪರ 55 ಏಕದಿನ ಪಂದ್ಯಗಳನ್ನು ಆಡಿದ್ದು, 1,694 ರನ್ ಗಳಿಸಿದ್ದಾರೆ.

  • ಬಿಜೆಪಿ ನಾಯಕರು ಫೀಲ್ಡಿಗೆ ಇಳಿಯದೇ 100 ರನ್ ಹೊಡೆದವರಂತೆ ಪ್ರಚಾರ: ಅಜರುದ್ದೀನ್ ಲೇವಡಿ

    ಬಿಜೆಪಿ ನಾಯಕರು ಫೀಲ್ಡಿಗೆ ಇಳಿಯದೇ 100 ರನ್ ಹೊಡೆದವರಂತೆ ಪ್ರಚಾರ: ಅಜರುದ್ದೀನ್ ಲೇವಡಿ

    ಬೆಂಗಳೂರು: ಬಿಜೆಪಿ ನಾಯಕರು ಕುಳಿತಕೊಂಡು ಸ್ಕೋರ್ ಬೋರ್ಡ್‍ನಲ್ಲಿ ಲೆಕ್ಕ ತೋರಿಸುತ್ತಿದ್ದಾರೆ ಎಂದು ಟೀಂ ಇಂಡಿಯ ಮಾಜಿ ನಾಯಕ, ಕಾಂಗ್ರೆಸ್ ತಾರಾ ಪ್ರಚಾರಕ ಮೊಹಮ್ಮದ್ ಅಜರುದ್ದೀನ್ ವ್ಯಂಗ್ಯ ಮಾಡಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಫೀಲ್ಡ್ ಗೆ ಇಳಿದು ನಾವು ಕೆಲಸ ಮಾಡಿದ್ದೇವೆ ಎಂದು ತೋರಿಸಬೇಕು. ಆದರೆ ಬಿಜೆಪಿ ನಾಯಕರು ಫಿಲ್ಡ್‍ಗೆ ಇಳಿಯದೇ 100 ರನ್ ಮಾಡಿದ್ದೇವೆ ಎನ್ನುವಂತೆ ಪ್ರಚಾರ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

    ಕರ್ನಾಟಕದಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಲ್ಲಿ ಕೋಮುವಾದ ಸೃಷ್ಟಿಸಲು ಹವಣಿಸುತ್ತಿದ್ದಾರೆ. ಕರ್ನಾಟಕ ಈಗಾಗಲೇ ಅಭಿವೃದ್ಧಿಯಲ್ಲಿದೆ. ಕೇಂದ್ರ ಅಭಿವೃದ್ಧಿಯ ಬಗ್ಗೆ ಗಮನಹರಿಸಲಿ ಎಂದು ತಿರುಗೇಟು ನೀಡಿದರು.

    ಬಿಜೆಪಿ ರಾಜ್ಯಗಳ ಆಡಳಿತದಲ್ಲಿ ಏನಿದೆ ಎನ್ನುವುದನ್ನು ನೋಡಲಿ. ಅದನ್ನು ಬಿಟ್ಟು ಅಭಿವೃದ್ಧಿ ವಿಚಾರ ಮುಂದಿಟ್ಟು ದಾರಿತಪ್ಪಿಸುವುದು ಸರಿಯಲ್ಲ. ದೇಶದ ಶಾಂತಿಯನ್ನ ಕದಡುವುದು ಬೇಡ. ಕುಳಿತುಕೊಂಡು ಸುಳ್ಳು ಹೇಳುವ ಬದಲು ಗ್ರೌಂಡ್‍ಗೆ ಹೋಗಿ ಅಲ್ಲಿನ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿ. ಅದು ಬಿಟ್ಟು ಸುಳ್ಳನ್ನೇ ಎತ್ತಿ ಎತ್ತಿ ತೋರಿಸಬೇಡಿ ಎಂದು ವಾಗ್ದಾಳಿ ನಡೆಸಿದರು.